ಲೇಖಕ: admin

ಮಡಿಕೇರಿ ಸೆ.18 : ಕೊಡಗಿನ ಗಡಿಭಾಗ ಪೆರುಂಬಾಡಿ ಚೆಕ್ ಪೋಸ್ಟ್ ವ್ಯಾಪ್ತಿಯ ಕಾಡು ಪ್ರದೇಶದಲ್ಲಿ ಟ್ರಾಲಿ ಬ್ಯಾಗ್ ವೊಂದರಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ. ಚೆಕ್ ಪೋಸ್ಟ್ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Read More

ವಿರಾಜಪೇಟೆ ಸೆ.18 :  ವಿರಾಜಪೇಟೆಯ ಐತಿಹಾಸಿಕ ಜೈನರ ಬೀದಿಯ ಶ್ರೀ ಬಸವೇಶ್ವರ ದೇವಾಲಯ ದ ಪ್ರದೇಶ ಗೌರಮ್ಮನ ಪಲ್ಲಕ್ಕಿ ನಗರ ಪ್ರದಕ್ಷಿಣೆ ಸೇವೆಯು ಶ್ರದ್ಧಾಭಕ್ತಿಯಿಂದ  ನಡೆಯಿತು. ವಿರಾಜಪೇಟೆ ನಗರದ ನೆಲ್ಲಮಕ್ಕಡ ಮೋಹನ್ ಅಯ್ಯಪ್ಪ ಅವರ ಕೆರೆಯಲ್ಲಿ ಶ್ರೀ ಬಸವೇಶ್ವರ ದೇವಾಲಯ ಪ್ರಧಾನ ಅರ್ಚಕ  ಮೋಹನ್ ಭಟ್ ಅವರು ಅರ್ಚಕ ವೃಂದದವರಿಂದ ಕೆರೆಗೆ ಬಾಗಿನ ಅರ್ಪಿಸಿದರು. ಈ ಬಾರಿ ಅಲಂಕಾರ ವಸ್ತುವಾದ ಕನ್ನಡಿ ದೊರಕಿರುವುದು ವಿಶೇಷ. ಕನ್ನಡಿಯು ಹೆಂಗಳೆಯರಿಗೆ ತನ್ನ ಸೌಂದರ್ಯ ಪ್ರಜ್ಞೆ ತೊರುವ ದರ್ಪಣವಾದರು. ಹೊಸತು ಎಂಬುದನ್ನು ಬಿಂಬಿಸಲಾಗುತ್ತದೆ ಎಂದು ಪ್ರಧಾನ ಅರ್ಚಕರು ಹೇಳಿದರು. ಪ್ರದೇಶ ಗೌರಮ್ಮನ ಪಲ್ಲಕ್ಕಿ ಸೇವೆಗೆ ಪಂಚವಾದ್ಯವು ಸಾತ್ ನೀಡಿತು. ನಗರದ ತೆಲುಗರ ಬೀದಿ ಯಿಂದ ಆರಂಭವಾದ ಪಲ್ಲಕ್ಕಿ ಉತ್ಸವವು ಸಂಜೆಯ ವೇಳೆಗೆ ನಗರದ ಎಲ್ಲಾ ಬೀದಿಗಳಲ್ಲಿ ಸಂಚರಿಸಿ ಸುಮಂಗಲಿಯರಿಂದ ವಿಶೇಷ ಪೂಜೆಗಳನ್ನು ಪಡೆದು ಶ್ರೀ ಬಸವೇಶ್ವರ ದೇವಾಲಯಕ್ಕೆ ಆಗಮಿಸಲಿದೆ. ಬಳಿಕ ಪ್ರದೇಶ ಗೌರಮ್ಮನಿಗೆ ಮಾಹಾ ಪೂಜೆ ಸಲ್ಲಿಕೆಯಾಗಲಿದೆ. ಈ ಸಂದರ್ಭ ದೇವಾಲಯದ ಪ್ರಧಾನ ಅರ್ಚಕರು, ದೇವಾಲಯದ…

