ಲೇಖಕ: admin

ಮಡಿಕೇರಿ ಸೆ.18 : ಕೊಡಗು ಜಿಲ್ಲೆಯ ಗಡಿಗ್ರಾಮ ಕರಿಕೆಯ ಇಬ್ಬರು ಗ್ರಾಮೀಣ ಪ್ರತಿಭೆಗಳು ಚಿತ್ರರಂಗ ಪ್ರವೇಶಿಸಿದ್ದಾರೆ. ಕನ್ನಡ ಮಿಶ್ರಿತ ಮಲೆಯಾಳಂ ಚಲನಚಿತ್ರ “ನದಿಗಳಿಲ್ ಸುಂದರಿ ಯಮುನಾ” ದಲ್ಲಿ ಕರಿಕೆಯ ನಾಗರಾಜ್ ಹಾಗೂ ರಾಜೇಂದ್ರ ಅಭಿನಯಿಸಿದ್ದಾರೆ. ಅಲ್ಲದೆ ಈ ಚಿತ್ರದಲ್ಲಿ ಡಬ್ಬಿಂಗ್ ಕಾರ್ಯವನ್ನೂ ನಿಭಾಯಿಸಿದ್ದಾರೆ. ವಿಲಾಸ್ ಕುಮಾರ್ ಹಾಗೂ ಸಿಮಿ ಮುರಳಿ ನಿರ್ಮಾಪಕರಾಗಿರುವ, ವಿಜೇಶ್ ಪಾನತ್ತೂರು ಹಾಗೂ ಉಣ್ಣಿ ವೆಲ್ಲೂರ್ ನಿರ್ದೇಶನದ “ನದಿಗಳಿಲ್ ಸುಂದರಿ ಯಮುನಾ” ಸೆ.15 ರಂದು ಕೇರಳ ರಾಜ್ಯದೆಲ್ಲೆಡೆ ತೆರೆ ಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ನಟರುಗಳಾದ ಧ್ಯಾನ್ ಶ್ರೀನಿವಾಸನ್ ಹಾಗೂ ಅಜು ವರ್ಗಿಸ್ ಪ್ರಮುಖ ಪಾತ್ರದಲ್ಲಿದ್ದಾರೆ. ಚಿತ್ರರಂಗದಲ್ಲಿ ಮತ್ತಷ್ಟು ಅವಕಾಶಗಳು ದೊರೆಯುವ ಕುರಿತು ಕರಿಕೆಯ ಕಲಾವಿದರುಗಳಾದ ನಾಗರಾಜ್ ಹಾಗೂ ರಾಜೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Read More

ಮಡಿಕೇರಿ ಸೆ.18 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಗೈಡ್ ಸಹ ಕಾರ್ಯದರ್ಶಿಯಾಗಿ ಸಾಹಿತಿ, ನಟಿ ಹಾಗೂ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ನೇಮಕಗೊಂಡಿದ್ದಾರೆ. ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದೇಶಭಕ್ತಿ ಗಾಯನ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ಜಿಲ್ಲಾ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು ಅವರು ಹರಿಣಿ ವಿಜಯ್ ಅವರಿಗೆ ಆದೇಶದ ಪ್ರತಿಯನ್ನು ನೀಡಿ ಅಭಿನಂದಿಸಿದರು. ಜಿಲ್ಲಾ ತರಬೇತಿ ಆಯುಕ್ತೆ ಮೈಥಲಿ ರಾವ್ ಬರ ಮಾಡಿಕೊಂಡರು. ಜಿಲ್ಲಾ ಗೈಡ್ ಆಯುಕ್ತರಾದ ಪದ್ಮಶ್ರೀ ಐಮುಡಿಯಂಡ ರಾಣಿ ಮಾಚಯ್ಯ, ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ಸಂಘಟಕರಾದ ದಮಯಂತಿ ಅವರ ಉಪಸ್ಥಿತರಿದ್ದರು. ಜಿಲ್ಲೆಯ ವಿವಿಧ ಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಂದ ದೇಶಭಕ್ತಿ ಗಾಯನ ಸ್ಪರ್ಧೆ ನಡೆಯಿತು.

