ಲೇಖಕ: admin

ಮಡಿಕೇರಿ ಆ.15 :  ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣಗೊಂಡಿರುವ ಜಿಲ್ಲೆಯ 75 ಅಮೃತ ಸರೋವರ ದಂಡೆಯ ಮೇಲೆಯೂ ತಿರಂಗಾ ರಾರಾಜಿಸಿತು. ಇದರೊಂದಿಗೆ ಜಲ ಸಂರಕ್ಷಣೆಯ ಸಂದೇಶವನ್ನು ಸಾರುವುದರ ಜೊತೆಗೆ ಅನೇಕ ಚಟುವಟಿಕೆಗಳು ಅಮೃತ ಸರೋವರ ದಂಡೆಯ ಮೇಲೆ ಜರುಗಿತು. ವಿವಿಧ ಸ್ಫರ್ಧೆಗಳು:ಅಮೃತ ಮಹೋತ್ಸವದ ಸಂಭ್ರಮದ ಹಿನ್ನೆಲೆ ಗ್ರಾ.ಪಂ. ಮಕ್ಕಳಿಗೆ ಪರಿಸರ ಹಾಗೂ ನೀರಿನ ಸಂರಕ್ಷಣೆಯ ಕುರಿತು ಚಿತ್ರ ಕಲಾ ಸ್ಪರ್ಧೆ, ಓಟದ ಸ್ಫರ್ಧೆ, ಹಗ್ಗ-ಜಗ್ಗಾಟ ಸೇರಿದಂತೆ ಮುಂತಾದ ಗ್ರಾಮೀಣ ಸ್ಫರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಶಿಲಾಫಲಕಗಳ ಅನಾವರಣ: ಈ ಬಾರಿಯ ಸ್ವಾತಂತ್ರ್ಯೋತ್ಸವದಲ್ಲಿ ಸ್ವಾತಂತ್ರ್ಯಕ್ಕಾಗಿ ಮತ್ತು ದೇಶ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಿ ಶಿಲಾಫಲಕವನ್ನು ನಿರ್ಮಿಸಿ ವೀರರಿಗೆ ಗೌರವ ಅರ್ಪಿಸಲಾಗಿದೆ. ಜಿಲ್ಲೆಯ 103 ಗ್ರಾ.ಪಂ.ಗಳಲ್ಲಿಯೂ ಶಿಲಾಫಲಕವನ್ನು ಅಳವಡಿಸಿ ವೀರರನ್ನು ಗೌರವಿಸಲಾಗಿದೆ. ಅಮೃತ ಸರೋವರವನ್ನು ಒಳಗೊಂಡಿರುವ ಗ್ರಾ.ಪಂ.ಗಳಲ್ಲಿ ಸರೋವರದ ದಂಡೆಯ ಮೇಲೆ ಮತ್ತು ಉಳಿದ ಗ್ರಾಮಪಂಚಾಯಿತಿಗಳಲ್ಲಿ ಗ್ರಾ.ಪಂ. ಕಟ್ಟಡ ಅಥವಾ ಶಾಲಾ ಕಟ್ಟಡದಲ್ಲಿ ಶಿಲಾ ಫಲಕವನ್ನು ನಿರ್ಮಿಸಿ ಅನಾವರಣಗೊಳಿಸಲಾಗಿದೆ. ನಿವೃತ್ತ ಸೇನಾನಿಗಳಿಗೆ…

