ಮಡಿಕೇರಿ ಸೆ.11 : ನವ ದೆಹಲಿಯಲ್ಲಿ ಸೆ.18 ರಿಂದ ನಡೆಯುವ ಪ್ರತಿಷ್ಠಿತ ರಾಷ್ಟ್ರ ಮಟ್ಟದ ಎನ್ಸಿಸಿ ಶಿಬಿರ – ಆಲ್ ಇಂಡಿಯಾ ಸೈನಿಕ್ ಕ್ಯಾಂಪ್ ಗೆ , ವಿರಾಜಪೇಟೆಯ ಆಯುಷ್ ಎಂ.ಡಿ ಕರ್ನಾಟಕ ಮತ್ತು ಗೋವಾ ಡೈರೆಕ್ಟೊರೇಟ್ ನಿಂದ ಆಯ್ಕೆಯಾಗಿದ್ದಾರೆ. ಆಯುಷ್ ಮೈಸೂರಿನ ದಿ ನ್ಯಾಷನಲ್ ಇನ್ಸ್ ಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ವಿರಾಜಪೇಟೆಯ ಡಾ.ಸುಪ್ರೀತ ಹಾಗೂ ಡಾ.ದೀಪಕ್ ಅವರ ಪುತ್ರ.
ಲೇಖಕ: admin
ಮಡಿಕೇರಿ ಸೆ.11 : ಪ್ರಸಕ್ತ ಸಾಲಿನ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಕಾರ್ಯಕ್ರಮವು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ ಅರ್ಥಪೂರ್ಣವಾಗಿ ಜರುಗಿತು. ಕೂಡಿಗೆ ಡಯಟ್ ಪ್ರಾಂಶುಪಾಲರು ಹಾಗೂ ಉಪ ನಿರ್ದೇಶಕರಾದ ಚಂದ್ರಕಾoತ್ ಅವರು ಸಾಕ್ಷರತಾ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಿ.ಆರ್.ಪಿ. ಮಂಜುಳಾ ಚಿತ್ತಾಪುರ ಹಾಗೂ ಸಿ.ಆರ್.ಪಿ ವೃಂದದವರು ಸಾಕ್ಷರತಾ ಗೀತೆ ಹಾಡಿದರು. ಸರ್ಕಾರಿ ಪ್ರೌಢಶಾಲೆಯ ಮಕ್ಕಳು ಪ್ರಾರ್ಥಿಸಿದರು. ವೇದಿಕೆಯಲ್ಲಿದ್ದ ಗಣ್ಯರು, ನವ ಸಾಕ್ಷರರು, ಶಾಲಾ ಮಕ್ಕಳು ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅಕ್ಷರ ದಾಸೋಹದ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶಶಿಕಲಾ ಎಚ್.ಟಿ. ಅವರು ಪ್ರಾಸ್ತಾವಿಕ ನುಡಿಗಳನ್ನಾಡುವ ಮೂಲಕ ವಯಸ್ಕರ ಶಿಕ್ಷಣ ನಡೆದು ಬಂದ ಹಾದಿ ಹಾಗೂ ಕೊಡಗು ಜಿಲ್ಲೆಯ 2022-23 ನೇ ಸಾಲಿನ ಸಾಕ್ಷರತಾ ಭೌತಿಕ ಗುರಿ ಸಾಧನೆ ಮತ್ತು 2023-24 ನೇ ಸಾಲಿಗೆ ಸಿದ್ಧಪಡಿಸಿಕೊಂಡು ಅನುಷ್ಠಾನ ಮಾಡಲಿರುವ ಕಾರ್ಯಕ್ರಮಗಳ ಬಗ್ಗೆ, ಅಂತಾರಾಷ್ಟ್ರೀಯ ಸಾಕ್ಷರತಾ ಕಾರ್ಯಕ್ರಮದ…
ಮಡಿಕೇರಿ ಸೆ.11 : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯು ನಗರದ ಅರಣ್ಯ ಭವನದಲ್ಲಿ ಸೋಮವಾರ ನಡೆಯಿತು. ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭದಲ್ಲಿ ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ, ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಕುಮಾರ್ ತ್ರಿಪಾಠಿ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು, ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ, ವಿರಾಜಪೇಟೆ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎಂ.ಶರಣಬಸಪ್ಪ, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಸ್.ಚAಗಪ್ಪ ಇತರರು ಅರಣ್ಯ ಹುತಾತ್ಮ ಸ್ಮಾರಕಕ್ಕೆ ಹೂಗುಚ್ಛ ಸಮರ್ಪಿಸಿ, ಗೌರವ ಸಲ್ಲಿಸಿದರು. ಏರ್ ಮಾರ್ಷಲ್ (ನಿವೃತ್ತ) ಕೆ.ಸಿ.ಕಾರ್ಯಪ್ಪ ಅವರು ಮಾತನಾಡಿ ಮಾನವ ಮತ್ತು ವನ್ಯಜೀವಿ ಸಂಘರ್ಷವನ್ನು ತಡೆಯಬೇಕಿದೆ ಎಂದರು. ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುವವರಿಗೆ…
