ಲೇಖಕ: admin

ಮಡಿಕೇರಿ ಸೆ.12 : ಕುಶಾಲನಗರದ ಶ್ರೀ ಉದ್ಭವ ಸುಬ್ರಹ್ಮಣ್ಯ ಸ್ವಾಮಿ ದೇವಾಲಯಕ್ಕೆ ಮಡಿಕೇರಿ ಕ್ಷೇತ್ರದ  ಶಾಸಕ ಡಾ. ಮಂತರ್ ಗೌಡ  ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು  ಹಾಜರಿದ್ದರು.

Read More

ಸುಂಟಿಕೊಪ್ಪ ಸೆ.13 : ಶ್ರೀ ದೇವಿ ನಾರ್ಗಾಣೆ ಗ್ರಾಮದ ಶ್ರೀ ವಿನಾಯಕ ಸೇವಾ ಸಮಿತಿ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಶಿವಪ್ರಸಾದ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಆಕಾಶ್ ನೇಮಕಗೊಂಡಿದ್ದಾರೆ. ಕಳೆದ 10 ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ ಸಮಿತಿಗೆ ಉಪಾಧ್ಯಕ್ಷರಾಗಿ ವಿನೋದ್‍ಕುಮಾರ್, ಖಜಾಂಜಿಯಾಗಿ ಮಹೇಂದ್ರ (ಚಾಮಿ), ಸಹಕಾರ್ಯದರ್ಶಿ ಬಿ.ಕೆ.ರಾಜೇಶ್, ಸಮಿತಿ ಸದಸ್ಯರುಗಳಾಗಿ ಕಿರಣ್, ಮನೋಜ್, ರಾಜೇಶ್, ಆದರ್ಶ್, ವಿಷ್ಣು, ಮಧು, ಪ್ರಶಾಂತ್, ಕಾರ್ತಿಕ್, ಸುನಿಲ್ ಹಾಗೂ ಸುದಿ ನೇಮಕಗೊಳಿಸಲಾಯಿತು.

Read More

ಸುಂಟಿಕೊಪ್ಪ ಸೆ.12 : ಮಾದಾಪುರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ. ಕಾಂಗ್ರೆಸ್‍ನಿಂದ ಮಾದಪುರ ವಲಯ ಕಾಂಗ್ರೆಸ್ ಅಧ್ಯಕ್ಷ ದಾದು ಬೋಪಯ್ಯ ಸೇರಿದಂತೆ ಎಲ್ಲಾ 13 ಸ್ಥಾನಗಳಿಗೆ ಆಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೂ 1 ಸ್ಥಾನಗಳಿಸದೆ ಹೀನಾಯ ಸೋಲು ಕಂಡಿದೆ. ಮಾದಾಪುರ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎ.ಲತೀಫ್ ಪಕ್ಷೇತರರಾಗಿ ಸ್ಪರ್ಧಿಸಿ ಜಯ ಸಾಧಿಸಿದ್ದರೆ. ಹಿರಿಯ ಸಹಕಾರಿ ಸಿ.ಎ.ತಮ್ಮಯ್ಯ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ. ಕಾಂಗ್ರೆಸ್ ಪಕ್ಷದ ಆಭ್ಯರ್ಥಿಗಳ ಪರವಾಗಿ ಶಾಸಕ ಡಾ.ಮಂಥರ್‍ಗೌಡ ಸೋಮವಾರಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಪ್ರಚಾರ ನಡೆಸಿದರೂ ಮತದಾರರ ಮನಗೆಲ್ಲಲು ಸಾಧ್ಯವಾಗಲಿಲ್ಲ. ಬಿಜೆಪಿಯ ಸಂಘದ ಅಧ್ಯಕ್ಷ ಬಿಜ್ಜಂಡ ಮೊಣ್ಣಪ್ಪ ಸುಬ್ರಮಣಿ, ನಾಪಂಡ ಉಮೇಶ ಉತ್ತಪ್ಪ, ಕುಟ್ಟಂಡ ಕುಟ್ಟಪ್ಪ, ಮುಕ್ಕಾಟಿರ ತಿಮ್ಮಯ್ಯ, ಪಿ.ಪಿ.ತಿಲಕ ಕುಮಾರ್, ನಾಗಂಡ ಭವಿನ್, ನಾಗಂಡ ಸೋನುದೇಚಮ್ಮ, ಸಿ.ಎಸ್.ಪವಿತ್ರ ಹರೀಶ, ಎಂ.ಆರ್.ಗಿರೀಶ,ಭೀಮಯ್ಯ ಹೆಚ್.ಈ.,…

