ವಿರಾಜಪೇಟೆ, ಸೆ.7 : ವಚನ ಸಾಹಿತ್ಯ ಕನ್ನಡ ಸಾಹಿತ್ಯದ ಮೇರು ಕಿರೀಟವಾಗಿದ್ದು, ಸಮ ಸಮಾಜದ ಪರಿಕಲ್ಪನೆಗೆ ವಚನಕಾರರ ಹೋರಾಟ ಅದ್ವಿತೀಯ ಎಂದು ವಿರಾಜಪೇಟೆ ತಾಲ್ಲೂಕು ತಹಶೀಲ್ದಾರ್ ಹಾಗೂ ದಂಡಾಧಿಕಾರಿ ಹೆಚ್.ಎನ್.ರಾಮಚಂದ್ರ ಬಣ್ಣಿಸಿದರು. ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ಏಕಲವ್ಯ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ” ಶಾಲಾ ಕಾಲೇಜುಗಳೆಡೆಗೆ ವಚನ ಸಾಹಿತ್ಯದ ನಡಿಗೆ ” ಚಿಂತನಾ ಗೋಷ್ಠಿ ಉದ್ಘಾಟಿಸಿ ಮಾತನಾಡಿದ ಅವರು, ಹನ್ನೆರಡನೇ ಶತಮಾನದ ದಿನಮಾನಗಳಲ್ಲಿ ತಾಂಡವವಾಡುತ್ತಿದ್ದ ಜಾತಿ, ವರ್ಗಬೇಧ, ಮೇಲು – ಕೀಳು, ಬಡವ – ಬಲ್ಲಿದರೆಂಬ ಅಸಮಾನತೆ ತೊಲಗಿಸಲು ಬಸವಾದಿ ಶರಣರು ನಡೆಸಿದ ವಚನ ಕ್ರಾಂತಿ ಅಂದಿನ ಜನಸಾಮಾನ್ಯರ ಬದುಕನ್ನೇ ಬದಲಿಸಿತ್ತು. ಹಾಗೆಯೇ ಬಸವೇಶ್ವರರು ಕೊಟ್ಟ ಕಲಬೇಡ ಕೊಲಬೇಡ ಹುಸಿಯನುಡಿಯಲು ಬೇಡ ಎಂಬ ಸಪ್ತ ಸೂತ್ರ ಇಡೀ ಮಾನವ ಬದುಕಿಗೆ ಕಿರೀಟ ಪ್ರಾಯ ಎಂದು ವಚನಗಳ ಮೂಲಕ ವಿವರಿಸಿದ ರಾಮಚಂದ್ರ, ವಿದ್ಯಾರ್ಥಿಗಳು ಇಂತಹ ವಚನಗಳ ಸಾರವನ್ನರಿತು ಅದರಂತೆ ಉತ್ತಮವಾದ ವ್ಯಕ್ತಿತ್ವ ರೂಪಿಸಿಕೊಳ್ಳಲು ಕರೆ…
ಲೇಖಕ: admin
ಮಡಿಕೇರಿ ಸೆ.7 : ನಗರದ ಬ್ರಹ್ಮಕುಮಾರಿಸ್ ಲೈಟ್ಹೌಸ್ ಸಭಾಂಗಣದಲ್ಲಿ ಪಾವನ ಪರ್ವ ರಕ್ಷಾಬಂಧನದನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಶ್ರೀಮತಿ ರಾಣಿ ಮಾಚಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬ್ರಹ್ಮಾಕುಮಾರಿ ಧನಲಕ್ಷ್ಮಿ ಜಿ ರಕ್ಷಾ ಬಂಧನದ ಆಧ್ಯಾತ್ಮಿಕ ರಹಸ್ಯವನ್ನು ತಿಳಿಸಿದರು. ಜಿಲ್ಲಾ ಸಂಚಾಲಕರಾದ ರಾಜಯೋಗಿನಿ ಬ್ರಹ್ಮಾಕುಮಾರಿ ಗಾಯಿತ್ರಿಜೀ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನೇಕ ಸಹೋದರ ಸಹೋದರಿಯರಿಗೆ ಶ್ರೀರಕ್ಷೆಯನ್ನು ಕಟ್ಟಿ, ಹಣೆಗೆ ಶ್ರೀಗಂಧವನ್ನಿಟ್ಟು ವರದಾನಗಳನ್ನು ನೀಡಿ ಸರ್ವರಿಗೂ ಶುಭ ಕೋರಲಾಯಿತು. ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಅವರಿಗೆ ಈಶ್ವರೀಯ ಸೇವೆಯ ಮಾಹಿತಿ ನೀಡಿ ಶುಭ ಕೋರಲಾಯಿತು. ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳಿಗೆ, ವೈದ್ಯಕೀಯ ಕಾಲೇಜು, ಜಿಲ್ಲಾ ಪೋಲೀಸ್ ಕಛೇರಿ, ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾರಾಗೃಹ, ಬ್ಯಾಂಕುಗಳು, ಶಾಲೆಗಳು, ಬಾಲ ಭವನ ಇತ್ಯಾದಿ ಸ್ಥಾನಗಳಲ್ಲಿ ಈಶ್ವರೀಯ ಸಂದೇಶ ನೀಡಿ ಧ್ಯಾನದ ಜಾಗೃತಿ ಮೂಡಿಸಿ ತಮ್ಮ ನಿಶ್ಯಕ್ತತೆಗಳನ್ನು ದೂರ ಮಾಡಿಕೊಳ್ಳುವ ಸಹಜ ಸಾಧನ ಧ್ಯಾನವೆಂಬ ಅನುಭೂತಿ ಮಾಡಿಸಲಾಯಿತು. ನಗರದಾದ್ಯಂತ ಅನೇಕ ಸ್ಥಾನಗಳಲ್ಲಿ ಭ್ರಾತೃತ್ವದ…
ಮಡಿಕೇರಿ ಸೆ.7 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆ.16 ರಂದು ಮಡಿಕೇರಿಯ ಕಾವೇರಿ ಹಾಲ್ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ತಿಳಿಸಿದರು. ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಸನ್ಮಾನಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 1 ಕೋಟಿ ರೂಪಾಯಿ ಮೊತ್ತದ ಕ್ಷೇಮ ನಿಧಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಕೊಡಗಿನ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ. ಬೆಳ್ಳಿ ಮಹೋತ್ಸವ ಪ್ರಯುಕ್ತ ಹೊರತಲಾರುತ್ತಿರುವ ಸ್ಮರಣ ಸಂಚಿಕೆ ಪಿಂಜರಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ…
ಮಡಿಕೇರಿ ಸೆ.6 : ಮಡಿಕೇರಿ ವಿದ್ಯುತ್ ಉಪ ಕೇಂದ್ರ 66/11 ಕೆವಿ ಯಿಂದ ಹೊರ ಹೋಗುವ ಎಫ್ 12 ರಾಜಾಸೀಟು ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಸೆ.7 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ರಾಜಾಸೀಟು, ಇಂದಿರಾಗಾಂಧಿ, ಚಾಮುಂಡೇಶ್ವರಿನಗರ, ರೇಸ್ಕೋರ್ಸ್ ರಸ್ತೆ, ಹೊಸ ಬಡಾವಣೆ, ಮುಳಿಯ, ವಿದ್ಯಾನಗರ, ಎಫ್ಎಂಸಿ ಕಾಲೇಜು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.
