ಬೆಂಗಳೂರು ಸೆ.11 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವನಸಂಪತ್ತಿನ ಸಂರಕ್ಷಣೆಯ ವೇಳೆ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ವಸತಿ ಸಚಿವ ಜಮೀರ್ ಅಹಮದ್ ಈ ಸಂದರ್ಭ ಹಾಜರಿದ್ದರು.
ಲೇಖಕ: admin
ಮಡಿಕೇರಿ ಸೆ.11 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮವನ್ನು ಉಪಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ್ ಉದ್ಘಾಟಿಸಿ, ಮಾತನಾಡಿ ಅಂಬೇಡ್ಕರ್ ಅವರಿಂದ ಎಲ್ಲವನ್ನೂ ಪಡೆದುಕೊಂಡ ನಾವು ಸಮಾಜದ ದೀನದಲಿತರ ಬದುಕನ್ನು ಹಸನಾಗಿಸಲು ಶ್ರಮಪಡಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ದಲಿತ ಸಂಘರ್ಷ ಸಮಿತಿಯು ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದ್ದು, ಆಶ್ರಮದ ಹಿರಿಯರಿಗೆ ಒಂದು ದಿನ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಏರ್ಪಡಿಸಿದಲ್ಲಿ ತಾನೂ ಕೂಡ ಒಬ್ಬ ವೈದ್ಯನಾಗಿ ಬಂದು ಅವರ ಸೇವೆ ಮಾಡುವುದಾಗಿ ಭರವಸೆ ನೀಡಿದರು. ಕೊಡಗು ಮೆಡಿಕಲ್ ಕಾಲೇಜಿನ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್ ಮಾತನಾಡಿ, ಅಂಬೇಡ್ಕರ್ ಅವರು ತಮ್ಮ ಜೀವನದುದ್ದಕ್ಕೂ ದೇಶದ ಜನತೆಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೆಚ್.ಎಲ್.ದಿವಾಕರ್, ವಿದ್ಯಾರ್ಥಿಗಳು ಅಂಬೇಡ್ಕರ್…
ಗೋಣಿಕೊಪ್ಪ ಸೆ.11 : ಮಿಸ್, ಮಿಸ್ಸೆಸ್ ಮತ್ತು ಕಿಡ್ಸ್ ಮೈಸೂರು ಕರ್ನಾಟಕ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ಮೊದಲ ರನ್ನರ್ ಅಪ್ ಕಿರೀಟವನ್ನು ರಶ್ಮಿ ರಾಜ್ ಮುಡಿಗೇರಿಸಿಕೊಂಡಿದ್ದಾರೆ. ಎಸ್.ಎಸ್ ಕಲಾಸಂಗಮ ಸಂಸ್ಥೆ ಮೈಸೂರಿನಲ್ಲಿ ಆಯೋಜಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ ವಿಭಾಗದಲ್ಲಿ ರಶ್ಮಿ ಭಾಗವಹಿಸಿದ್ದರು. ಮೂರು ವಿಭಾಗದಲ್ಲಿ ಸುಮಾರು 60ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಸೌಂದರ್ಯ ಸ್ಪರ್ಧೆಯ ತೀರ್ಪುಗಾರರಾಗಿ ಭುವನ ಸುಂದರಿ 2022 ವಿನ್ನರ್ ಸತ್ಯವತಿ ಬಸವರಾಜ್, ಜ್ಯೋತಿಬಿಹಲ್, ಸುಪ್ರಜಾ, ಪೂರ್ಣಿಮಾ, ಮುಖ್ಯ ಅತಿಥಿಗಳಾಗಿ ಜಗದೀಶ್, ಶಶಿಧರ್ ಕೋಟೆ ಖ್ಯಾತ ಗಾಯಕ ಗಂಡ್ಲಿ ಸದಾನಂದ ಸ್ವಾಮಿ, ಚಲನಚಿತ್ರ ನಟ ನಿರ್ಮಾಪಕ ಡಾ.ಬಲರಾಮ್, ಡಾ ಮಾಣಿಕ್ ಟ್ಯಾಂಡಲಿ, ರಾಮಪ್ಪ, ಕಲಾಸಂಗಮ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್, ಬಿ.ಕೆ ಶೋಭಾ, ಪಿ.ಎನ್.ಶಿಲ್ಪ ಗಣೇಶ್ ಇದ್ದರು. ರಶ್ಮಿ ಪೊನ್ನಂಪೇಟೆ ತಾಲೂಕಿನ ಮಡಿಕೆಬೀಡು ಗ್ರಾಮದ ಆದೇಂಗಡ ರಾಜ ಅಯ್ಯಪ್ಪ ಮತ್ತು ದಿ.ಸಾವಿತ್ರಿ ಅವರ ಪುತ್ರಿಯಾಗಿದ್ದಾರೆ. ಹಲವು ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿರುವ ರಶ್ಮಿ ವಿನ್ನರ್, ರನ್ನರ್ ಅಪ್ ಕಿರೀಟವನ್ನು ಮುಡುಗೇರಿಸಿಕೊಂಡಿದ್ದಾರೆ.
