ಲೇಖಕ: admin

ನಾಪೋಕ್ಲು ಸೆ.13 : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ನಾಪೋಕ್ಲುವಿನ ಕೆಪಿಎಸ್ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಉಪಾಧ್ಯಕ್ಷ ಹ್ಯಾರಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಮಕ್ಕಳಿಗೆ ಕಿವಿ ಮಾತನ್ನು ಹೇಳಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುಳ ಚಿತ್ರಾಪುರ ಮಾತನಾಡಿ ಶುಭಹಾರೈಸಿದರು. ಈ ಸಂದರ್ಭ ಕೆಪಿಎಸ್ ಶಾಲೆಯ ಮುಖ್ಯ ಶಿಕ್ಷಕಿ ಚಂದ್ರಕಲಾ, ಶಾಲಾ ಆಡಳಿತ ಮಂಡಳಿ ಸದಸ್ಯರು, ವಿವಿಧ ಶಾಲೆಗಳ ಶಿಕ್ಷಕವೃಂದ ಪಾಲ್ಗೊಂಡಿದ್ದರು. ಬಳಿಕ ಕ್ಲಸ್ಟರಿಗೆ ಸಂಬಂಧಿಸಿದ ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಸಲಾಯಿತು . ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಷಣ, ಜಾನಪದ ಗೀತೆ, ನೃತ್ಯ, ಚಿತ್ರಕಲೆ, ಛದ್ಮವೇಷ, ರಸಪ್ರಶ್ನೆ, ಧಾರ್ಮಿಕ ಪಠಣ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಕ್ಲಸ್ಟರಿಗೆ ಸಂಬಂಧಿಸಿದ 18 ಶಾಲೆಗಳ 435 ವಿದ್ಯಾರ್ಥಿಗಳು ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ವರದಿ : ದುಗ್ಗಳ ಸದಾನಂದ   

Read More

ವಿರಾಜಪೇಟೆ ಸೆ.13 : ಕೊಡಗು ಖಾಸಗಿ ಬಸ್ ಕಾರ್ಮಿಕರ ಸಂಘದ 2023-24ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕುಂಬೆಯಂಡ ಸುರೇಶ್ ದೇವಯ್ಯ ಪ್ರಧಾನ ಕಾರ್ಯದರ್ಶಿಯಾಗಿ ಜೂಡಿವಾಜ್ ಮರು ಆಯ್ಕೆಯಾಗಿದ್ದಾರೆ. ಉಪದ್ಯಕ್ಷರಾಗಿ ಪಿ.ಎಂ.ದಿನೇಶ್ ಕಾವೇರಪ್ಪ, ಖಜಾಂಚಿಯಾಗಿ ವಿ.ಎ.ದಿನೇಶ್ ಮತ್ತು ಸಂಘದ ನಿರ್ದೇಶಕರಾಗಿ ಬಿ.ವಿ.ವಿನಂತು, ಎಂ.ಕೆ.ಮಹೇಶ್, ಅಜಯ್, ಬಿ.ಜಿ.ನಾಗೇಶ್, ಸದಾ ಪೂಣಚ್ಚ, ಕುಪ್ಪಂಡ ಪ್ರಸಾದ್ ದೇವಯ್ಯ, ಮತ್ತು ಕೆ.ಎನ್. ಜೀವನ್ ನಾಣಯ್ಯ ಮಾಹಾಸಭೆಯಲ್ಲಿ ಸರ್ವನೂಮತದಿಂದ ಆಯ್ಕೆಗೊಂಡರು. ಕೊಡಗು ಖಾಸಗಿ ಬಸ್ ಕಾರ್ಮಿಕ ಸಂಘ ವಿರಾಜಪೇಟೆ ಸಂಘದ ಕಚೇರಿಯಲ್ಲಿ ನಡೆದ ಮಾಹಸಭೆಯಲ್ಲಿ ಪದಾಧಿಕಾರಿಗಳು ಆಯ್ಕೆ ಮಾಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುರೇಶ್ ದೇವಯ್ಯ, ಬಸ್ಸು ಕಾರ್ಮಿಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬಸ್ಸುಗಳ ನಿರ್ವಹಣೆಗೆ ಕಚ್ಚಾವಸ್ತುಗಳ ಬೆಲೆ ಏರಿಕೆಯಿಂದ ಕಾರ್ಮಿಕರು ಕಷ್ಟಪಡುವಂತಾಗಿದೆ. ಸಂಘದ ಸದಸ್ಯರ ಏಳಿಗೆಗೆ ಸಂಘವು ಸದಾಕಾಲ ಶ್ರಮಿಸುತ್ತದೆ ಎಂದು ಹೇಳಿದರು. ವರದಿ : ಕಿಶೋರ್ ಕುಮಾರ್ ಶೆಟ್ಟಿ 

