ಕಡಂಗ ಸೆ.5 : ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್ ಎಸ್ ಎಸ್ ) ಕಡಂಗ ಯೂನಿಟ್ ವತಿಯಿಂದ ಬದ್ರಿಯ ಮದರಸ ಸಭಾಂಗಣದಲ್ಲಿ “ನಾವು ಭಾರತೀಯರು” ಎಂಬ ಧ್ಯೇಯ ವಾಕ್ಯದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಎಸ್ ಎಸ್ ಎಫ್ 50ನೇ ವರ್ಷಚರಣೆಯ ಅಂಗವಾಗಿ ಎಲ್ಲಾ ಯುನಿಟ್ ಗಳಲ್ಲಿ ಆಯೋಜಿಸುವ ಪೀಪಲ್ ಕಾನ್ಫರೆನ್ಸ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಬದ್ರಿಯಾ ಮಸೀದಿ ಖತೀಬ್ ಇಸ್ಮಾಯಿಲ್ ಲತೀಫಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್ ಎಸ್ ಎಫ್ ಕಡಂಗ ಯೂನಿಟ್ ಅಧ್ಯಕ್ಷ ರಾಫಿ ಝನಿ ವಹಿಸಿದರು. ಎಸ್.ಎಸ್.ಎಫ್ ರಾಷ್ಟ್ರೀಯ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ ತರಗತಿಗೆ ನೇತೃತ್ವ ವಹಿಸಿ ಮಾತನಾಡಿ, ಸಂಘಟನೆಯ ಉದ್ದೇಶ, ಸ್ವಾತಂತ್ರಕ್ಕೆ ಮುಸ್ಲಿಂಮರ ಕೊಡುಗೆಯ ಬಗ್ಗೆ ವಿಸ್ತಾರವಾಗಿ ವಿವರಿಸಿದರು. ಈ ಸಂದರ್ಭ ಬದ್ರಿಯಾ ಜಮಾಅತ್ ಅಧ್ಯಕ್ಷ ಅಬ್ದುಲ್ ರೆಹಮಾನ್ ಅರಫಾ, ಕಾರ್ಯದರ್ಶಿ ರಾಶೀದ್, ಎಸ್ ವೈ ಎಸ್ ಕಡಂಗ ಅಧ್ಯಕ್ಷ ಸಿ.ಎ.ಅಶ್ರಫ್, ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಅಬ್ದುಲ್ ಸಲಾಂ, ಎಸ್ ಎಸ್ ಎಫ್ ವಿರಾಜಪೇಟೆ…
ಲೇಖಕ: admin
ಕಡಂಗ ಸೆ.5 : ಬೆಂಗಳೂರಿನ ಕೇಮ್ವೆಲ್ ಬಯೋಫಾರ್ಮಾ ಸಂಸ್ಥೆ ವತಿಯಿಂದ ಕಡಂಗ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ , ನೋಟ್ ಪುಸ್ತಕ, ರೇಖಾಗಣಿತ ಪೆಟ್ಟಿಗೆ ಇನ್ನಿತರ ವಸ್ತುಗಳನ್ನು ವಿತರಿಸಿದರು. ಈ ಸಂದರ್ಭ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಮಾಳೆಯಂಡ ಪ್ರಕಾಶ್ ನಾಣಯ್ಯ, ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗವನ್ನು ಪಡೆದುಕೊಂಡು ಉನ್ನತ ಹುದ್ದೆಗೇರುವಂತೆ ಪ್ರಯತ್ನಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಶಾಲಾ ಸ್ಥಳದಾನಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವರದಿ : ನೌಫಲ್ ಕಡಂಗ
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಮಾರುತಿಪುರ ಸಮೀಪದ ಮೇಲಿನಸಂಪಳ್ಳಿ ಗ್ರಾಮದ ನಿವಾಸಿ ಶಶಿಕಲಾ ಅವರ ಸಂಕಷ್ಟದ ಬದುಕಿಗೆ ಮಾನವೀಯ ನೆಲೆಯಲ್ಲಿ ನೆರವಿನ ಹಸ್ತ ಚಾಚಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಡುಬಡತನದ ಜೊತೆಗೆ ಅಂಗವೈಕಲ್ಯದ ಸಮಸ್ಯೆಯಿಂದ ಬಳಲುತ್ತಿರುವ 20 ವರ್ಷದ ಮಗಳ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತಿರುವ ಶಶಿಕಲಾ ಅವರ ಬಳಿ ಸ್ವಂತ ಮನೆಯಾಗಲೀ, ಆಧಾರ್ ಕಾರ್ಡ್ ಆಗಲೀ ಮತ್ತು ಪಡಿತರ ಚೀಟಿಯಾಗಲೀ ಈ ಯಾವುದು ಇಲ್ಲದಿರುವ ಕಾರಣಕ್ಕೆ ರಾಜ್ಯ ಸರ್ಕಾರದ ಗೃಹಲಕ್ಷ್ಮಿ, ಅನ್ನಭಾಗ್ಯವೂ ಸೇರಿ ಇನ್ನಿತರೆ ಯೋಜನೆಯಿಂದ ವಂಚಿತರಾಗಿದ್ದರು. ಈ ವಿಚಾರವನ್ನು ಪತ್ರಕರ್ತರಾದ ರವಿ ಬಿದನೂರು ಅವರು ನಮ್ಮ ಕಚೇರಿಯ ಗಮನಕ್ಕೆ ತಂದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳನ್ನು ಅವರ ಮನೆಗೆ ಕಳುಹಿಸಿ ಆಧಾರ್ ಕಾರ್ಡ್ ಅಪ್ಲೋಡ್ ಮಾಡಿಸಲಾಗಿದೆ. ಜೊತೆಗೆ ಆದಷ್ಟು ಶೀಘ್ರ ತಾಯಿ ಮಗಳಿಗೆ ಪಡಿತರ ಚೀಟಿಯನ್ನು ಒದಗಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಸೌಲಭ್ಯ ವಂಚಿತ ಬಡ ತಾಯಿ – ಮಗಳ…
