ಲೇಖಕ: admin

ಮಡಿಕೇರಿ ಸೆ.16 : ಮೈಸೂರಿನ ಕಲಾ ಮಂದಿರದಲ್ಲಿ ಸೆ.26 ರಂದು ನಡೆಯಲಿರುವ ವಿಶ್ವ ಕಿವುಡರ ದಿನಾಚರಣೆಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ, ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್ ಅಧೀಕ್ಷಕರು ಸೇರಿದಂತೆ ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಸುಮಾರು 25 ಜಿಲ್ಲಾ ಕಿವುಡರ ಸಂಘದ 600ಕ್ಕೂ ಹೆಚ್ಚು ಮಂದಿ ಪ್ರಥಮ ಬಾರಿಗೆ ಪಾಲ್ಗೊಳ್ಳಲಿದ್ದಾರೆ ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

Read More

ಮಡಿಕೇರಿ ಸೆ.16 : ವೃತ್ತಿಪರ ಶಿಕ್ಷಣ(ಪ್ರೊಪೆಸನಲ್ ಕೋರ್ಸ್) 2023-24 ನೇ ಸಾಲಿನಲ್ಲಿ ಮೊದಲನೇ ವರ್ಷದಲ್ಲಿ ಓದುತ್ತಿರುವ ಮಾಜಿ ಸೈನಿಕರ ಮಕ್ಕಳಿಗೆ(ಸೈನ್ಯಾಧಿಕಾರಿಗಳ ಮಕ್ಕಳನ್ನು ಹೊರತುಪಡಿಸಿ) ಕೇಂದ್ರಿಯ ಸೈನಿಕ ಮಂಡಳಿಯಿಂದ ಪ್ರಧಾನಮಂತ್ರಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿಯನ್ನು WWW.KSB.GOV.IN  ನಲ್ಲಿ ಸಲ್ಲಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.  

Read More

ಮಡಿಕೇರಿ ಸೆ.16 : ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ ಸ್ವಚ್ಛ ಹಾಗೂ ಸುಂದರ ಪರಿಸರವನ್ನು ನಿರ್ಮಿಸಲು ಎಲ್ಲರೂ ಕೈ ಜೋಡಿಸುವಂತೆ ಕೊಡಗು ಜಿಲ್ಲಾ ಪಂಚಾಯತ್ ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿಯಲ್ಲಿ ಕೊಡಗು ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ನಡೆದ ‘ಸ್ವಚ್ಛತಾ ಹೀ ಸೇವಾ ಆಂದೋಲನದ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಸ್ವೀಕರಿಸಿ ಮಾತನಾಡಿದರು. ಕೊಡಗು ಜಿಲ್ಲೆಯು ಪ್ರಾಕೃತಿಕ ಸೌಂದರ್ಯಕ್ಕೆ ಹೆಸರಾಗಿದ್ದು, ಇದರ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರವು 15 ದಿನಗಳ ಕಾಲ ದೇಶಾದ್ಯಂತ ಸ್ವಚ್ಛತೆ ಕುರಿತು ಸ್ವಚ್ಛತೆಯೇ ಸೇವೆ ಎಂಬ ಹೆಸರಿನಲ್ಲಿ ಸ್ವಚ್ಛತಾ ಆಂದೋಲನ ಜರುಗುತ್ತಿದೆ ಎಂದು ತಿಳಿಸಿದರು. ಇದರೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಶಾಲೆ, ಕಾಲೇಜು, ಅಂಗನವಾಡಿ ಸರ್ಕಾರಿ ಕಚೇರಿಗಳಲ್ಲಿ ಶ್ರಮದಾನ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಸಹ ಆಯೋಜಿಸಲಾಗಿದೆ. ಅಕ್ರಮವಾಗಿ ತ್ಯಾಜ ಸುರಿವ ಸ್ಥಳಗಳನ್ನು ಗುರುತಿಸಿ ಸ್ವಚ್ಛಗೊಳಿಸುವುದು.…

