ಮಡಿಕೇರಿ ಆ.20 : ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಕೊಡಗಿನ ವಿವಿಧೆಡೆ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ, ಶ್ರೀ ದಂಡಿನ ಮಾರಿಯಮ್ಮ ದೇವಾಲಯ, ಶ್ರೀ ಕೋಟೆ ಮಾರಿಯಮ್ಮ ದೇವಾಲಯ, ಬ್ರಾಹ್ಮಣರ ಬೀದಿಯ ಅಶ್ವತ್ಥ ಕಟ್ಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಾಗನಕಲ್ಲಿಗೆ ಹಾಲಿನ ಅಭಿಷೇಕ, ಅಲಂಕಾರ ಪೂಜೆ, ಎಳನೀರಭಿಷೇಕ, ಕ್ಷೀರಾಭಿಷೇಕ, ಸಂಕಲ್ಪ ಪೂಜೆ ಮಹಪೂಜೆ ಹಾಗೂ ವಿಶೇಷ ಧಾರ್ಮಿಕ ವಿಧಿ ವಿಧಾನಗಳು ಜರುಗಿದವು. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನಾಗನ ಕಲ್ಲಿಗೆ ಪುಷ್ಪಾರ್ಚನೆ ಮತ್ತು ಹಾಲಿನ ಅಭಿಷೇಕ ಮಾಡಿದರು.
ಲೇಖಕ: admin
ಮಡಿಕೇರಿ ಆ.21 : ಕೊಡಗು ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದ ಹೃದಯ ಭಾಗದಲ್ಲಿರುವ ಪದ್ಮಭೂಷಣ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತಕ್ಕೆ, ಇಂದು ಮುಂಜಾನೆ ಸರ್ಕಾರಿ ಬಸ್ ಡಿಕ್ಕಿಯಾಗಿ ಪ್ರತಿಮೆ ಧರೆಗುರುಳಿದ ಘಟನೆ ನಡೆದಿದೆ. ಸೋಮವಾರ ಮುಂಜಾನೆ 5.45 ರ ಸುಮಾರಿಗೆ ಕೆಎಸ್ಆರ್ಟಿಸಿ ಡಿಪೋದಿಂದ, ಬಸ್ ನಿಲ್ದಾಣಕ್ಕೆ ಸಾಗುತ್ತಿದ್ದ ಬಸ್, ಜನರಲ್ ತಿಮ್ಮಯ್ಯ ವೃತ್ತಕ್ಕೆ ಅಪ್ಪಳಿಸಿದೆ. ಈ ಸಂದರ್ಭ ಗ್ರಾನೈಟ್ ಕಂಬ ಸೇರಿದಂತೆ, ಸೇನಾನಿಯ ಪ್ರತಿಮೆ ನೆಲಕ್ಕುರುಳಿದೆ. ಪುತ್ತೂರು ಡಿಪೋದ ಮಡಿಕೇರಿ ಉಪ ವಿಭಾಗಕ್ಕೆ ಸೇರಿದ ಬಸ್ ಜನರಲ್ ತಿಮ್ಮಯ್ಯ ವೃತ್ತದ ಬಳಿ ಬರುತ್ತಿದ್ದಂತೆಯೇ ಓಂಕಾರೇಶ್ವರ ದೇವಾಲಯ ರಸ್ತೆಯಿಂದ ಪಿಕ್ ಅಪ್ ವಾಹನವೊಂದು ಆಗಮಿಸಿದೆ. ಈ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ಸಲುವಾಗಿ ಬಸ್ ಚಾಲಕ ದಾವಣಗೆರೆಯ ಕೊಟ್ರೇಗೌಡ ಬಸ್ ನ್ನು ಎಡಭಾಗಕ್ಕೆ ಚಲಾಯಿಸಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್, ಡಿವೈಡರ್ ಮೇಲೇರಿ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿದೆ. ದುರ್ಘಟನೆಯ ವೇಳೆ ಬಸ್ ನ ಮುಂಭಾಗದ ಎಡಬದಿ ಕುಳಿತ್ತಿದ್ದ…
ಸೋಮವಾರಪೇಟೆ, ಆ.21 : ಸಹೃದಯಿ, ಸ್ನೇಹಜೀವಿ, ಶಿಕ್ಷಕರ ಒಡನಾಡಿ, ಸದಾ ಹಸನ್ಮುಖಿ , ಕಾರ್ಯತತ್ಪರತೆ, ಸರಳ, ಸಜ್ಜನಿಕೆಯ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ್ದು ಮೈಸೂರಿನ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಹಿರಿಯ ಉಪನ್ಯಾಸಕರಾಗಿ ವರ್ಗಾವಣೆಗೊಂಡಿರುವ ಸೋಮವಾರಪೇಟೆ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಅವರಿಗೆ ಸೋಮವಾರಪೇಟೆ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಕಛೇರಿಯ ಅಧಿಕಾರಿಗಳು/ ಸಿಬ್ಬಂದಿ ವರ್ಗದ ವತಿಯಿಂದ ಸೋಮವಾರಪೇಟೆಯ ಬಿಇಓ ಕಛೇರಿಯಲ್ಲಿ ಆತ್ಮೀಯ ಬೀಳ್ಕೊಡುಗೆ ಏರ್ಪಡಿಸಲಾಗಿದೆ. ಸರಳತೆ ಮತ್ತು ಸಜ್ಜನಿಕೆ ಮೈಗೂಢಿಸಿಕೊಂಡಿರುವ ಕೆ.ವಿ.ಸುರೇಶ್ ಅವರ ಯೋಚನೆ ಮತ್ತು ಯೋಜನೆಯನ್ನು ಪ್ರತಿಯೊಂದರಲ್ಲೂ ಶಿಸ್ತುಬದ್ಧವಾಗಿ ಅಳವಡಿಸಿ ಕರ್ತವ್ಯ ನಿರ್ವಹಿಸಿದ್ದು, ಎಲ್ಲಾ ಅಧಿಕಾರಿ ಮತ್ತು ಶಿಕ್ಷಕರು, ಪೋಷಕರು ಹಾಗೂ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಕೊಡಗು ಜಿಲ್ಲೆಗೆ 2002 ರಲ್ಲಿ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾಗಿ ಆಗಮಿಸಿದ ಶ್ರೀ ಕೆ.ವಿ.ಸುರೇಶ್, ಆ ಶಾಲೆಯ ಸರ್ವಾಂಗೀಣ ಪ್ರಗತಿಗೆ ಹಾಗೂ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅವಿರತ ಶ್ರಮ ವಹಿಸಿ ಆ *ಮೊರಾರ್ಜಿ…
ಕುಶಾಲನಗರ, ಆ.20: ಕೂಡಿಗೆ ಸದ್ಗುರು ಅಪ್ಪಯ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸುಮಾರು 38 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಜುಲೈ ಅಂತ್ಯಕ್ಕೆ ನಿವೃತ್ತಿ ಹೊಂದಿದ ಸಿ.ಎಂ ಸುಲೋಚನಾ ಅವರಿಗೆ ಶಾಲೆಯ ಆಡಳಿತ ಮಂಡಳಿ ವತಿಯಿಂದ, ಶಿಕ್ಷಕ ವೃಂದ ಹಾಗೂ ಶಿಕ್ಷಕರ ಸಂಘಟನೆಗಳ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, 38 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾದ ಶಿಕ್ಷಕಿ ಸುಲೋಚನ ಅವರು ಮಕ್ಕಳ ಕ್ರೀಡೆಗೆ ನೋಡುತ್ತಿದ್ದ ಪ್ರೋತ್ಸಾಹ ಅನುಕರಣೀಯವಾದುದು. ಶಿಕ್ಷಕಿಯವರ ಅಪಾರ ವಿದ್ಯಾರ್ಥಿ ವೃಂದವು ಅವರನ್ನು ಬೀಳ್ಕೊಡುತ್ತಿರುವುದು ಅವರು ಮಕ್ಕಳ ಮೇಲೆ ಇಟ್ಟಿರುವ ಪ್ರೀತಿಯ ದ್ಯೋತಕವಾಗಿದೆ ಎಂದರು. ಸನ್ಮಾನಿತರಾದ ಶಿಕ್ಷಕಿ ಸುಲೋಚನ ಮಾತನಾಡಿ, ಶಾಲೆಯಲ್ಲಿ ತಾವು ಎಲ್ಲರ ಸಹಕಾರದೊಂದಿಗೆ ಮಕ್ಕಳ ಕ್ರೀಡೆಗೆ ತೊಡಗಿಸಿಕೊಂಡಿದ್ದ ಅನುಭವ ಹಂಚಿಕೊಂಡರು. ಶಾಲಾ ಆಡಳಿತ ಮಂಡಳಿಯ ವ್ಯವಸ್ಥಾಪಕ ಎಂ. ಬಿ. ಮೊಣ್ಣಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವ ಪಲ್ಲೇದ್,…
