ಮಡಿಕೇರಿ ಸೆ.10 : ಮಡಿಕೇರಿ ನಗರದ ಬ್ರಾಹ್ಮಣರ ಬೀದಿಯ ನಿವಾಸಿ, ವರ್ತಕ ಪಿ.ಕೆ.ಭಟ್ಟ(71) ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಅನೇಕ ದಶಕಗಳಿಂದ ನಗರದಲ್ಲಿ ವರ್ತಕರಾಗಿದ್ದ ಪಿ.ಕೆ.ಭಟ್ ಅವರು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನಲ್ಲಿ ಇದ್ದರು. ನಗರದ ವರ್ತಕ ವೃಂದ ಭಟ್ ಅವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಲೇಖಕ: admin
ಮಡಿಕೇರಿ ಸೆ.10 : ಸರಕಾರಿ ಉದ್ಯೋಗಿಗಳ ನೂತನ ಪಿಂಚಣಿ ನೀತಿಯನ್ನು ತೆಗೆದು ಅದರಲ್ಲೂ ವಿಶೇಷವಾಗಿ ಶಿಕ್ಷಣ ಕ್ಷೇತ್ರದ ಉದ್ಯೋಗಿಗಳಿಗೆ ಹಳೆಯ ಪಿಂಚಣಿ ನೀತಿಯನ್ನೇ ಮುಂದುವರೆಸುವಂತೆ ಮಾಡಲು ಸಕ್ರಿಯವಾಗಿ ಪ್ರಯತ್ನಿಸುತ್ತಿರುವುದಾಗಿ ಕೊಡಗು ಮಂಗಳೂರು ಶಿಕ್ಷಕ ಕ್ಷೇತ್ರದ ಶಾಸಕ ಭೋಜೇಗೌಡ ತಿಳಿಸಿದ್ದಾರೆ. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ ನಡೆಸಿದ ಅವರು ಖಾಯಂ ಹಾಗೂ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರು. ಕೊಡಗು ವಿಶ್ವವಿದ್ಯಾನಿಲಯಕ್ಕೆ ಸೇರಲು ಇಚ್ಛಿಸುವ ಅಧ್ಯಾಪಕರಿಗೆ ಹಳೆಯ ಪಿಂಚಣಿ ಯೋಜನೆಯನ್ನೇ ಮುಂದುವರೆಸುವಂತೆ ಸರಕಾರಕ್ಕೆ ಆಗ್ರಹಿಸಲಾಗುವುದು ಎಂದು ತಿಳಿಸಿದರು. ಕಾಲೇಜ್ ಗೆ ಶಾಸಕರ ನಿಧಿಯಿಂದ 5ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪ್ಯೂರಿಫೈಯರ್ ಗಳನ್ನು ಒದಗಿಸುವುದಾಗಿ ಹೇಳಿದರು. ರಾಜಕೀಯ ಪೂರ್ವಗ್ರಹವಿಲ್ಲದೆ ಶಿಕ್ಷಣ ಕ್ಷೇತ್ರಕ್ಕೆ ತನ್ನ ಕೈಲಾದ ಸೇವೆ ಸಲ್ಲಿಸುವ ಪ್ರಯತ್ನವನ್ನು ತಾನು ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಅತಿಥಿ ಉಪನ್ಯಾಸಕರ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಶೈಕ್ಷಣಿಕ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಉದ್ಯೋಗಿಗಳಿಗೆ ಔದ್ಯೋಗಿಕ ಭದ್ರತೆ ಒದಗಿಸುವ ಕುರಿತು ಸಮಾಲೋಚನೆ ನಡೆಸಲಾಗುವುದು…
ಮಡಿಕೇರಿ ಸೆ.10 : ವಿದ್ಯುತ್ ಸ್ಪರ್ಷಗೊಂಡು ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಎಂಬುವವರೇ ಮೃತ ದುರ್ದೈವಿ. ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಷಗೊಂಡಿದೆ. ಘಟನೆಯಿಂದ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಬಸವರಾಜ್ ಅವರು ಕಳೆದ 5 ವರ್ಷಗಳಿಂದ ವಿರಾಜಪೇಟೆ ಚೆಸ್ಕಾಂ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.