Read More

ಮಡಿಕೇರಿ ಸೆ.11 : ಅಮ್ಮತ್ತಿಯ ಕಲ್ ಗುಡಿ ಆರ್ಮರಿಯಿಂದ ಸಿಂಗಲ್ ಬ್ಯಾರಲ್ ಕೋವಿಯನ್ನು ಲೋಕಾರ್ಪಣೆಗೊಳಿಸಲಾಯಿತು. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ ಅವರು ಕೋವಿಯನ್ನು ಅನಾವರಣಗೊಳಿಸಿದರು. ಕೊಡಗಿನ ವೀರಪರಂಪರೆಯ ಕೂರ್ಗ್ ವಾರಿಯರ್ ಲೋಗೊ ಹೊಂದಿರುವ ಅತ್ಯುತ್ತಮ ಗುಣಮಟ್ಟದ ಭಾರತೀಯ ಸಿಂಗಲ್ ಬ್ಯಾರಲ್ ನ ನೂತನ ಕೋವಿಯನ್ನು ಅಮ್ಮತ್ತಿಯ ಕಲ್ ಗುಡಿ ಗನ್ನ್ ಹೌಸ್ ನಲ್ಲಿ ಗಾಳಿಗೆ ಗುಂಡು ಹಾರಿಸುವ ಮೂಲಕ ಶಾಸಕ ಪೊನ್ನಣ್ಣ ಅವರು ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭ ಕಲ್ಗುಡಿಯ ಆರ್ಮರಿಯ ಸಂಸ್ಥಾಪಕ ನೆಲ್ಲಮಕ್ಕಡ ಶಂಭು ಸೋಮಣ್ಣ, ಸಂಸದ ಪ್ರತಾಪಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಮತ್ತಿತರರು ನೂತನ ಕೋವಿಯನ್ನು ಲೋಕಾರ್ಪಣೆಗೊಳಿಸಿದರು.

Read More

ಮಡಿಕೇರಿ ಸೆ.11 : ಮಡಿಕೇರಿ ದಸರಾ-2023 ರ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಹಾಗೂ ಕೊಡಗು ಪತ್ರಕರ್ತರ ಸಂಘದ ಗೌರವ ಸಲಹೆಗಾರ ಅನಿಲ್ ಹೆಚ್.ಟಿ ಮತ್ತು ಕವಿಗೋಷ್ಠಿ ಅಧ್ಯಕ್ಷರಾಗಿ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಆಯ್ಕೆಯಾಗಿದ್ದಾರೆ.

Read More

ಮಡಿಕೇರಿ ಸೆ.11 :  ಗೌಳಿಬೀದಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ  ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಸ್ಪರ್ಧೆ ನಡೆಯಿತು. ಗೌಳಿ ಸಮುದಾಯದವರು ಅನಾದಿ ಕಾಲದಿಂದಲೂ ವಿಶೇಷವಾಗಿ ಆಚರಿಸಿಕೊಂಡು ಬರುತ್ತಿರುವಂತೆ ಶ್ರೀ ಕೃಷ್ಣ ಜಯಂತಿಯನ್ನು ಈ ವರ್ಷವೂ ದೇವಾಲಯ ಸಮಿತಿಯಿಂದ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಮೊಸರು ಕುಡಿಕೆ ಒಡೆಯುವ ಸ್ಪರ್ಧಿಗಳಾಗಿ ಸಂತೋಷ್ ಹಾಗೂ ಮಹೇಶ್ ಭಾಗವಹಿಸಿದರು. ಸ್ಪರ್ಧೆಗೂ ಮುನ್ನ  ದೇವಾಲಯದಲ್ಲಿ ಶ್ರೀ ಕೃಷ್ಣನಿಗೆ ವಿಷೇಶ ಪೂಜೆ ಸಲ್ಲಿಸಿ  ನಂತರ ಇಬ್ಬರು ಯುವಕರು ಮೊಸರು ಕುಡಿಕೆ ಒಡೆಯಲು ಮುಂದಾದರು..  ಯುವಕರು ನೀರಿನೇಟನ್ನು ಲೆಕ್ಕಿಸದೆ ವಾದ್ಯಕ್ಕೆ ಸರಿಯಾಗಿ ಹೆಜ್ಜೆ ಹಾಕುತ್ತಾ ಮೊಸರು ಕುಡಿಕೆ ಓಡೆಯುವಲ್ಲಿ ಯಶಸ್ವಿಯಾದರು. ವಿಜೇತರಾದ ಸ್ಪರ್ಧಿಗಳಿಗೆ ದೇವಾಲಯದಲ್ಲಿ ಸಾಂಪ್ರದಾಯಕ ಬಹುಮಾನ ನೀಡಿ ಗೌರವಿಸಲಾಯಿತು. ಪ್ರತೀ ವರ್ಷದಂತೆ ದೇವಾಲಯದಲ್ಲಿ ನಡೆದ ಪುಟಾಣಿ ಮಕ್ಕಳ ಶ್ರೀ ಕೃಷ್ಣ ಛದ್ಮವೇಷ ಹಾಗೂ ನೃತ್ಯ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು.