ನಾಪೋಕ್ಲು sಸೆ.11 : ಕ್ರೈಸ್ತರ ಪವಿತ್ರ ಹಬ್ಬವಾದ ಕನ್ಯಾ ಮರಿಯಮ್ಮ ಜನ್ಮದಿನವನ್ನು ನಾಪೋಕ್ಲುವಿನ ಮೇರಿ ಮಾತೆ ದೇವಾಲಯದಲ್ಲಿ ಕ್ರೈಸ್ತ ಬಾಂಧವರು ಸಂಭ್ರಮದಿಂದ ಆಚರಿಸಿದರು. ಮಾತೆ ಮರಿಯಮ್ಮ ಜಯಂತಿಯ ಪ್ರಯುಕ್ತ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್ ವಿಶೇಷ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ದಿನದ ಮಹತ್ವದ ಬಗ್ಗೆ ವಿವರಿಸಿದರು. ಮೇರಿಮಾತೆಯ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಂತೃಪ್ತ ಜೀವನ ನಡೆಸಬೇಕೆಂದು ಹಿತವಚನ ನುಡಿದು ಎಲ್ಲರಿಗೂ ಶುಭ ಹಾರೈಸಿದರು. ಕ್ರೈಸ್ತ ಬಾಂಧವರು ದೇವಾಲಯದಲ್ಲಿ ಪ್ರಾರ್ಥನಾ ವಿಧಿಗಳಲ್ಲಿ ಭಾಗವಹಿಸಿ ತಾವು ತಂದ ಹೂಗಳನ್ನು ದೇವಾಲಯದ ಆವರಣದಲ್ಲಿ ವಿಶೇಷವಾಗಿ ಅಲಂಕರಿಸಿ ಇರಿಸಲಾದ ಮರಿಯಮ್ಮ ನವರ ಪ್ರತಿರೂಪಕ್ಕೆ ಸಮರ್ಪಿಸಿ ಸಂಭ್ರಮಿಸಿ ಧನ್ಯತಭಾವ ಹೊಂದಿದರು. ಹಬ್ಬಕ್ಕೆ ಪೂರ್ವ ತಯಾರಿಯಾಗಿ ಒಂಬತ್ತು ದಿನಗಳ ನೋವೇನಾ ಪ್ರಾರ್ಥನೆ ಆಯೋಜಿಸಲಾಗಿತ್ತು. ಈ ಸಂದರ್ಭ ಮೇರಿ ಮಾತೆ ದೇವಾಲಯದ ವ್ಯಾಪ್ತಿಯ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಹಬ್ಬವನ್ನು ಆಚರಿಸಿದರು. ವರದಿ : ದುಗ್ಗಳ ಸದಾನಂದ
ನಾಪೋಕ್ಲು ಸೆ.11 : ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಹಲವಾರು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪ್ರಾಥಮಿಕ ವಿಭಾಗದಲ್ಲಿ ಬಾಲಕರ ಫುಟ್ಬಾಲ್ ಪ್ರಥಮ, ಬಾಲಕಿಯರು ವಾಲಿಬಾಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಟಲ್ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ. ಚೆಸ್ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ , 400 ಮೀಟರ್ ರಿಲೇ ವಿಭಾಗದಲ್ಲಿ ಬಾಲಕಿಯರು ಪ್ರಥಮ, ತ್ರಿವಿಧ ಜಿಗಿತ ಪ್ರಥಮ ಸ್ಥಾನ, ಗುಂಡು ಎಸೆತ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತ ವಿದ್ಯಾರ್ಥಿಗಳಿಗೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬದoಜೆಟ್ಟಿರ ಗಪ್ಪಣ್ಣ ಅವರ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಕಿರಣ್ ಮತ್ತು ಸುನಿಲ್ ತರಬೇತಿ ನೀಡಿದರು. ವರದಿ : ದುಗ್ಗಳ ಸದಾನಂದ.
