ಲೇಖಕ: admin

ಮಡಿಕೇರಿ ಆ.23 :  ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಾಮಥ್ರ್ಯ ಸೌಧದಲ್ಲಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯು ಜಿ.ಪಂ.ಸಿಇಒ ವರ್ಣಿತ್ ನೇಗಿರವರ ನೇತೃತ್ವದಲ್ಲಿ ನಡೆಯಿತು. ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಗತಿ ಕುಂಠಿಗೊಂಡಿದ್ದು ತ್ವರಿತವಾಗಿ ಪ್ರಗತಿ ಸಾಧಿಸಿ, ಗ್ರಾಮ ಪಂಚಾಯಿತಿಗಳಲ್ಲಿ ಶೂನ್ಯ ಮಾನವ ದಿನಗಳ ಸೃಜನೆಯಾಗದಂತೆ ಕ್ರಮ ವಹಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಾರತ್ ನಿರ್ಮಾಣ್ ಸೇವಾ ಕೇಂದ್ರ, NRLM WORK SHED ಕಾಮಗಾರಿಗಳನ್ನು ಆರ್ಥಿಕ ವರ್ಷದಲ್ಲೆ ಪೂರ್ಣಗೊಳಿಸಿಲು ತಿಳಿಸಿದರು. ಸ್ವಚ್ಚ ಭಾರತ್ ಮೀಷನ್ ಯೋಜನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ಕಸವನ್ನು ವ್ಯವಸ್ಥಿತವಾಗಿ ನಿರ್ವಹಿಸಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಜಿ.ಪಂ.ಸಿಇಒ ಅವರು ಹೇಳಿದರು. ವಸತಿ ಯೋಜನೆಯಡಿ ತಾಲ್ಲೂಕಿನಲ್ಲಿ ಮಳೆಗೆ ಹಾನಿಯಾದ ಮನೆಗಳ ಕುರಿತು ಮಾಹಿತಿ ಪಡೆದು ಪ್ರಗತಿ ಸಾಧಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ವರ್ಣಿತ್ ನೇಗಿ ಅವರು ಸೂಚಿಸಿದರು. ಜಿ.ಪಂ.ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಕಾಲಮಿತಿ ಒಳಗೆ ಗ್ರಾಮ ಪಂಚಾಯಿತಿಗಳಲ್ಲಿ ಪ್ರಗತಿ ಸಾಧಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ…

Read More

ಮಡಿಕೇರಿ ಆ.23 : ಕೊಡಗು ಜಿಲ್ಲಾ ಮುಸ್ಲಿಂ ಸ್ಪೋರ್ಟ್ಸ್ ಟ್ರಸ್ಟ್ ನ ಮಾಸಿಕ ಸಭೆ ಟ್ರಸ್ಟ್ ನ ಅಧ್ಯಕ್ಷ ಎ.ಅಬ್ದುಲ್ ಖಾದರ್ ಹಾಕತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಖಾಸಗಿ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ 20ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ ಹಾಗೂ ಪ್ರಥಮ ವರ್ಷದ ಕೊಡಗು ಮುಸ್ಲಿಂ ಕಪ್ ಹಗ್ಗ ಜಗ್ಗಾಟವನ್ನು ಟ್ರಸ್ಟ್ ನ ವತಿಯಿಂದ ನಡೆಸಲು ನಿರ್ಧರಿಸಲಾಯಿತು. ಈ ಸಂದರ್ಭ ಮಾತನಾಡಿದ ಟ್ರಸ್ಟ್ ನ ಗೌರವಾಧ್ಯಕ್ಷ ಅಬ್ದುಲ್ ರಶೀದ್ ಕುಪ್ಪೊಡಂಡ, ಮುಂದಿನ ದಿನಗಳಲ್ಲಿ ಕೇವಲ ಕ್ರಿಕೆಟ್ ಮಾತ್ರವಲ್ಲದೆ ಕೊಡಗಿನ ಕ್ರೀಡೆಯಾದ ಹಾಕಿ ಮತ್ತಿತರ ಕ್ರೀಡೆಗಳನ್ನು ಆಯೋಜಿಸಬೇಕೆಂದು ಸಲಹೆ ನೀಡಿದರು. ಇದಕ್ಕೆ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು. ಸಭೆಯಲ್ಲಿ ಸದಸ್ಯರುಗಳಾದ ಕೆ.ಎಂ.ಮುಜೀಬ್ ಮೂರ್ನಾಡು, ಪಿ.ಹೆಚ್.ಸಮೀರ್ ಕಡಂಗ, ಎಂ.ಕೆ.ಅಬ್ದುಲ್ ರಜಾಕ್ ಯಡಪಾಲ, ಎನ್.ಪಿ.ಹ್ಯಾರಿಸ್ ಮಡಿಕೇರಿ ಮತ್ತಿತರರು ಉಪಸ್ಥಿತರಿದ್ದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಎಸ್.ಆದಂ ಕುಶಾಲನಗರ ಸ್ವಾಗತಿಸಿ, ನಿರ್ದೇಶಕ ಎಂ.ಎಂ.ಹ್ಯಾರಿಸ್ ನಂಜರಾಯಪಟ್ಟಣ ವಂದಿಸಿದರು.

