ಲೇಖಕ: admin

ಮಡಿಕೇರಿ ಸೆ.9 :  ಮಡಿಕೇರಿ ದಸರಾ ಸಂಬಂಧ ಸೆ.11 ರಂದು  ಮಡಿಕೇರಿ ದಸರಾ ಸಮಿತಿಯ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಸಂಪ್ರದಾಯದಂತೆ ನಗರದ ಪೇಟೆ ಶ್ರೀರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿ, ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ  ಸಭೆ ನಡೆಯಲಿದ್ದು,  ದಸರಾ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಜನಪ್ರತಿನಿಧಿಗಳು, ದಶಮಂಟಪ ಮತ್ತು ಕರಗ ಸಮಿತಿಯವರು ಸಾರ್ವಜನಿಕಕರು, ಪತ್ರಕರ್ತರು ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಡಿಕೇರಿ ದಸರಾ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್ ಯಲ್ಲಪ್ಪ  ಕೋರಿದ್ದಾರೆ.

Read More

ಮಡಿಕೇರಿ ಸೆ.9 : ಮಡಿಕೇರಿ ತಾಲ್ಲೂಕು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ನೂತನ ಅಧ್ಯಕ್ಷರಾಗಿ ಡಿ.ಎಸ್.ಸರೋಜ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಐ.ಎ.ಅಕ್ಕಮ್ಮ, ಕಾರ್ಯದರ್ಶಿಯಾಗಿ ಕೆ.ಸಿ.ಇಂದಿರಾ, ಸಹ ಕಾರ್ಯದರ್ಶಿ ಕೆ.ಆರ್.ಸುಜಾತ, ಖಜಾಂಚಿ ಹೆಚ್.ಕೆ.ಉಮಾವತಿ, ವೃತ್ತದ ನಾಯಕಿಯರಾಗಿ ಬಿ.ಬಿ.ಜಯಂತಿ, ಹೆಚ್.ಎಸ್.ಸವಿತ, ಕೆ.ಎಸ್.ಮುತ್ತಮ್ಮ, ಕೆ.ಬಿ.ಧರಣಿ ಹಾಗೂ ಕೆ.ಆರ್.ಅನಿಲ ನೇಮಕಗೊಂಡಿದ್ದಾರೆ. ಈ ಹಿಂದೆ ಇದ್ದ ಸಂಘಟನೆಯಿಂದ ಹೊರ ಬಂದ ಸದಸ್ಯರು ನೂತನ ಸಂಘವನ್ನು ರಚಿಸಿಕೊಂಡಿರುವುದಾಗಿ ಅಧ್ಯಕ್ಷೆ ಡಿ.ಎಸ್.ಸರೋಜ ತಿಳಿಸಿದ್ದಾರೆ.

Read More

ಹುಬ್ಬಳ್ಳಿ ಸೆ.9 : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಯ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮಹದಾಯಿ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ತಯಾರಿದ್ದರೂ, ಕೇಂದ್ರ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ಕ್ಲಿಯರೆನ್ಸ್ ದೊರೆತಿಲ್ಲ. ಇದಕ್ಕೆ ಸಂಬಂಧಿಸಿದ ಎಲ್ಲ ವರದಿಗಳನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದರು. ಜೆಡಿಎಸ್ ಪಕ್ಷಕ್ಕೆ ಯಾವುದೇ ಸಿದ್ಧಾಂತ ಇಲ್ಲ : ಜೆಡಿಎಸ್ , ಬಿಜೆಪಿಯ ಬಿ ಟೀಂ ಎಂಬುದು ಸತ್ಯವಾಗುತ್ತಿದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ನಾನು ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ಹೇಳಿದಾಗ ಅವರು ನನ್ನ ಮೇಲೆ ಸಿಟ್ಟಾಗಿದ್ದರು. ಜನತಾ ದಳ ಜಾತ್ಯಾತೀತ ಎಂದು ಹೆಸರಿಟ್ಟುಕೊಂಡಿರುವ ಪಕ್ಷ ಕೋಮುವಾದಿಗಳ ಜೊತೆ ಒಂದಾಗಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಯಾವ ಕಾರಣಕ್ಕೂ ಬೇರೆ…