ಮಡಿಕೇರಿ ಆ.06 : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ 2 ಸುತ್ತಿನ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ…
ಮಡಿಕೇರಿ ಸೆ.6 : ಕರ್ನಾಟಕ ಲೋಕಾಯುಕ್ತದ ಕೊಡಗು ಜಿಲ್ಲೆಯ ಅಧಿಕಾರಿಗಳು ಸೆಪ್ಟೆಂಬರ್, 13 ರಂದು ಕುಶಾಲನಗರ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಮತ್ತು ಸೆಪ್ಟೆಂಬರ್, 15 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಯನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ಮಡಿಕೇರಿಯ ದೂ.ಸಂ.08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
ಮಡಿಕೇರಿ ಸೆ.6 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಶ್ರೀಕೃಷ್ಣ ಜನ್ಮಾಷ್ಠಮಿ’ ಕಾರ್ಯಕ್ರಮವನ್ನು ನಗರದ ಗಾಂಧಿ ಭವನದಲ್ಲಿ ಸರಳವಾಗಿ ಆಚರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಶ್ರೀಕೃಷ್ಣ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು. ಕೊಡಗು ಗೌಳಿ ಸಮಾಜದ ಅಧ್ಯಕ್ಷ ಜಿ.ವಿ.ರವಿಕುಮಾರ್, ಜಿ.ಸಿ.ಜಗದೀಶ್, ಜಿ.ಆರ್.ರಾಜು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಜವರಪ್ಪ, ಹೆಬ್ಬಾಲೆ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರಾದ ಎನ್.ವೆಂಕಟ ನಾಯಕ್ ಇತರರು ಇದ್ದರು. ಬಳಿಕ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾತನಾಡಿ, ಶ್ರೀಕೃಷ್ಣನ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಗೌರವ ಮತ್ತು ಭಕ್ತಿ ಇದೆ. ಶ್ರೀಕೃಷ್ಷನ ವೇಷದಲ್ಲಿ ಮಕ್ಕಳನ್ನು ಕಾಣುತ್ತೇವೆ. ಜೊತೆಗೆ ಶ್ರೀಕೃಷ್ಣನನ್ನು ಮಹಾಭಾರತದಲ್ಲಿ ಸಾರಥಿಯಾಗಿ ನೋಡುತ್ತೇವೆ ಎಂದು ತಿಳಿಸಿದರು. ಮಹಾಭಾರತದಲ್ಲಿ ಶ್ರೀಕೃಷ್ಣನ ಒಳ್ಳೆ ಸಂದೇಶ ತಿಳಿಯುತ್ತೇವೆ. ಯಾವುದೇ ಫಲಾಪೇಕ್ಷೆ ಇಲ್ಲದೆ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ ಬದುಕನ್ನು ಉತ್ತಮ ಪಡಿಸಿಕೊಳ್ಳಬೇಕು ಎಂಬ ಸಂದೇಶವನ್ನು ಶ್ರೀಕೃಷ್ಣ ಸಾರಿದ್ದಾರೆ ಎಂದರು. ಜೀವನದಲ್ಲಿ ನಿಂತ ನೀರಾಗದೆ ಹರಿವ ನೀರಿನಂತೆ ಬದುಕನ್ನು…
ಮಡಿಕೇರಿ ಸೆ.6 : ಸರಕಾರಿ ಶಾಲೆಯ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಲ್ಲದೇ, ವಿದ್ಯಾರ್ಥಿಗಳ ಪುಸ್ತಕಗಳನ್ನು ಹರಿದು ಹಾಕಿ ಸ್ಥಳದಲ್ಲೇ ಮದ್ಯ ಸೇವಿಸಿ ವಿಕೃತಿ ಮೆರೆದು ಪರಾರಿಯಾಗಿರುವ ಘಟನೆ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟ್ಟದಳ್ಳ ಸರ್ಕಾರಿ ತಮಿಳು ಶಾಲೆಯಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ಬುಧವಾರ ಶಾಲೆಗೆ ಆಗಮಿಸಿದ ಶಿಕ್ಷಕರಿಗೆ ಕೊಠಡಿಯೊಂದರ ಬೀಗವನ್ನು ಕಬ್ಬಿಣದ ರಾಡಿನಿಂದ ಮುರಿಯಲಾಗಿರುವ ದೃಶ್ಯ ಕಂಡು ಬಂದಿದೆ. ಕೊಠಡಿಯನ್ನು ಪರಿಶೀಲಿಸಿದ ಶಾಲಾ ಮುಖ್ಯ ಶಿಕ್ಷಕ ಅಶ್ರಫ್ ಘಟನೆ ಕುರಿತು ಸಿದ್ದಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಕೊಠಡಿ ಮತ್ತು ಶಾಲೆಯ ಸುತ್ತಮುತ್ತಲು ಪರಿಶೀಲನೆ ನಡೆಸಿದರು. ಕೊಠಡಿಯೊಂದರಲ್ಲಿ ಸಂಗ್ರಹಿಸಿ ಇಡಲಾಗಿದ್ದ ವಿದ್ಯಾರ್ಥಿಗಳ ಪುಸ್ತಕಗಳನ್ನು ಹರಿದು, ಚೆಲ್ಲಾಪಿಲ್ಲಿ ಮಾಡಿರುವ ಕಳ್ಳರು ಸ್ಥಳದಲ್ಲಿಯೇ ಮದ್ಯ ಸೇವಿಸಿರುವುದು ಕಂಡು ಬಂದಿದೆ. ಮದ್ಯ ಮತ್ತು ನೀರಿನ ಬಾಟಲಿ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.
