ಮಡಿಕೇರಿ ಸೆ.15 : ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡದೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವುದು ಅಸಾಧ್ಯ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಪಿ.ಚಂದ್ರಕಲಾ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ 40ನೇ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪಕ್ಷ ಗುರುತಿಸಬೇಕು. ಪ್ರತಿ ಹಂತದಲ್ಲಿ ಕಾರ್ಯಕರ್ತೆಯರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯ ಅಬ್ರಾರ್, ಮಹಿಳೆಯರು ರಾಜಕೀಯವಾಗಿ ಸಬಲರಾಗಬೇಕು, ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿಯವರ ಕನಸು ನನಸಾಗಿಸಬೇಕು. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮಹಿಳೆಯರ ಮೇಲೆ…
ಲೇಖಕ: admin
ಮಡಿಕೇರಿ ಸೆ.15 : “ಪೊಮ್ಮಾಲೆ ಕೊಡಗ್” ಕೊಡವ ಸಿನಿಮಾದ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರಿಗೆ “ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ” ಲಭಿಸಿದೆ. ಅ.8 ರಂದು ಮಹಾರಾಷ್ಟ್ರದ ಔರಂಗಬಾದ್ ಶಿಲೋಡಿನಲ್ಲಿ ನಡೆಯುವ ಐಡಿಯಲ್ ಅಂತರ ರಾಷ್ಟ್ರೀಯ ಸಿನಿಮೋತ್ಸವದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಕಾಶ್ ಕಾರ್ಯಪ್ಪ ಅವರು ಪ್ರಶಸ್ತಿ ಪಡೆಯಲಿದ್ದಾರೆ. 2022ರಲ್ಲಿ ಸ್ವಸ್ತಿಕ್ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಕೊಟ್ಟುಕತ್ತೀರ ಯಶೋಧ ಪ್ರಕಾಶ್ ನಿರ್ಮಾಣದಲ್ಲಿ ಹಲವು ಯಶಸ್ವಿ ಕೊಡವ ಮತ್ತು ಕನ್ನಡ ಸಿನಿಮಾಗಳು ತೆರೆಗೆ ಬಂದಿವೆ. ಅಂತರರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಪಡೆದು ಖ್ಯಾತಿ ಗಳಿಸಿರುವ ನಿರ್ದೇಶಕ ಕೊಟ್ಟುಕತ್ತೀರ ಪ್ರಕಾಶ್ ಕಾರ್ಯಪ್ಪ ಅವರು “ಪೊಮ್ಮಾಲೆ ಕೊಡಗ್” ಕೊಡವ ಚಿತ್ರವನ್ನು ನಿರ್ದೇಶಿಸಿ ಹೆಸರು ಗಳಿಸಿದ್ದಾರೆ. ಗೋವಾ ಅಂತರರಾಷ್ಟ್ರೀಯ ಸಿನಿಮೋತ್ಸವದ ಎನ್ಎಫ್ಡಿಸಿ ಫಿಲಂ ಬಜಾರ್ ನಲ್ಲಿ ಪ್ರಥಮ ಬಾರಿಕಗೆ ಪ್ರದರ್ಶನ ಕಂಡ ಮೊದಲ ಕೊಡವ ಸಿನಿಮಾ ಎಂಬ ಹೆಗ್ಗಳಿಕೆಗೆ ಈ ಚಿತ್ರ ಪಾತ್ರವಾಗಿದೆ. ಅಲ್ಲದೇ ಕೊಲ್ಕತ್ತ ಅಂತರಾಷ್ಟ್ರೀಯ ಫಿಲಂ ಫೆಸ್ಟಿವಲ್ನಲ್ಲಿ ಏಷ್ಯನ್ ವಿಭಾಗದ ಸ್ಪರ್ಧೆಗೆ ಆಯ್ಕೆಯಾದ ಮೊದಲ ಕೊಡವ…
