ಸೋಮವಾರಪೇಟೆ ಜು.10 NEWS DESK : ಎಸ್ಐಆರ್ ಮಾಹಿತಿ ಸಭೆ ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗು ಜೆಡಿಎಸ್ ಪದಾಧಿಕಾರಿಗಳು ಭಾಗವಹಿಸಿದ್ದರು. ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವಂತಹ ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ಮತದಾರರ ಎನ್ಯುಮರೇಶನ್ ಫಾರಂಗಳನ್ನು ಕೊಟ್ಟು ಅದನ್ನು ಭರ್ತಿ ಮಾಡಲು ಸಹಕಾರ ನೀಡಬೇಕು. ಪಕ್ಷದ ಪದಾಧಿಕಾರಿಗಳು ಬಿಎಲ್ಒಗಳಿಗೆ ಸಹಕಾರ ನೀಡಬೇಕು. ಮನೆಗಳ ಮಾಹಿತಿ ನೀಡಬೇಕು. ಕೆಲವೊಂದು ಮನೆಗಳಿಗೆ ತಲುಪಲಾಗದ ಸ್ಥಿತಿ ಇದ್ದರೆ, ಪಿಡಿಒಗಳೊಂದಿಗೆ ಸಹಕಾರ ನೀಡಬೇಕು ಎಂದು ಉಪವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮನವಿ ಮಾಡಿದರು. ಪ್ರತಿಯೊಬ್ಬರಿಗೂ ಮತದಾನ ಹಕ್ಕು ಸಿಗಲೇಬೇಕು. ಇದ್ದಕ್ಕಾಗಿ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದೆ. ತಾವುಗಳು ಕೈಜೋಡಿಸಬೇಕು. ಬಿಎಲ್ಒಗಳು ಶ್ರಮವಹಿಸಿ ಉತ್ತಮ ಕರ್ತವ್ಯ ನಿರ್ವಹಿಸಿದರೆ ಅಂತಹವರನ್ನು ಗೌರವಿಸಲಾಗುವುದು ಎಂದು ಹೇಳಿದರು. ಹರದೂರು ಪಂಚಾಯಿತಿ ವ್ಯಾಪ್ತಿಯಲ್ಲಿ 100 ಫಾರಂಗಳನ್ನು ಮನೆ ಮನೆಗೆ ವಿತರಿಸಲಾಗಿದೆ. ಅದರಲ್ಲಿ 30ರಷ್ಟು ಫಾರಂಗಳಲ್ಲಿ ಮಾಹಿತಿ ಕೊರತೆಯಿಂದ ತಪ್ಪಾಗಿ ಭರ್ತಿ ಮಾಡಲಾಗಿದೆ.…
ಲೇಖಕ: admin
ಸೋಮವಾರಪೇಟೆ ಜು.10 NEWS DESK : ರೋಟರಿ ಸಂಸ್ಥೆ ಸೇವೆ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳಿಗೆ ಬದ್ಧವಾಗಿರುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಘಟನೆಯಾಗಿದೆ ಎಂದು ರೋಟರಿ ಸಂಸ್ಥೆಯ ಮಾಜಿ ಜಿಲ್ಲಾ ಪ್ರಾಂತಪಾಲ ಅಭಿನಂದನ್ ಶೆಟ್ಟಿ ಹೇಳಿದರು. ಪಟ್ಟಣದ ಜಾನಕಿ ಕನ್ವೆನ್ಷನ್ ಹಾಲ್ನಲ್ಲಿ ನಡೆದ ರೋಟರಿ ಹಿಲ್ಸ್ ಸೋಮವಾರಪೇಟೆ 2026–27ನೇ ಸಾಲಿನ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೋಟರಿಯ ವಿಶ್ವವ್ಯಾಪಿ ಸಾಧನೆಗಳಲ್ಲಿ ಪೋಲಿಯೋ ನಿರ್ಮೂಲನಾ ಅಭಿಯಾನ ಪ್ರಮುಖವಾಗಿದ್ದು, ಸಮಾಜಸೇವಾ ಮನೋಭಾವ ಹಾಗೂ ಉತ್ತಮ ವ್ಯಕ್ತಿತ್ವ ಹೊಂದಿರುವ ಯುವಕರು ರೋಟರಿ ಸದಸ್ಯರಾಗಿ ಸೇರ್ಪಡೆಗೊಂಡು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ನಂತರ ಅಭಿನಂದನ್ ಶೆಟ್ಟಿ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ರೋಟರಿ ಸದಸ್ಯತ್ವ ವಿಸ್ತರಣಾ ಸಮಿತಿ ಅಧ್ಯಕ್ಷ ಎಚ್.ಟಿ. ಅನಿಲ್ ಮಾತನಾಡಿ, ದಾಖಲೆಯ ಸದಸ್ಯತ್ವ ನೋಂದಣಿ ಮಾಡಿದ ಕೀರ್ತಿ ಸೋಮವಾರಪೇಟೆ ರೋಟರಿ ಹಿಲ್ಸ್ಗೆ ಸಲ್ಲುತ್ತದೆ. ರೋಟರಿ ಜಿಲ್ಲೆ 3181ರಲ್ಲಿ ಕೇವಲ ಎಂಟು ದಿನಗಳಲ್ಲಿ…
ಮಡಿಕೇರಿ NEWS DESK ಜು.10 : ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕೊಡಗು ಜಿಲ್ಲಾ ಸಮಿತಿ ಮತ್ತು ಬಿಸಿಯೂಟ ನೌಕರರ ಸಂಘ ಇಂದು “ಕರಾಳ ದಿನ”ವನ್ನಾಗಿ ಘೋಷಿಸಿಕೊಂಡು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿತು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಆರ್.ಭರತ್ ಅವರ ನೇತೃತ್ವದಲ್ಲಿ ಅಂಗನವಾಡಿ ನೌಕರರ ಸಂಘ ಮತ್ತು ಬಿಸಿಯೂಟ ನೌಕರರ ಸಂಘದ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು. *ಬೇಡಿಕೆಗಳು* ರಾಜ್ಯ ಸರ್ಕಾರ ಈ ಹಿಂದೆ ಚುನಾವಣೆ ಸಂದರ್ಭ ನಿಡಿದ್ದ ಭರವಸೆಯಂತೆ ಅಂಗನವಾಡಿ ಕಾಯ್ಕತೆರ್ಯರಿಗೆ 15 ಸಾವಿರ ರೂ. ಮತ್ತು ಕಾರ್ಯಕರ್ತೆಯರಿಗೆ 10 ಸಾವಿರ ರೂ. ಕನಿಷ್ಟ ಗೌರವ ಧನವನ್ನು ಜಾರಿ ಮಾಡಬೇಕು, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಎಲ್ಕೆಜಿ ಮತ್ತು ಯುಕೆಜಿ ವಿಸ್ತರಣೆ ಆಗಬೇಕು ಮತ್ತು ರಾಜ್ಯದ 10ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ -ಯುಕೆಜಿ ಆರಂಭಕ್ಕೆ ಅನುದಾನ…
ಮಡಿಕೇರಿ ಜು.9 NEWS DESK : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ತಮ್ಮ ಜನ್ಮದಿನದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ, ಕ್ಷೇತ್ರದಾದ್ಯಂತ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿಕೊಂಡರು. :: ದೇವಾಲಯಕ್ಕೆ ಭೇಟಿ :: ಶಾಸಕರು ಮೊದಲಿಗೆ ಪ್ರಸಿದ್ಧ ಭಗಂಡೇಶ್ವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ತಲಕಾವೇರಿಗೆ ತೆರಳಿ ತಾಯಿ ಕಾವೇರಿಗೆ ಪ್ರಾರ್ಥನೆ ಸಲ್ಲಿಸಿ, ಕ್ಷೇತ್ರದ ಜನತೆಯ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. :: ಮಕ್ಕಳೊಂದಿಗೆ ಜನ್ಮದಿನದ ಸಂಭ್ರಮ :: ಧಾರ್ಮಿಕ ಕಾರ್ಯಕ್ರಮಗಳ ನಂತರ ಭಾಗಮಂಡಲದ ಅಟಲ್ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕರು, ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಇದೇ ಸಂದರ್ಭ ಮಕ್ಕಳಿಗೆ ಜೀವನದಲ್ಲಿ ಶಿಸ್ತು ಮತ್ತು ವಿದ್ಯಾಭ್ಯಾಸದ ಮಹತ್ವದ ಕುರಿತು ಸಲಹೆ ನೀಡಿದರು. :: ರಸ್ತೆ ಹಾಗೂ ಬಸ್ ತಂಗುದಾಣ ಲೋಕಾರ್ಪಣೆ :: ಭಾಗಮಂಡಲ ಹಾಗೂ ಕುಂದಚೇರಿಯಲ್ಲಿ ನೂತನವಾಗಿ ನಿರ್ಮಾಣವಾದ ರಸ್ತೆಗಳನ್ನು…
ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002ರ ನ.4 ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ ‘ಸಾಂತ್ವನ ಮಹಿಳಾ ಸಹಾಯವಾಣಿ’ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವನ ಕೇಂದ್ರದಲ್ಲಿ ಈವರೆಗೆ 5824 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 5792 ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. 2026-27ನೇ ಆರ್ಥಿಕ ಸಾಲಿನಲ್ಲಿ 69 ಪ್ರಕರಣಗಳು ದಾಖಲಾಗಿ, 51 ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ 18 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷರಾದ ಬಿ.ಕೆ.ರವೀಂದ್ರ ರೈ ಹಾಗೂ ಪ್ರಧಾನ ಕಾರ್ಯದರ್ಶಿಯವರಾದ ನಮಿತ ಆರ್.ರೈ ಅವರು ಕೋರಿದ್ದಾರೆ.
