ಮಡಿಕೇರಿ ಸೆ.4 : ಕೊಡಗಿನ ಆಯುಧಪೂಜೆ ಎಂದೇ ಕರೆಯಲ್ಪಡುವ “ಕೈಲ್ ಪೊಳ್ದ್” ಹಬ್ಬದ ಪ್ರಯುಕ್ತ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವರ ನರಮೇಧ ನಡೆದ ದೇವಟ್ ಪರಂಬುವಿನಲ್ಲಿ ಹಿರಿಯರನ್ನು ಸ್ಮರಿಸಿ ಶ್ರದ್ಧಾಂಜಲಿ ಅರ್ಪಿಸಿತು. ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಬುಡಕಟ್ಟು ಕೊಡವರ ಸಾಂಪ್ರದಾಯಿಕ ಹಬ್ಬಗಳ ಆಚರಣೆಯ ಸಂದರ್ಭ ಹಿರಿಯರನ್ನು ಸ್ಮರಿಸುವುದು ವಾಡಿಕೆ ಎಂದರು. “ಕೆಳದಿ/ಪಾಲೇರಿ ರಾಯಲ್ಸ್ ಮತ್ತು ಹೈದರ್ ಮತ್ತು ಟಿಪ್ಪುವಿನ ಆಕ್ರಮಣದಿಂದ 32 ಕ್ಕೂ ಹೆಚ್ಚು ಬಾರಿ ಕೊಡವರು ರಾಜ್ಯವನ್ನು ಕಾಪಾಡಿದರು. ಆದ್ದರಿಂದ ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು, ಟಿಪ್ಪು ಕೊಡವ ಬುಡಕಟ್ಟು ಜನಾಂಗವನ್ನು ವಂಚನೆಯ ಮೂಲಕ ಸಂಪೂರ್ಣವಾಗಿ ನಾಶ ಮಾಡಲು ಸಂಚು ರೂಪಿಸಿ ಹತ್ಯಾಕಾಂಡ ನಡೆಸಿದನು ಎಂದು ಆರೋಪಿಸಿದರು. ಷಡ್ಯಂತ್ರಕ್ಕೆ ಬಲಿಯಾದ ಅಮಾಯಕ ಕೊಡವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯಗಳನ್ನು ಮಂಡಿಸಲಾಯಿತು ಎಂದರು. ಕೊಡವ ಬುಡಕಟ್ಟು ಜನಾಂಗದ ಸಮಗ್ರ ಸಬಲೀಕರಣಕ್ಕಾಗಿ ಆಂತರಿಕ ರಾಜಕೀಯ ಸ್ವ-ನಿರ್ಣಯದ ಹಕ್ಕು,…
ಲೇಖಕ: admin
ಮಡಿಕೇರಿ ಸೆ.4 : ಪ್ರಸಕ್ತ (2023-24) ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುತ್ತಿರುವ ರೈತರಿಗೆ ವಿತರಿಸಲಾಗುವುದು. ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ 10 ರೈತರಿಗೆ ತಲಾ ರೂ. 25 ಸಾವಿರ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲೂಕಿನ 5 ರೈತರಿಗೆ ತಲಾ 10 ಸಾವಿರ ರೂ.ವನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು. ಪ್ರಶಸ್ತಿಗೆ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ದಿ ಸಸ್ಯಕಾಶಿ, ಕೃಷಿ ಸಂಸ್ಕರಣೆ ಅರಣ್ಯ ಕೃಷಿ, ಆಡು, ಕುರಿ,ಮೊಲ ಸಾಕಾಣಿಕೆ…
ಮಡಿಕೇರಿ ಸೆ.4 : ಸೆ.18 ರಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯದಲ್ಲಿ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ಪ್ರತಿಷ್ಠಾಪಿಸಿ, ಪೂಜಿಸಿ ಕೆರೆ/ಬಾವಿ ಹಾಗು ಇನ್ನಿತರೆ ನೈಸರ್ಗಿಕ ಜಲಮೂಲಗಳಿಗೆ ವಿಸರ್ಜಿಸುವುದು ಸಂಪ್ರದಾಯವಾಗಿದ್ದು, ಇದರಿಂದ ಜಲಮೂಲಗಳು ಕಲುಷಿತಗೊಂಡು ಪರಿಸರಕ್ಕೆ ಹಾಗೂ ಸಾರ್ವಜನಿಕರ ಆರೋಗ್ಯಕ್ಕೆ ತೊಂದರೆ ಉಂಟಾಗುವುದರಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೈಸರ್ಗಿಕ ಜಲಮೂಲಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತ ಗೌರಿ ಹಾಗೂ ಗಣೇಶನ ವಿಗ್ರಹಗಳನ್ನು ರಾಜ್ಯದ ಕೆರೆ, ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಈ ವರ್ಷದ ಗೌರಿ-ಗಣೇಶ ಚರ್ತುರ್ಥಿ ಆಚರಣೆಯನ್ನು ಪರಿಸರಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಕೆಲವು ಕ್ರಮಗಳನ್ನು ಸಾರ್ವಜನಿಕರು ಅನುಸರಿಸಲು ತಿಳಿಸಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ ಯಾವುದೇ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್…
ಮಡಿಕೇರಿ ಸೆ.4 : ಕರಿಕೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ಸೆ.9 ರಂದು ಚುನಾವಣೆ ನಡೆಯಲಿದ್ದು, ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಚುನಾವಣಾ ಕಣಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಮಾಜಿ ಗ್ರಾ.ಪಂ ಅಧ್ಯಕ್ಷ ಹೊಸಮನೆ ಬಿ.ಚಂಗಪ್ಪ, ಜಿ.ಪಂ ಮಾಜಿ ಸದಸ್ಯೆ ಕವಿತಾ ಪ್ರಭಾಕರ್, ಗ್ರಾ.ಪಂ ಸದಸ್ಯರಾ ಕೆ.ಎ.ನಾರಾಯಣ, ಪಿ.ಟಿ.ಇಸಾಕ್, ಬೂತ್ ಅಧ್ಯಕ್ಷ ಪಾಂಡಿ, ನಂಜುಂಡ, ನಾರಾಯಣ ಹಾಜರಿದ್ದರು.
ಮಡಿಕೇರಿ ಸೆ.4 : ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಡಿಕೇರಿ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ಮಡಿಕೇರಿ, ಜಿಲ್ಲಾ ಯುವ ಒಕ್ಕೂಟ ಕೊಡಗು ಜಿಲ್ಲೆ, ಮಡಿಕೇರಿ ತಾಲೂಕು ಯುವ ಒಕ್ಕೂಟದ ಸಂಯುಕ್ತಶ್ರಯದಲ್ಲಿ ಹಾಕತ್ತೂರು ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ವತಿಯಿಂದ ಗ್ರಾಮೀಣ ಕ್ರೀಡಾಕೂಟ ನಡೆಯಿತು. ತೊಂಭತ್ತುಮನೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಂಜೆ ಕೊಡಗು ಜಿಲ್ಲಾ ಯುವ ಒಕ್ಕೂಟ ಹಾಗೂ ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷ ಪಿ.ಪಿ.ಸುಕುಮಾರ್ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಮುಖ್ಯ ಅತಿಥಿಗಳಾಗಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಬಿ.ಕೆ.ಯತೀಶ್, ಸದಸ್ಯರಾದ ಹೆಚ್.ಟಿ.ಕಿರಣ, ಶೈನಿ, ತೊಂಭತ್ತುಮನೆ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿ ಅಧ್ಯಕ್ಷ ಕೆ.ವೈ.ಜಲೀಲ್, ತೊಂಭತ್ತುಮನೆ ತ್ರೀನೇತ್ರ ಯುವಕ ಸಂಘದ ಸಲಹೆಗಾರ ಎ.ಕೆ.ನಾಗೇಶ್ ನಾಯ್ಡ್, ಕ್ರೀಡಾಕೂಟದ ಅನ್ನದಾನಿ ಬಿ.ಎ.ಮೊಹಮ್ಮದ್ ಅಲಿ, ಮಡಿಕೇರಿ ತುಳುವೆರ ಜನಪದ ಕೂಟದ ಸಂಚಾಲಕ ಬಿ.ಎನ್.ಪ್ರಸಾದ್, ಪತ್ರಕರ್ತ ಕಿಶೋರ್ ರೈ, ಮೀನು…
