ಮಡಿಕೇರಿ ಆ.15 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಮಡಿಕೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಅಬ್ದುಲ್ ಅಡ್ಕರ್ ಧ್ವಜಾರೋಹಣ ನೆರವೇರಿಸಿ ದಿನದ ಮಹತ್ವದ ಕುರಿತು ತಿಳಿಸಿದರು. ಮಡಿಕೇರಿ ಮಕ್ಕಾ ಮಸೀದಿ ಇಮಾಮರಾದ ಮೌಲಾನ ಅಬ್ದುಲ್ ಹಕ್ಕೀಂ, ಎಸ್ಡಿಪಿಐ ನಗರಾಧ್ಯಕ್ಷ ರಿಜ್ವಾನ್, ನಗರಸಭಾ ಸದಸ್ಯರಾದ ಅಮಿನ್ ಮೊಹಿಸಿನ್, ಮನ್ಸೂರ್, ಬಶೀರ್, ಮೇರಿ, ನೀಮ ಅರ್ಷದ್, ಜಿಲ್ಲಾ ಸಮಿತಿ ಮತ್ತು ನಗರ ಸಮಿತಿಯ ಮುಖಂಡರು ಪಾಲ್ಗೊಂಡಿದ್ದರು.
ಲೇಖಕ: admin
ಮಡಿಕೇರಿ ಆ.15 : ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಭೂಮಿ, ವಸತಿ ಹಾಗೂ ನಿವೇಶನ ವಂಚಿತರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬರಿಹೊಟ್ಟೆ ಸತ್ಯಾಗ್ರಹ ನಡೆಸಿದರು. ಆ.14 ಮತ್ತು 15 ರಂದು ಧರಣಿ ನಡೆಸಲು ಉದ್ದೇಶಿಸಲಾಗಿತ್ತಾದರು ಸೋಮವಾರ ಸಂಜೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೋರಾಟ ಸಮಿತಿಯ ಪ್ರಮುಖರನ್ನು ಕರೆಯಿಸಿಕೊಂಡು ಬೇಡಿಕೆಗಳ ಕುರಿತು ಚರ್ಚಿಸಿ ಸೂಕ್ತ ಭರವಸೆ ನೀಡಿದ ಹಿನ್ನೆಲೆ ಸತ್ಯಾಗ್ರಹವನ್ನು ಸ್ಥಗಿತಗೊಳಿಸಲಾಯಿತು. ಪ್ರಮುಖ ಹೋರಾಟಗಾರರಾದ ಕುಮಾರ್ ಸಮತಳ, ನೂರ್ ಶ್ರೀದರ್, ರೈತ ಮುಖಂಡ ಬಡಗಲಪುರ ನಾಗೇಂದ್ರ, ವಿಜಯಮ್ಮ, ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯ ಕೊಡಗು ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ಮುಖಂಡರುಗಳಾದ ಡಿ.ಎಸ್.ನಿರ್ವಾಣಪ್ಪ, ಡಿ.ಎಚ್.ಪೂಜಾರ್, ಕರಿಯಪ್ಪ ಗುಡಿಮನಿ ಮತ್ತಿತರರು ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದರು. ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿಗಳು ಆ.20 ರ ನಂತರ ಭೂಮಿ ಮತ್ತು ವಸತಿ ವಂಚಿತರ ಹೋರಾಟ ಸಮಿತಿಯೊಂದಿಗೆ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.…
