ನಾಪೋಕ್ಲು ಆ.15 : ಸ್ವಾತಂತ್ರ್ಯ ಅಮೃತ ಮಹೋತ್ಸವದ ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ನಾಪೋಕ್ಲು ಗ್ರಾ.ಪಂ ವತಿಯಿಂದ ವಿವಿಧ ಶಾಲೆಗಳ ಸಹಯೋಗದೊಂದಿಗೆ ಪಟ್ಟಣದಲ್ಲಿ ಜಾಥಾ ನಡೆಯಿತು. ನಾಪೋಕ್ಲು ಮಾರುಕಟ್ಟೆ ಬಳಿಯಿಂದ ಆರಂಭಗೊಂಡ ಜಾಥಾದಲ್ಲಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾಗಿದ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ವಿವಿಧ ರಾಷ್ಟ್ರಭಕ್ತಿಯ ಘೋಷವಾಕ್ಯ ಮೊಳಗಿಸಿದರು. ಜಾಥಾದಲ್ಲಿ ದೇಶದ ಸ್ವಾತಂತ್ರ್ಯಹೋರಾಟಗಾರರ ವೇಷಧರಿಸಿದ ವಿದ್ಯಾರ್ಥಿಗಳು ವೀಕ್ಷಕರ ಗಮನ ಸೆಳೆದರು. ಗ್ರಾ.ಪಂ ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷ ಮೊಹಮ್ಮದ್, ಪಿಡಿಒ ಚೋಂದಕ್ಕಿ, ಪಂಚಾಯಿತಿ ಸದಸ್ಯರು, ಕರ್ನಾಟಕ ಪಬ್ಲಿಕ್ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು,ಇಂಟರಾಕ್ಟ್ ಕ್ಲಬ್ ಸದಸ್ಯರು, ನಿಸರ್ಗ ಇಕೋ ಕ್ಲಬ್ ಸದಸ್ಯರು, ಶಾಲಾ ಆಡಳಿತ ಮಂಡಳಿ ಪದಾಧಿಕಾರಿ ಸದಸ್ಯರು, ಬೇತು,ಚೆರಿಯಪರಂಬು, ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಜಾಥಾದಲ್ಲಿ ಪಾಲ್ಗೊಂಡಿದ್ದರು. ವರದಿ : ದುಗ್ಗಳ ಸದಾನಂದ
ಲೇಖಕ: admin
ನಾಪೋಕ್ಲು ಆ.15 : ಕುಂಜಿಲ- ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ಪಿಂಚಣಿದಾರರಿಗೆ ಶಾಸಕ ಎ.ಎಸ್.ಪೊನ್ನಣ್ಣ ಪಿಂಚಣಿ ಆದೇಶ ಪತ್ರವನ್ನು ವಿತರಿಸಿದರು. ಕುಂಜಿಲ- ಕಕ್ಕಬ್ಬೆ ಗ್ರಾ.ಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಮಾಜಿಕ ಭದ್ರತೆ ಯೋಜನೆಯಡಿ ಪಂಚಾಯತಿ ವ್ಯಾಪ್ತಿಯ 14 ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರವನ್ನು ವಿತರಿಸಲಾಯಿತು. ಇದಕ್ಕೂ ಮುನ್ನ ಕಕ್ಕಬ್ಬೆ ಆರೋಗ್ಯ ಕೇಂದ್ರದ ಬಳಿ ಇರುವ ಯೋಗ ಕೇಂದ್ರವನ್ನು ಶಾಸಕ ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಕಂದಾಯ ಅಧಿಕಾರಿ ರವಿಕುಮಾರ್, ಗ್ರಾಮ ಲೆಕ್ಕಿಗರು, ಜನಪ್ರತಿನಿಧಿಗಳು, ಗ್ರಾಮಸ್ಥರು