ನಾಪೋಕ್ಲು ಸೆ.11 : ಮಕ್ಕಳ ಲಾಲನೆ ಪಾಲನೆ ಜೊತೆಗೆ ಸರ್ವತೋಮುಖ ಅಭಿವೃದ್ಧಿಗೆ ತಾಯಿಯ ಪಾತ್ರ ಅನನ್ಯ ಎಂದು ಬೆಂಗಳೂರು ಜ್ಯೋತಿ ನಿವಾಸ್ ಕಾಲೇಜಿನ ನಿವೃತ್ತಿ ಡೀನ್ ಹಾಗೂ ಉಪ ಪ್ರಾಂಶುಪಾಲರಾದ ಕಾಂಡಂಡ ಉಷಾ ಜೋಯಪ್ಪ ಹೇಳಿದರು. ಮಹಿಳಾ ಸಮಾಜದ ಸಭಾಂಗಣದಲ್ಲಿ ಆಯೋಜಿಸಿದ ನ0.393 ನೇ ನಾಪೋಕ್ಲು ಸಹಕಾರ ಮಹಿಳಾ ಸಮಾಜದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ತಾಯಿ ತನ್ನ ಮಕ್ಕಳನ್ನು ತಿಳಿದಷ್ಟು ಬೇರೆಯವರು ತಿಳಿಯಲು ಸಾಧ್ಯವಿಲ್ಲ ಎಂದರು. ಮಕ್ಕಳನ್ನು ಮೊಬೈಲಿಗೆ ದಾಸರಾಗುವಂತೆ ಪ್ರೇರೇಪಿಸದೆ ಸದ್ಗುಣಗಳನ್ನು ಬೆಳೆಸಬೇಕಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಕನಸನ್ನು ಸಹಕಾರಗೊಳಿಸಿ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿಸಬೇಕೆಂದು ಉಷಾ ಜೋಯಪ್ಪ ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಮಾಜದ ಅಧ್ಯಕ್ಷರಾದ ಕುಂಚೆಟ್ಟಿರ ರೇಷ್ಮಾ ಉತ್ತಪ್ಪ ವಹಿಸಿ ಮಹಿಳಾ ಸಮಾಜದ ಕಾರ್ಯದಕ್ಷತೆಯ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ರೂಪುರೇಷೆಗಳ ಬಗ್ಗೆ ಸಭೆಗೆ ಮಾಹಿತಿಯನ್ನು ನೀಡಿ ಎಲ್ಲರೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿಕೊಂಡರು. ಕಾರ್ಯಕ್ರಮದಲ್ಲಿ…
ಮಡಿಕೇರಿ ಸೆ.11 : ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಾಚರಣೆಗೆ ಪೂರ್ವಭಾವಿಯಾಗಿ ಸಾಂಪ್ರದಾಯದಂತೆ ನಗರದ ಪೇಟೆ ಶ್ರೀರಾಮಮಂದಿರದಲ್ಲಿ ದಸರಾ ಉತ್ಸವ ಸಮಿತಿಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ಸವದ ಸಿದ್ಧತಾ ಕಾರ್ಯಗಳಿಗೆ ಚಾಲನೆ ದೊರಕಿತು. ಮಡಿಕೇರಿ ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ನಗರಸಭೆ ಸದಸ್ಯ ಕೆ.ಎಸ್.ರಮೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಪೇಟೆ ಶ್ರೀರಾಮಮಮಂದಿರದ ಶ್ರೀ ಗಣೇಶನಿಗೆ ಮತ್ತು ಪುರಾತನ ಶ್ರೀರಾಮನ ಪಟಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಉತ್ಸವದ ಯಶಸ್ಸಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಮಾಜಿ ಪದಾಧಿಕಾರಿ ಹಾಗೂ ಈ ಸಂದರ್ಭ ಹಾಜರಿದ್ದರು.
ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೃಷ್ಟ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಂದ ರಾಧಾ ಕೃಷ್ಣರ ಛದ್ಮವೇಷ ಸ್ಪರ್ಧೆ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಯಶೋಧ, ಎಸ್ಡಿಎಂಸಿ ಅಧ್ಯಕ್ಷ ದಿನೇಶ್ ಸಹಶಿಕ್ಷಕಿಯರು ಇದ್ದರು.
