ನಾಪೋಕ್ಲು ಸೆ.20 : ಶೌರ್ಯ ತಂಡದ ಸದಸ್ಯರಿಂದ ನಾಪೋಕ್ಲುವಿನ ರಾಮಮಂದಿರದ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ದೇವಾಲಯದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ನಾಪೋಕ್ಲು ರಾಮ ಮಂದಿರದ ಸುತ್ತಮುತ್ತಲಿದ್ದ ಕಸ, ಕಡ್ಡಿಗಳನ್ನು ಹೆಕ್ಕಿ ಸ್ವಚ್ಚಗೊಳಿಸಲಾಯಿತು. ದೇವಾಲಯದ ಅರ್ಚಕ ರವಿ ಉಡುಪ ಅವರ ಮಾರ್ಗದರ್ಶನದಂತೆ ಸಂಯೋಜಕಿ ದಿವ್ಯ, ಗೀತಾ, ಉಮಾಲಕ್ಷ್ಮಿ, ಶ್ಯಾಮಲಾ, ದಿಲೀಶ್, ಶಂಕರ್, ರವಿ, ವಸಂತ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ನಾಪೋಕ್ಲು ಸೆ.20 : ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಪೊನ್ನಿರ ಸ್ನೇಕ್ ಗಗನ್ ರಕ್ಷಿಸಿದ್ದಾರೆ. ಬಿ.ಶೆಟ್ಟಿಗೇರಿಯ ಕರ್ತಮಾಡ ಕುಸುಮ ಎಂಬವರ ಮನೆ ಹತ್ತಿರ ಇದ್ದ 12 ಅಡಿ ಉದ್ದದ ಬಾರಿ ಗಾತ್ರದ ಕಾಳಿಂಗ ಸರ್ಪ ಕಂಡು ಉರಗತಜ್ಞ ಪೊನ್ನಿರ ಸ್ನೇಕ್ ಗಗನ್ ಅವರಿಗೆ ಮಾಹಿತಿ ನೀಡಿದ್ದು, ಪೊನ್ನಿರ ಸ್ನೇಕ್ ಗಗನ್ ಹಾವನ್ನು ರಕ್ಷಿಸಿ ಪೆರುಂಬಾಡಿ ಅರಣ್ಯಕ್ಕೆ ಬಿಟ್ಟರು. ಪೊನ್ನೀರ ಸ್ನೇಕ್ ಗಗನ್ ಈಗಾಗಲೇ 70 ಕಾಲಿಂಗ ಸರ್ಪ ಸೇರಿದಂತೆ ವಿವಿಧ ಜಾತಿಯ ಹಾವುಗಳನ್ನು ಸೆರೆಹಿಡಿದಿದ್ದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ. ಹಾವುಗಳು ಕಂಡರೆ ಕೊಲ್ಲದೆ ಉರಗ ತಜ್ಞರಿಗೆ ಮಾಹಿತಿಯನ್ನು ನೀಡಿ ಸುರಕ್ಷಿತವಾಗಿ ಅರಣ್ಯ ಬಿಡುವಂತೆ ಕರೆ ನೀಡಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.20 : ಜನರಿಗೆ ದೈನಂದಿನ ಜೀವನದಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಮಡಿಕೇರಿ ಜಿಲ್ಲಾಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಪ್ರಯುಕ್ತ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಸಂಪತ್ತು ಅಥವಾ ಹಣ ಇದ್ದ ಮಾತ್ರಕ್ಕೆ ಅದು ಮುಂದುವರಿದ ದೇಶ ಎಂದು ಹೇಳಲು ಸಾಧ್ಯವಿಲ್ಲ. ದೇಶದಲ್ಲಿ ತಾಯಿಯ ಆರೋಗ್ಯ ಮತ್ತು ಮಕ್ಕಳ ಆರೋಗ್ಯ ಬಹಳ ಮುಖ್ಯವಾಗಿದೆ. ಅಭಿವೃದ್ಧಿಯನ್ನು ಆರೋಗ್ಯದ ದೃಷ್ಟಿಯಿಂದ ಅಳೆಯಲಾಗುವುದು ಎಂದರು. ಮುಂದಿನ ಡಿಸೆಂಬರ್ ವರೆಗೆ ಪ್ರತಿ ಮಂಗಳವಾರ ಆರೋಗ್ಯ ತಪಾಸಣೆ ನಡೆಯಲಿದ್ದು, ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಪೂವಯ್ಯ ಮಾತನಾಡಿ, ಸರ್ಕಾರ ನೀಡುವ ಸೌಲಭ್ಯಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ವ್ಯವಸ್ಥೆ ಆಗಬೇಕಿದೆ. ಬಿಪಿಎಲ್ ಕಾರ್ಡು ಆಯುಷ್ಮಾನ್ ಕಾರ್ಡ್ ಮುಂತಾದ ದಾಖಲೆಗಳನ್ನು ರೋಗಿಗಳು ಸರಿಯಾಗಿ ನೀಡಿದರೆ ಮಾತ್ರ ಸರ್ಕಾರದ ಸೌಲಭ್ಯಗಳು…
