ಮಡಿಕೇರಿ ಆ.9 : ಪ್ರಧಾನಮಂತ್ರಿ ಅವರ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಸಂಬಂಧ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ತಲುಪಿಸುವಲ್ಲಿ ಎಲ್ಲಾ ಇಲಾಖೆ ಹಂತದ ಅಧಿಕಾರಿಗಳು ಶ್ರಮಿಸಬೇಕಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ವಿವಿಧ ಇಲಾಖೆ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರಿಗಾಗಿ ಇರುವ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಿರುಹೊತ್ತಿಗೆ ಮುದ್ರಣ ಮಾಡಿ ಎಲ್ಲೆಡೆ ವಿತರಿಸಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಸಲಹೆ ಮಾಡಿದರು. ಪ್ರಸಕ್ತ ಸಾಲಿನಲ್ಲಿ ವಿವಿಧ ಇಲಾಖೆಗಳಿಗೆ ಅಲ್ಪಸಂಖ್ಯಾತರಿಗಾಗಿ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ತಲುಪಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದರು. ಸಮಿತಿ ಸದಸ್ಯರಾದ ಕೆ.ಟಿ.ಬೇಬಿಮ್ಯಾಥ್ಯೂ ಅವರು ಮಾಹಿತಿ ನೀಡಿ ಸರ್ಕಾರದಿಂದ ಅಲ್ಪಸಂಖ್ಯಾತರಿಗಾಗಿ ಸಾಕಷ್ಟು ಕಾರ್ಯಕ್ರಮಗಳು ಇದ್ದು, ಕಾರ್ಯಕ್ರಮಗಳ ಬಗ್ಗೆ ಹೆಚ್ಚಿನ ಮಾಹಿತಿ ದೊರೆಯುವಂತಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲೆಯ 5 ತಾಲ್ಲೂಕುಗಳಲ್ಲಿಯೂ ವಿಶೇಷ ಕಾರ್ಯಾಗಾರ ಏರ್ಪಡಿಸುವಂತಾಗಬೇಕು ಎಂದು ಕೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಮತ್ತೊಬ್ಬ…
ಲೇಖಕ: admin
ಮಡಿಕೇರಿ ಆ.9 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದಲ್ಲಿ ಪರಮಾಣು ಜ್ಯೋತಿ ಕಾರ್ಯಕ್ರಮ ನಡೆಯಿತು. ಮುಂಬಯಿ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರ(ಬಾರ್ಕ್) ಇಲ್ಲಿಂದ ಬಂದ ಪರಮಾಣು ವಿಜ್ಞಾನಿಗಳಾದ ಜಸರಾಜ್ ವೈಷ್ಣವ ಮತ್ತು ಊರ್ವಶಿ ಕರ್ನಾಣಿ ಗೋರ್ ಇವರುಗಳು ವಿದ್ಯಾಲಯದ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದರು. ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ವಿಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳಿ ತಮ್ಮ ಅನುಮಾನಗಳನ್ನು ಪರಿಹರಿಸಿಕೊಂಡರು. ಆಗಮಿಸಿದ ಅತಿಥಿಗಳು ವಿದ್ಯಾರ್ಥಿಗಳಿಗಾಗಿ ವಿಜ್ಞಾನ ರಸಪ್ರಶ್ನೆಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಿದರು. ವಿಜ್ಞಾನಿಗಳು ವಿದ್ಯಾರ್ಥಿಗಳ ಜೊತೆ ನೇರ ಸಂವಾದ ನಡೆಸಿದರು. ವಿದ್ಯಾರ್ಥಿಗಳಿಗೆ ಮೂಲ ವಿಜ್ಞಾನದಲ್ಲಿ ವಿಶೇಷವಾಗಿ ಪರಮಾಣು ವಿಜ್ಞಾನದಲ್ಲಿ ಆಸಕ್ತಿ ಹೆಚ್ಚುವ ಹಾಗೆ ಮಾಡಿದರು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಪ್ರಾಂಶುಪಾಲರಾದ ಪಂಕಜಾಕ್ಷನ್ ಹಾಗೂ ವಿಜ್ಞಾನ ಶಿಕ್ಷಕರು ಹಾಜರಿದ್ದರು. ಆಗಮಿಸಿದ ಅತಿಥಿಗಳು ವಿದ್ಯಾಲಯದ ಚಟುವಟಿಕೆಗಳನ್ನು ವೀಕ್ಷಿಸಿದರು. ನಂತರ ವಿದ್ಯಾರ್ಥಿಗಳ ಹಾಸ್ಟೇಲ್ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪ್ರಾಚಾರ್ಯರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಂಭ್ರಮಿಸಿದ ವಿಜ್ಞಾನಿಗಳಿಗೆ ವಿದ್ಯಾಲಯದ ಸಿಬ್ಬಂದಿ ಮತ್ತು…
ಮಡಿಕೇರಿ ಆ.9 : ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ ಇವರ ವತಿಯಿಂದ ರಾಷ್ಟ್ರೀಯ ಶಿಶು ಕಲ್ಯಾಣ ಸಂಸ್ಥೆಯ ಕಾರ್ಯಕ್ರಮದ ಅಂಗವಾಗಿ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ, ಇನ್ನರ್ ವೀಲ್, ರೋಟರಿ ಮಿಸ್ಟಿಹಿಲ್ಸ್, ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ “ರಾಷ್ಟ್ರೀಯ ವರ್ಣಚಿತ್ರ ಸ್ಪರ್ಧೆ”ಯು ಆ.27 ರಂದು ನಡೆಯಲಿದೆ. ಸ್ಪರ್ಧೆಗೆ ಹೆಸರು ನೋಂದಾಯಿಸಲು ಆ.25 ಕೊನೆ ದಿನವಾಗಿದೆ. ಸ್ಪರ್ಧಾ ವಿವರ ಮತ್ತು ಹೆಚ್ಚಿನ ಮಾಹಿತಿಗೆ ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆ “ಚೇತನ ಚಿಲುಮೆ” (ಕೆಎಸ್ಆರ್ಟಿಸಿ ಬಸ್ಸು ನಿಲ್ದಾಣದ ಹತ್ತಿರ) ದೂ.ಸಂ.9880985939, 9480745776 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ತಿಳಿಸಿದೆ.
ಮಡಿಕೇರಿ ಆ.9 : “ವಿಶ್ವ ಆದಿಮಸಂಜಾತ ಸ್ಥಳೀಯ ಜನರ” ಅಂತರಾಷ್ಟ್ರೀಯ ದಿನದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸಿತು. ಧರಣಿಯ ನೇತೃತ್ವ ವಹಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವ ಸ್ವಯಂ ನಿರ್ಣಯ ಹಕ್ಕು ಮತ್ತು ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆಯನ್ನು ಒಳಗೊಂಡ ವಿವಿಧ ರಾಜ್ಯಾಂಗದತ್ತ ಹಕ್ಕುಗಳ ಬೇಡಿಕೆಗಳ ಕುರಿತು ಸರ್ಕಾರಗಳು ಸೂಕ್ತ ಸ್ಪಂದನೆಯನ್ನು ನೀಡಬೇಕೆಂದು ಒತ್ತಾಯಿಸಿದರು. ಕೊಡವರು ವಿಶಿಷ್ಟವಾದ ಸಾಮಾಜಿಕ, ಸಾಂಸ್ಕೃತಿಕ ವ್ಯವಸ್ಥೆಯನ್ನು ಹೊಂದಿರುವ ಬುಡಕಟ್ಟು ಜನಾಂಗದವರಾಗಿದ್ದಾರೆ. ವಿಭಿನ್ನ ಭಾಷೆ ಮತ್ತು ನಂಬಿಕೆಗಳನ್ನು ಹೊಂದಿದ್ದಾರೆ. ಸಾಂಪ್ರದಾಯಿಕವಾಗಿ ಅವರು ಕೊಡವ ಭೂಮಿಯಲ್ಲೇ ಉಳಿದುಕೊಂಡಿದ್ದಾರೆ. ನಂಬಿಕೆ ಮತ್ತು ಸಂಸ್ಕೃತಿಯನ್ನು ತಮ್ಮ ಹೊಸ ಪೀಳಿಗೆಗೆ ರವಾನಿಸಿದ್ದಾರೆ. ಈ ರೀತಿಯ ವಿಶಿಷ್ಟ ಮತ್ತು ಅತಿಸೂಕ್ಷ್ಮ ಜನಾಂಗದ ಹಕ್ಕುಗಳನ್ನು ಆಡಳಿತ ವ್ಯವಸ್ಥೆ ಮುಂದೆ ಪ್ರತಿಪಾದಿಸುವುದು ನಮ್ಮ ಕರ್ತವ್ಯವಾಗಿದೆ ಎಂದರು. ಸ್ಥಳೀಯ ಜನರ ಹಕ್ಕುಗಳ ಕುರಿತು ವಿಶ್ವ ರಾಷ್ಟ್ರಸಂಸ್ಥೆ (UNDRIP) 2007 ಸೆಪ್ಟಂಬರ್ ನಲ್ಲಿ UN…
ಮಡಿಕೇರಿ ಆ.9 : ಮಡಿಕೇರಿ ಆಕಾಶವಾಣಿಯಲ್ಲಿ ಸಾಂದರ್ಭಿಕ ಉದ್ಘೋಷಕರಾಗಿ ಕೆಲಸ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಯೋಮಿತಿ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 50 ವರ್ಷ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು ಗೊತ್ತಿರಬೇಕು. ಸ್ಪಷ್ಟ ಉಚ್ಛಾರಣೆ ಹೊಂದಿರಬೇಕು. ಕಂಪ್ಯೂಟರ್ ಬಳಸುವ ಜ್ಞಾನ ಇರಬೇಕು. ಇಂಗ್ಲೀಷ್ ಭಾಷೆಯಿಂದ ಕನ್ನಡಕ್ಕೆ ಮತ್ತು ಕನ್ನಡದಿಂದ ಇಂಗ್ಲೀಷ್ಗೆ ಭಾಷಾಂತರ ಮಾಡುವ ಸಾಮಥ್ರ್ಯ ಇರಬೇಕು. ಪ್ರಚಲಿತ ವಿದ್ಯಮಾನ, ಕಲೆ, ಸಂಸ್ಕೃತಿ , ಸಂಗೀತ, ರಂಗಭೂಮಿ, ಚಲನಚಿತ್ರ, ಸಾಹಿತ್ಯ, ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಸಾಮಾನ್ಯ ಜ್ಞಾನ ಹೊಂದಿರಬೇಕು. ಮಡಿಕೇರಿ ನಿವಾಸಿಗಳಿಗೆ ಆದ್ಯತೆ. ಅರ್ಜಿ ಶುಲ್ಕ ರೂ.354 ಗಳನ್ನು ಅರ್ಜಿಯಲ್ಲಿ ನಮೂದಿಸಿರುವ ಪ್ರಸಾರ ಭಾರತಿ ಬ್ಯಾಂಕ್ ಖಾತೆಗೆ ವರ್ಗಾಯಿಸಬೇಕು. ಲಿಖಿತ ಪರೀಕ್ಷೆ, ಧ್ವನಿ ಪರೀಕ್ಷೆ ಹಾಗೂ ಸಂದರ್ಶನ ಒಳಗೊಂಡ ಮೂರು ಹಂತಗಳಲ್ಲಿ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು. ನಿಗದಿತ ಅರ್ಜಿ ಫಾರಂಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 11 ಗಂಟೆಯಿಂದ ಸಂಜೆ…