Read More

ನಾಪೋಕ್ಲು ಸೆ.18 : ಗೌರಿ ಗಣೇಶೋತ್ಸವಕ್ಕೆ ಜಿಲ್ಲೆ ಸಜ್ಜಾಗುತ್ತಿರುವಂತೆ ನಾಪೋಕ್ಲುವಿನಲ್ಲೂ ಉತ್ಸವದ ಸಂಭ್ರಮ ಗರಿಗೆದರಿದೆ. ನಾಪೋಕ್ಲು ಪಟ್ಟಣದ ಐದು ದೇವಾಲಯಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಸಿದ್ಧತೆಗಳಾಗುತ್ತಿವೆ. ಐದು ವಿವಿಧ ದೇವಾಲಯಗಳ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಒಂದು ವಾರಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಳಿಕ ಕಾವೇರಿ ನದಿಯಲ್ಲಿ ಪ್ರತಿಷ್ಠಾಪಿಸಿದ ಮೂರ್ತಿಗಳನ್ನು ವಿಸರ್ಜಿಸಲಾಗುತ್ತಿದೆ. ನಾಪೋಕ್ಲುವಿನ ಕಕ್ಕುಂದ ಕಾಡಿನ ವೆಂಕಟರಮಣ ದೇವಾಲಯದ ಗಣಪತಿ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗೌರಿ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುವುದು. ಗೌರಿ ಗಣೇಶೋತ್ಸವದ ಅಂಗವಾಗಿ ಸೆ.19 ರಂದು ಬೆಳಿಗ್ಗೆ 8 ಗಂಟೆಗೆ ಗಣಪತಿ ಹೋಮ, ಬಳಿಕ ಗೌರಿ ಗಣಪತಿ ಪ್ರತಿಷ್ಠಾಪನೆ ನಡೆಯಲಿದೆ. ಸೆ.20 ರಿಂದ 23ರ ವರೆಗೆ ಐದು ದಿನಗಳ ಕಾಲ ದೇವಾಲಯದಲ್ಲಿ ನಿತ್ಯ ಪೂಜೆ ಮಹಾಪೂಜೆ, ಮಂಗಳಾರತಿ ಪ್ರಸಾದ ವಿತರಣೆ ಮತ್ತು ಅನ್ನದಾನ ನಡೆಯಲಿದೆ. ಸೆ.20ರಂದು ರವಿ ಓಂಕಾರ ತಂಡದಿಂದ ಸಂಗೀತ ಕಾರ್ಯಕ್ರಮ, ಸೆ.21ರಂದು ಸಮುದಾಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸೆ.22ರಂದು ಬೆಳಿಗ್ಗೆ ಹತ್ತು ಗಂಟೆಯಿಂದ ಕೆಸರು…

Read More

ಸುಂಟಿಕೊಪ್ಪ ಸೆ.18 : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸುಂಟಿಕೊಪ್ಪ ಬಿಜೆಪಿ ಪಕ್ಷದ ವತಿಯಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರ ನೇತೃತ್ವದಲ್ಲಿ ಮಾದಾಪುರ ರಸ್ತೆಯ ಶ್ರೀ ವೃಕ್ಷೋದ್ಭವ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಧಾನಿಯವರ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು. ನಂತರ ‘ಸ್ವಸ್ಥ’ ವಸತಿ ವಿಶೇಷ ಚೇತನರ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು. ಪ್ರಧಾನಿ ಮಂತ್ರಿ ಮೋದಿ ಅವರು ದೇಶದ ಚುಕ್ಕಾಣಿ ಹಿಡಿದ ನಂತರ ಅಭಿವೃದ್ಧಿ ಪರಪಂಚದಲ್ಲೇ ಅಭಿವೃದ್ಧಿ ಪಥದತ್ತ ಸಾಗುತ್ತಿರುವ ದೇಶವಾಗಿದೆ ಎಂದು ಹೇಳಿದರು. ಈ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಶಕ್ತಿ ಕೇಂದ್ರದ ಪ್ರಮುಖ್ ವಾಸುದೇವ್, ಜಿಲ್ಲಾ ಒಬಿಸಿ ಉಪಾಧ್ಯಕ್ಷ ಬಿ.ಕೆ.ಮೋಹನ್, ತಾಲೂಕು ಪ್ರಧಾನ ಕಾರ್ಯದರ್ಶಿ ಗೌತಮ್, ಯುವಮೋರ್ಚಾ ಮಾಜಿ ಅಧ್ಯಕ್ಷ ಧನುಕಾವೇರಪ್ಪ, ಓಬಿಸಿ ಅಧ್ಯಕ್ಷ ಸಿ.ಸಿ.ಸುನಿಲ್, ಶಿವು ಹಾಗೂ ಶಾಲೆಯ ಅಧ್ಯಾಪಕ ವೃಂದದವರು ಹಾಜರಿದ್ದರು.