Read More

ಮಡಿಕೇರಿ ಆ.23 :  ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮಡಿಕೇರಿ, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕೊಡ್ಲಿಪೇಟೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೊಡ್ಲಿಪೇಟೆ ಹಲಸಿನ ಮರ ಶ್ರೀಮತಿ ಗೌರಮ್ಮ ಶಾಂತ ಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ  ಆರೋಢ ದಾಸೋಹಿ ಧರ್ಮ ಚಿಂತಾಮಣಿ ಮಹಾಶರಣ ಲಿಂ|| ಮಾಗನೂರು ಬಸಪ್ಪ ದತ್ತಿ ಕಾರ್ಯಕ್ರಮದಂತೆ ಶರಣ ಸಂಸ್ಕೃತಿಯ ಕುರಿತು ಉಪನ್ಯಾಸ ಕಾರ್ಯಕ್ರಮ ಆ.26 ರಂದು  ನಡೆಯಲಿದೆ. ಕೊಡ್ಲಿಪೇಟೆಯ ಹಲಸಿನಮರ ಶ್ರೀಮತಿ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ  ಬೆಳಿಗ್ಗೆ 11  ಗಂಟೆಗೆ  ನಡೆಯಲಿರುವ ಕಾರ್ಯಕ್ರಮವನ್ನು  ಉಚ್ಚ ನ್ಯಾಯಾಲಯದ ಹಿರಿಯ ವಕೀಲ  ಎಚ್. ಎಸ್ ಚಂದ್ರಮೌಳಿ ಉದ್ಘಾಟಿಸಲಿದ್ದು,  ಕಿರಿಕೊಡ್ಲಿ ಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿಗಳು  ಆಶೀರ್ವಚನ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವಕಾಮತ್ ರವರು ವಹಿಸಲಿದ್ದಾರೆ.  ಶರಣ ಸಂಸ್ಕೃತಿಯ ಕುರಿತು ಪತ್ರಕರ್ತ ಎಸ್. ಮಹೇಶ್…

