ಮಡಿಕೇರಿ ಆ.16 : ಆಲ್ ಇಂಡಿಯಾ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ ನ ಮಡಿಕೇರಿ ಘಟಕದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಐಕೆಎಂಸಿಸಿಯ ಮಡಿಕೇರಿ ಅಧ್ಯಕ್ಷ ಅಬ್ದುಲ್ ಗಫೂರ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಸಿಹಿಯನ್ನು ಹಂಚಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಭೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯoಡ ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ಕೆ.ಪಿ.ಚಂದ್ರಕಲಾ, ಹೆಚ್.ಎಸ್.ಚಂದ್ರಮೌಳಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಪ್ರಮುಖರಾದ ಯಾಕುಬ್ ಬಜಗುಂಡಿ, ಮೊಹಮ್ಮದ್ ಕೆ.ಕೆ, ನಾಸಿರ್ ಹಿಲ್ಟೌನ್, ಮುಸ್ತಫ, ಪುರಸಭೆ ಅಧ್ಯಕ್ಷ ರಾಕೇಶ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಲೀಲ್ ಬಾಷ, ಸಂಘಟನೆಯ ಉಪಾಧ್ಯಕ್ಷ ನಿಸಾರ್, ಶಮೀರ್ ಮತ್ತಿತರರು ಈ ಸಂದರ್ಭ…
ಲೇಖಕ: admin
ಮಡಿಕೇರಿ ಆ.16 : ‘ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಮತ್ತು ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ’ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023 ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗಾಗಿ “ಹೊಯ್ಸಳ ಮತ್ತು ಬಾಲಕಿಯರಿಗೆ “ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಪ್ರಕರಣವು 2022 ರ ಆಗಸ್ಟ್, 1 ರಿಂದ 2023 ರ ಜು.31 ರೊಳಗೆ ನಡೆದಿರಬೇಕು. 2005 ರ ಆಗಸ್ಟ್, 1 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಇದೇ ಸಂದರ್ಭದಲ್ಲಿ…
ಮಡಿಕೇರಿ ಆ.16 : ಮಡಿಕೇರಿ 66/11ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್12 ರಾಜಾಸೀಟ್ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಆಗಸ್ಟ್, 17 ರಂದು ಬೆಳಗ್ಗೆ 10 ರಿಂದ ಸಂಜೆ 4.30 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಗಾಂಧಿ ಮೈದಾನ, ಡಿ.ಸಿ ಆಫೀಸ್, ಇಂದಿರಾನಗರ, ರೇಸ್ಕೋರ್ಸ್ ರಸ್ತೆ, ಗಾಳಿಬೀಡು, ಹೊಸಬಡಾವಣೆ, ವಿದ್ಯಾನಗರ, ಎಫ್ಎಂಸಿ ಕಾಲೇಜು, ಐಟಿಐ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಆ.16 : ನಗರದ ತ್ಯಾಗರಾಜ ನಗರ ಬಡಾವಣೆಯ ಬೂತ್ ಸಮಿತಿ 204 ರ ವತಿಯಿಂದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಲಾಯಿತು. ನಗರದಲ್ಲಿ ಬೂತ್ ಸಮಿತಿ ಪ್ರಮುಖರು ಹಾಗೂ ಪದಾಧಿಕಾರಿಗಳು ಶಾಸಕರನ್ನು ಸನ್ಮಾನಿಸಿ ಗೌರವಿಸಿದರು. ನಂತರ ಮನವಿ ಪತ್ರ ನೀಡಿದ ಬೂತ್ ಸಮಿತಿ ಅಧ್ಯಕ್ಷ ಎಂ.ಎಂ.ಯಾಕುಬ್ ಮಳೆಗಾಲದಲ್ಲಿ ಬೂತ್ ವ್ಯಾಪ್ತಿಯಲ್ಲಿ ಕಾಲುದಾರಿಗೆ ಹಾನಿಯಾಗಿದ್ದು, ತಡೆಗೋಡೆ ನಿರ್ಮಿಸಬೇಕು ಮತ್ತು ವಾರ್ಡ್ನ ಸಮಸ್ಯೆಗಳಿಗೆ ಸ್ಪಂದಿಸಬೇಕೆಂದು ಕೋರಿದರು. ಈ ಸಂದರ್ಭ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸುಹೇಲ್, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಇಂಜೀಮ್, ಅಬ್ದುಲ್ ರೆಹಮಾನ್, ಕಾರ್ಯಕರ್ತರುಗಳಾದ ಅಲ್ತಾಫ್, ಯೂಹ್ಯ, ಶೌಕತ್ ಆಲಿ, ಶಾಹಿನ್, ಶಮೀನಾ, ಹಾಜಿರ ಮತ್ತಿತರರು ಹಾಜರಿದ್ದರು.
ಮಡಿಕೇರಿ ಆ.16 : ಕೂರ್ಗ್ ಕಾಫಿ ವುಡ್ ಮೂವೀಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣದ, ಕೊಟ್ಟುಕತ್ತೀರಾ ಪ್ರಕಾಶ್ ಕಾರ್ಯಪ್ಪ ಕಥೆ-ನಿರ್ದೇಶನದ ಕೊಡವ ಚಲನಚಿತ್ರ “ಬೇರ್” (The Root) ಕೊಡವ ಸಿನಿಮಾದ ಪೋಸ್ಟರ್ ಹಾಗೂ ಪ್ರೋಮೋ ಆ.19 ರಂದು ಬಿಡುಗಡೆಯಾಗಲಿದೆ. ಅಂದು ಮಧ್ಯಾಹ್ನ 2 ಗಂಟೆಗೆ ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಐಮುಡಿಯಂಡ ರಾಣಿ ಮಾಚಯ್ಯ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನಟ, ನಿರ್ಮಾಪಕ, ನಿರ್ದೇಶಕ, ಸಾಹಿತಿ ಹಾಗೂ ಕೂರ್ಗ್ ಕಾಫಿವುಡ್ ಮೂವಿಸ್ ನ ಮಾಲೀಕ ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ ವಹಿಸಲಿದ್ದಾರೆ. ಸಿನಿಮಾದ ಪೋಸ್ಟರನ್ನು ಸಾಹಿತಿ ಮೊಣ್ಣಂಡ ಶೋಭಾ ಸುಬ್ಬಯ್ಯ ಬಿಡುಗಡೆ ಅನಾವಣಗೊಳಿಸಲಿದ್ದು, ಆಕಾಶವಾಣಿಯ ನಿವೃತ್ತ ಉದ್ಘೋಷಕಿ ಕೂಪದಿರ ಶಾರದಾ ನಂಜಪ್ಪ ಪ್ರೊಮೊ ಬಿಡುಗಡೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ, ಹಿರಿಯ ಕಲಾವಿದೆ ಮಂಡಿರ ಪದ್ಮ ಬೋಪಯ್ಯ ಹಾಗೂ ಚಿತ್ರದ ಕಲಾವಿದರು ಪಾಲ್ಗೊಳ್ಳಲಿದ್ದಾರೆ.
ಮಡಿಕೇರಿ ಆ.16 : ಚುನಾವಣೆ ಸಂದರ್ಭ ರಾಜ್ಯದ ಜನತೆಗೆ ಕಾಂಗ್ರೆಸ್ ನೀಡಿದ್ದ ಐದು ಗ್ಯಾರಂಟಿಗಳು ಅನುಷ್ಠಾನಗೊಳ್ಳುತ್ತಿದ್ದು, ಸರ್ಕಾರ ನುಡಿದಂತೆ ನಡೆಯುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರು ಪ್ರತೀ ಬೂತ್ ಮಟ್ಟದಲ್ಲಿ ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕೆಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಕರೆ ನೀಡಿದ್ದಾರೆ. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಗುರಿಯನ್ನು ನಾನು ಹೊಂದಿದ್ದೇನೆ, ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಸಮಸ್ಯೆಯಾದರು ನನ್ನ ಗಮನಕ್ಕೆ ತಂದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ ಡಾ.ಮಂತರ್ ಗೌಡ, ಅಧಿಕಾರಿಗಳು ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಜನಸೇವೆ ಮಾಡಬೇಕು ಎಂದರು. ಕ್ಷೇತ್ರದ ಮತದಾರರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ನತ್ತ ಒಲವು ತೋರುವ ಮೂಲಕ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಚುನಾವಣಾ ಸಂದರ್ಭ ಘೋಷಣೆ ಮಾಡಿದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ನುಡಿದಂತೆ…
ಮಡಿಕೇರಿ ಆ.16 : ಕುಶಾಲನಗರ ಮತ್ತು ಸುಂಟಿಕೊಪ್ಪ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಆ.17 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಬೆಟ್ಟಗೇರಿ, ಹೊಸಪಟ್ಟಣ, ನಂಜರಾಯಪಟ್ಟಣ, ವಾಲ್ನೂರು ತ್ಯಾಗತೂರು, ಹೆಬ್ಬಾಲೆ, ಕಣಿವೆ, ಹಕ್ಕೆ, ತೊರೆನೂರು, ಶಿರಂಗಾಲ, ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ಹಾಗೂ ಮತ್ತಿಕಾಡು, ಗದ್ದೆಹಳ್ಳ, ಚೆಟ್ಟಳ್ಳಿ, ಪೊನ್ನತಮೊಟ್ಟೆ ಈರಳೆವಳಮುಡಿ, ಚೇರಳ ಶ್ರೀಮಂಗಲ, ಮಾದಾಪುರ, ಸಿಸಿಎಲ್ ಗರಗಂದೂರು, ಮಾದಾಪುರ, ಹರದೂರು ಗರ್ವಾಲೆ ಸೂರ್ಲಬಿ, ಹಟ್ಟಿಹೊಳ್ಳೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಮಡಿಕೇರಿ ಆ.16 : ನಿರ್ದೇಶನಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇಲಾಖೆಗೆ ‘ಕಲ್ಯಾಣ ಸಂಘಟಕರು’ ‘ಸಿ’ ವೃಂದದ ಒಟ್ಟು 14 ಹುದ್ದೆಗಳಿಗೆ ಅರ್ಹ ಮಾಜಿ ಸೈನಿಕರಿಂದ (ಜೆಸಿಒ ಹಾಗೂ ತತ್ಸಮಾನ ರ್ಯಾಂಕ್ ) ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಮುದ್ರಣಾಲಯಗಳಲ್ಲಿ ಲಭ್ಯವಿರುವ ಸರ್ಕಾರದಿಂದ ನಿಗಧಿಪಡಿಸಿದ ಅರ್ಜಿ ನಮೂನೆ 1 ನ್ನು ಭರ್ತಿ ಮಾಡಿ, ದ್ವಿಪ್ರತಿಯಲ್ಲಿ ಆ.25 ರೊಳಗೆ ಅಧ್ಯಕ್ಷರು, ಇಲಾಖಾ ನೇಮಕಾತಿ ಸಮಿತಿ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ಬೆಂಗಳೂರು-560025, ಇವರಿಗೆ ಸಲ್ಲಿಸುವಂತೆ ಮಡಿಕೇರಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಮಡಿಕೇರಿ ಆ. 18 : ರೋಟರಿ ಮಡಿಕೇರಿ ವುಡ್ಸ್ ವತಿಯಿಂದ ಆ.19 ರಂದು ನಗರದಲ್ಲಿ ಆಟೋಚಾಲಕ, ಮಾಲೀಕ ಮತ್ತು ಕುಟುಂಬಸ್ಥರಿಗಾಗಿ ಆರೋಗ್ಯ ತಪಾಸಣಾ ಉಚಿತ ಶಿಬಿರ ಆಯೋಜಿಸಲಾಗಿದೆ. ನಗರದ ರೆಡ್ ಕ್ರಾಸ್ ಭವನದಲ್ಲಿ ಆಯೋಜಿತ ಶಿಬಿರವನ್ನು ಬೆಳಗ್ಗೆ 10 ಗಂಟೆಗೆ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿ.ನಾಗರಾಜಾಚಾರ್ ಉದ್ಘಾಟಿಸಲಿದ್ದಾರೆ. ರೆಡ್ ಕ್ರಾಸ್ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ, ಶಿಬಿರದ ವೈದ್ಯರಾದ ಡಾ.ಚೇತನ್, ಡಾ.ಕೖಷ್ಣದೀಪ್, ಡಾ.ಹಷ೯ಮೂಗೂರ್, ಡಾ.ಶಿಲ್ಪಾ , ಡಾ.ಕಿರಣ್ ಭಟ್, ರೋಟರಿ ವುಡ್ಸ್ ಕಾಯ೯ದಶಿ೯ ಹರೀಶ್ ಕಿಗ್ಗಾಲು, ಸಹಾಯಕ ಗವನ೯ರ್ ದೇವಣಿರ ತಿಲಕ್, ವಲಯ ಸೇನಾನಿ ಎಸ್.ಎಸ್.ಸಂಪತ್ ಕುಮಾರ್ ಪಾಲ್ಗೊಳ್ಳಲಿದ್ದು ಅಮೖತ್ ಸಿಂಚನ ಪ್ರಯೋಗಾಲಯದ ಸಹಕಾರ ಶಿಬಿರಕ್ಕಿದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಆರೋಗ್ಯ ತಪಾಸಣೆ ನಡೆಯಲಿದೆ ಎಂದು ರೋಟರಿ ವುಡ್ಸ್ ಅಧ್ಯಕ್ಷ ಕೆ.ವಸಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೋಂದಣಿದಾಗಿ ಸಂಪಕ೯ ಸಂಖ್ಯೆ – 7348933782
ಮಡಿಕೇರಿ ಆ.16 : ತಾಳತ್ತಮನೆ ನೇತಾಜಿ ಯುವಕ ಹಾಗೂ ಯುವತಿ ಮಂಡಳಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ನಡೆಯಿತು. ನಿವೃತ್ತ ಪೊಲೀಸ್ ಗಂಗಾಧರ ಧ್ವಜಾರೋಹಣ ನೆರವೇರಿಸಿದರು. ತಾಳತ್ತಮನೆ ವ್ಯಾಪ್ತಿಯ ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.