Read More

ಸುಂಟಿಕೊಪ್ಪ ಸೆ.18 : ಮೊಗೇರ ಸೇವಾ ಸಮಾಜದ ಸದಸ್ಯರುಗಳು ಎಷ್ಟೇ ಕಷ್ಟ ಬಂದರೂ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕಲ್ಪಿಸಿ ಕೊಡುವುದರ ಮೂಲಕ ಸಮಾಜ ಬಲಿಷ್ಠವಾಗಲು ಸಹಕರಿಸಬೇಕು ಎಂದು ಕೊಡಗು ಜಿಲ್ಲಾ ಮೊಗೇರ ಸಮಾಜದ ಸ್ಥಾಪಕ ಅಧ್ಯಕ್ಷ, ನಿವೃತ್ತ ಶಿಕ್ಷಕ ಟಿ.ಸದಾನಂದ ಕರೆ ನೀಡಿದರು. ಸುಂಟಿಕೊಪ್ಪದ ಗುಂಡುಗುಟ್ಟಿ ಶ್ರೀ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಮೊಗೇರ ಗ್ರಾಮ ವಿಕಾಸ ಯೋಜನೆಯ ಪ್ರಥಮ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. 20 ವರ್ಷಗಳ ಹಿಂದೆ ಕೊಡಗಿನಲ್ಲಿ ಮೊಗೇರ ಸಮಾಜ ಸ್ಥಾಪಿಸುವಾಗ ಅನೇಕ ಸವಾಲುಗಳು ಇದ್ದವು, ಆಗ ಗ್ರಾಮ ಪಂಚಾಯಿತಿ, ತಾ.ಪಂ, ಜಿ.ಪಂ ನಲ್ಲೂ ಒಬ್ಬರೇ ಒಬ್ಬರು ಸಮಾಜದ ಸದಸ್ಯರುಗಳು ಇರಲಿಲ್ಲ. ನಂತರ ಸಂಘಟನೆ ಬಲವಾದಂತೆ ಹಲವಾರು ಮಂದಿ ಗ್ರಾ.ಪಂ, ತಾ.ಪಂ., ಜಿ.ಪಂ. ಸದಸ್ಯರು ಅಧ್ಯಕ್ಷರುಗಳಾಗಿ ಗುರುತಿಸಿಕೊಳ್ಳುತ್ತಿದ್ದು, ಶಿಕ್ಷಣ ಸಹಬಾಳ್ವೆ, ಸಹಕಾರ ನೆಮ್ಮದಿ ನಮ್ಮ ಸಿದ್ದಾಂತವಾದರೂ ಸೇವಾ ಯೋಜನೆಯಿಂದ ಸಂಘದ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು. ನಮ್ಮ ಸಮಾಜದ ಮಕ್ಕಳು ಐಎಎಸ್, ಐಪಿಎಸ್, ಇಂಜಿನೀಯರ್ ಆಗಿ…