ಮಡಿಕೇರಿ ಆ.15 : ನನ್ನ ಮುಂದಿನ 5 ವರ್ಷದ ಅವಧಿಯಲ್ಲಿ ನನ್ನ ಚಿಂತನೆ ಈ ಕ್ಷೇತ್ರದ ಅಭಿವೃದ್ದಿ ಹಾಗೂ ಜನರ ಅಭಿವೃದ್ದಿಗೆ ಮೀಸಲಾಗಿರುತ್ತದೆ. ಜನರು ಕೊಟ್ಟ ತೀರ್ಪಿಗೆ ಕಂಕಣಬದ್ದವಾಗಿ ಕೆಲಸ ಮಾಡುವೆ, ಎಲ್ಲಿಯೂ ಕಪ್ಪುಚುಕ್ಕೆ ಬಾರದಂತೆ ಎಚ್ಚರ ವಹಿಸುತ್ತೇನೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹೇಳಿದರು. ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ವತಿಯಿಂದ ಕೊಡವ ಸಮಾಜದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಕ್ಕಡ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಚುನಾಚಣೆ ಮೆ.13ರಂದು ಮುಗಿದಿದೆ. ಪರವಿರೋಧಗಳು ಅಂದಿಗೆ ಕೊನೆಯಾಗಿದೆ. ಮುಂದೆ ಜನರ ಕಷ್ಟಗಳಿಗೆ ಸ್ಪಂಧಿಸುವುದು ಕ್ಷೇತ್ರದ ಅಭಿವೃದ್ಧಿಯನ್ನು ಮಾಡುವುದೇ ನಮ್ಮ ಮುಂದಿರುವ ಮೂಲ ಉದ್ದೇಶ. ಅಭಿವೃದ್ದಿಯ ಚಿಂತನೆಯಲ್ಲಿ ತಮ್ಮ ಸಲಹೆ ಸೂಚನೆಗಳು ನಿರಂತರವಾಗಿರಲಿ ಸದಾ ನಾನು ನಿಮ್ಮೊಂದಿಗಿರುವೆ ಎಂದು ಸಮುದಾಯ ಭಾಂದವರಿಗೆ ಭರವಸೆ ನೀಡಿದರು. ನಾವೆಲ್ಲರೂ ಪರಸ್ಪರ ಒಗ್ಗಟ್ಟು, ಹೊಂದಾಣಿಕೆಯೊಂದಿಗೆ ಜೀವನ ಸಾಗಿಸಬೇಕು ಹಾಗೂ ಜೀವಿತಾವಧಿಯಲ್ಲಿ ಆದಷ್ಟು ಸಮಾಜಮುಖಿ ಕಾರ್ಯದಲ್ಲಿ…
ಮಡಿಕೇರಿ ಆ.15 : ಮಡಿಕೇರಿ ಆಕಾಶವಾಣಿ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಿಲಯದ ಸಹಾಯಕ ಇಂಜಿನಿಯರ್ ಆರ್.ಶ್ರೀನಿವಾಸನ್ ಧ್ವಜಾರೋಹಣ ನೆರವೇರಿಸಿ, ದಿನದ ಮಹತ್ವದ ಕುರಿತು ತಿಳಿಸಿದರು. ನಮ್ಮ ದೇಶದ ಹಲವಾರು ಮಹಾನ್ ನಾಯಕರ ಅವಿರತ ಹೋರಾಟದ ಫಲವಾಗಿ ಬ್ರಿಟಿಷರಿಂದ ಸ್ವಾತಂತ್ರ್ಯ ಗಳಿಸಿದ್ದೇವೆ. ಇಂದು ಭಾರತ ‘ಮಹಾ ಭಾರತ’ವಾಗಿ ಬೆಳೆದಿದೆ. ಪ್ರತಿಯೊಬ್ಬರೂ ಶ್ರದ್ಧೆ ಹಾಗೂ ದೇಶಭಕ್ತಿಯಿಂದ ಕರ್ತವ್ಯ ನಿರ್ವಹಿಸಿದರೆ ಅದುವೇ ನಮ್ಮ ದೇಶಕ್ಕೆ ನಾವು ಸಲ್ಲಿಸುವ ನಿಜವಾದ ಕೊಡುಗೆ ಎಂದು ಅಭಿಪ್ರಾಯಪಟ್ಟರು. ನಿಲಯದ ಕಾರ್ಯಕ್ರಮ ಮುಖ್ಯಸ್ಥ ಪಿ.ಎಂ.ಜಗದೀಶ್, ಹಿರಿಯ ಉದ್ಘೋಷಕ ಸುಬ್ರಾಯ ಸಂಪಾಜೆ, ತಾಂತ್ರಿಕ ವಿಭಾಗದ ಅಸಿಸ್ಟೆಂಟ್ ಇಂಜಿನಿಯರ್ ಪಿ.ಆನಂದನ್, ತಾಂತ್ರಿಕ ವಿಭಾಗದ ಇ.ಶಿವಾನಂದ ಸ್ವಾಮಿ, ಲೆಕ್ಕಾಧಿಕಾರಿ ಹೆಚ್.ವೈ.ನಾರಾಯಣ, ಗ್ರಂಥಪಾಲಕ ಪಂಕಜ್ ಕುಡ್ತರ್ಕರ್ ಹಾಗೂ ಮತ್ತಿತರ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಆ.15 : 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ಕರಿಕೆಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು. ಚೆತ್ತುಕಾಯದಿಂದ ಚೆಂಬೇರಿಯವರೆಗೆ ರಸ್ತೆಗಳಲಿದ್ದ ಪ್ಲಾಸ್ಟಿಕ್, ಕಸ-ಕಡ್ಡಿಗಳನ್ನು ಹೆಕ್ಕಿ ಸ್ವಚ್ಛಗೊಳಿಸಿದರು. ಈ ಸಂದರ್ಭ ಗ್ರಾ.ಪಂ ಸದಸ್ಯ ಕೆ.ಎ.ನಾರಾಯಣ ಇದ್ದರು.
