ಲೇಖಕ: admin

ಮಡಿಕೇರಿ ಆ.16 :  ಮಡಿಕೇರಿಯ ಪುಟಾಣಿ ನಗರದ ಅಂಗನವಾಡಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಿಂದ ಜರುಗಿತು. ಶಿಕ್ಷಕಿ  ಪೊನ್ನಮ್ಮ ಹಾಗೂ ನಗರಸಭಾ ಸದಸ್ಯೆ ಮಂಜುಳಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ನಗರ ಬಿಜೆಪಿ ಖಜಾಂಚಿ ಮುರುಗನ್,  ಮಂಜೇಶ್, ದುರ್ಗಾಪರಮೇಶ್ವರಿ ದೇವಾಲಯದ ಅಧ್ಯಕ್ಷ ತಂಗರಾಜ್, ಪ್ರಮುಖರಾದ  ಬಡಸಾಬ್, ರಮೇಶ್ ಟಿಪಿ, ಕಣ್ಣ, ವೇಣು, ಗೌರಿ ಗಣೇಶ ಸಮಿತಿಯ ಪದಾಧಿಕಾರಿಗಳು ಮತ್ತು ಪಟಾಣಿ ನಗರದ ನಾಗರಿಕರು ಮತ್ತು ಮಕ್ಕಳು  ಪಾಲ್ಗೊಂಡಿದ್ದರು.

Read More

ಮಡಿಕೇರಿ ಆ.16 :  ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಕಾಲೇಜಿನ ಸಂಚಾಲಕ  ಕೆ.ಆರ್.ಗಂಗಾಧರ್ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅರಂತೋಡು ಗ್ರಾ.ಪಂ  ಸದಸ್ಯರು ಮತ್ತು ನಿಯೋಜಿತ ಅಧ್ಯಕ್ಷ ಕೇಶವ ಅಡ್ತಲೆ, ನಿವೃತ್ತ ಸೈನಿಕ ಉತ್ತಪ್ಪ ಮುಂಡೋಡಿ ಮತ್ತು ಸುಳ್ಯ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ.ನಿತಿನ್ ಪ್ರಭು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಾಪ್ಯುಲರ್ ಎಜುಕೇಶನ್ ಸೊಸೈಟಿ ಯ ಉಪಾಧ್ಯಕ್ಷ ಜತ್ತಪ್ಪ ಮಾಸ್ಟರ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 35 ವಿದ್ಯಾರ್ಥಿಗಳಿಗೆ ತಲಾ ಒಂದು ಸಾವಿರ ನಗದು ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಕೇಶವ ಅಡ್ತಲೆಯವರು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡಮಾಡುವ ದತ್ತಿ ನಿಧಿಯ ರೂಪಾಯಿ ಹತ್ತು ಸಾವಿರವನ್ನು ಪ್ರಾಂಶುಪಾಲರಿಗೆ ಹಸ್ತಾಂತರಿಸಿದರು. ಕಾರ್ಯಕ್ರಮವದಲ್ಲಿ ಮೂವರು ಅತಿಥಿಗಳನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ರಮೇಶ್ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರಾದ…

Read More

ಮಡಿಕೇರಿ ಆ.16 :  ಹಿರಿಯ ಸ್ವಾತಂತ್ರ ಹೋರಾಟಗಾರರಾಗಿದ್ದ ಪೋಡಮಾಡ ಕೆ.ಪೊನ್ನಪ್ಪ (97) ನಿಧನರಾಗಿದ್ದು, ಹಿರಿಯ ಚೇತನದ ಅಗಲಿಕೆಗೆ ಕೊಡವಾಮೆರ ಕೊಂಡಾಟ ಸಂಘಟನೆಯು ತೀವ್ರ ಸಂತಾಪ ವ್ಯಕ್ತ ಪಡಿಸಿದೆ. ಭಾರತ ಸ್ವಾತಂತ್ರ ಚಳುವಳಿಯಲ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ತೊಡಗಿಸಿಕೊಂಡಿದ್ದ ಪೊನ್ನಪ್ಪ ಅವರು ದೇಶದ ಸ್ವಾತಂತ್ರ ದಿನದಂದೇ ಇಹಲೋಕ ತ್ಯಜಿಸಿರುವುದು ವಿಶೇಷ. ಕೊಡವಾಮೆರ ಕೊಂಡಾಟ ಸಂಘಟನೆ 2022ರಲ್ಲಿ ಆಯೋಜಿಸಿದ್ದ 262ಕ್ಕೂ ಅಧಿಕ ಕೊಡವ ಸ್ವಾತಂತ್ರ್ಯ ಹೋರಾಟಗಾರರ ಮತ್ತು ಸಂಬಂಧಿಕರ ಸನ್ಮಾನ ಕಾರ್ಯಕ್ರಮದಲ್ಲಿ ಪೋಡಮಾಡ ಪೊನ್ನಪ್ಪ ಅವರು ಕುದ್ದು ಹಾಜರಿದ್ದು, ಸನ್ಮಾನ ಪಡೆದರಲ್ಲದೆ, ತಮ್ಮ ಹೋರಾಟದ ಅನುಭವವನ್ನು ಹಂಚಿಕೊಂಡಿದ್ದರು. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂಘಟನೆ ತನ್ನ ವಾಟ್ಸಾಪ್ ಗುಂಪಿನ ಎಲ್ಲಾ ದೈನಂದಿನ ಕಾರ್ಯಕ್ರಮಗಳನ್ನು ನಿಲ್ಲಿಸುವ ಮೂಲಕ ಪ್ರಾರ್ಥಿಸಿದೆ.

