ಲೇಖಕ: admin

ಮಡಿಕೇರಿ ಆ.17 : ಮನೆಯ ಸಾಕು ನಾಯಿಗಳು ಯಾವುದೇ ವ್ಯಕ್ತಿಗಳ ಮೇಲೆ ದಾಳಿ ಮಾಡಿರುವ ಘಟನೆ ಕಂಡು ಬಂದಲ್ಲಿ ಸಾಕು ನಾಯಿ ಮಾಲೀಕರ ಮೇಲೆ Section:- 289 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ಹಾಗೂ 6 ತಿಂಗಳ ಜೈಲು ವಾಸ ಮತ್ತು ದಂಡ ವಿಧಿಸಲಾಗುವುದು ಎಂದು ಕೊಡಗು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಾಕು ನಾಯಿ ದಾಳಿ ಮಾಡಿರುವ ಘಟನೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ತುರ್ತು ಸಹಾಯವಾಣಿ 112 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಾಹಿತಿ ಒದಗಿಸುವವರ ವಿವರ ಬಹಿರಂಗಪಡಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ::: ಪ್ರಕರಣ ದಾಖಲು ::: ಈ ನಡುವೆ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೊಣಂಜಗೇರಿ ಪಾರಾಣೆ ಗ್ರಾಮದಲ್ಲಿ ಆರೋಗ್ಯ ಅಧಿಕಾರಿ ಮೇಲೆ ನಡೆದ ಸಾಕುನಾಯಿ ದಾಳಿ ಪ್ರಕರಣಕ್ಕೆ ಸಂಬoಧಿಸಿದoತೆ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಕುಶಾಲನಗರ ಆ.17  :   ಹಿಂದೂ ಸಮಾಜ ಜಾಗೃತವಾದಲ್ಲಿ ಅಖಂಡ ಭಾರತ ನಿರ್ಮಾಣ ಸಾಧ್ಯ ಎಂದು ಕರ್ನಾಟಕ ದಕ್ಷಿಣ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ್ಯ ಸಹ ಸಂಪರ್ಕ ಪ್ರಮುಖ ಯಾದವ್ ಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರದಲ್ಲಿ ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಜನಜಾಗೃತಿಗಾಗಿ ನಡೆದ ಅಖಂಡ ಭಾರತ ಸಂಕಲ್ಪ ದಿನ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿ, ಭಾರತದ ಸ್ವಾತಂತ್ರ್ಯ ನಂತರ ಕೆಲವು ನಾಯಕರ ತುಷ್ಟಿಕರಣದ ನಿಲುವುಗಳು ದೇಶದ ವಿಭಜನೆಗೆ ಕಾರಣವಾಯಿತು. ಆ ದಿನಗಳಲ್ಲಿ ಹಲವರು ಪ್ರಾಣ, ಮನೆ ಕಳೆದುಕೊಳ್ಳುವಂತಾಯಿತು. ಆ ಕರಾಳ ದಿನಗಳು ಇನ್ನೂ ಮಾಸಿಲ್ಲ ನೆನಪು ಮರುಕಳಿಸುತ್ತಿದೆ, ದೇಶದ ಹಿತದ ಬಗ್ಗೆ ಚಿಂತನೆಯ ಕೊರತೆ ಇತ್ತು ಎಂದು ಹೇಳಿದರು. ಭಾರತದ ಮೌಲ್ಯಯುತ ಗುಣ ಸಂಸ್ಕೃತಿ ಮುನ್ನೆಲೆಗೆ ಬಂದಿದೆ, ಜಗತ್ತಿಗೆ ಭಾರತ ಮಾರ್ಗದರ್ಶನ ನೀಡುತ್ತಿದೆ. ನಾವುಗಳು ಸಂಘಟಿತರಾಗಿ ಜಾಗೃತರಾದಲ್ಲಿ ಅಖಂಡ ಭಾರತ ನಿರ್ಮಾಣ ಸಾಧ್ಯ ಎಂದ ಅವರು ಜಗತ್ತಿಗೆ ಭಾರತ ವಿಶ್ವಗುರು ಆಗುವ ದಿನಗಳು ಸನಿಹದಲ್ಲಿದೆ ಎಂದರು. ಸ್ವಾತಂತ್ರ್ಯ…

Read More

ಕಡಂಗ ಆ.17 :    ಬದ್ರಿಯಾ ಜುಮಾ ಮಸೀದಿ ಎಸ್ ಎಸ್ ಎಫ್, ಎಸ್ ವೈ ಎಸ್ ಸಂಯುಕ್ತ ದಲ್ಲಿ ಬದ್ರಿಯಾ ಮದರಸರದಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು . ಧ್ವಜಾರಣವನ್ನು ಸಂಸ್ಥೆಯ ಅಧ್ಯಕ್ಷ ಅಬ್ದುಲ್ ರಹಮಾನ್ ಅರಫಾರ್ ರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸ್ವಾತಂತ್ರೋತ್ಸವದ ಮಹತ್ವವನ್ನು ಸಂಕ್ಷಿಪ್ತವಾಗಿ ಗಣ್ಯ ವ್ಯಕ್ತಿಗಳು ವಿವರಿಸಿದರು. ಪ್ರಾರ್ಥನೆ ಯನ್ನು ಇಸ್ಮಾಯಿಲ್ ಲತೀಫಿ ನಿರ್ವಹಿಸಿದರು. ಜಮಾತ್ ಆಡಳಿತ ಮಂಡಳಿ ಸದಸ್ಯರು, ಎಸ್ ಎಸ್ ಎಫ್ ಮತ್ತು ಎಸ್ ವೈ ಎಸ್ ಸದಸ್ಯರು ಮತ್ತು ಸಂಸ್ಥೆಯ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ವರದಿ : ನೌಫಲ್  

Read More

ಸಂಪಾಜೆ  ಆ.17 : ಕಲ್ಲುಗುಂಡಿ  ಹಯಾತುಲ್ ಇಸ್ಲಾಂ ಮದ್ರಸಾದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಲ್ಲುಗುಂಡಿ ಜಮಾಅತ್ ಅಧ್ಯಕ್ಷ  ಅಬ್ಬಾಸ್ ಸಂಟ್ಯಾರ್ ಧ್ವಜಾರೋಹಣ ನಡೆಸಿ ಶುಭ ಹಾರೈಸಿದರು. ಸ್ಥಳೀಯ ಖತೀಬ್ ಅಹ್ಮದ್ ನ‌ಈಂ ಫೈಝಿ ಸ್ವಾತಂತ್ರ್ಯ ದಿನದ ಸಂದೇಶ ಭಾಷಣ ನಡೆಸಿ, ಭಾರತವು ವಿವಿಧತೆಯಲ್ಲಿ ಏಕತೆಯೆಂಬ ಆಶಯವನ್ನು ಜಗತ್ತಿಗೆ ಸಾಧಿಸಿ ತೋರಿಸಿದ ಶ್ರೇಷ್ಠ ದೇಶವಾಗಿದೆ . ಎಲ್ಲರೂ ಒಂದಾಗಿ ಗಳಿಸಿಕೊಂಡ ದೇಶದ ಸ್ವಾತಂತ್ರ್ಯವನ್ನು ಎಲ್ಲರೂ ಒಂದಾಗಿ ಉಳಿಸಿಕೊಳ್ಳುವ ಪ್ರಯತ್ನವನ್ನು ಇಂದು ಅನಿವಾರ್ಯವಾಗಿ ಮಾಡಬೇಕಿದೆ ಎಂದರು. ಈ ದೇಶದ ವೈವಿಧ್ಯತೆ ಮತ್ತು ಸಾಮರಸ್ಯದ ಪರಂಪರೆಯನ್ನು ಕಾಪಾಡಲು  ನಾವು ಪ್ರತಿಜ್ಞೆಗೆಯ್ಯಬೇಕು ಎಂದು ಕರೆ ನೀಡಿದರು. ಹಯಾತುಲ್ ಇಸ್ಲಾಂ ಮದ್ರಸಾ ಸದರ್ ಮುಅಲ್ಲಿಂ ಇಬ್ರಾಹಿಂ ಫೈಝಿ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸಂಪಾಜೆ ಗ್ರಾ.ಪಂ ಅಧ್ಯಕ್ಷ ಜಿ.ಕೆ. ಹಮೀದ್ ಶುಭ ಹಾರೈಸಿದರು. ಮದ್ರಸಾ ಅಧ್ಯಾಪಕ ಸಾಜಿದ್ ಅಝ್‌ಹರಿ ಪೇರಡ್ಕ ಸ್ವಾತಂತ್ರ್ಯ ದಿನದ ಪ್ರತಿಜ್ಞಾವಿಧಿ ಭೋಧಿಸಿದರು . ಸ್ವಾತಂತ್ರ್ಯೋತ್ಸವದ ಭಾಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಲಾಯಿತು.…