ಮಡಿಕೇರಿ ಸೆ.15 : ನಾಪೋಕ್ಲು ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಅಸ್ಸಾಂ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ನಾಪೋಕ್ಲುವಿನಲ್ಲಿ ವಾಸವಿರುವ ಅಸ್ಸಾಂ ಮೂಲದ ದಿಲ್ಷಾನ್ ಬೇಗಂ(44) ಬಂಧಿತ ಆರೋಪಿಯಾಗಿದ್ದು, ಆಕೆಯ ಬಳಿಯಿದ್ದ 2 ಕೆ.ಜಿ. 260 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಷೇಧಿತ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಹಿನ್ನೆಲೆ ಪೊಲೀಸರು ದಾಳಿ ನಡೆಸಿದರು. ಸೋಮವಾರಪೇಟೆ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ ಮಾರ್ಗದರ್ಶನದಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.15 : ಪಿಎಂ ಸ್ವನಿಧಿ ಯೋಜನೆಯ ರಾಜ್ಯ ಸಂಚಾಲಕ ಎ.ರಾಮದಾಸ್ ಅವರನ್ನು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘ ಸನ್ಮಾನಿಸಿ ಗೌರವಿಸಿತು. ಪತ್ರಿಕಾ ವಿತರಕರನ್ನು ಪಿಎಂ ಸ್ವನಿಧಿ ಯೋಜನೆ ವ್ಯಾಪ್ತಿಗೆ ಸೇರಿಸಲು ಸಹಕರಿಸಿದ ಹಿನ್ನೆಲೆ ಸಂಘದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದರು. ರಾಮದಾಸ್ ಅವರನ್ನು ಮೈಸೂರಿನಲ್ಲಿ ಭೇಟಿಯಾದ ಸಂದರ್ಭ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದರೆಮೋತಿ, ಕೊಡಗು ಜಿಲ್ಲಾಧ್ಯಕ್ಷ ಟಿ.ಜಿ.ಸತೀಶ್, ನಿರ್ದೇಶಕ ಕೆ.ಎನ್.ಶಿವಪ್ರಸಾದ್, ವಿವಿಧ ಜಿಲ್ಲೆಗಳ ಪದಾಧಿಕಾರಿಗಳಾದ ಕೃಷ್ಣ ಬೆಂಗಳೂರು, ಸತೀಶ್ ಶಿವಮೊಗ್ಗ, ಕೃಷ್ಣ ದಾವಣಗೆರೆ, ಸಂತೋಷ್ ಹಾಸನ, ಸುನಿಲ್ ಹಾಸನ ಮತ್ತಿತರರು ಹಾಜರಿದ್ದರು. ಪಿಎಂ ಸ್ವನಿಧಿ ಯೋಜನೆ ವ್ಯಾಪ್ತಿಗೆ ಪತ್ರಿಕಾ ವಿತರಕರನ್ನು ಸೇರ್ಪಡೆ ಮಾಡಿದ್ದು, ಈ ವರ್ಗದವರು ಸೇರಿದಂತೆ ಬೀದಿ ಬದಿ ವ್ಯಾಪಾರಿಗಳು ಒಳಗೊಂಡ ಅಸಂಘಟಿತ ಕ್ಷೇತ್ರದಲ್ಲಿರುವವರಿಗೆ ಕಿರು ಸಾಲಸೌಲಭ್ಯ ಕಲ್ಪಿಸಲು ಸೆ.16ರಿಂದ ಅ.15ರ ವರೆಗೆ ಮಾಸಾಚರಣೆ ಕೈಗೊಳ್ಳಲಾಗಿದೆ ಎಂದು ಟಿ.ಜಿ.ಸತೀಶ್ ತಿಳಿಸಿದರು. ಪಿಎಂ ಸ್ವನಿಧಿ ಹಾಗೂ ಸ್ವನಿಧಿ ಸೇ ಸಮೃದ್ಧಿ ಯೋಜನೆಗಳಡಿ ಎಲ್ಲಾ ಎಂಟು ಸಾಮಾಜಿಕ ಭದ್ರತಾ ಯೋಜನೆಗಳನ್ನು…
ಮಡಿಕೇರಿ ಸೆ.15 : ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಮತ್ತು ಎನ್.ಎಸ್.ಎಸ್ ವಿಭಾಗದಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಒಟ್ಟಾಗಿ ಸಂವಿಧಾನದ ಪ್ರಸ್ತಾವನೆ/ಪೀಠಿಕೆಯನ್ನು ಓದುವ ಮೂಲಕ ನಮ್ಮ ಜೀವನದಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿ ಹಿಡಿಯುತ್ತೇವೆಂದು ಪ್ರತಿಜ್ಞೆ ಮಾಡಿದರು. ಈ ಸಂದರ್ಭ ಮಾತನಾಡಿದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಆರ್.