Read More

ಮಡಿಕೇರಿ ಆ.15 : ಆಲ್ ಇಂಡಿಯಾ ಕೇರಳ ಮುಸ್ಲಿಂ ಕಲ್ಚರಲ್ ಸೆಂಟರ್ ನ ಮಡಿಕೇರಿ ಘಟಕದ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಎಐಕೆಎಂಸಿಸಿಯ ಮಡಿಕೇರಿ ಅಧ್ಯಕ್ಷ ಅಬ್ದುಲ್ ಗಫೂರ್ ಅವರ ನೇತೃತ್ವದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಮತ್ತು ಸಿಹಿಯನ್ನು ಹಂಚಿ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಭೋಸರಾಜು, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯoಡ ವೀಣಾ ಅಚ್ಚಯ್ಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ಸದಸ್ಯರಾದ ಕೆ.ಪಿ.ಚಂದ್ರಕಲಾ, ಹೆಚ್.ಎಸ್.ಚಂದ್ರಮೌಳಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ತೆನ್ನಿರ ಮೈನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹಂಸ ಕೊಟ್ಟಮುಡಿ, ಪ್ರಮುಖರಾದ ಯಾಕುಬ್ ಬಜಗುಂಡಿ, ಮೊಹಮ್ಮದ್ ಕೆ.ಕೆ, ನಾಸಿರ್ ಹಿಲ್‌ಟೌನ್, ಮುಸ್ತಫ, ಪುರಸಭೆ ಅಧ್ಯಕ್ಷ ರಾಕೇಶ್, ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಖಲೀಲ್ ಬಾಷ, ಸಂಘಟನೆಯ ಉಪಾಧ್ಯಕ್ಷ ನಿಸಾರ್, ಶಮೀರ್ ಮತ್ತಿತರರು ಈ ಸಂದರ್ಭ…

Read More

ಮಡಿಕೇರಿ ಆ.15 : ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನೂರೊಕ್ಕನಾಡ್ ಹಿಲ್ಸ್ನಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಅತ್ಯಂತ ಸಣ್ಣ ಕೊಡವ ಬುಡಕಟ್ಟು ಜನಾಂಗ ದೇಶದ ಸ್ವಾತಂತ್ರö್ಯ ಹೋರಾಟದಲ್ಲಿ ದೊಡ್ಡ ಸಂಖ್ಯೆಯಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಚಾರ. ತ್ಯಾಗ ಮನೋಭಾವದ ದೇಶಭಕ್ತ ಕೊಡವ ವೀರರು ಈ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ ಎಂದರು. ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕುಗಳು, ನಮ್ಮ ಸಂವಿಧಾನದ ಆರ್ಟಿಕಲ್ 244 R/ w 6 ಮತ್ತು 8 ನೇ ಶೆಡ್ಯೂಲ್ ಅಡಿಯಲ್ಲಿ ಕೊಡವಲ್ಯಾಂಡ್ ಭೂ-ರಾಜಕೀಯ ಸ್ವಾಯತ್ತತೆಗಾಗಿ ಕೊಡವ ಜನಾಂಗೀಯ ಪ್ರಪಂಚದ ಸಾಂಪ್ರದಾಯಿಕ ಮತ್ತು ಅವಿಭಾಜ್ಯ ತಾಯ್ನಾಡನ್ನು ಸ್ವಯಂ ಆಳ್ವಿಕೆಗೆ ಒಳಪಡಿಸಬೇಕು. ಕೊಡವ ಜನಾಂಗೀಯ ಪಂಗಡಕ್ಕೆ ಎಸ್‌ಟಿ ಟ್ಯಾಗ್ ನೀಡಬೇಕು. ನಮ್ಮ ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಸಿಖ್ ಜನಾಂಗದ “ಕಿರ್ಪಾನ್” ಗೆ ಸಮಾನವಾಗಿ ನಮ್ಮ ಸಂಸ್ಕಾರದ ಕೋವಿಯನ್ನು ರಕ್ಷಿಸಬೇಕು. ಕೊಡವ…

