ಲೇಖಕ: admin

ಸೋಮವಾರಪೇಟೆ ಸೆ.10 : ಸೋಮವಾರಪೇಟೆ ತಾಲ್ಲೂಕು ಒಕ್ಕಲಿಗರ ಸಂಘದ ಸ್ಥಾಪಕ ಅಧ್ಯಕ್ಷ, ಜಾಗ ದಾನಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಕೆ.ಕಾಳಪ್ಪ ಅವರ ಪುತ್ಥಳಿಯನ್ನು ಅವರ ಪುತ್ರ ಸಿ.ಕೆ.ರಾಘವ ಹಾಗೂ ಕುಟುಂಬಸ್ಥರು ಭಾನುವಾರ ಅನಾವರಣ ಮಾಡಿದರು. ತಾಲ್ಲೂಕು ಒಕ್ಕಲಿಗರ ಸಂಘದ ವತಿಯಿಂದ ಒಕ್ಕಲಿಗರ ಸಮುದಾಯಭವನದ ಪ್ರವೇಶ ದ್ವಾರದಲ್ಲಿ ಪುತ್ಥಳಿ ನಿರ್ಮಾಣ ಮಾಡಲಾಗಿದೆ. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಕಾಳಪ್ಪ ಅವರ ಕುಟುಂಬಸ್ಥರಾದ ಸುದೈವ, ರಾಗಿಣಿ, ಪದ್ಮಿನಿ, ಸವಿತಾ, ಕಿರಣ್ ಕುಶಾಲಪ್ಪ, ಲಲಿತ, ಮೇನಕ, ಅನ್ನಪೂರ್ಣ ಅವರುಗಳನ್ನು ಸನ್ಮಾನಿಸಲಾಯಿತು. ಸಂಘದ ತಾಲ್ಲೂಕು ಅಧ್ಯಕ್ಷ ಎ.ಆರ್.ಮುತ್ತಣ್ಣ ಮಾತನಾಡಿ, ಸಿ.ಕೆ.ಕಾಳಪ್ಪ ಅವರ ಸತತ ಪರಿಶ್ರಮದಿಂದ ತಾಲ್ಲೂಕು ಒಕ್ಕಲಿಗರ ಸಂಘ ಸ್ಥಾಪನೆಯಾಗಿದೆ. 1968ರಿಂದ 1995ರ ವರಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಕೋಟ್ಯಾಂತರ ಮೌಲ್ಯದ ಸ್ವಂತ ಜಾಗವನ್ನು ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ ದಾನವಾಗಿ ನೀಡಿದ್ದಾರೆ. ಅವರ ಕನಸ್ಸಿನಂತೆ ವಿದ್ಯಾಸಂಸ್ಥೆಯನ್ನು ಕಟ್ಟಿದ್ದೇವೆ. ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಹತ್ತನೆ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಕಳೆದ 6ವರ್ಷಗಳಿಂದ ಸತತ ಶೇ.100ರಷ್ಟು ಫಲಿತಾಂಶ…

Read More

ಮಡಿಕೇರಿ ಸೆ.10 : ಸ್ಫೂರ್ತಿ ಕಲಾ ಟೆಸ್ಟ್ ವತಿಯಿಂದ ಕೊಡಗಿನ ಸಮಾಜ ಸೇವಕ ಕರವೇ ಪ್ರಾಸಿಸ್ ಡಿಸೋಜ ಅವರಿಗೆ ಕರುನಾಡ ರತ್ನ ಪ್ರಶಸ್ತಿ ಹಾಗೂ ಸ್ಫೂರ್ತಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಬನಶಂಕರಿ ಜೆಎಸ್ಎಸ್ ಮಹಾವಿದ್ಯಾಪೀಠ ಘನಲಿಂಗ ಶಿವಯೋಗ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. 

Read More

ಮಡಿಕೇರಿ ಸೆ.10 : ಕೊಡಗು ಸೌಹಾರ್ದ ಪತ್ತಿನ ಸಹಕಾರ ಸಂಘದ ಮಹಾಸಭೆಯು ಮಡಿಕೇರಿ ಕೊಡವ ಸಮಾಜದ ಮೇಲಿನ ಕಟ್ಟಡದಲ್ಲಿ ಸಂಘದ ಅಧ್ಯಕ್ಷರಾದ ಮಂಡುವಂಡ ಮುತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆಯತು.    ಸಂಘವು ಅಭಿವೃದ್ಧಿಪಥದತ್ತ ಸಾಗುತ್ತಿದ್ದು, ಪ್ರಸ್ತುತ 2108 ಸದಸ್ಯರಿದ್ದಾರೆ. 89.75 ಲಕ್ಷ ರೂ. ಪಾಲುಹಣ ಹೊಂದಿದ್ದು, ಈ ಬಾರಿ 20 ಲಕ್ಷ ರೂ. ಲಾಭ ಗಳಿಸಿದೆ, ಸದಸ್ಯರಿಗೆ ಶೇ.9ರಷ್ಟು ಡಿವಿಡೆಂಟ್ ನೀಡಲಾಗುವುದು ಎಂದು ಮುತ್ತಪ್ಪ ತಿಳಿಸಿದರು. ಸದಸ್ಯರ ಸಹಕಾರದಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ವಹಿವಾಟು ನಡೆಸುವ ಮೂಲಕ ಅಧಿಕ ಲಾಭದ ನಿರೀಕ್ಷೆಯಲ್ಲಿದ್ದೇವೆ ಎಂದರು. ಹೆಚ್ಚು ಅಂಕ ಪಡೆದ ಸಂಘದ ಸದಸ್ಯರ ಮಕ್ಕಳಾದ ಶಾಂತೆಯಂಡ ಯೋಗ್ ಕುಟ್ಟಪ್ಪ( 10 ನೇ ತರಗತಿ) ಹಾಗೂ ಕೇಕಡ.ಎಂ. ಬೋಪಣ್ಣ (ಪಿಯುಸಿ) ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಉಪಾಧ್ಯಕ್ಷೆ ಯಂ.ಜಿ.ಉಷಾ ವಂದಿಸಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ.ಸಿ.ಸೀಮಾ ನಿರೂಪಿಸಿದರು.    ನಿರ್ದೇಶಕರುಗಳಾದ ಚೋವಂಡ. ಡಿ. ಕಾಳಪ್ಪ, ಆಲೆಮಾಡ ಕೆ. ಕಾರ್ಯಪ್ಪ, ಮಣವಟ್ಟಿರ .ಬಿ.ಮಾಚಯ್ಯ, ನಾಟೋಳಂಡ.ಡಿ.ಚರ್ಮಣ, ಕೊಂಗಂಡ ಎ.ತಿಮ್ಮಯ್ಯ, ಪಟ್ಟಡ ಎ.ಕರುಂಬಯ್ಯ,ಕುಡುವಂಡ ಬಿ.ಉತ್ತಪ್ಪ, ನಂದೇಟಿರ…

