ಲೇಖಕ: admin

ಮಡಿಕೇರಿ ಸೆ.14 : ಪ್ರವಾದಿ ಪೈಗಂಬರ್ ಮುಹಮ್ಮದ್ ಮುಸ್ತಫ (ಸ್ವಲ್ಲಲ್ಲಾಹು ಅಲೈಹಿ ವಸಲ್ಲಮ್) ಅವರ ಜನ್ಮದಿನದ ಅಂಗವಾಗಿ ಕೊಡಗು ಜಿಲ್ಲಾ ಎಸ್‍ವೈಎಸ್ ಸಮಿತಿ ವತಿಯಿಂದ ಸೆ.17 ರಂದು ಬೃಹತ್ ಮೀಲಾದ್ ಘೋಷಣಾ ರ್ಯಾಲಿ ಹಾಗೂ ಮೌಲಿದ್ ಮಜ್ಲಿಸ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಕಾರ್ಯದರ್ಶಿ ಸಿ.ಎಂ.ಹಮೀದ್ ಮೌಲವಿ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾದಿ ಅವರ ಜೀವನದ ಸಂದೇಶವನ್ನು ಸಾರುವ ಮೂಲ ಉದ್ದೇಶದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಎಸ್‍ವೈಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ವಿರಾಜಪೇಟೆಯಲ್ಲಿ ಪುಣ್ಯ ಪ್ರವಾದಿ (ಸ್ವ,ಅ) ಸ್ನೇಹ, ಸಮತ್ವ, ಸಹಿಷ್ಣುತೆ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು. ಮೀಲಾದ್ ಘೋಷಣಾ ರ್ಯಾಲಿಯು ಭಾನುವಾರ ಸಂಜೆ 4 ಗಂಟೆಗೆ ವಿರಾಜಪೇಟೆ ಶಾಫಿ ಜುಮಾ ಮಸೀದಿಯಿಂದ ಆರಂಭಗೊಂಡು ಪಟ್ಟಣದಲ್ಲಿ ಸಂಚರಿಸಿ ಈದ್ಗಾ ಮೈದಾನದಲ್ಲಿ ಕೊನೆಗೊಳ್ಳಲಿದೆ. ನಂತರ ಬೃಹತ್ ಮೌಲಿದ್ ಮಜ್ಲಿಸ್ ಆಧ್ಯಾತ್ಮಿಕ ಸಂಗಮವು ನಡೆಯಲಿದೆ ಎಂದರು. ರ್ಯಾಲಿಯುದ್ಧಕ್ಕೂ ಪ್ರವಾದಿ ಕೀರ್ತನೆ, ಸರ್ವರೊಂದಿಗೂ…

Read More

ಮಡಿಕೇರಿ ಸೆ.14 : ಪೊನ್ನಂಪೇಟೆ “66/11 ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸ ಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಸೆಪ್ಟೆಂಬರ್ 16 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ಗಂಟೆಯ ವರೆಗೆ 66/11 ಕೆವಿ ಪೊನ್ನಂಪೇಟೆ, 66/11 ಕೆವಿ ವಿರಾಜಪೇಟೆ, 33/11 ಕೆವಿ ಶ್ರೀಮಂಗಲ, 33/11 ಕೆವಿ ಸಿದ್ದಾಪುರ 33/11 ಕೆವಿ ಮೂರ್ನಾಡು ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪೊನ್ನಂಪೇಟೆ, ಗೋಣಿಕೊಪ್ಪಲು, ನಲ್ಲೂರು, ಹುದಿಕೇರಿ, ತಿತಿಮತಿ, ಹಾತೂರು, ಪಾಲಿಬೆಟ್ಟ, ಶ್ರೀಮಂಗಲ, ಬಾಳಲೆ, ಕಾನೂರು, ಬಿರುನಾಣಿ, ಕುಟ್ಟ ವಿರಾಜಪೇಟೆ, ಬಿ ಶೆಟ್ಟಗೇರಿ, ಬೇತ್ರೀ, ಕಡಗಮರೂರು, ಕಾಕೋಟುಪರಂಬು, ಅಮ್ಮತ್ತಿ, ಸಿದ್ದಾಪುರ, ಮಾಲ್ದಾರೆ, ಮೂರ್ನಾಡು, ಮರುಗೋಡು, ನಾಪೋಕ್ಲು, ಕಕ್ಕಬೆ, ಅರೆಕಾಡು, ಐಯ್ಯಂಗೇರಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಸೆ.14 : ಗೌರಿ-ಗಣೇಶ ಹಬ್ಬ ಆಚರಣೆ ಸಂಬಂಧ ಅಗತ್ಯ ಮುಂಜಾಗ್ರತೆ ವಹಿಸುವ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬವನ್ನು ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಜಿಲ್ಲಾಡಳಿತದ ಜೊತೆ ಸಹಕರಿಸುವಂತೆ ವರ್ಣಿತ್ ನೇಗಿ ಅವರು ಕೋರಿದರು. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಗೌರಿ-ಗಣೇಶ ಹಬ್ಬ ಆಚರಿಸುವ ಸಂಬಂಧ ಹಲವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅದನ್ನು ಪಾಲಿಸುವಂತೆ ಜಿ.ಪಂ.ಸಿಇಒ  ಮನವಿ ಮಾಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ,  ಮಾತನಾಡಿ ಪೊಲೀಸ್ ಇಲಾಖೆಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಆ ನಿಟ್ಟಿನಲ್ಲಿ ಕಾನೂನು ಮತ್ತು ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಏನಾದರೂ ಸಮಸ್ಯೆಗಳು ಇದ್ದಲ್ಲಿ ಗಮನಕ್ಕೆ ತರುವಂತೆ ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಡಿಕೇರಿ ನಗರದ ಚೇತನ್,  ನಗರದ ಗೌರಿ ಕೆರೆಯಲ್ಲಿ ಹೂಳು ತುಂಬಿದ್ದು,…