Read More

ಮಡಿಕೇರಿ ಸೆ.13 :  ಪೊನ್ನಂಪೇಟೆಯ ಸರ್ವದೈವತ ಶಾಲೆಯಲ್ಲಿ ನಡೆದ ವಲಯ ಮಟ್ಟದ ಚೆಸ್ ಪಂದ್ಯಾವಳಿ ಯಲ್ಲಿ ಕಾವೇರಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಬಿ.ಎಸ್. ಸೃಷ್ಟಿ ಭಾಗವಹಿಸಿ ವಿಜೇತರಾಗಿದ್ದಾರೆ. ಬಾಲಕಿಯರ ವಿಭಾಗದ 14ವರ್ಷ ವಯೋಮಿತಿಯ ಕೆಳಪಟ್ಟ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿ ಜಿಲ್ಲಾ ಮಟ್ಟದ ಸ್ಪರ್ಧೆ ಗೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಗೆ ಚೆಸ್ ತರಬೇತಿಯನ್ನು ರಾಷ್ಟ್ರೀಯ ಚೆಸ್ ತರಬೇತುದಾರ ಮಣಿ ನೀಡಿದ್ದಾರೆ. ಶಾಲೆಯ ದೈಹಿಕ ಶಿಕ್ಷಕಿ ಮೋನಿಕಾ ಕಾವೇರಿ ಹಾಗೂ ಲಾವಣ್ಯ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿರುತ್ತಾರೆ. ವಿಜೇತ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ, ಶಾಲಾ ಸಂಯೋಜಕರು, ಶಿಕ್ಷಕ ವೃಂದದವರು ಶ್ಲಾಘಿಸಿ , ಅಭಿನಂದಿಸಿ ,ಹಾರೈಸಿದ್ದಾರೆ.

Read More

ಕುಶಾಲನಗರ ಸೆ.13 :  ಕುಶಾಲನಗರದ “ಎ ಕ್ರಿಯೇಟಿವ್ ಡ್ಯಾನ್ಸ್ ಅಕಾಡಮಿ” ವತಿಯಿಂದ ಫಾತಿಮಾ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿದ್ದ ಚಿತ್ರಕಲೆ ಹಾಗೂ ಕೈಬರಹ ಸ್ಪರ್ಧೆಯ ವಿಜೇತರಿಗೆ ಕೂಡುಮಂಗಳೂರು ಗ್ರಾ.ಪಂ ಸದಸ್ಯ  ಕೆ.ಬಿ.ಶಂಶುದ್ಧೀನ್  ಬಹುಮಾನ ವಿತರಿಸಿದರು. ಚಿತ್ರಕಲೆಯಲ್ಲಿ ಸಬ್ ಜೂನಿಯರ್ ವಿಭಾಗದ ಕೆ.ಎಂ.ಯುಕ್ತಿ ಪ್ರಥಮ, ಬಾನುತೇಜ್ ದ್ವಿತೀಯ, ಕರುಣ್ ತೃತೀಯ, ಜೂನಿಯರ್ ವಿಭಾಗದಲ್ಲಿ ಎಚ್.ಎ.ಸೋನು ಪ್ರಥಮ, ಸೃಜನ್ ದ್ವಿತೀಯ, ಟೆರೆನ್ಸ್ ಡಿಸೋಜ ತೃತೀಯ,  ಸೀನಿಯರ್ ವಿಭಾಗದಲ್ಲಿ ಎ.ಸಿ.ಕನಿಷ್ಕ ಪ್ರಥಮ, ಕೆ.ಎಸ್.ಸುಹಾಸ್ ದ್ವಿತೀಯ, ಅಕ್ಷತ ಹಾಗೂ ಪ್ರಿಯ.ಪಿ.ವಿ ತೃತೀಯ ಸ್ಥಾನವನ್ನು ಪಡೆದುಕೊಂಡರು. ಕೈ ಬರಹ ಸ್ಪರ್ಧೆಯಲ್ಲಿ ಕೆ.ಎನ್.ಶ್ವೇತ ಪ್ರಥಮ, ಹಾರುನ್.ಎಸ್ ದ್ವಿತೀಯ, ಲಾವಣ್ಯ.ಡಿ.ಸಿ ತೃತೀಯ, ಜೂನಿಯರ್ ವಿಭಾಗದಲ್ಲಿ ಉಜ್ವಲ.ವಿ ಪ್ರಥಮ, ಸಿಯೋನ ಎಂಜಲ್ ದ್ವಿತೀಯ, ಜೀವನ್.ಕೆ.ಎಲ್ ತೃತೀಯ, ಸೀನಿಯರ್ ವಿಭಾಗದಲ್ಲಿ ರಂಜಿನಿ.ಎಂ.ಆರ್ ಪ್ರಥಮ, ಕನಿಷ್ಕ.ಎ.ಸಿ ದ್ವಿತೀಯ, ಪ್ರಿಯ.ವೈ.ಪಿ ಹಾಗೂ ಸುಮತಿ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತ ಸ್ಪರ್ಧಾಳುಗಳಿಗೆ ಗ್ರಾ.ಪಂ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ಅವರು ಪ್ರಶಸ್ತಿ ಪತ್ರ ಹಾಗೂ ಬಹುಮಾನವನ್ನು ವಿತರಿಸಿದರು. ನಂತರ ಮಾತನಾಡಿದ ಅವರು, ಸ್ಪರ್ಧೆಯಲ್ಲಿ ಸೋಲು…