Read More

ಸುಂಟಿಕೊಪ್ಪ ಸೆ.9 : ಕ್ಯಾಥೋಲಿಕ್ ಕ್ರೈಸ್ತರ ಮಾತೆ ಮರಿಯಮ್ಮ ಜನ್ಮದಿನೋತ್ಸವದ ಅಂಗವಾಗಿ ದಿವ್ಯ ಅಡಂಬರ ಬಲಿಪೂಜೆಯನ್ನು ಧರ್ಮಗುರುಗಳು ನೇರವೇರಿಸಿದರು. ನೂರಾರು ಸಂಖ್ಯೆಯಲ್ಲಿ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಪ್ರಾರ್ಥನೆ ಹಾಗೂ ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಂಡಿದ್ದರು. ಮಾತೆ ಮರಿಯಮ್ಮನವರ ಜನ್ಮದಿನದ ಬಲಿಪೂಜೆಯನ್ನು ಮೈಸೂರು ವಲಯ ಶೇಷ್ಠಗುರುಗಳಾದ ರೇ.ಮೆ.ಅಲ್ಪೆರ್ಡ್ ಜಾನ್ ಮೆಂಡೋನ್ಸಾ ಹಾಗೂ ಹಿರಿಯ ಗುರುಗಳಾದ ಡೆನ್ನಿಸ್ ಡಿಸೋಜ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ಫಾದರ್ ಅರುಳ್ ಸೆಲ್ವಕುಮಾರ್  ದಿವ್ಯ ಬಲಿಪೂಜೆಯನ್ನು ಸಮರ್ಪಿಸಿದರು. ನಂತರ ಮಾತೆ ಮರಿಯಮ್ಮನವರ ಮೂರ್ತಿಯನ್ನು ಮೆರವಣಿಗೆಯ ಮೂಲಕ ಸಂತ ಮೇರಿ ಶಾಲಾ ಆವರಣದಲ್ಲಿ ಇರಿಸಿ ಪುಷ್ಪನಮನ ಸಲ್ಲಿಸಲಾಯಿತು. ಯೇಸುಕ್ರಿಸ್ತರ ತಾಯಿ ಮೇರಿ ಮಾತೆಯವರ ಜನ್ಮ ಜಯಂತಿ ಮತ್ತು ತೆನೆಹಬ್ಬ (ಮೊಂತಿಪೆಸ್ತ್) ವಿಶ್ವದದ್ಯಾಂತ ಆಚರಿಸಲಾಗುತ್ತಿದ್ದು, ಅದಕ್ಕೆ ಪೂರ್ವಭಾವಿಯಾಗಿ ನಡೆಯುವ 9 ದಿನಗಳ ದಿವ್ಯ ಬಲಿಪೂಜೆ ಹಾಗೂ ನೊವೇನಾ ಪ್ರಾರ್ಥನೆ ಹಾಗೂ ದಿವ್ಯ ಬಲಿಪೂಜೆಯು ಆ.30 ರಿಂದ ವಿಶೇಷ ರೀತಿಯಲ್ಲಿ ಆಚರಿಸಲಾಯಿತು. ನೊವೇನಾ ಪ್ರಾರ್ಥನೆ ಸಂದರ್ಭದಲ್ಲಿ ವಿಶೇಷವಾಗಿ ಮಾತೆ ಮರಿಯಮ್ಮನವರಿಗೆ ವಿವಿಧ ಬಗೆಯ ಸೀರೆಗಳನ್ನು…