ಮಡಿಕೇರಿ ಸೆ.4 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗೋಣಿಕೊಪ್ಪ – ಬಾಳೆಲೆ ರಸ್ತೆಯಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಸರಬರಾಜು/ಮಾರಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ತಿತಿಮತಿ ಗ್ರಾಮದ ನಿವಾಸಿಗಳಾದ ರಾಶಿಕ್ ಟಿ.ಎ (22), ಹಾಗೂ ಜುನೈದ್ ಸಿ.ಎಸ್ (23) ಎಂಬುವವರನ್ನು 107 ಗ್ರಾಂ ಗಾಂಜಾ ಮಾದಕ ವಸ್ತುವಿನೊಂದಿಗೆ ವಶಕ್ಕೆ ಪಡೆದರು. ವಿರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಆರ್.ಮೋಹನ್ ಕುಮಾರ್, ಗೋಣಿಕೊಪ್ಪ ಸಿಪಿಐ ಗೋವಿಂದರಾಜು.ಎಂ.ಎ, ಪಿಎಸ್ಐ ರೂಪಾದೇವಿ ಬಿರಾದಾರ್, ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.
ಸುಂಟಿಕೊಪ್ಪ ಸೆ.4 : ಯುವ ಪೀಳಿಗೆ ದುಶ್ಚಟಗಳ ವಿರುದ್ಧ ಸಮರ ಸಾರುವುದರಿಂದ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಸಾಧ್ಯವೆಂದು ಸುಂಟಿಕೊಪ್ಪ ಎಎಸ್ಐ ಶ್ರೀನಿವಾಸ್ ಮಂಜಿಕೆರೆ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಮಂಜಿಕೆರೆ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದ್ಘಾಟಿಸಿ ಮಾತನಾಡಿದ ಅವರು ಯುವಜನತೆ ದುಶ್ಚಟಗಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಸಮಾಜ ಘಾತುಕ ಕಹಿ ಘಟನೆಗಳು ಸಂಭವಿಸುತ್ತಿದೆ. ಪೋಷಕರು ಸಮಾಜದಲ್ಲಿ ತಲೆತಗ್ಗಿಸುವಂತ್ತಾಗಿದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಪ್ರೇರಣೆ ನೀಡುವ ಮತ್ತು ಪ್ರೇರೆಪಿಸುವ ಜನತೆಯಿಂದ ದೂರ ಇರಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಸಹಕರಿಸುವಂತೆ ಕಿವಿಮಾತು ಹೇಳಿದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಮೂರ್ತಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದಾಗ ಆರೋಗ್ಯವಂತರಾಗಿ ಬದುಕಬಹುದೆಂದು ತಿಳಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭವ್ಯ, ಕಾನ್ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಶಾಲಾ ಶಿಕ್ಷಕರುಗಳಾದ ಮಾಲಾದೇವಿ, ಬಸವರಾಜು,ಮಹೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…
ಮಡಿಕೇರಿ ಸೆ.4 : ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಆರ್ ಅರ್ ಟಿ ಸಿಬ್ಬಂದಿ ಗಿರೀಶ್ ಅವರ ಕುಟುಂಬದ ಸದಸ್ಯರಿಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸಾಂತ್ವನ ಹೇಳಿದರು. ವೈಯುಕ್ತಿವಾಗಿ ಧನ ಸಹಾಯ ಮಾಡಿದರು. ಮಡಿಕೇರಿಯ ಶವಾಗಾರದಲ್ಲಿ ಮೃತದೇಹವನ್ನು ವೀಕ್ಷಿಸಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ರೂ.15 ಲಕ್ಷ ಪರಿಹಾರವನ್ನು ನೀಡಲು ಸೂಚಿಸಿದರು.