Read More

ಮಡಿಕೇರಿ ಸೆ.18 :  ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕಂಡು ವಿಶೇಷ ಚೇತನ ಯುವತಿಯೊಬ್ಬಳು ಭಾವುಕರಾಗಿರುವ ಪ್ರಸಂಗ ತಿತಿಮತಿಯಲ್ಲಿ ನಡೆದಿದೆ. ತಿತಿಮತಿ ನಿವಾಸಿ ಸ್ವಾತಿ  ಶಾಸಕ ಪೊನ್ನಣ್ಣ ಅವರನ್ನು ಖುದ್ದು ಭೇಟಿ ಮಾಡಬೇಕೆಂಬುದು ಬಹುದಿನದ ಬೇಡಿಕೆಯಾಗಿತ್ತು. ಅದರಂತೆ ಇಂದು ಶಾಸಕ ಪೊನ್ನಣ್ಣ ಅವರನ್ನು ಕಂಡು ಭಾವುಕರಾದರು. ಶಾಸಕರು ಅವರೊಂದಿಗೆ ಮಾತನಾಡಿ, ಸಮಸ್ಯೆಯನ್ನ ಆಲಿಸಿ, ಧೈರ್ಯ ತುಂಬಿ, ಶುಭಹಾರೈಸಿದರು.

Read More

ಮಡಿಕೇರಿ ಸೆ.18 : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ವಿವಿಧ ಕಾರ್ಯಕ್ರಮಗಳ ಅಂಗವಾಗಿ ಕಡಂಗ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು. ಕಡಂಗ ಮೊಹಿಯದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿಯ ಅಹಾವಲು ಸ್ವೀಕರಿಸಿದರು. ಈ ಸಂದರ್ಭ ಮಸೀದಿ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ಮಸೀದಿ ಅಧ್ಯಕ್ಷ ಅಬ್ದುಲ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು. ನಂತರ ಅರಪಟ್ಟು ಗ್ರಾಮದ ಶ್ರೀ ಭಗವತಿ ದೇವಾಲಯಕ್ಕೆ ಭೇಟಿ ನೀಡಿದರು. ಈ ಸಂದರ್ಭ ದೇವಾಲಯದ ಅಧ್ಯಕ್ಷ ನೆರಪಂಡ ಚಿತ್ರ ಬೆಳ್ಯಪ್ಪ ಮತ್ತು ಆಡಳಿತ ಮಂಡಳಿ ಸದಸ್ಯರು ಹಾಜರಿದ್ದರು. ಕಡಂಗ ಪಟ್ಟಣದಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿದರು. ಇದೇ ಸಂದರ್ಭ ಶಾಸಕರುಗಳನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಮಸೀದಿಯ ಅಧ್ಯಕ್ಷ ಅಬ್ದುಲ್ ರಹಮಾನ್ ಅರಫಾ, ಉಪಾಧ್ಯಕ್ಷ ಉಸ್ಮಾನ್ ಮತ್ತು ಸದಸ್ಯರು ಹಾಜರಿದ್ದರು. ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರನ್ನು ಮಸೀದಿ ವತಿಯಿಂದ ಸನ್ಮಾನಿಸಲಾಯಿತು. ಈ…

Read More

ಮಡಿಕೇರಿ ಸೆ.18 : ವಿದ್ಯಾರ್ಥಿ ಕಲಾಉತ್ಸವ 2023ರ ಪ್ರಬಂಧ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕ್ಷಮಾ ಕಾವೇರಮ್ಮ ಭಾಗವಹಿಸಿ ಪ್ರಥಮ ಬಹುಮಾನ ಪಡೆದು ಶಾಲೆಗೆ ಕೀರ್ತಿ  ತಂದಿದ್ದಾಳೆ . ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್,  ಕಾರ್ಯದರ್ಶಿ ಪಿ.ಎನ್. ವಿನೋದ್,  ಶಾಲಾ ಸಂಯೋಜಕರಾದ ಚೈತ್ರ,  ಭಾಗ್ಯ,  ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Read More

