ನಾಪೋಕ್ಲು ಆ.21 : ನಾಲ್ಕು ನಾಡಿನಲ್ಲಿ ಆ.29 ರಂದು ಕೈಲ್ ಮುಹೂರ್ತ ಆಚರಣೆ ನಡೆಯಲಿದೆ ಎಂದು ಪಾಡಿ ಇಗ್ಗುತಪ್ಪ ದೇವಾಲಯದ ಅಮ್ಮಂಗೇರಿಯ ಜ್ಯೋತಿಷಿ ಶಶಿಕುಮಾರ್ ಮತ್ತು ನಾಣಯ್ಯ ತಿಳಿಸಿದ್ದಾರೆ. ಕೈಲು ಮೂರ್ತ ಹಬ್ಬದ ದಿನ ಜ್ಯೋತಿಷ್ಯ ಶಾಸ್ತ್ರದ ಮೂಲಕ ನಿಶ್ಚಯಿಸಿ ಮಂಗಳವಾರ ಸಂಜೆ 5.15ಕ್ಕೆ ಮಕರ ಲಗ್ನದಲ್ಲಿ ಆಯುಧಪೂಜೆ ನಡೆಸುವುದು ಸೂಕ್ತವೆಂದು ಎಂದು ಅವರು ಪ್ರಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ಲೇಖಕ: admin
ಮಡಿಕೇರಿ ಆ.21 : ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪ ಮಾಲ್ತಾರೆ ಮಟ್ಟಂ ಎಂಬಲ್ಲಿ ನಡೆದಿದೆ. ಐಶಾ(62) ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ. ಇಂದು ಬೆಳಗ್ಗೆ ಮನೆಯ ಸಮೀಪ ವಾಯು ವಿಹಾರ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸಬೇಕೆಂದು ಒತ್ತಾಯಿಸಿದ್ದಾರೆ.
ನಾಪೋಕ್ಲು ಆ.21 : ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಆ.27ರಂದು ಚೀನ್ಯಾರು ಹತ್ತರ ಅರಾಧನೆ ನಡೆಯಲಿದೆ. ಇದರೊಂದಿಗೆ ಕಕ್ಕಡಮಾಸದಲ್ಲಿ ವಿರಾಮಗೊಳಿಸಿದ್ದ ಪೂಜೆ, ಉತ್ಸವ,ತುಲಾಭಾರ ಸೇವೆಗಳು ಪುನರಾರಂಭಗೊಳ್ಳಲಿವೆ ಎಂದು ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ದೇವತಕ್ಕರಾದ ಪರದಂಡ ಕುಟುಂಬಸ್ಥರು ತಿಳಿಸಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಆ.21 : ಕೆಎಸ್ಆರ್ಟಿಸಿ ಬಸ್ ವೊಂದು ಡಿಕ್ಕಿ ಯಾದ ಪರಿಣಾಮ ಮಡಿಕೇರಿ ನಗರದ ಹೃದಯ ಭಾಗದಲ್ಲಿದ್ದ ಜನರಲ್ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ. ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಡಿಪೋದಿಂದ ಬಸ್ ನಿಲ್ದಾಣಕ್ಕೆ ಹೊರಟಿದ್ದ ಬಸ್ ಪಿಕಪ್ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಈ ಸಂದರ್ಭ ತಿಮ್ಮಯ್ಯ ಅವರ ಪ್ರತಿಮೆ ನೆಲಕ್ಕುರುಳಿದೆ. ಬಸ್ ಚಾಲಕ ಹಾಗೂ ನಿರ್ವಾಹಕ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ತಿಮ್ಮಯ್ಯ ಅವರ ಪ್ರತಿಮೆಯನ್ನು ತಿಮ್ಮಯ್ಯ ಸ್ಮಾರಕ ಭವನದ ಆವರಣಕ್ಕೆ ಸ್ಥಳಾಂತರಿಸಲಾಗಿದೆ. ಘಟನೆ ಕುರಿತು ವಿಷಾದ ವ್ಯಕ್ತಪಡಿಸಿರುವ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು, ವೀರ ಸೇನಾನಿ ತಿಮ್ಮಯ್ಯ ಅವರ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಲು ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮಡಿಕೇರಿ ಆ.20 : ಇತ್ತೀಚೆಗೆ ನಾಪೋಕ್ಲು ವ್ಯಾಪ್ತಿಯಲ್ಲಿ ಸಾಕು ನಾಯಿಯಿಂದ ದಾಳಿಗೆ ಒಳಗಾದ ಆರೋಗ್ಯ ಇಲಾಖೆ ಸಿಬ್ಬಂದಿ ಕೆ.ಕೆ.ಭವ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸುವ ಮೂಲಕ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಮಾನವೀಯತೆ ಮೆರೆದರು. ಇವರ ಸ್ಪಂದನೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಮಡಿಕೇರಿ ಆ.20 : ಸಾಮಾಜಿಕ ಪರಿವರ್ತಕ ಹಾಗೂ ಅಭಿವೃದ್ಧಿಯ ಹರಿಕಾರ ಡಿ.