ಲೇಖಕ: admin

ಬೆಂಗಳೂರು ಸೆ 8 : ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತೀ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ ಎಂದರು. ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ ಎಂದರು. ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು , ಸಮಾಜವನ್ನು…

Read More

ಮಡಿಕೇರಿ ಸೆ.8 : ಕೆ.ಆರ್ ಎಸ್ ಜಲಾಶಯದ ವಾಸ್ತವ ಸ್ಥಿತಿ ಅರಿಯಲು ಮಾಜಿ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಕೆ.ಆರ್.ಎಸ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಮಾಜಿ ಸಚಿವರಾದ ಗೋವಿಂದ ಕಾರಜೋಳ, ಆರ್.ಅಶೋಕ್ , ಗೋಪಾಲಯ್ಯ, ಸಂಸದೆ ಸುಮಲತಾ ಅಂಬರೀಶ್, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಮಡಿಕೇರಿ ಸೆ.8 : ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ನಾಪತ್ತೆಯಾಗಿದ್ದ ಮಹಿಳೆಯೊಬ್ಬರ ಉಡುಪು ಮತ್ತಿತರ ವಸ್ತುಗಳು ಮಡಿಕೇರಿಯ ಪ್ರವಾಸಿತಾಣ ಅಬ್ಬಿಫಾಲ್ಸ್ ಬಳಿ ಪತ್ತೆಯಾದ ಹಿನ್ನೆಲೆ ಆಕೆಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಬೆಟದ್ಟದಪುರದ ಬಾರಸೆ ಗ್ರಾಮದ ನಿವಾಸಿ ಸರಸ್ವತಿ(33) ಎಂಬುವವರು ನಾಪತ್ತೆಯಾಗಿರುವ ಬಗ್ಗೆ ಅಲ್ಲಿನ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆಕೆಯ ಪಾದರಕ್ಷೆ, ಪರ್ಸ್, ಬಟ್ಟೆಗಳು ಅಬ್ಬಿಫಾಲ್ಸ್ ಬಳಿ ಪತ್ತೆಯಾಗಿದೆ. ಈ ಹಿನ್ನೆಲೆ ಮಡಿಕೇರಿ ನಗರಠಾಣಾ ಪೊಲೀಸರು, ಎನ್‌ಡಿಆರ್‌ಫ್ ಮತ್ತು ಬೆಟ್ಟದಪುರ ಪೊಲೀಸರು ನಾಪತ್ತೆಯಾದ ಮಹಿಳೆೆಗಾಗಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.

Read More

ಮಡಿಕೇರಿ ಸೆ.8 : ವಿಶ್ವಕರ್ಮ ಜಯಂತಿಯನ್ನು ಸೆ.17 ರಂದು ಆಚರಿಸುವ ಸಂಬಂಧ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಜೊತೆ ಚರ್ಚೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸಮಾಜದ ಮುಖಂಡ ಜೊತೆ ಚರ್ಚಿಸಿದ ಬಳಿಕ ಜಿ.ಪಂ.ಸಿಇಒ ಅವರ ಕಚೇರಿಯಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ಸಮ್ಮುಖದಲ್ಲಿ ಸಮಾಲೋಚನೆ ನಡೆಯಿತು. ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಜಿಲ್ಲಾ ಕೇಂದ್ರದಲ್ಲಿಯೇ ಆಯೋಜಿಸಬೇಕು. ತಾಲ್ಲೂಕು ಮಟ್ಟದ ಕಾರ್ಯಕ್ರಮವನ್ನು ತಾಲ್ಲೂಕು ಮಟ್ಟದಲ್ಲಿ ಮಾಡಬಹುದಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿ ತಿಳಿಸಲಾಗುವುದು ಎಂದು ಜಿ.ಪಂ.ಸಿಇಒ ಹೇಳಿದರು. ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಎಸ್.ಜೆ.ದೇವದಾಸ್, ಜಿಲ್ಲಾ ಕಾರ್ಯದರ್ಶಿ ಬಿ.ಬಿ.ನಾಗರಾಜು, ವಿಶ್ವಕರ್ಮ ಸಮಾಜದ ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷ ಎಸ್.ಬಿ.ಯಶವಂತ್, ಶಿಲ್ಪಿ ಮಂಜುನಾಥ ಆಚಾರ್ಯ, ಬಿ.ಕೆ.ಸುದರ್ಶನ, ಕೆ.ಕೆ.ರಮೇಶ್, ಎನ್.ಪಿ.ರಾಜು. ಜಗದೀಶ್ ಆಚಾರ್ಯ, ದಾಮೋದರ ಆಚಾರ್ಯ, ಸಂದ್ಯಾ ಅಶೋಕ್, ವೀಣಾ ಅಶೋಕ್, ಬಿ.ಸಿ.ಅಶೋಕ್ ಆಚಾರ್ಯ, ರವಿ ಆಚಾರ್ಯ, ಸಂದೇಶ್ ಆಚಾರ್ಯ, ಸುರೇಶ್ ಆಚಾರ್ಯ, ಶಾಂತಿ ದೇವದಾಸ್, ಶೋಭ ಯಶವಂತ್, ಪ್ರಕಾಶ್ ಆಚಾರ್ಯ ಇತರರು…

