ಲೇಖಕ: admin

ಮಡಿಕೇರಿ ಸೆ.6 :  ಮುಂದಿನ ಶೈಕ್ಷಣಿಕ ವರ್ಷದಿಂದ ಕೊಡಗು ವಿಶ್ವವಿದ್ಯಾಲಯವು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುವ ಯೋಜನೆಯನ್ನು ರೂಪಿಸಿಕೊಂಡಿದೆ. ಮಾತ್ರವಲ್ಲ ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ತಲಾ ಒಂದೊಂದು ಲಾಂಗ್ವೇಜ್ ಲ್ಯಾಬ್ ಗಳನ್ನು ರೂಪಿಸಲಾಗುವುದು. ಜೊತೆಯಲ್ಲಿ ಕರ್ನಾಟಕ ಸರ್ಕಾರದ ಕಲಿಕೆಯೊಂದಿಗೆ ಕೌಶಲ್ಯ ಎಂಬ ಯೋಜನೆಯನ್ನು ಕೊಡಗು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗಾಗಿ ಪರಿಚಯಿಸಲಾಗುವುದು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರು ನುಡಿದರು. ಕರ್ನಾಟಕ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಫೋರ್ಕ್ ಟೆಕ್ನೊಲಜಿ ಹಾಗೂ ಕೊಡಗು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಎರಡು ವಾರಗಳ ಅಧ್ಯಾಪಕರ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ  ಅವರು, ಅಧ್ಯಾಪಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಶಿಕ್ಷಕರ ದಿನಾಚರಣೆ ಕೇವಲ ಒಂದು ದಿನದ ಸಂಭ್ರಮವಾಗಬಾರದು. ಬದಲಾಗಿ…

Read More

ಮಡಿಕೇರಿ ಸೆ.5 : ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್, 8 ರಂದು ಬೆಳಗ್ಗೆ 11 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆಯಲಿದೆ. ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ನೇತೃತ್ವದಲ್ಲಿ ಸಾಕ್ಷರ ಧ್ವಜಾರೋಹಣ ಮತ್ತು ಸಾಕ್ಷರತಾ ಪ್ರಮಾಣ ವಚನದ ಮೂಲಕ ನೆರವೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪಂಚಾಯತ್ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.  

Read More

ಮಡಿಕೇರಿ ಸೆ.5 : ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡಿ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾಗಿದೆ. ಆ ನಿಟ್ಟಿನಲ್ಲಿ ಶಿಕ್ಷಕ ವೃತ್ತಿಗೆ ತನ್ನದೇ ಆದ ಗೌರವ ಸ್ಥಾನವಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಹೇಳಿದರು. ನಗರದ ಕೊಡಗು ಗೌಡ ಸಮಾಜದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಕರ ಸೇವೆಯನ್ನು ಯಾರೂ ಸಹ ಮರೆಯುವುದಿಲ್ಲ. ಪುಸ್ತಕ ಮೂಲಕ ಪಾಠ ಮಾಡುವುದಕ್ಕೂ, ಮನಸ್ಸಿನ ಮೂಲಕ ಪಾಠ ಮಾಡುವುದಕ್ಕೂ ಬಹಳ ವ್ಯತ್ಯಾಸವಿದೆ. ಆ ನಿಟ್ಟಿನಲ್ಲಿ ಮಕ್ಕಳ ಜ್ಞಾನಾರ್ಜನೆ ಹೆಚ್ಚಿಸುವಲ್ಲಿ ಶಿಕ್ಷಕರ ಸೇವೆ ಮಹತ್ವದ್ದಾಗಿದೆ ಎಂದರು. ಶಿಕ್ಷಕರು ಹಲವು ಮೂಲ ಸೌಲಭ್ಯಗಳ ಕೊರತೆಯ ನಡುವೆಯೂ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ಕಲಿಸಲು ಪ್ರಯತ್ನಿಸುತ್ತಾರೆ. ಮಕ್ಕಳನ್ನು ಸರಿದಾರಿಗೆ ತರಲು…

Read More

ಮಡಿಕೇರಿ ಸೆ.5 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮುಂದಿಟ್ಟಿರುವ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು. ಕೇಂದ್ರ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಸಮಯಾವಕಾಶ ಕೋರಿದ ಹಿನ್ನೆಲೆ ಕೋರ್ಟ್ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಿತು. ಆ.3 ರಂದು ನಡೆದ ವಿಚಾರಣೆ ಸಂದರ್ಭ ಮೂವರು ಪ್ರತಿವಾದಿಗಳು 4 ವಾರಗಳಲ್ಲಿ ಉತ್ತರ ನೀಡುವಂತೆ ಕೋರ್ಟ್ ನಿರ್ದೇಶನ ನೀಡಿತ್ತು. ಇಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಅರ್ಜಿಯನ್ನು ಆಲಿಸಿದರು. ಅರ್ಜಿದಾರರಾದ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ ಪರ ವಕೀಲ ಕೀರನ್ ನಾರಾಯಣ್ ವಾದ ಮಂಡಿಸಿದರು. ಸಹಾಯಕ ಸಾಲಿಸಿಟರ್ ಜನರಲ್ ಶಾಂತಿ ಭೂಷಣ್ ಅವರು ಪ್ರತಿವಾದಿಗಳ ಒಕ್ಕೂಟದ ಸರ್ಕಾರದ ಪರವಾಗಿ ವಾದಿಸಿದರು. ಎನ್.ಯು.ನಾಚಪ್ಪ ಅವರು…