Read More

ರಬಾತ್‌: ಆಫ್ರಿಕಾದ ಮೊರಾಕ್ಕೊದಲ್ಲಿ ಮುಂಜಾನೆ ವೇಳೆ ಭಾರೀ ಪ್ರಮಾಣದ ಭೂಕಂಪನ ಸಂಭವಿಸಿದೆ. ಪರಿಣಾಮವಾಗಿ ಅನೇಕ ಕಟ್ಟಡಗಳು ನೆಲಸಮವಾಗಿದ್ದು, ಇಲ್ಲಿಯವರೆಗೆ 296 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮರ್ರಾಕೆಚ್‌ನ ನೈಋತ್ಯಕ್ಕೆ 71 ಕಿ.ಮೀಟರ್‌ ದೂರದಲ್ಲಿ ಭೂಮಿಯಿಂದ 18 ಕಿ,ಮೀಟರ್‌ ಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಇಲಾಖೆ ತಿಳಿಸಿದೆ. ಘಟನೆಯಲ್ಲಿ ನೂರಾರು ಜನರು ಗಾಯಗೊಂಡಿದ್ದಾರೆ. ಮನೆಗಳು, ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಹಲವಾರು ಜನರು ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಗಳು ಭರದಿಂದ ನಡೆಯುತ್ತಿವೆ. ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿಗೆ ಎಂದು ಮೊರಾಕ್ಕೊ ಪೊಲೀಸರು ಹೇಳಿದ್ದಾರೆ.

Read More

ಮಡಿಕೇರಿ ಸೆ.9 :  ಮಕ್ಕಳ ಪೋಷಣೆಯಲ್ಲಿ ತಾಯಂದಿರ ಜವಾಬ್ದಾರಿ ಹೆಚ್ಚಾಗಿದ್ದು, ಭವ್ಯ ಭಾರತದ ಭವಿಷ್ಯ ಹಾಗೂ ಉತ್ತಮ ಸಮಾಜದ ನಿರ್ಮಾಣ ಜವಾಬ್ದಾರಿ ಪೋಷಕರ ಕೈಯಲ್ಲಿದೆ. ಮಕ್ಕಳಿಗೆ ಆಸ್ತಿ  ಮಾಡುವ ಬದಲು ಮಕ್ಕಳನ್ನೇ ಈ ದೇಶದ ಆಸ್ತಿಯನ್ನಾಗಿ ಮಾಡುವಂತಾಗಬೇಕು ಎಂದು ಕೊಡಗು ಪತ್ರಕರ್ತ ಸಂಘದ ಸಂಘಟನಾ ಕಾರ್ಯದರ್ಶಿ ಹಾಗೂ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ  ಚಮ್ಮಟೀರ ಪ್ರವೀಣ್ ಉತ್ತಪ್ಪ ಕರೆ ನೀಡಿದರು. ಮಡಿಕೇರಿಯ ಹೊಸ ಬಡಾವಣೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಪೋಷಣ ಮಾಸಾಚರಣೆಯ ಪೌಷ್ಟಿಕ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಣ್ಣ ವಯಸ್ಸಿನಿಂದಲೇ ಮಕ್ಕಳಿಗೆ ಉತ್ತಮ ನಡೆ ನುಡಿ ಸಂಸ್ಕಾರವನ್ನು ಕಲಿಸಬೇಕಿದೆ. ಇದರಲ್ಲಿ ಪೋಷಕರ ಜವಾಬ್ದಾರಿ ಅಧಿಕ, ಅದರಲ್ಲೂ ತಾಯಂದಿರು ತಮ್ಮ ಮಕ್ಕಳ ಚಲನವಲನಗಳ ಬಗ್ಗೆ ನಿಗಾ ಇಡಬೇಕೆಂದು ಕರೆ ನೀಡಿದರು. ಸಣ್ಣ ವಯಸ್ಸಿನಿಂದಲೇ ಮಕ್ಕಳು ದುಶ್ಚಟಗಳಿಗೆ ಬಲಿಯಾಗದಂತೆ ನೋಡಿಕೊಳ್ಳಬೇಕು, ಪೋಷಕರು  ತಾವು ಕಲಿತಿರುವ ದುಶ್ಚಟಗಳನ್ನು ಮಕ್ಕಳ ಮುಂದೆ ಪ್ರದರ್ಶನ ಮಾಡಬೇಡಿ ಇದನ್ನು ಅವರು ಹಿಂಬಾಲಿಸುತ್ತಾರೆ ಎಂದರು. ಅಂಗನವಾಡಿ…

