ಮಡಿಕೇರಿ ಆ.21 : ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬ ಆಚರಣಾ ಸಮಿತಿ ವತಿಯಿಂದ ‘ರೀಲ್ಸ್’ ಸ್ಪರ್ಧೆ ಆಯೋಜಿಸಿತ್ತು. ಸಾರ್ವಜನಿಕರಿಗಾಗಿ ಆಯೋಜಿಸಿದ್ದ ರೀಲ್ಸ್ ಸ್ಪರ್ಧೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಕಾರ್ಕಳದ ಸೌರಭ್ ಪ್ರಥಮ ಸ್ಥಾನ ಪಡೆದುಕೊಂಡರು. ಉಡುಪಿಯ ಸಚಿನ್ ದ್ವಿತೀಯ, ವೀರಾಜಪೇಟೆಯ ವಿಷ್ಣು ತೃತೀಯ ಸ್ಥಾನ ಗಳಿಸಿಕೊಂಡರು. ಮಂಗಳೂರಿನ ಶಶಾಂಕ್ ಶೆಟ್ಟಿಗಾರ್, ಭಾಗಮಂಡಲದ ದೇವಿಪ್ರಸಾದ್, ಕುಶಾನಗರದ ಜಯಪ್ರಸಾದ್, ಸುಂಟಿಕೊಪ್ಪದ ಪ್ರಶಾಂತ್, ಮಡಿಕೇರಿಯ ಸುಹೇಬ್ ಸಮಾಧಾನಕರ ಬಹುಮಾನ ಪಡೆದುಕೊಂಡರೆ, ಮಾಯಮುಡಿಯ ದಿಶಾ ದೇಚಮ್ಮ, ಗೋಣಿಕೊಪ್ಪದ ಲಾಸ್ಯ, ತಾನ್ಯ, ವೀರಾಜಪೇಟೆಯ ದಿಂಶಾ ದೇಚಮ್ಮ ವಿಶೇಷ ಬಹುಮಾನ ತನ್ನದಾಗಿಸಿಕೊಂಡರು. ಪತ್ರಕರ್ತರ ವಿಭಾಗದಲ್ಲಿ ವಿಶ್ವ ಕುಂಬೂರು ಬಹುಮಾನ ಪಡೆದುಕೊಂಡರು. ಐಮಂಡ ರೂಪೇಶ್ ನಾಣಯ್ಯ, ಬಲ್ಲಚಂಡ ಭಜನ್ ಬೋಪಣ್ಣ, ಹರ್ಷಿತ್ ತೀರ್ಪುಗಾರಿಕೆ ನೆರವೇರಿಸಿದರು. ಕಂಬೆಯoಡ ಪುಷ್ಪ ಹಾಗೂ ದೇವಯ್ಯ ಬಹುಮಾನ ಪ್ರಯೋಜಿಸಿದ್ದರು.
ಲೇಖಕ: admin
ವಿರಾಜಪೇಟೆ ಆ.21 : ಹೆಗ್ಗಳ ಗ್ರಾಮದ ಪಾಲ್ಟ್ ಮಕ್ಕಿ ನಾಗ ಬನದಲ್ಲಿ ನಾಗರ ಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅರ್ಚಕರಾದ ವೇಣುಗೋಪಾಲ್ ಭಟ್ ಮುಂಜಾನೆಯಿಂದಲೇ ಸಂಕಲ್ಪ, ಕ್ಷೀರಾಭಿಷೇಕ, ಸೀಯಾಳ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಂತರ ನೈವೇದ್ಯವನ್ನು ಸಮರ್ಪಿಸಿ ನಾಗತಂಬಿಲ ಸೇವೆಯನ್ನು ಮಾಡಿದರು. ಮಹಾ ಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ, ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ, ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಪಾಲ್ಗೊಂಡಿದ್ದರು.
