ಮಡಿಕೇರಿ ಸೆ.21 : ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರನ್ನು ಪುನರ್ ನೇಮಕ ಮಾಡಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ತೋಂಟದಾರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಹಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಧೋಶ್ ಪೂವಯ್ಯ ಅವರು ಕಾರ್ಯವೈಖರಿಯನ್ನು ಗಮನಿಸಿ ಇದೀಗ ಮತ್ತೊಮ್ಮೆ ಅವರನ್ನು ಕೊಡಗು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ತಾಲೂಕು ಅಧ್ಯಕ್ಷರನ್ನು ನೇಮಕ ಮಾಡುವ ಹೊಣೆಗಾರಿಕೆಯನ್ನು ಮಧೋಶ್ ಪೂವಯ್ಯ ಹೆಗಲಮೇಲೆ ಹಾಕಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ತೂಕ್ ಬೊಳಕ್ ಕಲೆ, ಕ್ರೀಡೆ ಮತ್ತು ಸಾಹಿತ್ಯ ಅಕಾಡೆಮಿಯ ಫೇಸ್ ಸಂಚಾಲಕರಾಗಿರುವ ಮಧೋಶ್ ಪೂವಯ್ಯ ಪ್ರಸ್ತುತ ಕೊಡಗು ಪತ್ರಕರ್ತ ಸಂಘದ ವಿರಾಜಪೇಟೆ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ವಿರಾಜಪೇಟೆ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಇವರು ವಿವಿಧ ಸಂಘ ಸಂಸ್ಥೆಗಳಲ್ಲಿ ನಾನಾ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಜಡಿಮಳೆ ಎಂಬ ಕೊಡವ ಸಿನೆಮಾವನ್ನು…
ಲೇಖಕ: admin
ಮಡಿಕೇರಿ ಸೆ.21 : ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಸೂರ್ಲಬ್ಬಿ ಸಮೀಪದ ಕುಂಬಾರಗಡಿಗೆ ಎಂಬಲ್ಲಿ ನಡೆದಿದೆ. ಮಡಿಕೇರಿಯಿಂದ ಸೂರ್ಲಬ್ಬಿ ಮಾರ್ಗವಾಗಿ ಸೋಮವಾರಪೇಟೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಕುಂಬಾರಗಡಿಗೆ ಗ್ರಾಮದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾಗಿದೆ. ಬಸ್ ನಲ್ಲಿ ಹೆಚ್ಚಾಗಿ ಶಾಲಾ ಮಕ್ಕಳೆ ಪ್ರಯಾಣಿಸುತ್ತಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ಮರಕ್ಕೆ ಡಿಕ್ಕಿಯಾಗದೆ ಮುಂದೆ ಚಲಿಸಿದಲ್ಲಿ 50 ಅಡಿ ಪ್ರಪಾತಕ್ಕೆ ಉರುಳಿ ಬೀಳುವ ಆತಂಕ ಎದುರಾಗಿತ್ತು. ಸೂರ್ಲಬ್ಬಿ ರಸ್ತೆ ಕಿರಿದಾಗಿದ್ದು, ಹೆಚ್ಚು ತಿರುವುಗಳೆ ಹೊಂದಿಕೊಂಡಿದೆ. ಇಲ್ಲಿ ಯಾವುದೇ ನಾಮಫಲಕ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಾಪೋಕ್ಲು ಸೆ.21 : ಶೌರ್ಯ ತಂಡದ ವತಿಯಿಂದ ಬಾವಲಿ ಗ್ರಾಮದ ಮುಖಂಡಬಾಣೆ ಸಮುದಾಯ ಭವನ ಸೇರಿಂದತೆ ವಿವಿಧೆಡೆ ಸ್ವಚ್ಛತಾ ಶ್ರಮದಾನ ನಡೆಯಿತು. ಶೌರ್ಯ ತಂಡದ ಸ್ವಯಂ ಸೇವಕರು ಸಮುದಾಯ ಭವನದ ಸುತ್ತು ಮುತ್ತು ಹಾಗೂ ರಸ್ತೆ ಬದಿಯಲ್ಲಿ ಬೆಳೆದಿದ್ದ ಗಿಡ ಗಂಟಿಗಳು ಕಡಿದು ಸ್ವಚ್ಛಗೊಳಿಸಿದರು. ಈ ಸಂದರ್ಭ ಶೌರ್ಯ ತಂಡದ ಸದಸ್ಯರಾದ ಚೇತನ್, ದೇವಪ್ಪ, ಸುದೀಪ್, ಚರಣ್, ನವೀನ್, ನಿತಿಶ್ ಮತ್ತು ರಾಜೇಶ್ ಪಾಲ್ಗೊಂಡಿದ್ದರು. ನಿರಂತರ ಸಾರ್ವಜನಿಕರ ಸೇವೆಯಲ್ಲಿ ತೊಡಗಿಕೊಂಡಿರುವ ಶೌರ್ಯ ತಂಡದ ಬಗ್ಗೆ ಗ್ರಾಮಸ್ಥರು ಪ್ರಶಾಂಸೆ ವ್ಯಕ್ತಪಡಿಸಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.21 : ಹೊದವಾಡ ಗ್ರಾಮದ ಶ್ರೀ ಭಗವತಿ ಗಣೇಶೋತ್ಸವ ಸಮಿತಿ ವತಿಯಿಂದ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಹೊದವಾಡ ಅಂಬಲದಲ್ಲಿ ಬೆಳಿಗ್ಗೆ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬಳಿಕ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿತರಿಸಿ, ಅನ್ನ ಸಂತರ್ಪಣೆ ಜರುಗಿತು. ನಂತರ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಇರಿಸಿ ವಾದ್ಯ ಮೇಳಗದೊಂದಿಗೆ ಮೆರವಣಿಗೆಯಲ್ಲಿ ಸಾಗಿ ಪುಣ್ಯ ಕಾವೇರಿ ನದಿಯಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಈ ಸಂದರ್ಭ ಉತ್ಸವ ಸಮಿತಿ ಪದಾಧಿಕಾರಿಗಳು, ಸದಸ್ಯರು ಹಾಗೂ ಗ್ರಾಮಸ್ಥರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಸಂಭ್ರಮಿಸಿದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.21 : ಮೇಕೇರಿಯ ಶ್ರೀ ಗಣೇಶ ಸೇವಾ ಸಮಿತಿ ಆಶ್ರಯದಲ್ಲಿ ಶ್ರೀ ಗೌರಿ ಶಂಕರ ದೇವಾಲಯದಲ್ಲಿ 31ನೇ ವರ್ಷದ ಗೌರಿ ಗಣೇಶೋತ್ಸವ ಶ್ರದ್ಧಾಭಕ್ತಿಯಿಂದ ಜರುಗಿತು. ಶ್ರೀ ಗೌರಿ ಶಂಕರ ದೇವಾಲಯದಲ್ಲಿ ಮುಂಜಾನೆಯಿಂದಲೇ ವಿಶೇಷ ಪೂಜಾ ವಿಧಿಗಳು ನೇರವೇರಿದವು. ಬೆಳಗ್ಗೆ 9 ಗಂಟೆಯಿಂದ ಗಣಪತಿ ಹೋಮ, ಶ್ರೀ ಗೌರಿ ಗಣೇಶ ಮೂರ್ತಿಯ ಪ್ರತಿಷ್ಟಾಪನೆ ನೆರವೇರಿತು. ಬಳಿಕ ನಡೆದ ಧಾರ್ಮಿಕ ಪ್ರವಚನದಲ್ಲಿ ಮಾತನಾಡಿದ ಸೇವಾ ಭಾರತಿಯ ಕೊಡಗು ಜಿಲ್ಲಾಧ್ಯಕ್ಷ ಟಿ.ಸಿ .ಚಂದ್ರನ್ , ಇಂದಿನ ಆಧುನಿಕ ಯುಗದಲ್ಲಿ ಸಂಸ್ಕಾರಯುತ ಜೀವನ ಮರೆಯಾಗುತ್ತಿದ್ದು, ಮಕ್ಕಳು ದುಷ್ಚಟಗಳಿಗೆ ಒಳಗಾಗಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮನೆಯಿಂದಲೇ ಮಕ್ಕಳಿಗೆ ಮೌಲ್ಯಯುತ ಜೀವನ ಸಿಗುವಲ್ಲಿ ಪೋಷಕರು ಶ್ರಮ ವಹಿಸಬೇಕೆಂದು ಕರೆ ನೀಡಿದರು. ಮನಸ್ಸಿನ ಏಕಾಗ್ರತೆ ಪ್ರಮುಖವಾಗಿದ್ದು ದೇವರು, ಭಕ್ತಿ, ಸಂಸ್ಕೃತಿ, ಸನ್ನಢತೆಯ ಸಲುವಾಗಿ ಸದಾ ಜಾಗೃತವಾಗಿರಬೇಕು, ಒಳ್ಳೆಯ ವಿಚಾರಗಳಿಗಾಗಿ ನಮ್ಮ ಮನಸ್ಸನ್ನು ಅರ್ಪಣೆ ಮಾಡಬೇಕು ಎಂದ ಅವರು, ಮಾತೃ ಭಾಷೆ, ಉಡುಗೆ ತೊಡುಗೆ, ಭಜನೆ, ಮನೆಯಲ್ಲಿ ಸಹ ಭೋಜನ ಹಾಗೂ ಧಾರ್ಮಿಕ…