ಸೋಮವಾರಪೇಟೆ ಸೆ.10 : ಪೊಲೀಸ್ ಇಲಾಖೆ ವತಿಯಿಂದ ಶ್ರೀ ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನೆಯ ಅಂಗವಾಗಿ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪೂರ್ವಭಾವಿ ಸಭೆಯನ್ನು ಸಂಜೆ ಸೋಮವಾರಪೇಟೆ ಪತ್ರಿಕಾಭವನ ಸಭಾಂಗಣದಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಡಿವೈಎಸ್ಪಿ ಗಂಗಾಧರಪ್ಪ ಮಾತನಾಡಿ, ಗಣಪತಿ ಆಚರಣ ಸಮಿತಿಯವರು ಸಾರ್ವಜನಿಕರಿಂದ ಒತ್ತಾಯಪೂರ್ವಕವಾಗಿ ಹಾಗೂ ರಸ್ತೆಗಳಲ್ಲಿ ವಾಹನಗಳನ್ನು ತಡೆದು ಚಂದಾ ವಸೂಲಿ ಮಾಡಬಾರದು. ಅಂತಹ ದೂರುಗಳು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಮೊದಲು ಸೆಸ್ಕ್, ಅಗ್ನಿ ಶಾಮಕ ಇಲಾಖೆಯವರಿಂದ ಅನುಮತಿ ಪಡೆಯಬೇಕು. ಸಾರ್ವಜನಿಕ ರಸ್ತೆಯಲ್ಲಿ ವಾಹನ ಮತ್ತು ಜನರು ಓಡಾಟಕ್ಕೆ ಅಡ್ಡಿಯಾಗುವ ರೀತಿಯಲ್ಲಿ ಪ್ರತಿಷ್ಠಾಪನೆ ಮಾಡಬಾರದು ಎಂದು ಹೇಳಿದರು. ಖಾಸಗಿ ಮನೆ, ಅಂಗಡಿ, ದೇವಸ್ಥಾನ ಅಥವಾ ನೇರ ವಿದ್ಯುತ್ ಲೈನ್ ಮತ್ತು ಇನ್ನಾವುದೇ ರೀತಿ ಅನಧಿಕೃತ ವಿದ್ಯುತ್ ಸಂಪರ್ಕ ಪಡೆಯಬಾರದು, ಪ್ರತಿ ಗಣೇಶ ಮಂಡಳಿಯ ಪದಾಧಿಕಾರಿಗಳು ಮತ್ತು ಪ್ರತಿನಿಧಿಗಳ ಪಟ್ಟಿಯನ್ನು ವ್ಯಾಪ್ತಿಯ ಪೊಲೀಸ್ ಠಾಣೆಗೆ ಮುಂಚಿತವಾಗಿ ಸಲ್ಲಿಸಬೇಕು. ಸಂಘಟಕರು ಗಣಪತಿ…
ಸೋಮವಾರಪೇಟೆ ಸೆ.10 : ಸೋಮವಾರಪೇಟೆ ಒಕ್ಕಲಿಗ ಸಮುದಾಯಭವನದಲ್ಲಿ ಭಾನುವಾರ ನಡೆದ, ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ ಸಿ.ಕೆ.ಕಾಳಪ್ಪ ಅವರ ಪುತ್ಥಳ್ಳಿ ಅನಾವರಣ ಕಾರ್ಯಕ್ರಮದಲ್ಲಿ, ಸೋಮವಾರಪೇಟೆ ಒಕ್ಕಲಿಗರ ಸಂಘದ ಅಭಿವೃದ್ಧಿ ಕಾಮಗಾರಿಗಳಿಗೆ ಅತೀ ಹೆಚ್ಚು ಅನುದಾನ ಕಲ್ಪಿಸಿದ ಕೊಡಗು-ಮೈಸೂರು ಸಂಸದ ಪ್ರತಾಪ್ಸಿಂಹ ಅವರನ್ನು ಸಂಘದ ಅಧ್ಯಕ್ಷ ಎ.ಆರ್.ಮುತ್ತಣ್ಣ ಹಾಗು ಮಡಿಕೇರಿ ಶಾಸಕ ಡಾ.ಮಂತರ್ಗೌಡ ಅವರುಗಳು ಸನ್ಮಾನಿಸಿದರು. ಸಂಘದ ಉಪಾಧ್ಯಕ್ಷ ಸಿ.ಕೆ.ರಾಘವ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಇದ್ದರು.






