ಮಡಿಕೇರಿ ಸೆ.8 : ಮಡಿಕೇರಿಯ ವಿದ್ಯಾನಗರದ ಶ್ರೀ ಶಕ್ತಿ ಗಣಪತಿ ದೇವಾಲಯದ 28ನೇ ಗಣೇಶೋತ್ಸವದ ಪ್ರಯುಕ್ತ ಸೆ.19 ರಂದು ಚಿತ್ರಕಲಾ ಸ್ಪರ್ಧೆ ನಡೆಯಲಿದೆ. ಅಂದು ಮಧ್ಯಾಹ್ನ 3 ಗಂಟೆಗೆ ದೇವಾಲಯದ ಆವರಣದಲ್ಲಿ “ಗಣೇಶ” ವಿಷಯ ಕುರಿತು ಚಿತ್ರಕಲೆ ಸ್ಪರ್ಧೆ ನಡೆಯಲಿದ್ದು, 1 ರಿಂದ 8ನೇ ತರಗತಿ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಪ್ರಥಮ ಹಾಗೂ ದ್ವಿತೀಯ ವಿಜೇತರನ್ನು ಆಯ್ಕೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವವರು ಸೆ.17ರ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಗಣಪತಿ ಉತ್ಸವ ಸಮಿತಿ ತಿಳಿಸಿದೆ. ವಿಜೇತರ ಹೆಸರನ್ನು ಸೆ.23 ರಂದು ಘೋಷಿಸಲಾಗುವುದು. ಚಿತ್ರ ಬಿಡಿಸಲು ಬಣ್ಣದ ಪೆನ್ಸಿಲ್ ಮತ್ತು ಕ್ರಯೋನ್ಗಳನ್ನು ಮಾತ್ರ ಅನುಮತಿಸಲಾಗಿದೆ. ಚಿತ್ರಕಲೆಗೆ ಬಳಸುವ ಡ್ರಾಯಿಂಗ್ ಪೇಪರ್ ಅನ್ನು ಸಮಿತಿಯ ಕಡೆಯಿಂದ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9611496538, 8105160547 ಸಂಪರ್ಕಿಸಬಹುದಾಗಿದೆ.
ಲೇಖಕ: admin
ನಾಪೋಕ್ಲು ಸೆ.8 : ಭಾರತ ಮಾತೆಯ ಛದ್ಮವೇಷದಲ್ಲಿ ವಾಟೆಕಾಡು ಸ.ಹಿ.ಪ್ರಾ.ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ರಿಸ್ಪಾ ಗಮನ ಸೆಳೆದಳು. ಮೂರ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ (ಮೇರಾ ಮಿಟ್ಟಿ ಮೇರಾ ದೇಶ್ ) “ನನ್ನ ಮಣ್ಣು ನನ್ನ ದೇಶ” ಭಾರತ ಮಾತೆಯ ಛದ್ಮವೇಷ ಧರಿಸಿ ಎಲ್ಲರ ಪ್ರಸಂಶೆಗೆ ಪಾತ್ರಳಾದಳು. ಈಕೆ ಅಬ್ದುಲ್ ರಜಾಕ್, ರೆಹಾನತ್ ದಂಪತಿಗಳ ಪುತ್ರಿ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಸೆ.8 : ಗೋಣಿಕೊಪ್ಪ ಕಾವೇರಿ ದಸರಾ ಸಮಿತಿ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ ಆಯ್ಕೆಯಾಗಿದ್ದಾರೆ. ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲು ಅಧ್ಯಕ್ಷತೆಯಲ್ಲಿ ನಡೆದ ದಸರಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಶಾಸಕ ಎ.ಎಸ್.ಪೊನ್ನಣ್ಣ ಸಹಕಾರದೊಂದಿಗೆ ಅದ್ದೂರಿ ದಸರಾ ಉತ್ಸವಕ್ಕೆ ಸಭೆಯಲ್ಲಿ ನಿರ್ಧರಿಸಲಾಯಿತು.
ನಾಪೋಕ್ಲು ಸೆ.9 : ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡುವುದು ಮಾತ್ರವಲ್ಲ. ಅವರನ್ನು ಆದರ್ಶ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನಿವೃತ್ತ ಶಿಕ್ಷಕ ಎ.ಜಿ.ಗಣೇಶ್ ಹೇಳಿದರು. ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ ಮಾದಪ್ಪ ಮಾತನಾಡಿ, ಶಿಕ್ಷಕರ ಸ್ಥಾನ ಅತ್ಯಂತ ಪವಿತ್ರವಾದದ್ದು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು. ಮುರ್ನಾಡು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವೇಣು ಅಪ್ಪಣ್ಣ, ಖಜಾಂಚಿ ಸುಬ್ರಮಣಿ, ಪ್ರಾಂಶುಪಾಲರಾದ ದೇವಕ್ಕಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಧಮಯಂತಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ದುಗ್ಗಳ ಸದಾನಂದ.
ಮಡಿಕೇರಿ ಸೆ.8 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆ.9 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ. ಲೋಕ ಅದಾಲತ್ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು…
ಮಡಿಕೇರಿ ಸೆ.8 : ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಹಾನಿಗೆ ಒಳಗಾಗಿದ್ದ ವೀರ ಯೋಧ ಜನರಲ್ ಕೊಡಂದೇರ ಎಸ್.ತಿಮ್ಮಯ್ಯ ಅವರ ಕಂಚಿನ ಪ್ರತಿಮೆಯ ದುರಸ್ತಿ ಕಾರ್ಯ ನಡೆಯುತ್ತಿದ್ದು, ಸಂಸದ ಪ್ರತಾಪ್ ಸಿಂಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೈಸೂರಿನ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರು ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ದುರಸ್ತಿ ಕಾರ್ಯ ನಡೆಸುತ್ತಿದ್ದಾರೆ.
