ಶ್ರೀ ಕೃಷ್ಣ ಜನ್ಮಾಷ್ಟಮಿಯ ಅನಂತ ಶುಭಾಶಯಗಳು….. ::: ಭಗವಾನ್ ಶ್ರೀ ಕೃಷ್ಣನ ಕುರಿತ ವಿಶಿಷ್ಟವಾದ ಮಾಹಿತಿ ::: 1) ಕೃಷ್ಣ ಹುಟ್ಟಿದ್ದು 5253 ವರ್ಷಗಳ ಹಿಂದೆ. 2)ಜನ್ಮ ದಿನಾಂಕ ಜುಲೈ 19 ಕ್ರಿ.ಪೂ 3228 3) ತಿಂಗಳು : ಶ್ರಾವಣ 4) ದಿನ : ಅಷ್ಟಮಿ 5) ನಕ್ಷತ್ರ : ರೋಹಿಣಿ 6) ದಿನ : ಬುಧವಾರ 7) ಸಮಯ : 00:00 A.M. 8) ಶ್ರೀ ಕೃಷ್ಣ 126 ವರ್ಷ 8 ತಿಂಗಳು 7 ದಿನಗಳ ಕಾಲ ಬದುಕಿದ್ದ. 9) ಮರಣ ದಿನ 18 ಫೆಬ್ರವರಿ ಕ್ರಿಪೂ 3102 10) ಕೃಷ್ಣ 89 ವರ್ಷದವನಿದ್ದಾಗ ಕುರುಕ್ಷೇತ್ರ ಯುದ್ಧ ನಡೆಯಿತು. 11) ಕುರುಕ್ಷೇತ್ರ ಯುದ್ಧ ನಡೆದು 36 ವರ್ಷಗಳ ಬಳಿಕ ಕೃಷ್ಣನ ಮರಣವಾಯಿತು. 12) ಕುರುಕ್ಷೇತ್ರ ಯುದ್ಧವು ಮೃಗಾಶಿರ ಶುಕ್ಲ ಏಕಾದಶಿ ಕ್ರಿಪೂ 3139ರಲ್ಲಿ ಆರಂಭವಾಯಿತು( 8 ಡಿಸೆಂಬರ್). ಡಿಸೆಂಬರ್ 25 ಕ್ರಿಪೂ 3139ರಂದು ಯುದ್ಧ ಕೊನೆಗೊಡಿತು. 13) ಜಯದ್ರಥನ ಸಾವಿನ…
ಲೇಖಕ: admin
ಮಡಿಕೇರಿ ಸೆ.6 : ಉತ್ತಮ ಪ್ರಜೆಗಳನ್ನು ರೂಪಿಸುವಲ್ಲಿ ಸತತ ಪರಿಶ್ರಮ ಪಡುತ್ತಿರುವ ಶಿಕ್ಷಕ ವೃಂದದ ನೆರವಿಗೆ ಸಕಾ೯ರದೊಂದಿಗೆ ಸಮಾಜ ಬಾಂಧವರು ಕೂಡ ಮುಂದಾಗುವ ಮೂಲಕ ಶಿಕ್ಷಕರಿಗೆ ಸಲ್ಲಬೇಕಾದ ಗೌರವವನ್ನು ಸಮಪಿ೯ಸಬೇಕಾಗಿದೆ ಎಂದು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಹೇಳಿದ್ದಾರೆ. ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಆಯೋಜಿತ ಕಾಯ೯ಕ್ರಮದಲ್ಲಿ ರೋಟರಿಯ ಪ್ರತಿಷ್ಟಿತ ನೇಷನ್ ಬಿಲ್ಡರ್ಸ್ ಪ್ರಶಸ್ತಿಯನ್ನು ಸಾಧಕರಾದ ಐವರು ಶಿಕ್ಷಕರಿಗೆ ಪ್ರದಾನ ಮಾಡಿ ಮಂಥರ್ ಗೌಡ ಮಾತನಾಡಿದರು. ಜೀವನವಿಡೀ ಮಕ್ಕಳ ಶ್ರೆಯೋಭಿವೃದ್ಧಿಗಾಗಿ ತಮ್ಮ ಎಲ್ಲಾ ಸುಖಸಂತೋಷಗಳನ್ನೂ ಶಿಕ್ಷಕರು ಬದಿಗಿಡುತ್ತಾರೆ. ವಿದ್ಯೆ ಕಲಿಸುವುದೇ ಶಿಕ್ಷಕರಿಗೆ ಮುಖ್ಯ ಉದ್ದೇಶದಂತಿರುತ್ತದೆ. ಇಂಥ ಪರಿಶ್ರಮದ ಕಾಯಕಜೀವಿಗಳ ಸೇವೆಯನ್ನು ಸಮಾಜ ಯಾವುದೇ ಕಾರಣಕ್ಕೂ ಮರೆಯಬಾರದು ಎಂದೂ ಶಾಸಕರು ಹೇಳಿದರು. ವಿದ್ಯಾಥಿ೯ಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಮೂಲಕ ಅನೇಕ ಸಾಧಕರನ್ನು ಸಮಾಜಕ್ಕೆ ಶಿಕ್ಷಕರು ಕೊಡುಗೆಯಾಗಿ ನೀಡುತ್ತಾರೆ. ಇಂಥ ಶಿಕ್ಷಕರನ್ನು ಗುರುತಿಸಿ ಅವರಿಗೆ ನೇಷನ್ ಬಿಲ್ಡಸ್೯ ಪ್ರಶಸ್ತಿಯನ್ನು ರೋಟರಿ ಸಂಸ್ಥೆ ನೀಡುವ ಮೂಲಕ ಮಹತ್ವದ ಯೋಜನೆಗೆ…
