ಮಡಿಕೇರಿ ಅ.24 : ಮಡಿಕೇರಿ ನಗರ ಮತ್ತು ಗೋಣಿಕೊಪ್ಪ ಪಟ್ಟಣದಲ್ಲಿ ನಡೆಯಲಿರುವ ನಾಡಹಬ್ಬ ದಸರಾ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ವಾಹನ ಸಂಚಾರ ಮತ್ತು ನಿಲುಗಡೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಅ.24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು. ಅ.24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮೈಸೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಭಾರಿ ವಾಹನಗಳನ್ನು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬಿಳಿಕೆರೆ, ಕೆ.ಆರ್.ನಗರ, ಹೊಳೆನರಸೀಪುರ ಹಾಸನ ಸಕಲೇಶಪುರ ಮಾರ್ಗವಾಗಿ ಸಂಚರಿಸುವುದು. ಅ.24 ರಂದು ಸಂಜೆ 4 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಡಿಕೇರಿ ನಗರದೊಳಗೆ…
ಲೇಖಕ: admin
ಮಡಿಕೇರಿ ಅ.19 : ಅಡುಗೆ ಅನಿಲದ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಮಗುಚಿ ಬಿದ್ದ ಘಟನೆ ಮಡಿಕೇರಿ-ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿ ಬೊಯಿಕೇರಿ ಬಳಿ ನಡೆದಿದೆ. ಇಳಿಜಾರು ರಸ್ತೆಯಲ್ಲಿ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಗುಡ್ಡಕ್ಕೆ ಡಿಕ್ಕಿಯಾಗಿ ಮಗುಚಿಕೊಂಡಿದೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಿಲಿಂಡರ್ಗಳು ರಸ್ತೆಯಲ್ಲಿ ಉರುಳಿ ಬಿದ್ದಿದ್ದವು. ಬೇರೊಂದು ಲಾರಿಯಲ್ಲಿ ಸಿಲಿಂಡರ್ಗಳನ್ನು ಸಾಗಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಸ್ಥಳಕ್ಕೆ ಮಡಿಕೇರಿ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡರು.
ಮಡಿಕೇರಿ ಅ.19 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ವತಿಯಿಂದ ಅ.29 ರಂದು ಪತ್ರಿಭಾ ಪುರಸ್ಕಾರ, ಹಾನಗಲ್ ಶ್ರೀ ಕುಮಾರಸ್ವಾಮಿಗಳ 156ನೇ ಜಯಂತಿ, ಡಾ.ಶ್ರೀ ಶಿವಕುಮಾರಸ್ವಾಮಿ ಜಯಂತಿ ಹಾಗೂ ಜನಜಾಗೃತಿ ಸಭೆ ನಡೆಯಲಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ಹೆಚ್.ವಿ.