Read More

ಮಡಿಕೇರಿ ಸೆ.10 : ದೇಶಾದ್ಯಂತ ಏಕಕಾಲದಲ್ಲಿ ನಡೆಯುವ ಜೆಸಿಐ ಸಪ್ತಾಹ 2023ನೇ ಸಾಲಿನ ಎರಡನೇ  ದಿನದ ಕಾರ್ಯಕ್ರಮದಲ್ಲಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ನೀತ್ ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಮಾಯಮುಡಿ ಸರ್ಕಾರಿ ಶಾಲೆಗೆ ನೀರು ಶುದ್ಧೀಕರಣ ಯಂತ್ರವನ್ನು ಅಳವಡಿಸಲಾಯಿತು, ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಾಯಮುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಎಸ್.ಟಾಟು  ಮೊಣ್ಣಪ್ಪ ಇತ್ತೀಚಿನ ದಿನಗಳಲ್ಲಿ ಶುದ್ಧ ನೀರಿನ ಕೊರತೆಯಿಂದ ಅನಾರೋಗ್ಯ ಹೆಚ್ಚಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ನೀರು ದೊರೆಯಬೇಕು ಎನ್ನುವ ಉದ್ದೇಶದಿಂದ ಶಾಶ್ವತ ಪರಿಹಾರವಾಗಿ ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ವತಿಯಿಂದ ಕುಡಿಯುವ ನೀರಿನ ಯಂತ್ರವನ್ನು ಅಳವಡಿಸಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಘಟಕದ ನಿಕಟ ಪೂರ್ವ ಅಧ್ಯಕ್ಷ ದಿನೇಶ್ ಎ.ಪಿ, ನಿಕಟ ಪೂರ್ವ  ಕಾರ್ಯದರ್ಶಿ ಚೆಟ್ಟೋಳಿರ ಶರತ್‌ ಸೋಮಣ್ಣ, ಸದಸ್ಯರಾದ ತಿಮ್ಮಯ್ಯ, ಶಾಲೆಯ ಮುಖ್ಯ ಉಪಾಧ್ಯಾಯರಾದ ರಾಗಿಣಿ ಡಿ.ಯು, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಉಮೇಶ್ , ಸದಸ್ಯರಾದ ಸಲಾಂ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಗೋಣಿಕೊಪ್ಪ ಸೆ.10 : ಜೆಸಿಐ ಪೊನ್ನಂಪೇಟೆ ನಿಸರ್ಗ ಆಯೋಜನೆಯಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಗ್ರಾ.ಪಂ. ಅಧ್ಯಕ್ಷೆ ಮನ್ನಕಮನೆ ಸೌಮ್ಯ ಬಾಲು ಚಾಲನೆ ನೀಡಿದರು. ಶ್ರೀ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ಜೆಸಿಐ ಸಪ್ತಾಹ 2023ರ ಪ್ರಯುಕ್ತ ರಕ್ತದಾನ ಶಿಭಿರ ಜೆಸಿಐ ಪೊನ್ನಂಪೇಟೆ ನಿಸರ್ಗ ಅಧ್ಯಕ್ಷ ನೀತ್ ಅಯ್ಯಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ರಕ್ತದಾನ ಮಾಡುವುದರಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಮತ್ತೊಬ್ಬರ ಜೀವವನ್ನು ಉಳಿಸಲು ಕಾರಣವಾಗಬಹುದು. ಯುವ ಸಮುದಾಯ ರಕ್ತದಾನ ಮಾಡುವುದರ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು. ಮತ್ತು ಯುವ ಸಮುದಾಯದಕ್ಕೆ ರಕ್ತದಾನ ಮಾಡುವುದರ ಪ್ರೇರಣಾತ್ಮಕವಾದ ಕಾರ್ಯಕ್ರಮಗಳನ್ನು ಸಂಘಟನೆಗಳು ಆಯೋಜಿಸಬೇಕೆಂದು ಗ್ರಾ.ಪಂ. ಅಧ್ಯಕ್ಷ ಸೌಮ್ಯ ಬಾಲು ಸಲಹೆ ನೀಡಿದರು. ಗ್ರಾ.ಪಂ. ಸದಸ್ಯ ಕುಲ್ಲಚಂಡ ಪ್ರಮೋದ್ ಗಣಪತಿ ಮಾತನಾಡಿ ರಕ್ತದಾನ ಮಾಡುವುದರ ಶ್ರೇಷ್ಠತೆಯನ್ನು ಯುವ ಸಮುದಾಯ ಅರಿತುಕೊಳ್ಳುವುದರಲ್ಲಿ ಸೋತಿದೆ. ದುಶ್ಚಟಗಳಿಗೆ ಒಳಗಾಗುತ್ತಿರುವ ಯುವಕರು ರಕ್ತದಾನ ಮಾಡಲು ಹಿಂಜರಿಯುತ್ತಿದ್ದಾರೆ. ಈ ಬಗ್ಗೆ ಮಕ್ಕಳಲ್ಲಿ ರಕ್ತದಾನದ ಶ್ರೇಷ್ಠತೆಯ ಬಗ್ಗೆ ತಿಳಿಸಿಕೊಡುವ ಅಗತ್ಯವಿದೆ. ಯಾವುದೇ ಹಿಂಜರಿಕೆಯಿಲ್ಲದೇ ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ…

