ಲೇಖಕ: admin

ಮಡಿಕೇರಿ ಸೆ.12 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ 2022-23 ನೇ ಸಾಲಿನ ಹಾಗೂ 56ನೇ ವಾರ್ಷಿಕ ಮಹಾಸಭೆಯು ಯೂನಿಯನ್ ಅಧ್ಯಕ್ಷ ಎ.ಕೆ.ಮನುಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ಯೂನಿಯನ್ ಸಭಾಂಗಣದಲ್ಲಿ ನಡೆಯಿತು. ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಮಾತನಾಡಿ, ಸಹಕಾರ ಸಂಘಗಳ ಸದಸ್ಯರು ಸಕ್ರೀಯವಾಗಿ ಸಂಘದ ಕಾರ್ಯ ಚಟುವಟಿಕೆಗಳಲ್ಲಿ, ವಿಶೇಷವಾಗಿ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಬೇಕು. ಆಗ ಮಾನದಂಡಗಳಿಗೆ ಅನುಸಾರವಾಗಿ ಚುನಾವಣೆ ಹಕ್ಕು ಹಾಗೂ ಸದಸ್ಯತ್ವ ಅರ್ಹತೆಗಳು ಮುಂದುವರೆಯುತ್ತವೆ. ಯೂನಿಯನ್ ಪ್ರಮುಖ ಉದ್ದೇಶವಾದ ಶಿಕ್ಷಣ, ತರಬೇತಿ, ಪ್ರಚಾರ ಕಾರ್ಯಕ್ರಮಗಳಲ್ಲಿ ಸದಸ್ಯ ಸಂಘಗಳ ಪ್ರತಿನಿಧಿಗಳು ಕಡ್ಡಾಯವಾಗಿ ಹಾಜರಾಗಿ ಮಾಹಿತಿಯನ್ನು ಸದಸ್ಯರಿಗೆ ತಲುಪುವ ಕೆಲಸ ಮಾಡಬೇಕು. ಸದಸ್ಯ ಸಂಘಗಳ ಕೋರಿಕೆ ಅನ್ವಯ ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ವಿವಿಧ ರೀತಿಯ ತರಬೇತಿಗಳನ್ನು, ಕಾರ್ಯಾಗಾರ ಹಮ್ಮಿಕೊಂಡು ಸಂಘಗಳ ಅಭಿವೃದ್ಧಿಗೆ ಪೂರಕವಾಗುವ ನಿಟ್ಟಿನಲ್ಲಿ ಪ್ರಯತ್ನಿಸಬಹುದಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ಕಾಫಿಗೆ ಉಚಿತ 10 ಎಚ್.ಪಿ. ಉಚಿತ ವಿದ್ಯುತ್ ಪೂರೈಸಬೇಕೆಂದು ಸರ್ಕಾರವನ್ನು ಕೋರುವಂತೆ ಈ…

