ಮಡಿಕೇರಿ ಸೆ.15 : ಗೌರಿ ಹಾಗೂ ಗಣೇಶ ಹಬ್ಬ ಪ್ರಯುಕ್ತ, ಗೌರಿ ಹಾಗೂ ಗಣೇಶ ವಿಗ್ರಹಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಮೊದಲು ಉತ್ಸವ ಆಯೋಜಕರು ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ಸ್ಥಳ, ಪೆಂಡಾಲ್, ವಿದ್ಯುತ್ ಸಂಪರ್ಕ ಇನ್ನು ಮುಂತಾದ ವ್ಯವಸ್ಥೆಗಳನ್ನು ಮಾಡಿಕೊಳ್ಳುವ ಮುನ್ನ ಸಂಬಂಧಪಟ್ಟ ಇಲಾಖೆಗಳಿಂದ ಅನುಮತಿ ಪಡೆದು ಕಾರ್ಯಕ್ರಮ ಆಯೋಜಿಸುವಂತೆ ಪೌರಾಯುಕ್ತ ವಿಜಯ ಕೋರಿದ್ದಾರೆ. ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್, ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹಗಳನ್ನು ಬಳಸುವುದು. ಇಲ್ಲವಾದಲ್ಲಿ ರೂ.10 ಸಾವಿರ ವರೆವಿಗೂ ದಂಡ ವಿಧಿಸಲಾಗುವುದು. ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರತಿಷ್ಠಾಪಿಸಿ ಕಾರ್ಯಕ್ರಮಗಳನ್ನು ಆಯೋಜಿಸುವುದು. ನಗರಸಭೆ ವತಿಯಿಂದ ಗಣಪತಿ ವಿಗ್ರಹಗಳ ವಿಸರ್ಜನೆಗೆ ಓಂಕಾರೇಶ್ವರ ದೇವಸ್ಥಾನದ ಬಳಿ ಇರುವ ಗೌರಿ ಕೆರೆಯನ್ನು ಗುರುತಿಸಿ, ಅವಶ್ಯ ವ್ಯವಸ್ಥೆಗಳನ್ನು ಮಾಡಿದ್ದು, ಸದರಿ ಸ್ಥಳದಲ್ಲೆ ವಿಗ್ರಹಗಳನ್ನು, ಹೂವು ಹಣ್ಣುಗಳನ್ನು…
ಲೇಖಕ: admin
ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ತೀರ್ಥ ಕ್ಷೇತ್ರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಪಾದಯಾತ್ರೆಯನ್ನು ಆರಂಭಿಸಿತು. ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಪ್ರಾರ್ಥನೆ ಸಲ್ಲಿಸಿದರು. ನಂತರ ಕೊಡವ ಲ್ಯಾಂಡ್ ಪರ ಘೋಷಣೆಯೊಂದಿಗೆ ಪಾದಯಾತ್ರೆ ಆರಂಭಗೊಂಡಿತು.
ಮಡಿಕೇರಿ ಸೆ.15 : ಕಾನೂನು ಮಾಪನ ಶಾಸ್ತ್ರ ನೀರಿಕ್ಷಕರು ಮಡಿಕೇರಿ ಕಚೇರಿ ವತಿಯಿಂದ ತಾತ್ಕಾಲಿಕ ಶಿಬಿರವು ಸೆ.14 ರಿಂದ ಸೆ.21 ರವರೆಗೆ ವಿರಾಜಪೇಟೆಯ ಫೆಡರೇಷನ್ ಮಿಲ್ ಆವರಣದಲ್ಲಿ ನಡೆಯಲಿದೆ. ವಿರಾಜಪೇಟೆ ನಗರ ಮತ್ತು ಸುತ್ತಮುತ್ತಲಿನ ವರ್ತಕರು ಮತ್ತು ತೂಕ ಅಳತೆ ಉಪಯೋಗದಾರರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮಲ್ಲಿರುವ ತೂಕ ಅಳತೆ ಸಾಧನೆಗಳಿಗೆ ಸತ್ಯಾಪನೆ ಮುದ್ರೆ ಮಾಡಿಸಿಕೊಳ್ಳಬೇಕೆಂದು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಮಡಿಕೇರಿ ಉಪ ವಿಭಾಗ ನಿರೀಕ್ಷಕರಾದ ಡಿ.ಆರ್ ಲಿಂಗರಾಜು ತಿಳಿಸಿದ್ದಾರೆ.