ಸುಂಟಿಕೊಪ್ಪ ಜು.9 NEWS DESK : ಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಡೆಂಗ್ಯೂ ವಿರೋಧಿ ದಿನ ಮಾಹಿತಿ ಕಾರ್ಯಾಗಾರ ನಡೆಯಿತು. ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಯಾದ ವಿಶ್ವಜ್ಞ ಮಾತನಾಡಿ, ಡೆಂಗ್ಯೂ ಜ್ವರವು ಈಡೀಸ್ ಈಜಿಪ್ಟೈ ಎಂಬ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದು ವೈರಸ್ ನಿಂದ ಉಂಟಾಗುವ ಕಾಯಿಲೆ ಎಂದು ತಿಳಿಸಿದರು. ನಿಂತ ನೀರು ಸೊಳ್ಳೆಗಳ ತವರೂರು ಸೊಳ್ಳೆಗಳು ಸಾಮಾನ್ಯವಾಗಿ ನಿಂತ ನೀರಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿಯನ್ನು ಮಾಡುತ್ತವೆ ಸೋಂಕಿತ ಸೊಳ್ಳೆಯು ಆರೋಗ್ಯವಂತ ವ್ಯಕ್ತಿಗೆ ಕಚ್ಚಿದಾಗ ಡೆಂಗ್ಯೂ ಮತ್ತು ಚಿಕೂನ್ ಗುನ್ಯಾ ರೋಗಗಳು ಹರಡುತ್ತವೆ. ಈ ರೋಗದ ಲಕ್ಷಣವೆಂದರೆ ವಿಪರೀತ ಜ್ವರ ಮೈ ಕೈ ನೋವು, ತಲೆನೋವು ಕಣ್ಣುಗುಡ್ಡೆಗಳ ಹಿಂಭಾಗ ನೋವು, ಮೈಮೇಲೆ ಕೆಂಪು ಗುಳ್ಳೆಗಳಾಗುವುದು ಉಂಟಾಗುತ್ತದೆ ಡೆಂಗ್ಯೂ ಜ್ವರವು ಮಾರಣಾಂತಿಕ ಖಾಯಿಲೆಯಾಗಿದ್ದು, ಇದಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಇರುವುದಿಲ್ಲ ರೋಗದ ಅನುಗುಣವಾಗಿ ಚಿಕಿತ್ಸೆಯನ್ನು ನೀಡಲಾಗುವುದು ಎಂದು ತಿಳಿಸಿದರು.…
ಮಡಿಕೇರಿ ಜು.9 NEWS DESK : ಕರ್ನಾಟಕ ರಾಜ್ಯ ಫುಟ್ಬಾಲ್ ಸಂಸ್ಥೆಯ ಆಶ್ರಯದಲ್ಲಿ ತುಮಕೂರಿನ ಎಂ.ಜಿ. ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರ ಜಿಲ್ಲಾ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ಫುಟ್ಬಾಲ್ ತಂಡವು ಸತತ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿ ಪ್ರಶಸ್ತಿಯತ್ತ ಆತ್ಮವಿಶ್ವಾಸದಿಂದ ಮುನ್ನಡೆಯುತ್ತಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಆತಿಥೇಯ ತುಮಕೂರು ತಂಡವನ್ನು ಎದುರಿಸಿದ ಕೊಡಗು ತಂಡವು ಆರಂಭದಿಂದಲೇ ಆಕ್ರಮಣಕಾರಿ ಆಟ ಪ್ರದರ್ಶಿಸಿ 8-0 ಗೋಲುಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿತು. ತಂಡದ ಪರ ಸಬಿತ್ ಎರಡು ಗೋಲು, ಸವಾದ್ ಎರಡು ಗೋಲು, ಫಾರೂಕ್ ಒಂದು ಗೋಲು, ಅಜಿತ್ ಒಂದು ಗೋಲು ಹಾಗೂ ದಿವಾಕರ್ ಒಂದು ಗೋಲು ದಾಖಲಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕೊಡಗು ತಂಡದ ಸಮನ್ವಯದ ಆಟ, ವೇಗದ ಪಾಸ್ಗಳು ಮತ್ತು ಪರಿಣಾಮಕಾರಿ ದಾಳಿ ಎದುರಾಳಿ ತಂಡವನ್ನು ಸಂಪೂರ್ಣವಾಗಿ ಕಟ್ಟಿಹಾಕಿತು. ಎರಡನೇ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವನ್ನು ಎದುರಿಸಿದ ಕೊಡಗು ತಂಡವು ಮತ್ತೊಮ್ಮೆ ತನ್ನ ಪ್ರಾಬಲ್ಯ ಮೆರೆದಿತು. ಪಂದ್ಯದುದ್ದಕ್ಕೂ ಎದುರಾಳಿಗೆ…
ಮಡಿಕೇರಿ ಜು.9 NEWS DESK : ವಿರಾಜಪೇಟೆಯ ಆರ್ಜಿ ಗ್ರಾಮದ ‘ಶಕ್ತಿ ವೃದ್ಧಾಶ್ರಮ’ದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಹಾಕತ್ತೂರು ಗ್ರಾಮ ಪಂಚಾಯತಿ ಮಾಜಿ ಸದಸ್ಯರು ಹಾಗೂ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಪಿಯೂಷ್ ಪೆರೇರಾ ಮತ್ತು ಕುಟುಂಬಸ್ಥರು ವೃದ್ಧಾಶ್ರಮಕ್ಕೆ ಭೇಟಿ ನೀಡಿ, ಅಲ್ಲಿನ ನಿರಾಶ್ರಿತರೊಂದಿಗೆ ಶಾಸಕರ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಇದೇ ಸಂದರ್ಭ ವೃದ್ಧಾಶ್ರಮದ ನಿರಾಶ್ರಿತರ ಅನುಕೂಲಕ್ಕಾಗಿ ಪಿಯೂಷ್ ಪೆರೇರಾ ಕುಟುಂಬದ ವತಿಯಿಂದ 25 ಕಂಬಳಿಗಳನ್ನು ವಿತರಿಸಿ, ಮಾನವೀಯತೆ ಮೆರೆದರು.
ಮಡಿಕೇರಿ ಜು.9 NEWS DESK : ವಿದ್ಯಾರ್ಥಿಗಳ ಪ್ರತಿಭಾ ಅನಾವರಣಕ್ಕೆ ಪೂರಕವಾಗಿ ಇದೇ ಜು.11 ಮತ್ತು 12ರಂದು ನಾಪೋಕ್ಲು ಮಾರುಕಟ್ಟೆ ಆವರಣದಲ್ಲಿ ಎಸ್ಎಸ್ಎಫ್ ಮಡಿಕೇರಿ ಡಿವಿಷನ್ನಿಂದ 14ನೇ ಆವೃತ್ತಿಯ “ಸಾಹಿತ್ಯೋತ್ಸವ-2026” ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಎಸ್ಎಸ್ಎಫ್ ಪದಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಸಾಹಿತ್ಯೋತ್ಸವದಲ್ಲಿ ಮೂರು ಸೆಕ್ಟರ್ಗಳು ಪಾಲ್ಗೊಳ್ಳಲಿವೆ. ಎಮ್ಮೆಮಾಡು ಸೆಕ್ಟರ್ ವ್ಯಾಪ್ತಿಯ ಎಮ್ಮೆಮಾಡು ಸೆಂಟರ್, ಎಮ್ಮೆಮಾಡು ಈಸ್ಟ್, ಎಮ್ಮೆಮಾಡು ವೆಸ್ಟ್, ಪಡಿಯಾಣಿ, ಸಾದತ್ ನಗರ, ಅಯ್ಯಂಗೇರಿ, ತಾವೂರು, ಚೆಟ್ಟಿಮಾನಿ ಹಾಗೂ ಪಳ್ಳಿರಾಣೆ ಘಟಕಗಳು, ನಾಪೋಕ್ಲು ಸೆಕ್ಟರ್ ವ್ಯಾಪ್ತಿಯ ಕುಂಜಿಲ, ಕೊಳಕೇರಿ, ಹಳೇ ತಾಲ್ಲೂಕು, ನಾಪೋಕ್ಲು, ಚೆರಿಯಪರಂಬು, ಕೊಟ್ಟಮುಡಿ, ಹೊದವಾಡ, ಬೆಟ್ಟಗೇರಿ ಹಾಗೂ ಚರಂಬಾಣೆ ಘಟಕಗಳು ಹಾಗೂ ಮಡಿಕೇರಿ ಸೆಕ್ಟರ್ ವ್ಯಾಪ್ತಿಯ ಬೇತ್ರಿ, ಬಲಮುರಿ, ಮೂರ್ನಾಡು, ಕೊಂಡಂಗೇರಿ ಈಸ್ಟ್, ಕೊಂಡಂಗೇರಿ ವೆಸ್ಟ್, ಕೊಂಡಂಗೇರಿ ನಾರ್ತ್, ಐಕೊಳ, ಹಾಕತ್ತೂರು, ಕಬ್ಬಡಕೇರಿ ಹಾಗೂ ಮಡಿಕೇರಿ ಘಟಕಗಳು ಸೇರಿಂದತೆ ಒಟ್ಟಾಗಿ 28 ಘಟಕಗಳು ಭಾಗವಹಿಸಲಿರುವುದಾಗಿ ಮಾಹಿತಿ ನೀಡಿದರು. ಸಾಹಿತ್ಯೋತ್ಸವದಲ್ಲಿ ಪ್ರಮುಖವಾಗಿ ಭಾಷಣ, ಪ್ರಬಂಧ, ಕವನ, ಕಥೆ,…
ಮಡಿಕೇರಿ NEWS DESK ಜು.9 : ಜಲಾಶಯದ ನೀರನ್ನು ಅವಲಂಬಿಸಿ ಬೆಳೆ ಬೆಳೆಯದಂತೆ ರೈತರಿಗೆ ಕೊಡಗು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಅವರು ಮನವಿ ಮಾಡಿದ್ದಾರೆ. ರಾಷ್ಟ್ರೀಯ ಹಾಗೂ ರಾಜ್ಯ ಜಲ ನೀತಿ ಅನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿರುವ ಕಾರಣ ಜಲಾಶಯದಲ್ಲಿ ಪ್ರಸ್ತುತ ಲಭ್ಯವಿರುವ ನೀರನ್ನು ಮುಂಬರುವ ದಿನಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಕಾಯ್ದಿರಿಸಿಕೊಂಡು ಬಳಸಲು ಸೂಚಿಸಲಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಮತ್ತು ಮುಂಗಾರು ದುರ್ಬಲವಾಗಿರುವುದರಿಂದ ಜಲಾಶಯಗಳಲ್ಲಿ ಪ್ರಸ್ತುತ ಲಭ್ಯವಿರುವ ನೀರಿನ ಪ್ರಮಾಣವು ಕಡಿಮೆ ಇರುವುದರಿಂದ ಕೇವಲ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ಮಾತ್ರ ಸಾಕಾಗುವಂತಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಪರಿಸ್ಥಿತಿಯಲ್ಲಿ ಕೃಷಿ ಬೆಳೆಗಳಿಗೆ ನೀರು ಹರಿಸುವುದು ಕಷ್ಟಸಾಧ್ಯವಾಗುತ್ತದೆ. ಕುಡಿಯುವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡುವುದು ಸರ್ಕಾರದ ಆಶಯವಾಗಿರುವುದರಿಂದ, ಲಭ್ಯವಿರುವ ನೀರಿನ ಸಂಗ್ರಹವನ್ನು ಅತ್ಯಂತ ಮಿತವ್ಯಯದಿಂದ ಬಳಕೆ ಮಾಡುವುದು ಅನಿವಾರ್ಯವಾಗಿದೆ. ಆದ್ದರಿಂದ ರೈತರು ಜಲಾಶಯದ ನೀರನ್ನು ಅವಲಂಬಿಸಿ…