Read More

ಮಡಿಕೇರಿ ಆ.15 :  ದೇಶದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ನಾವು ನಮ್ಮ ಕರ್ತವ್ಯವನ್ನು ನಿಷ್ಠಯಿಂದ ನಿರ್ವಹಿಸಬೇಕು ಎಂದು ಕೊಡಗು ಜಿಲ್ಲಾ ಪಂಚಾಯತ್ ನ ಯ ಮುಖ್ಯ ಕಾರ್ಯನಿರ್ವಹಾಕ ಅಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು. ನಗರದ ಕೊಡಗು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಮೇರಿ ಮಾಟಿ ಮೇರಾ ದೇಶ ಅಭಿಯಾನದ ಅಂಗವಾಗಿ ಜಿಲ್ಲೆಯ 103 ಗ್ರಾ.ಪಂ.ಗಳಲ್ಲಿಯೂ ಕಳೆದ ಒಂದು ವಾರದಿಂದ ವಿನೂತನ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗಿದೆ, ಸ್ವಾತಂತ್ರ್ಯಕ್ಕಾಗಿ ಮತ್ತು ದೇಶ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರರನ್ನು ಸ್ಮರಿಸಿ ಶಿಲಾಫಲಕವನ್ನು ನಿರ್ಮಿಸಲಾಗಿದೆ ಎಂದು  ತಿಳಿಸಿದರು. 103 ಗ್ರಾ.ಪಂ.ಗಳಲ್ಲಿ ಆಚರಣೆ: ಸರ್ಕಾರದ ನಿರ್ದೇಶನದಂತೆ ಮೇರಿ ಮಾಟಿ ಮೇರಾ ದೇಶ್ ಅಭಿಯಾನದ ಅಂಗವಾಗಿ ಜಿಲ್ಲೆಯ 103 ಗ್ರಾ.ಪಂ.ಗಳಲ್ಲಿಯೂ 77 ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸ್ವಾತಂತ್ರ್ಯದ ಅಮೃತ ಕಾಲದ ಹಿನ್ನೆಲೆ 75 ಗಿಡಗಳನ್ನು ನೆಡುವ ಮೂಲಕ ಅಮೃತ ವಾಟಿಕ, ಪಂಚಪ್ರಾಣ ಪ್ರತಿಜ್ಞೆ, ಸ್ವಚ್ಛತಾ ಪ್ರತಿಜ್ಞೆಗಳನ್ನು…

Read More

ಮಡಿಕೇರಿ ಆ.15 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ವಿದ್ಯಾ ಸಂಘದ ಆವರಣದಲ್ಲಿ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ ಅವರು ಧ್ವಜಾರೋಹಣ ನೆರವೇರಿಸಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಯರನ್ನು ಸ್ಮರಿಸಿದ ಅವರು ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಪಣ ತೊಡಬೇಕೆಂದು ಕರೆ ನೀಡಿದರು. ಗೌಡ ವಿದ್ಯಾ ಸಂಘದ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ, ಸಂಘದ ನಿರ್ದೇಶಕರುಗಳು ಹಾಗೂ ಗೌಡ ಬಾಂಧವರು ಹಾಜರಿದ್ದು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

Read More

ಮಡಿಕೇರಿ ಆ.15 : ನಗರದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ 77ನೇ ಸ್ವಾತಂತ್ರ್ಯೋತ್ಸವವನ್ನು ಅರ್ತಪೂರ್ಣವಾಗಿ ಆಚರಿಸಲಾಯಿತು. ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್.ಸೋಮಣ್ಣ ಧ್ವಜಾರೋಹಣ ನೆರವೇರಿಸಿದರು. ಒಕ್ಕೂಟದ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಕುಶಾಲಪ್ಪ, ವ್ಯವಸ್ಥಾಪಕ ಮತ್ತಾರಿ ರಮೇಶ, ಪ್ರಮುಖರಾದ ಕುಂಬುಗೌಡನ ವಿನೋದ್ ಕುಮಾರ್, ಪುದಿಯನೆರವನ ರೇವತಿ ರಮೇಶ್, ಪುದಿಯನೆರವನ ರಿಶಿತ್ ಮಾದಯ್ಯ ಮತ್ತಿತರರು ಹಾಜರಿದ್ದು ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