Read More

ಮಡಿಕೇರಿ ಸೆ.14 :  ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಹಿಂದಿ ವಿಭಾಗದ ವತಿಯಿಂದ ಹಿಂದಿ ದಿವಸವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ  ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಹಿಂದಿ ದಿವಸದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಶುದ್ಧ ಉಚ್ಚಾರಣ್ ಹಾಗೂ ದೋಹಾ ವಾಚನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಶುದ್ಧ ವಿಚಾರಣ್ ಸ್ಪರ್ಧೆಯಲ್ಲಿ ದ್ವಿತೀಯ ಬಿಸಿಎ ಯ ಜಿ. ಆರ್.ವಿಘ್ನೇಶ್ ಪ್ರಥಮ, ಎಂ.ಎಂ. ಭಜನ್ ದ್ವಿತೀಯ ಸ್ಥಾನ ಪಡೆದರು. ದೋಹಾ ವಾಚನದಲ್ಲಿ ಪ್ರಥಮ ಬಿಸಿಎ ಯ ಜಾಸ್ಮಿನ್ ಪ್ರಥಮ ಹಾಗೂ  ಬಿಬಿಎ ಯ ಇಂಷಾ ರಣೀಮ್ ದ್ವಿತೀಯ ಸ್ಥಾನ ಪಡೆದರು. ತೀರ್ಪುಗಾರರಾಗಿ ಪದವಿ ಪೂರ್ವ ಕಾಲೇಜು ಉಪನ್ಯಾಸಕಿ ಕ್ರಿಸ್ಟಿನಾ, ಹಿಂದಿ ಶಿಕ್ಷಕರಾದ ಅಬ್ದುಲ್ ಮುನೀರ್ ಕಾರ್ಯನಿರ್ವಹಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಸಿ.ಎ.ದೀಪ , ಹಿಂದಿ ಪ್ರಾಧ್ಯಾಪಕಿ ಬಿ. ಎ.ಶಶಿಕಲಾ  ಹಾಜರಿದ್ದರು. ವಿದ್ಯಾರ್ಥಿನಿ ಬಿ.ಬಿ. ಹಿಂದಿ ದಿವಸದ ಮಹತ್ವವನ್ನು ಕುರಿತು ಮಾತನಾಡಿದರು. ವಿದ್ಯಾರ್ಥಿನಿ ಸನ ಸ್ವಾಗತಿಸಿ, ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಹಿಂದಿ ವಿಭಾಗದ ಎಲ್ಲಾ ವಿದ್ಯಾರ್ಥಿಗಳು…