ಮಡಿಕೇರಿ ಆ.15 : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಶಾಲನಗರ ನಗರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪುರಸಭೆ ಸದಸ್ಯ ಪ್ರಮೋದ್ ಮುತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕೆಪಿಸಿಸಿ ಸಂಯೋಜಕ ಹೆಚ್.ಕೆ ನಟೇಶ್ ಗೌಡ, ಪುರಸಭೆ ಸದಸ್ಯ ಶೇಕ್ ಕಲೀಮುಲ್ಲ, ಎಮ್.ಕೆ ಸುಂದರೇಶ್, ಕುಶಾಲನಗರ ನಗರ ಕಾಂಗ್ರೆಸ್ ಉಪಾಧ್ಯಕ್ಷ ಹೆಚ್.ಕೆ ಶಿವಶಂಕರ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಕುಮಾರ್, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಮ್.ಎಮ್ ಪ್ರಕಾಶ್ ಹಾಗೂ ಕಾಂಗ್ರೆಸ್ ಮುಖಂಡರಾದ ಎಮ್.ವಿ ಹರೀಶ್, ನವೀನ್, ಮುಸ್ತಫ, ಗಯಾಜ್, ರಂಜನ್, ಇರ್ಫಾನ್, ಆನಂದ್ ಗೌಡ, ರವಿ, ಲಿಂಗಮ್, ಪುನೀತ್, ಊರೊಳನ ಸುರೇಶ್ ಹಾಗೂ ಪ್ರಮುಖರು ಹಾಜರಿದ್ದರು.
ಮಡಿಕೇರಿ ಆ.15 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಧ್ವಜಾರೋಹಣವನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮದ ಉತ್ತಪ್ಪ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕೆಪಿಸಿಸಿ ಮಾಧ್ಯಮ ಸಂವಹನ ವಕ್ತಾರ ಟಿ.ಪಿ.ರಮೇಶ್, ಕೆಪಿಸಿಸಿ ಕಾರ್ಯದರ್ಶಿ ಚಂದ್ರಮೌಳಿ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ , ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಮಡಿಕೇರಿ ನಗರಾಧ್ಯಕ್ಷೆ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಹಿರಿಯ ಕಾಂಗ್ರೆಸ್ ನಾಯಕರು, ಮಡಿಕೇರಿ ನಗರ ಕಾಂಗ್ರೆಸ್ ಕಾರ್ಯಕರ್ತರು ಮತ್ತು ವಿವಿಧ ಜಿಲ್ಲಾ ಘಟಕಗಳ ಅಧ್ಯಕ್ಷರು, ಬ್ಲಾಕ್ ಘಟಕಗಳ ಅಧ್ಯಕ್ಷರು, ನಗರ ಘಟಕಗಳ ಅಧ್ಯಕ್ಷರು ಹಾಜರಿದ್ದರು. ಸೇವಾದಳದ ಅಧ್ಯಕ್ಷರ ಕಾನೇ ಹಿತ್ಲು ಮೊಣ್ಣಪ್ಪ ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಂಡಿದ್ದರು.
ಮಡಿಕೇರಿ ಆ.14 ಕರ್ನಾಟಕ ಸರ್ಕಾರ, ಇಂಧನ ಇಲಾಖೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಬೆಳಕು, ಸುಸ್ಥಿರ ಬದುಕು ‘ಗೃಹ ಜ್ಯೋತಿ ಯೋಜನೆಗೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಚಾಲನೆ ನೀಡಿದರು. ಈ ಸಂದರ್ಭ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್.ಪೊನ್ನಣ್ಣ,ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಹಾಜರಿದ್ದರು.
