ಮಡಿಕೇರಿ ಸೆ.16 : ಪ್ರಸಕ್ತ (2023-24) ಸಾಲಿಗೆ ಕೊಡಗು ಜಿಲ್ಲೆಯ ಅಲ್ಪಸಂಖ್ಯಾತರ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಪಾರ್ಸಿ, ಸಿಖ್ ಸಮುದಾಯದಿಂದ ಎಂ.ಫಿಲ್/ಪಿ.ಹೆಚ್.ಡಿ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಅನುದಾನ ನೀಡಲು ಸೇವಾಸಿಂಧು ಪೋರ್ಟಲ್ನ ಆನ್ಲೈನ್ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ. ಕಾಲೇಜು ಹತ್ತಿರ, ಮಡಿಕೇರಿ, ಇವರನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್, 3 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272–225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ತಿಳಿಸಿದ್ದಾರೆ.
ಲೇಖಕ: admin
ಮಡಿಕೇರಿ ಸೆ.16 : ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಶನಿವಾರಸಂತೆ ಪೊಲೀಸ್ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳೆ ಗ್ರಾಮ ನಿವಾಸಿ ಚಂದನ್ (28)ಎಂಬಾತನೇ ಬಂಧಿತ ಆರೋಪಿ. ಸೆ.14 ರಂದು ನಿಡ್ತ ಗ್ರಾಮ ನಿವಾಸಿ ಎನ್.ಪಿ.ಶಿವರಾಜ್ ಶನಿವಾರಸಂತೆ ಪಟ್ಟಣದ ಮಹಿಳಾ ಸಮಾಜದ ಮುಂಭಾಗದಲ್ಲಿ ನಿಲ್ಲಿಸಿದ್ದ ಕಾರನ್ನು ಕಳ್ಳತನ ಮಾಡಿರುವ ಬಗ್ಗೆ ದೂರು ನೀಡಲಾಗಿತ್ತು. ಸೋಮವಾಪೇಟೆ ಉಪವಿಭಾಗ ಡಿಎಸ್ಪಿ ಆರ್ .ವಿ.ಗಂಗಾಧರಪ್ಪ, ಶನಿವಾರಸಂತೆ ಪೊಲೀಸ್ ಠಾಣೆ ಪಿಐ ಮಂಜುನಾಥ್ ಹಾಗೂ ಸಿಬ್ಬಂದಿಗಳ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಆರೋಪಿ ಸಹಿತ ಕಾರನ್ನು ವಶಕ್ಕೆ ಪಡೆದುಕೊಂಡಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಸಿಬ್ಬಂದಿಗಳನ್ನು ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.
ನಾಪೋಕ್ಲು ಸೆ.17 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ಏರ್ಪಡಿಸಲಾಗಿದ್ದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಗೈಡ್ಸ್ ವಿಭಾಗದಲ್ಲಿ ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದ್ದಾರೆ. ವಿದ್ಯಾರ್ಥಿಗಳಾದ ಯುಕ್ತ ಪೊನ್ನಮ್ಮ,ಆಫಿಯ,ಆಶ್ರಿಯ,ಸಜಾ ಫಾತಿಮ, ಶರಣ್ಯ, ದುಂದುಭಿ, ಅಹನಿ ಶಾರದಾ, ಶಾಸ್ತಾ ಪೊನ್ನಮ್ಮ ಗೈಡ್ ಕ್ಯಾಪ್ಟನ್ ಕಾಳೆಯಂಡ ಅಮಿತ ನೇತೃತ್ವದಲ್ಲಿ ಪಾಲ್ಗೊಂಡಿದ್ದರು. ಮುಖ್ಯ ಶಿಕ್ಷಕ ತಮ್ಮಯ್ಯ,ಸ್ಥಾಪಕ ಅಧ್ಯಕ್ಷ ಕುಟ್ಟಂಚೆಟ್ಟೀರ ಮಾದಪ್ಪ ಇದ್ದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.16 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಳೀಯ ಸಂಸ್ಥೆ ಸಂಪಾಜೆ ವತಿಯಿಂದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸಂಪಾಜೆ ಸ್ಥಳೀಯ ಸಂಸ್ಥೆಗೊಳಪಟ್ಟ ಒಂಭತ್ತು ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ಪರ್ಧಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ.ದೊಡ್ಡೇಗೌಡ ಉದ್ಘಾಟಿಸಿದರು. ಈ ಸಂದರ್ಭ ನಾಪೋಕ್ಲು ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್ , ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಅಧ್ಯಕ್ಷ ಧನಂಜಯ ಎಂ ,ಸಂಸ್ಥೆಯ ಎಡಿಸಿ ಹ್ಯಾರಿಸ್ ಕೆ.ಎ, ಅಂಕುರ್ ಪಬ್ಲಿಕ್ ಶಾಲೆಯ ಕಾರ್ಯದರ್ಶಿ ರತ್ನ ಚರ್ಮಣ, ಕೆಪಿಎಸ್ ಉಪ ಪ್ರಾಂಶುಪಾಲರಾದ ಎಂ.ಎಸ್ ಶಿವಣ್ಣ,ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಉಷಾರಾಣಿ, ಖಜಾಂಜಿ ಗಂಗಮ್ಮ, ರಂಜಿತ್ , ಶಿಕ್ಷಣ ಸಂಯೋಜಕ ಹರೀಶ್ ಇನ್ನಿತರರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಸಂಸ್ಥೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಬಿ.ಸಿ ದೊಡ್ಡೇಗೌಡ ಅವರನ್ನು ಕಿರು ಕಾಣಿಕೆ…
ವಿರಾಜಪೇಟೆ ಸೆ.16 : ವಿರಾಜಪೇಟೆ ಕಾವೇರಿ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ “ನನ್ನ ಮಣ್ಣು ನನ್ನ ದೇಶ ” ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಆವರಣದಲ್ಲಿ ವನಮಹೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಕಾರ್ಲ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಸಿ.ಎಂ.ಸೋಮಣ್ಣ, ಬಿ.ಯು. ಅಂಬಿಕಾ, ನೇಚರ್ ಕ್ಲಬ್ ಸದಸ್ಯರಾದ ಅನುಪಮ ಸಿ.ಪಿ., ಹೆಚ್ ವಿ. ನಾಗರಾಜು ಇದ್ದರು.
ಮಡಿಕೇರಿ ಸೆ.16 : ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಭಾರತೀಯ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿಯನ್ನು ಬೋಧಿಸಲಾಯಿತು. ಒಂದು ಸಾವಿರದ ಐದುನೂರಕ್ಕೂ ಅಧಿಕ ವಿದ್ಯಾರ್ಥಿಗಳು ಏಕಕಾಲದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಒಟ್ಟಾಗಿ ಓದಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಸಂವಿಧಾನದ ಪೀಠಿಕೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.
ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ತೀರ್ಥಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪಾದಯಾತ್ರೆಯನ್ನು ಆರಂಭಿಸಿತು. ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕೊಡವ ಲ್ಯಾಂಡ್ ಪರ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಂಡಿತು. ತಲಕಾವೇರಿ (ತಾವುನಾಡ್), ದೇವಟ್ ಪರಂಬ್ (ದೇಶ ಮಂದ್), ಮಚ್ಚುರೋಡೆ ಮಂದ್ (ಬಲ್ಲತ್ ನಾಡ್) ಮತ್ತು ಬೇಂಗ್ ನಾಡ್ ಮಂದ್ (ಚೇರಂಬಾಣೆ) ಯಲ್ಲಿ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಪಾದಯಾತ್ರೆಯ ಉದ್ದೇಶದ ಕುರಿತು ಮಾತನಾಡಿದರು. ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಬೇಡಿಕೆ ಈಡೇರುವವರೆಗೆ ಸಂವಿಧಾನದ ಚೌಕಟ್ಟಿನಡಿ ಸಿಎನ್ಸಿ…
