ಲೇಖಕ: admin

ವಿರಾಜಪೇಟೆ  ಆ.18 :   ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಪ್ರೆಸ್‌ಕ್ಲಬ್ ಹಾಗೂ ಪ್ರೆಸ್ ಕ್ಲಬ್ ಬೆಳ್ಳಿ ಹಬ್ಬ ಆಚರಣಾ ಸಮಿತಿ ಸಹಯೋಗದಲ್ಲಿ ಕೊಡಗು ಪ್ರೆಸ್‌ಕ್ಲಬ್ ಬೆಳ್ಳಿ ಮಹೋತ್ಸವ ಅಂಗವಾಗಿ ಅರಮೇರಿ ಗ್ರಾಮದ ವಕೀಲ ಪೂಳಂಡ ವಿನು ಪೆಮ್ಮಯ್ಯ ಅವರ ಗದ್ದೆಯಲ್ಲಿ ಆಯೋಜಿಸಿದ್ದ ಪತ್ರಕರ್ತರ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಜಿಲ್ಲೆಯ ಪತ್ರಕರ್ತರು ಕೆಸರಿನಲ್ಲಿ ಮಿಂದೆದ್ದರು. ಓಟ, ಹ್ಯಾಂಡ್‌ಬಾಲ್, ಹಗ್ಗಜಗ್ಗಾಟ ಕ್ರೀಡೆಯಲ್ಲಿ ಪಾಲ್ಗೊಂಡು ಮನಸ್ಸು, ದೇಹ ಹಗುರ ಮಾಡಿಕೊಂಡರು. ಸುಮಾರು 10 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದವು. ದಿವಾಕರ್ ಬೋಜಪ್ಪ ನೇತೃತ್ವದ ಜಾಕಿ ಬಾಯ್ಸ್ ತಂಡವು ಹ್ಯಾಂಡ್‌ಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿತು. ವಿಜೇತರು  :  ಹ್ಯಾಂಡ್‌ಬಾಲ್ ಸ್ಪರ್ಧೆಯಲ್ಲಿ ಇಸ್ಮಾಯಿಲ್ ಕಂಡಕೆರೆ ನೇತೃತ್ವದ ನಾಟಿ ಬಾಯ್ಸ್ ತಂಡ ಪ್ರಥಮ, ದಿವಾಕರ್ ಬೋಜಪ್ಪ ನೇತೃತ್ವದ ಜಾಕಿ ಬಾಯ್ಸ್ ತಂಡ ದ್ವಿತೀಯ, ಹಗ್ಗಜಗ್ಗಾಟದಲ್ಲಿ ಸಂತೋಷ್ ರೈ ನೇತೃತ್ವದ ಮಣ್ಣಿನ ಮಕ್ಕಳು ತಂಡ ಪ್ರಥಮ, ಜಾಕಿ ಬಾಯ್ಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. 40…

Read More

ವಿರಾಜಪೇಟೆ ಆ.19 : ಬಿಳುಗುಂದ ಸರ್ಕಾರಿ ಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಕೆ.ಹೆಚ್. ಆಲಿ ಧ್ವಜಾರೋಹಣ ನೆರವೇರಿಸಿದರು. ಶಾಲಾ ಮುಖ್ಯ ಶಿಕ್ಷಕಿ ಅರುಣ ಆನ್ಸಿ ಡಿಸೋಜ ದಿನದ ಮಹತ್ವದ ಬಗ್ಗೆ ಮಾತನಾಡಿ, ಸ್ವಾತಂತ್ರ್ಯವಾಗಿರುವ ನಾವು ಹೋರಾಡಿ ಮಡಿದ ವೀರರನ್ನು ಈ ದಿವಸ ನೆನಪಿಸಿಕೊಳ್ಳಬೇಕು. ಸಂವಿಧಾನದ ನಿಯಮದಡಿ ನಾವು ನೆಮ್ಮದಿಯಿಂದ ಬದುಕಲು ವೀರ ಯೋಧರ ಪರಿಶ್ರಮವಿದೆ. ನಾವು ಒಂದಾಗಿ ಬಾಳಬೇಕು. ಜಾತಿ ಧರ್ಮಗಳ ಸಾಮರಸ್ಯದ ಅಗತ್ಯವಿದೆ. ದೇಶದ ರಕ್ಷಣೆಗೆ ಎಲ್ಲರೂ ಕೈಜೋಡಿಸಿ ಎಂದರು. ವಿದ್ಯಾರ್ಥಿಗಳು, ದೇಶಭಕ್ತಿ ಗೀತೆ ಹಾಡಿ, ದಿನದ ಮಹತ್ವದ ಬಗ್ಗೆ ಭಾಷಣ ಮಾಡಿದರು. ನಿವೃತ್ತ ಶಿಕ್ಷಕಿ ಸತಿ ನಾರಾಯಣ, ನೀಡಿದ ದತ್ತಿ ನಿಧಿಯ ಬಡ್ಡಿ ಹಣವನ್ನು 8,9,10ನೇ ತರಗತಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಳುಗುಂದ ಗ್ರಾ.ಪಂ ಅಧ್ಯಕ್ಷ ಲೀಲಾವತಿ, ಮಾಜಿ ಅಧ್ಯಕ್ಷ ಐನಂಡ ಪ್ರತಾಪ್, ಪಿ.ಡಿ.ಓ.ಚಂದ್ರಶೇಖರ, ಗ್ರಾ.ಪಂ ಸದಸ್ಯರು, ಸಿಬ್ಬಂದಿ ವರ್ಗದವರು,…