Read More

ಬೆಂಗಳೂರು: ಅಮೆರಿಕದಲ್ಲಿ ನೆಲೆಸಿದ್ದ ಕರ್ನಾಟಕ ಮೂಲದ ಖ್ಯಾತ ಗಣಿತ ಮತ್ತು ಸಂಖ್ಯಾಶಾಸ್ತ್ರಜ್ಞ ಸಿ.ಆರ್ ರಾವ್ ನಿಧನರಾಗಿದ್ದು, ಅವರಿಗೆ 102 ವರ್ಷ ವಯಸ್ಸಾಗಿತ್ತು. ‘ಪದ್ಮವಿಭೂಷಣ’ ಪ್ರಶಸ್ತಿ ವಿಜೇತ ಸಿ.ಆರ್. ರಾವ್ ಅವರು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಜನಿಸಿದ್ದರು. ಗಣಿತ ಮತ್ತು ಸಂಖ್ಯಾ ಶಾಸ್ತ್ರ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ನೀಡಿ ಗೌರವಿಸಲಾಗಿದೆ. ಸಿಆರ್ ರಾವ್ ಅವರು ‘ಇಂಟರ್ ನ್ಯಾಷನಲ್ ಪ್ರೈಸ್ ಆಫ್ ಸ್ಟ್ಯಾಟಿಸ್ಟಿಕ್ಸ್ – 2023’, ‘ನ್ಯಾಷನಲ್ ಮೆಡಲ್ ಆಫ್ ಸೈನ್ಸ್’ ಸೇರಿದಂತೆ ಹಲವು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದರು. ಸಿಆರ್ ರಾವ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಗದ್ವಿಖ್ಯಾತ ಗಣಿತ ಶಾಸ್ತ್ರಜ್ಞರು, ಕರ್ನಾಟಕ ಮೂಲದ ಸಂಖ್ಯಾಶಾಸ್ತ್ರ ಪರಿಣಿತರು ಆದ ಸಿ.ಆರ್ ರಾವ್ ಅವರ ನಿಧನದ ಸುದ್ದಿ ಕೇಳಿ ನೋವಾಯಿತು. ಗಣಿತ ಕ್ಷೇತ್ರದಲ್ಲಿ ಅವರು ಮಾಡಿರುವ ಅಪಾರ ಸಾಧನೆಗಾಗಿ ದೇಶದ ಅತ್ಯುನ್ನತ ಪ್ರಶಸ್ತಿ ‘ಪದ್ಮವಿಭೂಷಣ’ ಮಾತ್ರವಲ್ಲದೆ, ‘ಇಂಟರ್ ನ್ಯಾಷನಲ್ ಪ್ರೈಸ್…

Read More

ಮಡಿಕೇರಿ ಆ.23 :  ಕೊಡವ ಕೂಟಾಳಿಯಡ ಕೂಟದ ಮಾಹಸಭೆ ಹಾಗೂ ಆಡಳಿತ ಮಂಡಳಿಯ ಚುನಾವಣೆ  ನಾಪೋಕ್ಲುವಿನ ಪುನಶ್ಚೇತನ ಚೇತನ ಚಾರಿಟೇಬಲ್ ಟ್ರಸ್ಟ್ ಸಭಾಂಗಣದಲ್ಲಿ ಸಂಘಟನೆಯ ಸ್ಥಾಪಕ ಅಧ್ಯಕ್ಷ  ಚಿಮ್ಮಚಿರ ಪವಿತ ರಜನ್  ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಚಂಗುಲಂಡ ಸೂರಜ್ , ಕಾರ್ಯದರ್ಶಿ ಚೆಟ್ಟೋಳಿರ ಶರತ್ ಸೋಮಣ್ಣ, ಉಪಾಧ್ಯಕ್ಷ ಕಾಂಗೀರ ಸಂತೋಷ್ ದೇವಯ್ಯ, ಸಹ ಕಾರ್ಯದರ್ಶಿ ನೂರೆರ ಸರಿತ ಅರುಣ್, ಖಜಾಂಚಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ,  ನಿರ್ದೇಶಕರಾಗಿ ಬಾಳೆಯಡ ದಿವ್ಯ ಮಂದಪ್ಪ, ಅಮ್ಮಾಟಂಡ ಚೇತನ್, ಕರ್ತುರ ರನ್ನು ಪೆಮ್ಮಯ್ಯ, ಕಾಳಮಂಡ ರಾಬಿನ್, ಬೊಜ್ಜಂಗಡ ಚೆಂಗಪ್ಪ ಅಧಿಕಾರ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಂಘಟನೆಯ ಗೌರವ ಸಲಹೆಗಾರ  ಚೊಟ್ಟಂಡ ಪ್ರಭು ಸೋಮಯ್ಯ , ಸದಸ್ಯರಾದ ಕೊಟ್ಟಂಗಡ ಕವಿತ ವಾಸುದೇವ ಮತ್ತಿತ್ತರರು ಉಪಸ್ಥಿತರಿದ್ದರು. ಈ ಸಂದರ್ಭ ಪುನಶ್ಚೇತನ ಚಾರಿಟೇಬಲ್ ಟ್ರಸ್ಟ್ ನ ವಿಶೇಷ ಮಕ್ಕಳಿಗೆ ಕೂಟದ ವತಿಯಿಂದ ಉಡುಗೊರೆ ನೀಡಲಾಯಿತು.