ವಿರಾಜಪೇಟೆ ಸೆ.9 : ರಾಷ್ಟ್ರೀಯ ಅಂಚೆ ಸಪ್ತಾಹದ ಅಂಗವಾಗಿ ಸೆ.11 ರಿಂದ 23ರ ವರೆಗೆ ವಿರಾಜಪೇಟೆ ಅಂಜೆ ಕಚೇರಿಯಲ್ಲಿ ವಿಶೇಷ ಆಧಾರ್ ಮೇಳ ನಡೆಯಲಿದೆ. ಕೊಡಗು ಅಂಚೆ ಅಧೀಕ್ಷಕರು ನೂತನ ಕಂಪ್ಯೂಟರ್, ಬ್ರಾಡ್ಬ್ಯಾಂಡ್ ಒದಗಿಸಿಕೊಟ್ಟಿದ್ದು, ದಿನಂಪ್ರತಿ ಬೆಳಿಗ್ಗೆ 8 ರಿಂದ ಸಂಜೆ 5 ಗಂಟೆಗೆಯ ವರೆಗೆ ಮೇಳ ನಡೆಯಲಿದೆ. ಸಾರ್ವಜನಿಕರು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ಮಾಡಿಸಿಕೊಳ್ಳಲು ಕೋರಿದೆ.
ಮಡಿಕೇರಿ ಸೆ.9 : ಫೆಡರೇಶನ್ ಆಫ್ ಕೊಡವ ಸಮಾಜದ ವತಿಯಿಂದ ಕೈಲ್ಪೊಳ್ದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಬಾಳುಗೋಡು ಕೊಡವ ಸಮಾಜದಲ್ಲಿ ಕೊಡವ ಸಾಂಪ್ರಾದಯಿಕ ಆಯುಧ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ಮಾಡಲಾಯಿತು. ನಂತರ ತೆಂಗಿನಕಾಯಿಗೆ ಗುಂಡು ಹೊಡೆಯುವುದು, ಬಾರದ ಗುಂಡು ಎಸೆಯುವುದು ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು. ಪೊಮ್ಮಕ್ಕಡ ವಿಭಾಗದ ಪದಾಧಿಕಾರಿಗಳು ಹಾಗೂ ಸದಸ್ಯರು ಹಬ್ಬಕ್ಕೆ ವಿಶೇಷ ಮೆರಗನ್ನು ತಂದುಕೊಟ್ಟರು. ಫೆಡರೇಶನ್ ಆಫ್ ಕೊಡವ ಸಮಾಜದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ವಾಟೇರಿರ ಶಂಕರಿ ಪೂವಯ್ಯ, ಖಜಾಂಚಿ ಚಿರಿಯಪಂಡ ಕಾಶಿಯಪ್ಪ, ಪೊಮ್ಮಕ್ಕಡ ವಿಭಾಗದ ಬಲ್ಲಣಮಾಡ ರೀಟಾ ದೇಚಮ್ಮ, ಪ್ರಮುಖರಾದ ಕಂಬೀರಂಡ ಕಿಟ್ಟು ಕಾಳಪ್ಪ, ಕೋಟೇರ ರಘು, ಬೊಳಿಯಂಗಡ ದಾದೂ ಪೂವಯ್ಯ ಮತ್ತಿತರರು ಉಪಸ್ಥಿತರಿದ್ದರು. ::: ಬಹುಮಾನ ವಿತರಣೆ ::: .22 ಕೋವಿ ಸ್ಪರ್ಧೆಯಲ್ಲಿ ಕಬ್ಬಟ್ಟೀರ ಶರತ್ ಪ್ರಥಮ, ಕೇಲೇಟಿರ ಪವಿತ್ ದ್ವಿತೀಯ ಹಾಗೂ ಅಚ್ಚಪಂಡ ಪಟ್ಟು ತೃತೀಯ ಬಹುಮಾನ ಪಡೆದುಕೊಂಡರು. ಬಕೆಟ್ಗೆ ಬಾಲು ಎಸೆಯುವ ಸ್ಪರ್ಧೆಯಲ್ಲಿ ಅಪ್ಪುಮಣಿಯಂಡ…