Read More

ಸಿದ್ದಾಪುರ ಆ.18 :  ಕನ್ನಡ ಸಾಹಿತ್ಯ ಪರಿಷತ್ ಕೊಡಗು ಜಿಲ್ಲೆ ಮತ್ತು ವಿರಾಜಪೇಟೆ ತಾಲ್ಲೂಕು ಸಮಿತಿ ಅಮ್ಮತ್ತಿ ಹೋಬಳಿ ವತಿಯಿಂದ ಮುಣ್ಣಂಡ ಕೆ.ಚಂಗಪ್ಪ ಜ್ಞಾಪಕರ್ಥ ದತ್ತಿ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಆ.19 ರಂದು ಪಾಲಿಬೆಟ್ಟ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಪತ್ರಿಕಾ ಪ್ರಕಟಣೆ ನೀಡಿದ ಹೋಬಳಿ ಅಧ್ಯಕ್ಷ ಟಿ.ಹೆಚ್.ಮಂಜುನಾಥ್  ಅಂದು ಬೆಳಿಗ್ಗೆ 10.30ಗಂಟೆಗೆ  ನಡೆಯಲಿರುವ ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಉಪನ್ಯಾಸಕರಾದ ಎಸ್.ಎಂ.ರಜನಿ ಉಪನ್ಯಾಸ  ನೀಡಲಿದ್ದಾರೆ. ಕನ್ನಡ ಮತ್ತು ಕೊಡವ ಭಾಷೆ ಬೆಳವಣಿಗೆ ಎಂಬ ವಿಚಾರವಾಗಿ ಉಪನ್ಯಾಸ ನಡೆಯಲಿದ್ದು, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕಾ.ಸ.ಪ ಜಿಲ್ಲಾಧ್ಯಕ್ಷ  ಎಂ.ಪಿ.ಕೇಶವಕಾಮತ್, ಪಾಲಿಬೆಟ್ಟ  ಗ್ರಾ.ಪಂ ಅಧ್ಯಕ್ಷರಾದ  ಲೀಲಾವತಿ, ಪಾಲಿಬೆಟ್ಟ ಪದವಿಪೂರ್ವ ಕಾಲೇಜು  ಉಪನ್ಯಾಸಕರಾದ ಶಿವದಾಸ್, ಉಪಾಧ್ಯಕ್ಷ  ಯಂ.ಯಂ.ಕಾಳಪ್ಪ,   ಕಾ.ಸ.ಪ ವಿರಾಜಪೇಟೆ ತಾಲೂಕು ಅಧ್ಯಕ್ಷ  ರಾಜೇಶ್ ಪದ್ಮನಾಭ,  ತಾಲೂಕು ಪಂಚಾಯತಿ ಮಾಜಿ ಸದಸ್ಯ ರಾಮದಾಸ್ ಪಾಲ್ಗೊಳ್ಳಲಿದ್ದಾರೆ.  