ಮಡಿಕೇರಿ ಆ.20 : ಕೊಡಗು ವಿಶ್ವ ವಿದ್ಯಾನಿಲಯವು ಅಧ್ಯಾಪಕರ ಅಭಿವೃದ್ಧಿಯ ಮಹತ್ವವನ್ನು ಅರ್ಥಮಾಡಿಕೊಂಡು ಅಧ್ಯಾಪಕರಲ್ಲಿ ಕೌಶಲ್ಯ ಅಭಿವೃದ್ಧಿ, ಜ್ಞಾನ ಮತ್ತು ಬೋಧನಾ ವಿಧಾನಗಳನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಕೊಡಗು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ.ಸೀನಪ್ಪ ತಿಳಿಸಿದ್ದಾರೆ. ಕರ್ನಾಟಕ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರಿನ ಫೋರ್ಕ್ ಟೆಕ್ನಾಲಜಿಸ್ ಹಾಗೂ ಕೊಡಗು ವಿಶ್ವ ವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ಎರಡು ವಾರಗಳ ಕಾಲ ವಿವಿಧ ಕಾಲೇಜುಗಳ ಅಧ್ಯಾಪಕರಿಗೆ ನಡೆಯುವ “ಅಧ್ಯಾಪಕರ ಅಭಿವೃದ್ಧಿ ಕಾರ್ಯಾಗಾರ”ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೂತನವಾಗಿ ಆರಂಭವಾಗಿರುವ ಕೊಡಗು ವಿಶ್ವವಿದ್ಯಾನಿಲಯವು ಶೈಕ್ಷಣಿಕ ಪ್ರಗತಿಯಲ್ಲಿ ಪ್ರಮುಖ ಮೈಲಿಗಲ್ಲನ್ನು ಹೊಂದಿದ್ದು, ವಿದ್ಯಾರ್ಥಿಗಳ ಮನಸ್ಸು ಮತ್ತು ಸಮಾಜದ ಭವಿಷ್ಯವನ್ನು ರೂಪಿಸುವ ಸಲುವಾಗಿ ಬೋಧನಾ ವಿಭಾಗದ ಸದಸ್ಯರ ಕೌಶಲ್ಯ ಮತ್ತು ಸಾಮಥ್ರ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಆರಂಭಿಕ ಹಂತವಾಗಿ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇಂದಿನ ವೇಗದ ಮತ್ತು ನಿರಂತರವಾಗಿ…
ಮಡಿಕೇರಿ ಆ.21 : ಹಾಕತ್ತೂರು ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಗ್ರಾ.ಪಂ ಮಾಜಿ ಸದಸ್ಯ, ಉರಗ ತಜ್ಞ ಪಿಯುಷ್ ಪರೇರಾ ಅವರನ್ನು ಸನ್ಮಾನಿಸಲಾಯಿತು. ಸಂಘದ ಸಭಾಂಗಣದಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ಆ.21 : ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಜನರಲ್ ತಿಮ್ಮಯ್ಯ ಪ್ರತಿಮೆಗೆ ಬೆಳಗಿನ ಜಾವ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಪ್ರತಿಮೆಗೆ ಹಾನಿಯಾಗಿರುವ ಹಿನ್ನೆಲೆ ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ವೀಕ್ಷಿಸಿದರು. ಬಳಿಕ ಜನರಲ್ ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿರುವ ಪ್ರತಿಮೆಯನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಜನರಲ್ ತಿಮ್ಮಯ್ಯ ವೃತ್ತದಲ್ಲಿ ಪ್ರತಿಮೆ ಪುನರ್ ಸ್ಥಾಪನೆ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಸಂಬಂಧಪಟ್ಟ ಇಂಜಿನಿಯರ್ಗಳು ಮತ್ತು ತಜ್ಞರ ಜೊತೆ ಚರ್ಚಿಸಿ ತ್ವರಿತವಾಗಿ ಪ್ರತಿಮೆ ಮರು ಸ್ಥಾಪನೆಗೆ ಕ್ರಮವಹಿಸಲಾಗುವುದು ಎಂದರು. ಈ ಸಂಬಂಧ ಅಧಿಕಾರಿಗಳು, ಇಂಜಿನಿಯರ್ಗಳು ಸ್ಥಳೀಯರ ಜೊತೆ ಸಮಾಲೋಚನೆ ನಡೆಸಲಾಗುವುದು, ಆದಷ್ಟು ಶೀಘ್ರ ವೈಜ್ಞಾನಿಕವಾಗಿ ಪ್ರತಿಮೆ ಮರು ಸ್ಥಾಪಿಸಲಾಗುವುದು, ಕೆಎಸ್ಆರ್ಟಿಸಿ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಿ ಹಣ ಭರಿಸುವ ಬಗ್ಗೆ ಮಾತುಕತೆ ನಡೆಸಲಾಗುವುದು ಎಂದರು. ಮಾಜಿ ಸಚಿವ ಎಂ.ಸಿ.ನಾಣಯ್ಯ ಅವರು ಪ್ರತಿಮೆ ಮರು ಸ್ಥಾಪನೆಗೆ ಸಂಬಂಧಿಸಿದಂತೆ ಹಲವು ಸಲಹೆ, ಮಾರ್ಗದರ್ಶನ ನೀಡಿದರು. ನಗರಸಭೆ ಅಧ್ಯಕ್ಷರಾದ…