Read More

ಮಡಿಕೇರಿ ಸೆ.18 : ಪಠ್ಯ ಚಟುವಟಿಕೆಗಳ ಜೊತೆಗೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಮತ್ತು ಪ್ರತಿಭೆಗಳ ಬೆಳವಣಿಗೆಗೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ್ ಅಭಿಪ್ರಾಯಪಟ್ಟರು ಅಮ್ಮತ್ತಿ ಒಂಟಿಯಂಗಡಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಲೋತ್ಸವ ಕಾರ್ಯಕ್ರಮವನ್ನು ದೀಪಾಕಾರದ ಪುಷ್ಪ ರಂಗೋಲಿಗೆ ಸ್ಪರ್ಶ ನೀಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ತಾಲೂಕು ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಮಕ್ಕಳಲ್ಲಿ ಎಲೆಮರೆ ಕಾಯಿಯಂತೆ ಅಡಗಿರುವ ಪ್ರತಿಭೆಯನ್ನು ಗುರುತಿಸಿ ತಾಲೂಕು, ಜಿಲ್ಲೆ, ರಾಜ್ಯ ಹಂತಕ್ಕೆ ಕಳುಹಿಸುವ ಇಲಾಖೆಯ ಪ್ರಯತ್ನಕ್ಕೆ ಕ್ಲಸ್ಟರ್ ಗಳು ಕೂಡ ಸಾಥ್ ನೀಡ್ತಾ ಇದ್ದಾರೆ. ತಾಲೂಕು ಮಟ್ಟದಲ್ಲಿ ತಮ್ಮ ಪ್ರತಿಭೆಗಳ ಮೂಲಕ ಗಮನ ಸೆಳೆದಿರುವ ಮಕ್ಕಳು ವಿಜೇತರಾಗಿ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲೂ ಸಾಧನೆ ಮಾಡಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಛದ್ಮವೇಷ, ಆಸುಭಾಷಣ, ಚರ್ಚಾ ಸ್ಪರ್ಧೆ, ರಸಪ್ರಶ್ನೆ, ಕ್ಲೆ ಮಾಡ್ಲಿಂಗ್, ಮಿಮಿಕ್ರಿ, ಭಾವಗೀತೆ, ರಂಗೋಲಿ ಸೇರಿದಂತೆ ವಿವಿಧ ಬಗೆಯ ಸ್ಪರ್ಧೆಗಳಲ್ಲಿ…

Read More

ನಾಪೋಕ್ಲು ಸೆ.18 : ಮುಸ್ಲಿಂ ವಿವಿಧ ಸಂಘಟನೆಗಳ ವತಿಯಿಂದ ಮಿಲಾದ್ ಸಂದೇಶ ರ‍್ಯಾಲಿ ನಾಪೋಕ್ಲು ಪಟ್ಟಣದಲ್ಲಿ ನಡೆಯಿತು. ಹಳೆ ತಾಲೂಕಿನಿಂದ ಸಂತೆ ಮೈದಾನದವರೆಗೆ ಮೆರವಣಿಗೆಯಲ್ಲಿ ಸಾಗಿದ ಮುಸ್ಲಿಂ ಬಾಂಧವರು ಶಾಂತಿಯ ಸಂದೇಶ ಸಾರಿದರು. ಈ ಸಂದರ್ಭ ಸಂತೆ ಮೈದಾನದಲ್ಲಿ ಆಯೋಜಿಸಿದ ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಎಸ್.ಎಸ್.ಎಫ್ ರಾಜ್ಯಾಧ್ಯಕ್ಷ ಹಫೀಜ್ ಸುಫ್ಯಾನ್ ಸಖಾಫಿ ಪಾಲ್ಗೊಂಡು ಮಾತನಾಡಿ, ಸಮಾಜದಲ್ಲಿ ಪರಸ್ಪರ ಗುರುತಿಸಿಕೊಂಡು ಗೌರವಯುತವಾದ ಬದುಕು ಸಾಗಿಸಬೇಕು ಎಂದರು. ಮುಸಲ್ಮಾನರು ಪವಿತ್ರ ಖುರಾನ್ ಉಓದುವುದರ ಮೂಲಕ ಜೀವನವನ್ನು ಸಾರ್ಥಕ ಪಡಿಸಬೇಕಾಗಿದೆ. ಮಸೀದಿಯಲ್ಲಿ ಜನರ ನಡುವೆ ತಾರತಮ್ಯ ಇರಬಾರದು ಪ್ರವಾದಿ ಮಹಮ್ಮದ್ ಪೈಗಂಬರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮೌಲ್ಯಯುತ ಜೀವನ ಸಾಗಿಸಬೇಕು ಎಂದರು. ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಹಾಜಿ ಕುಂಜಿಲ ಮಾತನಾಡಿ, ಕರ್ನಾಟಕ ಮುಸ್ಲಿಂ ಜಮಾಯತ್, ಎಸ್.ಎಸ್.ಎಫ್ ಮರ್ಕಾಝ್ ಹಿದಾಯ ಕೊಟ್ಟಮುಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಿಲಾದ್ ಸಂದೇಶ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ. ಪ್ರವಾದಿಯ ಶಾಂತಿ ಸಂದೇಶವನ್ನು ಎಲ್ಲೆಡೆ ಹರಡುವುದು ರ‍್ಯಾಲಿಯ…

Read More

ಮಡಿಕೇರಿ ಸೆ.18 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯುಷ್ಮಾನ್ ಭವ ಕಾರ್ಯಕ್ರಮದ ಪ್ರಯುಕ್ತ ಸೆ.19 ರಂದು ಬೆಳಗ್ಗೆ 10 ಗಂಟೆಗೆ ಸಮುದಾಯ ಆರೋಗ್ಯ ಕೇಂದ್ರ ಮಟ್ಟದಲ್ಲಿ ತಜ್ಞ ವೈದ್ಯರಿಂದ ಮಡಿಕೇರಿ ತಾಲ್ಲೂಕಿನ ನಾಪೋಕ್ಲು, ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಹಾಗೂ ಕುಶಾಲನಗರ ತಾಲ್ಲೂಕಿನ ಕುಶಾಲನಗರದಲ್ಲಿ ಆರೋಗ್ಯ ಮೇಳ ನಡೆಯಲಿದೆ. ಈ ಆರೋಗ್ಯ ಮೇಳದಲ್ಲಿ ತಜ್ಞ ವೈದ್ಯರಿಂದ ಸ್ತ್ರೀರೋಗ ಮತ್ತು ಪ್ರಸೂತಿ ಸೇವೆಗಳು, ಮಕ್ಕಳ ಸೇವೆಗಳು, ಕಣ್ಣು, ಕಿವಿ, ಮೂಗು, ಗಂಟಲು ತಪಾಸಣೆ, ಮಾನಸಿಕ ತಜ್ಞರ ಸೇವೆಗಳು ಹಾಗೂ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್ ನೋಂದಣಿ, ಕಫಸಂಗ್ರಹಣೆ, ಅಸಾಂಕ್ರಾಮಿಕ ರೋಗಗಳ ತಪಾಸಣೆ, ಐಸಿಟಿಸಿ ಸಮಾಲೋಚನೆ ಹಾಗೂ ಇತರೆ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅಲ್ಲದೇ ಜಿಲ್ಲೆಯಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳು-ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಉಪ ಕೇಂದ್ರಗಳು-ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ತಾಯಿ ಮತ್ತು ಮಕ್ಕಳ ಆರೋಗ್ಯ…