ಮಡಿಕೇರಿ ಆ.21 : ವೀರ ಸೇನಾನಿಗಳಾದ ಫೀ.ಮಾ.ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಅವರುಗಳು ಈ ದೇಶಕ್ಕಾಗಿ ರಕ್ಷಣಾ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿರುವುದರಿಂದ ಇವರುಗಳ ಪ್ರತಿಮೆ ಸ್ಥಾಪನೆಯ ಸಂದರ್ಭ ಕೇಂದ್ರ ಸರ್ಕಾರದ ಸಹಭಾಗಿತ್ವ ಅಗತ್ಯವೆಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮುಖಂಡ ಬ್ರಿಜೇಶ್ ಕಾಳಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಸ್ ಡಿಕ್ಕಿಯಾಗಿ ವೀರ ಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಲು ಮಡಿಕೇರಿ ನಗರದ ಅವೈಜ್ಞಾನಿಕ ರಸ್ತೆ ಮತ್ತು ವೃತ್ತಗಳೇ ಕಾರಣವಾಗಿದೆ. ಈ ಘಟನೆ ನಡೆದಿರುವುದು ವಿಷಾದಕರ, ಅಪಘಾತದಿಂದ ಹಾನಿಗೊಳಗಾಗಿರುವ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಗೌರವಯುತವಾಗಿ ಪುನರ್ ಪ್ರತಿಷ್ಠಾಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಕೇಂದ್ರ ಸರ್ಕಾರದ ಸಹಭಾಗಿತ್ವವೂ ಇರಬೇಕು ಎಂದು ಆಗ್ರಹಿಸಿದ್ದಾರೆ. ದೇಶದ ರಕ್ಷಣೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ವೀರ ಸೇನಾನಿಗಳ ಪ್ರತಿಮೆ ಪ್ರತಿಷ್ಠಾಪಿಸುವ ವಿಚಾರದಲ್ಲಿ ಕೇಂದ್ರ ಪ್ರಮುಖ ಪಾತ್ರ ವಹಿಸಬೇಕು. ಆ ಮೂಲಕ ಅದು ಯೋಧರಿಗೆ ಗೌರವ ಅರ್ಪಿಸಬೇಕು. ಸ್ಥಳೀಯ ಆಡಳಿತ ಪ್ರತಿಮೆ…
ವಿರಾಜಪೇಟೆ ಆ.21 : ಬೇಟೋಳಿ ರಾಮನಗರದಲ್ಲಿರುವ ಪುದುಪಾಡಿ ಶ್ರೀ ಅಯ್ಯಪ್ಪ ದೇವಸ್ಥಾನದಲ್ಲಿರುವ ನಾಗ ದೇವರ ಗುಡಿಯಲ್ಲಿ ನಾಗರ ಪಂಚಮಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವಿಶ್ವನಾಥ್ ಭಟ್ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ಸಂಕಲ್ಪ, ಹಾಲು ಹಾಗೂ ಕ್ಷೀರಾಭಿಷೇಕ ಮಾಡಿ ದೇವರಿಗೆ ನೈವೇದ್ಯವನ್ನು ಸಮರ್ಪಿಸಿದರು. ವಿಶೇಷ ಸೇವೆಯಾದ ನಾಗ ತಂಬಿಲವನ್ನು ಮಾಡಿ ಮಹಾ ಮಂಗಳಾರತಿ ಬಳಿಕ ಪ್ರಸಾದ ವಿನಿಯೋಗ ಹಾಗೂ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು. ಈ ಸಂದರ್ಭ ಸಮೀಪದ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯವರು ಹಾಜರಿದ್ದರು.