ಮೂರ್ನಾಡು ಸೆ.9 : ಮಡಿಕೇರಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯ ಅಧಕಾರಿಗಳ ಕಚೇರಿ ಮತ್ತು ಸಮಗ್ರ ಶಿಕ್ಷಣ ಅಭಿಯಾನದ ಸಂಯುಕ್ತ ಆಶ್ರಯದಲ್ಲಿ ಮೂರ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ/ಕಲೋತ್ಸವ ಕಾರ್ಯಕ್ರಮ ನಡೆಯಿತು. ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾದ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಮೂರ್ನಾಡು ಗ್ರಾ.ಪಂ ಅಧ್ಯಕ್ಷ ಬಿ.ಎಸ್. ಕುಶನ್ ರೈ ಉದ್ಘಾಟಿಸಿ, ಮಾತನಾಡಿದ ಅವರು ಸ್ಪರ್ಧೆಗಳಿದ್ದರೆ ಮಾತ್ರ ತಮ್ಮ ಪ್ರತಿಭೆಯನ್ನು ಹೊರಹೊಮ್ಮಿಸಲು ಸಾಧ್ಯವಾಗುತ್ತದೆ. ಯಾವುದೆ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಭಾಗವಹಿಸುವುದರ ಅನುಭವವನ್ನು ವಿದ್ಯಾರ್ಥಿಗಳು ಇಷ್ಟಪಡುವಂತಾಗಬೇಕು ಎಂದು ಹೇಳಿದರು. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಪಿ.ಗುರುರಾಜ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಮೂರ್ನಾಡು ಗ್ರಾ.ಪಂ ಉಪಾಧ್ಯಕ್ಷೆ ಬಿ.ಎಸ್. ರೇಖಾ ಬಾಲು, ಜ್ಞಾನ ಜ್ಯೋತಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕ ಅಶೋಕ್ ಮತ್ತು ಮೂರ್ನಾಡು ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಉಷಾ ಉಪಸ್ಥಿತರಿದ್ದರು. ಮೂರ್ನಾಡು…
ಮಡಿಕೇರಿ ಸೆ.9 : ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡಬೇಕು. ಗೆದ್ದೇ ಗೆಲ್ಲುವೆ ಎನ್ನುವ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾಡಳಿತ, ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ, ವಿರಾಜಪೇಟೆ, ಮಡಿಕೇರಿ, ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಯುವ ಉತ್ಸವವನ್ನು ಉದ್ಘಾಟಿಸಿ ಅವರು, ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಯುವಕರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ನಾವು ಓದುಲು ಬಂದಿದ್ದೇನೆ ಓದಬೇಕು ಎನ್ನುವ ಪ್ರಜ್ಞೆಯೊಂದಿಗೆ ನಿರಂತರ ಅಧ್ಯಯನ ನಡೆಸಿದಲ್ಲಿ ಯಶಸ್ಸಿನ ದಾರಿ ಸುಗಮವಾಗಲಿದೆ. ಯುವಜನತೆ ಒಂದು ದೊಡ್ಡ ಶಕ್ತಿ. ಶಿಸ್ತಿನಿಂದ ಸಾಗಿದಾಗ ಸಾಧನೆ ಸಾಧ್ಯವಾಗಲಿದೆ ಎಂದರು. ಯಾವುದೇ ದೇಶವು ಮುಂದುವರಿಯಲು ಶಿಕ್ಷಣ ಮುಖ್ಯ ಪಾತ್ರ ವಹಿಸುತ್ತದೆ.…