ಶಿವಪ್ಪ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಕುಶಾಲನಗರದ ರೈತ ಸಹಕಾರ ಭವನದಲ್ಲಿ ನಡೆಯಲಿರುವ ಮೊದಲನೇ ಅಧಿವೇಶನವನ್ನು ಮಹಾಸಭಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಅರಣ್ಯ, ಜೈವಿಕ, ಪರಿಸರ ಸಚಿವ ಈಶ್ವರಖಂಡ್ರೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಮಠ ಶ್ರೀ ಮಹಾಂತ ಸ್ವಾಮೀಜಿ, ಅಮ್ಮತ್ತಿ ಕನ್ನಡ ಮಠದ ಶ್ರೀ ಚನ್ನಬಸವದೇಶಿಕೇಂದ್ರ ಸ್ವಾಮೀಜಿ, ಶನಿವಾರಸಂತೆ ಮುದ್ದಿನಕಟ್ಟೆ ಮಠದ ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ, ತೊರೆನೂರು ವಿರಕ್ತ ಮಠ ಶ್ರೀ ಮಲ್ಲೇಶ್ ಸ್ವಾಮೀಜಿ, ಶನಿವಾರಸಂತೆ ಮನೆಹಳ್ಳಿ ತಪೋವನ ಕ್ಷೇತ್ರದ ಮಹಾಂತ ಶಿವಲಿಂಗ…
ಮಡಿಕೇರಿ ಅ.19 : ಪ್ರೀತಿ, ಸೌಹಾರ್ದತೆ, ಮಾನವೀಯ ಕಳಕಳಿಯನ್ನು ತನ್ನೊಳಗೆ ಮಿಳಿತವಾಗಿಸಿಕೊಂಡಿರುವ ‘ಜಾನಪದ’ವೆನ್ನುವುದು ಬದುಕಿನ ಪದ್ಧತಿಯೇ ಆಗಿದ್ದು, ಇಂತಹ ಜಾನಪದ ಸಂಸ್ಕೃತಿಯನ್ನು ವೈವಿಧ್ಯಮಯ ಕಲಾ ಪ್ರಕಾರಗಳ ಪ್ರದರ್ಶನಗಳೊಂದಿಗೆ ಸಮರ್ಥವಾಗಿ ಕಟ್ಟಿಕೊಡುವಲ್ಲಿ ಮಡಿಕೇರಿಯ ಜಾನಪದ ದಸರಾ ಉತ್ಸವ ಯಶಸ್ವಿಯಾಯಿತು. ಜಾನಪದ ಉಡುಪು ತೊಟ್ಟ ಮಕ್ಕಳು, ಪುಟಾಣಿಗಳ ಚೆಂಡೆ ಮೇಳ, ವೀರಗಾಸೆ, ಪಟ ಕುಣಿತ, ಡೊಳ್ಳು ಕುಣಿತಗಳೊಂದಿಗೆ ಗುರುವಾರ ಬೆಳಗ್ಗೆ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿಯಿಂದ ಗಾಂಧಿ ಮೈದಾನದವರೆಗೆ ನಡೆದ ‘ಕಲಾ ಜಾಥ’ ದಸರಾ ಉತ್ಸವಕ್ಕೆ ವಿಶೇಷ ಮೆರುಗನ್ನು ನೀಡಿ, ಈ ನೆಲದ ಶ್ರೀಮಂತ ಜಾನಪದ ಸಂಸ್ಕೃತಿಯ ಸೌಗಂಧವನ್ನು ಪಸರಿಸಿತು. ಕಲಾ ಜಾಥಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರೆ, ಜಾನಪದ ದಸರಾ ಉತ್ಸವದ ಪ್ರಮುಖ ರೂವಾರಿಯಾದ ಕೊಡಗು ಜಿಲ್ಲಾ ಜಾನಪದ ಪರಿಷತ್ನ ಅಧ್ಯಕ್ಷರಾದ ಬಿ.ಜಿ.ಅನಂತಶಯನ ಮತ್ತು ಪದಾಧಿಕಾರಿಗಳು, ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಮತ್ತು ಪದಾಧಿಕಾರಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು. ಜಾನಪದ ಸಂಸ್ಕೃತಿಯೊಂದಿಗೆ ಮುನ್ನಡೆಯಿರಿ- ಜಾನಪದ ಸಂಸ್ಕೃತಿಯನ್ನು ಪ್ರತಿಬಿಂಬಿಸುವಂತೆ…