Read More

ಕುಶಾಲನಗರ, ಆ.15 : ನಮ್ಮ ರಾಷ್ಟ್ರ ಸ್ವತಂತ್ರವಾಗಲು ಕನಸು ಕಂಡಿದ್ದ ನಮ್ಮೆಲ್ಲ ಹುತಾತ್ಮರ ಕಷ್ಟ-ನೋವುಗಳನ್ನು ನಾವು ಅರ್ಥೈಸಿಕೊಂಡು ಮುಂದೆ ಸಾಗಬೇಕು. ಅವರ ಪ್ರಾಣತ್ಯಾಗವನ್ನು ಮನನ ಮಾಡಿಕೊಂಡು ರಾಷ್ಟ್ರ ರಕ್ಷಣಾ ಕಾರ್ಯಕ್ಕೆ ಪಣ ತೊಡಬೇಕು ಎಂದು ಕುಶಾಲನಗರದ ನಿವೃತ್ತ ಸಿಪಾಯಿ ಕಾನೇಹಿತ್ಲು ಕೆ.ಕಾಳಪ್ಪ  ಹೇಳಿದರು. ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ( ಕೂಡ್ಲೂರು ) ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ವಿದ್ಯಾರ್ಥಿ ಸಂಘ, ಮತದಾರರ ಸಾಕ್ಷರತಾ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.) ಘಟಕದ ವತಿಯಿಂದ ಸುಂಟಿಕೊಪ್ಪ ಜೆಸಿಐ ಹಾಗೂ ಕುಶಾಲನಗರ ಕಾವೇರಿ ಜೆಸಿಐ ಸಂಸ್ಥೆಯ ಆಶ್ರಯದಲ್ಲಿ ಏರ್ಪಡಿಸಿದ್ದ 77 ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ, ರಾಷ್ಟ್ರದ ಏಕತೆಗೆ ಯುವಜನಾಂಗ ಪಣತೊಡಬೇಕು ಎಂದರು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಸ್ ಡಿ ಎಂ ಸಿ ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ ಮಾತನಾಡಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ- ಬಲಿದಾನವನ್ನು ಸ್ಮರಿಸುವ ಮೂಲಕ ನಮ್ಮ ರಾಷ್ಟ್ರದ ಪ್ರಗತಿ ಮತ್ತು ಭಾವೈಕತೆಗೆ ಶ್ರಮಿಸಬೇಕಿದೆ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ…

Read More

ಮಡಿಕೇರಿ ಆ.15 : ಹರಪ್ಪಳ್ಳಿ ರವೀಂದ್ರ ಅಭಿಮಾನಿಗಳ ಸಂಘದ ಸುಂಟಿಕೊಪ್ಪ ಘಟಕಕ್ಕೆ ಚಾಲನೆ ನೀಡಲಾಗಿದೆ. ಸ್ವಸ್ಥ ಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುವ ಮೂಲಕ ಸಂಘವನ್ನು ಆರಂಭಿಸಲಾಯಿತು. ಧ್ವಜಾರೋಹಣದ ನಂತರ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದ ಪ್ರಮುಖರು ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನೆರೆದಿದ್ದ ವಿದ್ಯಾರ್ಥಿಗಳಿಗೆ ಹಣ್ಣು ಹಾಗೂ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭ ಮಾತನಾಡಿದ ಗ್ರಾ.ಪಂ ಮಾಜಿ ಅಧ್ಯಕ್ಷ ಎಂ.ಎ.ಉಸ್ಮಾನ್, ದೇಶದ ಅಭ್ಯುದಯಕ್ಕಾಗಿ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು. ಸಮಾಜ ಸೇವಕ ಹರಪ್ಪಳ್ಳಿ ರವೀಂದ್ರ ಅವರ ಅಭಿಮಾನಿಗಳ ಸಂಘವನ್ನು ಆರಂಭಿಸಲಾಗಿದ್ದು, ಈ ಸಂಘದ ಮೂಲಕ ಸಾಮಾಜಿಕ ಕಳಕಳಿ ಮತ್ತು ಜನಪರವಾದ ಕಾರ್ಯಗಳು ನಡೆಯಲಿದೆ ಎಂದರು. ಮಹಿಳಾ ಸಂಘ ಸೇರಿದಂತೆ ಎಲ್ಲಾ ಸಂಘಗಳ ಅಧ್ಯಕ್ಷರುಗಳು ಅಭಿಮಾನಿಗಳ ಸಂಘದಲ್ಲಿ ಸದಸ್ಯರಾಗಿರುತ್ತಾರೆ. ಯಾವುದೇ ಸಮಸ್ಯೆ ಎದುರಾದರೂ ಸಂಘ ತಕ್ಷಣ ಸ್ಪಂದಿಸಲಿದೆ ಎಂದು ಉಸ್ಮಾನ್ ತಿಳಿಸಿದರು. ಗ್ರಾ.ಪಂ ಮಾಜಿ ಅಧ್ಯಕ್ಷ ಕೆ.ಇ.ಕರೀಂ, ಗ್ರಾ.ಪಂ ಸದಸ್ಯರುಗಳಾದ ಪ್ರಸಾದ್ ಕುಟ್ಟಪ್ಪ, ಅಲಿಕುಟ್ಟಿ, ಶಬೀರ್, ತಾ.ಪಂ ಮಾಜಿ ಸದಸ್ಯ ರಫೀಕ್ ಮಾಸ್ಟರ್,…