Read More

ಮಡಿಕೇರಿ ಸೆ.14 : ತಿರುಪತಿಯಿಂದ ತಿರುಮಲಕ್ಕೆ ಹೋಗುವ ಪಾದಾಚಾರಿ ಮಾರ್ಗದ ಎರಡೂ ಬದಿಗಳಲ್ಲಿ ಕಬ್ಬಿಣದ ಬೇಲಿಗಳನ್ನು ನಿರ್ಮಿಸಿ ಭಕ್ತರ ಹಾಗೂ ಪ್ರಾಣಿಗಳ ರಕ್ಷಣೆಗೆ ಟಿಟಿಡಿ ಮುಂದಾಗಬೇಕು ಎಂದು ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತಿರುಮಲಕ್ಕೆ ಹೋಗುವ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಡುಪ್ರಾಣಿಗಳಿವೆ. ಭಕ್ತರು ಅಲ್ಲಿರುವ ಜಿಂಕೆ ಮತ್ತಿತರ ಪ್ರಾಣಿಗಳಿಗೆ ತಿಂಡಿ ತಿನಿಸುಗಳನ್ನು ನೀಡುತ್ತಿದ್ದು, ಕಸವನ್ನು ಎಲ್ಲೆಂದರಲ್ಲಿ ಎಸೆಯುತ್ತಿದ್ದಾರೆ. ಕರಡಿ, ಚಿರತೆ ಸೇರಿದಂತೆ ಕೆಲವು ಪ್ರಾಣಿಗಳಿಂದ ಭಕ್ತರಿಗೆ ಅಪಾಯವಿದೆ. ಇತ್ತೀಚೆಗೆ ಚಿರತೆ ದಾಳಿಯಿಂದ ಗುವೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ನಿಯೋಗ ತಿರುಪತಿ ತಿರುಮಲ ಮಾರ್ಗದ ಇಕ್ಕೆಲಗಳನ್ನು ಖುದ್ದು ಪರಿಶೀಲಿಸಿ ಈ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದಾಗಿ ಹೇಳಿದ್ದಾರೆ. ತಿರುಮಲ ಪಾದಾಚಾರಿ ಮಾರ್ಗದ ಎರಡೂ ಬದಿಗಳಲ್ಲಿ ಕಬ್ಬಿಣದ ಬೇಲಿಗಳನ್ನು ಅಳವಡಿಸುವ ಮೂಲಕ ಭಕ್ತರು ಹಾಗೂ ವನ್ಯಜೀವಿಗಳನ್ನು ರಕ್ಷಿಸಬೇಕೆಂದು ಟಿಟಿಡಿ ಸಮಿತಿಗೆ ಮನವಿ ನೀಡಲಾಗಿದೆ. ಭಕ್ತರು…

Read More

ಮಡಿಕೇರಿ ಸೆ.14 :  ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿ ಮಾಡಲಾಯಿತು. ಕಾಂಗ್ರೆಸ್  ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ,  ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬನ್ನಂಡ ಪೃಥ್ವಿ  ಭೇಟಿ ಮಾಡಿ  ಕೊಡಗು ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಕ್ಷೇತ್ರಗಳ ವಿಂಗಡಣೆ ಕುರಿತು ಚರ್ಚಿಸಿದರು.

Read More

ಮಡಿಕೇರಿ ಸೆ.14 : ಗೌರಿ- ಗಣೇಶ ಹಬ್ಬದ ಸಂದರ್ಭದಲ್ಲಿ ನಾಗರಿಕರು ಪಿ.ಓ.ಪಿ ಗಣೇಶ ತಯಾರಿಕೆ ಹಾಗೂ ರಾಸಾಯನಿಕ ಬಣ್ಣ ಮುಕ್ತ ಪರಿಸರ ಸ್ನೇಹಿ ನೈಸರ್ಗಿಕವಾದ ಮಣ್ಣಿನ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿಯ ಜಿಲ್ಲಾ ಉಪ ಪರಿಸರ ಅಧಿಕಾರಿ ಎಂ. ಎಸ್.ನೇತ್ರಾವತಿ ಮನವಿ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ಘಟಕದ ವತಿಯಿಂದ ಶಾಲಾ – ಕಾಲೇಜುಗಳಲ್ಲಿ ಇಕೋ ಕ್ಲಬ್/ ವಿಜ್ಞಾನ ಸಂಘ/ ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ,ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಕೊಡಗು ಜಿಲ್ಲಾ ಸಮಿತಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಇನ್ನಿತರ ಸಂಘಗಳು/ ಎಸ್ ಡಿ ಎಂ ಸಿ ಹಾಗೂ ಶಾಲಾ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಸೆ.18 ರಂದು ನಡೆಯಲಿರುವ ಗೌರಿ-…