ದೇವರಾಜ ಅರಸು ಕಾಲದ ನಂತರ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ದಾಖಲೆಯ 135 ಸ್ಥಾನಗಳಲ್ಲಿ ಗೆಲವು ದಾಖಲಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು, ಅರಸರ ಹಾದಿಯಲ್ಲಿ ಈಗಿನ ಸರ್ಕಾರ ಸಾಗದಿದ್ದಲ್ಲಿ ಪರಿಣಾಮ ಕಷ್ಟವಾಗಬಹುದು ಎಂದು ಮಾಜಿ ಸಚಿವ ಎಂ.ಸಿ.ನಾಣಯ್ಯ ಹೇಳಿದ್ದಾರೆ. ಕೊಡಗು ಜಿಲ್ಲಾ ಅಹಿಂದ ಒಕ್ಕೂಟ ಹಾಗೂ ಸಹಮತ ವೇದಿಕೆ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ಡಿ.ದೇವರಾಜ ಅರಸರ 108ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. 1972 ರಲ್ಲಿ 216 ವಿಧಾನಸಭಾ ಕ್ಷೇತ್ರಗಳಲ್ಲಿ 165 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ದೇವರಾಜ ಅರಸು ಅವರು ಇತಿಹಾಸ ಸೃಷ್ಟಿಸಿದರು. ಇದೀಗ ಕರ್ನಾಟಕದಲ್ಲಿ ಎರಡನೇ ಇತಿಹಾಸ ಸೃಷ್ಟಿಯಾಗಿದ್ದು, ಕಾಂಗ್ರೆಸ್ ಪಕ್ಷ 135 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಪ್ರಧಾನಿ ನರೇಂದ್ರಮೋದಿ ಅವರು ರಾಜ್ಯದೆಲ್ಲೆಡೆ 26 ದಿನಗಳ ಕಾಲ ಪ್ರವಾಸ ಕೈಗೊಂಡು 36 ಸಭೆಗಳನ್ನು ನಡೆಸಿದರು. ಆದರೆ ಮೌನವಾಗಿಯೇ ಇದ್ದ ಮತದಾರ ಬದಲಾವಣೆಯನ್ನು ಬಯಸಿ ಕಾಂಗ್ರೆಸ್…
ಮಡಿಕೇರಿ ಆ.20 : ನಗರದ ಗಾಂಧಿ ಭವನದಲ್ಲಿ ಭಾನುವಾರ ಜಿಲ್ಲಾಡಳಿತ ವತಿಯಿಂದ ‘ಸದ್ಭಾವನಾ ದಿನಾಚರಣೆ’ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಪ್ರತಿಜ್ಞಾ ವಿಧಿಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಯತೀಶ್ ಉಲ್ಲಾಳ್ ಅವರು ಬೋಧಿಸಿದರು, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ ವೈಯಕ್ತಿಕವಾಗಿ ಅಥವಾ ಸಾಮೂಹಿಕವಾಗಿ ಆಗಲಿ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇವೆಂದು ಪ್ರತಿಜ್ಞೆ ಮಾಡುತ್ತೇವೆ ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು. ಜಿ.ಪಂ.ಸಿಇಒ ವರ್ಣಿತ್ ನೇಗಿ, ತಹಶೀಲ್ದಾರ್ ಪ್ರವೀಣ್ ಕುಮಾರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಬಾಲರಾಜ್ ರಂಗರಾವ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪುಟ್ಟರಾಜು, ಮದೆ ಮಹದೇಶ್ವರ ಪಿಯು ಕಾಲೇಜಿನ ಪ್ರಾಂಶುಪಾಲರಾದ ಸಿದ್ದರಾಜು ಬೆಳ್ಳಯ್ಯ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಮಡಿಕೇರಿ ಆ.20 : ಉಳುವವನೇ ಭೂಮಿಯ ಒಡೆಯ, ಶಾಲಾ-ಕಾಲೇಜು ಆರಂಭ, ವಿದ್ಯಾರ್ಥಿ ನಿಲಯಗಳ ಸ್ಥಾಪನೆ, ಜೀತಪದ್ಧತಿ ನಿರ್ಮೂಲನೆ ಹೀಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಮೂಲಕ ಬಡವರಿಗೆ ಡಿ.ದೇವರಾಜ ಅರಸು ಅವರು ಹತ್ತಿರವಾಗಿದ್ದರು ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಸ್ಮರಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಭಾನುವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108 ನೇ ಜನ್ಮ ದಿನಾಚರಣೆಯ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಗಳು ಹಾಗೂ ಇತರೆ ಸಣ್ಣ ಸಣ್ಣ ಸಮಾಜಗಳನ್ನು ಗುರ್ತಿಸಿ ಮೇಲೆತ್ತಲು ಶ್ರಮಿಸಿದ ಕೀರ್ತಿ ಡಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದರು. ‘ಡಿ.