ಮಡಿಕೇರಿ ಅ.19 : ಜಲಜೀವನ್ ಮಿಷನ್ ಇಂಪ್ಲಿಮೆಂಟೇಶನ್ ಅಯಿಂಡ್ ಸ್ಫೋರ್ಟ್ಸ್ಂಗ್ ಏಜೆನ್ಸಿ ತಂಡದ ವತಿಯಿಂದ ಜಲಜೀವನ್ ಮಿಷನ್ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲ್ಲೂಕಿನ ನೀರುಗಂಟಿಗಳಿಗೆ, ವಾಟರ್ಮ್ಯಾನ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರಿಗೆ ಜಲಜೀವನ್ ಮಿಷನ್ ಇಂಪ್ಲಿಮೆಂಟೇಶನ್ ಅಯಿಂಡ್ ಸ್ಫೋರ್ಟ್ಸ್ಂಗ್ ಏಜೆನ್ಸಿ ತಂಡದ ವತಿಯಿಂದ ಫೀಲ್ಡ್ ಟೆಸ್ಟ್ ಕಿಟ್ ನಿಂದ ಕುಡಿಯುವ ನೀರಿನ ಗುಣಮಟ್ಟ, ಪರೀಕ್ಷೆಯ ಕುರಿತು ತರಬೇತಿ ಕಾರ್ಯಾಗಾರ ನಡೆಯಿತು. ಪೊನ್ನಂಪೇಟೆ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲರಿಗೆ ಜೆ ಜೆ ಎಂ ಯೋಜನೆಯ ಅನುಷ್ಠಾನದ ಕುರಿತು, ಯೋಜನೆಯ ಅನುಷ್ಠಾನದಲ್ಲಿ ಸ್ಥಳೀಯರ ಸಹಭಾಗೀತ್ವದ ಕುರಿತು, ಜಲ ಮೂಲಗಳ ಸಂರಕ್ಷಣೆಯ ಕುರಿತು, ಮಳೆ ನೀರು ಕೊಯ್ಲು ಪದ್ಧತಿ ಅಳವಡಿಕೊಳ್ಳುವುದರಿಂದ ಆಗುವ ಪ್ರಯೋಜನದ ಕುರಿತು ಮತ್ತು ಘನ ಮತ್ತು ದ್ರವ ತ್ಯಾಜ್ಯ ಸಮರ್ಪಕ ನಿರ್ವಹಣೆ ಕುರಿತು ಜಲಜೀವನ್ ಮಿಷನ್ ಐನ್ಪಲಿಟೇಸನ್ ಅಯಿಂಡ್ ಸ್ಫೋರ್ಟ್ಸ್ಂಗ್ ಏಜೆನ್ಸಿ ತಂಡದ ಸದಸ್ಯರು ಮಾಹಿತಿ ನೀಡಿದರು. ಕುಡಿಯುವ ನೀರು ಮತ್ತು ನೈರ್ಮಲ್ಯ ಬಗ್ಗೆ ಹಾಗೂ…
ಮಡಿಕೇರಿ ಅ.19 : ಕೊಡವ ಕ್ರಿಕೆಟ್ ಆಟಗಾರರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆ ಕಲ್ಪಿಸುವ ಉದ್ದೇಶದಿಂದ ಕೊಡವ ಕ್ರಿಕೆಟ್ ಅಕಾಡೆಮಿ ವತಿಯಿಂದ ನ.11 ರಿಂದ 14ರ ವರೆಗೆ ವಿರಾಜಪೇಟೆಯಲ್ಲಿ “ಕೊಡವ ಸಮಾಜಗಳ ನಡುವಿನ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿ”ಯನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಖಜಾಂಚಿ ಕೊಕ್ಕೆಂಗಡ ರಂಜನ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗಿನಲ್ಲಿ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳು ಹೆಚ್ಚಾಗಿ ನಡೆಯದ ಕಾರಣ ಬಹಳಷ್ಟು ಲೆದರ್ ಬಾಲ್ ಕ್ರಿಕೆಟ್ ಆಟಗಾರರಿಗೆ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶ ಸಿಗುತ್ತಿಲ್ಲ. ಅಲ್ಲದೆ ರಾಜ್ಯ ತಂಡದಲ್ಲಿ ಸ್ಥಾನ ಪಡೆಯವ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಕೊಡವ ಕ್ರಿಕೆಟ್ ಅಕಾಡೆಮಿ ಕೊಡವ ಯುವ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ರಾಜ್ಯ ತಂಡಗಳಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೊಡವ ಸಮಾಜಗಳ ನಡುವಿನ ಲೆದರ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ನಡೆಸಲು ನಿರ್ಧರಿಸಿದೆ ಎಂದು ಹೇಳಿದರು. ವಿರಾಜಪೇಟೆಯ ಸರ್ಕಾರಿ ಜೂನಿಯರ್ ಕಾಲೇಜಿನ ಮೈದಾನದಲ್ಲಿ ನಾಲ್ಕು ದಿನಗಳ ಕಾಲ…