ಮಡಿಕೇರಿ ಆ.9 : ಕುಶಾಲನಗರ ಪುರಸಭೆ ವ್ಯಾಪ್ತಿಯ ಮಾರುಕಟ್ಟೆ ರಸ್ತೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಿದರು. ನಂತರ ಮಾತನಾಡಿದ ಶಾಸಕರು, ಕುಶಾಲನಗರ ಭಾಗದಲ್ಲಿ ಕುಡಿಯುವ ನೀರಿನ ಘಟಕ ಆಗದೆ ಉಳಿದಿರುವ ವಾರ್ಡ್ ಹಾಗೂ ಗ್ರಾಮಗಳಲ್ಲಿ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವಂತೆ ಸೂಚನೆ ನೀಡಿ ಪುರಸಭೆಯ ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಧಿಕಾರಿ ಕೃಷ್ಣ ಪ್ರಸಾದ್, ಸಹಾಯಕ ಅಭ್ಯಂತರ ರಂಗರಾಮ್, ಸದಸ್ಯರಾದ ಪ್ರಮೋದ್ ಮುತ್ತಪ್ಪ, ಶೇಕ್ ಕಲೀಮುಲ್ಲ, ಸುಂದರೇಶ್, ಜಯಲಕ್ಷ್ಮಿ, ಜಯಲಕ್ಷ್ಮಮ್ಮ, ಪುಟ್ಟಲಕ್ಷ್ಮಿ, ಕುಶಾಲನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರು ಹಾಗೂ ಜಿ.ಪಂ ಮಾಜಿ ಸದಸ್ಯ ವಿ.ಪಿ ಶಶಿಧರ್, ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ ಚಂದ್ರಕಲ, ಕೆ.ಪಿ.ಸಿ.ಸಿ ಸಂಯೋಜಕ ನಟೇಶ್ ಗೌಡ, ಪ್ರಮುಖರಾದ ಶಿವಶಂಕರ್, ಕಿರಣ್ ಕುಮಾರ್, ಮುಸ್ತಫ, ನಂಜುಂಡಸ್ವಾಮಿ, ಹರೀಶ್ ಮುಳ್ಳುಸೋಗೆ ಹಾಗೂ ಮುಖಂಡರು ಮತ್ತು ಹಿತೈಷಿಗಳು ಹಾಜರಿದ್ದರು.
ಮಡಿಕೇರಿ ಆ.9 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ವಿದ್ಯಾಸಂಸ್ಥೆಯಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿ ಒಕ್ಕೂಟವಾದ “ಅವಿನ್ಯಂ” ವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಮೈಸೂರಿನ ಎನ್ಐಈ ಪ್ರಾಧ್ಯಾಪಕರಾದ ಡಾ. ರಘುವೀರ್, ಕೃತಕ ಬುದ್ಧಿಮತ್ತೆಯ ಮಹತ್ವ, ದೈನಂದಿನ ಜೀವನದಲ್ಲಿ ಅಳವಡಿಕೆ, ಮತ್ತು ಸಮಾಜದಲ್ಲಿ ಕೃತಕ ಬುದ್ಧಿಮತ್ತೆಯ ಪ್ರಭಾವದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕೊಡವ ಏಜುಕೇಷನ್ ಸೊಸೈಟಿಯ ಅಧ್ಯಕ್ಷರಾದ ಡಾ. ಎಮ್.ಸಿ.ಕಾರ್ಯಪ್ಪ ಮಾತನಾಡಿ, ಹೇಗೆ ಕೃತಕ ಬುದ್ದಿಮತ್ತೆಯು ನಮ್ಮ ಸಮಾಜದಲ್ಲಿ ಬದಲಾವಣೆಗಳನ್ನು ತರುತ್ತಿದೆ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಬಸವರಾಜ್ ಮಾತನಾಡಿ, ವಿದ್ಯಾರ್ಥಿ ಒಕ್ಕೂಟದಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ ಎಂದರು. ವಿದ್ಯಾರ್ಥಿ ಒಕ್ಕೂಟದ ಲಾಂಛನವನ್ನು ಡಾ.ಎಂ.ಸಿ ಕಾರ್ಯಪ್ಪ ಬಿಡುಗಡೆ ಮಾಡಿದರು. ಸಂಯೋಜಕರಾದ (ಸಹ ಪ್ರಾಧ್ಯಾಪಕ) ಬಿ.ಎಂ. ಮುರಳೀಧರ್ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿ ಸದಸ್ಯರುಗಳಿಗೆ ಪ್ರಮಾಣ ವಚನ ಭೋದಿಸಿದರು. ಇದೇ ಸಂದರ್ಭ ವಿವಿಧ ಸ್ವರ್ಧೆಗಳಲ್ಲಿ ವಿಜೇತರಾದ ಸ್ವರ್ಧಿಗಳಿಗೆ ಬಹುಮಾನವನ್ನು…