ಸೋಮವಾರಪೇಟೆ, ಆ.21: ಸೋಮವಾರಪೇಟೆ ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಆರ್.ರತ್ನಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಏಳನೇ ಹೊಸಕೋಟೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಟಿ.ವಿ.ಶೈಲಾ ಆಯ್ಕೆಯಾಗಿದ್ದಾರೆ. ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಸಂಘದ ನೂತನ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಹೆಸರನ್ನು ಪ್ರಕಟಿಸಿದರು. ಸಂಘದ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಡಿ.ಪಿ.ಧರ್ಮಪ್ಪ ಮೈಸೂರು ಜಿಲ್ಲೆಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಯಿತು. ಶಿಕ್ಷಕ ಕೆ.ಆರ್.ರತ್ನಕುಮಾರ್, ಈ ಮೊದಲು ಸಂಘದ ಕಾರ್ಯದರ್ಶಿಯಾಗಿ ಹಾಗೂ ಶಿಕ್ಷಕಿ ಟಿ.ವಿ.ಶೈಲಾ ಸಂಘದ ಖಜಾಂಜಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಧಿಕಾರ ಹಸ್ತಾಂತರ ಮಾಡಿದ ಸಂಘದ ನಿಕಟ ಪೂರ್ವ ಅಧ್ಯಕ್ಷ ಡಿ.ಪಿ.ಧರ್ಮಪ್ಪ ಮಾತನಾಡಿ, ಸಂಘವು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಶಿಕ್ಷಕರ ಕ್ಷೇಮಾಭಿವೃದ್ಧಿಗೆ ಶ್ರಮಿಸುತ್ತಿದೆ. ಈ ತನಕ ತಾವು ಸಂಘದ ಏಳ್ಗೆಗೆ ಶ್ರಮಿಸಿದ್ದು, ಶಿಕ್ಷಕರ ಸಹಕಾರವನ್ನು ಸ್ಮರಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್ ಮಾತನಾಡಿ, ಈ ಸಂಘವು ಉತ್ತಮ ಚಟುವಟಿಕೆಗಳ ಮೂಲಕ…
ಕುಶಾಲನಗರ ಆ.21 : ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮದ ಮಸೀದಿ ಸಮೀಪ ಒಣಗಿದ ಮರವೊಂದು ಬೀಳುವ ಸ್ಥಿತಿಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಸಂಬಂಧಪಟ್ಟ ಅಧಿಕಾರಿಗಳು ಮರಗಳನ್ನು ತೆರವುಗೊಳಿಸಿ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಒಣಗಿ ನಿಂತ ಮರದ ಸಮೀಪದಲ್ಲಿಯೇ 4-5 ಮನೆಗಳಿದ್ದು, ಮರದ ಸಮೀಪವೇ ವಿದ್ಯುತ್ ತಂತಿಯೂ ಹಾದು ಹೋಗಿದೆ. ಈ ಮಾರ್ಗದಲ್ಲಿ ವಾಹನಗಳು ಸಂಚರಿಸುವಾಗ ಗಾಳಿ ಮಳೆಗೆ ಮರಗಳು ಮುರಿದು ಬಿದ್ದರೆ ಪ್ರಾಣಹಾನಿ ಸಂಭವಿಸುವ ಆತಂಕ ವ್ಯಕ್ತಪಡಿಸಿದ್ದಾರೆ. ಮರವನ್ನು ತೆರವು ಮಾಡುವಂತೆ ಈ ಹಿಂದೆಯೇ ವಲಯ ಅರಣ್ಯಧಿಕಾರಿಗೆ ಮನವಿ ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯರು ಮರ ತೆರವುಗೊಳಿಸಲು ಸಂಬಂಧಿಸಿದ ಇಲಾಖೆ ತಕ್ಷಣವೇ ಕಾರ್ಯೋನ್ಮುಖರಾಗಬೇಕು ಎಂದು ಆಗ್ರಹಿಸಿದರು.
ಮಡಿಕೇರಿ ಆ.21 : ಹಿಂದೂ ಜಾಗರಣಾ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣಗೆರೆ ಅವರ ಬಂಧನವನ್ನು ಖಂಡಿಸಿ ಹಿಂದೂ ಸಂಘಟನೆಗಳು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿದವು. ಮಡಿಕೇರಿ, ವೀರಾಜಪೇಟೆ, ಪೊನ್ನಂಪೇಟೆ ಹಾಗೂ ಸೋಮವಾರಪೇಟೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಹಿಂದೂ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಗೌರಿಬಿದನೂರು ಪೊಲೀಸರು ಕೋಮುದ್ವೇಷ ಭಾಷಣದ ಕಾರಣ ನೀಡಿ ಸತೀಶ್ ಅವರನ್ನು ಮಧ್ಯರಾತ್ರಿ ಕಾನೂನು ಬಾಹಿರವಾಗಿ ಬಂಧಿಸಿದ್ದಾರೆ. ಪೊಲೀಸರ ಈ ಕ್ರಮ ಖಂಡನೀಯವೆಂದು ಅಸಮಾಧಾನ ವ್ಯಕ್ತಪಡಿಸಿದರು. ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಸಂಚಾಲಕ ಕುಕ್ಕೇರ ಅಜಿತ್, ಪ್ರಮುಖರಾದ ಮಹೇಶ್ ಕಡಗದಾಳು, ವಿನಯ್, ಕವನ್ ಕಾವೇರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ, ನಗರಾಧ್ಯಕ್ಷ ಮನು ಮಂಜುನಾಥ್, ಉಪಾಧ್ಯಕ್ಷ ಜಗದೀಶ್, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್ ಮತ್ತಿತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ…
ಮಡಿಕೇರಿ ಆ.21 : ಬಸ್ ಡಿಕ್ಕಿಯಾಗಿ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಪರಿಶೀಲಿಸಿದರು. ಅಪಘಾತ ನಡೆದ ತಿಮ್ಮಯ್ಯ ವೃತ್ತಕ್ಕೆ ಭೇಟಿ ನೀಡಿದ ಅವರು ಪೊಲೀಸ್ ಅಧಿಕಾರಿಗಳಿಂದ ಘಟನೆಯ ಕುರಿತು ಮಾಹಿತಿ ಪಡೆದರು. ಎಲ್ಲಾ ರಸ್ತೆಗಳು ಸೇರುವ ಪ್ರದೇಶ ಕಿರಿದಾಗಿದ್ದು, ವೈಜ್ಞಾನಿಕ ರೂಪದಲ್ಲಿ ವೃತ್ತವನ್ನು ಅಭಿವೃದ್ಧಿಪಡಿಸಿ ವಾಹನಗಳ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಬೇಕೆಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಡಿಕೇರಿ ಆ.21 : ತಿತಿಮತಿ ಗ್ರಾ.ಪಂ ವ್ಯಾಪ್ತಿಯ ಬಂಬುಕಾಡು ಗಿರಿಜನರ ಹಾಡಿಗೆ ಹೋಗುವ ಕಿರು ಸೇತುವೆ ಮತ್ತು ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ನಾಪೋಕ್ಲು ಆ.21 : ಕಕ್ಕುಂದಕಾಡು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯಿಂದ ಶ್ರಾವಣ ಶನಿವಾರ ವಿಶೇಷ ಪೂಜೆ ನಡೆಯಿತು. ಪ್ರತಿವರ್ಷದಂತೆ ಶ್ರಾವಣ ಶನಿವಾರ ಪ್ರಯುಕ್ತ ದೇವಾಲಯದಲ್ಲಿ ಮುಂಜಾನೆಯಿಂದಲೇ ಅಭಿಷೇಕ, ವಿವಿಧ ಪೂಜಾ ಕೈಂಕರ್ಯಗಳು ಸೇವೆ, ಸಂಕಲ್ಪ ಪೂಜೆ ನೆರವೇರಿತು. ಮಧ್ಯಾಹ್ನ ವೆಂಕಟೇಶ್ವರನಿಗೆ ವಿಶೇಷ ಮಹಾಪೂಜೆ, ಮಹಾಮಂಗಳಾರತಿ ನಂತರ ನೆರೆದಿದ್ದ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆಯಿತು. ನಂತರ ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು. ದೇವಸ್ಥಾನದಲ್ಲಿ ಶ್ರಾವಣ ಶನಿವಾರ ಪೂಜಾ ಕಾರ್ಯಕ್ರಮಗಳು ಸೆಪ್ಟೆಂಬರ್ ಒಂಬತ್ತರವರೆಗೆ ನಡೆಯಲಿವೆ. ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ಮಂಜಯ್ಯ ಟಿ.ಎಸ್, ಕಾರ್ಯಾಧ್ಯಕ್ಷ ಟಿ.ಯನ್. ರಮೇಶ್, ಕಾರ್ಯದರ್ಶಿ ಟಿ.ಎ.ಸುಜಿಕುಮಾರ್ ಹಾಗೂ ಹಿರಿಯರಾದ ಟಿ.ವಿ.ಶ್ರೀನಿವಾಸ, ಟಿ.ಎ.ಆನಂದಸ್ವಾಮಿ, ಪಿ.ಎಂ.ರಾಮಯ್ , ಟಿ.ಆರ್. ಅಪ್ಪ ಸ್ವಾಮಿ, ಟಿ.ಕೆ. ಭವಾನಿ ಹಾಗೂ ಅಡಳಿತ ಮಂಡಳಿ ನಿರ್ದೇಶಕರು ಇತರರು ಹಾಜರಿದ್ದರು. ದೇವಾಲಯದ ಮುಖ್ಯ ಅರ್ಚಕ ಸುಧೀರ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನೆರವೇರಿತು. ವರದಿ : ದುಗ್ಗಳ ಸದಾನಂದ