Read More

ಮಡಿಕೇರಿ ಸೆ.11 : ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ವಾರ್ಷಿಕ ಮಹಾಸಭೆಯು ಯೂನಿಯನ್ ಅಧ್ಯಕ್ಷರಾದ ಎ.ಕೆ.ಮನುಮುತ್ತಪ್ಪ  ಅಧ್ಯಕ್ಷತೆಯಲ್ಲಿ ಸೆ.12 ರಂದು ಬೆಳಗ್ಗೆ 11.30 ಗಂಟೆಗೆ ಯೂನಿಯನ್ ಸಭಾಂಗಣದಲ್ಲಿ ನಡೆಯಲಿದೆ. ಯೂನಿಯನ್ ಸದಸ್ಯರುಗಳು ಪಾಲ್ಗೊಳ್ಳುವಂತೆ ಕೊಡಗು ಜಿಲ್ಲಾ ಸಹಕಾರ ಯೂನಿಯನ್‍ನ ಸಿಇಒ ಯೋಗೇಂದ್ರ ನಾಯಕ್ ತಿಳಿಸಿದ್ದಾರೆ.

Read More

ಮಡಿಕೇರಿ ಸೆ.11 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ. 14 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಮಾಂಡವಿ ಮೋಟಾರ್ಸ್, ಮೈಸೂರು, ಅಟೋ ಲೈವ್, ಮೈಸೂರು, ಎಸ್‍ಎಲ್‍ಎನ್ ಕಾಫಿ, ಕೂಡಿಗೆ, ಸಮರ್ಥ ನಿಧಿ ಲಿ., ಮಡಿಕೇರಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-225821 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ  ಕೋರಿದ್ದಾರೆ.

Read More

ಮಡಿಕೇರಿ ಸೆ.11 :   ಮಡಿಕೇರಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ  ನಡೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ ವಿಸ್ಮಯಿ ಚಕ್ರವರ್ತಿ  ಅಧ್ಯಕ್ಷತೆಯಲ್ಲಿ ನಡೆದ ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು. ಅಥ್ಲೆಟಿಕ್ಸ್, ವಾಲಿಬಾಲ್, ಕಬ್ಬಡಿ, ಪ್ರೋಬಾಲ್, ಖೋ-ಖೋ ಮತ್ತು ಯೋಗ  ಸ್ಪರ್ಧೆಗಳು ನಡೆಯಿತು.  ಸುಮಾರು 500 ಕ್ಕೂ ಹೆಚ್ಚು ಮಹಿಳಾ ಮತ್ತು ಪುರುಷ ಕ್ರೀಡಾ ಪಟುಗಳು ಭಾಗವಹಿಸಿದರು. ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ಕ್ರೀಡಾಪಟುಗಳು, ಗುಂಪು ಸ್ಪರ್ಧೆಯಲ್ಲಿ ಜಯಗಳಿಸಿ, ಪ್ರಥಮ ಸ್ಥಾನ ಗಳಿಸಿದ ತಂಡಗಳು ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾದರು.

Read More

ಮಡಿಕೇರಿ ಸೆ.11 : ಕೊಡಗು ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ.) ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2023 ಸಮೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಗ್ರಾ.ಪಂ.ಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಜಿಲ್ಲೆಯನ್ನು ಈಗಾಗಲೇ ಒಡಿಎಫ್ ಪ್ಲಸ್ ಎಂದು ಘೋಷಿಸಲಾಗಿದೆ. ಗ್ರಾ.ಪಂ.ಗಳಲ್ಲಿ ಸ್ವಚ್ಛ ವಾಹಿನಿಯ ಮೂಲಕ ಮನೆ ಮನೆಯಿಂದ ಕಸ ಸಂಗ್ರಹಿಸಿ ಸೂಕ್ತವಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದರು. ಮಹಿಳಾ ಸ್ವಾವಲಂಬನೆಯ ಭಾಗವಾಗಿ ಸ್ವ ಸಹಾಯ ಸಂಘದ ಜೊತೆಗೆ ಒಪ್ಪಂದ ಮಾಡಿಕೊಂಡು ಸೂಕ್ತ ರೀತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ ಕೈಗೊಳ್ಳಲಾಗುತ್ತಿದೆ ಎಂದರು. ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು ಮಾತನಾಡಿ ಗ್ರಾ.ಪಂ.ಜನಪ್ರತಿನಿಧಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರದಿಂದ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯು ಯಶಸ್ವಿಯಾಗಿದೆ. ಜಿಲ್ಲೆಯ ಎಸ್‍ಬಿಎಂ(ಗ್ರಾ.) ಸಮಾಲೋಚಕರೂ ಸಹ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲೆಗೆ ಒಳ್ಳೆಯ ಹೆಸರು ತಂದಿದ್ದಾರೆ ಎಂದು ಪ್ರಶಂಸಿಸಿದರು. ಇದೇ…

Read More