Read More

ಕಡಂಗ ಸೆ.9 :  ಸೆಪ್ಟೆಂಬರ್ 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಎಸ್‌ಎಸ್‌ಎಫ್ 50ನೇ ವರ್ಷಾಚರಣೆ “ಗೋಲ್ಡನ್ ಫಿಫ್ಟಿ” ಐತಿಹಾಸಿಕ ಮಹಾ ಸಮ್ಮೇಳನದ ಪ್ರಚಾರಾರ್ಥ ಎಸ್‌ಎಸ್‌ಎಫ್   ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಮಾದಕ ವ್ಯಸನದ ವಿರುದ್ಧ ಹಾಗೂ ಗೋಲ್ಡನ್ ಫಿಫ್ಟಿ ಸಂದೇಶ ವಾಹನ ಜಾಥಾ ನಡೆಯಿತು. ಜಿಲ್ಲಾಧ್ಯಕ್ಷ  ಝುಬೈರ್ ಸಅದಿ ಉಸ್ತಾದರ ಪ್ರಾರ್ಥನೆಯೊಂದಿಗೆ ಪೊನ್ನಂಪೇಟೆ ಪಟ್ಟಣದಿಂದ‌ ಪ್ರಾರಂಭಗೊಂಡ ವಾಹನ ಜಾಥಾ ಗೋಣಿಕೊಪ್ಪ, ವಿರಾಜಪೇಟೆ, ಅಮ್ಮತ್ತಿ, ಪಾಲಿಬೆಟ್ಟ, ಸಿದ್ದಾಪುರ, ನೆಲ್ಯಹುದಿಕೇರಿ, ಕುಶಾಲನಗರ, ಕೊಡ್ಲಿಪೇಟೆ, ಶನಿವಾರಸಂತೆ, ಸೋಮವಾರಪೇಟೆ, ಮಾದಾಪುರ, ಸುಂಟಿಕೊಪ್ಪ, ಮಡಿಕೇರಿ, ಮೂರ್ನಾಡು, ಮಾರ್ಗವಾಗಿ ಬಂದು ನಾಪೋಕ್ಲುವಿನಲ್ಲಿ ವಾಹನ ಜಾಥಾ ಸಮಾಪ್ತಿಗೊಂಡಿತು. ಮಾದಕ ವ್ಯಸನದ ವಿರುದ್ಧ ಹಾಗೂ ಗೋಲ್ಡನ್ ಫಿಫ್ಟಿ ಸಮ್ಮೇಳನದ ಕುರಿತು ಭಾಷಣ ನಡೆಸಿದರು. ಭಾಷಣಗಾರರಾಗಿ ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ, ವಿರಾಜಪೇಟೆ ಡಿವಿಷನ್ ಅದ್ಯಕ್ಷ ಕಮರುದ್ದೀನ್ ಅನ್ವಾರಿ ಅಹ್ಸನಿ, ಮಡಿಕೇರಿ ಸೆಕ್ಟರ್ ಅಧ್ಯಕ್ಷ  ಅಬ್ದುಲ್ಲಾ ಹಿಮಮಿ ಸಖಾಫಿ  ಪಾಲ್ಗೊಂಡು,  ಗೋಲ್ಡನ್ ಫಿಫ್ಟಿ…

Read More

ಮಡಿಕೇರಿ ಸೆ.9 :  ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ”ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು. ಪ್ರಶಸ್ತಿಯನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿಯನ್ನು ರಚಿಸಲಾಗುವುದು. 2023 ರ ಅಕ್ಟೋಬರ್ 2 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪೃಶ್ಯತೆ ನಿವಾರಣೆ, ಅಹಿಂಸೆ, ಮಹಿಳಾ ಸಬಲೀಕರಣ, ಗ್ರಾಮೀಣ ನೈರ್ಮಲ್ಯ, ಮದ್ಯಪಾನ ವಿರೋಧಿ ನೀತಿ, ಖಾದಿ ಮತ್ತು ಸ್ವದೇಶಿವಸ್ತು ಬಳಕೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ದಾರ, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ…