Read More

ಮಡಿಕೇರಿ ಆ.15 :  ಅರೆಕಾಡು ಗ್ರಾಮ ವ್ಯಾಪ್ತಿಯಲ್ಲಿ ನಿರಂತರ ಉಪಟಳ ನೀಡುತ್ತಾ ವ್ಯಕ್ತಿಯೊಬ್ಬರ ಜೀವಹಾನಿಗೆ ಕಾರಣವಾಗಿದ್ದ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಅರೆಕಾಡು ಗ್ರಾಮದ ಮದರ ಕುಪ್ಪೆ ಎನ್ನುವ ಸ್ಥಳದಲ್ಲಿ ಪತ್ತೆಯಾದ ಸುಮಾರು 16 ವರ್ಷದ ಒಂಟಿ ಸಲಗವನ್ನು ಅರಿವಳಿಕೆ ನೀಡುವ ಮೂಲಕ ಸೆರೆ ಹಿಡಿದು, ಲಾರಿ ಮೂಲಕ ದುಬಾರೆ ಸಾಕಾನೆ ಶಿಬಿರಕ್ಕೆ ಸಾಗಿಸಲಾಯಿತು. ಮತ್ತಿಗೋಡು ಸಾಕಾನೆ ಶಿಬಿರದ ಸಾಕಾನೆಗಳಾದ ಅಭಿಮನ್ಯು, ಭೀಮ, ದುಬಾರೆ ಸಾಕಾನೆ ಶಿಬಿರದ ಸುಗ್ರೀವ ಹಾಗೂ ಹರ್ಷನನ್ನು ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿತ್ತು. ಅರಣ್ಯ ಅಧಿಕಾರಿಗಳಾದ ಕೂಡಕಂಡಿ ಸುಬ್ರಾಯ, ಗೋಪಾಲ, ಪೂವಯ್ಯ, ಬಾಷ, ಹನುಮಂತರಾಜು ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಕೆಲವು ದಿನಗಳ ಹಿಂದೆ ಅರೆಕಾಡು ಗ್ರಾಮ ವ್ಯಾಪ್ತಿಯಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದ ದೇವಪ್ಪ ಎಂಬವವರು ಕಾಡಾನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದರು. ಕಾಡಾನೆ ಹಾವಳಿ ತಡೆಗೆ ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಂಡಿಲ್ಲವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಕಳೆದ ಎರಡು ದಿನಗಳಿಂದ…

Read More

ಮಡಿಕೇರಿ ಆ.15 : ಕಾಟಕೇರಿಯ ಕೂರನಬಾಣೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನಿವೃತ್ತ ಸೈನಿಕ ತಳೂರು ಕಾಳಪ್ಪ ಧ್ವಜಾರೋಹಣ ನೆರವೇರಿ ದಿನದ ಮಹತ್ವ ತಿಳಿಸಿದರು. ಸ್ವಾತಂತ್ರ್ಯೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಬೇಕು, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಮಹನೀಯರನ್ನು ಪ್ರತಿನಿತ್ಯ ಸ್ಮರಿಸುವಂತಾಗಬೇಕು. ಅವರ ಆದರ್ಶಗಳನ್ನು ಪಾಲಿಸಬೇಕೆಂದು ಕರೆ ನೀಡಿದರು. ಮದೆ ಗ್ರಾ.ಪಂ ಮಾಜಿ ಅಧ್ಯಕ್ಷೆ ಬಿ.ಸಿ.ಗಿರಿಜಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರತೀ ವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಹೇಳಿದರು. ಈ ಸಂದರ್ಭ ಮದೆ ಗ್ರಾ.ಪಂ ಸದಸ್ಯೆ ಪಿ.ಎ.ಚಂದ್ರಾವತಿ, ಅಂಗನವಾಡಿ ಕಾರ್ಯಕರ್ತೆ ನಳಿನಿ ಹಾಗೂ ಶ್ರೀದೇವಿ, ಶ್ರೀ ಲಕ್ಷ್ಮಿ ಸ್ವಸಾಹ ಸಂಘದ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು, ಪುಟಾಣಿ ಮಕ್ಕಳು ಹಾಜರಿದ್ದರು.

Read More

ಮಡಿಕೇರಿ ಆ.15 : ಮಡಿಕೇರಿಯ ಇಂದಿರಾನಗರದ ಜ್ಯೋತಿ ಯುವಕ ಸಂಘದ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಸಂಘದ ಸಭಾಂಗಣದಲ್ಲಿ ಊರಿನ ಹಿರಿಯರಾದ ಸಾಜೀದ ಧ್ವಜರೋಹಣ ನೆರವೇರಿಸಿದರು. ನಂತರ ಮಾತನಾಡಿದ ಅವರು, ಭಾರತ ದೇಶದ ಮಹಾನ್ ನಾಯಕರ ಅರಿವು ಮೂಡಿಸುವ ಮೂಲಕ ಪೋಷಕರು ಮಕ್ಕಳಿಗೆ ರಾಷ್ಟ್ರ ಪ್ರೇಮ ಮೂಡಿಸಬೇಕು ಎಂದರು. ನಂತರ ಸ್ವಾತಂತ್ರ್ಯ ದಿನದ ಪ್ರಯುಕ್ತ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸತೀಶ್, ಮಾಜಿ ಅಧ್ಯಕ್ಷ ಜಯಕುಮಾರ್, ಸೋಮಶೇಖರ್, ಮನೋಜ್, ಅನೀಸ್, ಉಪಾಧ್ಯಕ್ಷ ದೀಪಕ್ ಹಾಗೂ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಮಕ್ಕಳು ಹಾಜರಿದ್ದರು.  

