ಮಡಿಕೇರಿ ಸೆ.12 : 2023-24 ನೇ ಸಾಲಿನ ಕರ್ನಾಟಕ ಸರ್ಕಾರದ ಆಯವ್ಯಯದಲ್ಲಿ ಮಂಡನೆಯಾಗಿರುವ “ಸಸ್ಯ ಶ್ಯಾಮಲಾ” ಕಾರ್ಯಕ್ರಮವನ್ನು ಕುಶಾಲನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಸಕ ಡಾ. ಮಂತರ್ ಗೌಡ ಗಿಡನೆಡುವ ಮೂಲಕ ಉದ್ಘಾಟಿಸಿದರು. ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ತಾಲ್ಲೂಕು, ಅರಣ್ಯ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಹಲವಾರು ಗಿಡಗಳನ್ನು ನೆಟ್ಟು ನೀರನ್ನು ಹರಿಸಿ ಉದ್ಘಾಟಿಸಿ ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಇಂದಿನ ವಾತಾವರಣದಲ್ಲಿ ಜಾಗತಿಕ ತಾಪಮಾನ ಹೆಚ್ಚುವಿಕೆ, ಅನಾವೃಷ್ಟಿ, ಅರಣ್ಯ ನಾಶ ಮುಂತಾದ ಪ್ರಾಕೃತಿಕ ವಿಕೋಪಗಳು ಆಗದಿರುವುದಕ್ಕೆ ಪ್ರತಿಯೊಬ್ಬರೂ ಕನಿಷ್ಠ ವರ್ಷಕ್ಕೊಂದಾದರೂ ಗಿಡವನ್ನು ನೆಟ್ಟು ಪೋಷಿಸುವಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳು ತಮ್ಮ ಪ್ರಾಥಮಿಕ ಶಾಲಾ ಶಿಕ್ಷಣದಿಂದಲೇ ಗಿಡ ನೆಡಲು ಮತ್ತು ಪೋಷಿಸುವಲ್ಲಿ ಪ್ರವೃತ್ತವಾಗಬೇಕೆಂದರು. ಹಸಿರಿನಿಂದ ಕಂಗೊಳಿಸುವ ಶಾಲೆಯ ವಾತಾವರಣವು ಕಲಿಕೆಗೆ ಮತ್ತು ಸಾಧನೆಗೆ ಹೆಚ್ಚು ಪ್ರೇರಣೆ ನೀಡುತ್ತದೆ, ಎಲ್ಲರೂ ಒಗ್ಗಟ್ಟಾದರೆ, ಒಗ್ಗಟ್ಟಾಗಿ ಪರಿಸರವನ್ನು ಬೆಳೆಸಿದರೆ ಮಾತ್ರ ಭವಿಷ್ಯದಲ್ಲಿ ಉತ್ತಮ ಗಾಳಿ, ಮಳೆ ಮತ್ತು…
ಲೇಖಕ: admin
ಮಡಿಕೇರಿ ಸೆ.12 : ಕೇರಳದ ಕಣ್ಣೂರು ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಕಣ್ಣೂರ್ ಯೂನಿವರ್ಸಿಟಿ ಸಿಂಥೆಟಿಕ್ ಸ್ಟೇಡಿಯಂ ಮಾಗಟು ಪರಂಬದಲ್ಲಿ ನಡೆದ 2ನೇ ಕೇರಳ ರಾಜ್ಯ ಮಾಸ್ಟರ್ಸ್ ಮಾನ್ಸೂನ್ ಓಪನ್ ಅಥ್ಲೆಟಿಕ್ ಮೀಟ್-2023 ರ 55+ ಸ್ಪರ್ಧೆಯಲ್ಲಿ ಮಡಿಕೇರಿಯ ಬಿ.ವಸಂತಿ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ. 400ಮೀ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ, 200ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ, 100ಮೀ ಓಟದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಹಾಗೂ ರಿಲೇ ಯಲ್ಲಿ ಚಿನ್ನದ ಪದಕ ಗೆದ್ದು ಕೊಡಗಿಗೆ ಕೀರ್ತಿ ತಂದಿದ್ದಾರೆ. ವಸಂತಿ ಅವರು ಮಡಿಕೇರಿ ಆಸ್ಪತ್ರೆಯಿಂದ ವರ್ಗಾವಣೆಗೊಂಡು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಸೀನಿಯರ್ ನರ್ಸಿಂಗ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಡಿಕೇರಿ ಸೆ.12 : ಐತಿಹಾಸಿಕ ನಾಡಹಬ್ಬ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ ಸರ್ಕಾರದಿಂದ ಹೆಚ್ಚಿನ ಅನುದಾನ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದರು. ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ದಸರಾ ಸಮಿತಿ ಅಧ್ಯಕ್ಷೆ, ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಅಧ್ಯಕ್ಷತೆಯಲ್ಲಿ ನಡೆದ ದಸರಾ ಸಮಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ದಸರಾ ಉತ್ಸವಕ್ಕೆ ಮೆರುಗು ನೀಡುವ ದಶಮಂಟಪಗಳ ವೈಭವದ ಹಿಂದೆ ಇರುವ ಮಂಟಪ ಸಮಿತಿಗಳ ಶ್ರಮವನ್ನು ತಾನು ಹತ್ತಿತರದಿಂದ ಕಂಡಿದ್ದೇನೆ. ಅಲ್ಲದೇ ಉತ್ಸವದ ಯಶಸ್ಸಿಗಾಗಿ ಉಪ ಸಮಿತಿಗಳ ಪರಿಶ್ರಮ ಅರಿವು ಕೂಡ ತನಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆದು ಸೂಕ್ತ ಅನುದಾನ ಒದಗಿಸಲು ಶ್ರಮಿಸುತ್ತೇನೆ ಎಂದು ಶಾಸಕರು ಹೇಳಿದರು. ಪ್ರಾಸ್ತಾವಿಕ ಮಾತನಾಡಿದ ಅಧ್ಯಕ್ಷೆ ಅನಿತಾ ಪೂವಯ್ಯ, ದಸರಾ ಸಮಿತಿಯಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, 3 ಕೋಟಿ ಅನುದಾನ ಬೇಡಿಕೆ ಮುಂದಿಡಲಾಗಿದೆ. ಈ ಬಾರಿ ದಸರಾ ಉತ್ಸವವನ್ನು ವಿಜ್ರಂಭಣೆಯಿಂದ ನಡೆಸುವ ನಿಟ್ಟಿನಲ್ಲಿ ಸರ್ವರ ಸಹಕಾರ…