ನಾಪೋಕ್ಲು ಸೆ.20 : ನಾಪೋಕ್ಲುವಿನ ವಿವಿಧೆಡೆ ವಿವಿಧ ಸೇವಾ ಸಮಿತಿ ವತಿಯಿಂದ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. 5 ಸೇವಾ ಸಮಿತಿಗಳ ವತಿಯಿಂದ ಸಂತೆ ಮೈದಾನದಿಂದ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ವಾಹನಗಳಲ್ಲಿ ಇರಿಸಿ ವಾದ್ಯ ಮೇಳಗಳೊಂದಿಗೆ ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿಸಿ ವಿವಿಧ ದೇವಾಲಯಗಳಲ್ಲಿ ಪ್ರತಿಷ್ಠಾಪಿಸಲಾಯಿತು. ಈಡು ಕಾಯಿ ಹೊಡೆಯುವುದರ ಮೂಲಕ ಸಂತೆ ಮೈದಾನದಲ್ಲಿ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ, ಗಣೇಶೋತ್ಸವ ಸಮಿತಿಯ ಪ್ರಮುಖರಾದ ಕಲಿಯಂಡ ವಿಠಲ ಅವರು ದೇಶ ಹಾಗೂ ಧರ್ಮ ರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಿನಿಂದ ನಿಸ್ವಾರ್ಥ ಸೇವೆಯಿಂದ ಶ್ರಮಿಸುವಂತಾಗಬೇಕೆಂದು ಕರೆ ನೀಡಿದರು. ನಾಪೋಕ್ಲು ನಲ್ಲಿ ಸುಮಾರು 50 ವರ್ಷಗಳಿಂದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಇದೀಗ ಎಲ್ಲರಿಗೂ ಅನುಕೂಲವಾಗುವಂತೆ ವಿವಿಧ 5 ಕಡೆಗಳಲ್ಲಿ ಗೌರಿ ಗಣೇಶ ಸಮಿತಿಗಳಿಂದ ಮೂರ್ತಿಗಳನ್ನು ಪ್ರತಿಷ್ಠಾಪನೆಗೊಲಾಗುತ್ತಿದೆ. ಶನಿವಾರದಂದು ಎಲ್ಲಾ ಗಣೇಶೋತ್ಸವ ಸಮಿತಿಗಳಿಂದ ಪ್ರತಿಷ್ಠಾಪನೆಗೊಂಡ ಗೌರಿ ಗಣೇಶ ಮೂರ್ತಿಗಳನ್ನು ಅಲಂಕೃತ ಮಂಟಪದಲ್ಲಿರಿಸಿ ಮೆರವಣಿಗೆಯೊಂದಿಗೆ ಸಾಗಿ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗುವುದು ಎಂದರು. ಈ ಸಂದರ್ಭ…
ವಿರಾಜಪೇಟೆ ಸೆ.20 : ವಿರಾಜಪೇಟೆ ಪಟ್ಟಣದ ಮೀನುಪೇಟೆಯ ಶ್ರೀ ವಿಶ್ವ ವಿನಾಯಕ ಗಣೇಶೋತ್ಸವ ಸಮಿತಿಯ ವತಿಯಿಂದ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಗಣಪತಿ, ಗೌರಿ ಮೂರ್ತಿಗಳ ಪ್ರತಿಷ್ಠಾಪನೆ, ಗಣಪತಿ ಹೋಮ, ವಿಶೇಷ ಪೂಜೆಯನ್ನು ನಡೆಸಲಾಯಿತು. ಅರ್ಚಕರಾದ ವೇಣುಗೋಪಾಲ್ ಭಟ್ ಮಹಾಪೂಜೆಯನ್ನು ನೆರವೇರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪ್ರಸಾದ ವಿತರಣೆ ಹಾಗೂ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ವಿಶ್ವ ವಿನಾಯಕ ಸಮಿತಿಯ ಸದಸ್ಯರುಗಳು, ಭಕ್ತಾದಿಗಳು ಉಪಸ್ಥಿತರಿದ್ದರು.
ವಿರಾಜಪೇಟೆ ಸೆ.20 : ಶಾಲಾ ಶಿಕ್ಷಣ ಇಲಾಖೆ, ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮತ್ತು ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ, ಇವರ ಸಹಯೋಗದಲ್ಲಿ ವಿರಾಜಪೇಟೆಯ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿಗಳ ಕಚೇರಿ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡುವ ವಿನೂತನ ಕಾರ್ಯಕ್ರಮವಾದ ಸಸ್ಯ ಶ್ಯಾಮಲಾ ಕಾರ್ಯಕ್ರಮವನ್ನು ಆಚರಿಸಲಾಯಿತು. ವಿರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣ ಅಧಿಕಾರಿ ಎಂ.ಪ್ರಕಾಶ್ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಪ್ರಕಾಶ್ ಅವರು ಈ ಕಾರ್ಯಕ್ರಮದ ವಿಶೇಷತೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಕ್ಷೇತ್ರ ಶಿಕ್ಷಣ ಸಮನ್ವಯ ಅಧಿಕಾರಿ ವನಜಾಕ್ಷಿ, ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಸಿಆರ್ಪಿ ವಿ.ಟಿ.ವೆಂಕಟೇಶ್, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಹಾಗೂ ಜಿಲ್ಲಾ ಸಂಘದ ಅಧ್ಯಕ್ಷ ಪ್ರವೀಣ್, ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕಿ ಪಿ.ಡಿ.ಅನ್ನಮ್ಮ, ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರು ಮತ್ತು ಶಾಲಾ…
ಮಡಿಕೇರಿ ಸೆ.20 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಸಾಲಿಗೆ 9 ಮತ್ತು 11 ತರಗತಿಗಳಿಗೆ (ಖಾಲಿ ಇರುವ ಸೀಟಿಗೆ ಅನ್ವಯಿಸಿ) ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್, 31 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶ ಪರೀಕ್ಷೆಯು 2024 ರ ಫೆಬ್ರವರಿ, 10 ರಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು https://navodaya.gov.in ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಬಹುದು. ಹೆಚ್ಚಿನ ವಿವರವನ್ನು https://navodaya.gov.in ನಲ್ಲಿ ಪಡೆಯಬಹುದು. ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವಂತೆ ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ಮಡಿಕೇರಿ ಸೆ.20 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ “ಕರ್ನಾಟಕ ಸಂಭ್ರಮ 50” “ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ” ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ, ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೊಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ. ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ-ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರಿಂದ ಸುಂದರವಾದ ಲಾಂಛನ(ಲೋಗೋ)ದ ಮಾದರಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ ರೂ 25 ಸಾವಿರ ಬಹುಮಾನವನ್ನು ನಿಗದಿಪಡಿಸಲಾಗಿದೆ. ಲಾಂಛನ(ಲೋಗೋ)ದ ಮಾದರಿಯನ್ನು ಕಳುಹಿಸಲು ಸೆಪ್ಟೆಂಬರ್, 20 ರಿಂದ 30 ರವರೆಗೆ ಅವಕಾಶವಿದೆ. ಆಸಕ್ತರು ಈ ಕುರಿತು ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ https://www.kannadasiri.karnataka.gov.in ದಲ್ಲಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.