Read More

ಮಡಿಕೇರಿ ಸೆ.8 : ಭಾರತ ದೇಶದ ಪ್ರಜೆಯಾಗಿ ಹೆಮ್ಮೆಪಡಲು ಸರ್ಕಾರ ಪ್ರತಿಯೊಬ್ಬರಿಗೂ ಸುವರ್ಣಾವಕಾಶ ಕಲ್ಪಿಸಿದ್ದು, ಸೆ.15 ರಂದು ಭಾರತ ಸಂವಿಧಾನದ ಪೀಠಿಕೆ ಓದಲು ಹೆಚ್ಚು ಜನರು, ಶಾಲಾ ಕಾಲೇಜುಗಳು, ಸರ್ಕಾರಿ ಕಚೇರಿ, ಸ್ವಯಂ ಸೇವಾ ಸಂಸ್ಥೆಗಳು, ಸಾರ್ವಜನಿಕರು ಆನ್‍ಲೈನ್ ಮೂಲಕ ಸೆ.14 ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದ್ದಾರೆ. ಇದೇ ಸೆ.15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸುವ ನಿಟ್ಟಿನಲ್ಲಿ, ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ಕೆ ನೋಂದಣಿ ಮಾಡಿಕೊಳ್ಳುವ ಕುರಿತು ವಿಡಿಯೊ ಸಂವಾದ ಮೂಲಕ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ನೀಡಿದರು. ಭಾರತ ಸಂವಿಧಾನದ ಪೀಠಿಕೆಯನ್ನು ಸೆ.15 ರಂದು ಬೆಳಗ್ಗೆ 10 ಗಂಟೆಗೆ ಪ್ರತಿಯೊಬ್ಬರೂ ಓದುವ ಮೂಲಕ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಮನವಿ ಮಾಡಿದರು. ಈ ಅವಕಾಶವನ್ನು ಎಲ್ಲರೂ ಉಪಯೋಗಿಸಿಕೊಳ್ಳಬೇಕು. ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು, ಅಲ್ಲದೆ ಸೆ.15 ರಂದು ಬೆಳಗ್ಗೆ 10 ಗಂಟೆಗೆ ಸಂವಿಧಾನದ ಪೀಠಿಕೆಯನ್ನು…

Read More

ಮಡಿಕೇರಿ ಸೆ.8 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 27.56 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.95 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 1751.73 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2979.47ಮಿ.ಮೀ ಮಳೆಯಾಗಿತ್ತು. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 44.30 ಮಿ.ಮೀ. ಕಳೆದ ವರ್ಷ ಇದೇ ದಿನ 40.38 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2586.99 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 4332.32 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 28.28 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 22.07 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1305.71 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 2261.33 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 10.10 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 6.40 ಮಿ.ಮೀ.…