ಮಡಿಕೇರಿ ಸೆ.9 : ವನ್ಯಜೀವಿಗಳಿಂದ ಜೀವ ಕಳೆದುಕೊಂಡವರಿಗೆ ಕೊಡಗು ರೈತ ಸಂಘ, ಕಾರ್ಮಿಕ ಸಂಘಟನೆ ಮತ್ತು ಆದಿವಾಸಿಗಳು ಒಗ್ಗೂಡಿ ಸೆ.11 ರಂದು ಗೌರವ ಸಲ್ಲಿಸುವ ಮೂಲಕ ಅರಣ್ಯ ಹುತಾತ್ಮರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಮನು ಸೋಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಾತನ ಹಾಗೂ ಸ್ವಾತಂತ್ರ್ಯ ಪೂರ್ವ ಕಾಲದಿಂದಲೇ ಪ್ರಕೃತಿಯನ್ನು ಪೂಜಿಸುತ್ತಾ, ಕಾಡ್ಗಿಚ್ಚನ್ನು ನಿಯಂತ್ರಿಸುತ್ತಾ ಅರಣ್ಯ ಹಾಗೂ ಪರಿಸರವನ್ನು ರಕ್ಷಿಸುತ್ತಾ ಬಂದು ಕಾಡುಪ್ರಾಣಿಗಳ ದಾಳಿಯಿಂದ ಮೃತರಾದ ಆದಿವಾಸಿಗಳು, ಬುಡಕಟ್ಟು ಜನಾಂಗದವರು, ರೈತರು, ಕಾರ್ಮಿಕರು, ಗ್ರಾಮವಾಸಿಗಳನ್ನು ಕೂಡ ಹುತಾತ್ಮರೆಂದು ಪರಿಗಣಿಸಬೇಕು. ಸರ್ಕಾರ ಅರಣ್ಯ ಸಿಬ್ಬಂದಿಗಳನ್ನು ಮಾತ್ರ ಹುತಾತ್ಮರು ಎಂದು ಪರಿಗಣಿಸುವುದು ಎಷ್ಟು ಸರಿಯೆಂದು ಪ್ರಶ್ನಿಸಿದರು. ಸೆ.11 ರಂದು ನಡೆಯುವ ಅರಣ್ಯ ಹುತಾತ್ಮರ ದಿನಾಚರಣೆ ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ಅಂದು ಅರಣ್ಯ ಭವನದಲ್ಲಿ ಕೊಡಗು ರೈತ ಸಂಘ, ಕಾರ್ಮಿಕ ಸಂಘಟನೆ ಹಾಗೂ ಆದಿವಾಸಿಗಳು ಒಗ್ಗೂಡಿ ವನ್ಯಜೀವಿ ದಾಳಿಯಿಂದ ಮೃತಪಟ್ಟವರೆಲ್ಲರೂ ಹುತಾತ್ಮರೆಂದು ಪರಿಗಣಿಸಿ ಪುಷ್ಪ ನಮನ ಸಲ್ಲಿಸಿಸಲಾಗುವುದು ಎಂದರು.…
ವಿರಾಜಪೇಟೆ ಸೆ.9 : ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ವಿರಾಜಪೇಟೆಯ ಗೋಜೂ ರ್ಯೂ ಕರಾಟೆ ತರಬೇತಿ ಶಾಲೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಕೊಯಂಬತ್ತೂರಿನ ಸೂಲೂರಿನಲ್ಲಿ ಆರ್.ವಿ.ಎಸ್ ಗ್ರೂಫ್ ಸಂಸ್ಥೆಗಳು ಮತ್ತು ಐ.ಎಂ.ಜಿ.ಕೆ.ಎ ಇಂಡಿಯ ವತಿಯಿಂದ ಆಯೋಜಿಸಲಾದ 16ನೇ ಈ.ಎಂ.ಜಿ.ಕೆ.