ಲೇಖಕ: admin

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಗೆ ಸೂಕ್ತ ದಾಖಲಾತಿ, ಅನುಮತಿ ಸಹಿತ ತೆರಿಗೆ ಪಾವತಿಸದೇ ಹೊರ ರಾಜ್ಯದಿಂದ ಆಗಮಿಸಿದ್ದ ವಾಹನಗಳಿಗೆ ದಂಡ ವಿಧಿಸುವ ಮೂಲಕ ಕೊಡಗು ಪ್ರಾದೇಶಿಕ ಸಾರಿಗೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಜಿಲ್ಲಾ ಚೆಕ್ ಪೋಸ್ಟ್‍ಗಳಲ್ಲಿ ಈ ಕುರಿತು ತಪಾಸಣೆ ತೀವ್ರಗೊಳಿಸಿದ ಪರಿಣಾಮ ಅಕ್ಟೋಬರ್ 1ರಿಂದ ನವೆಂಬರ್ 19ರವರೆಗೆ 1 ಕೋಟಿ 46 ಲಕ್ಷ ರೂ. ದಂಡ ವಿಧಿಸಿ ರಾಜಸ್ವ ಸಂಗ್ರಹಿಸಲಾಗಿದೆ ಎಂದು ಕೊಡಗು ಜಿಲ್ಲಾ ಪ್ರಾದೇಶಿಕ ಸಾರಿಗೆ ಇಲಾಖೆ ಆಯುಕ್ತ ಸತೀಶ್ ಅವರು ತಿಳಿಸಿದ್ದಾರೆ. ಸಾಮಾನ್ಯವಾಗಿ ಅಕ್ಟೋಬರ್‍ನಿಂದ ಜನವರಿ ತಿಂಗಳನ್ನು ಟೂರಿಸಂ ತಿಂಗಳು ಎಂದು ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ ಜಿಲ್ಲೆಯ ಚೆಕ್ ಪೋಸ್ಟ್‍ಗಳಲ್ಲಿ ಸಾರಿಗೆ ಇಲಾಖೆ ನಿರೀಕ್ಷಕರನ್ನು ನಿಯೋಜಿಸಿ ಹೊರ ರಾಜ್ಯದ ವಾಹನಗಳ ದಾಖಲಾತಿಗಳ್ನು ಪರಿಶೀಲಿಸಲಾಗುತ್ತದೆ. ಈ ಸಂದರ್ಭ ನೂರಾರು ವಾಹನಗಳು ತೆರಿಗೆ ಪಾವತಿಸದಿರುವುದು, ಸೂಕ್ತ ಅನುಮತಿ ಪಡೆಯದಿರುವುದು ಕಂಡು ಬಂದ ಕಾರಣ ದಂಡ ವಿಧಿಸುವ ಮೂಲಕ 1 ಕೋಟಿ 46 ಲಕ್ಷ ರೂ. ರಾಜಸ್ವ…