Read More

ಮಡಿಕೇರಿ ಸೆ.5 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಢ ರ್ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಸೆ.7 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ತಾಳತ್ತಮನೆ, ಉಡೋತ್ತುಮೊಟ್ಟೆ, ಚೇರಂಬಾಣೆ, ಅಪ್ಪಂಗಳ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Read More

ಮಡಿಕೇರಿ ಸೆ.5 : 33/11ಕೆವಿ ಎಂಯುಎಸ್‍ಎಸ್ ಮೂರ್ನಾಡು ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಸೆ.6 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಆದ್ದರಿಂದ ಪಾರಾಣೆ, ನಾಪೋಕ್ಲು, ಹೊದ್ದೂರು, ಮರುಗೋಡು, ಮೂರ್ನಾಡು, ಹಾಕತ್ತೂರು, ಕಾಂತೂರು, ಹೊಡವಾಡ, ಚೆಯ್ಯಂಡಾಣೆ, ಕಕ್ಕಬೆ, ನೆಲಜಿ, ಪಾಲೂರು, ಯವಕಪಾಡಿ, ಬೇತು ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.

Read More

ಮಡಿಕೇರಿ ಸೆ.05 : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಇದರ ಅಧೀನ ಸಂಸ್ಥೆಯಾದ ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್, ಮಡಿಕೇರಿ ಡಿಸಿಎಂ ಡಿಪ್ಲೊಮಾ ಪರೀಕ್ಷೆಯಲ್ಲಿ ರಾಜ್ಯಕ್ಕೆ 1 ನೇ ರ‍್ಯಾಂಕ್ , 3 ನೇ ರ‍್ಯಾಂಕ್ ಹಾಗೂ 6 ನೇ ರ‍್ಯಾಂಕ್ ಗಳನ್ನು ಮತ್ತು 5 ಡಿಸ್ಟಿಂಕ್ಷನ್‍ಗಳನ್ನು ಗಳಿಸಿದ್ದು, ಶೇ.100 ರಷ್ಟು ದಾಖಲೆ ಫಲಿತಾಂಶ ಬಂದಿದೆ. ವಿ.ಭೂಮಿಕ 1ನೇ ರ‍್ಯಾಂಕ್ , ಬಿ.ಎ.ದಮಯಂತಿ 3ನೇ ರ‍್ಯಾಂಕ್ , ಬಿ.ಪಿ.ನಿತಿನ್ ನಂಜಪ್ಪ 6ನೇ ರ‍್ಯಾಂಕ್ ಪಡೆದಿದ್ದಾರೆ ಎಂದು ಕೆಐಸಿಎಂ ಪ್ರಾಂಶುಪಾಲರಾದ ಡಾ.ಆರ್.ಎಸ್.ರೇಣುಕಾ ತಿಳಿಸಿದ್ದಾರೆ.   

Read More

ವಿರಾಜಪೇಟೆ ಸೆ.5 : ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿದ್ಯಾರ್ಥಿಗಳು ಸಂಭ್ರಮದಿಂದ ಆಚರಿಸಿದರು. ಕಾಲೇಜಿನ ಪ್ರಾಂಶುಪಾಲ ಎನ್.ಎಂ.ನಾಣಯ್ಯ ಮಾತನಾಡಿ, ಶಿಕ್ಷಣವನ್ನು ಪಡೆಯಬೇಕೆಂದರೆ ಗುರುವಿನ ನುಡಿಗಳನ್ನು ಮನಸ್ಸಿಟ್ಟು ಕೇಳಬೇಕು. ಅದನ್ನು ಪರಿಪಾಲಿಸುವುದು ವಿದ್ಯಾರ್ಥಿಗಳ ಕರ್ತವ್ಯ. ಗುರುವಿಗೆ ಗೌರವವನ್ನು ನೀಡಬೇಕೆಂದು ಗುರುವಿನ ಮಹತ್ವವನ್ನು ತಿಳಿಸಿಕೊಟ್ಟರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕರಾದ ಎ.ಎಂ.ಡೈನಾ ಮಾತನಾಡಿ ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಹಿತನುಡಿಗಳನಾಡಿದರು. ವಿದ್ಯಾರ್ಥಿಗಳು ಶಿಕ್ಷಕರಿಗಾಗಿ ವಿವಿಧ ರೀತಿಯ ಆಟೋಟ, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಇದೇ ಸಂದರ್ಭ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿಕೊಟ್ಟರು. ಪ್ರಾರಂಭದಲ್ಲಿ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿಗಳಾದ ದೀಷ್ಮ ಮತ್ತು ತಂಡದವರಿಂದ ಪ್ರಾರ್ಥನೆ, ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಕಾವ್ಯ ಸ್ವಾಗತಿಸಿದರು. ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಕುಮಾರಿ ಕಾವೇರಮ್ಮ ವಂದಿಸಿದರೆ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಹಸೀನಾ ಮತ್ತು ಸುಶ್ಮಿತಾ ನಿರೂಪಿಸಿದರು.