Read More

ಮಡಿಕೇರಿ ಸೆ.12 : “ವಿದ್ಯುತ್ ವಿತರಣಾ ಕೇಂದ್ರ ಮತ್ತು ಮಾರ್ಗದಲ್ಲಿ ತುರ್ತು ನಿರ್ವಹಣೆ ಮತ್ತು ದುರಸ್ತಿ ಕಾರ್ಯ ನಿರ್ವಹಿಸಬೇಕಿರುವುದರಿಂದ ಕ.ವಿ.ಪ್ರ.ನಿ.ನಿ. ಅವರ ಕೋರಿಕೆಯಂತೆ ಸೆಪ್ಟೆಂಬರ್, 13 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ 220 ಕೆ.ವಿ ಕುಶಾಲನಗರ, 33/11ಕೆವಿ ಸೋಮವಾರಪೇಟೆ, 66/11ಕೆವಿ ಆಲೂರು ಸಿದ್ದಾಪುರ, 66/11ಕೆವಿ ಸುಂಟಿಕೊಪ್ಪ, 66/11ಕೆವಿ ಮಡಿಕೇರಿ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಕುಶಾಲನಗರ, ಕೂಡಿಗೆ, ನಂಜರಾಯಪಟ್ಟಣ, ಸುಂಟಿಕೊಪ್ಪ, ಚೆಟ್ಟಳ್ಳಿ, ಸೋಮವಾರಪೇಟೆ, ಶಾಂತಳ್ಳಿ, ಕುಮಾರಹಳ್ಳಿ, ಗೌಡಳ್ಳಿ, ಹೆಗ್ಗಡಮನೆ, ಅಬ್ಬೂರುಕಟ್ಟೆ, ಐಗೂರು, ಹೊಸಗುತ್ತಿ, ಗಣಗೂರು ಗೋಣಿಮರೂರು, ಆಲೂರು ಸಿದ್ದಾಪುರ, ಮಾಲಂಬಿ, ಸಿದ್ದಲಿಂಗಪುರ, ಮಡಿಕೇರಿ ಪಟ್ಟಣ, ಬೋಯಿಕೇರಿ, ಗಾಳಿಬೀಡು, ಕುಂಡಾಮೇಸ್ತ್ರಿ, ಮೇಕೇರಿ, ಕಡಗದಾಳು, ಸಂಪಾಜೆ, ಭಾಗಮಂಡಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್  ಕೋರಿದ್ದಾರೆ.

Read More

ಮಡಿಕೇರಿ ಸೆ.12 : ಹೊಸ್ಕೇರಿ ಗ್ರಾಮ ವ್ಯಾಪ್ತಿಯಲ್ಲಿರುವ ದೇವರಕಾಡಿನಲ್ಲಿ ವಿದ್ಯುತ್ ಸಬ್ ಸ್ಟೇಷನ್ ಸ್ಥಾಪಿಸಲು ಚೆಸ್ಕಾಂ ಯೋಜನೆ ರೂಪಿಸಿದ್ದು, ಇದನ್ನು ತೀವ್ರವಾಗಿ ವಿರೋಧಿಸುವುದಾಗಿ ಕೊಡಗು ರಕ್ಷಣಾ ವೇದಿಕೆಯ ಅಧ್ಯಕ್ಷ ಅಚ್ಚಂಡೀರ ಪವನ್ ಪೆಮ್ಮಯ್ಯ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಈಗಾಗಲೇ ಹೊಸ್ಕೇರಿ ಮತ್ತು ಮರಗೋಡು ಗ್ರಾಮಸ್ಥರು ಯೋಜನೆಯನ್ನು ವಿರೋಧಿಸಿ ಶಾಸಕರುಗಳು, ಜಿಲ್ಲಾಡಳಿತ, ಅರಣ್ಯ ಇಲಾಖೆ, ಚೆಸ್ಕಾಂ ಸೇರಿದಂತೆ ಸಂಬಂಧಿಸಿದ ಎಲ್ಲಾ ಇಲಾಖಾ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಆದರೆ ಸೂಕ್ತ ಉತ್ತರ ದೊರೆಯದೆ ಇರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ ಎಂದು ಗಮನ ಸೆಳೆದಿದ್ದಾರೆ. ತಲೆತಲಾಂತರಗಳಿಂದ ಗ್ರಾಮಸ್ಥರು ಪ್ರಕೃತಿಯನ್ನೇ ದೇವರೆಂದು ಭಾವಿಸಿ ಇಲ್ಲಿನ ಅರಣ್ಯವನ್ನು ನಾಶ ಮಾಡದೆ ಉಳಿಸಿಕೊಂಡು ಬಂದಿದ್ದಾರೆ. ಗ್ರಾಮ ದೇವತೆಗಳಾದ ಶ್ರೀಚಾಮುಂಡೇಶ್ವರಿ, ಶ್ರೀಅಯ್ಯಪ್ಪ ದೇವರು ಹಾಗೂ ನಾಗದೇವರ ಸಾನಿಧ್ಯ ಇಲ್ಲಿದೆ. ಸಬ್ ಸ್ಟೇಷನ್ ಯೋಜನೆ ಅನುಷ್ಠಾನದಿಂದ ದೇವರಕಾಡು ನಾಶವಾಗುವುದಲ್ಲದೆ ಪರಿಸರ ಮಾಲಿನ್ಯವಾಗಲಿದೆ ಮತ್ತು ಸುತ್ತಮುತ್ತಲ ಗ್ರಾಮಸ್ಥರ ಧಾರ್ಮಿಕ ಭಾವನೆಗಳಿಗೆ ದಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ದೇವರಕಾಡು ಮತ್ತು ಗ್ರಾಮಸ್ಥರ ಪರವಾಗಿ…

