ಮಡಿಕೇರಿ NEWS DESK ಫೆ.20 : ಕೊಡಗು ಕ್ರಿಶ್ಚಿಯನ್ ಅಸೋಸಿಯೇಷನ್ (ರಿ) ವತಿಯಿಂದ ಇದೇ ಏ.24 ಮತ್ತು 25 ರಂದು ನಡೆಯಲಿರುವ ಸಂಭ್ರಮದ ಕೆಸಿಎ ಕ್ರಿಕೆಟ್ ಟೂರ್ನಿಯ ಪೂರ್ವಭಾವಿ ಸಭೆ ವಿರಾಜಪೇಟೆಯಲ್ಲಿ ನಡೆಯಿತು. ಅಸೋಸಿಯೇಷನ್ ನ ಅಧ್ಯಕ್ಷ ಎ.ಜೆ.ಬಾಬು ಅವರ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ಪದಾಧಿಕಾರಿಗಳು ಕ್ರಿಕೆಟ್ ಟೂರ್ನಿಯ ಯಶಸ್ಸಿಗೆ ಅಗತ್ಯವಿರುವ ರೂಪರೇಷಗಳ ಕುರಿತು ಚರ್ಚಿಸಿದರು. ಸಮುದಾಯದ ಸಂಘಟನೆ ಹಾಗೂ ಮನೋರಂಜನೆಗಾಗಿ ಕ್ರಿಕೆಟ್ ಟೂರ್ನಿಯೊಂದಿಗೆ ಹಗ್ಗಜಗ್ಗಾಟ, ಥ್ರೋಬಾಲ್ ಮತ್ತು ಶಾಟ್ ಪೂಟ್ ಸ್ಪರ್ಧೆಯನ್ನು ಎರಡು ದಿನಗಳ ಕಾಲ ಅತ್ಯಂತ ಅದ್ದೂರಿಯಾಗಿ ಆಯೋಜಿಸಲು ನಿರ್ಧರಿಸಲಾಯಿತು. ಕೆಸಿಎ ಕ್ರಿಕೆಟ್ ಟೂರ್ನಿಯ ವಿಜೇತ ತಂಡಕ್ಕೆ ರೂ.1 ಲಕ್ಷ ಮತ್ತು ದ್ವಿತೀಯ ರೂ.50 ಸಾವಿರ ನಗದು ಬಹುಮಾನ ನೀಡಲಾಗುವುದು. ಪುರುಷರು ಹಾಗೂ ಮಹಿಳೆಯರಿಗಾಗಿ ಪ್ರತ್ಯೇಕ ವಿಭಾಗಗಳಲ್ಲಿ ಹಗ್ಗಜಗ್ಗಾಟ, ಶಾಟ್ ಪೂಟ್ ಮತ್ತು ಮಹಿಳೆಯರಿಗಾಗಿ ಥ್ರೋಬಾಲ್ ಪಂದ್ಯ ನಡೆಯಲಿದೆ. ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ಮೈದಾನದಲ್ಲಿ ಪಂದ್ಯಾವಳಿಗಳು ನಡೆಯಲಿದ್ದು, ಪ್ರತಿಯೊಂದು…
ಲೇಖಕ: admin
ಮಡಿಕೇರಿ NEWS DESK ಫೆ.20 : 2026-27ನೇ ಸಾಲಿನ ಬಜೆಟ್ನಲ್ಲಿ ಮಡಿಕೇರಿ ನಗರದ ಸಮಗ್ರ ಅಭಿವೃದ್ಧಿಗೆ ಹಾಗೂ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಶಾಸಕ ಡಾ.ಮಂತರ್ ಗೌಡ ಅವರಲ್ಲಿ ಮನವಿ ಮಾಡಿಕೊಂಡಿದೆ. ಈ ಕುರಿತು ಶಾಸಕರಿಗೆ ಪತ್ರ ಬರೆದಿರುವ ಚೇಂಬರ್ ಆಫ್ ಕಾಮರ್ಸ್ನ ನಗರಾಧ್ಯಕ್ಷ ಸಂತೋಷ್ ಅಣ್ವೇಕರ್ ಮಡಿಕೇರಿ ನಗರಕ್ಕೆ ಭೇಟಿ ನೀಡುವ ಪ್ರವಾಸಿಗರ ಹಿತದೃಷ್ಟಿಯಿಂದ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರ ಸ್ಥಾಪನೆಗೆ ಮತ್ತು ನಗರದ ಸಮಗ್ರ ಅಭಿವೃದ್ಧಿಗಾಗಿ ಮುಖ್ಯ ಯೋಜನೆಗಳಿಗೆ ಮುಂಬರುವ ರಾಜ್ಯ ಬಜೆಟ್ನಲ್ಲಿ ಅನುದಾನ ಮೀಸಲಿಡಬೇಕೆಂದು ಕೋರಿದ್ದಾರೆ. *ಪ್ರಮುಖ ಬೇಡಿಕೆಗಳು* ಪ್ರವಾಸಿಗರಿಗೆ ಒಂದೇ ಸೂರಿನಡಿ ಮಾಹಿತಿ ಕೇಂದ್ರ, ಪ್ರವಾಸಿ ತಾಣಗಳ ಟಿಕೆಟ್ ಬುಕ್ಕಿಂಗ್ ಮತ್ತು ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಒದಗಿಸುವ ಸುಸಜ್ಜಿತವಾದ ಏಕಗವಾಕ್ಷಿ ಪ್ರವಾಸಿ ಸೇವಾ ಕೇಂದ್ರದ ಕಚೇರಿಯನ್ನು ಸ್ಥಾಪಿಸಬೇಕು. ನಗರದ ಭದ್ರತೆ ಮತ್ತು ಸುಗಮ ಸಂಚಾರಕ್ಕಾಗಿ ಪ್ರಮುಖ ಜಂಕ್ಷನ್ಗಳಲ್ಲಿ ಎಐ (ಕೃತಕ…
ಮಡಿಕೇರಿ ಫೆ.19 NEWS DESK : ಇತ್ತೀಚೆಗೆ ನಿಧನರಾದ ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯೆ, ಕವಯತ್ರಿ ನಾಯಕಂಡ ಬೇಬಿ ಚಿಣ್ಣಪ್ಪರ ನಿಧನಕ್ಕೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತಾಪ ಸೂಚಿಸಲಾಯಿತು. ಅಕಾಡೆಮಿ ಕಚೇರಿಯಲ್ಲಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರ ಅಧ್ಯಕ್ಷತೆಯಲ್ಲಿ ಸರ್ವ ಸಮಿತಿ ಸಭೆಯಲ್ಲಿ ಬೇಬಿ ಚಿಣ್ಣಪ್ಪರ ಅನಿರೀಕ್ಷಿತವಾದ ನಿಧನಕ್ಕೆ ಕಂಬನಿ ಮಿಡಿಯಲಾಯಿತು. ಈ ವೇಳೆ ಮಾತನಾಡಿದ ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಕೊಡವ ಕವನ, ಕತೆಗಳನ್ನು ಓದುಗರ ಮನ ಮಿಡಿಯುವ ರೀತಿಯಲ್ಲಿ ಬರೆಯುತ್ತಿದ್ದ ಬೇಬಿ ಚಿಣ್ಣಪ್ಪನವರ ಅಗಲಿಕೆ ಕೊಡವ ಸಾಹಿತ್ಯ ಲೋಕಕ್ಕೆ ಬಹುದೊಡ್ಡ ನಷ್ಟವನ್ನುಂಟು ಮಾಡಿದೆ. ಹಿರಿಯರ ಸ್ಥಾನದಲ್ಲಿದ್ದು, ಮಾರ್ಗದರ್ಶಕರಾಗಿದ್ದ ಇವರು ಕೊಡವ, ಕನ್ನಡ ಸಾಹಿತ್ಯ ಲೋಕದಲ್ಲಿ ಅಮರರಾಗಿದ್ದಾರೆಂದು ಹೇಳಿದರು. ಹಿರಿಯ ಸದಸ್ಯರಾದ ನಾಪಂಡ ಗಣೇಶ್ ಮಾತನಾಡಿ, ಬೇಬಿ ಚಿಣ್ಣಪ್ಪನವರು ಮೃಧು ಸ್ವಭಾವದ ಹಿರಿಯ ಸಾಹಿತಿಗಳು, ಅಕಾಡೆಮಿಯ ಕಾರ್ಯಕ್ರಮಗಳೆಂದರೆ ಅಭಿಮಾನದಿಂದ ಪಾಲ್ಗೊಳ್ಳುತ್ತಿದ್ದರೆಂದರು. ಕೊಂಡಿಜಮ್ಮನ ಎಂ.ಬಾಲಕೃಷ್ಣ ಮಾತನಾಡಿ, ಬೇಬಿ ಚಿಣ್ಣಪ್ಪನವರ ಅಗಲಿಕೆ ದುಃಖಕರ, ಹಿರಿಯರಾಗಿದ್ದು, ಮಾರ್ಗದರ್ಶಕರಾಗಿದ್ದರು ಎಂದರು.…
ನಾಪೋಕ್ಲು ಫೆ.19 NEWS DESK : ಕಕ್ಕಬ್ಬೆ ಗ್ರಾಮ ಪಂಚಾಯಿತಿ ಗ್ರಂಥಾಲಯ ಮೇಲ್ವಿಚಾರಕಿ ಸಿ.ಎನ್.ತಾರಾ ಲೈಬ್ರರಿ ಮತ್ತು ಇನ್ಫಾರ್ಮಶನ್ ಸೈನ್ಸ್ ನ ಸರ್ಟಿಫಿಕೇಟ್ ಕೋರ್ಸ್ ನಲ್ಲಿ ಶೇ.75.6 ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅರಿವು ಕೇಂದ್ರದಲ್ಲಿ ಗ್ರಂಥಾಲಯ ಮೇಲ್ವಿಚಾರಕಿ ಆಗಿರುವ ಸಿ.ಎನ್.ತಾರಾ ಗದಗ ಜಿಲ್ಲೆಯ ಮಹಾತ್ಮ ಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕೌಶಲ್ಯ ವಿಕಾಸ ಭವನ ಗ್ರಾಮ ಗಂಗೋತ್ರಿಯಲ್ಲಿ ನಡೆದ ಲೈಬ್ರರಿ ಮತ್ತು ಇನ್ಫಾರ್ಮಶನ್ ಸೈನ್ಸ್ ನ ಸರ್ಟಿಫಿಕೇಟ್ ಕೋರ್ಸ್ ನಲ್ಲಿ ಶೇ. 75.6 ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಕಕ್ಕಬ್ಬೆಯ ನಾಟೋಳಂಡ ನಂಜುಂಡ ಅವರ ಪತ್ನಿ. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಫೆ.19 NEWS DESK : ಮೂರ್ನಾಡು ಅನುದಾನಿತ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳಿಂದ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮೂರ್ನಾಡು ಅನುದಾನಿತ ಪ್ರೌಢಶಾಲೆಯ 1999-2002 ಸಾಲಿನಲ್ಲಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ಕನ್ನಡ ಅಧ್ಯಾಪಕರಾಗಿದ್ದ ಎಸ್.ಡಿ.ಪ್ರಶಾಂತ್ ಹಾಗೂ ಶಿಕ್ಷಕರಾದ ಕೃಷ್ಣಪ್ಪ, ಗೀತಾ ಹಾಗೂ ಸುಜಾತ ಅವರನ್ನು ಸನ್ಮಾನಿಸಿ, ಗೌರವಿಸಿದರು. ಕಾರ್ಯಕ್ರಮದಲ್ಲಿ ತಮ್ಮ ಶಾಲಾ ದಿನದ ಘಟನೆಗಳನ್ನು ಮೆಲುಕು ಹಾಕುತ್ತಾ ಭಾವುಕರಾದ ಹಳೆಯ ವಿದ್ಯಾರ್ಥಿಗಳು, ಗುರುಗಳ ಸ್ಪೂರ್ತಿದಾಯಕ ಮಾತುಗಳಿಗೆ ಕಿವಿಯಾದರು. ಶಾಲಾ ಮಕ್ಕಳಿಗೆ ಸಿಹಿವಿತರಿಸಿ ಸಂಭ್ರಮಿಸಿದರು. ಈ ಸಂದರ್ಭ ಶಿಕ್ಷಕ ವರ್ಗ, ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವರದಿ : ದುಗ್ಗಳ ಸದಾನಂದ.
ಕುಶಾಲನಗರ ಫೆ.19 NEWS DESK : ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಫೆ.20 ರಂದು ಉದ್ಘಾಟನೆಗೊಳ್ಳಲಿದೆ. ಬೆಳಿಗ್ಗೆ 10.00 ಗಂಟೆಗೆ ಮುಂಬೈನ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್ ಸಂಸ್ಥೆ ವತಿಯಿಂದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR: ಸಿ ಎಸ್ ಆರ್) ನಿಧಿಯ ಅನುದಾನದಿಂದ ನಿರ್ಮಾಣವಾಗಿರುವ ವಿವಿಧೋದ್ದೇಶ ಸಭಾಂಗಣದ ದ್ಘಾಟನೆಗೊಳ್ಳಲಿದೆ. ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಲಿಮಿಟೆಡ್ ನ ಸಿಇಒ ಸುಂದರ ರಾಮನ್ ರಾಮಮೂರ್ತಿ ಉದ್ಘಾಟಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರು ಮತ್ತು ಸ್ಥಳೀಯ ಜನಪ್ರತಿನಿದಿಗಳು ಹಾಗೂ ಇಲಾಖೆ ಅಧಿಕಾರಿ ವರ್ಗದವರು ಆಗಮಿಸಲಿದ್ದಾರೆ ಎಂದು ಪ್ರೌಢಶಾಲಾ ವಿಭಾಗದ ಪ್ರಭಾರ ಉಪ ಪ್ರಾಂಶುಪಾಲ ಎ.ಸಿ. ಮಂಜುನಾಥ್ ತಿಳಿಸಿದ್ದಾರೆ.
ಮಡಿಕೇರಿ ಫೆ.19 NEWS DESK : ಚೆಟ್ಟಳ್ಳಿಯ ವಿರಾಟ್ ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಫೆ.22 ರಂದು ಚೆಟ್ಟಳ್ಳಿಯಲ್ಲಿ ಬೃಹತ್ ‘ವಿರಾಟ್ ಹಿಂದೂ ಸಂಗಮ’ವನ್ನು ಆಯೋಜಿಸಲಾಗಿದೆ ಎಂದು ಸಮಿತಿಯ ಸಂಯೋಜಕ ಪೇರಿಯನ ಉದಯ ಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ಅವರು ಭಾನುವಾರ ಮಧ್ಯಾಹ್ನ 2 ಗಂಟೆಗೆ ವ್ಯಾಲಿ ಪ್ಲೇ ಶಾಲೆ ಮುಂಭಾಗದಿಂದ ಚೆಟ್ಟಳ್ಳಿ ಪ್ರೌಢಶಾಲಾ ಆಟದ ಮೈದಾನದವರೆಗೆ ಬೃಹತ್ ಶೋಭಾಯಾತ್ರೆ ಸಾಗಲಿದೆ. ಶೋಭಾಯಾತ್ರೆಯಲ್ಲಿ ಶ್ರೀ ಮೂಕಾಂಬಿಕ ಭಜನೆ ಕುಣಿತ ತಂಡ ನೆಲ್ಯಹುದಿಕೇರಿ, ಪೂರ್ಣ ಕುಂಭ ಸ್ವಾಗತ, ಉಡತ್ಮೊಟ್ಟೆ ತಂಡದವರಿಂದ ಭಜನೆ ಕುಣಿತ, ಬೆಳ್ಳಿ ರಥದ ಮೆರವಣಿಗೆ, ಶ್ರೀ ಶಬರೀಶ ಚೆಂಡೆ ಮೇಳ ತಂಡ ಚೆಟ್ಟಳ್ಳಿ, ಹುಲಿ ವೇಷ ಪುತ್ತೂರು, ಬಾಳೆಗುಂಡಿ ತಂಡದಿಂದ ಹಾಡಿ ಕುಣಿತ ಮತ್ತು ಶ್ರೀ ಶೆಟ್ಟಿ ಆರ್ಟ್ಸ್ ಗೊಂಬೆ ಬಳಗ ಬೆಳ್ತಂಗಡಿ ಹಾಗೂ ಇತರ ಆಕರ್ಷಕ ಕಾರ್ಯಕ್ರಮ ಜರುಗಲಿದೆ ಎಂದರು. ಸಂಜೆ 5ಗಂಟೆಗೆ ಚೆಟ್ಟಳ್ಳಿಯ ಪ್ರೌಢಶಾಲಾ ಆಟದ ಮೈದಾನದಲ್ಲಿ ಸಭಾ ಕಾರ್ಯಕ್ರಮ…
ಮಡಿಕೇರಿ ಫೆ.19 NEWS DESK : ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದಿಂದ ನೀಡಲಾಗುತ್ತಿದ್ದ ಮರಣ ನಿಧಿಯ ಮೊತ್ತ ರೂ.5 ಸಾವಿರವನ್ನು ರೂ.10 ಸಾವಿರಕ್ಕೆ ಏರಿಕೆ ಮಾಡಲಾಗಿದ್ದು, ಸದಸ್ಯರು ಇದರ ಲಾಭ ಪಡೆದುಕೊಳ್ಳುವಂತೆ ಸಂಘದ ಉಪಾಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 20 ವರ್ಷಗಳಿಂದ ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘವು ನಿವೃತ್ತ ಪೊಲೀಸರ ಯೋಗಕ್ಷೇಮಕ್ಕೆ ಬದ್ಧವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಸದಸ್ಯರು ಮರಣ ಹೊಂದಿದಾಗ ಮೃತರ ಕುಟುಂಬಕ್ಕೆ ಸಂಘವು ಮರಣ ನಿಧಿಯ ಮೂಲಕ ರೂ.5 ಸಾವಿರವನ್ನು ಅಂತ್ಯಕ್ರಿಯೆಯ ಸಂದರ್ಭ ನೀಡುತ್ತಿದೆ. ಈಗ ಇರುವ ರೂ.5 ಸಾವಿರದ ಮೊತ್ತವನ್ನು 10 ಸಾವಿರಕ್ಕೆ ಏರಿಕೆ ಮಾಡಲು ಸಂಘ ನಿರ್ಧರಿಸಿದೆ. ಏರಿಕೆಯಾದ ಮೊತ್ತವನ್ನು 2027 ಜನವರಿ 27 ರ ನಂತರ ಮರಣ ಹೊಂದುವ ಸದಸ್ಯರ ಕುಟುಂಬಕ್ಕೆ ನೀಡುವ ನಿಯಮವನ್ನು ಜಾರಿಗೆ ತರಲಾಗುವುದು ಎಂದರು. ಈ ಹಿಂದೆ ಮರಣ ನಿಧಿಯಲ್ಲಿ ಪಡೆದ ಸದಸ್ಯತ್ವಕ್ಕೆ ರೂ.5…
ಮಡಿಕೇರಿ ಫೆ.19 NEWS DESK : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಹಿಂದೂ ಧರ್ಮ ಮತ್ತು ಸಂಸ್ಕøತಿಯ ಸಂರಕ್ಷಣೆಯ ಮಹಾನ್ ಚಿಂತನೆಯಡಿ, ಹಿಂದೂ ಬಾಂಧವರನ್ನು ಸಂಘoಟಿಸುವ ಉದ್ದೇಶದಿಂದ ರೂಪಿಸಲಾಗಿರುವ “ಹಿಂದೂ ಸಂಗಮ” ಕಾರ್ಯಕ್ರಮ ಮೂರ್ನಾಡಿನಲ್ಲಿ ಫೆ.22 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮೂರ್ನಾಡು ಮಂಡಲ ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ ಚೆಟ್ಟಿಮಾಡ ಜಯಂತ್ ಕುಮಾರ್ ಕಾರ್ಯಕ್ರಮದ ವಿವರಗಳನ್ನು ನೀಡಿ, ಅಂದು ಮಧ್ಯಾಹ್ನ 2.15 ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಿಂದ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ಇದರಲ್ಲಿ ಸುತ್ತಮುತ್ತಲ ಆರು ಗ್ರಾಮಗಳ ಸಹಸ್ರಾರು ಮಂದಿ ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು. ಶೋಭಾಯಾತ್ರೆಯು ಮೂರ್ನಾಡು ವಿದ್ಯಾಸಂಸ್ಥೆಯ ಮೈದಾನದಿಂದ ಆರಂಭಗೊಂಡು, ಗಾಂಧಿ ನಗರ, ಮಹಿಳಾ ಸಮಾಜವನ್ನು ಹಾದು, ಪಟ್ಟಣದ ಮುಖ್ಯ ಬೀದಿಗಾಗಿ ಕೊಂಡಂಗೇರಿಗೆ ತೆರಳುವ ಜಂಕ್ಷನ್ವರೆಗೆ ಹೋಗಿ, ಅದೇ ಮಾರ್ಗವಾಗಿ ಪಾಂಡಾಣೆ ನಾಡ್ಮಂದ್ಗೆ ಆಗಮಿಸಲಿದೆ. ಶೋಭಾಯಾತ್ರೆಯಲ್ಲಿ ಕೊಡಗಿನ ವಾಲಗ, ಕೇರಳದ ಚಂಡೆ, ಬೊಂಬೆ ಕುಣಿತ, ನಾಗರಹೊಳೆ ಗಿರಿಜನ ಕಲಾ ತಂಡಗಳು ಪಾಲ್ಗೊಳ್ಳಲಿವೆ. ಶೋಭಾಯಾತ್ರೆಯ ಬಳಿಕ ಸಭಾ…
ಮಡಿಕೇರಿ ಫೆ.19 NEWS DESK : ಮಡಿಕೇರಿ ನಗರದಲ್ಲಿ ತಲೆದೋರಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನಗರಸಭೆಯ ಆಡಳಿತ ವಿಫಲವಾಗಿದೆ. ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಎಸ್ಡಿಪಿಐ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆಯ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿ ನಗರದ ಬಹುತೇಕ ರಸ್ತೆಯ ಎರಡು ಬದಿಗಳಲ್ಲಿ ಅಮೃತ್ 2.0 ನೀರಿನ ಪೈಪ್ ಅಳವಡಿಸಲು ಅಗೆದಿದ್ದು, ನಗರ ಪೂರ್ತಿ ದೂಳು ಆವರಿಸಿಕೊಂಡಿದೆ. ಇದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುವ ಆತಂಕವಿದೆ. ಹೆಚ್ಚಿನ ರಸ್ತೆಗಳು ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಪೈಪ್ ಅಳವಡಿಸಿದ ನಂತರ ಡಾಂಬರೀಕರಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಿಲ್ಲ. ಆಡಳಿತ ಪಕ್ಷ ಕಳೆದ ಹತ್ತು ತಿಂಗಳಿನಲ್ಲಿ ಕೇವಲ 4 ಸಾಮಾನ್ಯ ಸಭೆಯನ್ನು ನಡೆಸಿದೆ. 4 ಸ್ಥಾಯಿ ಸಮಿತಿ ರಚನೆಯಾಗಿ 2 ತಿಂಗಳಾದರೂ ಒಂದೇ ಒಂದು ಸಭೆ ಕರೆಯಲಿಲ್ಲ. ಕಳೆದ 5 ತಿಂಗಳು ಆಡಳಿತ ನಡೆಸಿದ ಬಿ.ಜೆ.ಪಿ…