ಮಡಿಕೇರಿ ಸೆ.12 : ಕೊಡಗು ಜಿಲ್ಲಾ ವ್ಯಾಪಿ ಸಾವಿರಾರು ಹೋಂಸ್ಟೇಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೋಂಸ್ಟೇ ಮಾಲೀಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಡಿವೈಎಸ್ಪಿ ಗಂಗಾಧರಪ್ಪ ಮನವಿ ಮಾಡಿದ್ದಾರೆ. ಸೋಮಾವಾರಪೇಟೆ ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ನಡೆದ ತ್ರೈಮಾಸಿಕ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಿಯಮದ ಪ್ರಕಾರ ಹೋಂಸ್ಟೇ ಮಾಲೀಕರುಗಳು ಹೋಂಸ್ಟೇಗಳಲ್ಲಿಯೇ ವಾಸ ಇರಬೇಕು, ಮನೆಯ ವಾತಾವರಣ ಸೃಷ್ಟಿಸಬೇಕು. ಆದರೆ ಜಿಲ್ಲೆಯ ಹೋಂಸ್ಟೇಗಳಲ್ಲಿ ಮಾಲೀಕರು ವಾಸವೇ ಇರುವುದಿಲ್ಲ, ಕಾರ್ಮಿಕರೇ ಎಲ್ಲಾ ನೋಡಿಕೊಳ್ಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು. ಹೋಂಸ್ಟೇಗಳಲ್ಲಿ ಮಾದಕ ವಸ್ತುಗಳ ಬಳಕೆ ಅಧಿಕವಾಗುತ್ತಿದ್ದು, ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಕೆಟ್ಟ ಹೆಸರು ಬರುತ್ತಿದೆ. ಹೋಂಸ್ಟೇಗಳನ್ನು ಮಾಲೀಕರು ನಿರ್ವಹಿಸದೆ ಕಾರ್ಮಿಕರು ನಿರ್ವಹಣೆ ಮಾಡುತ್ತಿದ್ದಾರೆ. ಕೇವಲ 1 ಸಾವಿರ ಹೋಂಸ್ಟೇಗಳಷ್ಟೇ ಅಧಿಕೃತವಾಗಿ ಪರವಾನಗಿ ಪಡೆದಿದ್ದು, ಸಾವಿರಾರು ಹೋಂಸ್ಟೇಗಳು ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿವೆ. ಇದು ಪ್ರವಾಸೋದ್ಯಮದ ಬೆಳವಣಿಗೆಗೆ ಮಾರಕವಾಗಿದ್ದು, ಹೋಂಸ್ಟೇ ಅಸೋಸಿಯೇಷನ್ ಗಳು ಎಚ್ಚೆತ್ತುಕೊಳ್ಳಬೇಕು. ಮಾದಕ ವಸ್ತು ಮತ್ತು ಅಕ್ರಮ ಚಟುವಟಿಕೆಗಳು ಕಂಡು ಬಂದಲ್ಲಿ…
ಕುಶಾಲನಗರ/ ಕೂಡಿಗೆ ಸೆ.12 : ಶಾಲಾ ಮಕ್ಕಳಲ್ಲಿ ಗುಪ್ತವಾಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಲು ಸಹಕಾರಿಯಾಗಿರುವ ಪ್ರತಿಭಾ ಕಾರಂಜಿ, ಕಲೋತ್ಸವ ಸ್ಪರ್ಧೆಗಳು ಮಕ್ಕಳಲ್ಲಿ ಮನೋವಿಕಾಸ ಬೆಳವಣಿಗೆಯೊಂದಿಗೆ ಸ್ಪರ್ಧಾ ಮನೋಭಾವ ಬೆಳವಣಿಗೆಗೆ ಉತ್ತಮ ವೇದಿಕೆ ಒದಗಿಸುತ್ತವೆ ಎಂದು ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಹೇಳಿದರು. ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಹಾಗೂ ಕೂಡಿಗೆ ಕ್ಲಸ್ಟರ್ ಕೇಂದ್ರದ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸರಕಾರಿ ಶಾಲಾ ಶಿಕ್ಷಕರ ಬಳಗದ ಸಹಯೋಗದೊಂದಿಗೆ ಕೂಡಿಗೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಕೂಡಿಗೆ ಕ್ಲಸ್ಟರ್ ಮಟ್ಟದ 2023-24 ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳಿಗೆ ಇಂತಹ ಸ್ಪರ್ಧಾ ಕಾರ್ಯಕ್ರಮವು ನಮ್ಮ ನಾಡಿನ ಸಂಸ್ಕೃತಿ ಬಿಂಬಿಸುವ ಸ್ಪರ್ಧೆಯಾಗಿದ್ದು, ಇವು ಪಠ್ಯದ ಜತೆಗೆ ಮಕ್ಕಳ ಪ್ರತಿಭಾ ಅನ್ವೇಷಣೆಗೆ ಅವಶ್ಯಕವಾಗಿದೆ ಎಂದರು. ಶಿಕ್ಷಣ ಇಲಾಖೆಯೊಂದಿಗೆ ಕ್ಲಸ್ಟರ್ ವ್ಯಾಪ್ತಿಯ ಸರ್ಕಾರಿ ಶಾಲಾ ಶಿಕ್ಷಕರ ಬಳಗದ ಶಿಕ್ಷಕರು ಜತೆಗೂಡಿ ಆರ್ಥಿಕ ನೆರವಿನೊಂದಿಗೆ ಈ…
ಮಡಿಕೇರಿ ಸೆ.12 : ಮೊಗೇರ ಗ್ರಾಮ ವಿಕಾಸ ಯೋಜನೆಯ ಪ್ರಥಮ ವಾರ್ಷಿಕೋತ್ಸವ ಸೆ.17 ರಂದು ಸುಂಟಿಕೊಪ್ಪದಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 10.30 ಗಂಟೆಗೆ ಸುಂಟಿಕೊಪ್ಪದ ಶ್ರೀ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ ಎಂದು ಗ್ರಾಮ ವಿಕಾಸ ಯೋಜನೆಯ ಅಧ್ಯಕ್ಷ ಗೌತಮ್ ಶಿವಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮುಖ್ಯ ಅತಿಥಿಗಳಾಗಿ ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಪಿ.ಬಿ.ಜನಾರ್ಧನ, ರಾಜ್ಯ ಉಪಾಧ್ಯಕ್ಷ ಬಿ.ಶಿವಪ್ಪ, ಸ್ಥಾಪಕಾಧ್ಯಕ್ಷ ಟಿ.ಸದಾನಂದ, ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಪಿ.ಎಂ.ರವಿ, ಮುದ್ದಕಳಲ ಯುವಕ ಸಂಘದ ಜಿಲ್ಲಾಧ್ಯಕ್ಷ ಜ್ಯೋತಿಕುಮಾರ್, ಸಿದ್ದಾಪುರ ಅಮೃತ ಮೊಗೇರ ಸಂಘದ ಅಧ್ಯಕ್ಷ ಮಂಜು ಬರಡಿ ಹಾಗೂ ಶಾಂತಳ್ಳಿ ಉಪ ತಹಶೀಲ್ದಾರ್ ತುಕ್ರಪ್ಪ ಪಾಲ್ಗೊಳ್ಳಲಿದ್ದಾರೆ. ನಾಲ್ಕೇರಿ ಯೂನಿಯನ್ ಬ್ಯಾಂಕ್ ವ್ಯವಸ್ಥಾಪಕ ಪಿ.ಕೆ.ಅಪ್ಪಯ್ಯ, ಮಡಿಕೇರಿ ಉಪ ಅರಣ್ಯ ವಲಯಾಧಿಕಾರಿ ಪಿ.ಟಿ.ರಾಘವ, ಸೋಮವಾರಪೇಟೆ ವೈಲ್ಡ್ ಲೈಫ್ ಡಿ.ಆರ್.ಎಫ್.ಓ ಪಿ.ಟಿ.ಶಶಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಅಧೀಕ್ಷಕ ಬಾಬು,…