Read More

ಮಡಿಕೇರಿ ಆ.15 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಮಿಕ ಘಟಕದ ವತಿಯಿಂದ ನಗರದ ಡೈರಿಫಾರಂ ಅಂಗನವಾಡಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಕೆ.ಆರ್.ದಿನೇಶ್ ಹಾಗೂ ಉಪಾಧ್ಯಕ್ಷ ಶಶಿ ಅವರುಗಳು ಧ್ವಜಾರೋಹಣ ನೆರವೇರಿಸಿದರು. ನಂತರ ಮಾತನಾಡಿದ ಕೆ.ಆರ್.ದಿನೇಶ್, ವಿದ್ಯಾರ್ಥಿಗಳಲ್ಲಿ ಮಹಾತ್ಮಗಾಂಧಿ, ಸುಭಾಷ್ ಚಂದ್ರ ಬೋಸ್ ಅವರಂತಹ ಮಹಾತ್ಮರ ಬಗ್ಗೆ ಅರಿವು ಮೂಡಿಸಬೇಕು. ಆ ಮೂಲಕ ದೇಶಪ್ರೇಮ ಬೆಳೆಸಬೇಕು ಎಂದು ಕರೆ ನೀಡಿದರು. ಈ ಸಂದರ್ಭ ಘಟಕದ ಜಿಲ್ಲಾ ಉಪಾಧ್ಯಕ್ಷ ಕವನ್ ಕೊತ್ತೋಳಿ, ಪ್ರಧಾನ ಕಾರ್ಯದರ್ಶಿ ಕೆ.ಶರಣ್, ಕಾರ್ಯದರ್ಶಿ ಅರ್ಜುನ್, ನಗರಾಧ್ಯಕ್ಷ ನಿರಂಜನ್, ಉಪಾಧ್ಯಕ್ಷ ಫಯಾಜ್, ಸದಸ್ಯರಾದ ಪ್ರೇಮ, ಉದಯ ಚಂದ್ರಿಕ, ಅನು, ಬೇಬಿ, ವೀರನಾಡು ರಕ್ಷಣಾ ವೇದಿಕೆಯ ಅಧ್ಯಕ್ಷ ಹರೀಶ್ ಆಚಾರ್ಯ, ಅಗ್ನಿ ಶಾಮಕ ದಳದ ಠಾಣಾಧಿಕಾರಿ ನಾಗರಾಜು, ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆ ನಾಗರತ್ನ, ಸಹಾಯಕಿ ಚಂದನ, ಪುಟಾಣಿಗಳು, ಪೋಷಕರು ಸೇರಿದಂತೆ ಸ್ಥಳೀಯ ನಿವಾಸಿಗಳು ಹಾಜರಿದ್ದು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