Read More

ಮಡಿಕೇರಿ ಸೆ.13 :  ಕುಶಾಲನಗರ ತಾಲ್ಲೂಕಿನ ಚಿಕ್ಕಳುವಾರ ಕೊಡಗು ವಿಶ್ವ-ವಿದ್ಯಾನಿಲಯಕ್ಕೆ ಡಾ.ಮಂತರ್ ಗೌಡ  ಭೇಟಿ ನೀಡಿದರು. ನಂತರ ವಿದ್ಯಾರ್ಥಿ – ವಿದ್ಯಾರ್ಥಿನಿಯರ ಮತ್ತು ವಿವಿ ಯ ಬಗ್ಗೆ ಕುಲಸಚಿವರೊಂದಿಗೆ ಮಾಹಿತಿ ಪಡೆದು ಸರ್ಕಾರದಿಂದ ಹೆಚ್ಚಿನ ಸವಲತ್ತುಗಳನ್ನು ಕಲ್ಪಿಸಿಕೊಡುವ ಬಗ್ಗೆ ಚರ್ಚಿಸಿದರು. ಈ ಸಂದರ್ಭ ಆಡಳಿತ ಮಂಡಳಿ, ಕಾಲೇಜಿನ ಸಿಬ್ಬಂಧಿ ವರ್ಗ ಹಾಜರಿದ್ದರು.

Read More

ಮಡಿಕೇರಿ ಸೆ.12 : ಮಾಲ್ದಾರೆ ಭಾಗದಲ್ಲಿ ವನ್ಯಜೀವಿಗಳ ದಾಳಿ ಎಲ್ಲೆ ಮೀರಿದೆ. ಕಾಡಾನೆಗಳ ಹಿಂಡಿನ ಸಂಚಾರದ ನಡುವೆಯೇ ಹುಲಿ ಉಪಟಳವೂ ಹೆಚ್ಚಾಗಿದ್ದು, ಇಂದು ಹಸುವೊಂದು ಹುಲಿ ದಾಳಿಗೆ ಬಲಿಯಾಗಿದೆ. ಕಾರ್ಮಿಕ ಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಹಾಡಹಗಲೇ ಹುಲಿ ಬಲಿ ಪಡೆದಿದೆ. ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು, ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ ಅವರು ಸ್ಥಳ ಪರಿಶೀಲನೆ ನಡೆಸಿ ಸ್ವಾಮಿ ಅವರಿಂದ ಮಾಹಿತಿ ಪಡೆದರು. ಹುಲಿ ಉಪಟಳದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Read More