ಹಾಜರಿದ್ದರು. ಬಳಿಕ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮುತ್ತವ್ವ ಸಭಾಂಗಣದಲ್ಲಿ ಜರುಗಿದ ಸನ್ಮಾನ ಕಾರ್ಯಕ್ರಮದಲ್ಲಿ ಪಂಚಾಯಿತಿ, ಗ್ರಾಮಸ್ಥರ, ನಾಲ್ಕೇರಿ ಭಗವತಿ ದೇವಾಲಯದ, ಅಮ್ಮಂಗೇರಿ ಸುಬ್ರಹ್ಮಣ್ಯ ಯುವಕ ಸಂಘದ, ಸಂಜೀವಿನಿ ಒಕ್ಕೂಟದ ವತಿಯಿಂದ ಶಾಸಕ ಪೊನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಶಾಸಕರ ಸಾರ್ವಜನಿಕರಿಂದ ಮನವಿ ಪತ್ರವನ್ನು ಸ್ವೀಕರಿಸಿದರು. ಗ್ರಾ.ಪಂ ಅಧ್ಯಕ್ಷ ಕಲಿಯಂಡ ಸಂಪನ್, ಅಯ್ಯಪ್ಪ, ಪ್ರಮುಖರಾದ ಬಾಚಮಂಡ ಪೂವಣ್ಣ,…
ಸೋಮವಾರಪೇಟೆ ಆ.15 : ಸೋಮವಾರಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಮತ್ತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕ ಡಾ. ಮಂತರ್ ಗೌಡ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೋಸ್ರಾಜ್ ಮಾತನಾಡಿ, ಸುಮಾರು 20-25 ವರ್ಷಗಳ ನಂತರ ಕಾಂಗ್ರೇಸ್ ಜಿಲ್ಲೆಯನ್ನು ಹಿಡಿತಕ್ಕೆ ಪಡೆದುಕೊಂಡಿದೆ. ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ಸತತ ಪರಿಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ರಾಜ್ಯದಲ್ಲಿ ಮತದಾರರು 136 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಆಯ್ಕೆ ಮಾಡಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಜನರಿಗೆ ಸುಮಾರು ರೂ. 60 ಸಾವಿರ ಕೋಟಿ ಯೋಜನೆಯ 5 ಆಶ್ವಾಸನೆಗಳನ್ನು ನೀಡಿತ್ತು. ಅದರಲ್ಲಿ ಈಗಾಗಲೇ ಮೂರನ್ನು ಈಡೇರಿಸಿದ್ದು, ತಿಂಗಳಾಂತ್ಯಕ್ಕೆ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುವುದು ಎಂದರು. ಮುಂದಿನ ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಿನಲ್ಲಿ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು, ಪಕ್ಷದ ನಾಯಕರು ಮತ್ತು ಕಾರ್ಯಕರ್ತರ…
ಸುಂಟಿಕೊಪ್ಪ,ಆ.15 : ಸುಂಟಿಕೊಪ್ಪ ಗ್ರೇಡ್ 1 ಗ್ರಾ.ಪಂ ಅಧ್ಯಕ್ಷರಾಗಿ ಪಿ.ಆರ್.ಸುನಿಲ್ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಶಿವಮ್ಮ ಮಹೇಶ್ ಅಧಿಕಾರ ಸ್ವೀಕರಿಸಿದರು. ಸುಂಟಿಕೊಪ್ಪ ಗ್ರಾಮ 2ನೇ ಅವಧಿ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಮತದಾನದಲ್ಲಿ ಆಯ್ಕೆಗೊಂಡ ಪಿ.ಆರ್.ಸುನಿಲ್ ಕುಮಾರ್ ಅವರಿಗೆ ಮಾಜಿ ಅಧ್ಯಕ್ಷೆ ಶಿವಮ್ಮ ಮಹೇಶ್ ‘ಪಂಚಾಯಿತಿ ಕಾನೂನು’ ಪುಸ್ತಕವನ್ನು ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು. ಉಪಾಧ್ಯಕ್ಷ 2ನೇ ಅವಧಿಗೆ ನಡೆದ ಮತದಾನದಲ್ಲಿ ಆಯ್ಕೆಗೊಂಡ ಶಿವಮ್ಮ ಮಹೇಶ್ ಅವರಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೇಣುಗೋಪಾಲ್ ಅಧಿಕಾರ ಹಸ್ತಾಂತರಿಸಿದರು. ನೂತನವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಪದಗ್ರಹಣದಲ್ಲಿ ಹೂವಿನ ಹಾರ ಶಾಲುಗಳು ಹಾಕಿ ಉತ್ತಮ ಆಡಳಿತ ನೀಡುವಂತೆ ಗ್ರಾಮಸ್ಥರು, ಹಿರಿಯ ಮುಖಂಡರು, ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರು ಶುಭಹಾರೈಸಿದರು. ಈ ಸಂದರ್ಭ ಪಂಚಾಯಿತಿ ಸದಸ್ಯರುಗಳಾದ ಬಿ.ಎಂ.ಸುರೇಶ್, ಮಂಜುನಾಥ್, ರಫೀಕ್ಖಾನ್, ಸೋಮನಾಥ್, ವಸಂತಿ, ಶಾಂತಿ, ಗೀತಾ, ಮಂಜುಳ, ರೇಷ್ಮ, ಮಾಜಿ ಸದಸ್ಯ ಪಿ.ಆರ್.ಸುಕುಮಾರ್, ಕೆ.ಇ.ಕರೀಂ,ರಹೆನಾ ಸುಲ್ತಾನ್, ಬಿಜೆಪಿ ಪಕ್ಷದ ಹಿರಿಯ ಮುಖಂಡ ವೈ.ಎಂ.ಕರುಂಬಯ್ಯ, ಸುಂಟಿಕೊಪ್ಪ ಛೇಂಬರ್…
ನವದೆಹಲಿ: ಕಳೆದ ಕೆಲವು ವಾರಗಳಿಂದ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಮಣಿಪುರದ ಪರಿಸ್ಥಿತಿ ಇದೀಗ ಸುಧಾರಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ ಮತ್ತು ಅಲ್ಲಿ ಪುನಃಸ್ಥಾಪಿಸಲು ಈಶಾನ್ಯ ರಾಜ್ಯದ ಜನರನ್ನು ಒತ್ತಾಯಿಸಿದರು. ಕೆಂಪು ಕೋಟೆಯ ಆವರಣದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಡೀ ರಾಷ್ಟ್ರವು ಮಣಿಪುರದೊಂದಿಗೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರವು ಸಮಸ್ಯೆಗೆ ಪರಿಹಾರವನ್ನು ಕಂಡುಹಿಡಿಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಮತ್ತು ಈ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ಹೇಳಿದರು. ‘ಕಳೆದ ಕೆಲವು ವಾರಗಳಲ್ಲಿ, ಈಶಾನ್ಯ ರಾಜ್ಯದಲ್ಲಿ ನಡೆದ ಹಿಂಸಾಚಾರದ ಅವಧಿಯಲ್ಲಿ, ವಿಶೇಷವಾಗಿ ಮಣಿಪುರದಲ್ಲಿ, ಅನೇಕ ಜನರು ಪ್ರಾಣ ಕಳೆದುಕೊಂಡರು. ನಮ್ಮ ತಾಯಿ ಮತ್ತು ಹೆಣ್ಣುಮಕ್ಕಳ ಗೌರವಕ್ಕೆ ಕುಂದುಂಟಾಯಿತು. ಆದರೆ, ಕಳೆದ ಕೆಲವು ದಿನಗಳಲ್ಲಿ ಅಲ್ಲಿ ಪರಿಸ್ಥಿತಿ ಶಾಂತಗೊಳ್ಳುತ್ತಿದೆ’ ಎಂದರು. ರಾಷ್ಟ್ರವು ಮಣಿಪುರದೊಂದಿಗೆ ಇದೆ ಎಂದು ಪ್ರಧಾನಮಂತ್ರಿಯವರು ಕೆಂಪು ಕೋಟೆಯಿಂದ ತಮ್ಮ ಸತತ 10ನೇ ಸ್ವಾತಂತ್ರ್ಯೋತ್ವವದ ಭಾಷಣದ ಆರಂಭದಲ್ಲಿ ಹೇಳಿದರು. ಮಣಿಪುರದಲ್ಲಿ ಕಳೆದ ಕೆಲವು ದಿನಗಳಿಂದ ಪರಿಸ್ಥಿತಿ ಶಾಂತವಾಗುತ್ತಿದ್ದು,…
ವಿರಾಜಪೇಟೆ ಆ.15 : ವಿರಾಜಪೇಟೆಯ ಮಲೆಮಹದೇಶ್ವ ಬೆಟ್ಟದಲ್ಲಿನ ಶ್ರೀ ಶನೀಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಶನೀಶ್ವರ ದೇವಸ್ಥಾನದ ವಾರ್ಷಿಕ ಶ್ರಾವಣ ಮಹೋತ್ಸವವನ್ನು ಈ ವರ್ಷವೂ ಆ.19 ರಿಂದ ಸೆ.9 ವರೆಗೆ ಸಕಲ ಪೂಜ ವಿಧಿ ವಿಧಾನಗಳೊಂದಿಗೆ ಆಚರಿಸಲಾಗುವುದು ಎಂದು ಸೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಸರ್ವ ಭಕ್ತಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ತೀರ್ಥ ಪ್ರಸಾದವನ್ನು ಸ್ವೀಕರಿಸಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ತಿಳಿಸಿದ್ದಾರೆ. ಶ್ರಾವಣ ಪೂಜೋತ್ಸೋವದ ನಿಮಿತ್ತ ಆ.18 ಶುಕ್ರವಾರ ಬೆಳಿಗ್ಗೆ 6 ಗಂಟೆಗೆ ಗಣಪತಿ ಹೋಮ ನಡೆಯಲಿದ್ದು ಪ್ರತಿ ಶನಿವಾರ ಬೆಳಿಗ್ಗೆ 6 ಗಂಟೆಗೆ ಅಭಿಷೇಕ, 7 ಗಂಟೆಗೆ ಅಲಂಕಾರ 8. ಗಂಟೆಗೆ ನವಗ್ರಹ ಪೂಜೆ, 11.00 ಗಂಟೆಗೆ ದೇವರ ದರ್ಶನ ಮಧ್ಯಾಹ್ನ 12 ಗಂಟೆ ಮಹಾ ಪೂಜೆ, ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿನಿಯೋಗ ಹಾಗೂ ಅನ್ನ ಸಂತರ್ಪಣೆ ಪ್ರತಿ ಶುಕ್ರವಾರ ಸಂಜೆ 7.30 ಗಂಟೆಗೆ ಶ್ರೀ ದುರ್ಗಾದೇವಿ ಪೂಜೆ ಹಾಗೂ…
ಬೆಂಗಳೂರು ಆ.15 : ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅರ್ಥಪೂರ್ಣವಾಗಿ ನೆರವೇರಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಶುಭ ಕೋರಿದರು.