Read More

ಸುಂಟಿಕೊಪ್ಪ ನ.22 NEWS DESK : ಸಮಾಜ ಸೇವಕ ಬಾಪ್ಪುಟ್ಟಿ ಅವರು ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಟ್ರ್ಯಾಕ್‍ಶೂಟ್ ಅನ್ನು ವಿತರಿಸಿದರು. ಗದ್ದೆಹಳ್ಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 40 ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಶೂಟ್ ಅನ್ನು ವಿತರಿಸಿ ಮಾತನಾಡಿದ ಅವರು ಸರಕಾರಿ ಶಾಲೆಯಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಶಾಲೆಯ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಬೇಡಿಕೆಯನ್ನು ಸಲ್ಲಿಸಿದ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಟ್ರ್ಯಾಕ್‍ಶೂಟ್ ವಿತರಿಸಲಾಗಿದೆ ಎಂದರು. ವಿದ್ಯಾರ್ಥಿಗಳು ಉತ್ತಮ ಭವಿಷ್ಯದ ಪ್ರಜೆಗಳಾಗಿ ಮೂಡಿಬರಲೆಂದು ಅವರು ಹಾರೈಸಿದರು. ಸುಂಟಿಕೊಪ್ಪ ಹಿರಿಯ ಪತ್ರಕರ್ತರಾದ ಬಿ.ಡಿ.ರಾಜುರೈ ಮಾತನಾಡಿ ಸಮಾಜ ಸೇವೆಯಲ್ಲಿ ನಿರಂತವಾಗಿ ತಮ್ಮನ್ನು ತೊಡಗಿಸಿಕೊಂಡಿರುವ ಸಮಾಜ ಸೇವಕ ಬಾಪ್ಪು ಅವರು ಈ ಹಿಂದೆಯೇ ಕೊವಿಡ್, ಪ್ರಾಕೃತಿಕ ವಿಕೋಪ ಸಂದರ್ಭ ನಿರಾಶ್ರಿತರು ಮತ್ತು ನಿರ್ಗತಿಕರು ಮತ್ತು ಅನಾಥರಿಗೆ ತಮ್ಮ ಕೈಯಲಾದ ನೆರವು ನೀಡಿದ್ದು ಅವರ ಸೇವೆ ಇತರರಿಗೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ಶಾಲಾ ಶಿಕ್ಷಕಿ ಮೀನಾಕುಮಾರಿ, ಮಹಮ್ಮದ್…

Read More

ಮಡಿಕೇರಿ ನ.22 NEWS DESK  : ಎನ್‍ಸಿಸಿ ರೈಝಿಂಗ್ ಡೇ ಪ್ರಯುಕ್ತ ನಗರದ ಕೊಡಗು ವಿದ್ಯಾಲಯದ ಎನ್‍ಸಿಸಿ ಕೆಡೆಟ್ ಗಳು ಮಡಿಕೇರಿಯ ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ‘ಸ್ವಚ್ಛ ಕೊಡಗು, ಸುಂದರ ಕೊಡಗು’ ಅಭಿಯಾನ ನಡೆಸಿದರು. ಪ್ರಯಾಣಿಕರಿಗೆ ಬಸ್‌ನಲ್ಲಿ ಕಸವನ್ನು ಹೊರಗೆ ಎಸೆಯಬಾರದು ಎಂದು ಕೆಡೆಟ್ ಗಳು ಮನವಿ ಮಾಡಿದರು. ಸರ್ಕಾರಿ ಹಾಗೂ ಖಾಸಗಿ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕೈಗೊಂಡರು. ಶಾಲೆಯ ಪ್ರಾಂಶುಪಾಲರಾದ ಕೆ.ಎಸ್.ಸುಮಿತ್ರ, ಆಡಳಿತ ವ್ಯವಸ್ಥಾಪಕ ರವಿ ಪಿ., ಶಾಲೆಯ ಎನ್‌.ಸಿ.ಸಿ ಅಧಿಕಾರಿ ಹಾಗೂ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಕೆಡೆಟ್‌ಗಳೊಂದಿಗೆ ಭಾಗವಹಿಸಿದರು.