Read More

ಮಡಿಕೇರಿ ಆ.23 : ಜಿಲ್ಲೆಯ ಯುವಕ, ಯುವತಿಯರಿಗಾಗಿ “ರಾಷ್ಟ್ರೀಯ ಏಕತೆ ಹಾಗೂ ಒಗ್ಗಟ್ಟು ಎಂಬ ವಿಷಯದಡಿ” ಸೆಪ್ಟಂಬರ್ ತಿಂಗಳ ಮೊದಲ ವಾರದಲ್ಲಿ ಜಿಲ್ಲಾ ಮಟ್ಟದ “ಜಿಲ್ಲಾ ಯುವ ಉತ್ಸವ” (ಪಂಚ್ ಪ್ರಾಣ್/India@2047) ಎಂಬ ವಿನೂತನ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್, ಭಾರತ ಸರ್ಕಾರ, ನೆಹರು ಯುವ ಕೇಂದ್ರ, ಯುವ ಜನ ವ್ಯವಹಾರ ಕ್ರೀಡಾ ಸಚಿವಾಲಯ, ಮಡಿಕೇರಿ ಕೊಡಗು. ಜಿಲ್ಲಾಡಳಿತ, ಜಿ.ಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಡಗು, ಜಿಲ್ಲಾ ಯುವ ಒಕ್ಕೂಟ ಕೊಡಗು, ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯಲಿದೆ ಎಂದರು. ವಿರಾಜಪೇಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿರುವ ವಿವಿಧ ಸ್ಪರ್ಧಾ ಕಾರ್ಯಕ್ರಮದಲ್ಲಿ ಜಿಲ್ಲೆಯ 15 ವರ್ಷದಿಂದ 29 ವರ್ಷ ವಯೋಮಿತಿಯ ಜಿಲ್ಲೆಯ ಯುವಕ, ಯುವತಿಯರು ಭಾಗವಹಿಸಬಹುದಾಗಿದೆ. ವಿಜೇತ ತಂಡಗಳಿಗೆ ಪ್ರಥಮ, ದ್ವಿತೀಯ…

Read More

ಮಡಿಕೇರಿ ಆ.23 : ಬ್ಯಾಡಗೊಟ್ಟದಲ್ಲಿರುವ ದಿಡ್ದಳ್ಳಿ ನಿರಾಶ್ರಿತರ ಶಿಬಿರದ ಬಳಿ ಹಾದು ಹೋಗಿರುವ ಹಾರಂಗಿ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿ ಆಕಸ್ಮಿಕವಾಗಿ ಮೃತಪಟ್ಟಿದ್ದ ಅಸದ್ಗುರು ಅಯ್ಯಪ್ಪಸ್ವಾಮಿ ಶಾಲೆಯ ವಿದ್ಯಾರ್ಥಿ ಅನಿತ್ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಕುಶಾಲನಗರದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ಇಡಲಾಗಿದೆ. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ವಿದ್ಯಾರ್ಥಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Read More

ಮಡಿಕೇರಿ ಆ.23 :  ಇಸ್ರೋ ಚಂದ್ರಯಾನ -3 ಯಶಸ್ಸಿಗಾಗಿ ಹಿಂದು ಜಾಗರಣ ವೇದಿಕೆ  ಸೋಮವಾರಪೇಟೆ ಘಟಕದ  ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಚಂದ್ರಯಾನ-3 ರ ವಿಕ್ರಮ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿಯಲೆಂದು ದೇವರಲ್ಲಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