ಮಡಿಕೇರಿ ಸೆ.11 : ಕಲೆ ಸಾಹಿತ್ಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ರಾಜಮನೆತನದ ಕೊಡುಗೆ ಅಪಾರವಾಗಿದೆ ಎಂದು ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರದ ಕಲಾಭವನದಲ್ಲಿ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಮಾತನಾಡುವ ಕ್ಷೇತ್ರಗಳ ಏಕೀಕರಣ ಗತವೈಭವವನ್ನು ಮರುಕಳಿಸುವಂತೆ ಮಾಡುವುದು ಹಿರಿಯರ ಚಿಂತನೆಯಾಗಿತ್ತು ಎಂದು ಹೇಳಿದ ಅವರು, ಕನ್ನಡ ಕಲೆ ಸಂಸ್ಕೃತಿ ಬೆಳಗುವಂತೆ ಮಾಡಿ ಅದಕ್ಕೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್ ಹಲವು ರೀತಿಯಲ್ಲಿ ಕಾರ್ಯ ಯೋಜನೆ ರೂಪಿಸಿದ್ದರು ಎಂದು ತಿಳಿಸಿದರು. ಪುಸ್ತಕಗಳು ಕಲೆಗಳು ನಾಟ್ಯ ನೃತ್ಯ ಮುಂತಾದವುಗಳಿಗೆ ಪ್ರೋತ್ಸಾಹ ನೀಡಿದ ಹೆಗ್ಗಳಿಕೆ ಅವರದ್ದಾಗಿದೆ ಎಂದು ಒಡೆಯರ್ ಸ್ಮರಿಸಿದರು. ನಾಲ್ವಡಿ ಒಡೆಯರ್ ಅವರು ದೇವಾಲಯಗಳ ರಕ್ಷಣೆ, ಸಂಘ ಸಂಸ್ಥೆಗಳನ್ನು ಹುಟ್ಟು ಹಾಕುವ ಮೂಲಕ ಮುಂದಿನ ಪೀಳಿಗೆಗೆ ಸಂದೇಶ ನೀಡಿದ್ದರು ಎಂದ ಅವರು ದೂರ ದೃಷ್ಟಿಯ ಕಲ್ಪನೆಯ ಮೂಲಕ ಸ್ಥಾಪಿಸಿದ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ರಾಜ್ಯದಲ್ಲಿ…
ಮಡಿಕೇರಿ ಸೆ.11 : ಕರಿಕೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಎಲ್ಲಾ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. 12 ನಿರ್ದೇಶಕರುಗಳ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಜಯಭೇರಿ ಬಾರಿಸಿದರು. ಕಾಂಗ್ರೆಸ್ ಬೆಂಬಲಿತ ಬಿ.ಡಿ.ದೇವರಾಜ್, ಕೆ.ಕೆ.ಜಗದೀಶ್, ಕೆ.ಪಿ.ಸುಬ್ರಹ್ಮಣ್ಯ, ಎಂ.ಎಂ.ರೆಲ್ಸನ್, ಎ.ಯು.ಹಕ್ಕಿಂ, ಬಿ.ಕೆ.ಪುರುಷೋತ್ತಮ, ಪಿ.ಟಿ.ವಿನೋದ್, ಟಿ.ಆರ್.ಶ್ರೀನಿವಾಸ್, ಎ.ಪಿ.ಜೀವನ್ ಕುಮಾರ್, ಧನ್ಯಶ್ರೀ ಕುಮಾರ್, ಕೆ.ಪಿ.ಸರಸ್ವತಿ ಹಾಗೂ ಜಯಂತ್ ಸೋಣಂಗೇರಿ ನಿರ್ದೇಶಕರುಗಳಾಗಿ ಆಯ್ಕೆಯಾದರು. ಕರಿಕೆ ಗ್ರಾ.ಪಂ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್, ಕೆಪಿಸಿಸಿ ಸದಸ್ಯ ಬಿ.ಎಸ್.ರಮನಾಥ್, ಕಾಂಗ್ರೆಸ್ ವಲಯಾಧ್ಯಕ್ಷ ಬಿ.ಡಿ.ದೇವರಾಜ್ ಹಾಗೂ ಸಹಕಾರ ಸಂಘದ ಅಧ್ಯಕ್ಷ ಬಿ.ಜೆ.ಶರಣ್ ಕುಮಾರ್ ಅವರುಗಳು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕಳೆದ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರು.
