ಮಡಿಕೇರಿ ನ.24 NEWS DESK : ಕಿಕ್ಕಿರಿದು ಸೇರಿದ್ದ ಕಲಾಪ್ರೇಮಿಗಳ ಸಮ್ಮುಖದಲ್ಲಿ ಕನ್ನಡದ ಅಪೂವ೯ ಗೀತೆಗಳ ಮಾಧುಯ೯ ಅನಾವರಣಗೊಳ್ಳುತ್ತಿರುವಂತೆಯೇ ಕೇಳುಗರು ಚಪ್ಪಾಳೆ ತಟ್ಟಿ, ತಲೆದೂಗಿ ಕನ್ನಡದ ಗೀತೆಗಳ ಸಾಹಿತ್ಯ, ಸಂಗೀತಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ನಾಲ್ಕು ಗಂಟೆಗಳ ಕಾಲ ಮಧುರವಾದ ಗೀತೆಗಳು ಸಭಾಂಗಣದಲ್ಲಿ ಮಾಧ೯ನಿಸಿದವು. ನಗರದ ರೆಡ್ ಬ್ರಿಕ್ಸ್ ನ ಸತ್ಕಾರ್ ಸಭಾಂಗಣದಲ್ಲಿ ಕೊಡಗು ಪತ್ರಕತ೯ರ ಸಂಘ ಮತ್ತು ಮುಳಿಯ ಚಿನ್ನಾಭರಣಗಳ ಸಂಸ್ಥೆ ವತಿಯಿಂದ ಆಯೋಜಿತ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಗೀತಗಾಯನ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 53 ಕಲಾವಿದರ 33 ಹಾಡುಗಳು ಕಲಾಪ್ರೇಮಿಗಳ ಮನಸೂರೆಗೊಂಡವು. ಕಾಯ೯ಕ್ರಮದಲ್ಲಿ ಕಲಾವಿದರಿಗೆ ಗೌರವಾಪ೯ಣೆ ನೆರವೇರಿಸಿ ಮಾತನಾಡಿದ ಮುಳಿಯ ಚಿನ್ನಾಭರಣ ಸಂಸ್ಥೆಯ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಭಾರತದಲ್ಲಿರುವವರೆಲ್ಲರೂ ಹೇಗೆ ಭಾರತೀಯರೋ ಹಾಗೇ ಕನಾ೯ಟಕದಲ್ಲಿರುವವರೆಲ್ಲರೂ ಕನ್ನಡಿಗರೇ ಆಗಿದ್ದಾರೆ. ಬೆಂಗಳೂರಿನಂಥ ರಾಜಧಾನಿಯಲ್ಲಿ ಕನ್ನಡ ಉಳಿಸಿ ಎಂಬ ಕೂಗು ಹೆಚ್ಚಾಗುತ್ತಿರುವಾಗ ಮಡಿಕೇರಿಯಂಥ ಪುಟ್ಟ ನಗರಗಳಲ್ಲಿ ಕನ್ನಡದ ಮಹತ್ವ ಸಾರುವ ಕಾಯ೯ಕ್ರಮಗಳಿಗೆ ಅತ್ಯಧಿಕ ಕನ್ನಡ ಪ್ರೇಮಿಗಳು ಸೇರಿರುವುದು ಹೆಮ್ಮೆ ತಂದಿದೆ ಎಂದರು. ಕೊಡಗಿನ…
ಲೇಖಕ: admin
ಮಡಿಕೇರಿ ನ.24 NEWS DESK : ನಗರದ ಶ್ರೀ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ನ.26 ರಂದು ಶ್ರೀ ಮುತ್ತಪ್ಪ ದೇವಾಲಯದಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಷಷ್ಠಿ ಮಹೋತ್ಸವ ನಡೆಯಲಿದೆ ಎಂದು ಶ್ರೀ ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಉತ್ಸವದ ಕುರಿತು ಮಾಹಿತಿ ನೀಡಿದ ಅವರು, ಶ್ರೀ ಮುತ್ತಪ್ಪ ದೇವಾಲಯದ ಆವರಣದಲ್ಲಿರುವ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ ಷಷ್ಠಿಯಂದು ಮುಂಜಾನೆಯಿಂದ ದೇವರಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂ ಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿದೆ. ಪೂಜೆ ಸಲ್ಲಿಸುವ ಭಕ್ತಾದಿಗಳಿಗೆ ದೇವಸ್ಥಾನದ ವತಿಯಿಂದಲೆ ಎಳನೀರು ಮತ್ತು ಹಾಲನ್ನು ಒದಗಿಸಲಾಗುತ್ತದೆಂದು ಮಾಹಿತಿಯನ್ನಿತ್ತರು. ಉತ್ಸವದ ಅಂಗವಾಗಿ ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀ ಸುಬಹ್ಮಣ್ಯ ದೇವರ ಶ್ರೀ ಭೂತ ಬಲಿ(ಕ್ಷೇತ್ರ ಪ್ರದಕ್ಷಿಣೆ), 12.30 ಗಂಟೆಗೆ ಮಹಾಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಲಿದೆಯೆಂದು ವಿವರಗಳನ್ನಿತ್ತರು. :: ದೈವಗಳ ವೆಳ್ಳಾಟಂ ::…
ಮಡಿಕೇರಿ ನ.24 NEWS DESK : ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಸಫಾಯಿ ಕರ್ಮಚಾರಿ ಮೇಲುಸ್ತುವಾರಿ ಸಮಿತಿಯ ರಾಜ್ಯಾಧ್ಯಕ್ಷ ಡಿ.ಆರ್.ರಾಜು ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಮೂಲಭೂತ ಸಮಸ್ಯೆಗಳ ಬಗ್ಗೆ ಅರಿವಿರುವ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ ಸ್ಥಾನವನ್ನು ನೀಡಿ ಅವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಬೇಕು. ಇದರಿಂದ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿರುವ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು. ಶಾಸಕ ಎ.ಎಸ್.ಪೊನ್ನಣ್ಣ ಅವರು ಪೌರ ಕಾರ್ಮಿಕ ಸಮೂಹದ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಬಡವರ್ಗ, ದಲಿತ, ಕಾರ್ಮಿಕ ಸಮೂಹದ ಅಭಿವೃದ್ಧಿಗೆ ಅವಿಶ್ರಾಂತವಾಗಿ ಶ್ರಮಿಸುತ್ತಿದ್ದಾರೆ. ಪೌರ ಕಾರ್ಮಿಕರ ಸಂಕಷ್ಟಗಳ ನಿವಾರಣೆಗಾಗಿ ಶಾಸಕರು ಅಧಿಕಾರಿಗಳ ಮಟ್ಟದಲ್ಲಿ ಕುಂದು ಕೊರತೆ ಸಭೆಯನ್ನು ನಡೆಸುವ ಮೂಲಕ ಸಮಸ್ಯೆಗಳ ಬಗೆಹರಿಕೆಯ ನಿಟ್ಟಿನ ಪ್ರಯತ್ನಗಳನ್ನು ನಡೆಸಿದ್ದಾರೆ. ಇಂತಹ ಸಭೆ ಇಲ್ಲಿಯವರೆಗೆ ಯಾವೊಬ್ಬ ಜನಪ್ರತಿನಿಧಿಯೂ ನಡೆಸಿದ್ದು ಕಂಡು ಬಂದಿಲ್ಲ. ಈ ರೀತಿ ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸುತ್ತಿರುವ ಎ.ಎಸ್.ಪೊನ್ನಣ್ಣ ಅವರಿಗೆ ಸಚಿವ…
ಮಡಿಕೇರಿ ನ.24 NEWS DESK : ಮಡಿಕೇರಿಯ ಕಗ್ಗೊಡ್ಲು ಬಳಿ ಇರುವ ಅಂಬರ ಹಾಲ್ ಅಥವಾ ಮಂಗಳೂರು ರಸ್ತೆಯ ಕಾರ್ ಪಾರ್ಕಿಂಗ್ ಬಳಿ ಇಂದು (24/11/2025) ರಂದು ಅಪ್ಪಂಗಳ ನಿವಾಸಿ ಹೆಚ್.ಬಿ.ಗಣೇಶ್ ಎಂಬುವವರಿಗೆ ಸೇರಿದ 12 ಗ್ರಾಂ ನ ಚಿನ್ನದ ಸರ ಕಳೆದು ಹೋಗಿದೆ. ಸಿಕ್ಕಿದವರು 8660100502 ಮೊಬೈಲ್ ನಂಬರನ್ನು ಸಂಪರ್ಕಿಸಲು ಕೋರಿದೆ.