Read More

ಮಡಿಕೇರಿ ಆ.18 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಆಶ್ರಯದಲ್ಲಿ ಆ.19 ರಂದು ಛಾಯಾಗ್ರಹಣ ದಿನವನ್ನು  ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು  ನಗರದ ಲಯನ್ಸ್ ಕ್ಲಬ್ ಹಾಲ್ ನಲ್ಲಿ ಬೆಳಿಗ್ಗೆ 10 ಗಂಟೆಗೆ  ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ  ಉದ್ಘಾಟಿಸಲಿದ್ದು, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ  ಎಸ್.ಎ.ಮುರಳೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಸಲಹೆಗಾರ  ಬಿ.ಜಿ.ಅನಂತ ಶಯನ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಆರ್. ವಸಂತ್, ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಸಮಿತಿ ಸದಸ್ಯ ದೀಪಕ್, ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರದೀಪ್ ಮರಗೋಡು, ಹಿಂದೂ ಮಲೆಯಾಳಿ ಸಮಾಜ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಅಂಬೇಕಲ್ ನವೀನ್ ಕುಶಾಲಪ್ಪ ಅವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸನ್ಮಾನ-ಪ್ರತಿಭಾ ಪುರಸ್ಕಾರ: ಸಮಾರಂಭದಲ್ಲಿ ಛಾಯಾಗ್ರಾಹಕರ ಸಂಘದ ಸದಸ್ಯರ ಮಕ್ಕಳಿಗೆ…

Read More

ಕಡಂಗ ಆ.18 :  ವಿವಿದೋದ್ದೇಶ ಪ್ರಾಥಮಿಕ ಕೃಷಿ ಪತ್ತಿನ ಬ್ಯಾಂಕ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕೃಷಿ ಪತ್ತಿನ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಕೊಡಿರ ಪ್ರಸನ್ನ ತಮ್ಮಯ್ಯ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ ಸದಸ್ಯರು,ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು. ವರದಿ : ನೌಫಲ್   

Read More

ಮಡಿಕೇರಿ ಆ.17 : ಕೊಡಗು ಜಿಲ್ಲೆಯ ಕಂದಾಯ ಇಲಾಖೆ ಸೇರಿದಂತೆ ಇನ್ನೂ ಕೆಲವು ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿರುವ ಚಿಂತಕ ಸೂದನ ಎಸ್.ಈರಪ್ಪ, ಭ್ರಷ್ಟ ವ್ಯವಸ್ಥೆಯ ವಿರುದ್ಧ ಶಾಸಕದ್ವಯರು ಸಮರ ಸಾರಬೇಕೆಂದು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಜನ ಇಬ್ಬರು ನೂತನ ಶಾಸಕರುಗಳನ್ನು ಅತಿ ನಿರೀಕ್ಷೆಗಳಿಂದ ಆಯ್ಕೆ ಮಾಡಿದ್ದು, ಭ್ರಷ್ಟಾಚಾರದಿಂದ ಸರ್ಕಾರಿ ಕಚೇರಿಗಳು ಮುಕ್ತವಾಗುತ್ತವೆ ಎನ್ನುವ ವಿಶ್ವಾಸದಲ್ಲಿದ್ದಾರೆ. ಆದ್ದರಿಂದ ಶಾಸಕದ್ವಯರು ಸನ್ಮಾನ ಕಾರ್ಯಕ್ರಮಗಳಲ್ಲೇ ಮೈಮರೆಯದೆ ಜನರ ನಿರೀಕ್ಷೆಯಂತೆ ಸರ್ಕಾರಿ ಕಚೇರಿಗಳ ಅವ್ಯವಸ್ಥೆಗಳನ್ನು ಸರಿಪಡಿಸಲಿ ಎಂದು ಆಗ್ರಹಿಸಿದ್ದಾರೆ. ಕಂದಾಯ ಇಲಾಖೆ ದಲ್ಲಾಳಿಗಳ ಕಪಿಮುಷ್ಠಿಯಲ್ಲಿ ಸಿಲುಕಿದೆ, ಪೌತಿ ಖಾತೆ, ಆಸ್ತಿ ವರ್ಗಾವಣೆ, ಸರ್ವೆ, ವಂಶಾವಳಿ ಸೇರಿದಂತೆ ವಿವಿಧ ಕಡತಗಳ ವರ್ಗಾವಣೆಗೆ ಹಣ ನಿಗಧಿ ಮಾಡಲಾಗಿದೆ. ಅರ್ಜಿದಾರರು ಹಾಗೂ ಅಧಿಕಾರಿಗಳ ನಡುವೆ ದಲ್ಲಾಳಿಗಳು ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಣ ನೀಡಿದರೆ ಅರ್ಜಿಗಳು ವಿಲೇವಾರಿಯಾಗುತ್ತವೆ, ಇಲ್ಲದಿದ್ದರೆ ಧೂಳು ಹಿಡಿಯುತ್ತವೆ ಎಂದು ಆರೋಪಿಸಿದ್ದಾರೆ. ಶಾಸಕದ್ವಯರು ಪ್ರಮುಖ ಇಲಾಖೆಗಳು ಹಾಗೂ ಗ್ರಾ.ಪಂ ನಿಂದ…

