ನಾಪೋಕ್ಲು ಸೆ.14 : ಬೇತು ಗ್ರಾಮದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಶಾಲೆಯ ವಿದ್ಯಾರ್ಥಿಗಳು ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದ ಕ್ಲಸ್ಟರ್ ಹಂತದ ಕನ್ನಡ ಭಾಷಣ, ಧಾರ್ಮಿಕ ಪಠಣ, ಭಾವಗೀತೆ ಛದ್ಮವೇಶ, ಚಿತ್ರಕಲೆ, ಚರ್ಚಾ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳು ತಾಲೂಕು ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ತಮ್ಮಯ್ಯ ತಿಳಿಸಿದ್ದಾರೆ. ಕನ್ನಡ ಭಾಷಣದಲ್ಲಿ ಮಹಮ್ಮದ್, ಧಾರ್ಮಿಕ ಪಠಣ( ಸಂಸ್ಕೃತ) ಶಮಂತ್, ಭಾವಗೀತೆಯಲ್ಲಿ ಬಿಷನ್ ಬಿದ್ದಪ್ಪ,ಛದ್ಮವೇಷದಲ್ಲಿ ರಚನ್ ಎಚ್.ಎಂ,ಚಿತ್ರಕಲೆಯಲ್ಲಿ ಯುಕ್ತ ಪೊನ್ನಮ್ಮ, ಚರ್ಚಾ ಸ್ಪರ್ಧೆಯಲ್ಲಿ ಶರಣ್ಯ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಮಂತ್ ಮತ್ತು ದರ್ಶ ದೇಚಮ್ಮ ತಂಡ ಪ್ರಥಮ ಸ್ಥಾನ ಗಳಿಸಿದ್ದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 5-7 ವಿಭಾಗದ ಸಂಸ್ಕೃತ ಧಾರ್ಮಿಕ ಪಠಣ(ಸಂಸ್ಕೃತ)ದಲ್ಲಿ ಶಾನ್ ದೇವಯ್ಯ ಪ್ರಥಮ ಸ್ಥಾನ ಗಳಿಸಿದರೆ, 1-4 ವಿಭಾಗದ ಲಘು ಸಂಗೀತ, ಛದ್ಮವೇಷ, ಕಥೆ ಹೇಳುವುದು,…
ಲೇಖಕ: admin
ಮಡಿಕೇರಿ ಸೆ.14 : ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಐಎಎಸ್/ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಬೇತಿ ಸಂಬಂಧ “ಆನ್ಲೈನ್” ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ 2023-24 ನೇ ಸಾಲಿಗೆ ಐ.ಎ.ಎಸ್/ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ಪರೀಕ್ಷಾ ಪೂರ್ವ ತರಭೇತಿ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ನಲ್ಲಿ https://sevasindhu.karnataka.gov.in ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ರಾಜ್ಯದ ನಿವಾಸಿಯಾಗಿರಬೇಕು. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರ್ರಿಶ್ಚಿಯನ್, ಬೌದ್ಧ, ಜೈನ್, ಪಾರ್ಸಿ, ಸಿಖ್) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಯ ವಯೋಮಿತಿ 21 ರಿಂದ 35 ವರ್ಷಗಳು ಮೀರಿರಬಾರದು. ಈಗಾಗಲೇ ಇಲಾಖೆ/ಖಾಸಾಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳಿಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ. ಅರ್ಜಿ ಸಲ್ಲಿಸಲು ಸೆಷ್ಟೆಂಬರ್,…