ಮಡಿಕೇರಿ ಸೆ.11 : ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಪ್ರಮುಖ ಡಾ.ಸೈಯದ್ ನಾಸಿರ್ ಹುಸೇನ್ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕ ಮತ್ತು ಅಲ್ಪಸಂಖ್ಯಾತರ ಘಟಕ ಸನ್ಮಾನಿಸಿ ಗೌರವಿಸಿತು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಪಿ.ಎ.ಹನೀಫ್, ಪ್ರಮುಖರಾದ ಯಾಕುಬ್, ಲತೀಫ್, ರಶೀದ್, ಶೌಕತ್, ಜುಬೈರ್, ರಫೀಕ್ ಹಾಗೂ ಬಾಷಾ ಅವರುಗಳು ಬೆಂಗಳೂರಿನಲ್ಲಿ ಡಾ.ಸೈಯದ್ ನಾಸಿರ್ ಹುಸೇನ್ ಅವರನ್ನು ಭೇಟಿಯಾಗಿ ಅಭಿನಂದಿಸಿ ಶುಭ ಹಾರೈಸಿದರು.
ಸೋಮವಾರಪೇಟೆ ಸೆ.11 : ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ತಾಲ್ಲೂಕು ರೈತ ಮೋರ್ಚಾ ಪ್ರತಿಭಟನೆ ನಡೆಸಿತು. ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತಪರ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು. ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ, ಭೂಸಿರಿ, ಶ್ರಮಶಕ್ತಿ ಮತ್ತು ರೈತ ಸಂಪದ ಯೋಜನೆಯನ್ನು ಮುಂದುವರೆಸಬೇಕೆoದು ಆಗ್ರಹಿಸಿದರು. ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರoಜನ್, ರೈತ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಮಚ್ಚಂಡ ಪ್ರಕಾಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಸೆ.11 : ಪತಿ, ಪತ್ನಿ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಮಡಿಕೇರಿ ನಗರದ ಕೈಗಾರಿಕಾ ಬಡಾವಣೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ರಾಧಿಕ (40) ಮೃತ ಮಹಿಳೆಯಾಗಿದ್ದು, ಇದೇ ರಾಜ್ಯದ ಪತಿ ರೋಷನ್ (30) ಬಂಧಿತ ಆರೋಪಿಯಾಗಿದ್ದಾನೆ. ನಗರದ ಖಾಸಗಿ ವಸತಿಗೃಹದಲ್ಲಿ ಕೆಲಸ ಮಾಡುತ್ತಿದ್ದ ದಂಪತಿ ಕೈಗಾರಿಕಾ ಬಡಾವಣೆಯಲ್ಲಿ ವಾಸಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಕಲಹ ಏರ್ಪಟ್ಟು ಪತಿ ರೋಷನ್ ರಾಧಿಕಾಳ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರ ರಕ್ತಸ್ರಾವಗೊಂಡ ಮಹಿಳೆಯನ್ನು ನಗರದ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಯಿತ್ತಾದರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಆರೋಪಿ ರೋಷನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಮಡಿಕೇರಿ ಸೆ.11 : ಸೋಮವಾರಪೇಟೆಯ ಶಾಸಕರ ಕಛೇರಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಬಹುತೇಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಶಾಸಕರು ಸಕಾಲದಲ್ಲಿ ಸಾರ್ವಜನಿಕರ ಕೆಲಸ, ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕರು ಶಾಸಕರ ಗಮನ ಸೆಳೆದರು, ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.
ಬೆಂಗಳೂರು ಸೆ.11 : ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿದ್ದು, ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ತಮ್ಮ ಫೆಸ್ಬುಕ್ ಪೋಸ್ಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ, ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು 7 ಸಾವಿರಕ್ಕೂ ಅಧಿಕ ಡೆಂಗಿ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 4 ಸಾವಿರಕ್ಕೂ ಅಧಿಕ ಪ್ರಕರಣಗಳು ಬೆಂಗಳೂರು ನಗರವೊಂದರಲ್ಲೇ ಕಂಡುಬಂದಿದೆ. ಡೆಂಘಿ ಕ್ಷಿಪ್ರಗತಿಯಲ್ಲಿ ವ್ಯಾಪಿಸುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಮಾತನಾಡಿ, ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೊಳ್ಳೆ ನಿಯಂತ್ರಣಕ್ಕೆ ಜೌಷಧ ಸಿಂಪಡಣೆ, ನೀರು ಶೇಖರಣೆಯಾಗುವ ಸ್ಥಳಗಳನ್ನು ಗುರುತಿಸಿ ಸ್ವಚ್ಚಗೊಳಿಸುವುದು ಸೇರಿದಂತೆ ಸೊಳ್ಳೆ ನಿಯಂತ್ರಣಕ್ಕೆ ಪರಿಣಾಮಕಾರಿ ಮಾರ್ಗಗಳನ್ನು ಅನುಸರಿಸಲಾಗುತ್ತಿದೆ. ಮನೆ ಸುತ್ತಮುತ್ತಲಿನ ಪರಿಸರದ ಸ್ವಚ್ಚತೆಗೆ ಆದ್ಯತೆ ನೀಡಿ, ಸೊಳ್ಳೆ ಕಡಿತದ ಬಗ್ಗೆ ಎಚ್ಚರಿಕೆ…






