ವಿರಾಜಪೇಟೆ ಸೆ.6 : ಪರಿಸರದಲ್ಲಿ ನದಿಗಳು ಬಹುಮುಖ್ಯ ಪಾತ್ರವಹಿಸುತ್ತವೆ. ನದಿಗಳ ಹಂಗಿಲ್ಲದೆ ಮನುಷ್ಯರು ಬದುಕುವುದು ಸಾಧ್ಯವಿಲ್ಲ. ಅರ್ಧ ದಕ್ಷಿಣ ಭಾರತವನ್ನು ಸಲಹುವ ಕಾವೇರಿ ನದಿಯ ಹರಿವು ಶೇ.40 ರಷ್ಟು ಕಡಿಮೆಯಾಗಿದೆ ಎಂದು ವರದಿಗಳು ಹೇಳುತ್ತಿವೆ. ಹಾಗಾಗೀ ನದಿಮೂಲದ ರಕ್ಷಣೆಗೆ ಸರ್ಕಾರ ಒತ್ತು ನೀಡಬೇಕು ಎಂದು ಪತ್ರಕರ್ತೆ ಉಷಾಪ್ರೀತಮ್ ಹೇಳಿದರು. ವಿರಾಜಪೇಟೆಯ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವಿರಾಜಪೇಟೆ ಕಾವೇರಿ ಕಾಲೇಜು ಸಭಾಂಗಣದಲ್ಲಿ ಏರ್ಪಡಿಸಿದ್ದ ಕೊಡಗು ಜಿಲ್ಲೆಗೆ ಸಂಬಂಧಿಸಿದ ಪರಿಸರದ ಕುರಿತಾದ ಸುಲೋಚನಾ ಡಾ.ಎಂ.ಜಿ ನಾಗರಾಜ್ ಅವರು ಸ್ಥಾಪಿಸಿರುವ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಉಪನ್ಯಾಸಕರಾಗಿ ಮಾತನಾಡಿದರು. ಕಾವೇರಿ ನದಿಯ ಹರಿವು ಯಾಕಾಗೀ ಕಡಿಮೆಯಾಗಿದೆ ಎನ್ನುವ ನಿಟ್ಟಿನಲ್ಲಿ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರಗಳು ವೈಜ್ಞಾನಿಕ ಅಧ್ಯಯನಕ್ಕೆ ಮುಂದಾಗಬೇಕು. ನದಿಯ ಹರಿವನ್ನು ಕಡಿಮೆಯಾಗಲು ಏನೇನು ಅಡೆತಡೆಗಳಾಗಿವೆ ಎಂಬುದನ್ನು ವೈಜ್ಞಾನಿಕವಾಗಿ ಪತ್ತೆಹಚ್ಚುವ ಮೂಲಕ ಕಾವೇರಿ ಎಂದಿನಂತೆ ಮೈದುಂಬಿ ಹರಿಯುವಂತೆ ಮಾಡಿದರೆ ಪರಿಸರದಲ್ಲಿ ಸಾಕಷ್ಟು ಸಮಸ್ಯೆಗಳು ತನ್ನಿಂದಾತಾನೇ ಸರಿಹೋಗುತ್ತವೆ. ಆನೆ-ಮಾನವ ಸಂಘರ್ಷದ ಹಿಂದೆ ಇರುವ ನಿಜವಾದ…
ಲೇಖಕ: admin
ಕಡಂಗ ಸೆ.6 : ಎಸ್ವೈಎಸ್ ಮತ್ತು ಎಸ್ಕೆಎಸ್ಎಸ್ಎಫ್ ಶಾಖಾ ವತಿಯಿಂದ ಹತ್ತನೇ ವಾರ್ಷಿಕ ಮಜ್ಲಿಸುನ್ನೂರ್ ಹಾಗೂ ಇಸ್ಲಾಮಿಕ್ ಕಥಾ ಪ್ರಸಂಗ ಕಾರ್ಯಕ್ರಮ ನಡೆಯಿತು. ಕಡಂಗ ಶಾದಿ ಮಹಲ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ನಾಯಿಬ್ ಕಾಜಿ ಅಬ್ದುಲ್ಲಾ ಮುಸ್ಲಿಯರ್ ಎಡಪಾಲ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾತ್ ಅಧ್ಯಕ್ಷ ಅಬ್ದುಲ್ಲ ನಿರ್ವಹಿಸಿದರು. ಕೇರಳದ ಪ್ರಖ್ಯಾತ ಝುಬಿರ್ ಮಾಸ್ಟರ್ ಮತ್ತು ಸಂಗಡಿಗರು ಕಥಾಪ್ರಸಂಗವನ್ನು ವಿವರಿಸಿದರು. ಖತೀಬ್ ಉಸ್ತಾದರಾದ ಲತೀಫ್, ಲತೀಫಿ ಪ್ರಾರ್ಥನೆ ನೆರವೇರಿಸಿದರು. ಕಾರ್ಯಕ್ರಮ ದಲ್ಲಿ ಕೊಡಗು ಜಿಲ್ಲಾ ಅಮಿಲಾ ಅಧ್ಯಕ್ಷ ಹ್ಯಾರಿಸ್ ಅವರನ್ನು ಸನ್ಮಾನಿಸಲಾಯಿತು. ಎಸ್ ಕೆ ಎಸ್ ಎಸ್ ಎಫ್ ಸಮಿತಿ ಸದಸ್ಯರಾದ ಇಸಾಕ್, ಇಕ್ಬಾಲ್, ಸಮದ್, ಅಬೂಬಕರ್, ಹನೀಫ್ ಫೈಜಿ, ಯುಸಫ್ ಮುಸ್ಲಿಯಾರ್, ಹನೀಫ್ ಉಸ್ತಾದ್, ಮಾಹಿನ್ ದಾರಿಮಿ, ಅಬ್ದುಲ್ ರೆಹಮಾನ್, ಇಬ್ರಾಹಿಂ, ಜುನೈದ್, ಮಮ್ಮು ,ಉಸ್ಮಾನ್ ಹಾಜರಿದ್ದರು. ಮದರಸ ಮುಖ್ಯೋಪಾಧ್ಯಾಯರಾದ ಶುಹೈಬ್ ಫೈಜಿ ಸ್ವಾಗತಿಸಿದರು. ವರದಿ : ನೌಫಲ್ ಕಡಂಗ