ಮಡಿಕೇರಿ ಸೆ.20 : ಆಧುನೀಕತೆಗೆ ಅನುಗುಣವಾಗಿ ಹಣಕಾಸಿನ ವ್ಯವಹಾರಗಳಲ್ಲಿನ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿದೆ. 2022-23ನೇ ಸಾಲಿನಲ್ಲಿ 11.04 ಕೋಟಿ ರೂ. ಲಾಭವನ್ನು ಹೊಂದಿಕೊಂಡಿರುವುದಾಗಿ ಬ್ಯಾಂಕ್ ನ ಅಧ್ಯಕ್ಷ ಕೊಡಂದೇರ ಪಿ.ಗಣಪತಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ 15 ಶಾಖೆಗಳ ವ್ಯಾಪ್ತಿಗಳಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಎಟಿಎಂ ಸೌಲಭ್ಯವನ್ನು ಕಲ್ಪಿಸಲಾಗಿದೆಯಲ್ಲದೆ, ಎಟಿಎಂ ಇಲ್ಲದೆ ಇರುವ 6 ಶಾಖಾ ವ್ಯಾಪ್ತಿಯಲ್ಲಿ ಮೈಕ್ರೋ ಎಟಿಎಂ ವ್ಯವಸ್ಥೆ ಕಲ್ಪಿಸಲಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ವ್ಯವಸ್ಥೆಯನ್ನು ಹಳ್ಳಿ ಹಳ್ಳಿಗಳಿಗೆ ಮತ್ತು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಲು ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸುವ ಮೂಲಕ ಇತರ ರಾಷ್ಟ್ರೀಕೃತ ಬ್ಯಾಂಕ್ಗಳಿಗೆ ಸರಿ ಸಮಾನವಾಗಿ ಗ್ರಾಹಕರ ಉತ್ತಮ ಸೇವೆ ಒದಗಿಸಲು ಬ್ಯಾಂಕ್ ಶ್ರಮಿಸುತ್ತಿದೆಯೆಂದು ಸ್ಪಷ್ಟಪಡಿಸಿದರು. ಮನೆ ಸಾಲದ ಗರಿಷ್ಠ ಮಿತಿ 75 ಲಕ್ಷಕ್ಕೆ ಹೆಚ್ಚಳ- ಮನೆ ಸಾಲದ ಗರಿಷ್ಠ ಮಿತಿ ಈ ಹಿಂದೆ 20 ಲಕ್ಷ ರೂ.ಗಳಿತ್ತಾದರೆ, ಆರ್ಬಿಐ ನಿರ್ದೇಶನದಂತೆ ಗರಿಷ್ಠ 75…
ಕಡಂಗ ಸೆ.20 : ಅರಪಟ್ಟು ಗ್ರಾಮದ ಶ್ರೀ ಬಲಮರಿ ಮಹಾಗಣಪತಿ ಸೇವಾ ಸಮಿತಿಯಿಂದ 32ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವವನ್ನು ಶ್ರದ್ಧಾಭಕ್ತಿಯಿಂದ ಜರುಗಿತು. ಮುಂಜಾನೆ ಗಣಪತಿ ಹೋಮದೊಂದಿಗೆ ಪೂಜೆ ಆರಂಭಗೊಂಡು ಶ್ರೀ ಗಣಪತಿಯ ವಿಸರ್ಜನಾ ಮೂರ್ತಿಯ ಪ್ರತಿಷ್ಠಾಪನೆ ವಿಘ್ನೇಶ್ವರನ ಪೂಜೆ ಹಾಗೂ ಪ್ರಸಾದ ವಿನಿಯೋಗ ನಡೆಯಿತು . ವಿಘ್ನೇಶ್ವರ ವಿಸರ್ಜನಾ ಮೂರ್ತಿಯನ್ನು ಕೂಡಿರ ಪ್ರಸನ್ನ ತಮ್ಮಯ್ಯ ಮತ್ತು ಕುಟುಂಬಸ್ಥರು ನೀಡಿದರು. ಪೂಜಾ ಕಾರ್ಯಕ್ರಮಕ್ಕೆ ಅರ್ಚಕರಾದ ಕೀರ್ತಿಶ್ ನೇತೃತ್ವವಿವಹಿಸಿದರು. ಈ ಸಂದರ್ಭ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಕುಲ್ಲಚಂಡ ಸಭಾ ಕರುಂಬಯ್ಯ, ಕಾರ್ಯದರ್ಶಿ ಅನ್ನಂಬೀರ ಗಿರಿ ಮತ್ತು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್ ಕಡಂಗ