Read More

ಮಡಿಕೇರಿ ನ.22 NEWS DESK : ಸಾಹಿತ್ಯ ಲೋಕದಲ್ಲಿ ಅನುವಾದ ಕೃತಿಗೆ ಅದರದ್ದೇ ಆದ ಮಹತ್ವವಿದೆ. ಅನುವಾದ ಕೃತಿ ಎರಡು ಕಾಲಘಟ್ಟ, ಸಂಸ್ಕøತಿ ಮತ್ತು ಎರಡು ಭಾಷೆಗಳ ನಡುವೆ ಸಂಪರ್ಕ ಸೇತುವೆಯ ರಾಯಭಾರಿಯಾಗಿ ಕೆಲಸ ಮಾಡುತ್ತದೆ ಎಂದು ಲೇಖಕಿ ಐಚಂಡ ರಶ್ಮಿ ಮೇದಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೊಡವ ಮಕ್ಕಡ ಕೂಟದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ನಡೆದ ತಾವು ರಚಿಸಿರುವ “ಕೊಡಗ್ ಸಂಸ್ಥಾನ v/s ಬ್ರಿಟಿಷ್ ಸಾಮ್ರಾಜ್ಯ” ಕೊಡವ ಅನುವಾದ ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೂಲ ಕೃತಿಯ ಲೇಖಕರು ಹಾಗೂ ಅನುವಾದಕರಿಗೂ ಮಹತ್ವ ಇದೆ ಎಂಬುವುದನ್ನು ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ದೀಪಭಾಸ್ತಿಯವರು ತೋರಿಸಿಕೊಟ್ಟಿದ್ದಾರೆ. ಅನುವಾದ ಎಂದರೆ ಮರುಸೃಷ್ಟಿ ಎಂದರ್ಥ, ಮೂಲ ಕೃತಿಯ ತಿರುಳನ್ನು ನಾವು ಬೇರೆ ಬೇರೆ ಭಾಷೆಗಳಲ್ಲಿ ಹೊರತಂದಾಗ ಅದು ಹೆಚ್ಚು ಹೆಚ್ಚು ಜನರನ್ನು ತಲುಪುತ್ತದೆ ಮತ್ತು ಕೃತಿಗೂ ಉತ್ತಮವಾದ ಸ್ಪಂದನೆ ದೊರೆಯುತ್ತದೆ. ಆದರೆ ಅನುವಾದ ಮಾಡುವವರಿಗೆ ಎರಡೂ ಭಾಷೆಗಳ ಮೇಲೆ ಹಿಡಿತವಿರಬೇಕು ಮತ್ತು ಮೂಲಕೃತಿಗೆ…

Read More

ಮಡಿಕೇರಿ ನ.22 NEWS DESK : ಎಸ್.ಎಂ.ಎಸ್ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆದ ಕಲೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಮತ್ತು ಕ್ರೀಡಾಸ್ಪರ್ಧೆ ನಡೆಯಿತು. ಇದರಲ್ಲಿ ವಿರಾಜಪೇಟೆಯ ಕಾವೇರಿ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಗೆಲುವನ್ನು ಸಾಧಿಸುವ ಮೂಲಕ ಪ್ರಥಮ ರನ್ನರ್ಸ್ ಟ್ರೋಫಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ. ರಸ ಪ್ರಶ್ನೆ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ ಸೃಷ್ಟಿ ಬಿ.ಎಸ್, ಶ್ರೀವತ್ಸ ಯು.ಎಸ್, 9ನೇ ತರಗತಿ ವಿದ್ಯಾರ್ಥಿ ಉನ್ನತಿ ಎಂ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡರು. ಕಲಾಕೃತಿ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿ ಹನಿಯ ಎ, 8ನೇ ತರಗತಿ ವಿದ್ಯಾರ್ಥಿ ಗಳಾದ ಆರ್ನವ್ ವಿ, ಅಕ್ಷರ ಸಂತೋಷ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡರು. ನೃತ್ಯ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ ಹನಾ ಫಲಕ್, ಸಾಯೋಜ್ಯ ಪಿ,ಸುಹಾನಿ ರಾಜ್ ಪುರೋಹಿತ್, ಹೈಜಾ ಬಿ. ಐ, ಬೊಳ್ಳೆಪಂಡ ದೀಪ್ತಿ ತಂಗಮ್ಮ, 9ನೇ ತರಗತಿ ವಿದ್ಯಾರ್ಥಿಗಳಾದ ಕೂಡoಡ ನಯಾನಿಕ ಎಸ್, ಸಾಹಿತ್ಯ ಪಿ. ಜಿ, ಜೀವನ್ಯ ಎಂ. ಡಿ, ಅಯ್ಯಮಂಡ…

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲೆಗೆ ಆಗಮಿಸಿರುವ ರಾಜ್ಯ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣ ಅವರನ್ನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸ ರಾಜು,  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಪಕ್ಷದ ಪ್ರಮುಖರು ಶಾಂತಪ್ಪ, ಚಂದ್ರಮೌಳಿ ಉಪಸ್ಥಿತರಿದ್ದರು.