ದಿವ್ಯ, 1997ರ ಸೆ.15ರಂದು ಇಂಟರ್ ಪಾರ್ಲಿಮಂಟರಿ ಯೂನಿಯನ್ (IPU) ಪ್ರಜಾಪ್ರಭುತ್ವದ ಸಾರ್ವತ್ರಿಕ ಘೋಷಣೆಯನ್ನು (Universal Declaration on Democracy) ಅಂಗೀಕರಿಸಿದ ಸವಿನೆನಪಿಗಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2007 ನವೆಂಬರ್ 8 ರಂದು ನಿರ್ಣಯವನ್ನು ಅಂಗೀಕರಿಸಿ ಇನ್ನು ಮುಂದೆ ಪ್ರತೀ ವರ್ಷ ಸೆ.15ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾಗಿ ಆಚರಿಸುವ ನಿರ್ಣಯ ಕೈಗೊಂಡರು. ಅದರಂತೆ 2008ರಿಂದ ಸೆಪ್ಟೆಂಬರ್ 15ನ್ನು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾಗಿ ಆಚರಿಸುತ್ತಾ ಬಂದಿದ್ದು, ಈ ವರ್ಷದ ಘೋಷವಾಕ್ಯ “Empowering the Next Generation” ಎಂಬುದಾಗಿದೆ ಎಂದು ತಿಳಿಸಿದರು. ಈ ಹಿನ್ನೆಲೆಯಲ್ಲಿ ನಮ್ಮ…
ಮಡಿಕೇರಿ ಸೆ.15 : ಶೂ ಒಳಗೆ ಸೇರಿಕೊಂಡಿದ್ದ ನಾಗರಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಡುವಲ್ಲಿ ಉರಗ ರಕ್ಷಕ ಸ್ನೇಕ್ ಸುರೇಶ್ ಪೂಜಾರಿ ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಗ್ರಾಮದ ಶಾಲಿ ಎಂಬುವವರು ಮನೆಯ ಹೊರ ಭಾಗದಲ್ಲಿ ಇಟ್ಟಿದ್ದ ಶೂ ಒಳಗೆ ಹಾವು ಸೇರಿಕೊಂಡಿತ್ತು. ಇಂದು ಬೆಳಗ್ಗೆ ಕೆಲಸಕ್ಕೆಂದು ತೆರಳಲು ಶೂ ತೆಗೆದಾಗ ಹಾವು ಇರುವುದು ಕಂಡು ಬಂತು. ಆತಂಕಗೊಂಡ ಶಾಲಿ ಅವರು ತಕ್ಷಣ ಸ್ನೇಕ್ ಸುರೇಶ್ ಪೂಜಾರಿ ಅವರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಸುರೇಶ್ ಹಾವನ್ನು ಸೆರೆ ಹಿಡಿದು ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟರು. ಮನೆಯ ಹೊರ ಭಾಗದಲ್ಲಿರುವ ಪಾದರಕ್ಷೆ ಮತ್ತಿತರ ವಸ್ತುಗಳನ್ನು ಬಳಸುವಾಗ ಎಚ್ಚರಿಕೆಯಿಂದ ಸೂಕ್ಷ್ಮವಾಗಿ ಗಮನಿಸಬೇಕು. ಹಾವುಗಳು ಕಂಡು ಬಂದಲ್ಲಿ ಕೊಲ್ಲದೆ ಉರಗ ರಕ್ಷಕರಿಗೆ ಮಾಹಿತಿ ನೀಡಬೇಕು ಎಂದು ಸುರೇಶ್ ಮನವಿ ಮಾಡಿದ್ದಾರೆ.
ಮಡಿಕೇರಿ ಸೆ.15 : ಭಾಗಮಂಡಲ ಸಮೀಪದ ಅಯ್ಯಂಗೇರಿ ಗ್ರಾಮದ ಉದಿಯನ ಕಾಳಪ್ಪ ಹಾಗೂ ದಮಯಂತಿ ಅವರ ಪುತ್ರ, ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯು.ಕೆ.ಜಿತನ್ (33) ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಬೆoಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ಮೃತಪಟ್ಟರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಭಾರತೀಯ ಸೇನೆಯಲ್ಲಿ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಜಿತನ್ ಎರಡು ವರ್ಷಗಳ ಹಿಂದೆಯಷ್ಟೇ ವಿವಾಹವಾಗಿದ್ದರು. ಪ್ರಸ್ತುತ ಎಂಇಜಿ ಸೆಂಟರ್ ನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸೆ.16 ರಂದು ಅಂತ್ಯಕ್ರಿಯೆ ನಡೆಯಲಿದೆ. ಮೃತರು ಪತ್ನಿ ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ.