Read More

ಮಡಿಕೇರಿ ಸೆ.12 :  ಮೂರ್ನಾಡು ಸಮುದಾಯ ಭವನದಲ್ಲಿ ಪೋಷಣ್ ಮಾಸಾಚರಣೆ  ನಡೆಯಿತು. ಮೂರ್ನಾಡು ವೃತ್ತಕ್ಕೆ ಸಂಬಂಧಿಸಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪಾಲ್ಗೊಂಡ ಫಲಾನುಭವಿಗಳು ವಿವಿಧ ರೀತಿಯ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಿದರು. ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಸವಿತ ಕೀರ್ತನ್  ಪೋಷಣ್ ಮಾಸಾಚರಣೆಯ ಉದ್ದೇಶ, ಪೌಷ್ಟಿಕ ಆಹಾರದ ಮಹತ್ವ, ಮಾತೃವಂದನ ಸಪ್ತಾಹ, ಆಹಾರದಲ್ಲಿರುವ ಔಷಧೀಯ ಗುಣಗಳು, ಪೌಷ್ಟಿಕತೆಯ ಬಗ್ಗೆ ಮಾಹಿತಿ ನೀಡಿದರು.

Read More

ಕಡಂಗ  ಸೆ.12 :    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೀಡುತ್ತಿರುವ 2023-24 ನೇ ಸಾಲಿನ ಎರಡನೇ ಜೊತೆ ಸಮವಸ್ತ್ರದ ಬಟ್ಟೆ, ಶೂ ಹಾಗೂ ಸಾಕ್ಸ್ ಗಳ್ಳನ್ನು ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ  ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ನರಿಯಂದಡ ಗ್ರಾ.ಪಂ  ಅಧ್ಯಕ್ಷ ಪೆಮ್ಮಂಡ ಕೌಶಿ ಕಾವೇರಮ್ಮ,  ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ, ಮುಖ್ಯ ಶಿಕ್ಷಕಿ ಶಾಂತಿ ಕುಮಾರಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಫಾತಿಮಾ, ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾ.ಪಂ ಸದಸ್ಯರಾದ ಸುಬೀರ್, ರಾಣಿ ಗಣಪತಿ, ವಾಣಿ ಕವಿತಾ ,ಮಮ್ಮದ್, ಶಿಕ್ಷಕ ವೃಂದದವರು, ಗ್ರಾಮಸ್ಥರು ಹಾಜರಿದ್ದರು. ವರದಿ :  ನೌಫಲ್ 