ಸುಂಟಿಕೊಪ್ಪ ಸೆ.6 : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲ್ಲೂಕು ಮಟ್ಟದ ಬಾಸ್ಕೆಟ್ಬಾಲ್ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಕುಶಾಲನರ ತಾಲೂಕಿನ ಕೂಡಿಗೆ ಮೋರಾರ್ಜಿ ದೇಸಾಯಿ ಶಾಲಾ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಾಥಮಿಕ ವಿಭಾಗದ ಬಾಲಕರ ಬಾಸ್ಕೆಟ್ ಬಾಲ್ ಫೈನಲ್ ಪಂದ್ಯದಲ್ಲಿ ಕೂಡಿಗೆ ಮೊರಾರ್ಜಿ ದೇಸಾಯಿ ಪ್ರಾಥಮಿಕ ಶಾಲೆಯನ್ನು ಸುಂಟಿಕೊಪ್ಪ ಸಂತ ಮೇರಿ ತಂಡವು 10-2 ಪಾಯಿಂಟ್ ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ. ಪ್ರೌಢಶಾಲಾ ಬಾಲಕರ ಬಾಸ್ಕೆಟ್ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿರುದ್ಧ 14-06 ಅಂಕಗಳಿಗೆ ಸೋಲಿಸಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಈ ತಂಡಗಳು ಪಾಲ್ಗೊಳ್ಳಲಿದೆ. ಸಂಸ್ಥೆಯ ಮುಖ್ಯಸ್ಥರಾದ ರೆ.ಫಾ.ಅರುಳ್ ಸೆಲ್ವಕುಮಾರ್, ಮುಖ್ಯೋಪಾದ್ಯಾಯರಾದ ಸೇಲ್ವರಾಜ್, ದೈಹಿಕ ಶಿಕ್ಷಣ ಶಿಕ್ಷಕ…
ಬೆಂಗಳೂರು: ಭಾರತದಲ್ಲಿ ಮೊದಲ ಬಾರಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ಬೆಂಗಳೂರಿನ ಮಲ್ಲೇಶ್ವರಂ ವಾರ್ಡ್ನಲ್ಲಿ ಫುಟ್ಪಾತ್ ಅಡಿಯಲ್ಲಿ ಟ್ರಾನ್ಸ್ಫಾರ್ಮರ್ ಸೆಂಟರ್ ಕೇಂದ್ರ ಸ್ಥಾಪಿಸಿದೆ. ಬೆಂಗಳೂರು ಜನ-ಜಾನುವಾರುಗಳಿಗೆ ವಿದ್ಯುತ್ ಅವಘಡಗಳಿಂದ ತಪ್ಪಿಸುವುದು ಸೇರಿ ಪಾದಚಾರಿ ಮಾರ್ಗಗಳಲ್ಲಿ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸುವ ಕಾರ್ಯಕ್ಕೆ ಗುಡ್ ಬೈ ಹೇಳಿದ್ದು, ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರದ 15ನೇ ಕ್ರಾಸ್ ನಲ್ಲಿ 500 ಕೆವಿಎ ಸಾಮರ್ಥ್ಯದ ‘ಭೂಗತ ವಿದ್ಯುತ್ ಪರಿವರ್ತಕ’ವನ್ನು ಅಳವಡಿಸಲಾಗಿದೆ. ಬೆಸ್ಕಾಂ ಮತ್ತು ಬಿಬಿಎಂಪಿ ಸಹಯೋಗದಲ್ಲಿ 1.97 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ‘ಭೂಗತ ವಿದ್ಯುತ್ ಪರಿವರ್ತಕ’ಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್ ಮಂಗಳವಾರ ಚಾಲನೆ ನೀಡಿದರು. ಬೆಸ್ಕಾಂನಲ್ಲಿನ ತಾಂತ್ರಿಕ ನಾವಿನ್ಯತಾ ಕೇಂದ್ರದ (ಟಿಐಟಿ) ಉಪ ಪ್ರಧಾನ ವ್ಯವಸ್ಥಾಪಕ ಕೆ. ಬಾಲಾಜಿ ನೇತೃತ್ವದ ತಂಡವು ತಾಂತ್ರಿಕ ಕೆಲಸಗಳನ್ನು ಮಾಡಿದೆ. ಈ ಯೋಜನೆಯ ಸಿವಿಲ್ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ಹಾಗೂ ಬೆಸ್ಕಾಂ 1.33 ಕೋಟಿ…
ನಾಪೋಕ್ಲು ಸೆ.6 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಕುರಿತು ಅರಿವು ಮೂಡಿಸುವ ಸಲುವಾಗಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು. ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಕಾರ್ಯಕ್ರವನ್ನು ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಉದ್ಘಾಟಿಸಿ, ದುಶ್ಚಟಗಳಿಂದ ಸಮಾಜದಲ್ಲಿ ಆಗುವ ಸಾಧಕ ಬಾಧಕ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಧನಂಜಯ ಅಗೋಳಿಕಜೆ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು. ಈ ಸಂದರ್ಭ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ, ನಾಪೋಕ್ಲು ಗ್ರಾ.ಪಂ ಉಪಾಧ್ಯಕ್ಷ ಕುಲ್ಲೇಟಿರ ಹೇಮಾವತಿ ಅರುಣ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಎ.ಹಾರಿಸ್, ಕಾಲೇಜು ಪ್ರಭಾರ ಪ್ರಾಂಶುಪಾಲ ವಿಜಿತಾ, ಮೇಲ್ವಿಚಾರಕರಾದ ಸುನಿಲ್, ಸೇವಾ ಪ್ರತಿನಿಧಿ ಉಮಾಲಕ್ಷ್ಮಿ, ಗೀತಾ, ಪವಿತಾ ಸದಸ್ಯೆ ಪೊನ್ನಮ್ಮ, ಕಾಲೇಜು ಬೋಧಕರು, ವಿದ್ಯಾರ್ಥಿ ವೃಂದ ಹಾಜರಿದ್ದರು. ವರದಿ : ದುಗ್ಗಳ ಸದಾನಂದ
ಮಡಿಕೇರಿ ಸೆ.6 : ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರತೀ ವರ್ಷದಂತೆ ಈ ಬಾರಿಯೂ ತಾ.6 ರಂದು (ಇಂದು) ದೇವಾಲಯದಲ್ಲಿ ನಡೆಯಲಿದೆ. ಇಂದು (ಬುಧವಾರ) ರಾತ್ರಿ 10 ಗಂಟೆಯಿಂದ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 12 ಗಂಟೆಗೆ ಮಹಾಪೂಜೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕೃಷ್ಣ ಆರಾಧನೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.