Read More

ಮಡಿಕೇರಿ ಸೆ.5 : ಬಿಜೆಪಿ ಸರ್ಕಾರದ ರೈತಪರ ಯೋಜನೆ ಮುಂದುವರಿಸಬೇಕು ಮತ್ತು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕೆಂದು ಆಗ್ರಹಿಸಿ ಸೆ.8 ರಂದು ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಯಲಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ನಾಗೇಶ್ ಕುಂದಲ್ಪಾಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ಖಂಡಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾ ರಾಜ್ಯಾದ್ಯಂತ ಸೆ.8 ರಂದು ಪ್ರತಿಭಟನೆ ನಡೆಸಲಿದೆ. ಅಂದು ಮಡಿಕೇರಿ ನಗರ, ಮಡಿಕೇರಿ ಗ್ರಾಮಾಂತರ, ವಿರಾಜಪೇಟೆ ಹಾಗೂ ಸೋಮವಾರಪೇಟೆ ಸೇರಿದಂತೆ ಜಿಲ್ಲೆಯ ನಾಲ್ಕು ಮಂಡಲದಲ್ಲಿ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದರು. ಮಳೆಯ ಅಭಾವದಿಂದ ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಸಮಸ್ಯೆಗಳ ನಿವಾರಣೆಗಾಗಿ ಸರ್ಕಾರ ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು, ರೈತರ ಜಮೀನುಗಳಲ್ಲಿ ಇರುವ ತೆರೆದ ಬಾವಿಯ ನೀರನ್ನು ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಿಕೊಳ್ಳಲು 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಬೇಕು, ರೈತರ ಆತ್ಮಹತ್ಯೆಯಂತಹ ಅನಾಹುತಗಳಿಗೆ ಆಸ್ಪದ ನೀಡದ ರೀತಿಯಲ್ಲಿ ಕಾರ್ಯಕ್ರಮಗಳನ್ನು ಕಮ್ಮಿಕೊಳ್ಳಬೇಕು, ಬಿಜೆಪಿ ರಾಜ್ಯ ಸರ್ಕಾರ ನೀಡುತ್ತಿದ್ದ…

Read More

ಮಡಿಕೇರಿ ಸೆ.5 : ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ 2022-23ನೇ ಸಾಲಿನಲ್ಲಿ 30.33 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಪ್ರಸ್ತುತ ಸಾಲಿನಲ್ಲಿ 298.50 ಲಕ್ಷ ವಹಿವಾಟು ನಡೆಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ಸಿ.ಕೆ.ಬಾಲಕೃಷ್ಣ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ಮುಖೇನ ಸದಸ್ಯರುಗಳಿಗೆ 2983.66 ಲಕ್ಷ ರೂ. ಸಾಲವನ್ನು ವಿವಿಧ ರೂಪಗಳಲ್ಲಿ ನೀಡಲಾಗಿದೆ. ಇದರಲ್ಲಿ ಪ್ರಮುಖವಾಗಿ ಜಾಮೀನು ಸಾಲವಾಗಿ 637.97 ಲಕ್ಷ ರೂ., ಮನೆ ಆಧಾರ ಸಾಲವಾಗಿ 1080.62 ಲಕ್ಷ ರೂ., ಚಿನ್ನಾಭರಣಗಳ ಈಡಿನ ಸಾಲವಾಗಿ 947.06 ಲಕ್ಷ ರೂ.ಗಳನ್ನು ನೀಡಲಾಗಿದೆ. ಸಾಲ ವಸೂಲಾತಿ ಶೇ.95.62 ರಷ್ಟು ಆಗಿದೆ ಎಂದರು. ಬ್ಯಾಂಕಿನ ದುಡಿಯುವ ಬಂಡವಾಳ 5015.83 ಲಕ್ಷವಾಗಿದ್ದು, ಇದು ಕಳೆದ ಸಾಲಿಗಿಂತ 571.35 ಲಕ್ಷ ರೂ. ಹೆಚ್ಚಿನದ್ದಾಗಿದೆ. ಬ್ಯಾಂಕ್ ಪ್ರಸ್ತುತ 4426.99 ರಷ್ಟು ವಿವಿಧ ಠೇವಣಾತಿಗಳನ್ನು ಹೊಂದಿದ್ದು, ಇದು ಕಳೆದ ಸಾಲಿಗಿಂತ 496.42 ಲಕ್ಷ ರೂ.ಗಳಷ್ಟು ಹೆಚ್ಚಿನದ್ದಾಗಿದೆ. ಠೇವಣಾತಿಗಳ ಮೇಲೆ ಪೂರ್ಣ ಪ್ರಮಾಣದ ಡೆಪಾಸಿಟ್ ಇನ್ಸೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೋರೇಷನ್‍ನಲ್ಲಿ…

Read More