ಮಡಿಕೇರಿ ಆ.16 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಬರ ಬರುವ ಸಾಧ್ಯತೆಗಳಿದೆ. ಈ ಕಾರಣದಿಂದ ಮಳೆಗಾಗಿ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಮೊರೆ ಹೋಗಲು ಅಖಿಲ ಕೊಡವ ಸಮಾಜ ನಿರ್ಧರಿಸಿದೆ. ಆ.17 ರಂದು ಬೆಳಗ್ಗೆ 10.30 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವಿಧ ಕೊಡವ ಸಮಾಜ, ಸಂಘ ಸಂಸ್ಥೆಗಳು ಹಾಗೂ ಕೊಡಗಿನ ಮೂಲ ನಿವಾಸಿಗಳು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಲೇಖಕ: admin
ಮಡಿಕೇರಿ ಆ.16 : ಮಡಿಕೇರಿ ಕೊಡವ ಸಮಾಜದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ ಅವರು ಧ್ವಜಾರೋಹಣ ಮಾಡುವ ಮೂಲಕ ನಾಡಿನ ಜನತೆಗೆ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷ ನಂದಿನೆರವಂಡ ಚೀಯಣ್ಣ, ಕಾರ್ಯದರ್ಶಿ ಕನ್ನಂಡ ಸಂಪತ್ ಕುಮಾರ್, ಜಂಟಿ ಕಾರ್ಯದರ್ಶಿ ನಂದಿನೆರವಂಡ ದಿನೇಶ್, ನಿರ್ದೇಶಕರುಗಳಾದ ಕೇಕಡ ವಿಜುದೇವಯ್ಯ, ಮಂಡಿರಸದಾಮುದ್ದಪ್ಪ, ಬೊಪ್ಪಂಡ ಸರಳಾ ಕರುಂಬಯ್ಯ, ಸದಸ್ಯರುಗಳಾದ ಚೋವಂಡ ಕಾಳಪ್ಪ, ಚೊಟ್ಟೆಯಂಡ ಸಂಜು, ಮಣವಟ್ಟಿರ ಚಿಣ್ಣಪ್ಪ, ಕುಡುವಂಡ ಉತ್ತಪ್ಪ, ಚೊಟ್ಟೆಯಂಡ ಅಪ್ಪಾಜಿ, ಪುಟ್ಟಿಚಂಡ ಡಾನ್ ದೇವಯ್ಯ ಹಾಗೂ ಸಮಾಜದ ಸಿಬ್ಬಂದಿವರ್ಗ ಹಾಜರಿದ್ದರು.
ಮಡಿಕೇರಿ ಆ.16 – ಮಡಿಕೇರಿ ರೋಟರಿ ವುಡ್ಸ್ ವತಿಯಿಂದ ನಗರದ ಆಂಜನೇಯ ದೇವಸ್ಥಾನದ ಸಮೀಪ ಓಂಕಾರ್ ಬಾಯ್ಸ್ ಆಟೋ ಚಾಲಕರ ಸಂಘದ ಸಹಯೋಗದಲ್ಲಿ ಸಂಭ್ರಮದ ಸ್ವಾತಂತ್ರ್ಯ ಉತ್ಸವವನ್ನು ಆಚರಿಸಲಾಯಿತು. ಆರಂಭದಲ್ಲಿ ಧ್ವಜಾರೋಹಣಗೈದ ರೋಟರಿ ವುಡ್ಸ್ ನ ಅಧ್ಯಕ್ಷ ಕೆ.ವಸಂತ್ ಕುಮಾರ್ , ಪ್ರೀತಿ, ಸಹಕಾರ, ಮಾನವೀಯತೆಯೊಂದಿಗೆ ದೇಶಭಕ್ತಿಯನ್ನು ಸಾರುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಮಡಿಕೇರಿಯ ಹಿರಿಯ ಆಟೋ ಚಾಲಕರಾಗಿರುವ ಬಡೇ ಸಾಬ್ ಅವರನ್ನು ರೋಟರಿ ವುಡ್ಸ್ ವತಿಯಿಂದ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ರೋಟರಿ ವಲಯ ಸೇನಾನಿ ಸಂಪತ್ ಕುಮಾರ್, ರೊಟರಿ ಸದಸ್ಯರಾದ ರವಿ ಕುಮಾರ್, ಲೋಕೇಶ್, ರವೀಂದ್ರ, ಪ್ರವೀಣ್, ರಾಜೇಶ್ ಚೌದರಿ, ಧನಂಜಯ ಶಾಸ್ತ್ರಿ, ಲೀಲಾವತಿ, ಗೀತಾ ಸೂರ್ಯ, ಪ್ರಕೃತಿ ಸುರೇಶ್, ಕಶ್ಯಪ್ , ಓಂಕಾರ್ ಬಾಯ್ಸ್ ಆಟೋ ಚಾಲಕರ ಸಂಘದ ಪ್ರಮುಖರಾದ ಹೇಮಂತ್, ಸುನಿಲ್, ಆದಿ, ಯತೀಶ್,ಉಮೇಶ್, ಲೋಕೇಶ್ ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