Read More

ಮಡಿಕೇರಿ ಸೆ.10 : ಕೆಎಸ್‌ಆರ್‌ಟಿಸಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಗರದ ಮೈಸೂರು ರಸ್ತೆಯ ಚೈನ್ ಗೇಟ್ ಬಳಿ ನಡೆದಿದೆ. ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಚಾಲಕ ಹಾಗೂ ಜೊತೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಸ್ಥಳಕ್ಕೆ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಡಿಕೇರಿ ಸೆ.10 : ಮೈಸೂರಿನ ಜಗನ್ ಮೋಹನ ಪ್ಯಾಲೇಸ್‌ನಲ್ಲಿ ನಡೆದ ರಾಜ್ಯ ಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ತಂಡ ದ್ವಿತೀಯ ಸ್ಥಾನ ಗಳಿಸಿದೆ. ಡಿವೈನ್ ಡ್ಯಾನ್ಸ್ ಅಕಾಡೆಮಿ ಪುನೀತ್ ರಾಜಕುಮಾರ್ ಸ್ಮರಣಾರ್ಥ ನಡೆಸಿದ ಸ್ಪರ್ಧೆ ಹಾಗೂ ಮಂಜುಶ್ರೀ ಸ್ಟೆಪ್ಸ್ ನಡೆಸಿದ ಎರಡೂ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಕಿಂಗ್ಸ್ ಆಫ್ ಕೂರ್ಗ್ ತಂಡ ಸಬ್ ಜೂನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ. ನೃತ್ಯ ಸಂಸ್ಥೆಯ ತರಬೇತುದಾರರಾದ ಮಹೇಶ್ ಹಾಗೂ ಕಿರಣ್ ಅವರುಗಳ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಕನ್ನಿಕೆ, ಮೊಶಿಕಾ, ಯಶಿಕಾ, ಶ್ರೇಯ, ರಿಯಾಂಕ, ಒಸಿನ್, ಪ್ರಜ್ವಲ್, ಮುತ್ತಮ್ಮ, ಸೋನಾಕ್ಷಿ, ಶ್ರೀರಕ್ಷಾ, ಯಾದ್ವಿತಾ, ಕಿಶನ್, ದೀಪಿಕ್ಷಾ, ವಿಸ್ಮಯ, ಪ್ರೇಕ್ಷಿತಾ, ನಿರನ್ ಹಾಗೂ ಇಶಾಂತ್ ನೃತ್ಯ ಪ್ರದರ್ಶನ ಮಾಡಿದರು.

Read More

ಮಡಿಕೇರಿ ಸೆ.10 : ಹೈದರಾಬಾದ್ ನ ಜ್ವಾಲಾಗುಟ್ಟ ಕ್ರೀಡಾಂಗಣದಲ್ಲಿ ಸೆ.14 ರಿಂದ 19 ರವರೆಗೆ ನಡೆಯುವ 35 ನೇ ಜೂನಿಯರ್ ರಾಷ್ಟ್ರೀಯ ಬಾಡ್ಮಿಂಟನ್ ಪಂದ್ಯಾವಳಿಗೆ ಕೊಡಗಿನ ಬೊಪ್ಪಂಡ ದಿಯಾ ಭೀಮಯ್ಯ ಆಯ್ಕೆಯಾಗಿದ್ದಾರೆ. 17 ವರ್ಷದೊಳಗಿನ ಸಿಂಗಲ್ಸ್ ಮತ್ತು ಡಬಲ್ಸ್ ನಲ್ಲಿ ದಿಯಾ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಮಡಿಕೇರಿ ನಗರದ ದೇಚೂರಿನ ಬೊಪ್ಪಂಡ ಕುಸುಮ ಹಾಗೂ ಭೀಮಯ್ಯ ಅವರ ಪುತ್ರಿಯಾಗಿರುವ ಈಕೆ ಮೈಸೂರಿನ ಪ್ರಗತಿ ಎಲೈಟ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ. ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಹಾಗೂ ಬಿ.ಪಿ.ಭೀಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದಾರೆ.

