ಸುಂಟಿಕೊಪ್ಪ, NEWS DESK ಸೆ.1: ಮಾನವ–ವನ್ಯಜೀವಿ ಸಂಘರ್ಷದ ಕುರಿತು ಮುಂದಿನ ವಾರದಿಂದಲೇ ಸಭೆಗಳನ್ನು ನಡೆಸಿ, ಹಂತ ಹಂತವಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ಗೌಡ ಹೇಳಿದರು. ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಂಜನಾಥಯ್ಯ ಸಭಾಂಗಣದಲ್ಲಿ ನಡೆದ ಮಾನವ–ವನ್ಯಜೀವಿ ಸಂಘರ್ಷ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ಹಲವು ಸಭೆಗಳನ್ನು ನಡೆಸಿದ್ದರೂ ಆನೆ–ಮಾನವ ಸಂಘರ್ಷದಿಂದಾಗುವ ಸಾವು-ನೋವು ಮತ್ತು ದಾಳಿಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯವಾಗಿಲ್ಲ ಎಂದು ವಿಷಾದಿಸಿದರು. ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ 8 ಗ್ರಾಮ ಪಂಚಾಯಿತಿಗಳಲ್ಲಿ ಆನೆ–ಮಾನವ ಸಂಘರ್ಷದ ಸಮಸ್ಯೆ ನಿರಂತರವಾಗಿದ್ದು, ತುರ್ತು ಸಂದರ್ಭದಲ್ಲಿ ಆಸ್ಪತ್ರೆ ಅಥವಾ ಪರಿಹಾರಕ್ಕಾಗಿ ಚೆಕ್ ನೀಡುವ ಪರಿಸ್ಥಿತಿ ಎದುರಾಗುತ್ತಿದೆ ಎಂದರು. ಅರಣ್ಯ ಇಲಾಖೆಯ ವಿವಿಧ ವಲಯಗಳ ನಡುವೆ ಸಂವಹನ ಮತ್ತು ಹೊಂದಾಣಿಕೆಯ ಕೊರತೆಯಿರುವುದನ್ನು ಪ್ರಸ್ತಾಪಿಸಿದ ಅವರು, ಅರಣ್ಯ ಇಲಾಖೆ, ಜನರು ಹಾಗೂ ವನ್ಯಜೀವಿಗಳ ಸಮಸ್ಯೆಯನ್ನು ಅರಣ್ಯ ಸಚಿವರ ಮಡಿಕೇರಿ ಭೇಟಿಯ ಸಂದರ್ಭ ಗಮನಕ್ಕೆ…
ಲೇಖಕ: admin
ಸುಂಟಿಕೊಪ್ಪ, NEWS DESK ಸೆ.೦1 : ಸುಂಟಿಕೊಪ್ಪ ಹೋಬಳಿಯಲ್ಲಿ ಮಿತಿಮೀರಿರುವ ಆನೆ-ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿ ಸುಂಟಿಕೊಪ್ಪ ಹೋಬಳಿ ರೈತಸಂಘವು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ಗೌಡ ಅವರಿಗೆ ಮನವಿ ಸಲ್ಲಿಸಿದೆ. ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಂಜನಾಥಯ್ಯ ಸಭಾಂಗಣದಲ್ಲಿ ನಡೆದ ಮಾನವ-ವನ್ಯಜೀವಿ ಸಂಘರ್ಷ ಕುರಿತ ಸಭೆಯಲ್ಲಿ ರೈತಸಂಘದ ಅಧ್ಯಕ್ಷ ನಾಗಚೆಟ್ಟಿರ ಸ. ಪೊನ್ನಪ್ಪ ಅವರು ಮನವಿ ಸಲ್ಲಿಸಿದರು. ಆನೆಗಳ ಹಾವಳಿ ಹೆಚ್ಚಿರುವ ಪ್ರದೇಶಗಳಲ್ಲಿ ಶಾಶ್ವತ ಆನೆ ತಡೆಗೋಡೆ ಹಾಗೂ ಸೌರಬೇಲಿ ನಿರ್ಮಾಣ, ಆನೆಗಳ ಸಂಚಾರ ಮಾರ್ಗಗಳ ಗುರುತಿಸುವಿಕೆ, ಬೆಳೆ ಹಾನಿಗೆ ಸಮಗ್ರ ಪರಿಹಾರ, 24×7 ಮುನ್ನೆಚ್ಚರಿಕೆ ವ್ಯವಸ್ಥೆ, ಅರಣ್ಯ ಇಲಾಖೆ–ರೈತರ ಸಮನ್ವಯ ಸಮಿತಿ ರಚನೆ ಸೇರಿದಂತೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಲು ವಿಶೇಷ ಕಾರ್ಯಯೋಜನೆ ರೂಪಿಸಿ ತುರ್ತಾಗಿ ಅನುಷ್ಠಾನಗೊಳಿಸುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮಡಿಕೇರಿ, NEWS DESK ಸೆ.01: ಕ್ಷುಲ್ಲಕ ಜಗಳವಾಡಿದ ತಾಯಿ ಹಾಗೂ ಮಗಳು ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಭಾಗಮಂಡಲ ಸಮೀಪದ ತಣ್ಣಿಮಾನಿ ಗ್ರಾಮದ ಕೆಂಪುರಾಶಿ ಮೊಟ್ಟೆಯಲ್ಲಿ ನಡೆದಿದೆ. ಮಂಜು ಎಂಬುವವರ ಪತ್ನಿ ಪ್ರೇಮ (36) ಹಾಗೂ ಮಗಳು ಪ್ರಿಯಾಂಕಾ (14) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಮನೆಯಲ್ಲಿ ತಾಯಿ ಹಾಗೂ ಮಗಳ ನಡುವೆ ಕ್ಷುಲ್ಲಕ ವಿಚಾರಕ್ಕೆ ಆ.31ರ ಸಂಜೆ ಜಗಳ ನಡೆದಿದೆ ಎನ್ನಲಾಗಿದೆ. ಮಗಳು ಪ್ರಿಯಾಂಕಾ ತಾನು ಕೆರೆಗೆ ಹಾರುವುದಾಗಿ ಹೇಳಿ ಮನೆಯಿಂದ ಓಡಿ ಹೋಗಿದ್ದಾಳೆ. ಮಗಳು ಕೆರೆಯತ್ತ ಹೋಗುವುದನ್ನು ಕಂಡ ತಾಯಿ ಪ್ರೇಮ ಕೂಡ ಆತಂಕಗೊಂಡು ಆಕೆಯ ಹಿಂದೆ ಓಡಿದ್ದಾರೆ. ಈ ವೇಳೆ ಪ್ರಿಯಾಂಕಾ ಕೆರೆಗೆ ಹಾರಿದ್ದು, ಮಗಳನ್ನು ರಕ್ಷಿಸುವ ಉದ್ದೇಶದಿಂದ ತಾಯಿ ಪ್ರೇಮ ಕೂಡ ಕೆರೆಗೆ ಹಾರಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯನ್ನು ದೂರದಿಂದ ಕಂಡ ಸ್ಥಳೀಯರು ಇಬ್ಬರನ್ನು ರಕ್ಷಿಸುವ ಪ್ರಯತ್ನ ಮಾಡಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಭಾಗಮಂಡಲ ಪೊಲೀಸರು ಭೇಟಿ ನೀಡಿ, ಮಂಗಳವಾರ ಬೆಳಗ್ಗೆ ತಾಯಿ…
ಪೊನ್ನಂಪೇಟೆ, NEWS DESK ಸೆ.೦1: ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ಹುದ್ದೆಗಳನ್ನು ಭರ್ತಿ ಮಾಡುವಂತೆ ಮನವಿ ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಪೌರಾಡಳಿತ ಇಲಾಖೆಯ ಪ್ರಗತಿಪರಿಶೀಲನಾ ಸಭೆಯು ಪೌರಾಡಳಿತ ಸಚಿವ ಹೆಚ್.ಸಿ.ಬಾಲಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ವರ್ಚುವಲ್ ಮೂಲಕ ಭಾಗವಹಿಸಿ, ಕುಡಿಯುವ ನೀರು, ಸ್ವಚ್ಛತೆ, ಒಳಚರಂಡಿ, ರಸ್ತೆ, ಪುರಸಭೆ ಕಟ್ಟಡ ಕಾಮಗಾರಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಮತ್ತು ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಖಾಲಿ ಇರುವ ಸಿಬ್ಬಂದಿ ಮತ್ತು ಅಧಿಕಾರಿಗಳ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಪ್ರಸ್ತಾಪಿಸಿದರು. ಬೇಡಿಕೆಗಳಿಗೆ ಸ್ಪಂದಿಸಿದ ಸಚಿವ ಹೆಚ್.