ಮಡಿಕೇರಿ ಆ.16 : ದೇಶಪ್ರೇಮ ಎಂಬುದು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ದೇಶಪ್ರೇಮ ಎಂಬುದು ನಮ್ಮ ಮನದಲ್ಲಿ ಸದಾ ಚಿರಂತನವಾಗಿರಬೇಕು. ದೇಶಕ್ಕಾಗಿ ಪ್ರತಿಯೋವ೯ರೂ ನನ್ನ ಕೊಡುಗೆ ಏನು ಎಂದು ಆತ್ಮಾವಲೋಕನ ಮಾಡಿಕೊಂಡು ದೇಶಕ್ಕಾಗಿ ಮಹತ್ತರ ಕೊಡುಗೆ ನೀಡುವಂತಾಗಬೇಕು ಎಂದು ರೋಟರಿ ಮಿಸ್ಟಿ ಹಿಲ್ಸ್ ನಿದೇ೯ಶಕ ಶಂಕರ್ ಪೂಜಾರಿ ಹೇಳಿದರು . ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ನಗರದ ಸಕಾ೯ರಿ ಬಾಲಕರ ಬಾಲಮಂದಿರದಲ್ಲಿ 77 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ದ್ವಜಾರೋಹಣ ಮಾಡಿದರು. ಬಾಲಮಂದಿರದ ಮಕ್ಕಳು, ರೋಟರಿ ಮಿಸ್ಟಿ ಹಿಲ್ಸ್ ಸದಸ್ಯರು ದ್ವಜವಂದನೆ ಕೈಗೊಂಡರು. ಈ ಸಂದಭ೯ ರೋಟರಿ ನಿದೇ೯ಶಕ ಶಂಕರ್ ಪೂಜಾರಿ ಮಾತನಾಡಿ, ಜಗತ್ತಿನಲ್ಲಿಯೇ ವೈವಿಧ್ಯಮಯ ಭಾಷೆಗಳು, ಸಂಸ್ಕೖತಿ, ಆಚಾರ, ವಿಚಾರ ಹೊಂದಿದ ದೇಶವಾಗಿ ಭಾರತ ಕಂಗೊಳಿಸುತ್ತಿದೆ. ಭಾರತವನ್ನು ನಾನಾ ಕಾರಣಗಳಿಂದ ಹೀಗೆಳೆಯುತ್ತಿದ್ದವರೇ ಇದೀಗ ಭಾರತದ ಹಿರಿಮೆಯನ್ನು ಕೊಂಡಾಡುತ್ತಿದ್ದಾರೆ. ನಮ್ಮ ದೇಶದ ಮಹತ್ವವನ್ನು ತಿಳಿಯುವುದು ಪ್ರತೀಯೋವ೯ರ ಆದ್ಯತೆಯಾದರೇ ದೇಶಪ್ರೇಮ ಎಂಬದು ಮನದಲ್ಲಿ ಚಿರಸ್ಥಾಯಿಯಾಗಿರುತ್ತದೆ…
ಮಡಿಕೇರಿ ಆ.16 : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕೊಡಗಿನ ಗೌರಮ್ಮ ದತ್ತಿ ಕಾರ್ಯಕ್ರಮದಡಿ ಆ.24 ರಂದು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಮಡಿಕೇರಿಯ ಜೂನಿಯರ್ ಕಾಲೇಜು ಪ್ರೌಢಶಾಲಾ ಸಭಾಂಗಣದಲ್ಲಿ ಕಥೆ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಅಲ್ಲದೆ ನಾಡಿಸೋಜ ಮಕ್ಕಳ ಸಾಹಿತ್ಯ ಪುರಸ್ಕಾರ ದತ್ತಿ ಕಾರ್ಯಕ್ರಮದಡಿ ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕಥೆ ಬರೆಯುವ ಸ್ಪರ್ಧೆಯನ್ನು ಆ.25 ರಂದು ಆಯೋಜಿಸಲಾಗಿದೆ. ಈ ಎರಡೂ ಸ್ಪರ್ಧೆಗಳು ನಡೆಯಲಿದೆ. ಮಡಿಕೇರಿಯ ಜೂನಿಯರ್ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ. ಸ್ಪರ್ಧಿಸುವ ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ತಮ್ಮ ಶಾಲೆಯ ಅಥವಾ ಕಾಲೇಜಿನ ಅನುಮತಿ ಪತ್ರದೊಂದಿಗೆ ಹಾಜರಿರಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂಜಿಲ ಆ.16 : ಕುಂಜಿಲ ಕಕ್ಕಬ್ಬೆ ಸಮೀಪದ ವಯಕೋಲ್ ರೌಳತುಲ್ ಉಲೂಂ ಮದ್ರಸದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಯಕೋಲ್ ಸಮಿತಿ ಅಧ್ಯಕ್ಷರಾದ ಅಹ್ಮದ್ ಹಾಜಿ ಅವರು ಧ್ವಜಾರೋಹಣದೊಂದೀಗೆ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಮದ್ರಸ ಅಧ್ಯಾಪಕರಾದ ರಫೀಖ್ ಸಖಾಫಿ ಪ್ರಾಸ್ತಾವಿಕವಾಗಿ ಭಾಷಣ ನೆರವೇರಿಸಿ ವಿದ್ಯಾರ್ಥಿಗಳು ನೈಜ ಜೀವನದಲ್ಲಿ ಶಾಂತಿ ಮತ್ತು ಶಿಸ್ತು ಕ್ರಮ ಬದ್ಧವಾಗಿ ಅಳವಡಿಸೂದರೊಂದೀಗೆ ದೇಶ ಪ್ರೇಮವನ್ನು ಸಾರುವವರಾಗಬೇಕೆಂಬ ಸಂದೇಶವನ್ನು ನೀಡಿದರು. ಕಾರ್ಯಕ್ರಮದಲ್ಲಿ ವಯಕೋಲ್ ಸಮಿತಿ ಕಾರ್ಯದರ್ಶಿ ಅಬು, ಕೋಶಾಧಿಕಾರಿ ಉಸ್ಮಾನ್ ಸಮಿತಿ ಸದಸ್ಯರುಗಳು ಮದ್ರಸ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹಾಜರಿದ್ದರು.
ಮಡಿಕೇರಿ ಆ.16 : ಪೊನ್ನಂಪೇಟೆ ತಾಲ್ಲೂಕಿನ ಎಲ್ಲಾ ಶಾಲಾ ಕಾಲೇಜುಗಳು ಒಂದೇ ವೇದಿಕೆಯಡಿ ಅರ್ಥಪೂರ್ಣವಾಗಿ ಸ್ವಾತಂತ್ರ್ಯೋತ್ಸವ ಆಚರಣೆ ಮಾಡುವಂತೆ ಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ ನೀಡಿದರು. ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು “ನಿನಾದ” ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಜಿಲ್ಲೆಯ ಆಯಾಯ ತಾಲೂಕಿನ ಶಾಲಾ ಕಾಲೇಜುಗಳು ಒಂದೇ ವೇದಿಕೆಯಡಿಯಲ್ಲಿ ಸೇರಿ ಸ್ವಾತಂತ್ರ್ಯ ದಿನಾಚರಣೆ ಸೇರಿದಂತೆ ವಿವಿಧ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವಂತಾಗಬೇಕು, ಇದರಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಇತರರಿಗೂ ಪಸರಿಸಲು ಸಹಕಾರಿಯಾಗುತ್ತದೆ ಹಾಗೂ ಸ್ವಾತಂತ್ರ್ಯ ದಿನಾಚರಣೆಗೂ ಒಂದು ಅರ್ಥ ಬರುತ್ತದೆ ಎಂದರು. ಪೊನ್ನಂಪೇಟೆ ತಾಲೂಕಿನಲ್ಲಿರುವ ಶಾಲಾ ಕಾಲೇಜುಗಳು ಬೇರೆ ಬೇರೆ ಕಾರ್ಯಕ್ರಮ ಮಾಡುವ ಬದಲು ತಾಲೂಕು ಆಡಳಿತದ ಸಹಕಾರದಲ್ಲಿ ಒಂದೇ ವೇದಿಕೆಯಡಿಯಲ್ಲಿ ಸ್ವಾತಂತ್ರ್ಯ ದಿನವನ್ನು ಆಚರಿಸುವ ಮೂಲಕ ಅದ್ದೂರಿಯ ಹಾಗೂ ಅರ್ಥಪೂರ್ಣ ಕಾರ್ಯಕ್ರಮ ನೀಡಬೇಕಿದೆ ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ನಮ್ಮ ಸ್ಥಳೀಯ ಜನಪ್ರತಿನಿಧಿಗಳು ಗಮನಹರಿಸಬೇಕಿದೆ ಎಂದರು. ಹಿರಿಯರು ತಂದುಕೊಟ್ಟ ಸ್ವಾತಂತ್ರ್ಯವನ್ನು…