Read More

ಮಡಿಕೇರಿ ಆ.17 : ಸೋಮವಾರಪೇಟೆ ಅರಣ್ಯ ವಲಯ ವ್ಯಾಪ್ತಿಗೆ ಬರುವ ಗರ್ವಾಲೆ, ಸೂರ್ಲಬ್ಬಿ, ಮಂಕ್ಯ ಗ್ರಾಮ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆ ಆ.19 ಮತ್ತು 20 ರಂದು ನಡೆಯಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಮನವಿ ಮಾಡಿದೆ. ಸೋಮವಾರಪೇಟೆ ಚಲಯ ಅರಣ್ಯಾಧಿಕಾರಿ ಚೇತನ್ ಹೆಚ್.ಪಿ. ಅವರು ನೀಡಿರುವ ಪ್ರಕಟಣೆಯಲ್ಲಿ, ಗರ್ವಾಲೆ, ಸೂರ್ಲಬ್ಬಿ, ಮಂಕ್ಯ ಗ್ರಾಮ ವ್ಯಾಪ್ತಿಯಲ್ಲಿ ಕಾಡಾನೆಗಳು ಬೀಡು ಬಿಟ್ಟು, ಕೃಷಿ ಹಾನಿಗೆ ಕಾರಣವಾಗುತ್ತಿವೆ. ಈ ಹಿನ್ನೆಲೆ ಕಾರ್ಯಾಚರಣೆ ಹಮ್ಮಿಕೊಳ್ಳಲಾಗುತ್ತಿದೆಯೆಂದು ತಿಳಿಸಿದ್ದಾರೆ. ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಲು ಸೂರ್ಲಬ್ಬಿ, ಮಂಕ್ಯ, ತಾಕೇರಿ, ಕಿರಗಂದೂರು, ಕಾಜೂರು ಮಾರ್ಗವಾಗಿ ಕಾರ್ಯಾಚರಣೆ ನಡೆಸಲಾಗುತ್ತದೆ. ಈ ಹಿನ್ನೆಲೆ ಗ್ರಾಮಸ್ಥರು, ತೋಟ ಮಾಲೀಕರು ತಮ್ಮ ತೋಟ ಮತ್ತು ಜಮೀನಿನ ಕೆಲಸ ಕಾರ್ಯಗಳನ್ನು ನಿಲ್ಲಿಸುವಂತೆ ಹಾಗೂ ಶಾಲಾ ಮಕ್ಕಳು, ಗ್ರಾಮೀಣರು ಕಾರ್ಯಾಚರಣೆೆಯ ದಿನಗಳಲ್ಲಿ ಎಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.

Read More

ಮಡಿಕೇರಿ. ಆ.17 : ಕೊಡಗು ಪತ್ರಕರ್ತರ ಸಂಘ ಹಾಗೂ ಕೊಡಗು ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಮಂಜಿನ ನಗರಿ ಛಾಯಾಗ್ರಾಹಕರ ಸಂಘದ  ಆಶ್ರಯದಲ್ಲಿ ಆಗಸ್ಟ್ 19 ರಂದು ಮಡಿಕೇರಿಯ ಲಯನ್ಸ್ ಕ್ಲಬ್ ಹಾಲ್ ನಲ್ಲಿ ವಿಶ್ವ ಛಾಯಾಗ್ರಹಣ ದಿನವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅವರು ಬೆಳಗೆ ೧೦.೦೦ ಗಂಟೆಗೆ ಉದ್ಘಾಟಿಸಲಿದ್ದು, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಎ.ಮುರಳೀಧರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ..ಕೊಡಗು ಪತ್ರಕರ್ತರ ಸಂಘದ ಸಲಹೆಗಾರರಾದ ಬಿ.ಜಿ.ಅನಂತ ಶಯನ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಎಸ್.ಆರ್. ವಸಂತ್, ಜಿಲ್ಲಾ ಛಾಯಾಗ್ರಾಹಕರ ಕ್ಷೇಮಾಭಿವೃದ್ದಿ ಸಂಘದ ರಾಜ್ಯ ಸಮಿತಿ ಸದಸ್ಯ ದೀಪಕ್, ಮಂಜಿನ ನಗರಿ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಪ್ರದೀಪ್ ಮರಗೋಡು, ಹಿಂದೂ ಮಲೆಯಾಳಿ ಸಮಾಜ ಜಿಲ್ಲಾಧ್ಯಕ್ಷ ವಿ.ಎಂ.ವಿಜಯ, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಅಂಬೇಕಲ್ ನವೀನ್ ಕುಶಾಲಪ್ಪ ಅವರುಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ::: ಸನ್ಮಾನ-ಪ್ರತಿಭಾ ಪುರಸ್ಕಾರ ::: ಸಮಾರಂಭದಲ್ಲಿ…