ಮಡಿಕೇರಿ ಸೆ.14 : ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವ ಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಯ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ಪ್ರತ್ಯೇಕ ವಿಭಾಗಗಳಲ್ಲಿ ‘ಬಾಪೂಜಿ ಪ್ರಬಂಧ ಸ್ಪರ್ಧೆ’ಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಿದೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 3 ಸಾವಿರ ರೂ, 2 ಸಾವಿರ ರೂ. ಹಾಗೂ 1 ಸಾವಿರ ರೂ. ಹಾಗೂ ರಾಜ್ಯ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ ತಲಾ 31 ಸಾವಿರ ರೂ, 21 ಸಾವಿರ ರೂ. ಹಾಗೂ 11 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು. ಪ್ರೌಢ ಶಾಲಾ ವಿಭಾಗ: ನನಗೇಕೆ ಗಾಂಧೀಜಿ ಇಷ್ಟವಾಗುತ್ತಾರೆ. ನನ್ನ ಬದುಕಿನಲ್ಲಿ…
ಸುಂಟಿಕೊಪ್ಪ ಸೆ.14 : ಹನ್ನೆರಡನೇ ಶತಮಾನದಲ್ಲಿ ಜನರು ಅನುಭವಿಸುತ್ತಿದ್ದ ಸಾಮಾಜಿಕ ಅಸಮಾನತೆಗಳನ್ನು ನೀಗಿಸಲು ಎಲ್ಲಾ ಜಾತಿ ವರ್ಗಗಳ ವಚನಕಾರರು ವಚನಗಳನ್ನು ರಚಿಸಿ ಜನರಲ್ಲಿ ಸಾಮಾಜಿಕ ಪ್ರಜ್ಞೆಯ ಜೊತೆಗೆ ಅವರ ಜೀವನ ಸುಧಾರಣೆಗೆ ರೂಪಿಸಿದ ಜನರಾಡುವ ಸರಳ ಭಾಷೆಯ ವಚನಗಳು ಸದ್ಗುಣಗಳನ್ನು ಭಿತ್ತಿ ಬೆಳೆವ ಭೂಮಿಕೆ ಎಂದು ಕುಶಾಲನಗರ ಸರ್ಕಲ್ ಇನ್ಸ್ ಪೆಕ್ಟರ್ ರಾಜೇಶ್ ಕೋಟ್ಯಾನ್ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಗರಗಂದೂರು ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ” ವಿದ್ಯಾರ್ಥಿಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾಡಿನ ಸರ್ವ ಶ್ರೇಷ್ಠ ಸಾಹಿತ್ಯ ಹಾಗೂ ಸಂಸ್ಕ್ರತಿ ಉಳಿಸಬೇಕಾದುದು ಹಾಗೂ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಾದುದು ಇಂದಿನ ವಿದ್ಯಾರ್ಥಿಗಳ ಆದ್ಯ ಕರ್ತವ್ಯವಾಗಬೇಕಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಚನ ಸಾಹಿತ್ಯ,ದಾಸ ಸಾಹಿತ್ಯ, ಕೀರ್ತನೆ ಮೊದಲಾದ ಭಾರತೀಯ ಸಂಸ್ಕ್ರತಿಯ ಪರ್ವಗಳನ್ನು ಅರಿತು ಸಮಾಜಕ್ಕೆ ಉಣಬಡಿಸುವ ಮೂಲಕ ಸುಗಮ ಸಮಾಜ ಕಟ್ಟಬೇಕಿದೆ. ನಾಲ್ಕು ದಿನಗಳ ಮಾನವ ಬದುಕನ್ನು ಸುಂದರವಾಗಿ ಕಳೆಯಬೇಕಿದ್ದಲ್ಲಿ…
ಕೊಡ್ಲಿಪೇಟೆ ಸೆ.14 : ಮಕ್ಕಳ ದೈಹಿಕ ಕ್ಷಮತೆ ಹಾಗೂ ಕ್ರಿಯಾಶೀಲತೆಗೆ ಪೌಷ್ಟಿಕ ಆಹಾರ ಅಗತ್ಯವಿದ್ದು, ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಪೌಷ್ಟಿಕ ಆಹಾರಗಳನ್ನು ನೀಡುವುದರೊಂದಿಗೆ ಅದರ ಮಹತ್ವ ಕುರಿತು ಅರಿವು ಮೂಡಿಸಬೇಕು ಎಂದು ಬ್ಯಾಡಗೊಟ್ಟ ಗ್ರಾ.ಪಂ ಅಧ್ಯಕ್ಷ ಹನೀಫ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೋಮವಾರಪೇಟೆ ತಾಲೂಕು ವತಿಯಿಂದ ದೊಡ್ಡಕುಂದ ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣಾ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಹಿಂದೆ ಸಿರಿಧಾನ್ಯಗಳು, ತರಕಾರಿಗಳನ್ನು ಹೆಚ್ಚಾಗಿ ಬಳಸುವ ಮೂಲಕ ನಮ್ಮ ಹಿರಿಯರು ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡಿದ್ದರು. ಹಳ್ಳಿಗಳಲ್ಲಿ ಅಕ್ಕಿಯನ್ನು ನೋಡುತ್ತಿದ್ದುದೇ ಅಪರೂಪವಾಗಿತ್ತು. ಆದರೆ ಈಗ ಅಕ್ಕಿ, ಸಕ್ಕರೆ ಮೊದಲಾದ ಪದಾರ್ಥಗಳನ್ನು ಹೆಚ್ಚಾಗಿ ಬಳಸಲಾಗುತ್ತಿದೆ ಎಂದರು. ಮಕ್ಕಳು ಹಸಿವಿನಿಂದ ಬಳಲಬಾರದು ಎಂದು ಸರ್ಕಾರ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದೆ. ಮಕ್ಕಳು ಪೌಷ್ಟಿಕಾಂಶ ಆಹಾರಗಳನ್ನು ಸೇವಿಸಬೇಕು. ಆಹಾರ ಪದಾರ್ಥಗಳನ್ನು ವ್ಯರ್ಥ ಮಾಡಬಾರದು ಎಂದು ಹೇಳಿದರು. ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕಿ ದುಂಬಿತಾ…
ಕುಶಾಲನಗರ ಸೆ.14 : ದೊಡ್ಡತ್ತೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಸಮವಸ್ತ್ರ ವಿತರಿಸಿದರು. ನಂತರ ಮಾತನಾಡಿದ ಅವರು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಎಲ್ಲರೂ ತಮ್ಮ ತಮ್ಮ ಗ್ರಾಮದ ಶಾಲೆಗಳ ಬಗ್ಗೆ ಶಾಲೆಯ ಆಡಳಿತ ಮಂಡಳಿಯೊಂದಿಗೆ ಸಹಕರಿಸಬೇಕು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವುದು ಕಡಿಮೆ ಆಗಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾಗಿದೆ ಎಂದರು. ಶಾಲೆಗಳಲ್ಲಿ ಕುಡಿಯುವ ನೀರು, ಕಟ್ಟಡಗಳ ಸಮಸ್ಯೆ, ಅರೋಗ್ಯ, ರಸ್ತೆ, ಉಪಹಾರ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಉಂಟಾದಲ್ಲಿ ಸಮಸ್ಯೆಗಳ ಬಗ್ಗೆ ನನಗೆ ಆಗಲಿ ಸ್ಥಳೀಯ ಜನಪ್ರತಿನಿಧಿಗಳಿಗಾಗಲಿ ಮಾಹಿತಿ ನೀಡಬೇಕು ಎಂದರು. ಮಕ್ಕಳ ಮುಖಾಂತರವೇ ದೇಶ ಬದಲಾವಣೆಯಗಲು ಸಾಧ್ಯ, ಸರ್ಕಾರಿ ಶಾಲೆಯ ಮಕ್ಕಳಿಗೆ ನಮ್ಮಿಂದ ಹೆಚ್ಚಿನ ಪ್ರೋತ್ಸಾಹ, ಅನುದಾನಗಳನ್ನು ನೀಡಲಾಗುವುದು. ಸರ್ಕಾರಿ ಶಾಲೆಯ ಉನ್ನತಿಗಾಗಿ ಶಾಲೆಯ ಮಕ್ಕಳ ಹಿತಕ್ಕಾಗಿ ಸರ್ಕಾರವು ಮತ್ತು ನಾನು ಯಾವಾಗಲು ನಿಮ್ಮ ಪರ ಇರುತ್ತೇವೆ ಎಂದು…
ಮಡಿಕೇರಿ ಸೆ.14 : ಕೊಡಗು ಜಿಲ್ಲಾ ಕಾಂಗ್ರೆಸ್ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿ ಮಾಡಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿ ಮಾಡಿ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳನ್ನು ಈ ಹಿಂದಿನಂತೆ 29 ಸ್ಥಾನಕ್ಕೆ ಹೆಚ್ಚಳ ಮಾಡುವಂತೆ ಒತ್ತಾಯಿಸಿ, ಮನವಿಯನ್ನು ಸಲ್ಲಿಸಿದರು. ಅಭಿವೃದ್ಧಿಯ ವಿಷಯದಲ್ಲಿ ಕೊಡಗು ಜಿಲ್ಲೆಯು ಹಿಂದುಳಿದಿದ್ದು ಸರ್ಕಾರವು ಈ ಎರಡು ವಿಚಾರಗಳಿಗೆ ಸ್ಪಂದಿಸಬೇಕೆಂದು ಒತ್ತಾಯಿಸಿದರು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುಧಾನ ನೀಡಲು ಮತ್ತು ಮಳೆ ಕೊರತೆ ಹಿನ್ನೆಲೆ ಸರ್ಕಾರ ಘೋಷಣೆ ಮಾಡಿರುವ ಬರಪೀಡಿತ ಪ್ರದೇಶಗಳಿಗೆ ಹೆಚ್ಚಿನ ಅನುಧಾನ ನೀಡಬೇಕೆಂದು ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಯಿತು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್ ಬೋಸ್…