ಮಡಿಕೇರಿ ಸೆ.15 : ಸಾರ್ವಜನಿಕರನ್ನು ಸತಾಯಿಸದೆ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಎಂ.ಎಸ್.ಪವನ್ ಕುಮಾರ್ ಅವರು ಹೇಳಿದ್ದಾರೆ. ನಗರದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಶುಕ್ರವಾರ ದೂರು ಅರ್ಜಿ ಸ್ವೀಕರಿಸಿ ಅವರು ಮಾತನಾಡಿದರು. ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಆಗಮಿಸಿದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು. ಸಾರ್ವಜನಿಕರನ್ನು ಕುಳಿತು ಮಾತನಾಡಿಸಬೇಕು. ತಮ್ಮ ಹಂತದಲ್ಲಿ ಕೆಲಸ ಆದಲ್ಲಿ ಕಾಲ ಮಿತಿಯಲ್ಲಿ ಮಾಡಿಕೊಡಬೇಕು. ಕೆಲಸ ಆಗದಿದ್ದಲ್ಲಿ ಹಿಂಬರಹವನ್ನಾದರೂ ನೀಡಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಅವರು ಸಲಹೆ ಮಾಡಿದರು. ಸರ್ಕಾರಿ ಕಚೇರಿಗಳಲ್ಲಿ ಮಾಜಿ ಸೈನಿಕರು ಹಾಗೂ ವೃದ್ಧರಿಗೆ ಪ್ರಥಮ ಆದ್ಯತೆ ನೀಡಿ ಕೆಲಸ ಮಾಡಬೇಕು. ಮಹಿಳೆಯರು ಹಾಗೂ ಇತರರಿಗೆ ಹಲವು ದಾಖಲಾತಿ, ಪ್ರಮಾಣ ಪತ್ರಗಳಿಗೆ ಕಚೇರಿಗೆ ಆಗಮಿಸಿದಾಗ ನಿಯಮಾನುಸಾರ ಕೆಲಸ ಮಾಡಿಕೊಡಬೇಕು ಎಂದರು. ಪ್ರತೀ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಗುರುತಿನ ಚೀಟಿಯನ್ನು ಹೊಂದಿರಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಪವನ್ ಕುಮಾರ್ ಅವರು ನಿರ್ದೇಶನ…
ಮಡಿಕೇರಿ ಸೆ.15 : ಇಡೀ ವಿಶ್ವದಲ್ಲಿಯೇ ಮಾದರಿ ಸಂವಿಧಾನವನ್ನು ಹೊಂದಿರುವ ಭಾರತವು ಏಕತೆ ಮತ್ತು ಭ್ರಾತೃತ್ವವನ್ನು ಸಾರಿದೆ. ಸಮಾನತೆ, ಸಾರ್ವಭೌಮ, ಸಮಾಜವಾದಿ, ಜಾತ್ಯಾತೀತ ಹಾಗೂ ಪ್ರಜಾಸತ್ತಾತ್ಮಕ ಗಣರಾಜ್ಯವನ್ನು ಹೊಂದಿದೆ ಎಂದು ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಶುಕ್ರವಾರ ನಡೆದ ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಂವಿಧಾನ ಪೀಠಿಕೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು ಒಳಗೊಂಡಿದ್ದು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವತಂತ್ರವನ್ನು ಸಂವಿಧಾನದ ಪೀಠಿಕೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದರು. ಭಾರತೀಯ ಪ್ರಜೆಗಳಾದ ಎಲ್ಲರಿಗೂ ಸಮಾನ ಸ್ಥಾನಮಾನ ಮತ್ತು ಅವಕಾಶಗಳು ದೊರೆಯುವಂತೆ ಮಾಡುವುದು ಸಂವಿಧಾನದ ಆಶಯವಾಗಿದೆ. ವ್ಯಕ್ತಿ ಗೌರವ, ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲಿ ಭ್ರಾತೃತ್ವ ಭಾವನೆಯನ್ನು ಮೂಡಿಸುವುದಕ್ಕೆ ದೃಢಸಂಕಲ್ಪ ಮಾಡಬೇಕಿದೆ ಎಂದು ಅನಿತಾ ಪೂವಯ್ಯ ಅವರು ವಿವರಿಸಿದರು. ಭಾರತ…
ಮಡಿಕೇರಿ ಸೆ.15 : ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡದೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವುದು ಅಸಾಧ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 40ನೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷ ಗುರುತಿಸಬೇಕು. ಪ್ರತಿ ಹಂತದಲ್ಲಿ ಕಾರ್ಯಕರ್ತೆಯರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಹಿಳೆಯರು ರಾಜಕೀಯವಾಗಿ ಸಬಲರಾಗಬೇಕು, ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಕನಸು ನನಸಾಗಿಸಬೇಕು. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮಹಿಳೆಯರ ಮೇಲೆ…