ಮಡಿಕೇರಿ ಸೆ.15 : ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ರೂಢಿ ಸಂಪ್ರದಾಯದಂತೆ “ಗಣೇಶ ಚತುರ್ಥಿ” ಹಬ್ಬವನ್ನು ಆಚರಿಸಿಕೊಂಡು ಬರುತ್ತಿರುವ ಹಿನ್ನಲೆಯಲ್ಲಿ ಈ ವರ್ಷವೂ ಸೆ.19 ರಂದು “ಗಣೇಶ ಚತುರ್ಥಿ” ಹಬ್ಬವನ್ನು ನಡೆಸಲಾಗುತ್ತಿದೆ. ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸೆ.19 ರಂದು ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ, ಪ್ರಸಾದ ವಿತರಣೆ ಮತ್ತು ಅನ್ನ ಸಂತರ್ಪಣೆ ನಡೆಯಲಿದೆ. ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9.30 ಗಂಟೆಗೆ ಗಣಪತಿ ಹೋಮ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ, ಮಹಾಮಂಗಳಾರತಿ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಕಾಧಿಕಾರಿ ತಿಳಿಸಿದ್ದಾರೆ.
ಸಿದ್ದಾಪುರ ಸೆ.15 : ರಾಜ್ಯ ದಲ್ಲಿ ನೂತನ ಶಿಕ್ಷಣ ನೀತಿಗೆ ಸಮಿತಿ ರಚಿಸುವಂತೆ ಅಖಿಲ ಭಾರತ ವಿದ್ಯಾರ್ಥಿ ಫೆಡರೇಶನ್ ನ ರಾಜ್ಯಾಧ್ಯಕ್ಷೆ ವೀಣಾ ನಾಯ್ಕ್ ಒತಾಯಿಸಿದ್ದಾರೆ. ಪತ್ರಿಕಾ ಪ್ರಕಟನೆ ನೀಡಿದ ಅವರು, ಬಹುತ್ವಕ್ಕೆ ಒತ್ತು ನೀಡುವ ಅವೈಜ್ಞಾನಿಕ ಶಿಕ್ಷಣ ನೀತಿಯನ್ನು ರದ್ದುಗೊಳಿಸಿದ ರಾಜ್ಯ ಸರ್ಕಾರದ ಕ್ರಮಕ್ಕೆ ಸ್ವಾಗತ ವ್ಯಕ್ತಪಡಿಸಿದ ಅವರು ಶಿಕ್ಷಣ ತಜ್ಞರು ಹಾಗೂ ವಿದ್ಯಾರ್ಥಿ ಸಂಘಟನೆಯನ್ನು ಒಳಗೊಂಡಂತೆ ಸಮಿತಿ ರಚನೆ ಮಾಡುವಂತೆ ಸರ್ಕಾರ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು. ಶಿಕ್ಷಣವು ಸಮವರ್ತಿ ಪಟ್ಟಿಗೆ ಒಳಪಡುವುದರಿಂದ ಸಂವಿಧಾನಾತ್ಮಕ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಮುಂದಾಗ ಬೇಕಿದೆ ಎಂದರು. ಪ್ರಸ್ತುತ ವಿದ್ಯಾರ್ಥಿಗಳಿಗೆ ಮೌಢ್ಯ, ಕಂದಾಚಾರಗಳನ್ನ ಒಗಲಾಡಿಸುವ ವೈಜ್ಞಾನಿಕ ಶಿಕ್ಷಣ ನೀತಿ ಜಾರಿಯಾಗ ಬೇಕಿದೆ ಎಂದರು. ದತ್ತು ನಿರ್ಧಾರಕ್ಕೆ ವಿರೋಧ:- ಸರಕಾರಿ ಶಾಲೆ ಮತ್ತು ಕಾಲೇಜುಗಳನ್ನು ಸಬಲೀಕರಣಗೊಳಿಸುವ ಹಿನ್ನೆಲೆಯಲ್ಲಿ ಖಾಸಾಗಿಯವರಿಗೆ ದತ್ತು ನೀಡುವ ಸರಕಾರದ ನಿರ್ಧಾರವನ್ನು ಶ್ರವಣ ಬೆಳಗೊಳದಲ್ಲಿ ನಡೆದ ಎ.ಐ.ಎಸ್.ಎಫ್ 16ನೇ ರಾಜ್ಯ ಸಮ್ಮೇಳನದಲ್ಲಿ ಬಲವಾಗಿ ವಿರೋಧಿಸಿದ್ದು, ಸರ್ಕಾರಿ ಶಾಲೆ ಕಾಲೇಜುಗಳ ಬಲವರ್ಧನೆ…