ಮಡಿಕೇರಿ ಸೆ.12 : ಕೊಡಗು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕಾಡಾನೆಗಳ ಉಪಟಳ ಕೈಮೀರುತ್ತಿದೆ. ಸಿದ್ದಾಪುರದ ಮಾಲ್ದಾರೆ- ಹುಂಡಿ ಗ್ರಾಮ ವ್ಯಾಪ್ತಿಯಲ್ಲಿ 20 ಕ್ಕೂ ಅಧಿಕ ಸಂಖ್ಯೆಯ ಗಜ ಪರಿವಾರ ಹಾಡಹಗಲೇ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಜೀವಭಯ ಮೂಡಿದೆ. ಕಳೆದ ಒಂದು ವಾರದಿಂದ ತೋಟದಿಂದ ತೋಟಕ್ಕೆ ಸಂಚರಿಸುತ್ತಿರುವ ಕಾಡಾನೆಗಳ ಹಿಂಡು ಅಪಾರ ನಷ್ಟ ಉಂಟು ಮಾಡಿವೆ. ಮೂರಕ್ಕೂ ಹೆಚ್ಚು ಮರಿಗಳ ಸಹಿತ ಮುಖ್ಯ ರಸ್ತೆಯಲ್ಲಿ ಸಂಚರಿಸುತ್ತಿರುವ ಗಜ ಪರಿವಾರದಿಂದ ಕಾರ್ಮಿಕರು ತೋಟಗಳಿಗೆ ಕೆಲಸಕ್ಕೆ ಬರುತ್ತಿಲ್ಲ. ವಿದ್ಯಾರ್ಥಿಗಳು ಶಾಲೆಗಳಿಗೆ ತೆರಳಲು ಧೈರ್ಯ ತೋರುತ್ತಿಲ್ಲ. ವಾಹನ ಚಾಲಕರು ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಸಂಚರಿಸಬೇಕಾಗಿದೆ. ಮರಿಗಳು ಜೊತೆಯಲ್ಲೇ ಇರುವುದರಿಂದ ಮನುಷ್ಯರ ಮೇಲೆ ದಿಢೀರ್ ದಾಳಿ ನಡೆಸುವ ಸಾಧ್ಯತೆಗಳೇ ಹೆಚ್ಚಾಗಿದೆ. ಅರಣ್ಯ ಸಿಬ್ಬಂದಿಗಳು ಆನೆಗಳನ್ನು ಕಾಡಿಗಟ್ಟಿದರೂ ಮರಳಿ ಬಂದು ತೋಟಗಳಲ್ಲಿ ನೆಲೆ ನಿಲ್ಲುತ್ತಿವೆ. ಪರಿಸ್ಥಿತಿ ಕೈಮೀರುವ ಹಂತದಲ್ಲಿದ್ದು, ಅರಣ್ಯ ಇಲಾಖೆ ಕೂಡ ಅಸಹಾಯಕವಾಗಿದೆ. ಕಾಡಾನೆಗಳ ದಾಳಿಯನ್ನು ತಡೆಯಲು ಸರ್ಕಾರ ಶಾಶ್ವತ ಪರಿಹಾರ ಸೂಚಿಸಬೇಕೆಂದು ಕಳೆದ ಒಂದು ದಶಕದಿಂದ ಗ್ರಾಮಸ್ಥರು ಒತ್ತಾಯಿಸುತ್ತಲೇ…