Read More

ಮಡಿಕೇರಿ ಸೆ.16 : ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಹಾಗೂ ಸೋಮವಾರಪೇಟೆ ತಾಲ್ಲೂಕು ದೊಡ್ಡಮಳ್ತೆ ಗ್ರಾಮದ ಸ್ವರ್ಣಗೌರಿ ಹೊನ್ನಮ್ಮ ಟ್ರಸ್ಟ್ ವತಿಯಿಂದ ಇತಿಹಾಸ ಪ್ರಸಿದ್ದ ಶ್ರೀಕ್ಷೇತ್ರ ಹೊನ್ನಮ್ಮನ ಕೆರೆಗೆ ಶ್ರೀಸ್ವರ್ಣಗೌರಿ ಮಹೋತ್ಸವದ ಅಂಗವಾಗಿ ಶ್ರೀ ಹೊನ್ನಮ್ಮ ತಾಯಿಗೆ ಬಾಗಿನ ಅರ್ಪಣೆ ಕಾರ್ಯಕ್ರಮವು ಸೆ.18 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ. ದೇವಾಲಯ ಸಮಿತಿಯ ಅಧ್ಯಕ್ಷ ಡಿ.ಬಿ.ವೀರೇಶ, ಉಪಾಧ್ಯಕ್ಷ ಡಿ.ಎಂ.ಪ್ರಸನ್ನ, ಕಾರ್ಯದರ್ಶಿ ಎಂ.ಜೆ.ಕಿರಣ್ ಕುಮಾರ್, ಸದಸ್ಯರಾದ ಎಂ.ಬಿ.ವಸಂತಕುಮಾರ, ಕೆ.ಕೆ.ರವಿ, ಡಿ.ಬಿ.ಮಧು, ಡಿ.ಯು.ಹರ್ಷಿತ್, ಡಿ.ಬಿ.ಶಶಿಧರ, ಡಿ.ಕೆ.ಲೋಕೇಶ್, ಡಿ.ಕೆ.ಶಾಂತಪ್ಪ, ಡಿ.ಎಚ್.ರತನ್, ಎಂ.ಎಲ್.ಆಕಾಶ್, ಡಿ.ಬಿ.ರಾಜು, ಕೆ.ಬಿ.ಪುಷ್ಪಾಧರ, ಪ್ರಧಾನ ಅರ್ಚಕರಾದ ವೀರಯ್ಯ ಹಿರೇಮಠ್, ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಸೆ.16 : ಪ್ರಸಕ್ತ(2023-24) ಸಾಲಿನ ಪ್ರಥಮ ಡಿಇಎಲ್‍ಇಡಿ ಕೋರ್ಸ್ ಗೆ ಸರ್ಕಾರಿ ಕೋಟಾದಡಿ ದಾಖಲಾಗಲು ಸೆ.27 ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಸಂಬಂಧವಾಗಿ ಆಸಕ್ತಿ ಹೊಂದಿದ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾದ ಹಾಗೂ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು(ಸಾಮಾನ್ಯ ಅಭ್ಯರ್ಥಿಗಳು ಶೇ.50 ಹಾಗೂ ಪ.ಜಾತಿ, ಪ.ಪಂಗಡ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶೇ.45 ಅಂಕ ಪಡೆದಿರಬೇಕು). ಇತರೆ ಸೂಚನೆಗಳನ್ನು ವೆಬ್‍ಸೈಟ್ www.schooeducation.kar.nic.in ನಲ್ಲಿ ಮಾಹಿತಿಯನ್ನು ಕಡ್ಡಾಯವಾಗಿ ಓದಿಕೊಂಡು ಅರ್ಜಿಯನ್ನು ಕ್ರಮವಾಗಿ ಭರ್ತಿ ಮಾಡುವುದು. ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗೆ ಸಲ್ಲಿಸುವುದು. ಅರ್ಜಿಯನ್ನು ಸೆ.27 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಬ್ಯಾಂಕ್‍ನಲ್ಲಿ ಡಿ.ಡಿ. ಮೂಲಕ ಪಾವತಿಸಲು ಸೆಪ್ಟೆಂಬರ್, 27 ಕೊನೆಯ ದಿನ(ಸಾಮಾನ್ಯ ಅಭ್ಯರ್ಥಿಗೆ ಅರ್ಜಿ ಶುಲ್ಕ ರೂ.150, ದಾಖಲಾತಿ ಶುಲ್ಕ ರೂ.3065, ಒಟ್ಟು ರೂ.3,215, ಪ.ಜಾತಿ ಹಾಗೂ ಪ.ಪಂ.ರೂ.50), ಹೆಚ್ಚಿನ ಮಾಹಿತಿಗೆ ಡಯಟ್ ಕೂಡಿಗೆ ದೂ.ಸಂ.08276-278287, 9448813576, 8139956802 ನ್ನು…