ಸೋಮವಾರಪೇಟೆ, ಸೆ.21 : ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್, ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಗೌರಿ – ಗಣೇಶ ಹಬ್ಬದ ಅಂಗವಾಗಿ ಪರಿಸರ ಸ್ನೇಹಿ ಗಣೇಶೋತ್ಸವ: 2023 ವನ್ನು ಆಚರಿಸಲಾಯಿತು. ಇಕೋ ಕ್ಲಬ್ ಸಂಘಟನೆ ಮೂಲಕ ಶಾಲಾ ಶಿಕ್ಷಕರ ಮಾರ್ಗದರ್ಶನಲ್ಲಿ ನಡೆದ ಜಾಗೃತಿ ಅಭಿಯಾನದಲ್ಲಿ ಮಕ್ಕಳು ಜೇಡಿಮಣ್ಣಿನಿಂದ ವಿವಿಧ ನಮೂನೆಯ ಗಣೇಶ ಮೂರ್ತಿಗಳನ್ನು ತಯಾರಿಸಿ ಪ್ರದರ್ಶಿಸಿ ಗಮನ ಸೆಳೆದರು. ಪಿಓಪಿ ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ಬಳಕೆ ಮಾಡದಂತೆ ಹಾಗೂ ಮಣ್ಣಿನ ಗಣೇಶ ಮೂರ್ತಿಯ ತಯಾರಿಕೆ ಮತ್ತು ಬಳಕೆಯ ಮಹತ್ವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಮಕ್ಕಳು ತಯಾರಿಸಿದ್ದ ಮಣ್ಣಿನ ಗಣೇಶ ಮೂರ್ತಿಗಳನ್ನು ಗ್ರಾಮದಲ್ಲಿ ಮಕ್ಕಳಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಯ ಬಳಕೆಯ ಕುರಿತು ಜಾಗೃತಿ ಮೂಡಿಸುವ ಮೂಲಕ ಶಾಲಾ ಅಂಗಳದಲ್ಲಿನ ಹೊಂಡದಲ್ಲಿ ವಿಸರ್ಜನೆ ಮಾಡಲಾಯಿತು. ಶಾಲಾ ಅಂಗಳದ ಹೊಂಡದಲ್ಲಿ ವಿಸರ್ಜಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯಿನಿ…
ಮಡಿಕೇರಿ ಸೆ.20 : ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮಡಿಕೇರಿ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಮಡಿಕೇರಿ ಸಮೀಪ ಕಾಟಕೇರಿ ಬಳಿ ನಡೆದಿದೆ. ಉಡುಪಿ ಮೂಲದ ವಿಜೇಶ್ ಎಂಬುವವರೇ ಮೃತ ದುರ್ದೈವಿ. ಬುಧವಾರ ಸಂಜೆ ಉಡುಪಿಯಿಂದ ವಿಜೇಶ್ ಹಾಗೂ ಶಿವಾನಂದ್ ಬೈಕ್ನಲ್ಲಿ ಮಡಿಕೇರಿಗೆ ಆಗಮಿಸುತ್ತಿದ್ದರು. ಈ ವೇಳೆ ಕಾಟಕೇರಿ ಬಳಿ ಮಡಿಕೇರಿಯಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ವಿಜೇಶ್ ಮೃತಪಟ್ಟಿದ್ದು, ಹಿಂಬದಿ ಸವಾರ ಶಿವಾನಂದ್ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಲಾರಿಯನ್ನು ವಶಪಡಿಸಿಕೊಂಡು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಂಟಿಕೊಪ್ಪ ಸೆ.20 : ಕೊಡಗರಹಳ್ಳಿ ಶಾಂತನಿಕೇತನ ಶಾಲೆಯ ವಿದ್ಯಾರ್ಥಿಗಳಾದ ನೇಹ ಅನೀಶ್ ಹಾಗೂ ಡೆಲೀಶಾ ಮುತ್ತಮ್ಮ ಜೋಡಿ ಷಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇಬ್ಬರು ವಿದ್ಯಾರ್ಥಿನಿಯರು ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನೇಹ ಅನೀಶ್ ಕೊಡಗರಹಳ್ಳಿ ಶಾಂತನಿಕೇತನ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ಡೆಲೀಶಾ ಸಿಂಗಲ್ಸ್ ನಲ್ಲೂ ಉತ್ತಮ ಸಾಧನೆ ತೋರಿದ್ದು 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.