Read More

ಮಡಿಕೇರಿ ಸೆ.12 : ಸಮತೋಲನ ಮತ್ತು ಶುದ್ಧ ಆಹಾರ ಪದ್ಧತಿಯನ್ನು ಪಾಲಿಸುವ ಮೂಲಕ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಸಲಹೆ ನೀಡಿದ್ದಾರೆ. ಕುಶಾಲನಗರದ ಹಿಲಾಲ್ ಮದರಸ ಸಭಾಂಗಣದಲ್ಲಿ ಮಡಿಕೇರಿಯ ಬೀಬಿ ಫಾತಿಮಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೈಸೂರಿನ ಅಲ್ ಅನ್ಸಾರ್ ಆಸ್ಪತ್ರೆ, ವಿರಾಜಪೇಟೆಯ ಕೊಡಗು ದಂತ ವೈದ್ಯ ಮಹಾವಿದ್ಯಾನಿಲಯ ಮತ್ತು ಮಂಗಳೂರಿನ ಯೇನಪೊಯ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳ ತಜ್ಞ ವೈದರುಗಳ ಸಹಯೋಗದೊಂದಿಗೆ ನಡೆದ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಒತ್ತಡದ ಜೀವನದಿಂದ ಆರೋಗ್ಯದಲ್ಲಿ ಏರುಪೇರಾಗುವುದು ಸಹಜವಾಗಿದ್ದು, ವೈದ್ಯರ ಸಲಹೆ ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು. ಸೇವೆಯೇ ವೈದ್ಯರ ಪ್ರಮುಖ ಗುರಿಯಾಗಿದೆ, ವೈದ್ಯರು ಹಾಗೂ ರೋಗಿಗಳಿಗೆ ತಾಳ್ಮೆ ಮುಖ್ಯವಾಗಿದೆ. ಯಾವುದೇ ಸಂದರ್ಭ ಎದುರಾದರೂ ವೈದ್ಯರ ಮೇಲೆ ಹಲ್ಲೆ ಮಾಡುವ ಮನೋಭಾವನೆ ಬರಬಾರದು ಎಂದರು. ಟ್ರಸ್ಟ್ ಅಧ್ಯಕ್ಷ ಅಫ್ರೋಜ್ ಮಹಮ್ಮದ್ ಖಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ…

Read More

ಮಡಿಕೇರಿ ಸೆ.12 : ರಾಜ್ಯ ಸರ್ಕಾರ ಕೊಡಗು ವಿಶ್ವವಿದ್ಯಾನಿಲಯ ಸೇರಿದಂತೆ ನೂತನ ಎಂಟು ವಿವಿಗಳನ್ನು ರದ್ದುಗೊಳಿಸುವ ಚಿಂತನೆ ಮಾಡಿದೆ ಎಂದು ಆರೋಪಿಸಿ ಮತ್ತು ಬಿಜೆಪಿ ಸರ್ಕಾರದ ಅವಧಿಯ ರೈತ ನೀತಿಯನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿದರು. ಗಣಪತಿ ದೇವಾಲಯ ಮುಂಭಾಗದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಪ್ರಸಕ್ತ ರಾಜ್ಯ ಸರ್ಕಾರ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ರೈತಪರವಾಗಿ ಜಾರಿಗೆ ತಂದಿದ್ದ ರೈತ ಸನ್ಮಾನ ನಿಧಿ, ರೈತ ವಿದ್ಯಾರ್ಥಿಗಳ ವಿದ್ಯಾನಿಧಿ ಸೇರಿದಂತೆ ಕೃಷಿ ಕಾಯಿದೆ ಮತ್ತಿತರ ಯೋಜನೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸುತ್ತಿದ್ದು, ರೈತಾಪಿ ವರ್ಗಕ್ಕೆ ಕಷ್ಟ ಎದುರಾಗಿದೆ. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಯಾಗುತ್ತಿಲ್ಲವೆಂದು ಆರೋಪಿಸಿದರು.…

Read More

ಮಡಿಕೇರಿ ಸೆ.12 :  ಕೂಡಿಗೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜೇನುಕಲ್ಲುಬೆಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಾನ್ಯ ಗೌಡ ಎಂಬ ವಿದ್ಯಾರ್ಥಿನಿ ಛದ್ಮವೇಷ ಸ್ಪರ್ಧೆಯಲ್ಲಿ  ಪರಿಸರ ಸ್ನೇಹಿ ಕಾಗದ ಬಳಸಿ ವೇಷಧಾರಣೆ ಮಾಡಿ  ಗಮನ ಸೆಳೆದರು.  