Read More

ಮಡಿಕೇರಿ ಆ.17 : ಆ.29 ರ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಗಸ್ಟ್, 28 ರಂದು ವಿವಿಧ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಆಗಸ್ಟ್, 28 ರಂದು ಬೆಳಗ್ಗೆ 7.15 ಗಂಟೆಗೆ ಗುಡ್ಡ ಗಾಡು ಓಟವನ್ನು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ. 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ 1 ಕಿ.ಮೀ. ಓಟ, ಮುಕ್ತ ಸ್ಪರ್ಧೆ(ಪುರುಷ ಮತ್ತು ಮಹಿಳೆಯರಿಗೆ) 5 ಕಿ.ಮೀ. ಓಟ. ನಂತರ 18 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಡಬಲ್ಸ್ ಕ್ರೀಡೆ, ಮುಕ್ತ ಸ್ಪರ್ಧೆ(ಪುರುಷ ಮತ್ತು ಮಹಿಳೆಯರಿಗೆ) ಸಿಂಗಲ್ಸ್/ ಡಬಲ್ಸ್ ಕ್ರೀಡಾ ಸ್ಪರ್ಧೆ ನಡೆಯಲಿದೆ. ಷಟಲ್ ಬ್ಯಾಡ್ಮಿಂಟನ್ ಆಟಗಾರರು ರಾಕೇಟ್‍ನ್ನು ತಾವೇ ತರಬೇಕು ಹಾಗೂ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರವೇಶ ಶುಲ್ಕ ಇರುವುದಿಲ್ಲ. ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-220986, ಗುಡ್ಡಗಾಡು ಓಟ 9480032712 ಮತ್ತು ಷಟಲ್ ಬ್ಯಾಡ್ಮಿಂಟನ್ ತರಬೇತುದಾರರು…

Read More

ಮಡಿಕೇರಿ ಆ.17 : ಕುಶಾಲನಗರ ತಾಲ್ಲೂಕು ನಂಜರಾಯಪಟ್ಟಣ ವಿವಿದೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘ ವತಿಯಿಂದ ನಬಾರ್ಡ್ ಸಹಯೋಗದಲ್ಲಿ ನಿರ್ಮಿಸಲಾದ ನೂತನ ಬಹುಸೇವಾ ಕೇಂದ್ರದ ಗೋದಾಮು ಮಳಿಗೆಗಳು, ನೂತನ ಕಚೇರಿ, ಆಡಳಿತ ಸಭಾಂಗಣ ಮತ್ತು ನೂತನ ಸಹಕಾರ ಭವನದ ಉದ್ಘಾಟನಾ ಸಮಾರಂಭವು ಆ.20 ರಂದು ಬೆಳಗ್ಗೆ 11 ಗಂಟೆಗೆ ನಂಜರಾಯಪಟ್ಟಣದಲ್ಲಿ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಭೋಸರಾಜು, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಕ್ರೀಡಾ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಕೊಡಂದೇರ ಪಿ.ಬಾಂಡ್ ಗಣಪತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಅಪ್ಪಚಟ್ಟೋಳಂಡ ಮನು ಮುತ್ತಪ್ಪ, ನಂಜರಾಯಪಟ್ಟಣ ಗ್ರಾ.ಪಂ.ಅಧ್ಯಕ್ಷರಾದ ಸಿ.ಎಲ್.ವಿಶ್ವ, ನಬಾರ್ಡ್ ಜಿಲ್ಲಾ…

Read More