ವಿರಾಜಪೇಟೆ ಅ.19 : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿರಾಜಪೇಟೆ ಹಿಂದೂ ಅಗ್ನಿದಳದ ವತಿಯಿಂದ ಹತ್ತನೆ ವರ್ಷದ ಪವಿತ್ರ ಕಾವೇರಿ ತೀರ್ಥ ವಿತರಣೆ ಮಾಡಲಾಯಿತು. ಕಾವೇರಿ ತೀರ್ಥೋದ್ಭವದ ನಂತರ ತಲಕಾವೇರಿಯಿಂದ ವಿರಾಜಪೇಟೆ ತಂದು ನಗರದ ಎಲ್ಲಾ ಮನೆಗಳಿಗೆ ಕಾವೇರಿ ತೀರ್ಥವನ್ನು ಹಿಂದೂ ಅಗ್ನಿ ದಳದ ಅಧ್ಯಕ್ಷ ಸೋಮಶೇಖರ್ ನೇತೃತ್ವದಲ್ಲಿ ವಿತರಿಸಲಾಯಿತು. ಸಮಿತಿಯ ಸಂಚಾಲಕ ದಿನೇಶ್ ನಾಯರ್, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಮಡಿಕೇರಿ ಅ.19 : ಎರಡೂವರೆ ಸಾವಿರ ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿ ಎನ್ನುವುದು ಅರ್ಥಹೀನವಾದದ್ದು, ಇದರ ಬದಲಾಗಿ ಕನ್ನಡ ಭಾಷೆ, ಸಂಸ್ಕೃತಿಯನ್ನು ನಮ್ಮ ನಿತ್ಯ ಜೀವನ ಹಾಗೂ ನಮ್ಮ ವ್ಯವಹಾರಗಳಲ್ಲಿ ಬಳಸುವುದು ಆದ್ಯ ಕರ್ತವ್ಯವಾಗಬೇಕೆಂದು ಜಿಲ್ಲಾ ಲೀಡ್ಬ್ಯಾಂಕಿನ (ಅಗ್ರಣಿ ಬ್ಯಾಂಕ್) ಮಾಜಿ ಮುಖ್ಯ ವ್ಯವಸ್ಥಾಪಕ ಹಾಗೂ ವೃತ್ತಿ ಮಾರ್ಗದರ್ಶಕ ಆರ್.ಕೆ.ಬಾಲಚಂದ್ರ ಕರೆ ನೀಡಿದರು. ಜಿಲ್ಲಾ ಕ.ಸಾ.ಪ.ಸಹಯೋಗದಲ್ಲಿ ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು( ಕ.ಸಾ.ಪ.) ವತಿಯಿಂದ ಕುಶಾಲನಗರದ ಸರಕಾರಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಸಾಹಿತಿ ದಿವಂಗತ ಎನ್.ಮಹಾಬಲ್ಲೇಶ್ವರ ಭಟ್ ಅವರ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ “ಕನ್ನಡದ ಏಳು ಬೀಳುಗಳು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕನ್ನಡ ಉಳಿಯಲು ಅಥವಾ ಅಳಿಯಲು ನಾವೇ ಕಾರಣರಾಗುತ್ತೇವೆ, ಭಾಷೆ ಜೀವಂತವಾಗಿರಬೇಕಾದರೆ ಮಾತು ಮತ್ತು ಬರಹ ಎರಡು ಕೂಡ ಪ್ರಮುಖವಾಗಿರಬೇಕು ಎಂದು ಹೇಳಿದ ಅವರು, ಕನ್ನಡದ ಕುರಿತಾದ ಒಲವು ಮತ್ತು ಅರಿವನ್ನು ವಿದ್ಯಾರ್ಥಿ ಸಮುದಾಯದಲ್ಲಿ ಮೂಡಿಸಬೇಕಾಗಿದೆ ಎಂದು ಕರೆ ನೀಡಿದರು. ಒಂದು ಭಾಷೆ ನಾಶವಾದರೆ…