ನಾಪೋಕ್ಲು ಆ.15 : ಭಾಷೆ ಉಳಿದರೆ ಮಾತ್ರ ನಮ್ಮ ಆಚಾರ, ವಿಚಾರ, ಸಂಸ್ಕೃತಿ ಉಳಿಯಲು ಸಾಧ್ಯ. ಈ ನಿಟ್ಟಿನಲ್ಲಿ ಜನಾಂಗದ ಹಿರಿಯರು ಪಾಲಿಸಿಕೊಂಡು ಬಂದ ತಮ್ಮ ಪದ್ಧತಿ ಪರಂಪರೆಗಳನ್ನು ಉಳಿಸಿ ಬೆಳೆಸುವಂತಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹೇಳಿದರು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಗೌಡ ಯುವ ವೇದಿಕೆ ಮಡಿಕೇರಿ ಹಾಗೂ ನರಿಯಂದಡ ಅಯ್ಯಪ್ಪ ಯುವಕ ಸಂಘದ ಸಹಯೋಗದಲ್ಲಿ ಪಾರಾಣೆ ಗೌಡ ಸಮಾಜದಲ್ಲಿ ಏರ್ಪಡಿಸಲಾಗಿದ್ದ ಆಟಿ ಜಂಬರ 2023 ರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದಿನಿಂದಲೂ ನಡೆದು ಬಂದ ಪದ್ಧತಿ ಪರಂಪರೆಗಳನ್ನು ಮರೆಯಬಾರದು. ಜಿಲ್ಲೆಯ ಪರಿಸರ ಉತ್ತಮವಾಗಿದ್ದು, ಸಮಾಜ ಬಾಂಧವರು ತಮ್ಮ ಭೂಮಿಗಳನ್ನು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಮಾರ್ಗದರ್ಶಕ ರಾಗಬೇಕೆಂದರು. ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ ಅನಂತಶಯನ ಮಾತನಾಡಿ, ಮನುಷ್ಯನಾಗಿ ಹುಟ್ಟಲು ಪುಣ್ಯ ಪಡೆದಿರಬೇಕು. ಅದರಲ್ಲೂ ಜಿಲ್ಲೆಯಲ್ಲಿ ಹುಟ್ಟಿದವರು ಪುಣ್ಯವಂತರು.ಇಂದಿನ ಜನಾಂಗ ಆಚರಿಸುತ್ತಿರುವಂತಹ ಕಾರ್ಯಕ್ರಮಗಳು ಕಳೆದುಹೋದ ಸಂಪ್ರದಾಯವನ್ನು ನೆನಪಿಸುತ್ತಿವೆ.ಇಂದಿನ ದಿನಗಳಲ್ಲಿ…
ನಾಪೋಕ್ಲು ಆ.15 : ಜನಬೆಂಬಲವಿದ್ದರೆ ಮಾತ್ರ ಒಂದು ಕ್ಷೇತ್ರದ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ನೆಲಜಿ ಗ್ರಾಮದ ಅಂಬಲ ಮಹಿಳಾ ಸಮಾಜದ ವತಿಯಿಂದ ನೆಲಜಿ ದವಸ ಬಂಡಾರದ ಕಟ್ಟಡದಲ್ಲಿ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಒಬ್ಬ ಶಾಸಕನಾಗಿ ಉತ್ತಮ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ ಜನರ ಮನಸ್ಸಿನಲ್ಲಿ ಉಳಿಯುವಂತೆ ಮಾಡುತ್ತೇನೆ. ಹಾಗೆಯೇ ಜನರ ಧ್ವನಿಯಾಗಿ ಕೆಲಸ ಮಾಡುವಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು. ಜನರಿಗೆ ಒಳ್ಳೆಯದಾಗಬೇಕು. ಕ್ಷೇತ್ರದ ಅಭಿವೃದ್ಧಿ ಆಗಬೇಕು ಎಂಬುದಷ್ಟೇ ನನ್ನ ಗುರಿಯಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಹಲವರು ಅವರವರ ಸಾಮರ್ಥ್ಯದಿಂದ ಮೇಲೆ ಬಂದರು. ಶಾಸಕನಾಗಿ ಜನರ ಅಭಿವೃದ್ಧಿ, ಕ್ಷೇತ್ರದ ಅಭಿವೃದ್ಧಿ ಮುಖ್ಯ. ಜಿಲ್ಲೆಯ ಜನರಿಗೆ ಒಳಿತನ್ನು ಮಾಡುವುದಷ್ಟೇ ನನ್ನ ಕೆಲಸ ಎಂದು ಹೇಳಿದರು. ಮುಂದಿನ ಜನಾಂಗಕ್ಕೆ ಆಚಾರ, ವಿಚಾರ, ಭಾಷೆ ,ಸಂಸ್ಕೃತಿಯನ್ನು ಉಳಿಸುವ ಬಗ್ಗೆ ಚಿಂತಿಸುವ ಕಾಲ ಬಂದಿದೆ. ಸಂಘ-ಸಂಸ್ಥೆಗಳು ಈ ನಿಟ್ಟಿನಲ್ಲಿ ಯೋಚಿಸಿ ಮುಂದಡಿ…