ಮಡಿಕೇರಿ ಸೆ.6 : ಕನ್ನಡ ಸಾಹಿತ್ಯ ಪರಿಷತ್ತಿನ ಕುಶಾಲನಗರ ತಾಲ್ಲೂಕು ಘಟಕದ ಪದಗ್ರಹಣ ಸಮಾರಂಭವು ಸೆ.10 ರಂದು ಕುಶಾಲನಗರದಲ್ಲಿ ನಡೆಯಲಿದೆ ಎಂದು ಘಟಕದ ನಿಯೋಜಿತ ಅಧ್ಯಕ್ಷ ಕೆ.ಎಸ್.ನಾಗೇಶ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಕುಶಾಲನಗರದ ಕಲಾ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಎಂ.ಪಿ.ಕೇಶವ ಕಾಮತ್ ಅವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಪಾಲ್ಗೊಳ್ಳಿದ್ದಾರೆ. ಸಭಾ ಕಾರ್ಯಕ್ರಮಕ್ಕೂ ಮೊದಲು ಕೊಪ್ಪಗೇಟ್ ಬಳಿಯಿಂದ ಯದುವೀರ್ ಒಡೆಯರ್ ಅವರಿಗೆ ಅದ್ದೂರಿ ಸ್ವಾಗತ ಕೋರಲಾಗುವುದು. ಅಲ್ಲಿಂದ ಕಲಾ ಭವನದವರೆಗೆ ಮೆರವಣಿಗೆ ಮೂಲಕ ವೇದಿಕೆಗೆ ಕರೆ ತರಲಾಗುವುದು ಎಂದರು. ಕನ್ನಡ ಸಾಹಿತ್ಯ ಪರಿಷತ್ ಗೌರವ ಸಲಹೆಗಾರ ಹಾಗೂ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಕುಶಾಲನಗರ ಕಲಾ…
ಮಡಿಕೇರಿ ಸೆ.6 : ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ 50ನೇ ವರ್ಷದ ಸ್ವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಸದಸ್ಯ ಮಡಿಕೇರಿಯ ಪಿ.ಎಂ.ರವಿ ಅವರನ್ನು ಸನ್ಮಾನಿಸಲಾಯಿತು. ತುಳು ಭಾಷೆ, ಸಾಹಿತ್ಯ, ಸಂಸ್ಕೃತಿ , ಲಿಪಿ, ಆಚಾರ ವಿಚಾರಗಳ ಬೆಳವಣಿಗೆಗೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ತಮ್ಮದೇ ಆದ ಕೊಡುಗೆ ನೀಡಿರುವ ಪಿ.ಎಂ.ರವಿ ಅವರ ಸಾಧನೆಯನ್ನು ಗುರುತಿಸಿ ಮಂಗಳೂರಿನ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ದಕ್ಷಿಣ ಕನ್ನಡ ಭಾಗದ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರು, ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್ ನ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮಡಿಕೇರಿ ಸೆ.6 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಗೌಡ ಜನಾಂಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸೆ.28 ರಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯ ಕುಮಾರ್, ಅಂದು ಬೆಳಗ್ಗೆ 10 ಗಂಟೆಗೆ ನಗರದ ಗೌಡ ವಿದ್ಯಾ ಸಂಘದ ಸಂಭಾಗಣದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ. ಎಲ್ಕೆಜಿ ಯಿಂದ 1ನೇ ತರಗತಿ ವಿದ್ಯಾರ್ಥಿಗಳಿಗೆ ಛದ್ಮವೇಷ, 2ರಿಂದ 4ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ (ವಿದ್ಯಾ ಸಂಘದ ಕಟ್ಟಡವನ್ನು ಚಿತ್ರಿಸುವುದು), 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ “ಗೌಡ ಮನೆತನದ ಹೆಸರು” ಹೇಳುವ ಸ್ಪರ್ಧೆ ನಡೆಯಲಿದೆ. 8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ “ಗೌಡ ಸಂಸ್ಕೃತಿ”ಯ ಬಗ್ಗೆ ಪ್ರಬಂಧ (ಎರಡು ಪುಟಗಳಿಗೆ ಮೀರದಂತೆ), ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ “ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲಾ ಅರೆಭಾಷೆ ಗೌಡರ ಪಾತ್ರ” (ಎರಡು ಪುಟಗಳು ಮೀರದಂತೆ) ಸ್ಪರ್ಧೆ ಏರ್ಪಡಿಸಲಾಗಿದೆ.…
ಮಡಿಕೇರಿ ಸೆ.6 : ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ. 10 ರಂದು “ಮೊಸರು ಕುಡಿಕೆ ಒಡೆಯುವ ಸ್ಪರ್ಧೆ” ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ದೇವಾಲಯದ ಆವರಣದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ 5 ವರ್ಷ ದೊಳಗಿನ ಮಕ್ಕಳಿಗೆ ಛದ್ಮ ವೇಷ ಸ್ಪರ್ಧೆ ಏರ್ಪಡಿಸಲಾಗಿದೆ. ಛದ್ಮ ವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳು ದೂರವಾಣಿ ಸಂಖ್ಯೆ 9482037525, 9449696355 ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ದೇವಾಲಯದಲ್ಲಿ ನಡೆಯುವ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಆಡಳಿತ ಮಂಡಳಿ ಕೋರಿದೆ.
ಮಡಿಕೇರಿ ಸೆ.6 : ಅರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಶ್ರದ್ಧಾಭಕ್ತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು. ಬಿಳಿಯಾರು ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಉದ್ಘಾಟಿಸಿದರು. ಸಮಿತಿಯ ಅಧ್ಯಕ್ಷ ಮಂಜುನಾಥ ಬಿಳಿಯಾರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ ಪ್ರಾಂಶುಪಾಲ ಕೆ.ಆರ್.ಗಂಗಾಧರ್, ನಿವೃತ ಪೋಲಿಸ್ ಪದ್ಮಯ್ಯ ಪೂಜಾರಿಮನೆ, ಜನಪ್ರಕಾಶ್, ಸುಳ್ಯ ತಾಲ್ಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ್ ಪೈಕ, ಮಹೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು. ಕೆ.ಪಿ.ಕುಸುಮಾದರ ಸ್ವಾಗತಿಸಿ, ಆನಂದ ಬಿಳಿಯಾರು ಕಾರ್ಯಕ್ರಮ ನಿರೂಪಿಸಿದರು.