ಮಡಿಕೇರಿ ಸೆ.20 : ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಮಲೇರಿಯಾ, ಡೆಂಗ್ಯೂ, ಚಿಕೂನ್ಗುನ್ಯಾ, ಮೆದುಳುಜ್ವರ ಹಾಗೂ ಆನೆಕಾಲು ರೋಗಗಳ ಮುಂಜಾಗ್ರತಾ ಹಾಗೂ ನಿಯಂತ್ರಣ ಕ್ರಮ ಕೈಗೊಳ್ಳಲಾಗುತ್ತಿದೆ. ಈಡಿಸ್ ಸೊಳ್ಳೆಗಳು ಹರಡುವ ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ರೋಗವು ವೈರಾಣು ಸೋಂಕಾಗಿದ್ದು, ಇದಕ್ಕೆ ಯಾವುದೇ ನಿರ್ಧಿಷ್ಠ ಚಿಕಿತ್ಸೆ ಹಾಗೂ ಲಸಿಕೆ ಇರುವುದಿಲ್ಲ. ಆದರೆ ರೋಗ ಲಕ್ಷಣಕ್ಕೆ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ ಹಾಗೂ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದ ಪಕ್ಷದಲ್ಲಿ ಡೆಂಗ್ಯೂ ಜ್ವರವು ಡೆಂಗ್ಯೂ ರಕ್ತಸ್ರಾವ ಜ್ವರ ಹಾಗೂ ಡೆಂಗ್ಯೂ ಆಘಾತ ಜ್ವರಕ್ಕೆ ತಿರುಗಿ ಮಾರಣಾಂತಿಕವಾಗಿ ಸಾವು ಸಂಭವಿಸಬಹುದು. ಆದ್ದರಿಂದ ಡೆಂಗ್ಯೂ ಹಾಗೂ ಚಿಕೂನ್ಗುನ್ಯಾ ನಿಯಂತ್ರಣದಲ್ಲಿ ರೋಗ ಹರಡುವ ಈಡಿಸ್ ಸೊಳ್ಳೆಗಳ ನಿಯಂತ್ರಣವೇ ಅತೀ ಮುಖ್ಯ ವಿಧಾನವಾಗಿದ್ದು, ಈ ಸೊಳ್ಳೆಗಳು ಮನೆಗಳಲ್ಲಿನ ನೀರಿನ ಶೇಖರಣೆಗಳಲ್ಲಿ ಹಾಗೂ ಮನೆಗಳ ಸುತ್ತಮುತ್ತಲಿನ ಪರಿಸರದಲ್ಲಿ ಮಳೆನೀರು ಸಂಗ್ರಹವಾಗುವ ತ್ಯಾಜ್ಯ ವಸ್ತುಗಳಲ್ಲಿ ಉತ್ಪತ್ತಿಯಾಗುವುದರಿಂದ ಇವುಗಳ ನಿಯಂತ್ರಣಕ್ಕೆ ಹೆಚ್ಚಿನ ಗಮನ ಹರಿಸಬೇಕಾಗುತ್ತದೆ. ಪ್ರಸ್ತುತ ಮುಂಗಾರು ಸಮಯವಾಗಿದ್ದರೂ ಸಹ…
ಮಡಿಕೇರಿ ಸೆ.20 : ಪ್ರಸಕ್ತ(2023-24) ಸಾಲಿಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಯಾತ್ರಾರ್ಥಿಗಳಿಗೆ ನಾಗಪುರಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಬಸ್ಸುಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ದೀಕ್ಷಾ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ www.sw.kar.nic.in ನ ಮೂಲಕ ಅಕ್ಟೋಬರ್, 10 ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.