Read More

ಮಡಿಕೇರಿ ಸೆ.12 :  2023-24 ನೇ ಸಾಲಿನ ಕರ್ನಾಟಕ ಸರ್ಕಾರದ ಆಯವ್ಯಯದಲ್ಲಿ ಮಂಡನೆಯಾಗಿರುವ “ಸಸ್ಯ ಶ್ಯಾಮಲಾ” ಕಾರ್ಯಕ್ರಮವನ್ನು ಕುಶಾಲನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಸಕ ಡಾ. ಮಂತರ್ ಗೌಡ  ಗಿಡನೆಡುವ ಮೂಲಕ ಉದ್ಘಾಟಿಸಿದರು. ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು, ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ  ಕಾರ್ಯಕ್ರಮವನ್ನು ಹಲವಾರು ಗಿಡಗಳನ್ನು ನೆಟ್ಟು ನೀರನ್ನು ಹರಿಸಿ ಉದ್ಘಾಟಿಸಿ ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಇಂದಿನ ವಾತಾವರಣದಲ್ಲಿ ಜಾಗತಿಕ ತಾಪಮಾನ ಹೆಚ್ಚುವಿಕೆ, ಅನಾವೃಷ್ಟಿ, ಅರಣ್ಯ ನಾಶ ಮುಂತಾದ ಪ್ರಾಕೃತಿಕ ವಿಕೋಪಗಳು ಆಗದಿರುವುದಕ್ಕೆ ಪ್ರತಿಯೊಬ್ಬರೂ ಕನಿಷ್ಠ ವರ್ಷಕ್ಕೊಂದಾದರೂ ಗಿಡವನ್ನು ನೆಟ್ಟು ಪೋಷಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಶಾಲಾ ಶಿಕ್ಷಣದಿಂದಲೇ ಗಿಡ ನೆಡಲು ಮತ್ತು ಪೋಷಿಸುವಲ್ಲಿ ಪ್ರವೃತ್ತವಾಗಬೇಕೆಂದರು. ಹಸಿರಿನಿಂದ ಕಂಗೊಳಿಸುವ ಶಾಲೆಯ ವಾತಾವರಣವು ಕಲಿಕೆಗೆ ಮತ್ತು ಸಾಧನೆಗೆ ಹೆಚ್ಚು ಪ್ರೇರಣೆ ನೀಡುತ್ತದೆ, ಎಲ್ಲರೂ ಒಗ್ಗಟ್ಟಾದರೆ, ಒಗ್ಗಟ್ಟಾಗಿ ಪರಿಸರವನ್ನು ಬೆಳೆಸಿದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಗಾಳಿ, ಮಳೆ ಮತ್ತು…

Read More

ಮಡಿಕೇರಿ ಸೆ.12 : ಕೇರಳದ ಕಣ್ಣೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಕಣ್ಣೂರ್ ಯೂನಿವರ್ಸಿಟಿ ಸಿಂಥೆಟಿಕ್ ಸ್ಟೇಡಿಯಂ ಮಾಗಟು ಪರಂಬದಲ್ಲಿ ನಡೆದ 2ನೇ ಕೇರಳ ರಾಜ್ಯ ಮಾಸ್ಟರ್ಸ್ ಮಾನ್ಸೂನ್ ಓಪನ್ ಅಥ್ಲೆಟಿಕ್ ಮೀಟ್-2023 ರ 55+ ಸ್ಪರ್ಧೆಯಲ್ಲಿ ಮಡಿಕೇರಿಯ ಬಿ.ವಸಂತಿ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. 400ಮೀ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ, 200ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, 100ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಹಾಗೂ ರಿಲೇ ಯಲ್ಲಿ ಚಿನ್ನದ ಪದಕ ಗೆದ್ದು ಕೊಡಗಿಗೆ ಕೀರ್ತಿ ತಂದಿದ್ದಾರೆ. ವಸಂತಿ ಅವರು ಮಡಿಕೇರಿ ಆಸ್ಪತ್ರೆಯಿಂದ ವರ್ಗಾವಣೆಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನರ್ಸಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Read More