ತುಮಕೂರು ಸೆ 6: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಕ್ಕಳು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ…
ಸೋಮವಾರಪೇಟೆ ಸೆ.6 : ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಾಲೇಜಿನ ಆಂತರಿಕ ಗುಣಮಟ್ಟ ಖಾತ್ರಿ ಕೋಶ ಮತ್ತು ಉದ್ಯೋಗ ಮಾಹಿತಿ ಘಟಕದ ವತಿಯಿಂದ, ಉನ್ನತ ಶಿಕ್ಷಣ ಮತ್ತು ಉದ್ಯೋಗ ಮಾಹಿತಿ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯ ಮೇಜರ್ ಸತೀಶ್ ಮಾತನಾಡಿ, ಜೀವನದಲ್ಲಿ ಯಶಸ್ಸುಗಳಿಸಬೇಕಾದರೆ, ವಿದ್ಯಾರ್ಥಿ ದೆಸೆಯಲ್ಲಿ ಸ್ಪಷ್ಟವಾದ ಗುರಿ ಹೊಂದಿರುವುದು ಮತ್ತು ಗುರಿಯನ್ನು ತಲುಪುವ ನಿಟ್ಟಿನಲ್ಲಿ ಅವಿರತವಾದ ಶ್ರಮಪಡುವುದು ಅತ್ಯಾವಶ್ಯಕ. ಇಂದಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಯಶಸು ಗಳಿಸುವುದು ಅಸಾಧ್ಯವೇನಲ್ಲ. ಗ್ರಾಮೀಣ ಹಿನ್ನೆಲೆಯವರು, ಕನ್ನಡ ಮಾಧ್ಯಮ ವಿದ್ಯಾರ್ಥಿಗಳು, ಆರ್ಥಿಕವಾಗಿ ದುರ್ಬಲರು ಇತ್ಯಾದಿ ಋಣಾತ್ಮಕ ವಿಚಾರಗಳನ್ನು ಬದಿಗಿಟ್ಟು ನಿರಂತರ ಪರಿಶ್ರಮ ಪಡಬೇಕಿದೆ. ಕಲಿಕೆಗೆ ಬಡವ ಬಲ್ಲಿದ ಎಂಬ ತಾರಾತಮ್ಯ ಇಲ್ಲ ಎಂದರು. ಯಶಸ್ಸುಗಳಿಸುವ ನಿಟ್ಟಿನಲ್ಲಿ ಅಡ್ಡದಾರಿಗಳನ್ನು ಹುಡುಕುವ ವ್ಯರ್ಥ ಪ್ರಯತ್ನ ಬಿಟ್ಟು ಮುನ್ನೆಡೆಯಬೇಕಿದೆ. ನಿರಂತರ ಪರಿಶ್ರಮಪಟ್ಟಲ್ಲಿ ಯಾವುದೇ ಸಾಧನೆ ಮಾಡಲು ಸಾಧ್ಯ. ವಿದ್ಯಾರ್ಥಿ ದೆಸೆಯಲ್ಲಿ ಎದುರಾಗುವ ಅನವಶ್ಯಕ ಪ್ರಲೋಚನೆಗಳತ್ತ ಆಕರ್ಷಿತರಾಗದೇ ಗುರಿಯ ಕಡೆ ಗಮನ ಹರಿಸಿ,…
ಸೋಮವಾರಪೇಟೆ ಸೆ.6 : ಕಿರಗಂದೂರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ತಾರಾ ಸುಧೀರ್, ಉಪಾಧ್ಯಕ್ಷರಾಗಿ ಎಂ.ಎಂ.ಬೆಳ್ಳಿಯಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಡಾ.ಮಂಜುನಾಥ್ ಜೆ.ಶೆಟ್ಟಿ ಕಾರ್ಯನಿರ್ವಹಿಸಿದರು. ಪಿಡಿಒ ರಜನಿ, ಮಾಜಿ ಅಧ್ಯಕ್ಷ ರಘು, ಮಾಜಿ ಉಪಾಧ್ಯಕ್ಷೆ ಸುಧಾರಾಣಿ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸುಧೀರ್, ಪ್ರಮುಖರಾದ ಬಿ.ಕೆ.ರಮೇಶ್, ಎಸ್.ಎಂ.ಪೂವಯ್ಯ, ಎಚ್.ಬಿ.ಶಿವಕುಮಾರ್, ರಾಜ್ಕುಮಾರ್, ಕೌಶಿಕ್, ರೋಷನ್, ಎಸ್.ಪಿ.ಪೊನ್ನಪ್ಪ, ಎಸ್.ಕೆ.ಪೂವಯ್ಯ, ಚಿದಾನಂದ ಸೇರಿದಂತೆ ಇತರರು ಇದ್ದರು.