Read More

ಮಡಿಕೇರಿ ಆ.15 :  ಕಾಡಾನೆ ದಾಳಿಯಿಂದ ಮೃತಪಟ್ಟ ಅರೆಕಾಡು ನಿವಾಸಿ  ದೇವಪ್ಪ ಅವರ ಮನೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ  ಡಾ.ಮಂತರ್ ಗೌಡ  ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ನಂತರ  10 ಲಕ್ಷ ರೂಪಾಯಿ ಮೊತ್ತದ ಪರಿಹಾರದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು.  ಈ ಸಂದರ್ಭ ಕಾಂಗ್ರೆಸ್ ಪಕ್ಷದ ಪ್ರಮುಖರು ಹಾಜರಿದ್ದರು.  

Read More

ಮಡಿಕೇರಿ ಆ.15 :  ಕಸ್ತೂರಿ ರಂಗನ್ ವರದಿಯ ಸಾಧಕ ಬಾಧಕಗಳ ಕುರಿತು ನಗರದ  ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗು ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ  ಎ.ಎಸ್ ಪೊನ್ನಣ್ಣ , ಮಾಜಿ ಶಾಸಕರು ಹಾಗು ಕಸ್ತೂರಿ ರಂಗನ್ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ರು, ಸಮಿತಿಯ ಸಂಚಾಲಕ  ಧರ್ಮಜ ಉತ್ತಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್  ಸಂಕೇತ ಪೂವಯ್ಯ  ಹಾಗು ಕೊಡಗು ಜಿಲ್ಲೆಯ ಸಂಘಟನೆಗಳ ಮುಖಂಡರು ಹಾಜರಿದ್ದರು.

Read More

ಮಡಿಕೇರಿ ಆ.15 : ಪ್ರತಿ ಬಡ ಕುಟುಂಬವೂ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು. ಜೊತೆಗೆ ಕುಟುಂಬ ನಿರ್ವಹಣೆಗೆ ಸಹಕಾರಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು  ತಿಳಿಸಿದ್ದಾರೆ. ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ‘ಉಚಿತ ಬೆಳಕು, ಸುಸ್ಥಿರ ಬದುಕು’ ಕಾರ್ಯಕ್ರಮದಡಿ ‘ಶೂನ್ಯ ವಿದ್ಯುತ್ ಬಿಲ್ಲು’ ನೀಡುವ ಮೂಲಕ ‘ಗೃಹ ಜ್ಯೋತಿ’ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯ ಮತ್ತು ರಾಷ್ಟ್ರ ಅಭಿವೃದ್ಧಿ ಹೊಂದಲು ಎಲ್ಲಾ ಜಾತಿ, ಉಪ ಜಾತಿ, ಧರ್ಮದ ಜನರ ಜೀವನ ಮಟ್ಟ ಸುಧಾರಣೆ ಕಂಡಾಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ. ಆ ನಿಟ್ಟಿನಲ್ಲಿ ಬಡ ಜನರ ಕಲ್ಯಾಣಕ್ಕಾಗಿ ಸರ್ಕಾರ 5 ಗ್ಯಾರಂಟಿ ಯೋಜನೆಗಳಲ್ಲಿ 4 ಯೋಜನೆಗಳನ್ನು ಈಗಾಗಲೇ ಕಾರ್ಯರೂಪಗೊಳಿಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ವರೆಗೆ…

Read More