Read More

ಮಡಿಕೇರಿ ಸೆ.8 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ನಡೆಸಲಾಯಿತು. ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಕಚೇರಿಯಿಂದ ಗಾಂಧಿ ಮೈದಾನದವರೆಗೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಸರ್ಕಾರ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು. ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ಕುರಿತು ಕೆ.ಎಂ.ಲೋಕೇಶ್ ಮಾತನಾಡಿದರು. ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮ್ಮದ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ನಗರ ಮಹಿಳಾ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮೂಡ ಮಾಜಿ…

Read More

ಮಡಿಕೇರಿ ಸೆ.8: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯ ಸ್ಟಾಲಿನ್ ಅವರು ನೀಡಿರುವ ಹೇಳಿಕೆಯನ್ನು ಬಿಜೆಪಿಯ ಮಾಜಿ ಶಾಸಕದ್ವಯರು ತೀವ್ರವಾಗಿ ಖಂಡಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕ ಕೆ.ಜಿ.ಬೋಪಯ್ಯ, ತಮಿಳುನಾಡಿನ ಡಿಎಂಕೆ ಪಕ್ಷ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಲೇ ರಾಜಕೀಯಕ್ಕೆ ಬಂದಿದೆ. ಸನಾತನ ಧರ್ಮದ ಕುರಿತ ತಮಿಳುನಾಡು ಸಚಿವ ಉದಯನಿಧಿ ಹೇಳಿಕೆ ಖಂಡನೀಯ. ರಾಜ್ಯದ ಸಚಿವರಾದ ಡಾ.ಜಿ.ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯೂ ಖಂಡನಾರ್ಹವಾಗಿದ್ದು, ದೇಶದ ಸಂವಿಧಾನ ತಮಗೆ ಇಷ್ಟ ಬಂದ ಧರ್ಮವನ್ನು ಅನುಸರಿಸಲು ಅವಕಾಶ ನೀಡಿದೆ. ಆದರೆ ಮತ್ತೊಂದು ಧರ್ಮವನ್ನು ಟೀಕಿಸುವುದಕ್ಕೆ ಅವಕಾಶ ನೀಡಿಲ್ಲ. ಸಚಿವರ ಹೇಳಿಕೆ ಸಂವಿಧಾನ ವಿರೋಧಿಯಾಗಿದ್ದು, ಇವರು ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ‘ಇಂಡಿಯಾ’ ಹೆಸರು ಬ್ರಿಟಿಷರ ಬಳುವಳಿಯಾಗಿದೆ. ಕೊಡಗು ಜಿಲ್ಲೆಗೆ ‘ಕೂರ್ಗ್’, ಮಡಿಕೇರಿಗೆ ‘ಮರ್ಕರಾ’ ಹೀಗೆ ಕೊಡಗಿನಲ್ಲೂ ಅನೇಕ ಊರುಗಳ ಹೆಸರು ಬದಲಾವಣೆಯಾಗಿದೆ. ಭಾರತ ಹೆಸರು ಬದಲಾವಣೆ ವಿಚಾರವಾಗಿ ವೃಥಾ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಕೆ.ಜಿ.ಬೋಪಯ್ಯ…