ಮಡಿಕೇರಿ ಆ.16 : ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ಬರ ಬರುವ ಸಾಧ್ಯತೆಗಳಿದೆ. ಈ ಕಾರಣದಿಂದ ಮಳೆಗಾಗಿ ಪಾಡಿ ಶ್ರೀ ಇಗ್ಗುತ್ತಪ್ಪ ದೇವರ ಮೊರೆ ಹೋಗಲು ಅಖಿಲ ಕೊಡವ ಸಮಾಜ ನಿರ್ಧರಿಸಿದೆ. ಆ.17 ರಂದು ಬೆಳಗ್ಗೆ 10.30 ಗಂಟೆಗೆ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುವುದು ಎಂದು ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವಿಧ ಕೊಡವ ಸಮಾಜ, ಸಂಘ ಸಂಸ್ಥೆಗಳು ಹಾಗೂ ಕೊಡಗಿನ ಮೂಲ ನಿವಾಸಿಗಳು ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ.
ಮಡಿಕೇರಿ ಆ.16 : ಜಿಲ್ಲಾ ಪೊಲೀಸ್ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಆವರಣದಲ್ಲಿ ಧ್ವಜಾರೋಹಣ ಮಾಡಿ, ಧ್ವಜ ವಂದನೆ ಸಲ್ಲಿಸಿ ಶ್ರದ್ದಾಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭ ಜಿಲ್ಲಾ ಪೊಲೀಸ್ ಕಛೇರಿ, ಡಿ.ಎ.ಆರ್ ಹಾಗು ಇತರ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿಯವರು ಹಾಜರಿದ್ದರು.
ಮಡಿಕೇರಿ ಆ.16 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಕಾಲೇಜಿನಲ್ಲಿ ಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಧ್ವಜಾರೋಹಣ ನೆರವೇರಿಸಿದರು. ನಂತರ ಬಾಳೆಲೆ ಮುಖ್ಯರಸ್ತೆಯಲ್ಲಿ ಮೆರವಣಿಗೆ ಮೂಲಕ ತ್ರಿವರ್ಣ ಭಾವುಟವನ್ನು ಹಿಡಿದು, ಘೋಷಣೆಗಳನ್ನು ಕೂಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮಿಸಿದರು. ಇದೇ ಸಂದರ್ಭ ವಕೀಲ ಚಿಮ್ಮುಣಮಾಡ ಪ್ರಶಾಂತ್ ಚಿಣ್ಣಪ್ಪ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಅನಿಸಿಕೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ಧೈರ್ಯವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಬಾಳೆಲೆ ಗ್ರಾ.ಪಂ ನಿಕಟಪೂರ್ವ ಅಧ್ಯಕ್ಷ ಪೊಡಮಾಡ ಸುಕೇಶ್ ಭೀಮಯ್ಯ, ನಿಟ್ಟೂರು ಗ್ರಾ.ಪಂ ನಿಕಟಪೂರ್ವ ಅಧ್ಯಕ್ಷ ಕಾಟಿಮಾಡ ಶರೀನ್ ಮುತ್ತಣ್ಣ, ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳಾಗಿ ಚಿಮ್ಮುಣಮಾಡ ಕೃಷ್ಣ ಗಣಪತಿ, ಉಪಾಧ್ಯಕ್ಷರುಗಳಾದ ಕಾಯಮಾಡ ರಾಜ, ಕಿರುದಂಡ ದೇವಯ್ಯ, ಜಂಟಿ ಕಾರ್ಯದರ್ಶಿ ಪೋಡಮಾಡ ಮೋಹನ್, ಖಜಾಂಚಿ ಅಡ್ಡೇಂಗಡ ದೇವಯ್ಯ, ನಿರ್ದೇಶಕರುಗಳಾದ ಅಡ್ಡೇಂಗಡ ಅರುಣ್, ಮಾಚಂಗಡ ಭೀಮಯ್ಯ, ಮೇಚಂಡ ಪೆಮ್ಮಯ್ಯ,…