ಮಡಿಕೇರಿ ಆ.15 : ಭಾರತ ಸರ್ಕಾರ, ನೆಹರು ಯುವ ಕೇಂದ್ರ ಮಡಿಕೇರಿ, ಕೊಡಗು ಜಿಲ್ಲಾ ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಡಿಕೇರಿ ನೆಹರು ಯುವ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಿವೃತ್ತ ಸುಬೇದಾರ್ ಕೆ.ಎ.ಆನಂದ್ ಧ್ವಜಾರೋಹಣ ನೆರವೇರಿಸಿ, ಹಿರಿಯರು ತಂದು ಕೊಟ್ಟ ಸ್ವಾತಂತ್ರ್ಯವನ್ನು ಯುವ ಜನತೆ ಉಳಿಸಿ ಕಾಪಾಡುವಂತೆ ಕರೆ ನೀಡಿದರು. ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಮಾತನಾಡಿ, ಇಂದಿನ ಯುವಜನರು ದುಶ್ಚಟಗಳಿಗೆ ಬಲಿಯಾಗದೆ, ಉತ್ತಮ ಸಮಾಜ ನಿರ್ಮಾಣ ಮಾಡಲು ಶ್ರಮವಹಿಸಬೇಕು ಎಂದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾವನಿ, ಹಿಮಾ, ಚೇತನ್, ಕೆ.ಡಿ.ತನ್ವಿ , ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ಸಿಬ್ಬಂದಿಗಳಾದ ಹೆಚ್.ಬಿ.ಸಂತೋಷ್ ಕುಮಾರ್ , ದೀಪ್ತಿ , ರಂಜಿತಾ ಹಾಗೂ ಕಾವೇರಿ ಲೇಔಟ್ ನ ಸಾರ್ವಜನಿಕರು ಭಾಗವಹಿಸಿದ್ದರು.
ಮಡಿಕೇರಿ ಆ.15 : ಕೊಡಗು ಜಿಲ್ಲಾಡಳಿತ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯು ನಗರದ ಕೋಟೆ ಆವರಣದಲ್ಲಿ ಅರ್ಥಪೂರ್ಣವಾಗಿ ಜರುಗಿತು. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಧ್ವಜಾರೋಹಣ ನೆರವೇರಿಸಿದರು. ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಇತರರು ಪಾಲ್ಗೊಂಡಿದ್ದರು. ಪ್ರಸ್ತುತ ಸರ್ಕಾರದ ಸಾಧನೆ ಸಂಬಂಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹೊರತಂದಿರುವ ‘ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ’ ಕಿರುಹೊತ್ತಿಗೆಯನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು.
ಮಡಿಕೇರಿ ಆ.15 : ಕೊಡಗು ಪತ್ರಿಕಾ ಭವನ ಟ್ರಸ್ಟ್ನಿಂದ 77ನೇ ಸ್ವಾತಂತ್ರ್ಯೋತ್ಸವವನ್ನು ಪತ್ರಿಕಾ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕೊಡಗು ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷರಾದ ಎಂ.ಪಿ.ಕೇಶವ ಕಾಮತ್ ಅವರು ತ್ರಿವರ್ಣ ಧ್ವಜಾರೋಹಣಗೈಯ್ದು, ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ಕೋರಿದರು. ಈ ಸಂದರ್ಭ ಟ್ರಸ್ಟ್ನ ಸ್ಥಾಪಕ ಮ್ಯಾನೇಜಿಂಗ್ ಟ್ರಸ್ಟ್ ಟಿ.ಪಿ. ರಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್, ಕೊಡಗು ಪತ್ರಕರ್ತರ ಸಂಘದ ಸಹ ಕಾರ್ಯದರ್ಶಿ ಪ್ರಸಾದ್ ಸಂಪಿಗೆ ಕಟ್ಟೆ, ಸರ್ವೋದಯ ಸಮಿತಿಯ ಸದಸ್ಯರಾದ ಸುರಯ್ಯ ಅಬ್ರಾರ್, ಮಿನಾಜ್ ಪ್ರವೀಣ್, ಪತ್ರಿಕಾ ಭವನದ ಸಿಬ್ಬಂದಿಗಳಾದ ಬಿ.ಪಿ.ರಾಜೇಶ್, ಸವಿತಾ ಜೆ.ಎ., ಚರಿತಾ ಜೆ.ಎ. ಹಾಗೂ ರಾಮಣ್ಣ, ಲೀಲಾವತಿ, ಯಶ್ವಂತ್, ಅಶ್ರಫ್, ರೆಹಮಾನ್, ಸುಮೇಶ್, ಸಿಕಂದರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