ಮಡಿಕೇರಿ ಅ.19 : 45ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವದ ಅಂಗವಾಗಿ ಹಲವು ಕಾರ್ಯಕ್ರಮಗಳು ಜನರ ಗಮನ ಸೆಳೆಯಿತು. ಯುವ ದಸರಾ ಸಮಿತಿ ವತಿಯಿಂದ ಆಯೋಜನೆಗೊಂಡಿದ್ದ ಬೈಕ್ ಸ್ಟಂಟ್ ಯುವ ಸಮೂಹವನ್ನು ಆಕರ್ಷಿಸಿತು. ಗೋಣಿಕೊಪ್ಪ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಬೈಕ್ ಸ್ಟಂಟ್ನಲ್ಲಿ ರೈಡರ್ಗಳಾದ ಮೈಸೂರಿನ ಸ್ಯುಮ್ಸನ್, ಸೌರಭ್ ಹಾಗೂ ಸಾದವ್ ತಮ್ಮ ಮೂರು ಬೈಕ್ಗಳಲ್ಲಿ ಸ್ಟಂಟ್ ಮಾಡಿದರು. ತಂಡದ ಸಹಾಸ ನೋಡುಗರನ್ನ ನಿಬ್ಬೆರಗಾಗುವಂತೆ ಮಾಡಿತು. ವೀಲಿಂಗ್, ಸ್ಟಾಪೀ, ಡಾರ್ನೆಟ್, ಕ್ಯಾನ್ ಕ್ರಶ್, ಪ್ರೀ ಸ್ಟೈಲ್ ವ್ಹೀಲಿಂಗ್ ಸಾಹಸ ಪ್ರದರ್ಶನಗಳು ಜನರನ್ನು ಆಕರ್ಷಿಸಿತು. ಬೈಕ್ ಸ್ಟಂಟ್ ವೀಕ್ಷಿಸಲು ಜನರು ಕಿಕ್ಕಿರಿದು ಪಾಲ್ಗೊಂಡಿದ್ದರು. ಮುಂಜಾನೆ ನಗರದ ಉಮಾಮೇಶ್ವರಿ ದೇವಾಲಯ ಆವರಣದಿಂದ ಜಿಲ್ಲಾ ಮಟ್ಟದ ಸೈಕಲ್ ರೇಸ್ ಕ್ರೀಡೆಗೆ ಠಾಣಾಧಿಕಾರಿ ರೂಪದೇವಿ ಬೀರಾದರ್ ಚಾಲನೆ ನೀಡಿದರು. ಈ ಸಂದರ್ಭ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಪ್ರಮೋದ್ ಗಣಪತಿ, ಖಜಾಂಚಿ ದ್ಯಾನ್ ಸುಬ್ಬಯ್ಯ, ಯುವ ದಸರಾ ಸಮಿತಿ ಅಧ್ಯಕ್ಷ ನಾಮೇರ ಅಂಕಿತ್ ಪೊನ್ನಪ್ಪ ಹಾಗೂ ಇತರ ತಂಡದ…
ನಾಪೋಕ್ಲು ಅ.19 : ಇತಿಹಾಸ ಪ್ರಸಿದ್ಧ ಬಲಮುರಿಯ ಶ್ರೀ ಕಣ್ವ ಮುನೀಶ್ವರ ಕ್ಷೇತ್ರದಲ್ಲಿ ಕಾವೇರಿ ಜಾತ್ರೆಯ ಪ್ರಯುಕ್ತ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾಭಕ್ತಿಯಿಂದ ಜರುಗಿತು. ಜಾತ್ರೆಯ ಪ್ರಯುಕ್ತ ತೀರ್ಥ ಪೂಜೆ ಪುಣ್ಯ , ಪಿಂಡ ಪ್ರದಾನ, ಏಕಾದಶಿ ರುದ್ರ ಪಾರಾಯಣ, ಸತ್ಯನಾರಾಯಣ ಪೂಜೆ, ಅಭಿಷೇಕ ಸೇರಿದಂತೆ ಇನ್ನಿತರ ಪೂಜಾ ವಿಧಿ ವಿಧಾನಗಳು ಶ್ರದ್ಧಾ ಭಕ್ತಿಯಿಂದ ಭಕ್ತಾದಿಗಳು ಸಲ್ಲಿಸಿದರು. ಮಧ್ಯಾಹ್ನ ದೇವಾಲಯದಲ್ಲಿ ವಿಶೇಷ ಮಹಾಪೂಜೆ ನೆರವೇರಿ ಪ್ರಸಾದ ವಿತರಿಸಲಾಯಿತು. ಬಳಿಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನೆರವೇರಿತು. ಈ ಸಂದರ್ಭ ದೇವಾಲಯದ ಆಡಳಿತ ಅಧ್ಯಕ್ಷ ನೆರವಂಡ ಉತ್ತಪ್ಪ, ಕಾರ್ಯದರ್ಶಿ ಚೈಯಂಡ ತಿಮ್ಮಯ್ಯ, ಆಡಳಿತ ಮಂಡಳಿ ನಿರ್ದೇಶಕರು ಸೇರಿದಂತೆ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ಅರ್ಚಕ ರವಿ ಕಲ್ಲುರಾಯ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು. ವರದಿ : ದುಗ್ಗಳ ಸದಾನಂದ.