ಸುಂಟಿಕೊಪ್ಪ ಸೆ.4 : ಕಾಡಾನೆಯ ದಾಳಿಯಿಂದ ಎರಡು ಜೀವಗಳು ಪಾರಾದ ಬೆನ್ನಲ್ಲೇ ಗ್ರಾಮಸ್ಥರ ಪ್ರಾಣ ಉಳಿಸಲು ಬಂದ ಅರಣ್ಯ ಸಿಬ್ಬಂದಿಯ ಪ್ರಾಣ ಪಕ್ಷಿಯೇ ಹಾರಿ ಹೋಗಿರುವುದು ವಿಪರ್ಯಾಸ. ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷವನ್ನು ಹತ್ತಿಕ್ಕುವ ಯುದ್ಧದಲ್ಲಿ ಸದಾ ಸೋಲುತ್ತಿರುವ ಆಡಳಿತ ವ್ಯವಸ್ಥೆ ತಲೆ ತಗ್ಗಿಸಿ ಸೋಲು ಒಪ್ಪಿಕೊಳ್ಳಲೇಬೇಕಾದ ಅನಿವಾರ್ಯ ಪರಿಸ್ಥಿತಿ ಇದು. ಸುಂಟಿಕೊಪ್ಪ ಹೋಬಳಿಯ ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ.ಬ್ಲಾಕ್ ಬಳಿಯಲ್ಲಿ ಒಂಟಿ ಸಲಗ ಇಂದು 2 ಬೈಕ್ಗಳ ಮೇಲೆ ದಾಳಿ ಮಾಡಿತು. ಬೈಕ್ ಸವಾರರಾದ ಸುಂಟಿಕೊಪ್ಪದ ನಿವಾಸಿ ಮುರುಗೇಶ್ ಹಾಗೂ ಜಗದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದರು. ಇವರ ಚೀರಾಟ ಮತ್ತು ಜನರು ದೊಡ್ಡ ಮಟ್ಟದಲ್ಲಿ ಕೂಗು ಎಬ್ಬಿಸಿದ್ದರಿಂದ ಅಲ್ಲಿಂದ ಪಲಾಯನ ಮಾಡಿದ ಕಾಡಾನೆ ಕಾಡಿನೊಳಗೆ ಓಡಿಹೋಗಿದೆ. ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಬಂದ ಕಾಡಾನೆ ಓಡಿಸುವ ಆರ್ಆರ್ಟಿ ತಂಡದ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿ ಗಿರೀಶ್(35) ಕಾಡಾನೆ ದಾಳಿಗೆ ಸಿಲುಕಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ…
ಮಡಿಕೇರಿ ಸೆ.4 : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಹರೀಶ್ ಜಿ.ಆಚಾರ್ಯ ಆಯ್ಕೆಯಾಗಿದ್ದಾರೆ. ಮಾನವ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಲಂಚ ಮುಕ್ತ ಸಮಾಜ ನಿರ್ಮಿಸಲು ಸಂಘಟನೆ ಕಟಿಬದ್ಧವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ದೇಶಸೇವೆ ಮಾಡಿದ ಹಿರಿಯ ಅಧಿಕಾರಿಗಳು ಸಂಘಟನೆಯಲ್ಲಿದ್ದಾರೆ. ಕಾನೂನು ಬದ್ಧವಾಗಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಶ್ರಮ ಪಡುತ್ತಿದ್ದಾರೆ ಎಂದು ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಹೆಚ್ಚಾಗುತ್ತಿದೆ. ಸರಕಾರಗಳು ಕೂಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಎಡವುತ್ತಿವೆ. ಸಕಾಲದಲ್ಲಿ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಆದ್ದರಿಂದ ಕರ್ನಾಟಕ ರಾಜ್ಯದಲ್ಲೂ ಮಾನವ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ನ್ಯಾಯದ ಪರ ಹೋರಾಟ ನಡೆಸಲು ಸಂಘಟನೆ ಸಜ್ಜಾಗಿದೆ. ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು, ಯೋಧರು, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಂಘಟನೆಯನ್ನು…
ಮಡಿಕೇರಿ ಸೆ.4 : ‘ಕರ್ನಾಟಕ’ ಎಂಬ ಹೆಸರನ್ನು ನಾಮಕರಣ ಮಾಡಿ 50 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಮೈಸೂರು ವಿಭಾಗ ಮಟ್ಟದ ಸಾಹಿತಿ- ಕಲಾವಿದರೊಂದಿಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆಯು ಮೈಸೂರಿನ ಕಿರು ರಂಗಮಂದಿರದಲ್ಲಿ ನಡೆಯಿತು. ಕೊಡಗು ಜಿಲ್ಲೆಯಿಂದ ಕಸಾಪ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್, ಲೋಕೇಶ್ ಸಾಗರ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಣಿ ಮಾಚಯ್ಯ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಪಾರ್ವತಿ ಅಪ್ಪಯ್ಯ, ಬಿ.ಎಸ್.ತಮ್ಮಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ ಅಧ್ಯಕ್ಷ ಕೊಲ್ಯದ ಗಿರೀಶ್, ಕೊಡಗು ಜಾನಪದ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಅನಿಲ್ ಎಚ್.ಟಿ, ರೇಖಾ ವಸಂತ್, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಮುನೀರ್ ಅಹ್ಮದ್, ಲಿಯಾಕತ್ ಅಲಿ, ನಾಗೇಶ್ ಕಾಲೂರು, ಟಿ.ಜಿ.ಪ್ರೇಮಕುಮಾರ್, ವೆಂಕಟ ನಾಯಕ್, ರೇವತಿ ರಮೇಶ್, ಕುಡಿಯರ ಶಾರದ, ಕಲಾವಿದ ಈ.ರಾಜು ಇತರರು ಇದ್ದರು. ನಾಡಹಬ್ಬ ಮಡಿಕೇರಿ ಜನೋತ್ಸವವ ದಸರಾಗೆ ಆಗಮಿಸುವಂತೆ ಇದೇ…
ಮಡಿಕೇರಿ ಸೆ.4 : ನಿರ್ದೇಶನಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು, ಇಲಾಖೆಗೆ ಖಾಲಿ ಇರುವ 6 ಉಪ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮೇಜರ್/ ಲೆಫ್ಟಿನೆಂಟ್ ಕರ್ನಲ್ ಅಥವಾ ನೌಕಾ ಸೇನಾ ಮತ್ತು ವಾಯು ಸೇನೆಯಲ್ಲಿ ತತ್ಸಮಾನ ರ್ಯಾಂಕ್ ನಿಂದ ಬಿಡುಗಡೆ/ ನಿವೃತ್ತಿ ಹೊಂದಿರುವ, ದಿನಾಂಕ 01/01/2024 ಕ್ಕೆ 52 ವರ್ಷದೊಳಗಿನ ವಯೋಮಾನದ, ಎಸ್ಎಸ್ಎಲ್ಸಿ/ ತತ್ಸಮಾನ ತರಗತಿಯಲ್ಲಿ ಒಂದು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿ ತೇರ್ಗಡೆಯಾದ ಸೈನ್ಯಾಧಿಕಾರಿಗಳು ಸೆಪ್ಟೆಂಬರ್, 16 ರೊಳಗೆ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಸಂಬಂಧಿಸಿದ ಎಲ್ಲಾ ದಾಖಲೆಗಳೊಂದಿಗೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ, ಕಚೇರಿಗೆ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಡಿಕೇರಿ ಕಛೇರಿಯಲ್ಲಿ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ ಹಾಗೂ ಹೆಚ್ಚಿನ ವಿವರಕ್ಕೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಬೆಂಗಳೂರು ಇವರ ದೂ.ಸಂ.080-25589459 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಸೈನಿಕ ಕಲ್ಯಾಣ ಮತ್ತು…