ಬೆಂಗಳೂರು ಸೆ.15 : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ನಂತರ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದರು. ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು. We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ…
ಮಡಿಕೇರಿ ಸೆ.15 : ಗೌರಿ ಗಣೇಶೋತ್ಸವದ ಪ್ರಯುಕ್ತ ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಸಾಮೂಹಿಕ ಗಣಪತಿ ಹೋಮ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಹಾಗೂ ತಕ್ಕಮುಖ್ಯಸ್ಥರು ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಸುಗುಣ ಮುತ್ತಣ್ಣ, ವರ್ಷಂಪ್ರತಿ ನಡೆಯುವಂತೆ ಈ ಬಾರಿಯೂ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಸೆ.19ರಂದು ಚೌತಿ ಪೂಜೆ ನಡೆಯಲಿದ್ದು, ಊರಿನವರು ಮಾತ್ರವಲ್ಲದೆ ಸಾರ್ವಜನಿಕರು ಸಾಮೂಹಿಕ ಗಣಪತಿ ಹೋಮದಲ್ಲಿ ಪಾಲ್ಗೊಂಡು ಪೂಜೆ ಮಾಡಿಸಬಹುದಾಗಿದೆ ಎಂದರು. ಅಂದು ಬೆಳಿಗ್ಗೆ 7.30 ಗಂಟೆಗೆ ಗಣಪತಿ ಹೋಮ ಆರಂಭವಾಗಲಿದ್ದು, ಪ್ರಸಾದ ವಿನಿಯೋಗದ ಬಳಿಕ ಬೆಳಗಿನ ಉಪಹಾರ ಇರುತ್ತದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಪೂಜೆ ಮಾಡಿಸುವವರು ಒಂದು ದಿನ ಮುಂಚಿತವಾಗಿ ಪೂಜಾ ಸಾಮಾಗ್ರಿಗಳನ್ನು ನೀಡುವ ಮೂಲಕ ಪೂಜೆಯ ಬಗ್ಗೆ ಮಾಹಿತಿ ನೀಡಬೇಕಿದೆ. ಹೆಚ್ಚಿನ ಮಾಹಿತಿಗೆ 9845308910 ಅಥವಾ 9483815430 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಮಡಿಕೇರಿ ಸೆ.15 : ಕೊಡವ ಕೂಟಾಳಿಯಡ ಕೂಟದ ವತಿಯಿಂದ ಪೊನ್ನಂಪೇಟೆ ತಾಲೂಕು ಕಾಕೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಮೆಡಿಕಲ್ ಕಿಟ್ ಹಾಗೂ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಕೂಟದ ಅಧ್ಯಕ್ಷ ಚಂಗುಲಂಡ ಸೂರಜ್, ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ಇನ್ನಿತರ ಕಾರಣಗಳಿಂದ ಮಕ್ಕಳ ಸಂಖ್ಯೆ ಕಡಿಮೆಯಾಗಿದೆ, ನಮ್ಮ ಕೂಟದ ವತಿಯಿಂದ ಶಾಲೆಯ ಕುಂದು ಕೊರತೆಗಳ ಬಗ್ಗೆ ಶಾಸಕರ ಗಮನಕ್ಕೆ ತರಲಾಗುವುದೆಂದು ತಿಳಿಸಿದರು. ಸಂಘಟನೆಯ ನಿರ್ದೇಶಕ ಬೊಜ್ಜಂಗಡ ಚಂಗಪ್ಪ ಮಾತನಾಡಿ, ಇತ್ತೀಚೆಗೆ ತಮ್ಮ ಊರಿನ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಯ ಬಡಮಕ್ಕಳಿಗೆ ನೋಟ್ ಬುಕ್ ಹಾಗೂ ಮತ್ತಿತರ ಶಾಲಾ ಸಾಮಾಗ್ರಿಗಳ ಕೊರತೆಯ ಬಗ್ಗೆ ಮುಖ್ಯೋಪಾಧ್ಯಾಯರು ತಿಳಿಸಿದ್ದು, ಸ್ವಯಂ ಪ್ರೇರಿತರಾಗಿ ಮೆಡಿಕಲ್ ಕಿಟ್ ಹಾಗೂ ನೋಟು ಬುಕ್ ಗಳನ್ನು ನೀಡಿರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಮೆಡಿಕಲ್ ಕಿಟ್, ನೋಟ್ ಬುಕ್ ಹಾಗೂ ಇತರ ಸಾಮಾಗ್ರಿಗಳನ್ನು ಶಾಲಾ ಶಿಕ್ಷಕ ವೃಂದದವರಿಗೆ ಹಸ್ತಾಂತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ …






