ಲೇಖಕ: admin

ಮಡಿಕೇರಿ ನ.22 NEWS DESK : ನಗರದ ಕೊಡಗು ವಿದ್ಯಾಲಯದಲ್ಲಿ ನ.29 ಮತ್ತು 30ರಂದು ವಿದ್ಯಾರ್ಥಿಗಳಿಗಾಗಿ “ಕೊಡಗು ಜಿಲ್ಲಾ ಮಟ್ಟದ ಅಂತರಶಾಲಾ ಟೇಬಲ್ ಟೆನ್ನಿಸ್ ಚಾಂಪಿಯನ್‍ಶಿಪ್ 2025-26” ನಡೆಯಲಿದೆ. ನ.29 ರಂದು ಬೆಳಿಗ್ಗೆ 9.30 ಗಂಟೆಗೆ ಶಾಲೆಯ ಸಭಾಂಗಣದಲ್ಲಿ ಪಂದ್ಯಾವಳಿಯನ್ನು ಗಣ್ಯರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಟೇಬಲ್ ಟೆನ್ನಿಸ್ ಕೊಡಗು ಜಿಲ್ಲಾ ಚಾಂಪಿಯನ್ ಮಲ್ಲೇಂಗಡ ರಚನ್ ಪೊನ್ನಪ್ಪ ಭಾಗವಹಿಸಲಿದ್ದಾರೆ. *ಪಂದ್ಯಾವಳಿಯ ವಿವರ* ನಾಕೌಟ್ ಮಾದರಿಯಲ್ಲಿ ಸ್ಪರ್ಧೆ ನಡೆಯಲಿದ್ದು, ಸಿಂಗಲ್ಸ್ ವಿಭಾಗದಲ್ಲಿ ಪ್ರತಿ ಶಾಲೆಯ 5 ಆಟಗಾರರು ಭಾಗವಹಿಸುಬಹುದು, ಡಬಲ್ಸ್‍ನಲ್ಲಿ ಪ್ರತಿ ಶಾಲೆಯ 2 ತಂಡಗಳಿಗೆ ಸ್ಪರ್ಧಿಸಲು ಅವಕಾಶವಿರುತ್ತದೆ. 14 ವರ್ಷದೊಳಗಿನ ಬಾಲಕ, ಬಾಲಕಿಯರು ಹಾಗೂ 16 ವರ್ಷದೊಳಗಿನ ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಗೆ ಆಗಮಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ವಿದ್ಯಾರ್ಥಿ ಐಡಿ ಕಾರ್ಡ್ ಅನ್ನು ತರಬೇಕು. ಸ್ಪರ್ಧಿಗಳು ನ.24ರ ಒಳಗಾಗಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಮತ್ತು ಹೆಚ್ಚಿನ ಮಾಹಿತಿಗೆ ಮೊ.ಸಂ : ಹೆಚ್.ಬಿ.ಪೃಥ್ವಿ 9880073440 ಹಾಗೂ ಹರಿಶಂಕರ್ 8618369238 ನ್ನು ಸಂಪರ್ಕಿಸಬಹುದಾಗಿದೆ.…

Read More

ಮಡಿಕೇರಿ ನ.22 NEWS DESK : ವಿರಾಜಪೇಟೆ-ಕೊಟ್ಟೋಳಿ-ಕೆದಮುಳ್ಳೂರು-ಪಾಲಂಗಾಲ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಕೊಟ್ಟೋಳಿಯ ಅಂಗನವಾಡಿ ಕೇಂದ್ರ ಬಳಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಈ ಸಾಲಿನಲ್ಲಿ ವಿಪರೀತ ಹಾಗೂ ಅಕಾಲಿಕ ಮಳೆ ಆಗುತ್ತಿರುವುದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೊಂಚ ತೊಡಕು ಉಂಟಾಗಿದೆ. ಮಳೆ ಸಂಪೂರ್ಣ ದೂರ ಆದಂತೆ ಪ್ರತಿಯೊಂದು ರಸ್ತೆಯ ಅಭಿವೃದ್ಧಿ ಕಾಮಗಾರಿಗಳು ವೇಗ ಪಡೆಯಲಿದೆ. ಸಾರ್ವಜನಿಕರಿಗೆ ಅನಾನುಕೂಲ ಆಗದಂತೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳಾಗುವುದು ಎಂದು ತಿಳಿಸಿದರು. ಈ ಸಂದರ್ಭ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷರು ದೇಚಮ್ಮ ಕಾಳಪ್ಪ, ವಲಯ ಅಧ್ಯಕ್ಷರು ನಡಿಕೇರಿಯಂಡ ಮಹೇಶ್, ಕೆ ಡಿ ಪಿ ಸದಸ್ಯರು ಮಳೆಟೀರ ಪ್ರಶಾಂತ್ ಉತ್ತಪ್ಪ, ಪಂಚಾಯಿತಿ ಅಧ್ಯಕ್ಷರು ಜೇಫ್ರಿ ಚಂಗಪ್ಪ, ಪಂಚಾಯಿತಿ ಸದಸ್ಯರು ಇಸ್ಮಾಯಿಲ್, ಪವಿತ್ರ, ವನಿತಾ, ತಯಮ್ಮ, ಬೂತ್ ಅಧ್ಯಕ್ಷರು ವಿಜಯ ಕುಮಾರ್,…

Read More

ಮಡಿಕೇರಿ ನ.22 NEWS DESK : ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ಸಮಿತಿ ವತಿಯಿಂದ ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ರೈತರು ಹಾಗೂ ಬೆಳೆಗಾರರ ಭೂಮಿ ಸಮಸ್ಯೆ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಪಾಲ್ಗೊಂಡ ರೈತರು, ಬೆಳೆಗಾರರು, ‘ಸಿ ಮತ್ತು ಡಿ’ ಭೂಮಿ ಹೋರಾಟಗಾರರು, ರೈತ ಸಂಘದ ಮುಖಂಡರು ಕಸ್ತೂರಿ ರಂಗನ್ ವರದಿ ಹಾಗೂ ಸಿ ಮತ್ತು ಡಿ ಭೂಮಿ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು, ಶಾಸಕದ್ವಯರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್ ಗೌಡ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಅವರುಗಳ ಮುಂದೆ ತಮ್ಮ ಅಳಲು ತೋಡಿಕೊಂಡರು. ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಮಾಡಿದ ಗೊಂದಲಗಳಿಂದ ಇಂದು ಜಿಲ್ಲೆಯ ಸಹಸ್ರಾರು ರೈತರು ಮತ್ತು ಬೆಳೆಗಾರರು ತೊಂದರೆ ಅನುಭವಿಸುವಂತಾಗಿದೆ. ಈ ಗೊಂದಲಗಳನ್ನು ಸರಿಪಡಿಸಿ ರೈತರು ಮತ್ತು ಬೆಳೆಗಾರರ ಪರವಾಗಿ ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಒಕ್ಕೊರಲಿನಿಂದ ಒತ್ತಾಯಿಸಿದರು. ನೂರಾರು ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದ ಭೂಮಿಯನ್ನು ಇದೀಗ ಅರಣ್ಯ…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಯಲ್ಲಿ ಇರುವ ಅರೆಸೇನಾಪಡೆಯ ನಿವೃತ್ತ ಯೋಧರ ಒಕ್ಕೂಟದ ವತಿಯಿಂದ ಕೊಡಗು-ಮೈಸೂರು ಸಂಸತ್ ಸದಸ್ಯರಾದ ಯದುವೀರ್ ಒಡೆಯರ್ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಲಾಯಿತು. ಕೊಡಗು ಜಿಲ್ಲೆಯಾದ್ಯಂತ ನಾಲ್ಕು ಸಾವಿರಕ್ಕೂ ಹೆಚ್ಚಿನ ಮಂದಿ ಅರೆಸೇನಾಪಡೆಯಲ್ಲಿ ಕರ್ತವ್ಯದಲ್ಲಿರುವ ಹಾಗೂ ನಿವೃತ್ತರಾಗಿರುವ ಯೋಧರಿದ್ದೇವೆ. ಬಹಳಷ್ಟು ಮಂದಿ ವೀರಾಂಗನೆಯರೂ (ವಿಧವೆಯರು)ಕೂಡ ಇದ್ದು, ಕಳೆದ 13 ವರ್ಷಗಳಿಂದಲೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸಾಕಷ್ಟು ಮನವಿ ಸಲ್ಲಿಸುತ್ತಾ ಬಂದಿದ್ದರೂ ಸರ್ಕಾರದ ಸೌಲಭ್ಯಗಳು ಸಿಗದೇ ವಂಚಿತರಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು. ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆಗೆ ಅರೆಸೇನಾಪಡೆಯ ಯೋಧರನ್ನು ಪರಿಗಣಿಸಬೇಕು ಅಥವಾ ಅರೆಸೇನಾಪಡೆಯ ಅಭಿವೃದ್ಧಿ ನಿಗಮ ಸ್ಥಾಪಿಸಿ ಅರೆಸೇನಾಪಡೆ ಯೋಧರ ಕುಟುಂಬಗಳಿಗೆ ನೆರವು ನೀಡಬೇಕು, ಈಗಾಗಲೇ ಸ್ವಾಧೀನದಲ್ಲಿರುವ ಕರ್ಣಂಗೇರಿ ಗ್ರಾಮದ ಸರ್ವೆ ನಂಬರ್ 10/2 ರಲ್ಲಿನ 0.20 ಸೆಂಟು ಜಾಗದಲ್ಲಿ ಕಟ್ಟಡ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ, ಸರ್ಕಾರದಿಂದ ಅನುದಾನ ಒದಗಿಸಬೇಕು, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಿಜಿಹೆಚ್‍ಎಸ್ ವೆಲ್ ನೆಸ್ ಸೆಂಟರ್ ತೆರೆಯಬೇಕು.…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಆಡಳಿತ ಮಂಡಳಿ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗೆ ನ.25 ರಂದು ಚಾಲನೆ ದೊರೆಯಲಿದೆ. ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಉದ್ಘಾಟಿಸಲಿದ್ದಾರೆ. ಉಪಾಧ್ಯಕ್ಷ ಮದನ್ ಗೌಡ ಆಡಳಿತ ಮಂಡಳಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸಂಘದ ಕಾರ್ಯಚಟುವಟಿಕೆಗೆ ಚಾಲನೆ ನೀಡಲಿದ್ದಾರೆ. ಶಕ್ತಿ ಪತ್ರಿಕೆ ಪ್ರಧಾನ ಸಂಪಾದಕ ಜಿ.ರಾಜೇಂದ್ರ ಮುಖ್ಯ ಭಾಷಣ ಮಾಡಲಿದ್ದಾರೆ. ಸಂಘದ ಜಿಲ್ಲಾಧ್ಯಕ್ಷೆ ಬಿ.ಆರ್.ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ, ಕೊಡಗು…

Read More

ನಾಪೋಕ್ಲು ನ.22 NEWS DESK : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದ ಭಾರತ ಗುಂಡು ಎಸೆತ ಸ್ಪರ್ಧೆಯಲ್ಲಿ ಕಕ್ಕಬ್ಬೆ ಪ್ರೌಢಶಾಲೆಯ ವಿದ್ಯಾರ್ಥಿ ಪಿ.ಕೆ.ಫಾತಿಮತ್ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಆಡಳಿತ ಮಂಡಳಿ ಅಧ್ಯಕ್ಷ ಕೇಟೋಳಿರ ಕುಟ್ಟಪ್ಪ, ಬಾತ್ಮಿದಾರ ಸುಧಾ ಗಣಪತಿ, ಮುಖ್ಯ ಶಿಕ್ಷಕ ಅನಿಲ್ ರಾಜ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಕೆ.ಡಿ.ಬೋಪಣ್ಣ ಮಾರ್ಗದರ್ಶನ ನೀಡಿದರು. ವರದಿ : ದುಗ್ಗಳ ಸದಾನಂದ. 

Read More

ಕುಶಾಲನಗರ ನ.22 NEWS DESK : ನಾವು ಕನ್ನಡ ಭಾಷೆಯನ್ನು ಪ್ರತಿನಿತ್ಯ ಬಳಸಿದರೆ ಭಾಷೆಯು ತನ್ನಿಂದ ತಾನೇ ಬೆಳೆಯುತ್ತದೆ. ನಮ್ಮ ಕನ್ನಡ ಭಾಷೆ ಅನ್ನದ ಭಾಷೆಯಾಗಬೇಕು. ನೌಕರರ ನೇಮಕಾತಿಗಳಲ್ಲಿ ಕನ್ನಡ ಭಾಷಿಕರಿಗೆ ಮೊದಲ ಆದ್ಯತೆ ಸಿಗಬೇಕು ಎಂದು‌ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಬೆಂಗಳೂರಿನ ಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್. ಉಪ್ಪಾರ ಹೇಳಿದರು. ಕುಶಾಲನಗರ ಪಟ್ಟಣದ ಎ.ಪಿ.ಸಿ.ಎಂ.ಎಸ್. ಕನ್ವೆನ್ನನ್ ಸಭಾಂಗಣದಲ್ಲಿ ಜರುಗಿದ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ, ಬೆಂಗಳೂರು, ವೇದಿಕೆಯ ಕೊಡಗು ಜಿಲ್ಲಾ ಘಟಕ, ಸಂಗಮ ಟಿ.ವಿ. ಹಾಗೂ ವಂಶಿ ನ್ಯೂಸ್ ಸಹಯೋಗದೊಂದಿಗೆ ಕನ್ನಡ ಸುವರ್ಣ ಸಂಭ್ರಮ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ ಹಾಗೂ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿದ ಮಕ್ಕಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಪ್ರತ್ಯೇಕ ಮೀಸಲಾತಿ ಸಿಗಬೇಕು ಎಂದರು. ಕನ್ನಡ ಸಾಹಿತ್ಯ ಪರಂಪರೆ ಬಹಳ ಅಭೂತಪೂರ್ವವಾದದ್ದು, ವೈಶಿಷ್ಟ ಭಾಷೆಯಾದ ಕನ್ನಡ…

Read More

ನಾಪೋಕ್ಲು ನ.22 NEWS DESK : ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಹತ್ತನೇ ತರಗತಿಯ ವಿದ್ಯಾರ್ಥಿ ಕೆ.ಎ.ತಿನಿತ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೂಡಿಗೆಯಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ 200 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. 10ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ.ಗಾನವಿ ಉದ್ದ ಜಿಗಿತ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ. ವಿದ್ಯಾರ್ಥಿ ನಿತೀಶ್ ನಂಜಪ್ಪ ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಹಾಗೂ ರೀಲೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದು 10ನೇ ತರಗತಿಯ ವಿದ್ಯಾರ್ಥಿನಿ ಗಂಗಮ್ಮ ಬಿ.ಎಸ್ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಟೇಬಲ್ ಟೆನ್ನಿಸ್ ನಲ್ಲಿ ಏಳನೇ ತರಗತಿ ವಿದ್ಯಾರ್ಥಿನಿ ಪರಿಧಿ ಪೂವಮ್ಮ ಕೆ.ಬಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಪ್ರಾಂಶುಪಾಲರಾದ ಬಿ.ಎಂ.ಶಾರದ, ಶಿಕ್ಷಕರಾದ ಮೂಡೇರ ಕಾಳಯ್ಯ, ಸವಿತಾ ಮಾರ್ಗದರ್ಶ ನೀಡಿದರು. ವರದಿ :…

Read More

ವಿರಾಜಪೇಟೆ ನ.21 NEWS DESK : ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ವಿರಾಜಪೇಟೆ ತಾಲೂಕು ಘಟಕ ಹಾಗೂ ಸಂತ ಅನ್ನಮ್ಮ ದೇವಾಲಯದ ಸಹಯೋಗದೊಂದಿಗೆ ಕ್ರಿಸ್ಮಸ್ ಗಾನ ತರಂಗ-2025 ಕ್ರಿಸ್ಮಸ್ ಗಾಯನ ಸ್ಪರ್ಧೆಯನ್ನು ವಿರಾಜಪೇಟೆಯ ಸಂತ ಅನ್ನಮ್ಮ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಆಂಟೋನಿ ರಾಬಿನ್ ಹೇಳಿದರು. ವಿರಾಜಪೇಟೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ.7 ರಂದು ಬೆಳಿಗ್ಗೆ 10 ಗಂಟೆಗೆ ಸ್ಫರ್ದೆ ಪ್ರಾರಂಭವಾಗಲಿದೆ. ಗಾಯನ ಸ್ಫರ್ಧೇಯಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ 20,000 ಹಾಗೂ ಟ್ರೋಫಿ, ದ್ವಿತೀಯ 15,000 ಹಾಗೂ ಟ್ರೋಫಿ, ತೃತೀಯ 10000 ಹಾಗೂ ಟ್ರೋಫಿ ನೀಡಲಾಗುತ್ತದೆ. ಚಿತ್ರಕಲಾ ಸ್ಪರ್ಧೇಯಲ್ಲಿ ವಿಜೇತ ತಂಡಕ್ಕೆ ಕ್ರಮವಾಗಿ 3000,2000,1000 ರೂ ಹಾಗೂ ಟ್ರೋಫಿ ನೀಡಲಾಗುತ್ತದೆ. ನೋಂದಾವಣೆಗೆ ಡಿ.5 ಕೊನೆಯ ದಿನ ಎಂದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಉಪಾಧ್ಯಕ್ಷ ಜೋಕಿಂ ಮಾತನಾಡಿ,ಪ್ರತಿ ತಂಡಕ್ಕೆ ನೋಂದಣಿ ಶುಲ್ಕ ರೂ 500 ಇದ್ದು, ಒಂದು ಧರ್ಮ ಕೇಂದ್ರದಿಂದ ಹಾಗೂ…

Read More

ಮಡಿಕೇರಿ ನ.22 NEWS DESK : ಮಳೆಹಾನಿ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಟ್ಟು ಐದು ವರ್ಷಗಳೇ ಕಳೆದಿದ್ದರೂ ಇಲ್ಲಿಯವರೆಗೆ ಶುದ್ಧ ಕುಡಿಯುವ ನೀರು ಒದಗಿಸದ ಆಡಳಿತ ವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಮೇಕೇರಿ ಗ್ರಾ.ಪಂ ವ್ಯಾಪ್ತಿಯ ಬಿಳಿಗೇರಿ ಗ್ರಾಮದ ವಾರ್ಡ್ ಸಂಖ್ಯೆ 2 ರ ನಿವಾಸಿಗಳು ನಿರ್ಧರಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾ.ಪಂ ಸದಸ್ಯ ಎ.ಎ.ಅಬ್ದುಲ್ ಖಾದರ್ ಅವರು ಮುಂದಿನ 3 ದಿನಗಳೊಳಗೆ ಕುಡಿಯುವ ನೀರನ್ನು ಒದಗಿಸದಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಎದುರು ನಿವಾಸಿಗಳು ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು. 2018ರಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಮಡಿಕೇರಿ ನಗರಸಭಾ ವ್ಯಾಪ್ತಿಯ ಇಂದಿರಾ ನಗರದ 22 ಕುಟುಂಬಗಳನ್ನು ಬಿಳಿಗೇರಿ ಗ್ರಾಮದ ವಾರ್ಡ್ ಸಂಖ್ಯೆ 2ಕ್ಕೆ ಸ್ಥಳಾಂತರಿಸಲಾಯಿತು. ಈ ಕುಟುಂಬಗಳಿಗೆ ಸರಕಾರ ಮನೆಗಳನ್ನು ನಿರ್ಮಿಸಿ ಕೊಟ್ಟಿದೆಯಾದರೂ ಇಲ್ಲಿಯವರೆಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿಲ್ಲ. ಕೊಳವೆ ಬಾವಿಯೊಂದರ ನೀರನ್ನು ಟ್ಯಾಂಕ್ ಗೆ ಸಂಗ್ರಹಿಸಿ ಸರಬರಾಜು ಮಾಡಲಾಗುತ್ತಿದೆಯಾದರೂ ಗಡುಸಾದ ಈ ನೀರು…

Read More