ಮಡಿಕೇರಿ ನ.24 NEWS DESK : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ನ.26 ರಂದು 35ನೇ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಹಾರ್ವರ್ಡ್ ವಿಶ್ವವಿದ್ಯಾನಿಲಯದ ವಿದ್ವಾಂಸ ಡಾ.ಸಂಜೀವ್ ಚೋಪ್ರಾ, ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಅಡಗೂರ್ ಹೆಚ್.ವಿಶ್ವನಾಥ್, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ನಾಣಯ್ಯ ಹಾಗೂ ಹೆಸರಾಂತ ವೈದ್ಯ, ಸಮಾಜ ಸೇವಕ ಡಾ.ಮಾತಂಡ ಅಯ್ಯಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಡಾ.ಸಂಜೀವ್ ಚೋಪ್ರಾ ಅವರು ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಕುರಿತು ಮಾತನಾಡಲಿದ್ದಾರೆ. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಸ್ವ-ಆಡಳಿತ, ಎಸ್ಟಿ ವರ್ಗೀಕರಣ, ಕೊಡವ ಸ್ಯಾಕ್ರಮೆಂಟಲ್ ಗನ್-ತೋಕ್ ಹಕ್ಕು ಸೇರಿದಂತೆ ಆದಿಮಸಂಜಾತ ಏಕ-ಜನಾಂಗೀಯ, ಆನಿಮಿಸ್ಟಿಕ್ ಕೊಡವರಿಗಾಗಿ 10…
ಮಡಿಕೇರಿ ನ.24 NEWS DESK : ಅಂಗನವಾಡಿಯ ನಿವೃತ್ತ ಕಾರ್ಯಕರ್ತೆ ಹಾಗೂ ಮಡಿಕೇರಿಯ ಸಮಾಜ ಸೇವಕಿ ಎಂ.ಸಿ.ಚಿನ್ನಮ್ಮ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಬೆಂಗಳೂರಿನ ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ ರಾಜ್ಯ ಮಟ್ಟದ ನಾಗರೀಕ ಸೇವಾ ಪ್ರಶಸ್ತಿ ‘ಕರುನಾಡ ರತ್ನ’ವನ್ನು ನೀಡಿ ಗೌರವಿಸಿದೆ. ಬೆಂಗಳೂರಿನ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಹಾಗೂ ಕರ್ನಾಟಕ ಸಾಂಸ್ಕøತಿಕ ಅಕಾಡೆಮಿಯ ಅಧ್ಯಕ್ಷ ದಯಾನಂದ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಅಂಗನವಾಡಿಯ ಸಾಮಾನ್ಯ ಕಾರ್ಯಕರ್ತೆಯಾಗಿದ್ದ ಎಂ.ಸಿ.ಚಿನ್ನಮ್ಮ ಅವರು ಪುಟಾಣಿಗಳ ಮೇಲಿನ ಪ್ರೀತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಿಂಭಾಗದಲ್ಲಿ ಅಂಗನವಾಡಿ ಕೇಂದ್ರಕ್ಕೆ ಸ್ವಪ್ರಯತ್ನದಿಂದ ಜಾಗವನ್ನು ಹುಡುಕಿಕೊಟ್ಟರು. ಸರಕಾರದಿಂದ ಜಾಗ ಮಂಜೂರು ಮಾಡಿಸಿ ಅದೇ ಸ್ಥಳದಲ್ಲಿ ಶಾಶ್ವತವಾದ ಅಂಗನವಾಡಿ ಕೇಂದ್ರ ಸ್ಥಾಪನೆಯಾಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳ ಸಹಕಾರ ಪಡೆದು ಅಂಗನವಾಡಿ ಕೇಂದ್ರಕ್ಕೆ ಮೂಲಭೂತ ಸೌಲಭ್ಯವನ್ನು ದೊರಕಿಸಿಕಟ್ಟಿದ್ದಾರೆ. ಸುಮಾರು 25 ವರ್ಷಗಳಿಂದ ಮಕ್ಕಳಿಗೆ ಆಟಪಾಠ, ಮನರಂಜನೆ. ಶಾಲಾಪೂರ್ವ ಪರಿಸರ ಜ್ಞಾನ, ಆರೋಗ್ಯ…
ವಿರಾಜಪೇಟೆ ನ.24 NEWS DESK : ಇಂಟನ್ರ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ಐಐಹೆಚ್ಎಂ. ಬೆಂಗಳೂರು ವತಿಯಿಂದ 2025ರ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪಾಯಡತ್ ಮುಹಮ್ಮದ್ ಶಾಫಿ ಸ್ವೀಕರಿಸಿದ್ದಾರೆ. ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಹೊಸಕೋಟೆಯ ಖಾಸಗಿ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಹಮ್ಮದ್ ಶಾಫಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಐ.ಐ.ಹೆಚ್.