ನಾಪೋಕ್ಲು ಸೆ.18 : ಮಡಿಕೇರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ವತಿಯಿಂದ ನಗರದ ಸೆಂಟ್ ಮೈಕಲ್ ನಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಕ್ಲಸ್ಟರ್ ಗೆ ಒಳಪಡುವ 24 ಶಾಲೆಗಳ ಸುಮಾರು 550 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಸಿದ್ದರು. 47 ವಿಧದ ಸ್ಪರ್ಧೆಗಳಲ್ಲಿ ಮಕ್ಕಳು ಪಾಲ್ಗೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ವ್ಯವಸ್ಥಾಪಕ ನವೀನ್ ವಹಿಸಿದರು. ಈ ಸಂದರ್ಭ ನಗರಸಭೆ ಸದಸ್ಯರಾದ ಬಾಳೆಯಡ ಸಬೀತಾ, ಸಂಪನ್ಮೂಲ ವ್ಯಕ್ತಿ ವೀಣಾ ರೈ, ಶಾಲಾ ಮುಖ್ಯಾಪಾಧ್ಯಾಯರು ಸೇರಿದಂತೆ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಪೋಷಕರು ಹಾಜರಿದ್ದರು. 6 ವರ್ಷಗಳಿಂದ ಪ್ರತಿಭಾಕಾರಂಜಿ ಮಾಡಲು ಸಹಕರಿಸಿದ ಮುಖ್ಯಶಿಕ್ಷಕರಾದ ಸಿಸ್ಟೆರ್ ಪ್ರತಿಮಾ ಅವರನ್ನು ಸನ್ಮಾನ ಮಾಡಲಾಯಿತು. ವರದಿ : ದುಗ್ಗಳ ಸದಾನಂದ 

Read More

ನಾಪೋಕ್ಲು ಸೆ.17 : ಸಮುದಾಯದ ಜನರ ಜೊತೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಉತ್ತಮ ಬಾಂಧವ್ಯದೊಂದಿಗೆ ನಿಸ್ವಾರ್ಥ ಸೇವೆ ಸಲ್ಲಿಸಬೇಕು ಎಂದು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ನುಡಿದರು. ಸಮೀಪದ ಹಳೆ ತಾಲೂಕು ಭಗವತಿ ಸಮುದಾಯ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗ್ರಾ.ಪಂ ಸಹಯೋಗದಲ್ಲಿ ಆಯೋಗಿಸಿದ ಪೋಷಣ್ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರ್ಹ ಫಲಾನುಭವಿಗಳು ಯಾವುದೇ ಸೌಲಭ್ಯದಿಂದ ವಂಚಿತರಾಗದಂತೆ ಸಲಹೆ ನೀಡಿದರು. ಗ್ರಾ.ಪಂ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್ ಮಾತನಾಡಿ, ನಾವು ನಮ್ಮ ಸುತ್ತಮುತ್ತಲಿನಲ್ಲಿ ತರಕಾರಿ ಗಳನ್ನು ಬೆಳೆಸಿ ಅದನ್ನು ಆಹಾರದ ಜೊತೆ ಬಳಸಿದಾಗ ಅದರ ರುಚಿ ಹಾಗೂ ಪೌಷ್ಠಿಕತೆ ವಿಶೇಷ ವಾಗಿರುತ್ತದೆ ಎಂದರು. ಆರೋಗ್ಯ ಕಾರ್ಯಕರ್ತೆ ಉಮಾ ಮಹೇಶ್ವರಿ ಪೌಷ್ಟಿಕತೆ ಜೊತೆಗೆ ಚುಚ್ಚು ಮದ್ದು ಸಹ ಸರಿಯಾದ ಸಮಯಕ್ಕೆ ತೆಗೆದುಕೊಳ್ಳಬೇಕೆಂದು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಶೀಲಾ ಅಶೋಕ್ ಮಾತೃ ವಂದನಾ ಹಾಗೂ ಪೌಷ್ಠಿಕ ಆಹಾರದ ಬಗ್ಗೆ…

Read More