ಮಡಿಕೇರಿ ಸೆ.8 : ಒಂದೇ ಗಿಡದ ಬಾಳೆಗೊನೆಯಲ್ಲಿ ಎರಡು ಬಣ್ಣದ ಬಾಳೆ ಹಣ್ಣು ಬಿಡುವ ಮೂಲಕ ಅಚ್ಚರಿ ಮೂಡಿಸಿದೆ. ಚೆಟ್ಟಳ್ಳಿಯ ಮುಳ್ಳಂಡ ಕರಣ್ ಸೋಮಣ್ಣ ಅವರ ಮನೆಯ ಪಕ್ಕದಲ್ಲಿ ಬೆಳೆದ ಒಂದೇ ಬಾಳೆಗೊನೆಯಲ್ಲಿ ವಿವಿಧ ಜಾತಿಯ ಹಾಗೂ ವಿವಿಧ ಬಣ್ಣದ ಬಾಳೆ ಬಿಡುವ ಮೂಲಕ ಸಾರ್ವಜನಿಕರ ಕುತೂಹಲಕ್ಕೆ ಕಾರಣವಾಗಿದೆ.
ಮಡಿಕೇರಿ ಸೆ.7 : ದಿನಾಂಕ 09-09-2023 ಶನಿವಾರದಂದು ಜೆಸಿಐ ಸಪ್ತಹ-2023ರ ಪ್ರಯುಕ್ತ ಸೆ.9 ರಂದು ಗೋಣಿಕೊಪ್ಪದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ. ಗೋಣಿಕೊಪ್ಪಲುವಿನ ಶ್ರೀ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಹ್ನ 1 ಗಂಟೆಯವರೆಗೆ ನಡೆಯಲಿರುವ ಶಿಬಿರದ ಅಧ್ಯಕ್ಷತೆಯನ್ನು ಜೆಸಿಐ ಪೊನ್ನಂಪೇಟೆ ನಿಸರ್ಗ ಘಟಕದ ಅಧ್ಯಕ್ಷ ನೀತ್ ಅಯ್ಯಪ್ಪ ವಹಿಸಲಿದ್ದಾರೆ. ಕೊಡಗಿನಲ್ಲಿ ರಕ್ತದ ಕೊರತವಿದ್ದು ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡಬೇಕಾಗಿ ಘಟಕದ ಪೂರ್ವಧ್ಯಕ್ಷ ಟಾಟು ಮೊಣ್ಣಪ್ಪ ಪತ್ರಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಪೂರ್ವಅಧ್ಯಕ್ಷರು :- ಟಾಟು ಮೊಣ್ಣಪ್ಪ ನವರು -94492 55081, ಕಾರ್ಯದರ್ಶಿ :- ಚೆಟ್ಟೋಳಿರ ಶರತ್ ಸೋಮಣ್ಣ – 9972538030, ನಿಕಟಪೂರ್ವ ಅಧ್ಯಕ್ಷರು :- ದಿನೇಶ್ ಎ ಪಿ -91489 78919.
ಮಡಿಕೇರಿ ಸೆ.7 : ಮಾದಕ ವಸ್ತು ಮಾರಾಟ ಮಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲಿಸರು, ಆರೋಪಿಗಳಿಂದ 157 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಮೊಣ್ಣಂಗೇರಿ ಗ್ರಾಮದ ಎಂ.ಸಚಿನ್(24), ಮಡಿಕೇರಿ ಇಂದಿರಾನಗರದ ಹೆಚ್.ಎ.ಲೋಕೇಶ್ (22) ಎಂಬುವವರೇ ಬಂಧಿತ ಆರೋಪಿಗಳು. ಮಡಿಕೇರಿ ಹೊಸ ಖಾಸಗಿ ಬಸ್ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿಗಳಿಂದ 157 ಗ್ರಾಂ ಗಾಂಜಾವನ್ನು ಮಾದಕ ವಸ್ತುವಿನೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಿರಾಜಪೇಟೆ ಉಪ ವಿಭಾಗದ ಡಿವೈಎಸ್ಪಿ ಆರ್. ಮೋಹನ್ ಕುಮಾರ್, ಮಡಿಕೇರಿ ನಗರ ವೃತ್ತದ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಮಡಿಕೇರಿ ನಗರ ಠಾಣೆಯ ಎಸ್ಐಗಳಾದ ಶ್ರೀನಿವಾಸ್ ಮತ್ತು ರಾಧಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ. :: ಮಾಹಿತಿ ನೀಡಿ ::: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು…
ಮಡಿಕೇರಿ ಸೆ.7 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆಯನ್ನು ಸೆ.8 ರಂದು ಮಡಿಕೇರಿಯಲ್ಲಿ ಆಚರಿಸಲಾಗುವುದು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ತಿಳಿಸಿದ್ದಾರೆ. ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಯಿಂದ ಗಾಂಧಿ ಮಂಟಪದ ವರೆಗೆ ಮೆರವಣಿಗೆ ನಡೆಸಲಾಗುವುದು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಪಕ್ಷದ ಎಲ್ಲಾ ಹಿರಿಯ ಮುಖಂಡರು, ಮಾಜಿ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು, ಚುನಾಯಿತ ಜನಪ್ರತಿನಿಧಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