ಎ ಏಷ್ಯನ್ ಒಪನ್ ಚಾಂಪಿಯನ್ಸ್ ಕರಾಟೆ ಡೂ ಚಾಂಪಿಯನ್-2023 ಸ್ಪರ್ಧೆಯ ಕತ್ತಾ, ಕುಮಿತೆ, ಟೀಂ ಕತ್ತಾ ವಿಭಾಗದಲ್ಲಿ ವಿರಾಜಪೇಟೆ ನಗರದ ಗೋಜೂ ರ್ಯೂ ಕರಾಟೆ ತರಬೇತಿ ಶಾಲೆಯ ಒಟ್ಟು 18 ಮಂದಿ ವಿದ್ಯಾರ್ಥಿಗಳು ಭಾಗವಹಿಸಿ 17 ಚಿನ್ನದ ಪದಕ, 11 ಬೆಳ್ಳಿ ಹಾಗೂ 12 ಕಂಚಿನ ಪದಕಗಳು ಸೇರಿದಂತೆ ಪ್ರಶಸ್ತಿಪತ್ರ ಪಡೆದುಕೊಂಡು ಜಿಲ್ಲೆಗೆ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳಿಗೆ ಸನ್ಸಾಯಿ ಎಂ.ಬಿ.ಚಂದ್ರನ್ ತರಬೇತಿ ನೀಡಿದ್ದು, ವಿದ್ಯಾರ್ಥಿಗಳ ಸಾಧನೆಗೆ ಜಿಲ್ಲೆಯ ಜನತೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಪರ್ಧೆಯಲ್ಲಿ ಏಷೀಯ ಉಪ ಖಂಡಗಳಾದ ಭಾರತ, ಶ್ರೀಲಂಕ, ಖಾಜಕಿಸ್ಥಾನ್, ನೇಪಾಲ್ ದೇಶಗಳಿಂದ ಸುಮಾರು 1400 ಮಂದಿ ಕ್ರೀಡಾ ಪಟುಗಳು ಭಾಗವಹಿಸಿದ್ದರು.…
ಮಡಿಕೇರಿ ಸೆ.9 : ಸೈನಿಕರ ರಕ್ಷಣಾ ವಿಭಾಗ ಇಸಿಎಚ್ಎಸ್ ಮತ್ತು ಸಿಎಸ್ಡಿ ಕ್ಯಾಂಟಿನ್ಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಂದರ್ಭ ಮಾಜಿ ಸೈನಿಕರಿಗೆ ಅನ್ಯಾಯವಾಗುತ್ತಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತಿರ ಪಿ.ಸೋಮಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಸಿಎಚ್ಎಸ್ ಮತ್ತು ಸಿಎಸ್ಡಿಗಳಲ್ಲಿ ಮಾಜಿ ಸೈನಿಕರಿಗೆ ಶೇ.70 ರಷ್ಟು ಮೀಸಲಾತಿಯಿದೆ. ಆದರೆ, ಮಾಜಿ ಸೈನಿಕರನ್ನು ಪರಿಗಣನೆಗೆ ತೆಗೆದುಕೊಳ್ಳದೆ ಇತರರಿಗೆ ಹುದ್ದೆಯನ್ನು ನೀಡಲಾಗುತ್ತಿದ್ದು, ನಾಮಕಾವಸ್ಥೆಗೆ ಸಂದರ್ಶನ ನಡೆಸಲಾಗುತ್ತಿದೆ ಎಂದು ಆರೋಪಿಸಿದರು. ಇತರರಿಗೆ ಹುದ್ದೆ ನೀಡುವ ಮೂಲಕ ಮಾಜಿ ಸೈನಿಕರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ಮುಂದಿನ ಒಂದು ತಿಂಗಳೊಳಗೆ ಸರಿಪಡಿಸದಿದ್ದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಉಪಾಧ್ಯಕ್ಷ ಎಸ್.ಸುಧೀರ್ ಮಾತನಾಡಿ, ನಾವು ಯಾರ ವಿರುದ್ಧವು ಇಲ್ಲ, ಸರ್ಕಾರದ ವಿರುದ್ಧವು ಇಲ್ಲ. ನಮಗೆ ಆಗುತ್ತಿರುವ ಅನ್ಯಾಯದ ಕುರಿತು ನ್ಯಾಯ ಕೇಳುತ್ತಿದ್ದೇವೆ. ಕ್ಯಾಂಟಿನ್ನಲ್ಲಿ ಗುಮಾಸ್ತ ಹುದ್ದೆ ಮತ್ತು ಇಸಿಎಚ್ಎಸ್ನಲ್ಲಿ ಪರಿಚಾರಕ ಹುದ್ದೆಯಲ್ಲಿ ನಮಗೆ ಇರುವ ಅವಕಾಶವನ್ನು ನಮಗೆ…