ಎಂ ಸಂಸ್ಥೆಯ ದಕ್ಷಿಣ ಭಾರತದ ನಿರ್ದೇಶಕರಾದ ಚೌದರಿ ಮತ್ತು ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ನಿಕಟಪೂರ್ವ ಅಧ್ಯಕ್ಷರು ಮತ್ತು ಶಕ್ತಿ ದಿನಪತ್ರಿಕೆಯ ಸಂಪಾದಕರಾದ ಚಿದ್ವಿಲಾಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಇವರು ಮೂಲತಃ ಕುಂಜಿಲ-ಕಕ್ಕಬೆ ಗ್ರಾಮದ ನಿವಾಸಿಯಾಗಿದ್ದು, ಪ್ರಸ್ತುತ ವಿರಾಜಪೇಟೆಯ ಮೌಂಟೇನ್ ವ್ಯೂ ಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಶಾಲನಗರ ನ.24 NEWS DESK : ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್ಸಿಸಿ) ದಿನಾಚರಣೆಯ ಪ್ರಯುಕ್ತ ಕೊಡಗು ಸೈನಿಕ ಶಾಲೆಯ ಎನ್ಸಿಸಿ ಘಟಕವು ಕುಶಾಲನಗರದ ಸಮೀಪವಿರುವ ಹಾರಂಗಿ ಜಲಾಶಯದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿತು. ಪರಿಸರ ಸಂರಕ್ಷಣೆ ಮತ್ತು ಜಲಾಶಯದ ಅಂದವನ್ನು ಹೆಚ್ಚಿಸುವ ಗುರಿಯೊಂದಿಗೆ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಮಾದರಿಯಾದರು. ಅಭಿಯಾನದಲ್ಲಿ ಶಾಲೆಯ ಒಟ್ಟು 171 ಎನ್ಸಿಸಿ ವಿದ್ಯಾರ್ಥಿಗಳು ಮತ್ತು ಐವರು ಎನ್ಸಿಸಿ ಅಧಿಕಾರಿಗಳು ಭಾಗವಹಿಸಿದ್ದರು. ಬೆಳಗಿನಿಂದಲೇ ಜಲಾಶಯದ ಆವರಣದಲ್ಲಿ ವಿದ್ಯಾರ್ಥಿಗಳು ಪ್ರವಾಸಿಗರ ಭೇಟಿಯಿಂದ ಸಂಗ್ರಹವಾಗಿದ್ದ ಎಲ್ಲ ರೀತಿಯ ತ್ಯಾಜ್ಯ ವಸ್ತುಗಳನ್ನು ಸ್ವಚ್ಛಗೊಳಿಸಿದರು. ಈ ಸಂದರ್ಭ ಹಾರಂಗಿ ಜಲಾಶಯ ಪ್ರದೇಶದಲ್ಲಿ ದೀರ್ಘಕಾಲದಿಂದ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ಬಾಟಲಿಗಳು, ಪಾಲಿಥಿನ್ ಚೀಲಗಳು, ಕಾಗದ ಮತ್ತು ಇತರೆ ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಯಿತು. ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ವೈಜ್ಞಾನಿಕ ಕ್ರಮದಲ್ಲಿ ತ್ಯಾಜ್ಯವನ್ನು ಬೇರ್ಪಡಿಸಿ, ಅದನ್ನು ಸೂಕ್ತ ವಿಲೇವಾರಿಗಾಗಿ ವ್ಯವಸ್ಥಿತವಾಗಿ ಸಂಗ್ರಹಿಸಿದರು. ಅಭಿಯಾನದಲ್ಲಿ ಶಾಲೆಯ ಎನ್ ಸಿ ಸಿ ಘಟಕದ ಲೆಫ್ಟಿನೆಂಟ್ ವಿಬಿನ್ ಕುಮಾರ್, ಎಫ್- ಒ…
ಮಡಿಕೇರಿ ನ.24 NEWS DESK : ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ದಾವಣಗೆರೆಯ ಚನ್ನಗಿರಿ ವಿರುಪಾಕ್ಷ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಯ್ಯನೆರವಂಡ ಪ್ರಿತುನ್ ಪೂವಣ್ಣ ಅವರಿಗೆ ಕರ್ನಾಟಕ ಸಿರಿಗನ್ನಡಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇವರು ನಾಲಡಿ ಕಕ್ಕಬ್ಬೆ ಗ್ರಾಮದ ಅಯ್ಯನೆರವಂಡ ಪ್ರಭಾ ಪೂವಯ್ಯ ದಂಪತಿಯ ಪುತ್ರ.
ಸುಂಟಿಕೊಪ್ಪ ನ.24 NEWS DESK : ಕೊಡಗರಹಳ್ಳಿ ಗ್ರಾಮದಲ್ಲಿರುವ ಶ್ರೀ ಬೈತೂರಪ್ಪ ಮತ್ತು ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ನ.26 ರಂದು ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ದೇವಾಲಯದಲ್ಲಿ ಬೆಳಿಗ್ಗೆ 10 ಗಂಟೆಯಿಂದ ತನು ತಂಬಿಲ, ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಹರಿದ್ರಾನರ್ವ ಅಭಿಷೇಕ ನಡೆಯಲಿದೆ. ಮಹಾಪೂಜೆ ಬಳಿಕ ಅನ್ನಸಂತರ್ಪಣೆ ಜರುಗಲಿದೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.