ಮಡಿಕೇರಿ ಸೆ.6 : ಕಳೆದ ಕೆಲವು ದಿನಗಳಿಂದ ಸುಂಟಿಕೊಪ್ಪ ಸಮೀಪ ಕೆದಕಲ್ ಗ್ರಾಮದ ಸುತ್ತಮುತ್ತ ಉಪಟಳ ನೀಡುತ್ತಿದ್ದ ಮತ್ತು ಅರಣ್ಯ ಸಿಬ್ಬಂದಿಯೊಬ್ಬರನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಸೋಮವಾರ ಇಬ್ಬರು ಬೈಕ್ ಸವಾರರ ಮೇಲೆ ದಾಳಿ ಮಾಡಿದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಸಂದರ್ಭ ಅರಣ್ಯ ಸಿಬ್ಬಂದಿ ಗಿರೀಶ್ ಎಂಬುವವರು ಮೃತಪಟ್ಟಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸೂಕ್ತ ಕ್ರಮಕ್ಕೆ ಅರಣ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ದುಬಾರೆಯ ಸಾಕಾನೆಗಳಾದ ಅಜಯ್, ವಿಕ್ರಂ, ಸುಗ್ರೀವ, ಲಕ್ಷ್ಮಣ, ಪ್ರಶಾಂತ್ ಮತ್ತು ಹರ್ಷ ಸಾಕಾನೆಗಳನ್ನು ಬಳಸಿ ಮಂಗಳವಾರದಿಂದಲೇ ಕಾರ್ಯಾಚರಣೆ ನಡೆಸಿದ ಇಲಾಖೆ ಇಂದು ಕೆದಕಲ್ ಸಮೀಪದ ಹೊರೂರು ಎಂಬಲ್ಲಿ ಎಸ್ಟೇಟ್ ಒಂದರ ಒಳಗಿದ್ದ 18 ವರ್ಷದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಯಿತು. ಅರೆವಳಿಕೆ ನೀಡಿ ಸೆರೆ ಹಿಡಿಯಲ್ಪಟ್ಟ ಕಾಡಾನೆಯನ್ನು ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು. ಡಿಎಫ್ಒ ಪೂವಯ್ಯ, ಎಸಿಎಫ್ ಗೋಪಾಲ್, ಸೋಮವಾರಪೇಟೆ…
ಮಡಿಕೇರಿ ಸೆ.6 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಗೆ ರೋವರ್ ಅಂಡ್ ರೇಂಜರ್ ವಿಭಾಗದ ಸಹಾಯಕ ಜಿಲ್ಲಾ ಆಯುಕ್ತರಾಗಿ ಮಂದೆಯಂಡ ಎನ್.ವನಿತ್ ಕುಮಾರ್ ನೇಮಕಗೊಂಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ರೋವರ್ ಲೀಡರ್ ಆಗಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ನಡೆಸಿದ ಸೇವೆ ಹಾಗೂ ರೋವರ್ ವಿದ್ಯಾರ್ಥಿಗಳಿಗೆ ಸಮಾಜ ಸೇವೆಯಲ್ಲಿ ತೊಡಗುವಂತೆ ಮಾಡಿ 8 ರೋವರ್ಸ್ಗಳಿಗೆ ರಾಜ್ಯ ಪುರಸ್ಕಾರ ದೊರೆಯುವಂತೆ ಮಾಡಿದ ವನಿತ್ ಕುಮಾರ್ ಅವರನ್ನು ಸಹಾಯಕ ಆಯುಕ್ತರಾಗಿ ಕರ್ನಾಟಕ ರಾಜ್ಯ ಸಂಸ್ಥೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರಧಾನ ಆಯುಕ್ತರಾದ ಬೇಬಿ ಮ್ಯಾಥ್ಯೂ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಸಹ ಕಾರ್ಯದರ್ಶಿಗಳಾದ ಬೊಳ್ಳಜಿರ ಬಿ ಅಯ್ಯಪ್ಪ ಆದೇಶ ಪ್ರತಿ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟಕರಾದ ದಮಯಂತಿ ಉಪಸ್ಥಿತರಿದ್ದರು.