ನಾಪೋಕ್ಲು ಸೆ.6 : ದಾರ್ಶನಿಕ, ತತ್ವಜ್ಞಾನಿ, ಶಿಕ್ಷಣ ತಜ್ಞ, ಪ್ರಾಧ್ಯಾಪಕ, ಕುಲಪತಿಗಳಾಗಿ ರಾಧಾಕೃಷ್ಣ ಅವರು ಸಲ್ಲಿಸಿದ ಅಪ್ರತಿಮ ಸೇವೆ ಸ್ಮರಣೀಯ ಎಂದು ನಿರ್ದೇಶಕ ಕಲ್ಯಾಟಂಡ ಪೂಣಚ್ಚ ಹೇಳಿದರು. ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಶಾಲೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ ಮಾತನಾಡಿ, ಶಿಕ್ಷಕರ ಸ್ವಾರ್ಥ ರಹಿತ ಸೇವೆಯಿಂದ ವಿದ್ಯಾರ್ಥಿಗಳು ಮುಂದಿನ ಸಮಾಜದ ಉತ್ತಮ ಪ್ರಜೆಗಳಾಗಬಲ್ಲರು. ಡಾ.ರಾಧಾಕೃಷ್ಣನ್ ತಮ್ಮ ಆದರ್ಶಗಳ ಮೂಲಕ ಸಮಾಜಕ್ಕೆ ಮಾದರಿಯಾದರು. ಅವರ ಜನ್ಮದಿನವನ್ನು ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ ಎಂದ ಅವರು ಮುಂದಿನ ಪ್ರಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಮಹತ್ತರವಾದುದು ಎಂದರು. ಹಿರಿಯ ಶಿಕ್ಷಕಿ ಮುಂಡಂಡ ಕವಿತಾ ಅಯ್ಯಣ್ಣ, ಶಿಕ್ಷಕಿ ಮರ್ಲಿನ್ ಪ್ರಿಯಾ ಮಾತನಾಡಿದರು. ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ನಿರ್ದೇಶಕರಾದ ಬೊಳ್ಳಚೆಟ್ಟಿರ ಸುರೇಶ್ ಉಪಸ್ಥಿತರಿದ್ದರು. ಶಿಕ್ಷಕರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಮತ್ತು…
ನಾಪೋಕ್ಲು ಸೆ.6 : ಜಿಲ್ಲಾ ಮಟ್ಟದ ವಾಲಿಬಾಲ್ ಸ್ಪರ್ಧೆಯಲ್ಲಿ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ಮೂಡೇರ ಕಾಳಯ್ಯ ಹಾಗೂ ದೈಹಿಕ ಶಿಕ್ಷಕಿ ಸರಿತಾ ತರಬೇತಿ ನೀಡಿದ್ದಾರೆ. ವರದಿ : ದುಗ್ಗಳ ಸದಾನಂದ
ಮಡಿಕೇರಿ ಸೆ.6 : ಚೇರಂಬಾಣೆ ವೃತ್ತ, ಶಿಶು ಅಭಿವೃದ್ಧಿ ಯೋಜನೆ ಮಡಿಕೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವಕೀಲರ ಸಂಘ ಕೊಡಗು, ಬೆಟ್ಟಗೇರಿ ಗ್ರಾ.ಪಂ ಸಹಯೋಗ ದೊಂದಿಗೆ ಅಪ್ಪಂಗಳ ಸಮುದಾಯ ಭವನದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರ ಸಪ್ತಾಹ, ಮಾತೃ ವಂದನ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಾನಸಿಕ, ಭೌತಿಕ ಹಾಗೂ ದೈಹಿಕವಾಗಿ ಆರೋಗ್ಯದ ಬೆಳವಣಿಗೆ ಆಗಬೇಕೆಂದು ಯೂನಿಸೆಫ್ ಚಿಂತನೆಯಾಗಿದೆ. ಭಾರತದ ಸಂವಿಧಾನದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಕೈಕಟಕುವಂತೆ ಪೌಷ್ಟಿಕಾಂಶ ದೊರಕಬೇಕೆಂಬುದು ತಿಳಿಸಲಾಗಿದೆ. ಪೌಷ್ಟಿಕತೆ ಎನ್ನುವುದು ಕೇವಲ ಪ್ರಾಪ್ತ ವಯಸ್ಸಿನವರಿಗೆ ಮಾತ್ರವಲ್ಲದೆ ಪ್ರಸವಪೂರ್ವ ಮಗುವಿನಿಂದಲೂ ಉತ್ತಮ ಪೌಷ್ಟಿಕತೆ ಪ್ರಾರಂಭವಾಗುತ್ತದೆ. ಅದಕ್ಕಾಗಿ ಸರ್ಕಾರದ ಯೋಜನೆಗಳನ್ನು ಸಮಾಜಕ್ಕೆ ಹತ್ತಿರವಾಗಿರುವ ಅಂಗನವಾಡಿ ಕೇಂದ್ರಗಳ ಮೂಲಕ ವಿತರಣೆಯಾಗುತ್ತದೆ ಎಂದು ತಿಳಿಸಿದರು. ಬಡತನ ನಿರ್ಮೂಲನೆ ಬಗ್ಗೆ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಯೋಜನೆಯಾದ ಉಚ್ಚ…
ಸೋಮವಾರಪೇಟೆ, ಸೆ.6: ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ಬೋಧಕೇತರ ನೌಕರರ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಡಾ.ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಸ್ಥಳೀಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬೆಳ್ಳಿಯಪ್ಪ ಮಾತನಾಡಿ, ಭಾರತದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಗೌರವಾರ್ಥವಾಗಿ ಅವರ ಜನ್ಮದಿನವಾದ ಸೆ.5 ರಂದು ಶಿಕ್ಷಕರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಸಮಾಜದಲ್ಲಿ ಶಿಕ್ಷಕರಿಗೆ ವಿಶೇಷ ಸ್ಥಾನವಿದೆ. ಮನುಷ್ಯನನ್ನು ಮನುಷ್ಯನನ್ನಾಗಿ ಮಾಡುವವನು ಗುರು. ಮಾನವ ಜೀವನದಲ್ಲಿ ಶಿಕ್ಷಕನ ಸ್ಥಾನವು ದೇವರು ಮತ್ತು ಪೋಷಕರಿಗಿಂತ ಮೇಲಿದೆ ಎಂದು ಬಣ್ಣಿಸಿದರು. ಶಿಕ್ಷಣ ಸಂಯೋಜಕ ಕೆ.ಬಿ.ರಾಧಾಕೃಷ್ಣ, ಕಛೇರಿಯ ಪತ್ರಾಂಕಿತ ಅಧಿಕಾರಿ ಎಂ.ಆರ್.ಕಿರಣ್, ಅಧೀಕ್ಷಕ ಸಿ.ಪಿ.ದಾಮೋದರ್, ಸರ್ಕಾರಿ ನೌಕರರ ಸಂಘದ ಖಜಾಂಚಿ ವಿ.ಜಿ.ದಿನೇಶ್, ತಾಲ್ಲೂಕು ಬೋಧಕೇತರರ ನೌಕರರ ಸಂಘದ ಅಧ್ಯಕ್ಷ ಹೆಚ್.ಆರ್.ಸುರೇಶ್, ಉಪಾಧ್ಯಕ್ಷ ಹೆಚ್.ಟಿ.ರಾಜೇಶ್ , ನಿರ್ದೇಶಕ ಮೋಹನ್ ದಾಸ್, ಕಛೇರಿ ಸಿಬ್ಬಂದಿಗಳಾದ ಟಿ.ಬಿ.ಚಿದಾನಂದ, ಶೇಷಾದ್ರಿ ಎಲ್. ಸ್ವಾಮಿ, ಪಿ.ಎಸ್. ಭುವನೇಶ್ ಇತರರು ಹಾಜರಿದ್ದರು.