Read More

ಮಡಿಕೇರಿ ಸೆ.18 :  ಕೊಡವ ರೈಡರ್ಸ್ ಕ್ಲಬ್, ಅರಣ್ಯ ಮಹಾವಿದ್ಯಾಲಯ ಪೊನ್ನಂಪೇಟೆ ಹಾಗೂ ಬೆಂಗಳೂರಿನ ಇಂಚರ ಇನ್ಫೋಟೆಕ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹುದಿಕೇರಿ ಭದ್ರಕಾಳಿ ದೇವಸ್ಥಾನದ ಕಾಪುಕಾಡಿನಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ವಿವಿಧ ಬಗೆಯ ಕಾಡು ಹಣ್ಣುಗಳು ಸೇರಿದಂತೆ ಹತ್ತಾರು ಜಾತಿಯ ಕಾಡು ಮರದ ಗಿಡಗಳನ್ನು ನೆಡಲಾಯಿತು. ಈ ಸಂದರ್ಭ  ಕೊಡವ ರೈಡರ್ಸ್ ಕ್ಲಬ್ ಅಧ್ಯಕ್ಷ ಅಜ್ಜಿಕುಟ್ಟಿರ ಪೃಥ್ವಿ ಸುಬ್ಬಯ್ಯ ಹಾಗೂ ತಂಡ ಸೇರಿದಂತೆ, ಬೆಂಗಳೂರಿನ ಇಂಚರ ಇನ್ಫೋಟೆಕ್ ಸಂಸ್ಥೆಯ ಕೇಟೊಳೀರ ವಿನ್ಸಿ ದೇವಯ್ಯ ತಂಡ ಹಾಗೂ ಅರಣ್ಯ ಮಹಾವಿದ್ಯಾಲಯದ ಕೊಣೇರೀರ ನಾಣಯ್ಯ ಸೇರಿದಂತೆ ಪ್ರಮುಖರಾದ ಕೇಟೊಳೀರ ಶಮ್ಮಿ, ತೀತಿರ ಅಭಿಷೇಕ್ ಮುತ್ತಣ್ಣ, ಚಕ್ಕೇರ ಅನುಪಮಾ ತಮ್ಮಯ್ಯ, ಕುಪ್ಪಣಮಾಡ ದಿಲೀಪ್, ಅಜ್ಜಿಕುಟ್ಟಿರ ದೇವಯ್ಯ  ಮತ್ತಿತರರು ಪಾಲ್ಗೊಂಡಿದ್ದರು.  

Read More

ಕುಶಾಲನಗರ, ಸೆ.18 :  ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಇಕೋ ಕ್ಲಬ್ ವತಿಯಿಂದ ಗ್ರೋ ಗ್ರೀನ್ ಅಭಿಯಾನದಡಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಘಟಕ ಹಾಗೂ ವಿದ್ಯಾರ್ಥಿ ಸಂಘದ‌ ಆಶ್ರಯದಲ್ಲಿ ಏರ್ಪಡಿಸಿದ್ದ ಪರಿಸರ ಸ್ನೇಹಿ ಗಣೇಶೋತ್ಸವದಲ್ಲಿ ಪಿ.ಓ.ಪಿ. ಹಾಗೂ ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಳನ್ನು ಬಳಕೆ ಮಾಡಬೇಕು ಎಂದು ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿದರು. ಶಾಲಾ ಮುಖ್ಯೋಪಾಧ್ಯಾಯ ಬಿ.ಆರ್.ಸತ್ಯನಾರಾಯಣ ಮಾತನಾಡಿ, ನಾವು ಮಾಲಿನ್ಯ ರಹಿತ ಹಬ್ಬದ ಆಚರಣೆಗಳಿಗೆ ಒತ್ತು ನೀಡುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ರೂಪಾ ಮಹೇಶ್ ಮಾತನಾಡಿ, ವಿದ್ಯಾರ್ಥಿಗಳು ಜನರಲ್ಲಿ ಮಣ್ಣಿನ ಮೂರ್ತಿ ಬಳಕೆ ಕುರಿತು ಜಾಗೃತಿ ಮಾಡಿಸಬೇಕು ಎಂದರು. ಶಾಲೆಯ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಬಿ.ಪಿ.ಸವಿತಾ , ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಮಹತ್ವ ತಿಳಿಸಿದರು. ಶಿಕ್ಷಕರಾದ ಟಿ.ಬಿ.ಮಂಜುನಾಥ್, ದಿವ್ಯ, ಜಿ.ಶ್ರೀಹರ್ಷ, ಎಸ್.ಕೆ.ಶೈಲಾ, ಎಸ್ ಡಿ ಎಂ.ಸಿ.ಸದಸ್ಯರಾದ ಜಗದೀಶ್,…