Read More

ಮಡಿಕೇರಿ ಸೆ.10 : ಅರಪಟ್ಟುವಿನ ಪಾಂಡಂಡ ಐನ್ ಮನೆಯಲ್ಲಿ ಕೈಲ್ ಪೊಳ್ದ್ ಸಂಭ್ರಮದಿಂದ ನಡೆಯಿತು. ಕೊಡವ ಸಾಂಪ್ರದಾಯಿಕ ಆಯುಧಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ, ಮಕ್ಕಳಿಗೆ ಬಲೂನ್ ಹೊಡೆಯುವ ಸ್ಪರ್ಧೆ ಸೇರಿದಂತೆ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪಾಂಡಂಡ ಕುಟುಂಬದ ಪಟ್ಟೆದಾರ ಪಾಂಡಂಡ ಮೊಣ್ಣಪ್ಪ, ಅಧ್ಯಕ್ಷ ಪಾಂಡಂಡ ಉಮೇಶ್ ಚಂಗಪ್ಪ, ಕುಟುಂಬದ ಹಿರಿಯರಾದ ಪಾಂಡಂಡ ಕಿಟ್ಟು ಅಯ್ಯಣ್ಣ ಮಾತನಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪಾಂಡಂಡ ವಿನಿತಾ ಚಂಗಪ್ಪ ರವರು ನಿರೂಪಿಸಿದರು. ಪಾಂಡಂಡ ಕುಟುಂಬದ ಸದಸ್ಯರೆಲ್ಲರು ಉಪಸ್ಥಿತರಿದ್ದರು.

Read More

ಸುಂಟಿಕೊಪ್ಪ ಸೆ.10 : ಗೌರಿ ಗಣೇಶ ಹಬ್ಬದ ಹಿನ್ನೆಲೆ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವ ಉತ್ಸವ ಸಮಿತಿಗಳು ಕಡ್ಡಾಯವಾಗಿ ಮಾರ್ಗಸೂಚಿಗಳನ್ನು ಪಾಲಿಸಬೇಕು. ನಿಯಮ ಮೀರಿದರೆ ಮತ್ತು ಅನಾಹುತ ಸಂಭವಿಸಿದರೆ ಸಂಬಂಧಿಸಿದ ಆಯೋಜಕರೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಕುಶಾಲನಗರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್ ಎಚ್ಚರಿಕೆ ನೀಡಿದ್ದಾರೆ. ಸುಂಟಿಕೊಪ್ಪದ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆದ ಸುಂಟಿಕೊಪ್ಪ ಹೋಬಳಿ ವ್ಯಾಪ್ತಿಯ ಶ್ರೀಗೌರಿ ಗಣೇಶ ಆಚರಣಾ ಸಮಿತಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಸಂಪ್ರದಾಯ ಆಚರಣೆಯೊಂದಿಗೆ ಮಾರ್ಗಸೂಚಿಗಳನ್ನು ಪಾಲಿಸುವುದು ಕೂಡ ಮುಖ್ಯ ಎಂದರು. ಉತ್ಸವ ಸಮಿತಿಗಳು ಪೊಲೀಸ್ ಠಾಣೆ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಂಡಿರಬೇಕು. ಮುಂಜಾಗೃತಾ ಕ್ರಮವಾಗಿ ಮತ್ತು ಕಿಡಿಗೇಡಿಗಳ ಬಗ್ಗೆ ಎಚ್ಚರದಿಂದಿರಲು ಶ್ರೀಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳದಲ್ಲಿ ಸಿಸಿ ಕ್ಯಾಮರ ಅಳವಡಿಸಬೇಕು. ವಿದ್ಯುತ್ ಅಳವಡಿಸುವಾಗ ಸೂಕ್ಷ್ಮತೆ ಗಮನಿಸಿ ಎಚ್ಚರ ವಹಿಸಬೇಕು. ಸಮಿತಿಯ ಇಬ್ಬರು ಪದಾಧಿಕಾರಿಗಳನ್ನು ಕಾವಲಿಗೆ ಇರಿಸಬೇಕು. ಸ್ಥಳದ ಪೂರ್ವಾಪರ ಮಾಹಿತಿ ಪಡೆದಿರಬೇಕು, ಮೂರ್ತಿ ವಿಸರ್ಜನೆಯ ವೇಳೆ…

Read More