Read More

ಮಡಿಕೇರಿ ಸೆ.12 : ವಿರಾಜಪೇಟೆ ತಾಲ್ಲೂಕು ಕೊಡಗು ಮಾಜಿ ಸೈನಿಕರ ಸಹಕಾರ ಸಂಘ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಸೆ.20 ರಂದು ಬೆಳಗ್ಗೆ 10.30 ಗಂಟೆಗೆ ಚಪ್ಪಂಡ ಹರೀಶ್ ಉತ್ತಯ್ಯ  ಅಧ್ಯಕ್ಷತೆಯಲ್ಲಿ ‘ಅಮರ ಜವಾನ ಸ್ಮಾರಕ’ದಲ್ಲಿ ನಡೆಯಲಿದೆ. ಹಾಗೆಯೇ ಯೋಧರ ಸ್ಮಾರಕ ಸ್ಥಂಭದ ಆವರಣದಲ್ಲಿ ಜಿಲ್ಲಾ ಸಶಸ್ತ್ರ ಪೊಲೀಸ್ ತುಕಡಿಯ ಗೌರವದೊಂದಿಗೆ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ದೇಶ ರಕ್ಷಣೆಗಾಗಿ ಹುತಾತ್ಮರಾದ ಯೋಧರಿಗೆ ಹಾಗೂ ದಿವಂಗತ ಮಾಜಿ ಯೋಧರಿಗೆ ಶ್ರದ್ಧಾಂಜಲಿಯನ್ನು ಸಂಘದ ವತಿಯಿಂದ ಅರ್ಪಿಸಲಾಗುವುದು. ಕರ್ನಲ್ ಮಂಡೆಟಿರ ಅವಿನ್ ಉತ್ತಯ್ಯ(ಸೇನಾ ಮೆಡಲ್), ಕರ್ನಲ್ ಮಾಚಿಮಂಡ ಡಿ.ಮುತ್ತಪ್ಪ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ತಹಶೀಲ್ದಾರರಾದ ಎಚ್.ಎನ್.ರಾಮಚಂದ್ರ, ವಿರಾಜಪೇಟೆ ಡಿವೈಎಸ್‍ಪಿ ಆರ್.ಮೋಹನ್ ಕುಮಾರ್, ವಿರಾಜಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಚಂದ್ರಕುಮಾರ್, ಕೊಂಗಂಡ ಬೋಜಮ್ಮ ಮುತ್ತಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಕೊಡ್ಲಿಪೇಟೆ ಸೆ.12 : 2022.23 ನೇ ಸಂಘವು ಉತ್ತಮವಾಗಿ ಕಾರ್ಯ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ರೂ. 61 ಲಕ್ಷ ಲಾಭಗಳಿಸಿ ಮುನ್ನಡೆಯುತ್ತಿದ್ದು,ಸಾಲ ಪಡೆದ ಸಂಘದ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಕೊಡ್ಲಿಪೇಟೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಕೆ.ಪಿ.ಪ್ರಸನ್ನ ಮನವಿ ಮಾಡಿದರು. ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 136.98 ಲಕ್ಷ ಗೊಬ್ಬರ ಮತ್ತು ನಿಯಂತ್ರಿತ ದಾಸ್ತಾನು ಮಾರಾಟ ಮಾಡಲಾಗಿದೆ. ಎಲ್ಲಾ ಸದಸ್ಯರು ತಮ್ಮದೇ ಸಂಸ್ಥೆಯಲ್ಲಿ ವ್ಯವಹರಿಸಿ ಸಂಘದ ಬೆಳವಣಿಗೆಗೆ ಒತ್ತು ನೀಡಬೇಕು ಎಂದರು. ಸಂಘದಿಂದ ಇ ಸ್ಟಾಂಪ್ ವಿತರಿಸಲು ಪರವಾನಗಿ ಪಡೆದು ಇ ಸ್ಟಾಂಪ್ ವಿತರಿಸುತ್ತಿದ್ದು,ಇದರ ಪ್ರಯೋಜನವನ್ನು ಸದಸ್ಯರು ಪಡೆದುಕೊಳ್ಳಬೇಕು ಎಂದರು. ಸಭೆಯ ಆರಂಭದಲ್ಲಿ ನಕಲಿ ಚಿನ್ನ(ರೋಲ್ ಗೋಲ್ಡ್) ಅಡವಿಟ್ಟು ಚಿನ್ನಾಭರಣ ಸಾಲ ಪಡೆದು ಸಂಘಕ್ಕೆ ವಂಚನೆ ಮಾಡಿದ ಪ್ರಕರಣ ಮಹಾಸಭೆಯಲ್ಲಿ ತೀವ್ರ ಚರ್ಚೆಗೆ…

Read More

ಮಡಿಕೇರಿ ಸೆ.12 : ಭಾರತೀಯ ಅಂಚೆ ಇಲಾಖೆಯು 6 ನೇ ತರಗತಿಯಿಂದ 9 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಶ್ (ಸ್ಕಾಲರ್‍ಶಿಪ್ ಫಾರ್ ಪ್ರಮೋಷನ್ ಆಫ್ ಆಟಿಟ್ಯೂಡ್ ಅಂಡ್ ರಿಸರ್ಚ್ ಇನ್ ಸ್ಟ್ಯಾಂಪ್ ಹಾಬಿ) ಸ್ಟ್ಯಾಂಪ್‍ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿ ವೇತನ. ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹ ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ. ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆ ಅಡಿ 2022-23 ಶೈಕ್ಷಣಿಕ ವರ್ಷದಲ್ಲಿ ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ ಫಿಲಾಟೆಲಿಕ್ ಕ್ಲಬ್‍ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.…

Read More