Read More

ಕುಶಾಲನಗರ, ಸೆ.18: ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ವತಿಯಿಂದ “ಗ್ರೋ ಗ್ರೀನ್” ಅಭಿಯಾನದಡಿ ಕರ್ನಾಟಕ ರಾಜ್ಯ ವಿಜ್ಞಾನ ‌ಪರಿಷತ್ತು‌ ಜಿಲ್ಲಾ ಘಟಕದ ಆಶ್ರಯದಲ್ಲಿ  ಪರಿಸರ ಸ್ನೇಹಿ ಗಣೇಶೋತ್ಸವ‌  ನಡೆಯಿತು. “ನಮ್ಮ ನಡಿಗೆ ಹಸಿರೆಡೆಗೆ “ಮಣ್ಣಿನ ಗಣೇಶ ಬಳಸಿ- ಜಲಮಾಲಿನ್ಯ ತಡೆಯಿರಿ” ಕುರಿತು ನಡೆದ ಪರಿಸರ ಜಾಗೃತಿ ಆಂದೋಲನದಲ್ಲಿ ವಿದ್ಯಾರ್ಥಿಗಳು ತಾವು ಸ್ವತಃ  ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಪ್ರದರ್ಶಿಸಿ ಗಮನ ಸೆಳೆದರು. ಮಣ್ಣಿನ ಗಣೇಶ ಮೂರ್ತಿ ಬಳಕೆಯ ಮಹತ್ವ ಕುರಿತು ಮಾಹಿತಿ ನೀಡಿದ ಇಕೋ ಕ್ಲಬ್ ನ ಉಸ್ತುವಾರಿ ಶಿಕ್ಷಕಿ ಸಿ.ಎಂ.ಬಬಿತ ಮಾತನಾಡಿ, ರಾಸಾಯನಿಕ ಬಣ್ಣದ ಗಣೇಶ ಮೂರ್ತಿಗಳನ್ನು ತ್ಯಜಿಸಿ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶ ಮೂರ್ತಿಗಳನ್ನು ಬಳಕೆ ಮಾಡಬೇಕು ಎಂದರು. ಶಾಲಾ ಮುಖ್ಯೋಪಾಧ್ಯಾಯ ಎಚ್.ಎಂ.ವೆಂಕಟೇಶ್ ಮಾತನಾಡಿ, ನಾವು ಮಾಲಿನ್ಯ ರಹಿತ ಹಬ್ಬದ ಆಚರಣೆ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರು. ಶಿಕ್ಷಕರಾದ ಸಿಎಸ್ ಜಾನಕಿ, ಎಚ್. ಈ.ರಮೇಶ್,…

Read More

ಮಡಿಕೇರಿ ಸೆ.18 :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟ ಸಹಕಾರದಲ್ಲಿ   ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಜರುಗಿತು. ಮಹದೇವಪೇಟೆಯ ಚೌಡೇಶ್ವರಿ ದೇವಾಲಯ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವರ್ಣಿತ್ ನೇಗಿ, ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್ ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಡಿಕೇರಿ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಸೋಮವಾರಪೇಟೆ ತಾಲ್ಲೂಕು ವಿಶ್ವಕರ್ಮ ಸಮಾಜ ಸೇವಾ ಸಂಘದ ಯಶವಂತ್ ಆಚಾರ್ಯ, ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕ ಸುಬ್ರಮಣ್ಯ, ಮಡಿಕೇರಿ ದಸರಾ ಸಮಿತಿ ನೂತನ ಕಾರ್ಯಧ್ಯಕ್ಷ  ಪ್ರಕಾಶ್‌ ಆಚಾರ್ಯ, ಶಿಲ್ಪಿ, ಕಲಾಶ್ರೀ ಪ್ರಶಸ್ತಿ ವಿಜೇತರಾದ ಮಂಜುನಾಥ ಆಚಾರ್ಯ ಇತರರು ಇದ್ದರು.

Read More

ಮಡಿಕೇರಿ ಸೆ.17 : ತಿಂಗಕೊರ್ ಮೊಟ್ಟ್ ತಲಕಾವೇರಿ ಆದನೆಲ್ 33 ನೇ ತಿಂಗತ್’ರ ನಡ್’ಪು ಪಿಂಞ 3ನೇ ಕಾಲತ್’ರ ತಲಕಾವೇರಿ ಕ್ಷೇತ್ರ ಸ್ವಚ್ಛತಾ ಕಾರ್ಬಾರ್ ಇಂದ್ ನಡ್ ದತ್.

Read More