Read More

ಮಡಿಕೇರಿ ಸೆ.8 : ಬಿಜೆಪಿ ಸರ್ಕಾರದ ರೈತಪರ ಯೋಜನೆ ಮುಂದುವರಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ, ಬಿಜೆಪಿ ರೈತ ಮೋರ್ಚಾದಿಂದ ಮಡಿಕೇರಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡ ಮಾಜಿ ಶಾಸಕರುಗಳಾದ ಕೆ.ಜಿ.ಬೋಪಯ್ಯ ಹಾಗೂ ಎಂ.ಪಿ.ಅಪ್ಪಚ್ಚು ರಂಜನ್ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ, ಭೂಸಿರಿ, ಶ್ರಮಶಕ್ತಿ ಮತ್ತು ರೈತ ಸಂಪದ ಯೋಜನೆಯನ್ನು ಮುಂದುವರೆಸಬೇಕೆಂದು ಒತ್ತಾಯಿಸಿದರು. ಅಪ್ಪಚ್ಚು ರಂಜನ್ ಮಾತನಾಡಿ ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಸ್ಥಗಿತಗೊಳಿಸಿದೆ. 200 ಯೂನಿಟ್ ಉಚಿತ ವಿದ್ಯುತ್ ನೀಡುವುದಾಗಿ ಹೇಳಿ, ವಿದ್ಯುತ್ ದರವನ್ನು ಹೆಚ್ಚಿಸಿದೆ ಎಂದು ಆರೋಪಿಸಿದರು. ಕೆ.ಜಿ.ಬೋಪಯ್ಯ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ನೂರು ದಿನ ಕಳೆದಿದೆ. ಆದರೆ ಈ ನೂರು ದಿನಗಳ ಆಡಳಿತದ ಅನುಭವದಿಂದಾಗಿ ಜನರು ಸರಕಾರಕ್ಕೆ ಹಿಡಿಶಾಪ…

Read More

ಮಡಿಕೇರಿ ಸೆ.8 : ಭಾಗಮಂಡಲದ ಕೊಡಗು ಪ್ರಗತಿಪರ ಜೇನು ಕೃಷಿಕರ ಸಹಕಾರ ಸಂಘದ ನಿರ್ದೇಶಕರ ಸ್ಥಾನಕ್ಕೆ ಸೆ.10 ರಂದು ಚುನಾವಣೆ ನಡೆಯಲಿದ್ದು, ಸಮಾನ ಮನಸ್ಕರ ತಂಡಕ್ಕೆ ಮತದಾರರು ಬೆಂಬಲ ನೀಡಬೇಕೆಂದು ಕೆಪಿಸಿಸಿ ಸದಸ್ಯ ಬೇಕಲ್ ರಮಾನಾಥ್ ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೇನು ಕೃಷಿಯ ಉತ್ತೇಜನ ಮತ್ತು ಕೃಷಿಕರ ಆರ್ಥಿಕ ಸಬಲತೆಗಾಗಿ ಜೇನು ಸಹಕಾರ ಸಂಘವನ್ನು ಹುಟ್ಟು ಹಾಕಲಾಗಿದೆ. ಇಲ್ಲಿನ ಜೇನಿಗೆ ಇಡೀ ವಿಶ್ವದಲ್ಲಿ ಬಹುದೊಡ್ಡ ಬೇಡಿಕೆ ಇದೆ. ಆದರೆ ಸರಿಯಾದ ಮಾರುಕಟ್ಟೆಯ ತಂತ್ರ, ನಿರ್ವಹಣೆಯ ಕೊರತೆ, ಭವಿಷ್ಯದ ಯೋಜನೆಗಳನ್ನು ಕೈಗೊಳ್ಳದೆ ಇರುವುದರಿಂದ ಜೇನು ಕೃಷಿಕರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಈ ಬಾರಿ ಜನರೇ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಬೆಂಬಲಿತ ಸಮಾನ ಮನಸ್ಕರ ತಂಡಕ್ಕೆ ಮತ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಸಮಿತಿ ಸಂಚಾಲಕ ವೆಂಕಟೇಶ್ ಮಾತನಾಡಿ, ಹಿಂದಿನ ಆಡಳಿತ ಮಂಡಳಿಯಿಂದ ಕೊಡಗಿನ ಕೃಷಿಕರಿಗೆ ಲಾಭವಾಗಿಲ್ಲ. 500 ರಿಂದ 600 ರೂ. ಗೆ ಜೇನು ಮಾರಾಟವಾಗುತ್ತಿದೆ. ಬೇರೆಡೆ…

Read More