ಬೆಂಗಳೂರು ಸೆ.12: ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸವಿದ್ದು, ಜನರ ಸೇವೆಗೆ ಲಭ್ಯರಿರಬೇಕು. ಅಧಿಕಾರಿಗಳು ಕಚೇರಿಯಲ್ಲಿರಬೇಕು, ಇಲ್ಲ ಪ್ರವಾಸದಲ್ಲಿರಬೇಕು. ಮನೆಯಲ್ಲಿ ಕುಳಿತು ಕೆಲಸ ಮಾಡಬಾರದು. Work from home ಗೆ ಅವಕಾಶವಿಲ್ಲ. ಇದರಿಂದ ಜನರಿಗೆ ತೊಂದರೆಯಾಗುವುದನ್ನು ಸರ್ಕಾರ ಸಹಿಸುವುದಿಲ್ಲ. ಹಾಗೆಯೇ ಅಧಿಕಾರಿಗಳು ದೂರವಾಣಿ ಕರೆಗೆ ಸಿಗುವುದಿಲ್ಲ ಎಂಬ ದೂರುಗಳೂ ಸಾರ್ವಜನಿಕರು, ಶಾಸಕರು ಮತ್ತು ಮಂತ್ರಿಗಳಿಂದ ಇವೆ. ಇದು ಒಳ್ಳೆಯದಲ್ಲ. ಮುಖ್ಯಮಂತ್ರಿ ಕಚೇರಿಯಿಂದ ಇರಲಿ, ಸಚಿವರಿರಲಿ, ಶಾಸಕರಿರಲಿ, ಜನಸಾಮಾನ್ಯರಿರಲಿ ಅವರ ಕರೆಗಳಿಗೆ ಸ್ಪಂದಿಸಬೇಕು. ಯಾವುದೇ ಪಕ್ಷದ ಶಾಸಕರುಗಳಿರಲಿ ಪ್ರೋಟೋಕಾಲ್ ಚಾಚೂ ತಪ್ಪದೆ ಪಾಲಿಸಬೇಕು ಎನ್ನುವ ಸೂಚನೆ ನೀಡಿದರು. ಅಧಿಕಾರಿಗಳಿಗೆ ಹೃದಯ ಸರಿಯಾಗಿ ಕೆಲಸ ಮಾಡಬೇಕು. ಮನುಷ್ಯತ್ವ ಇಲ್ಲದವರು ಸಾರ್ವಜನಿಕ…
ಮಡಿಕೇರಿ ಸೆ.12 : ಕಾಫಿ ತೋಟದ ಲೈನ್ಮನೆಗಳಲ್ಲಿ ಹಾಗೂ ಬಾಡಿಗೆ ಮನೆಯಲ್ಲಿ ವಾಸವಿರುವ ನಿವೇಶನ ಹಾಗೂ ವಸತಿ ರಹಿತ ಬುಡಕಟ್ಟು ಕುಟುಂಬದವರಿಗೆ ನಿವೇಶನ ಹಾಗೂ ಹಕ್ಕುಪತ್ರ ಒದಗಿಸವಂತೆ ಒತ್ತಾಯಿಸಿ ಬುಡಕಟ್ಟು ಕಾರ್ಮಿಕರ ಸಂಘ ಪ್ರತಿಭಟನೆ ನಡೆಸಿತು. ಪೊನ್ನಂಪೇಟೆ ತಾಲೂಕು ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, 8 ತಿಂಗಳುಗಳ ಕಾಲ ನಿರಂತರವಾಗಿ ತಾಲೂಕು ಕಚೇರಿಯ ಮುಂದೆ ಅಹೋರಾತ್ರಿ ಪ್ರತಿಭಟನೆ ಕೈಗೆತ್ತಿಕೊಳ್ಳಲಾಗಿತ್ತು. ಈ ವೇಳೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿವೇಶನ ಮಂಜೂರು ಮಾಡುವುದಾಗಿ ಭರವಸೆ ನೀಡಿ ಇಂದಿಗೆ 5 ತಿಂಗಳು ಕಳೆದರು ನಮ್ಮ ಸಮಸ್ಯೆಗಳಿಗೆ ಪರಿಹಾರ ಲಭಿಸಿಲ್ಲ. ಒಂದು ತಿಂಗಳೊಳಗೆ ನಿವೇಶನ ರಹಿತ ಆದಿವಾಸಿಗಳಿಗೆ ನಿವೇಶನ ಹಾಗೂ ಹಕ್ಕುಪತ್ರ ನೀಡುವಂತೆ ಪ್ರತಿಭಟನಾನಿರತರು ಪಟ್ಟು ಹಿಡಿದರು. ಬುಡಕಟ್ಟು ಕಾರ್ಮಿಕರ ಸಂಘದ ಅಧ್ಯಕ್ಷ ವೈ.ಬಿ.ಗಪ್ಪು ಮುಂದಾಳತ್ವದಲ್ಲಿ ಪೊನ್ನಂಪೇಟೆ ತಾಲೂಕು ತಹಶೀಲ್ದಾರ್ ಕಚೇರಿಯ ಮುಂದೆ ಜಮಾವಣೆಗೊಂಡ ನೂರಾರು ಗಿರಿಜನರು, ತಾಲೂಕು ತಶೀಲ್ದಾರ್ಗಳಿಗೆ ಮನವಿ ಸಲ್ಲಿಸಿ ನಂತರ ಪೊನ್ನಂಪೇಟೆಯ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ಸಾಗಿ ತಾಲೂಕು ಪಂಚಾಯಿತಿಯ ಕಚೇರಿಗೆ ಆಗಮಿಸಿ…