Read More

ಬೆಂಗಳೂರು ಸೆ.14: ಭಾಗಮಂಡಲ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಕಾಮಗಾರಿ ಚುರುಕುಗೊಳಿಸುವಂತೆ ಹಾಗೂ ಕೊಡಗು ಜಿಲ್ಲೆಯ ಹಾರಂಗಿ ಜಲಾಶಯದ ವ್ಯಾಪ್ತಿಯ ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಿ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕ್ರಮಗಳನ್ನ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ವಿಕಾಸಸೌಧದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕರೊಂದಿಗೆ ಸಭೆಯನ್ನು ನಡೆಸಿ ಮಾಹಿತಿ ಪಡೆದುಕೊಂಡರು. ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಹಾಗೂ ಪುಣ್ಯಕ್ಷೇತ್ರವಾದ ಭಾಗಮಂಡಲಕ್ಕೆ ಪ್ರತಿವರ್ಷ ಮಳೆಗಾಲದಲ್ಲಿ 2-3 ತಿಂಗಳ ಕಾಲ ರಸ್ತೆ ಸಂಪರ್ಕ ಕಡಿತಗೊಂಡು ಸಮಸ್ಯೆ ಎದುರಿಸುತ್ತಿದ್ದ ಹಿನ್ನಲೆಯಲ್ಲಿ ಮೇಲ್ಸೇತುವೆ ಕಾಮಗಾರಿ ಆರಂಭಿಸಲಾಯಿತು. ಆದರೆ ಕಾಮಗಾರಿ ಇನ್ನೂ ಪೂರ್ಣಗೊಳ್ಳದ ಹಿನ್ನಲೆಯಲ್ಲಿ ಈ ವರ್ಷದ ಮಳೆಗಾಲದಲ್ಲೂ ಜನರಿಗೆ ಸಂಚಾರಕ್ಕೆ ಅವಕಾಶ ದೊರೆತಿರಲಿಲ್ಲ. ಈ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಮುಂದಿನ ಬಾರಿ ಜಿಲ್ಲಾ ಪ್ರವಾಸದಲ್ಲಿ ಈ ಬಗ್ಗೆ ಪರಿಶೀಲನೆ…

Read More

ಮಡಿಕೇರಿ ಸೆ.14  : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 5.76 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 18.03 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1829.16 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3124.82 ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.25 ಮಿ.ಮೀ. ಕಳೆದ ವರ್ಷ ಇದೇ ದಿನ 25.55 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2702.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4521.75 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 8.02 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 20.32 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1382.78 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2424.69 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.23…

Read More

ಮೂರ್ನಾಡು ಸೆ.14 :  2023-24ನೇ ಸಾಲಿನ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮದಲ್ಲಿ ಮೂರ್ನಾಡು ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಭಾಗವಹಿಸಿ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಪ್ರೌಢಶಾಲಾ ವಿಭಾಗದ ಜನಪದ ಗೀತೆಯಲ್ಲಿ ಸುಧೀಕ್ಷ ಗಣಪತಿ, ಸುಂಸ್ಕೃತ ಮತ್ತು ಧಾರ್ಮಿಕ ಪಠಣ ಭೂಮಿಕ ಭಟ್, ಆಶುಭಾಷಣ ಜಯ ಸ್ವರೂಪ್, ಛದ್ಮವೇಷ ವಿ.ವಿ. ಭಾರ್ಗವಿ, ಚರ್ಚಾಸ್ಪರ್ಧೆ ಎ.ಬಿ. ಕೃತಿಕ, ಹಿಂದಿ ಭಾಷಣ ಲಹರಿ ತಮ್ಮಯ್ಯ, ಕನ್ನಡ ಭಾಷಣ ಪಿ.ವಿ. ಜೀವಿತ, ಕ್ವಿಜ್‍ನಲ್ಲಿ ಎಂ.ಬಿ. ಯಶ್ಮಿತ ಮತ್ತು ಪಿ.ವಿ. ಜೀವಿತ, ಭರತನಾಟ್ಯ ಟಿ.ಎನ್. ಅನುಪದ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಕ್ಲೈ ಮಾಡೆಲಿಂಗ್ ಪ್ರಧಾನ್ ಬಸಪ್ಪ, ಸುಂಸ್ಕೃತ ಮತ್ತು ಧಾರ್ಮಿಕ ಪಠಣದಲ್ಲಿ ಯು.ಆರ್. ನಿಹಾರಿಕ ಹಾಗೂ ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಸ್ಪರ್ಧೆಗಳಲ್ಲಿ ಭಕ್ತಿಗೀತೆ ಶ್ರದ್ಧಾ, ಕಥೆ ಹೇಳುವುದು ಬಿ.ಸಿ. ಹಿಮಾನಿ, ಅಭಿನಯ ಗೀತೆ ಸಿ.ಸಿ. ದೀಕ್ಷಾ, ಕ್ಲೈ ಮಾಡೆಲಿಂಗ್ ಧನ್ವಿತ, ಸುಂಸ್ಕೃತ ಮತ್ತು ಧಾರ್ಮಿಕ…

Read More