ಮಡಿಕೇರಿ ಸೆ.15 : ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಗೋಣಿಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸಾಗ್ಯ ಗ್ರಾಮ ನಿವಾಸಿ ಎಂ.ಮಲ್ಲೇಶ(24) ಎಂಬಾತನೇ ಬಂಧಿತ ಆರೋಪಿ. ಈತನ ಬಳಿಯಿಂದ 28 ಗ್ರಾಂ. ಚಿನ್ನಾಭರಣ, 1 ಬೆಳ್ಳಿ ಚೈನ್ ಸಹಿತ ಒಟ್ಟು 1.39 ಲಕ್ಷ ರೂ. ಮೌಲ್ಯದ ಸ್ವತ್ತನ್ನು ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಮಾಯಮುಡಿ ಗ್ರಾಮದ ರಾಜಕಾಲೋನಿ ನಿವಾಸಿ ಎನ್.ಮಂಜುನಾಥ್ ಅವರು ಇದೇ ಜೂನ್ 17ರಂದು ಬೆಳಗೆ 9 ಗಂಟೆಗೆ ಮನೆಗೆ ಬೀಗ ಹಾಕಿ ಅದರ ಕೀ ಯನ್ನು ಹಿತ್ತಲಿನಲ್ಲಿರುವ ಹೂ ಕುಂಡದಲ್ಲಿಟ್ಟು ಕೆಲಸಕ್ಕೆ ತೆರಳಿದ್ದರು. ಸಂಜೆ ಮನೆಗೆ ಬಂದು ನೋಡಿದಾಗ ಮಲಗುವ ಕೋಣೆಯ ಗಾದ್ರೇಜ್ನಲ್ಲಿಟ್ಟಿದ್ದ 1.35 ಲಕ್ಷ ರೂ. ಮೌಲ್ಯದ 28 ಗ್ರಾಂ ಚಿನ್ನಾಭರಣ ಮತ್ತು 4 ಸಾವಿರ ರೂ. ಮೌಲ್ಯದ 1 ಬೆಳ್ಳಿ ಚೈನ್ ಕಳುವಾಗಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಮಂಜುನಾಥ್ ಅವರು…
ಮಡಿಕೇರಿ ಸೆ.15 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಿಂದ (ತಾವುನಾಡ್) ಪಾದಯಾತ್ರೆ ಆರಂಭವಾಯಿತು. ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ತಲಕಾವೇರಿಯಲ್ಲಿ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಯೋಗಕ್ಷೇಮಕ್ಕಾಗಿ ವಿಶೇಷ ಪೂಜೆ ಸಲ್ಲಿಸಿದ ಪದಾಧಿಕಾರಿಗಳು ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಬೇಡಿಕೆ ಪರ ಪ್ರಾರ್ಥನೆ ಸಲ್ಲಿಸಿದರು. ಕೊಡಗು ಜಿಲ್ಲೆಯ ವಿವಿಧೆಡೆ ಐದು ಹಂತಗಳಲ್ಲಿ ಪಾದಯಾತ್ರೆ ನಡೆಯಲಿದ್ದು, ಮೊದಲ ಹಂತದಲ್ಲಿ ಇಂದು ತಾವುನಾಡ್, ದೇಶ ಮಂದ್ (ತಲಕಾವೇರಿ- ಭಾಗಮಂಡಲ-ಪುಲಿಕೋಟ್) 10.00 ಗಂಟೆಗೆ ಬಲ್ಲತ್ನಾಡ್ (ಬಲ್ಲಮಾವಟಿ) 2.30 ಗಂಟೆಗೆ ಬೆಂಗ್ನಾಡ್ (ಚೇರಂಬಾಣೆ) (ಮಡಿಕೇರಿ ತಾಲೂಕು) ಮೂಲಕ ಹಾದುಹೋಗುತ್ತದೆ.