ಬೆಂಗಳೂರು ಸೆ 12: ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಪ್ರಶ್ನಿಸಿದರು. ಮುಖ್ಯಮಂತ್ರಿಯಾದ ಬಳಿಕ ನಾನು ಹಲವಾರು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ. ಆ ವೇಳೆ ಜನ ಸಾಮಾನ್ಯರು ನೂರಾರು ರೀತಿಯ ಮನವಿಗಳನ್ನು ನನಗೆ ನೀಡುತ್ತಿದ್ದಾರೆ. ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಬಗೆಹರಿಸಬೇಕಾದ ಸಮಸ್ಯೆಗಳನ್ನು ಹೊತ್ತುಕೊಂಡು ಜನ ನನ್ನ ಬಳಿ ಬರುತ್ತಿದ್ದಾರೆ. ನೀವು ಸ್ಥಳೀಯವಾಗಿ ಜನ ಸಂಪರ್ಕ ಸಭೆ ನಡೆಸಿ ಸ್ಪಂದಿಸಿ ಸ್ಥಳದಲ್ಲೇ ಪರಿಹಾರ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಕೆಲವೊಂದು ಸಮಸ್ಯೆಗಳಿಗೆ ವಾರದ ಕಾಲ ಮಿತಿಯಲ್ಲಿ…
ಮಡಿಕೇರಿ ಸೆ.12 : ಕೊಡಗಿನ ಮುರುವಂಡ ತನುಷ್ ಅಪ್ಪಯ್ಯ ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಪದವಿಗೇರಿದ್ದಾರೆ. ಚೆನ್ನೈನಲ್ಲಿರುವ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಿಂದ ತೇರ್ಗಡೆಯಾಗಿ ಲೆಫ್ಟಿನೆಂಟ್ ಪದವಿಯೊಂದಿಗೆ ಹೊರಹೊಮ್ಮಿದ್ದಾರೆ. ಕೊಳತೋಡು ಬೈಗೋಡು ಗ್ರಾಮದ ತನುಷ್ ಅಪ್ಪಯ್ಯ ಗೋಣಿಕೊಪ್ಪಲಿನ ಕೂರ್ಗ್ ಪಬ್ಲಿಕ್ ಶಾಲೆಯಲ್ಲಿ (ಕಾಪ್ಸ್) ದ್ವಿತೀಯ ಪಿಯುಸಿವರೆಗೆ ವ್ಯಾಸಂಗ ಮಾಡಿ ಬೆಂಗಳೂರಿನ ದಯಾನಂದ ಸಾಗರ ಇಂಜಿನಿಯರಿಂಗ್ ಕಾಲೇಜಿನಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಅಲಹಾಬಾದ್ ನಲ್ಲಿ ಎಸ್.ಎಸ್. ಬಿ. ಪೂರ್ಣಗೊಳಿಸಿದ್ದ ತನುಷ್ ಅಪ್ಪಯ್ಯ, ಶಾರ್ಟ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 8ನೇ ರ್ಯಾಂಕ್ ಪಡೆದು ಚೆನ್ನೈನ ಆಫೀಸರ್ಸ್ ಟ್ರೈನಿಂಗ್ ಅಕಾಡಮಿಗೆ ಸೇರಿದ್ದರು. ತನುಷ್ ಅಪ್ಪಯ್ಯ ಕೊಳತೋಡು ಬೈಗೋಡು ಗ್ರಾಮದ ಮುರುವಂಡ ಎ.ಬೋಪಣ್ಣ (ಮುತ್ತು) ಮತ್ತು ವಿನುತಾ (ತಾಮನೆ: ಬೊಜ್ಜಂಗಡ) ದಂಪತಿಯ ಪುತ್ರರಾಗಿದ್ದಾರೆ.