ಸಿ. ಬಾಲಕೃಷ್ಣ ಅವರು ಕೂಡಲೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಡಿಕೇರಿ, NEWS DESK ಸೆ.೦1: ಮಡಿಕೇರಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯ ಬಿ.ಜಿ.ಎಸ್. ಪ್ರೌಢಶಾಲೆಯ ಬಾಲಕಿಯರ ತಂಡವು ಗೆಲುವು ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಸಂಸ್ಥೆಯ ಆಡಳಿತಾಧಿಕಾರಿ ಸುಧಾಕರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ಮಡಿಕೇರಿ NEWS DESK ಸೆ.1: ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ವತಿಯಿಂದ 31ನೇ ವಾರ್ಷಿಕ ಸಾರ್ವಜನಿಕ ಕೈಲ್ಪೊವ್ದ್ ಆಚರಣೆ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ ಮಂದ್ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಸಂವಿಧಾನದ ಅಡಿಯಲ್ಲಿ ವಿಶೇಷ ಸ್ಥಾನಮಾನಕ್ಕಾಗಿ ಕೊಡವರು ಮುಂದಿಟ್ಟಿರುವ ಹಕ್ಕೊತ್ತಾಯವು ಸ್ಥಳೀಯ ಕೊಡವರ ಸ್ವಾಭಾವಿಕ ಹಾಗೂ ನ್ಯಾಯಸಮ್ಮತ ಹಕ್ಕಾಗಿದೆ. ಈ ಗುರಿ ತಾರ್ಕಿಕ ಅಂತ್ಯ ತಲುಪುವವರೆಗೂ ಸಿಎನ್ಸಿ ಹೋರಾಟ ಮುಂದುವರಿಸಲಿದೆ ಎಂದು ಹೇಳಿದರು. ಕೊಡವ ಸಂಸ್ಕೃತಿಯಲ್ಲಿ ಬಂದೂಕು, ಭೂತಾಯಿ, ಯೋಧತ್ವ, ಮಂದ್, ದೇವಕಾಡ್, ಪಿತ್ರಾರ್ಜಿತ ಭೂಮಿ ಹಾಗೂ ಕೊಡವ ವಂಶಾವಳಿಗಳು ಅವಿಭಾಜ್ಯ ಅಂಗಗಳಾಗಿವೆ. ಪೂರ್ವಜರ ಪರಂಪರೆ ಹಾಗೂ ಯೋಧ ಸಂಸ್ಕೃತಿಯ ಸಂಕೇತವಾಗಿ ಕೈಲ್ಪೊವ್ದ್ ಸಂದರ್ಭದಲ್ಲಿ ಆಯುಧ ಪೂಜೆಯನ್ನು ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು. ಸಂವಿಧಾನದ 51A(f) ಅಡಿಯಲ್ಲಿ ಪ್ರಾಚೀನ ಹಾಗೂ ಅತಿ ಸಣ್ಣ ಜನಾಂಗೀಯ ಸಮುದಾಯದ ಸಂಸ್ಕೃತಿ ಮತ್ತು ಪರಂಪರೆಯನ್ನು ರಕ್ಷಿಸುವುದು ರಾಜ್ಯ ಹಾಗೂ ಜನರ ಕರ್ತವ್ಯವಾಗಿದೆ. ಸಂವಿಧಾನದ 32ನೇ ವಿಧಿಯಡಿ ಕೊಡವರ ಕುಂದುಕೊರತೆಗಳಿಗೆ ಸಾಂವಿಧಾನಿಕ ಪರಿಹಾರ ಕಲ್ಪಿಸಬೇಕು ಎಂದು…
ಮಡಿಕೇರಿ NEWS DESK ಸೆ.1 : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಹಲದ್ವಾನಿಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನಿಕ ಮೌಲ್ಯಗಳಿಗೆ ಧಕ್ಕೆ ತಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಆದರೆ ಉತ್ತರಾಖಂಡ ಪೊಲೀಸರು ರಾಹುಲ್ ಗಾಂಧಿ ಅವರ ವಿರುದ್ಧವೇ ಎಫ್ಐಆರ್ ದಾಖಲಿಸಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ರಾಹುಲ್ ಗಾಂಧಿ ವಿರುದ್ಧದ ಪ್ರಕರಣವು ದುರುದ್ದೇಶಪೂರಿತವಾಗಿದ್ದು, ಸೇಡಿನ ರಾಜಕಾರಣದ ಭಾಗವಾಗಿದೆ ಎಂದು ಆರೋಪಿಸಿದ ಕಾಂಗ್ರೆಸ್ ಮುಖಂಡರು, ಪ್ರಕರಣವನ್ನು ತಕ್ಷಣ ರದ್ದುಪಡಿಸಬೇಕು ಎಂದು ಆಗ್ರಹಿಸಿದರು. ಈ ಸಂಬoಧ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರ ಪತಿಗಳಿಗೆ ಮನವಿ ಸಲ್ಲಿಸಿ, ರಾಹುಲ್ ಗಾಂಧಿ ವಿರುದ್ಧ ದಾಖಲಿಸಿರುವ ಎಫ್ಐಆರ್ ರದ್ದುಪಡಿಸಲು ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರ…
ಮಡಿಕೇರಿ NEWS DESK ಸೆ.1 : ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ (ಮಲ ಹೊರುವ ಕಾರ್ಮಿಕರು) ಸಮಗ್ರ ಸಮೀಕ್ಷೆ, ಗುರುತಿಸುವಿಕೆ, ಪುನರ್ವಸತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಫಾಯಿ ಕರ್ಮಚಾರಿ ಕಾವಲು ಸಮಿತಿ ಮಡಿಕೇರಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು. ಆ.24ರಿಂದ ಸೆ.2ರವರೆಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸುತ್ತಿರುವ ಜಾಥಾ ಇಂದು ಕೊಡಗು ಜಿಲ್ಲೆಯನ್ನು ತಲುಪಿತು. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿಪತ್ರ ಸಲ್ಲಿಸಿದರು. ಪಿ.ಇ.ಎಂ.ಎಸ್.ಆರ್. ಕಾಯ್ದೆ 2013ರಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮ್ಯಾನ್ಯುಯಲ್ ಸ್ಕ್ರಾವೆಂಜರ್ ಗಳ ಸಮಗ್ರ ಹಾಗೂ ಪಾರದರ್ಶಕ ಸಮೀಕ್ಷೆ ನಡೆಸಿ, ಗುರುತಿಸಲ್ಪಟ್ಟ ಪ್ರತಿಯೊಬ್ಬರಿಗೂ ಸಂಪೂರ್ಣ ಪುನರ್ವಸತಿ ಕಲ್ಪಿಸಬೇಕು ಎಂದು ಸಮಿತಿಯ ಪ್ರಮುಖರು ಒತ್ತಾಯಿಸಿದರು. ಮನೆ ಅಥವಾ ನಿವೇಶನವಿಲ್ಲದ ಕುಟುಂಬಗಳಿಗೆ ಉಚಿತ ನಿವೇಶನ ಅಥವಾ ಪಕ್ಕಾ ಮನೆ, ಅರ್ಹತೆ ಮತ್ತು ಆಸಕ್ತಿಗೆ ಅನುಗುಣವಾಗಿ ಶಾಶ್ವತ ಪರ್ಯಾಯ ಉದ್ಯೋಗ, ಸ್ವಯಂ ಉದ್ಯೋಗಕ್ಕೆ ಕೌಶಲ್ಯ ತರಬೇತಿ, ಉಪಕರಣ, ಬಂಡವಾಳ ಹಾಗೂ ಆರ್ಥಿಕ ನೆರವು ನೀಡಬೇಕು. ಗುರುತಿಸಲ್ಪಟ್ಟ ಕುಟುಂಬಗಳಿಗೆ ಆರೋಗ್ಯ ವಿಮೆ…
ಮಡಿಕೇರಿ ಆ.31 NEWS DESK : ಕುಶಾಲನಗರ ಪಟ್ಟಣಕ್ಕೆ ಒಳಚರಂಡಿ ಕಲ್ಪಿಸುವ ಪರಿಷ್ಕೃತ ಅಂದಾಜು ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ವಿವಿಧ ಬಡಾವಣೆಯಲ್ಲಿ ಒಳಚರಂಡಿ ಸಂಪರ್ಕಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಯೋಜನೆಯಡಿ ಹಿಂದಿನ ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿ, ಮುಳ್ಳುಸೋಗೆ ಗ್ರಾಮ ಮತ್ತು ಭಾಗಶಃ ಗುಮ್ಮನಕೊಲ್ಲಿ ಗ್ರಾಮಗಳಲ್ಲಿ ಒಟ್ಟು 76.0 ಕಿ.