ಮಡಿಕೇರಿ ಸೆ.13 : ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಯೋಜನೆ ಮತ್ತು ಸೇವೆಗಳ ಕುರಿತು ಜನ ಜಾಗೃತಿ ಮೂಡಿಸಲು ಕೊಡಗು ಜಿಲ್ಲೆಯಲ್ಲಿನ ಜಾನಪದ ಕಲಾ ತಂಡ (ಬೀದಿ ನಾಟಕ) ಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಬೀದಿ ನಾಟಕ ಜಾನಪದ ಕಲಾ ತಂಡದಲ್ಲಿ 8 ಜನ (ಸ್ಥಳೀಯ ಕಲಾವಿದರು) ಸದಸ್ಯರು ಇರಬೇಕು. ಇವರಲ್ಲಿ 2 ಮಹಿಳಾ ಕಲಾವಿದರಿರಬೇಕು. ಇಲಾಖೆ ಯೋಜನೆಗಳ ಬಗ್ಗೆ ಬೀದಿ ನಾಟಕ ಪ್ರದರ್ಶನದ ಅನುಭವವಿರಬೇಕು. ಜಿಲ್ಲೆಯ ಸಂಗೀತ ಮತ್ತು ನಾಟಕ ಡಿವಿಜನ್/ ಕನ್ನಡ ಮತ್ತು ಸಂಸ್ಕೃತಿ ಇಲಾಖೆ/ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಜಾನಪದ ಕಲಾತಂಡಗಳು ನೋಂದಣಿಯಾಗಿರಬೇಕು. ಆಸಕ್ತ ಜಾನಪದ ಕಲಾತಂಡಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಐ.ಇ.ಸಿ ವಿಭಾಗ, ಮಡಿಕೇರಿ, ಕೊಡಗು ಜಿಲ್ಲೆ ಇಲ್ಲಿ ಕಚೇರಿ ವೇಳೆಯಲ್ಲಿ ಅರ್ಜಿಯನ್ನು ಪಡೆದುಕೊಂಡು ಸೆಪ್ಟೆಂಬರ್ 21 ರೊಳಗೆ ಸಲ್ಲಿಸಬೇಕು ಎಂದು ಜಿಲ್ಲಾ…
ಮಡಿಕೇರಿ ಸೆ.13 : ಕೊಡಗು ಜಿಲ್ಲಾ ವಿಷ್ಣು ಸೇನಾ ಸಮಿತಿ ವತಿಯಿಂದ ಸೆ.17 ರಂದು ಕನ್ನಡದ ಹಿರಿಯ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ ಜನ್ಮದಿನವನ್ನು ಆಚರಿಸಲಾಗುವುದೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ನಾಗರಾಜ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಂದು ಅಪರಾಹ್ನ 3 ಗಂಟೆಗೆ ನಗರದ ಬಾಲಭವನದಲ್ಲಿ ಕೊಡಗು ವಿಷ್ಣು ಸೇನಾ ಸಮಿತಿ ಅಧ್ಯಕ್ಷ ಎಂ.ಹೆಚ್.ರಫೀಕ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ. ಮುಖ್ಯ ಅತಿಥಿಗಳಾಗಿ ಬ್ರಹ್ಮಗಿರಿ ಕೊಡವ ವಾರಪತ್ರಿಕೆಯ ಸಂಪಾದಕ ಯು.ಎಂ.ಪೂವಯ್ಯ, ಸಾಹಿತಿ ಡಾಟಿ ಪೂವಯ್ಯ, ಕಲಾವಿದ ಜೂ.ವಿಷ್ಣುವರ್ಧನ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳು, ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಾಗುವಂತೆ ನಾಗರಾಜ್ ಮನವಿ ಮಾಡಿದ್ದಾರೆ.
ಮಡಿಕೇರಿ ಸೆ.13 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನವು ಸೆ.15 ರಂದು ಮಧ್ಯಾಹ್ನ 12 ಗಂಟೆಗೆ ವಿರಾಜಪೇಟೆಯ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಕೆ.ಬಿ. ಪ್ರಸಾದ್, ಸಂತ ಅನ್ನಮ್ಮ ಶಾಲೆಯ ವ್ಯವಸ್ಥಾಪಕರು ರೆ.ಫಾ.ಐಸಾಕ್ ರತ್ನಾಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಸತೀಶ್ ಕುಮಾರ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಆನಂದ್ ಎನ್, ತಾ.ಪಂ.ಇಒ ಕೆ.ಸಿ ಅಪ್ಪಣ್ಣ, ಪೊಲೀಸ್ ಉಪಾಧ್ಯಕ್ಷರಾದ ಮೋಹನ್ ಕುಮಾರ್ ಆರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್,…