Read More

ಮಡಿಕೇರಿ ಆ.15 : ದಾರುಲ್ ಹುದಾ ಅರಬ್ಬಿ ಮದ್ರಸದಲ್ಲಿ 77ನೇ ಸ್ವಾತಂತ್ರ್ಯ ದಿನಾಚಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಅಧ್ಯಾಪಕರಾದ ಮಹಮೂದ್ ಸಅದಿ ವಿಶೇಷ ಪ್ರಾರ್ಥನೆ ಮಾಡಿ, ಧ್ವಜಾರೋಹಣ ನೆರವೇರಿಸಿದರು. ಪ್ರಾಸ್ತಾವಿಕ ಮಾತನಾಡಿದ ದಾರುಲ್ ಹುದಾ ಅರಬ್ಬಿ ಮದ್ರಸ ಸಮಿತಿಯ ಅಧ್ಯಕ್ಷ ಎಂ.ಎಂ.ಯಾಕುಬ್ ಭಾರತ ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿವರಿಸಿದರು. ಭಾರತೀಯ ಸ್ವಾತಂತ್ರ್ಯ ಚಳುವಳಿಯು ಐತಿಹಾಸಿಕ ಘಟನೆಗಳ ಸರಣಿಯಾಗಿದ್ದು, 1857 ರಿಂದ 1947 ರವರೆಗೆ ಸ್ವಾತಂತ್ರ್ಯ ಹೋರಾಟ ನಡೆಯಿತು. 1918 ರಿಂದ 1922 ಗಡುವಿನ ಅವಧಿಯಲ್ಲಿ ಮೋಹನದಾಸ ಗಾಂಧಿಯವರ ನೇತೃತ್ವದಲ್ಲಿ ಅಹಿಂಸಾತ್ಮಕವಾದ ಅಸಹಕಾರ ಚಳುವಳಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪ್ರಾರಂಭಿಸಿದೊಡನೆ ಸ್ವತಂತ್ರ್ಯ ಸಂಗ್ರಾಮಕ್ಕೆ ಮಹತ್ವದ ದಿಕ್ಕು ದೊರೆಯಿತು. ಗಾಂಧಿಜೀ ಅವರ ನೇತೃತ್ವದಲ್ಲಿ ಅಸಹಾರ ಚಳುವಳಿ, ಉಪ್ಪಿನ ಸತ್ಯಾಗ್ರಹ, ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಚಳವಳಿಯ ಮೂಲಕ ಭಾರತದ ಪ್ರಜೆಗಳು ಒಗ್ಗೂಡಿ ಹೋರಾಟ ನಡೆಸಿದ ದಿನಗಳನ್ನು ನೆನಪಿಸಿ ಎಲ್ಲಾ ಹೋರಾಟಗಾರರಿಗೂ ಗೌರವ ಸಲ್ಲಿಸಿದರು. ಈ ಸಂದರ್ಭ ಗೌರವಾಧ್ಯಕ್ಷ ಎಂ.ಡಿ.ಸಲೀಂ, ಕಾರ್ಯದರ್ಶಿ ಮೊಹಮ್ಮದ್ ಗೌಸ್, ಯುವ…

Read More

ಮಡಿಕೇರಿ ಆ.15 : ಪ್ರಸ್ತುತ ಪರಿಸ್ಥಿತಿಯಲ್ಲಿ ನೆರೆಯ ರಾಜ್ಯ ತಮಿಳುನಾಡಿನ ಬೇಡಿಕೆಯಂತೆ ಕಾವೇರಿ ನದಿ ನೀರನ್ನು ಹರಿಸಲು ಸಾಧ್ಯವಿಲ್ಲ. ಮೊದಲು ನಮಗೆ ನಮ್ಮ ರಾಜ್ಯದ ರೈತರ ಹಿತ ಮುಖ್ಯವೆಂದು ಸಣ್ಣ ನೀರಾವರಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ತಿಳಿಸಿದ್ದಾರೆ. ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡು ರಾಜ್ಯ ಸರ್ಕಾರ, ಬೆಳೆಗಳ ರಕ್ಷಣೆಗಾಗಿ ನಿತ್ಯ 24 ಸಾವಿರ ಕ್ಯೂಸೆಕ್ ಕಾವೇರಿ ನದಿ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದೆ, ಆದರೆ ಇದು ಸಾಧ್ಯವಾಗಲಾರದೆಂದು ಹೇಳಿದರು. ಈಗಾಗಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ರೈತರ ಹಿತ ಬಲಿಕೊಡಲು ಸಾಧ್ಯವಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿದ್ದಾರೆ. ನೆರೆಯ ರಾಜ್ಯಕ್ಕೆ ನೀರು ಬಿಡುವ ಅಂಶ ಪ್ರಕೃತಿಯ ಮೇಲೆ ಅವಲಂಬಿತವಾಗಿದೆ. ಈ ಬಗ್ಗೆ ಈಗಾಗಲೇ ಐಸಿಸಿ ಸಭೆ ನಡೆಸಲಾಗಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ನಾಲೆಗಳಿಗೆ ನೀರು ಯಾವಾಗ ಬಿಡಬೇಕೆಂದು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

Read More