ಮೀ ಉದ್ದ ಒಳಚರಂಡಿ ಜಾಗವನ್ನು ಅಳವಡಿಸಲಾಗಿದ್ದು, 2 ಸಂಖ್ಯೆ ವೆಟ್ವೆಲ್ಗಳನ್ನು (ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಿಂಭಾಗ ಮತ್ತು ಹಳೆ ಮಾರ್ಕೆಟ್ ಹತ್ತಿರ) ನಿರ್ಮಾಣ ಮಾಡಿ ಪಂಪಿಂಗ್ ಮೆಷಿನರಿಗಳು, 4.5 ದಶ ಲಕ್ಷ ಲೀಟರ್ ಸಾಮಾಥ್ರ್ಯದ ಮಲಿನ ನೀರು ಶುದ್ದೀಕರಣ ಘಟಕ, ಮಲಿನ ನೀರು ಶುದ್ದೀಕರಣ ಘಟಕಕ್ಕೆ ವೆಟ್ವೆಲ್ಗಳಿಂದ ಏರು ಕೊಳವೆ ಸಾಲು ಅಳವಡಿಸುವ ಕಾಮಗಾರಿ ಪೂರ್ಣಗೊಂಡಿರುತ್ತದೆ. ಕುಶಾಲನಗರ ಪಟ್ಟಣದ ಈ ಕೆಳಕಂಡ ಪ್ರದೇಶಗಳಲ್ಲಿ ಬರುವ ಮನೆ/ ವಾಣಿಜ್ಯ ಮಳಿಗೆಗಳಿಂದ ಒಳಚರಂಡಿ ವ್ಯವಸ್ಥೆಗೆ ಸಂಪರ್ಕ ಮಾಡಬಹುದಾಗಿದೆ. 1) ಕಾರು ಮಾಲೀಕರ ಸಂಘ ಬಡಾವಣೆ, 2) ಗುಂಡುರಾವ್ ಬಡಾವಣೆ, 3) ನೆಹರು ಬಡಾವಣೆ,…
ಮಡಿಕೇರಿ, ಆ.31 NEWS DESK : ಕೊಡಗು ಜಿಲ್ಲೆಯಲ್ಲಿ 2025-26 ಹಾಗೂ 2026-27ನೇ ಸಾಲಿನಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 899 ಆಹಾರ ಮಾದರಿಗಳನ್ನು ಮೈಸೂರಿನ ವಿಭಾಗೀಯ ಆಹಾರ ಪ್ರಯೋಗಾಲಯದಲ್ಲಿ (Chief Food Analyst, Division Food Laboratory, Mysore) ವಿಶ್ಲೇಷಿಸಲಾಗಿದೆ. ಈ ಪೈಕಿ 4 ಆಹಾರ ಮಾದರಿಗಳು ಅಸುರಕ್ಷಿತ ಹಾಗೂ 2 ಆಹಾರ ಮಾದರಿಗಳು ಕಡಿಮೆ ಗುಣಮಟ್ಟದವು (Sub-standard) ಎಂದು ವರದಿಯಾಗಿದೆ. ಅಸುರಕ್ಷಿತ ಆಹಾರ ಪದಾರ್ಥಗಳನ್ನು ತಯಾರಿಸಿ ಅಥವಾ ಮಾರಾಟ ಮಾಡುತ್ತಿದ್ದವರ ವಿರುದ್ಧ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಲಾಗಿದೆ. ಕಡಿಮೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ತಯಾರಿಸಿ ಅಥವಾ ಮಾರಾಟ ಮಾಡುತ್ತಿದ್ದವರ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006 ಹಾಗೂ ನಿಯಮ-2011ರ ಸೆಕ್ಷನ್ 51ರಡಿ ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ನ್ಯಾಯ ನಿರ್ಣಾಯಾಧಿಕಾರಿಗಳ ಮುಂದೆ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಗಳಲ್ಲಿ ಒಟ್ಟು ರೂ.10 ಸಾವಿರ ದಂಡ ವಿಧಿಸಲಾಗಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಮಸಾಲೆ ಪದಾರ್ಥಗಳು (ಸ್ಪೈಸಸ್) ಹಾಗೂ ಚಾಕೊಲೇಟ್ಗಳ ಮಾರಾಟ…