Read More

ಕುಶಾಲನಗರ ಸೆ.8 : ಇಲ್ಲಿನ ರಾಜಸ್ಥಾನ ಸಮಾಜದ ಮಹಿಳೆಯರಿಂದ ಶ್ರೀಕೃಷ್ಣಜನ್ಮಾಷ್ಟಮಿ ಎರಡು ದಿನಗಳ ಕಾಲ  ಶ್ರದ್ಧಾಭಕ್ತಿಯಿಂದ ನೆರವೇರಿತು. ರಾಜಸ್ಥಾನ ಸಮಾಜದಲ್ಲಿ ಕೃಷ್ಣ ಹಾಗೂ ರಾಧೆಯನ್ನು ಪ್ರತಿಷ್ಠಾಪಿಸಿ ಒಂದು ದಿನ ಉಪವಾಸ ವೃತ ನಡೆಸಿದ ಮಹಿಳೆಯರು, ಶುಕ್ರವಾರ ಕೃಷ್ಣ ಹಾಗೂ ರಾಧೆಯರ ಭಾವಚಿತ್ರವನ್ನು ಮೆರವಣಿಗೆಯಲ್ಲಿ ಹೊತ್ತೊಯ್ದು  ಕಾವೇರಿ ನದಿಯಲ್ಲಿ ವಿಸರ್ಜಿಸಿದರು. ಮೆರವಣಿಗೆಯುದ್ದಕ್ಕೂ ಮಹಿಳೆಯರು ಶ್ರೀಕೃಷ್ಣನ ಭಜನೆ ಹಾಡುತ್ತಾ ಸಾಗಿ ಭಕ್ತಭಾವ ಮೂಡಿಸಿದರು.

Read More

ಮರಗೋಡು ಸೆ.8 : ಮರಗೋಡು ಹೊಸ್ಕೇರಿ ರಸ್ತೆಯಲ್ಲಿ‌ ಮರಗೋಡು ಗ್ರಾಮ ಕೇಂದ್ರದಿಂದ ಸುಮಾರು 300 ಮೀಟರ್ ದೂರದಲ್ಲಿ ರಸ್ತೆ ಬದಿ ಬೃಹತ್ ಹೊಂಡವೊಂದು ಸೃಷ್ಟಿಯಾಗಿ ಅಪಾಯವನ್ನು ಆಹ್ವಾನಿಸುತ್ತಿದೆ. ಈ ಗುಂಡಿ ರಸ್ತೆಯ ತೀರಾ ಅಂಚಿನಲ್ಲೇ ಇರುವುದರಿಂದ ವಾಹನ ಸವಾರರ ಪಾಲಿಗೆ ಅಕ್ಷರಶಃ ಮರಣ ಗುಂಡಿಯಾಗಿದೆ. ಕೆಲ‌ದಿನಗಳ ಹಿಂದೆ ಕೆಎಸ್ಆರ್ಟಿಸಿ ಬಸ್ ನ ಚಕ್ರವೊಂದು ಗುಂಡಿಗೆ ಸಿಲುಕಿ ಪರದಾಡುವಂತಾಗಿತ್ತು. ಎದುರಿನಿಂದ ಬರುವ ವಾಹನಗಳಿಗೆ ದಾರಿ ನೀಡುವ ಯತ್ನದಲ್ಲಿ ಹಲವು ದ್ವಿಚಕ್ರ ವಾಹನಗಳು ಉರುಳಿ ಬಿದ್ದು ಸವಾರರು ಗಂಭೀರ ಗಾಯಗೊಂಡ ಪ್ರಕರಣಗಳು ನಡೆದಿವೆ. ಹಲವು ಕಾರುಗಳು ಕೂಡ ಗುಂಡಿಗೆ ಸಿಲುಕಿ ದಾರಿಹೋಕರು ಅವುಗಳನ್ಬು ತಳ್ಳಿರುವ ಪ್ರಸಂಗಗಳೂ ನಡೆದಿವೆ. ರಸ್ತೆಯ ಎರಡೂ ದಿಕ್ಕುಗಳು ಇಳಿಜಾರಿನಿಂದ‌ ಕೂಡಿರುವುದರಿಂದ ವಾಹನಗಳು ವೇಗವಾಗಿ ಬಂದು ಅಪಾಯಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಾಗಿದೆ. ಹಾಗಾಗಿ ಈ ಗುಂಡಿಯನ್ನು ತಕ್ಷಣ ಮುಚ್ಚಿ  ಮುಂದಾಗಬಹುದಾದ ಅನಾಹುತ ತಪ್ಪಿಸುವಂತೆ ಮರಗೋಡು ಗ್ರಾಮಸ್ಥರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ.

Read More