ಮಡಿಕೇರಿ ಆ.21 : ಕೇಂದ್ರ ಮೌಲ್ಯ ಮಾಪನ ಸಮಿತಿಯ ನಿರ್ದೇಶನದನ್ವಯ ವಿರಾಜಪೇಟೆ ಉಪ ನೋಂದಣಿ ಕಚೇರಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಮಾರುಕಟ್ಟೆ ಬೆಲೆಯನ್ನು 2023-24 ನೇ ಸಾಲಿಗೆ ತಿದ್ದುಪಡಿ ಮಾಡಲು ತಾಲ್ಲೂಕು ಉಪ ಸಮಿತಿಯ ಅಧ್ಯಕ್ಷರಾದ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಆ.11 ರಂದು ವಿರಾಜಪೇಟೆ ತಹಶೀಲ್ದಾರ್ ಅವರ ಕಾರ್ಯಾಲಯದಲ್ಲಿ ಉಪ ಸಮಿತಿಯ ಸದಸ್ಯರು, ಕಾರ್ಯದರ್ಶಿಗಳು ಒಳಗೊಂಡಂತೆ ಎಲ್ಲಾ ಸದಸ್ಯರು ಹಾಜರಾಗಿ ಚರ್ಚಿಸಿದ್ದು, ಮಾರುಕಟ್ಟೆ ಬೆಲೆಯಲ್ಲಿ ಕೆಲವೊಂದು ನ್ಯೂನತೆಗಳು ಕಂಡುಬಂದಿದ್ದು ಮಾರಾಟ ಅಂಕಿ-ಅಂಶಗಳ ಆಧಾರದ ಮೇಲೆ ಗ್ರಾಮವಾರು ಮಾರುಕಟ್ಟೆ ಬೆಲೆಯನ್ನು ತಿದ್ದುಪಡಿ ಮಾಡಲು ತೀರ್ಮಾನಿಸಿದ್ದು, ಈ ವಿಷಯದ ಕುರಿತು ಸಾರ್ವಜನಿಕರಿಂದ ಏನಾದರೂ ಆಕ್ಷೇಪಣೆ ಇದ್ದಲ್ಲಿ 15 ದಿವಸದೊಳಗೆ ಉಪ ನೋಂದಣಿ ಕಚೇರಿಗೆ ಲಿಖಿತ ಆಕ್ಷೇಪಣೆಯನ್ನು ಸಲ್ಲಿಸಬಹುದು ಎಂದು ವಿರಾಜಪೇಟೆ ಉಪ ನೋಂದಣಾಧಿಕಾರಿ ತಿಳಿಸಿದ್ದಾರೆ. ಪೊನ್ನಂಪೇಟೆ : ಕೇಂದ್ರ ಮೌಲ್ಯಮಾಪನ ಸಮಿತಿಯ ನಿರ್ದೇಶನದನ್ವಯ ಪೊನ್ನಂಪೇಟೆ ಉಪನೋಂದಣಿ ಕಚೇರಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಮಾರುಕಟ್ಟೆ ಬೆಲೆಯನ್ನು 2023-24 ನೇ ಸಾಲಿಗೆ ಪರಿಷ್ಕರಿಸಲು ತಾಲ್ಲೂಕು ಉಪ ಸಮಿತಿಯ…
ಮಡಿಕೇರಿ ಆ.21 : ಪ್ರಸಕ್ತ(2023-24) ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ 2023-24ನೇ ಸಾಲಿನಲ್ಲಿ ಬಿಎಡ್ ಹಾಗೂ ಡಿಎಡ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ದೂ.ಸಂ.08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಚ್.ವೀರಭದ್ರಪ್ಪ ಅವರು ತಿಳಿಸಿದ್ದಾರೆ.
ಮಡಿಕೇರಿ ಆ.21 : ತಲಕಾವೇರಿಯ ಶ್ರೀ ತಲಕಾವೇರಿ ದೇವಾಲಯಲ್ಲಿ ಆ.24 ರಂದು ಸ್ವಚ್ಛತಾ ಕಾರ್ಯದ ಪ್ರಯುಕ್ತ ಮಧ್ಯಾಹ್ನ 2 ಗಂಟೆಯ ನಂತರ ಶ್ರೀ ತಲಕಾವೇರಿ ದೇವಾಲಯದ ಪ್ರವೇಶ ಇರುವುದಿಲ್ಲ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ಸಹಕರಿಸಬೇಕೆಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್ ಕೋರಿದ್ದಾರೆ.