Read More

ಮಡಿಕೇರಿ ನ.22 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ‘ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್.ಎಂ.ರೇವಣ್ಣ ಉದ್ಘಾಟಿಸಿದರು. ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮೈಸೂರು ವಿಭಾಗ ಕರ್ನಾಟಕ ರಾಜ್ಯ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಷ ಅಮರನಾಥ್, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಕೊಡಗು ಜಿಲ್ಲೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ,ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಆಹಾರ ಇಲಾಖೆ ಜಂಟಿ ನಿರ್ದೇಶಕರಾದ ಮಂಟೆಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ…

Read More

ಮಡಿಕೇರಿ ನ.22 NEWS DESK : ಶನಿವಾರಸಂತೆ ವಿದ್ಯುತ್ ವಿತರಣಾ 66/11 ಕೆ.ವಿ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3-ಶನಿವಾರಸಂತೆ ಟೌನ್ ಫೀಡರ್‍ನಲ್ಲಿ ನವೆಂಬರ್, 23 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊಡಗು ವಿದ್ಯುತ್ ಜಾಲದ ಬಲವರ್ಧನೆಯ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಈ ಫೀಡರ್‍ನಿಂದ ಹೊರಹೊಮ್ಮುವ ಶನಿವಾರಸಂತೆ ಟೌನ್ ಫೀಡರ್, ಶನಿವಾರಸಂತೆ ಪಟ್ಟಣ, ಕೆ.ಆರ್.ಸಿ ಸರ್ಕಲ್, ಅಡ್ಡಶೆಟ್ಟಳ್ಳಿ, ಶೆಟ್ಟಿಗನಹಳ್ಳಿ, ಮಾದ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯ ಮತ್ತು ಪಾಲನೆ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ನ.22 NEWS DESK : ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಭಾವಿ ಸಭೆಯು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎನ್.ಎಸ್ ಭೋಸರಾಜು, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ,  ಜಿಲ್ಲಾಧಿಕಾರಿ ವೆಂಕಟ್ ರಾಜ್, ಜಿ.ಪಂ ಸಿಇಓ ಆನಂದ್ ಪ್ರಕಾಶ್ ಮೀನಾ, ಜಿಲ್ಲಾವರಿಷ್ಠ ಅಧಿಕಾರಿ ರಾಮರಾಜನ್, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೇಶವ್ ಕಮತ್, ಮಾಜಿ ಅಧ್ಯಕ್ಷರು ಟಿ.ಪಿ.ರಮೇಶ್, ತಾಲೂಕು ಅಧ್ಯಕ್ಷರು ರಾಜೇಶ್ ಪದ್ಮನಾಭ, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಮಡಿಕೇರಿ ನ.22 NEWS DESK : ಇತ್ತೀಚಿಗೆ ನಿಧನರಾದ ವಿರಾಜಪೇಟೆ ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿಯ ಚೆಯ್ಯಂಡಾಣೆ ಭಾಗದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಪೊಕುಲ್ರ0ಡ ಸಿದ್ಧಾರ್ಥ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ಸಂದರ್ಭ ವಲಯ ಅಧ್ಯಕ್ಷರು ಕೋಡಿರ ವಿನೋದ್ ನಾಣಯ್ಯ, ಪಂಚಾಯಿತಿ ಸದಸ್ಯರು ಸುಬೈರ್, ಮಮ್ಮದ್, ಪಕ್ಷದ ಪ್ರಮುಖರು ಶೈಲಾ ಕುಟ್ಟಪ್ಪ, ಪ್ರಕಾಶ್ ಉಪಸ್ಥಿತರಿದ್ದರು.

Read More