Read More

ವಿರಾಜಪೇಟೆ  ಸೆ.16 :  ಐತಿಹಾಸಿಕ ಗೌರಿ ಗಣೇಶ ಹಬ್ಬವೂ ಎಂದಿನಂತೆ  ಹಳೆ ವೈಭವದೊಂದಿಗೆ ನಡೆಯಲಿದೆ ಎಂದು ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ಸಮಿತಿ ಕಾರ್ಯಾಧ್ಯಕ್ಷ ಶಬರೀಶ್ ಶೆಟ್ಟಿ ತಿಳಿಸಿದರು. ನಗರದ ಪುರಭವನದಲ್ಲಿ  ವಿರಾಜಪೇಟೆ ನಗರ ಐತಿಹಾಸಿಕ ಜನೋತ್ಸವ ವಿವಿಧ ಸಮಿತಿಗಳಿಗೆ ಗಣಪತಿ ಕೂರಿಸಲು ಏಕಗವಾಕ್ಷಿಯ ಮೂಲಕ ಅನುಮತಿ ನೀಡುವ ಸಲುವಾಗಿ ಕರೆಯಲಾಗಿದ್ದ ಸಭೆ ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ಗೊಂದಲಗಳು ಬೇಡ ಈಗಾಗಲೇ ಶಾಸಕರು ಮೂಲಭೂತ ಸೌಲಭ್ಯಗಳಿಗೆ ಸಂಬಂಧಿಸಿದಂತೆ ಹಬ್ಬದ ಸಂದರ್ಭಕ್ಕೆ ಆಗಬೇಕಾದ ವ್ಯವಸ್ಥೆಗಳಿಗೆ ಬೇಕಾದ ಸಿದ್ಧತೆಗಳಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಉಳಿದಂತೆ ಜನೋತ್ಸವ ಸಮಿತಿ ವತಿಯಿಂದಲೂ ಹಬ್ಬದ ರಂಗು ಹೆಚ್ಚಿಸಲು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಶಿವರುದ್ರ ಮಾತನಾಡಿ, ಡಿಜೆ ಬಳಕೆ ಮಾಡದಂತೆ ಇರುವ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಮಾಹಿತಿ ನೀಡಿದರು. ರಾತ್ರಿ ಹತ್ತರ ಬಳಿಕ ಧ್ವನಿವರ್ಧಕ ಬಳಕೆ ಮಾಡಬಾರದು ಎಂದು ಸೂಚನೆ ನೀಡಿದರು. ಪುರಸಭೆ ಸದಸ್ಯೆ ದೇಚಮ್ಮ ಕಾಳಪ್ಪ ಉತ್ಸವದ ಕೊನೆಯ ದಿನ…

Read More

ಮಡಿಕೇರಿ ಸೆ.16 :  ಬ್ರೈನೋಬ್ರೈನ್ ಇಂಟರ್‌ನ್ಯಾಷನಲ್ ದುಬೈ ವತಿಯಿಂದ ಇತ್ತೀಚೆಗೆ ಚೆನ್ನೈನ “ಚೆನ್ನೈ ಟ್ರೇಡ್ ಸೆಂಟರ್” ಸಭಾಂಗಣದಲ್ಲಿ ನಡೆದ 42ನೇ ರಾಷ್ಟ್ರಮಟ್ಟದ ಬ್ರೈನೋಬ್ರೈನ್ ಸ್ಪರ್ಧೆ- 2023’ರಲ್ಲಿ ಮಾಪಂಗಡ ಕವಿತಾ ಕರುಂಬಯ್ಯ ಅವರ ನೇತೃತ್ವದ ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಕೇಂದ್ರದ 42 ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಕೇವಲ 3 ನಿಮಿಷಗಳಲ್ಲಿ ವಿವಿಧ ರೀತಿಯ ಲೆಕ್ಕಗಳನ್ನು ಅತಿ ಚುರುಕಾಗಿ ಮಾಡುವ ಮೂಲಕ ಅತ್ಯುತ್ತಮ ಸಾಧನೆ ಮೆರೆದು 34 ಚಾಂಪಿಯನ್ ಟ್ರೋಫಿ, 5 ಚಿನ್ನದ ಪದಕ ಮತ್ತು 3 ಬೆಳ್ಳಿಯ ಪದಕ ಗೆದ್ದುಕೊಂಡರು. ::: ಚಾಂಪಿಯನ್ ಟ್ರೋಫಿ ವಿಜೇತರು ::: ಅದಿತ್ ಗೌತಮ್ ಕೆ, ಅಫ್ಫಾನ್ ಅಹಮದ್ ಟಿ.ಬಿ, ಅಹಾನ್ ಬರ್ನ್ವಾಲ್, ಆಲ್ಫಾ ಎ.ಆರ್, ಅಲುಫ್ ಎ.ಆರ್, ಅನೇಶನ್ ಪಿ, ಅಪೇಕ್ಷಾ ಆರ್.ರೈ, ಭುವನ್ ತಿಮ್ಮಯ್ಯ ಎಂ, ಜಾರ್ಜ್ ಮ್ಯಾಥ್ಯೂ, ಕಿಶಿ ಕಾವೇರಮ್ಮ ಎ.ಎಲ್, ಕೋಸಿಗಿ ಸಮರ್ಥ್ ಸಾಮ್ರಾಟ್, ಕೋಸಿಗಿ ಸಾತ್ವಿಕ್ ಸಾಮ್ರಾಟ್, ಕೃಷ್ಣ ಪ್ರಿಯಾ ಪಿ.ಕೆ, ಲಾಲಿತ್ಯ…