ದೇವರಾಜ ಅರಸು ಅವರು ಬಡವರ ಬಗ್ಗೆ ಸದಾ ಸಾಮಾಜಿಕ ಕಳಕಳಿ ಹೊಂದಿದ್ದರು, ರಾಜ್ಯದಲ್ಲಿ ಉತ್ತಮ ಆಡಳಿತ ನೀಡಿದರು. ದೇವರಾಜ ಅರಸು ಅವರಂತೆ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ ಧ್ವನಿಯಾಗಿ,…
ಮಡಿಕೇರಿ ಆ.20 : ಜನಪರವಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಗ್ರಾಮ ಗ್ರಾಮಗಳಿಗೆ ತಲುಪಿಸುವ ಮೂಲಕ ಕಾರ್ಯಕರ್ತರು ಜನರ ಭಾವನೆಗಳಿಗೆ ಸ್ಪಂದಿಸಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ಸುಂಟಿಕೊಪ್ಪದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಕೃತಜ್ಞತೆ ಸಮರ್ಪಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಕ್ಷದ ಗೆಲುವಿಗಾಗಿ ಶ್ರಮಿಸಿದಂತೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲೂ ಕಾರ್ಯಪ್ರವೃತ್ತರಾಗಬೇಕು ಎಂದರು. ಗೃಹಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ, ಅನ್ನಭಾಗ್ಯ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಪಂಚಾಯಿತಿ ಹಾಗೂ ಆಯಾ ಇಲಾಖೆಗಳ ಮೂಲಕ ಸಹಕರಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಡಿ ಪ್ರತಿಯೊಬ್ಬ ಕಾರ್ಯಕರ್ತನು ಜನಪರವಾಗಿ ತೊಡಗಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಸೌಲಭ್ಯ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್ ಮಾತನಾಡಿ ಸ್ಥಳೀಯ…
ಮಡಿಕೇರಿ ಅ 20 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದಿ. ಬಿ.ಎಸ್ ಗೋಪಾಲಕೃಷ್ಣ ಅವರ ಹೆಸರಿನಲ್ಲಿ ಸ್ಥಾಪಿತವಾಗಿರುವ ದತ್ತಿ ಕಾರ್ಯಕ್ರಮದಂತೆ ಕೊಡಗು ಜಿಲ್ಲಾ ಮಟ್ಟದ ಮುಕ್ತ ಕಥಾ ಸ್ಪರ್ಧೆಯನ್ನು ಏರ್ಪಡಿಸಿದೆ. ಜಿಲ್ಲೆಯ ಹಿರಿಯ ಸಾಹಿತಿಗಳು ಪತ್ರಕರ್ತರು ಶಕ್ತಿ ದಿನ ಪತ್ರಿಕೆಯ ಸಂಸ್ಥಾಪಕರು ಆಗಿದ್ದ ಬಿ.ಎಸ್ ಗೋಪಾಲಕೃಷ್ಣ ಅವರ ನೆನಪಿನಲ್ಲಿ ಅವರ ಪುತ್ರ ಬಿ.ಜಿ ಅನಂತಶಯನ ಈ ದತ್ತಿ ಸ್ಥಾಪಿಸಿದ್ದು, ಕೊಡಗು ಜಿಲ್ಲೆಯ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ ಕಥೆಯನ್ನು ಎ4 ಅಳತೆಯ ಹಾಳೆಯಲ್ಲಿ 2 ಪುಟ ಮೀರದಂತೆ ರಚಿಸತಕ್ಕದ್ದು. ಕಥೆ ಬರೆದು ಸಲ್ಲಿಸಲು ದಿನಾಂಕ.28.08.2023 ಕೊನೆಯ ದಿನವಾಗಿದ್ದು, ಕಳುಹಿಸಬೇಕಾದ ವಿಳಾಸ : *ಅಧ್ಯಕ್ಷರು,* *ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು*, *ಎಸ್.ಜಿ.ಆರ್.ವೈ ಕಟ್ಟಡ,* *ಅಂಬೇಡ್ಕರ್ ಭವನದ ಬಳಿ,* *ಸುದರ್ಶನ ವೃತ್ತ,* *ಮಡಿಕೇರಿ.* ಸಂಪರ್ಕಿಸಲು ದೂರವಾಣಿ ಸಂಖ್ಯೆ: ಎಂ.ಪಿ.ಕೇಶವ ಕಾಮತ್, ಅಧ್ಯಕ್ಷರು. 94483 46276 ಎಸ್.ಐ. ಮುನೀರ್ ಅಹಮದ್, ಗೌರವ ಕಾರ್ಯದರ್ಶಿ. 98861…