ಮಡಿಕೇರಿ ಆ.9 : ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ವಿದ್ಯುತ್ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಯಾವುದೇ ಅಡ್ಡಿ ಇಲ್ಲದೆ ಪೂರೈಸಬೇಕೆಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಚೆಂಬು ಗ್ರಾ.ಪಂ ಸಭಾಂಗಣದಲ್ಲಿ ನಡೆದ ಜನಸ್ಪಂದನ ಸಭೆ ಮತ್ತು ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ಥಳೀಯ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ ಶಾಸಕರು ಸ್ಥಳದಲ್ಲೇ ಬಹುತೇಕ ಅಹವಾಲುಗಳಿಗೆ ಪರಿಹಾರ ಸೂಚಿಸಿದರು. ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಗ್ರಾಮಸ್ಥರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆ ಅಡ್ಡಿಪಡಿಸಬಾರದು. ಬಡಕುಟುಂಬಗಳಿಗೆ ವಿದ್ಯುತ್ ನೀಡಲು ಚೆಸ್ಕಾಂ ಇಲಾಖೆ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು. ಆನೆ ಹಾವಳಿ ತೀವ್ರಗೊಂಡಿರುವ ಭಾಗದಲ್ಲಿ ಅರಣ್ಯ ಅಧಿಕಾರಿಗಳು ಸೋಲಾರ್ ಬೇಲಿ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಎ.ಎಸ್.ಪೊನ್ನಣ್ಣ ತಿಳಿಸಿದರು. ಅರಣ್ಯ ಹಕ್ಕು ಪತ್ರದ ಬಗ್ಗೆ ಈಗಾಗಲೇ ಅರಣ್ಯ ಸಚಿವರು ಹಲವು ಜಿಲ್ಲೆಯ ಪ್ರತಿನಿಧಿಗಳೊಂದಿಗೆ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಅಗತ್ಯ…
ಮಡಿಕೇರಿ ಆ.9 : ಪ್ರತಿಯೊಬ್ಬ ಭಾರತೀಯ ಪ್ರಜೆ ದೇಶಾಭಿಮಾನ ಬೆಳೆಸಿಕೊಳ್ಳುವುದರೊಂದಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವದಿಂದ ಕಾಣಬೇಕೆಂದು ಭಾರತ ಸೇವಾದಳದ ರಾಜ್ಯ ಸಂಪನ್ಮೂಲ ವ್ಯಕ್ತಿ, ವಲಯ ಸಂಘಟಕ ಈರಯ್ಯ ಅವರು ಕರೆ ನೀಡಿದ್ದಾರೆ. ಭಾರತ ಸೇವಾದಳದ ವಿರಾಜಪೇಟೆ ತಾಲ್ಲೂಕು ಸಮಿತಿ ಮತ್ತು ವಿರಾಜಪೇಟೆ ತಾಲ್ಲೂಕು ಪಂಚಾಯ್ತಿ ವತಿಯಿಂದ ತಾ.ಪಂ ವ್ಯಾಪ್ತಿಯ ಗ್ರಾ.ಪಂ ಸಿಬ್ಬಂದಿಗಳಿಗೆ ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ನಡೆಯಿತು. ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಈರಯ್ಯ ಅವರು ರಾಷ್ಟ್ರಧ್ವಜವನ್ನು ಆರೋಹಣ ಮತ್ತು ಅವರೋಹಣ ಮಾಡುವ ಸಂದರ್ಭ ಅತ್ಯಂತ ಗೌರವದಿಂದ ನಡೆದುಕೊಳ್ಳಬೇಕು ಎಂದರು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕೆ.ಸಿ.ಅಪ್ಪಣ್ಣ, ರಾಷ್ಟ್ರಧ್ವಜವನ್ನು ಕಟ್ಟುವ ವಿಧಾನ ಮತ್ತು ಆರೋಹಣ, ಅವರೋಹಣ ಮಾಡುವ ರೀತಿಯನ್ನು ಪ್ರತಿಯೊಬ್ಬರು ತಿಳಿದುಕೊಂಡಿರಬೇಕು. ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗೆ ಎಲ್ಲೂ ಅಗೌರವ ಆಗದಂತೆ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು. ಖಾದಿ ಭಂಡಾರದಲ್ಲಿ ದೊರೆಯುವ ಐಎಸ್ಐ ಚಿಹ್ನೆ ಹೊಂದಿರುವ ನಿರ್ದಿಷ್ಟ ಅಳತೆಯ ರಾಷ್ಟ್ರಧ್ವಜವನ್ನೇ ಖರೀದಿಸಬೇಕು ಮತ್ತು…
ಮಡಿಕೇರಿ ಆ.9 : ಸಮಾಜದ ಅಗತ್ಯತೆಗಳಿಗೆ ತಕ್ಕಂತೆ ಜನರಪರವಾಗಿ ಕಾಯ೯ಪ್ರವೖತ್ತವಾಗಲು ಕೊಡಗು ಪೊಲೀಸ್ ಇಲಾಖೆ ಬದ್ದವಾಗಿದೆ. ಕೊಡಗಿನಲ್ಲಿ ಹೆಚ್ಚುತ್ತಿದ್ದ ಗಾಂಜಾ ಮಾದಕ ದ್ರವ್ಯ ಮಾರಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡಿರುವ ಸಮರಕ್ಕೆ ಸಾವ೯ಜನಿಕರೂ ಸಹಕಾರ ನೀಡಬೇಕಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ. ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ರೋಟರಿ ಸಭಾಂಗಣದಲ್ಲಿ ಆಯೋಜಿತವಾಗಿದ್ದ ಪೊಲೀಸ್ ವರಿಷ್ಟಾಧಿಕಾರಿಗಳೊಂದಿಗೆ ವಿವಿಧ ಸಂಘಸಂಸ್ಥೆಗಳ ಪ್ರಮುಖರ ಸಂವಾದ ಕಾಯ೯ಕ್ರಮದಲ್ಲಿ ಪಾಲ್ಗೊಂಡು ರಾಮರಾಜನ್ ಹಲವಾರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು. ಕೊಡಗಿನಲ್ಲಿ ಮಾದಕ ದ್ರವ್ಯ ಸೇವನೆ, ಮಾರಾಟ ಪ್ರಕರಣಗಳು ಹೆಚ್ಚಾದರೇ ಅದು ಪ್ರವಾಸೋದ್ಯಮದ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆಯಿದೆ. ಕೌಟುಂಬಿಕ ಪ್ರವಾಸೋದ್ಯಮಕ್ಕೆ ಧಕ್ಕೆ ಬರಲಿದೆ ಎಂದು ಎಚ್ಚರಿಸಿದ ರಾಮರಾಜನ್ ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾದಕ ದ್ರವ್ಯ ಮಾರಾಟಗಾರರನ್ನು ಬಗ್ಗು ಬಡಿಯುತ್ತಿದೆ. ಮಾದಕ ದ್ರವ್ಯ ಸೇವನೆ ಮಾಡುವವರ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದ್ದು ಮುಂದಿನ ದಿನಗಳಲ್ಲಿ ಅಂಥವರ ವಿರುದ್ದವೂ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು…