Read More

ಮಡಿಕೇರಿ, ಆ. 23: ವೀರ ಲೋಕ ಪುಸ್ತಕ ಪ್ರಕಾಶನ ಸಂಸ್ಥೆಯು ರಾಜ್ಯಾಂದ್ಯಂತ ಆಯೋಜಿಸಿರುವ ಕಥಾ ಕಮ್ಮಟ ಯೋಜನೆಯಂತೆ ಕೊಡಗಿನಲ್ಲೂ ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕವು ಕೈ ಜೋಡಿಸಿ ಅಕ್ಟೋಬರ್ 7-8 ರಂದು ಮಡಿಕೇರಿಯಲ್ಲಿ ಕಥಾ ಕಮ್ಮಟವನ್ನು ಉಚಿತ ಕಥಾ ಶಿಬಿರವನ್ನು ಉಚಿತವಾಗಿ ಆಯೋಜಿಸಲಾಗಿದೆ. ಹಿರಿಯ ಸಾಹಿತಿ, ಬರಹಗಾರ ಪ್ರಭಾಕರ ಶಿಶಿಲ ಅವರು ಶಿಬಿರವನ್ನು ನಡೆಸಿಕೊಡಲಿದ್ದಾರೆಂದು ವೀರಲೋಕ ಜಿಲ್ಲಾ ಸಂಚಾಲಕ, ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ತಿಳಿಸಿದ್ದಾರೆ. ಶಿಬಿರದ ಸಂಚಾಲಕರಾಗಿ ಸಂಪತ್‍ಕುಮಾರ್ ಹಾಗೂ ಸಹ ಸಂಚಾಲಕರಾಗಿ ಕನ್ನಡ ಸಾಹಿತ್ಯ ಪರಿಷತ್‍ನ ಪ್ರಧಾನ ಕಾರ್ಯದರ್ಶಿ ರೇವತಿ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಶಿಬಿರವು ವೀರಲೋಕ ಪ್ರಕಾಶನದ ಮುಖ್ಯಸ್ಥ ಶ್ರೀನಿವಾಸ್, ಸಾಹಿತಿಗಳಾದ ಕಾ.ತ.ಚಿಕ್ಕಣ್ಣ ಮತ್ತು ಲಕ್ಷಣ ಕೊಡಸೆ ಅವರ ಮಾರ್ಗದರ್ಶನದಲ್ಲಿ ನಡೆಯಲಿದೆ. 35 ವರ್ಷ ವಿೂರದ ಶಿಭಿರಾರ್ಥಿಗಳು, ನಿಗಧಿತ ಅರ್ಜಿಯಲ್ಲಿ ವಿವರಗಳನ್ನು ಸೆಪ್ಟೆಂಬರ್ 30ರ ಒಳಗೆ ಬಿ.ಜಿ. ಅನಂತಶಯನ, ದೇಸಿ ಜಗಲಿ ಕಥಾ ಕಮ್ಮಟ, ‘ಚಿರಂತನ’ ಕಾನ್ವೆಂಟ್ ಜಂಕ್ಷನ್, ಮಡಿಕೇರಿ,…

Read More

ಮಡಿಕೇರಿ, ಆ. 23: ವಿಶ್ವ ಜಾನಪದ ದಿನದ ಅಂಗವಾಗಿ ಆನ್‍ಲೈನ್ ಜಾನಪದ ಕಥಾ ಸ್ಪರ್ಧೆಗೆ ಆಹ್ವಾನಿಸುತ್ತಿದ್ದೇವೆ. ಭಾಗವಹಿಸುವವರು ಸೆ.5ರ ಒಳಗೆ ಕೊಡಗಿನ ಐತಿಹಾಸಿಕ ಜಾನಪದ ಕಥೆಗಳನ್ನು, 5 ನಿಮಿಷ ವಿೂರದಂತೆ ವಿಡಿಯೋ ಮಾಡಿ ಈ ಕೆಳಗಿನ ಮೊಬೈಲ್ ಸಂಖ್ಯೆಗೆ ಕಳುಹಿಸಿಕೊಡುವಂತೆ, ಕೊಡಗು ಜಿಲ್ಲಾ ಜಾನಪದ ಪರಿಷತ್ ಘಟಕದ ಅಧ್ಯಕ್ಷ ಬಿ.ಜಿ. ಅನಂತಶಯನ ಹೇಳಿದ್ದಾರೆ. 9448048875, 9448614999 ಪ್ರಥಮ ಬಹುಮಾನಕ್ಕೆ- ರೂ. 750/- ದ್ವಿತೀಯ ಬಹುಮಾನಕ್ಕೆ- ರೂ. 500/- ಹಾಗೂ ತೃತೀಯ ಬಹುಮಾನಕ್ಕೆ- ರೂ. 250/- ನೀಡಲಾಗುವುದು ಅಂಕ ನೀಡುವಾಗ ನಿಗದಿತ ಸಮಯ, ಕಥೆ, ಪ್ರಸ್ತುತಿ ಮತ್ತು ಭಾಷಾ ಸ್ಪಷ್ಟತೆಯನ್ನು ಪರಿಗಣಿಸಲಾಗುತ್ತದೆ.

Read More