ಮಡಿಕೇರಿ, ಸೆ.15 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವದ ಹಿನ್ನೆಲೆಯಲ್ಲಿ ಸೆ.16 ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಮೇಳೈಸಲಿವೆ. ಬೆಳಿಗ್ಗೆ 10 ಗಂಟೆಯಿಂದ ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ವಿವಿಧ ಮನರಂಜನಾ ಸ್ಪರ್ಧೆಗಳ ಮೋಜು ಅನಾವರಣಗೊಳ್ಳಲಿದೆ. ಬಳಿಕ ಮಧ್ಯಾಹ್ನ 1.30ರಿಂದ ಜಿಲ್ಲೆಯ ಪ್ರತಿಷ್ಠಿತ ನೃತ್ಯ ತರಬೇತು ಸಂಸ್ಥೆಗಳ ಮಕ್ಕಳಿಂದ ಮೈನವಿರೇಳಿಸುವ ನೃತ್ಯ ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ನೃತ್ಯೋತ್ಸವದಲ್ಲಿ ಪಾಲ್ಗೊಳ್ಳಲಿರುವ ಸಂಸ್ಥೆಗಳ ಕಿರುಪರಿಚಯ ಇಲ್ಲಿದೆ. ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ, ಮಡಿಕೇರಿ ಕಳೆದ ನಾಲ್ಕು ವರ್ಷಗಳ ಹಿಂದೆ ಆರಂಭವಾದ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ಅಭಿಷೇಕ್ ಸಾರಥ್ಯದಲ್ಲಿ ನಡೆಯುತ್ತಿದೆ. ನಾಲ್ಕು ಬಾರಿ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಸಂಸ್ಥೆ, ರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದಿದೆ. ಸೋಮವಾರಪೇಟೆಯ ಎಡಿಸಿ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ, ಕುಶಾಲನಗರದ ಡ್ಯಾನ್ಸ್ ಬೀಟ್ಸ್ ಚಾಂಪಿಯನ್ಶಿಪ್ನಲ್ಲಿ ಪ್ರಥಮ, ಗೋಣಿಕೊಪ್ಪಲಿನ ರಾಜ್ಯ ಮಟ್ಟದ ಕಲೋತ್ಸವ ಚಾಂಪಿಯನ್ಶಿಪ್ನಲ್ಲಿ ಪ್ರಥಮ, 2022ರ ಯುವ ದಸರಾದಲ್ಲಿ ಪ್ರಥಮ ಸ್ಥಾನ,…
ಮಡಿಕೇರಿ ಸೆ.15 : ಚೇರಂಬಾಣೆ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ಪರ್ಧೆ ನಡೆಯಿತು. ಕಾರ್ಯಕ್ರಮವನ್ನು ಶ್ರೀ ರಾಜ ರಾಜೇಶ್ವರಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎನ್.ಡಿ.ವಿಜು ಉದ್ಘಾಟಿಸಿದರು. ಮಡಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲ ಬಡ್ಡಿರ ನಳಿನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪ್ರತಿಭಾ ಕಾರಂಜಿಯ ಹಿನ್ನಲೆಯ ಕುರಿತು ಮಾಹಿತಿ ನೀಡಿದರು. ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ವೀಣಾ ರೈ, ಬಾಳೆಯಡ ದಿವ್ಯ, ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕರಾದ ಕವನ್ ಕುಮಾರ್, ರೋಸಮ್ಮ ಉಪಸ್ಥಿತರಿದ್ದರು. ಪ್ರತಿಭಾ ಕಾರಂಜಿಯಲ್ಲಿ ಚೇರಂಬಾಣೆ ಕ್ಲಸ್ಟರ್ ವ್ಯಾಪ್ತಿಯ ವಿವಿಧ ಶಾಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸಿದ್ದಾಪುರ ಸೆ.14 : ವಿದ್ಯಾರ್ಥಿಗಳು ಶಿಕ್ಷಣ, ಕ್ರೀಡೆ, ಕಲಾ ಸಾಹಿತ್ಯ ಅಭಿಮಾನದಿಂದ ತಮ್ಮದೇಯಾದ ಪ್ರತಿಭೆ ಅನಾವರಣಗೊಳಿಸುವ ಮೂಲಕ ಪ್ರತಿಭಾನ್ವಿತರಾಗಿ ಸಮಾಜದಲ್ಲಿ ಗುರುತಿಸಿಕೊಂಡು ಮುನ್ನಡೆದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗಲಿದೆ ಎಂದು ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಇಕ್ರಾ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮೂಹ ಸಂಪನ್ಮೂಲ ಚಟ್ಟಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಸಾಮಾಜಿಕ ಜಾಲತಾಣ ಹಾಗೂ ದುಷ್ಟಗಳಿಂದ ದೂರವಿದ್ದು ಶಿಕ್ಷಣಕ್ಕೆ ಹೆಚ್ಚು ಹೊತ್ತು ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡಲ್ಲಿ ಸುಂದರ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದ್ದು, ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಪೋಷಕರು ಹೆಚ್ಚು ಗಮನ ಹರಿಸುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಲು ಸಹಕಾರ ನೀಡಬೇಕೆಂದು ಹೇಳಿದ ಅವರು ವಿದ್ಯಾರ್ಥಿಗಳಿಗೆ ಇಲಾಖೆಯ ನಿರ್ದೇಶನಗಳ ಬಗ್ಗೆ ಮಾಹಿತಿ ನೀಡಿದರು. ಚಟ್ಟಳ್ಳಿ ಕ್ಲಸ್ಟರ್ ಮಟ್ಟದ ಸಿ ಆರ್ ಪಿ ಅಶೋಕ್ ಮಾತನಾಡಿ ಒಂದರಿಂದ ಹತ್ತನೇ ತರಗತಿ ವರೆಗಿನ…