Read More

ಮಡಿಕೇರಿ ಸೆ.16 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾಗೂ ಕೊಡಗು ಜಿಲ್ಲಾ ವಿಶ್ವಕರ್ಮ ಒಕ್ಕೂಟ ಸಹಕಾರದಲ್ಲಿ ಸೆಪ್ಟೆಂಬರ್, 17 ರಂದು ಮಧ್ಯಾಹ್ನ 3 ಗಂಟೆಗೆ ಮಹದೇವಪೇಟೆಯ ಚೌಡೇಶ್ವರಿ ದೇವಾಲಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ ಸೆ.16 : ನಗರದ ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್, 19 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ಮತ್ತು ಪ್ರಸಾದ ವಿತರಣೆ, ರಾತ್ರಿ 8 ಗಂಟೆಗೆ ಮಹಾಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.16 : ಅಂಚೆ ಅದಾಲತ್‍ನ ಮುಂದಿನ ಸಭೆಯು ಸೆ.25 ರಂದು ಬೆಳಗ್ಗೆ 11 ಗಂಟೆಗೆ ಕೊಡಗು ಅಂಚೆ ವಿಭಾಗದ, ವಿಭಾಗೀಯ ಕಚೇರಿ, ಸಿದ್ದಾಪುರ ರಸ್ತೆಯ ಅಶೋಕಪುರದಲ್ಲಿ ನಡೆಯಲಿದೆ. ಸಭೆಯಲ್ಲಿ ಕೊಡಗು ಅಂಚೆ ವಿಭಾಗದ ಅಂಚೆ ಸೇವೆಗೆ ಸಂಬಂಧಿಸಿದ ಎಲ್ಲಾ ತರಹದ ದೂರುಗಳನ್ನು ಸ್ವೀಕರಿಸಿ ಚರ್ಚಿಸಲಾಗುತ್ತದೆ. ದೂರುಗಳಿದ್ದಲ್ಲಿ ‘ಅಂಚೆ ಅದಾಲತ್’ ಎಂದು ಬರೆದು ಅಂಚೆ ಅಧೀಕ್ಷಕರು, ಕೊಡಗು ಅಂಚೆ ವಿಭಾಗ, ಮಡಿಕೇರಿ ಇವರಿಗೆ ಸೆಪ್ಟೆಂಬರ್, 22 ರೊಳಗೆ ತಲುಪುವಂತೆ ಕಳುಹಿಸುವಂತೆ ಕೋರಿದೆ. ನಂತರ ಸೆಪ್ಟೆಂಬರ್, 25 ರಂದು ನಡೆಯುವ ಸಭೆಯಲ್ಲಿ ಭಾಗವಹಿಸಬಹುದು ಎಂದು ಕೊಡಗು ಅಂಚೆ ವಿಭಾಗದ ಅಂಚೆ ಅಧಿಕ್ಷಕರು ತಿಳಿಸಿದ್ದಾರೆ.

Read More