Read More

ಮಡಿಕೇರಿ ಆ.17 : ಸಾಧಿಕ್ ಆರ್ಟ್ಸ್ ಲಿಂಕ್ಸ್ ವತಿಯಿಂದ ಸ್ಟೂಡೆಂಟ್ ಕಲಾ ಉತ್ಸವ 2023 ಶೀರ್ಷಿಕೆಯಡಿಯಲ್ಲಿ ವಿರಾಜಪೇಟೆಯ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. 6ನೇ ತರಗತಿ ವಿದಾರ್ಥಿ ಜನನಿ ದ್ವಿತೀಯ ಸ್ಥಾನ, 4ನೇ ತರಗತಿ ವಿದ್ಯಾರ್ಥಿ ಗಳಾದ ಲೈಕ ದ್ವಿತೀಯ ಸ್ಥಾನ, ರೆನ ತೃತೀಯ ಸ್ಥಾನಪಡೆದುಕೊಂಡಿದ್ದಾರೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ.ಎಸ್.ಸುದೇಶ್ , ಕಾರ್ಯದರ್ಶಿ ಪಿ.ಎನ್. ವಿನೋದ್, ಸಂಯೋಜಕರಾದ ಭಾಗ್ಯ, ಚೈತ್ರ, ಅಮೃತ, ಶಿಕ್ಷಕ ವೃಂದದವರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

Read More

ಮಡಿಕೇರಿ ಆ.17 :  ಕುಂದಚೇರಿ ಗ್ರಾ.ಪಂ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು  ಅರ್ಥಪೂರ್ಣವಾಗಿ ಆಚರಿಸಲಾಯಿತು. ಗ್ರಾ.ಪಂ.ಅಧ್ಯಕ್ಷ ಪಿ.ಬಿ.ದಿನೇಶ್  ಧ್ವಜಾರೋಹಣ ನೆರವೇರಿಸಿದರು.  ಈ ಸಂದರ್ಭ   ಪಂಚಾಯತ್ ಸದಸ್ಯರು, ಪಿಡಿಒ ಯಾದವ್  ಹಾಗೂ ಗ್ರಾಮಸ್ಥರು ಹಾಜರಿದ್ದರು.

Read More

ಮಡಿಕೇರಿ ಆ.17 : ಪೊನ್ನಂಪೇಟೆಯ ಅಪ್ಪಚ್ಚುಕವಿ ವಿದ್ಯಾಲಯದಲ್ಲಿ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಕಾಕಮಾಡ ಎನ್.ನಾಣಯ್ಯ ಅವರ ಸ್ಮರಣಾರ್ಥವಾಗಿ ನಡೆಸಲಾದ ತಾಲೂಕು ಮಟ್ಟದ ಚರ್ಚಾಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆಯಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕ್ಷಮಾ ಕಾವೇರಮ್ಮ ಚರ್ಚಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಬಿ. ಎಸ್.ಸುದೇಶ್ , ಕಾರ್ಯದರ್ಶಿ ಪಿ. ಎನ್. ವಿನೋದ್ , ಶಾಲಾ ಸಂಯೋಜಕರಾದ ಚೈತ್ರ, ಭಾಗ್ಯ, ಅಮೃತ ಮತ್ತು ಶಿಕ್ಷಕ ವೃಂದದವರು, ಪೋಷಕರು ಮೆಚ್ಚುಗೆ ವ್ಯಕ್ತ ಪಡಿಸಿರುತ್ತಾರೆ.

Read More

ಸಿದ್ದಾಪುರ , ಆ. 17: ವಿವಿಧತೆಯಲ್ಲಿ ಏಕತೆಯನ್ನು ಸಾರಿರುವ ಭಾರತ ವಿಶ್ವದಲ್ಲೇ ಶ್ರೇಷ್ಠ ಸ್ಥಾನ ಪಡೆದಿದೆ ಜಾತ್ಯಾತೀತತೆ ಭಾರತದ ಧರ್ಮ ಎಂಬ ಘೋಷಣೆಯೊಂದಿಗೆ ಜಾತ್ಯಾತೀತತೆಯನ್ನು ಉಳಿಸುವ ನಿಟ್ಟಿನಲ್ಲಿ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಎಸ್.ವೈ.ಎಸ್ ಕೊಡಗು ಜಿಲ್ಲಾ ಸಮಿತಿ ವತಿಯಿಂದ ನೆಲ್ಲಿಹುದಿಕೇರಿಯ ಶಾದಿ ಮಹಲ್ ಸಭಾಂಗಣದಲ್ಲಿ ರಾಷ್ಟ್ರ ರಕ್ಷಾ ಸಂಗಮ ಎಂಬ ವಿನೂತನ ಕಾರ್ಯಕ್ರಮ ನಡೆಯಿತು. ಸಮಸ್ತ ಕೇಂದ್ರ ಮುಶಾವರ ಸದಸ್ಯರು ಹಾಗೂ ಜಿಲ್ಲಾ ಸಹಾಯಕ ಖಾಝಿ ಎಂ.ಎಂ ಅಬ್ದುಲ್ಲ ಫೈಝಿ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಕೊಡ್ಲಿಪೇಟೆ ಕಿರಿಕೊಡ್ಲಿ ಮಠದ ಶ್ರೀ ಸದಾಶಿವ ಸ್ವಾಮೀಜಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, 77ನೇ ಸ್ವಾತಂತ್ರ್ಯೋತ್ಸವ ಆಚರಣೆ ಸಂದರ್ಭದಲ್ಲಿ ಇಂದಿಗೂ ಗ್ರಾಮೀಣ ಭಾಗದ ಜನರು ಹಲವಾರು ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆ. ನಮ್ಮ ಚಿಂತನೆಗಳ ಮೂಲಕ ಪರಿಹಾರ ಕಂಡುಕೊಳ್ಳಲು ನಾವೆಲ್ಲರೂ ಮುಂದಾಗಬೇಕಾಗಿದೆ. ಪ್ರತಿಯೊಬ್ಬರ ಆಶಯದಂತೆ ಅಭಿವೃದ್ಧಿಯ ಮೂಲಕ ಭವಿಷ್ಯ ರೂಪಿಸಿಕೊಂಡಲ್ಲಿ ಸೌಹಾರ್ದ ಸಮಾಜ ನಿರ್ಮಾಣವಾಗಲಿದೆ ಎಂದರು. ಚೆಟ್ಟಳ್ಳಿ ಚರ್ಚ್ ನ ಧರ್ಮಗುರು ಫಾದರ್ ಜೆರಾಲ್ಡ್ ಸಿಕ್ವೇರಾ…

Read More

ಮಡಿಕೇರಿ ಆ.17 : ಕೊಡಗು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ನಿವಾಸದ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಮುಂಜಾನೆ 4 ಗಂಟೆಗೆ ನಂಜುಂಡೆ ಗೌಡ ಅವರು ಮಡಿಕೇರಿ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ. ಸುರೇಶ್ ಬಾಬು ಮಾರ್ಗದರ್ಶನದಲ್ಲಿ ಡಿ ವೈ ಎಸ್ ಪಿ. ಪವನ್ ಕುಮಾರ್ , ಇನ್ಸ್ ಪೆಕ್ಟರ್ ಲೋಕೇಶ್ ಮತ್ತು ಸಿಬ್ಬಂದಿಗಳು ಪರಿಶೀಲನೆ ಕೈಗೊಂಡಿದ್ದಾರೆ. ಪಿರಿಯಾಪಟ್ಟಣದಲ್ಲಿ ಇರುವ ಮಾವನ ಮನೆ ಹಾಗೂ ಮೈಸೂರಿನಲ್ಲಿ ಇರುವ ಸಂಬಂಧಿಕರ ಮನೆ ಮೇಲೂ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದ್ದು  ಮಡಿಕೇರಿ ಮನೆಯಲ್ಲಿ ನಗದು ಪತ್ತೆಯಾಗಿದ್ದು, ತನಿಖೆ ಮುಂದುವರೆದಿದೆ.

Read More

ಮಡಿಕೇರಿ ಆ.16 : ಕೊಡಗು ರಕ್ಷಣಾ ವೇದಿಕೆಯ ಆಟೋ ಚಾಲಕರ ಸಂಘ, ಮಾರುಕಟ್ಟೆ ವರ್ತಕರು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ 77ನೇ ಸ್ವಾತಂತ್ರೋತ್ಸವವನ್ನು ಅರ್ಥಪೂರ್ಣ ಮತ್ತು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ನಗರದ ಮಾರುಕಟ್ಟೆ ಆವರಣದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ದೇಶಭಕ್ತಿ ಗೀತೆಯ ಮೂಲಕ ಭಾರತಾಂಬೆಗೆ ನಮನ ಸಲ್ಲಿಸಲಾಯಿತು. ವರ್ತಕ, ಕೂರ್ಗ್ ಸೀ ಫುಡ್ ನ ಮಾಲೀಕ ಮಕ್ಬುಲ್ ಹಾಗೂ ಗುತ್ತಿಗೆದಾರ ಹಾಸಿಂ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಎಂ.ಎಂ.ಯಾಕುಬ್ ದೇಶವನ್ನು ಅಭಿವೃದ್ಧಿಪಥದತ್ತ ಸಾಗಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು. ಆ ಮೂಲಕ ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು  ಉಳಿಸಿ, ಬೆಳೆಸಬೇಕು ಎಂದು ಕರೆ ನೀಡಿದರು. ಮಹಾತ್ಮ ಗಾಂಧಿ ಅವರು ಅಹಿಂಸಾ ಮಾರ್ಗದ ಮೂಲಕ ಅನೇಕ ಹೋರಾಟಗಳನ್ನು ಮಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಇವರೊಂದಿಗೆ ಸರ್ದಾರ್ ವಲ್ಲಭಾಯಿ ಪಟೇಲ್, ಜವಹರಲಾಲ್ ನೆಹರು ಅಬ್ದುಲ್ ಕಲಾಂ ಆಜಾದ್, ಜಾಕಿರ್ ಹುಸೇನ್ ಸೇರಿದಂತೆ ಅನೇಕರು ಹೋರಾಡಿದ್ದಾರೆ. ಪ್ರತ್ಯಕ್ಷವಾಗಿ ಮತ್ತು…

Read More