ಮಡಿಕೇರಿ ಸೆ.4 : ಸಮಾಜದ ಒಳಿತಿಗಾಗಿ ಪತ್ರಿಕಾ ಕ್ಷೇತ್ರದಲ್ಲಿ ಜೋಡೆತ್ತಿನಂತೆ ಕಾರ್ಯನಿರ್ವಹಿಸುವ ಪತ್ರಕರ್ತರು ಮತ್ತು ಪತ್ರಿಕಾ ವಿತರಕರ ಸಂಕಷ್ಟಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸ್ಪಂದಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಂಗ್ಲೆ ಒತ್ತಾಯಿಸಿದರು. ಕೊಡಗು ಪತ್ರಕರ್ತರ ಸಂಘ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಘಟಕ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ನಡೆದ `ಪತ್ರಿಕಾ ವಿತರಕರ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಮತ್ತು ಪತ್ರಿಕಾ ವಿತರಕ ಸಮುದಾಯಕ್ಕೆ ಸ್ವಾತಂತ್ರ್ಯ ನಂತರದ ಅವಧಿಯಲ್ಲಿ ದೊರಕಬೇಕಾದ ಅಗತ್ಯ ಸೌಲಭ್ಯಗಳು ದೊರಕಿಲ್ಲ. ರಾಜ್ಯ ವ್ಯಾಪಿ ಪತ್ರಿಕಾ ಕ್ಷೇತ್ರದಲ್ಲಿ ದುಡಿಯುತ್ತಿರುವ 10 ಸಾವಿರಕ್ಕೂ ಹೆಚ್ಚಿನ ಪತ್ರಕರ್ತರು ಮತ್ತು ಪತ್ರಿಕಾ ವಿತರಕರಿದ್ದಾರೆ. ವಿಪರ್ಯಾಸವೆಂದರೆ ಸರ್ಕಾರದ ಮಾನ್ಯತೆ ಪಡೆದ ಪತ್ರಕರ್ತರ ಸಂಖ್ಯೆ ಕೇವಲ 1500 ಎಂದು ವಿಷಾದಿಸಿದರು.ತಾಲೂಕು ಹಾಗೂ ಗ್ರಾಮೀಣ ಭಾಗದಲ್ಲಿ ದುಡಿಯುವವರು ಪತ್ರಕರ್ತರಲ್ಲವೇ ಎಂದು ಅವರು ಪ್ರಶ್ನಿಸಿದರು.ಕಳೆದ 2018 ರಲ್ಲಿ ಸಿದ್ದರಾಮಯ್ಯ ಅವರು…
ಮಡಿಕೇರಿ ಸೆ.4 : ಇಬ್ಬರ ಮೇಲೆ ದಾಳಿ ಮಾಡಿದ ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಯೇ ಬಲಿಯಾದ ಘಟನೆ ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಆನೆ ಕಾರ್ಯಪಡೆಯ ಸಿಬ್ಬಂದಿ ಗಿರೀಶ್ (35) ಮೃತ ದುರ್ದೈವಿ. ಸುಂಟಿಕೊಪ್ಪ ಕೆದಕಲ್ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಒಂಟಿ ಸಲಗವನ್ನು ಮೀನುಕೊಲ್ಲಿ ಮೀಸಲು ಅರಣ್ಯಕ್ಕೆ ಓಡಿಸಲು 20 ಮಂದಿಯ ಆರ್.ಆರ್.ಟಿ ತಂಡ ಕಾರ್ಯಾಚರಣೆಗೆ ಇಳಿದಿತ್ತು. ಈ ಸಂದರ್ಭ ಸಿಬ್ಬಂದಿಗಳನ್ನೇ ಅಟ್ಟಾಡಿಸಿಕೊಂಡು ಬಂದ ಕಾಡಾನೆ ಏಕಾಏಕಿ ಗಿರೀಶ್ ಅವರ ಮೇಲೆ ದಾಳಿ ಮಾಡಿ ತುಳಿದು ಹಾಕಿದೆ. ಘಟನೆಯಿಂದ ತೀವ್ರವಾಗಿ ಗಾಯಗೊಂಡ ಗಿರೀಶ್ ಅವರನ್ನು ಮಡಿಕೇರಿಯ ಜಿಲ್ಲಾಸ್ಪ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ::: ಇಬ್ಬರ ಮೇಲೆ ದಾಳಿ ::: ಸುಂಟಿಕೊಪ್ಪ ಸಮೀಪದ ಕೆದಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಿ ಬ್ಲಾಕ್ ಬಳಿ ಬೈಕ್ ನಲ್ಲಿ ಮರದ ಕೆಲಸಕ್ಕೆಂದು ತೆರಳುತ್ತಿದ್ದ ಸುಂಟಿಕೊಪ್ಪದ ನಿವಾಸಿ ಮುರುಗೇಶ್ ಎಂಬುವವರ ಮೇಲೆ ಒಂಟಿಸಲಗ ಮೊದಲು…
ಮಡಿಕೇರಿ ಸೆ.4 : ಸೋಮವಾರಪೇಟೆ ಬೇಳೂರು ಗ್ರಾ.ಪಂ ವ್ಯಾಪ್ತಿಯಲ್ಲಿ ಸ್ಥಗಿತಗೊಂಡಿರುವ ಕುಸುಬೂರು – ಹಳ್ಳ ದಿಣ್ಣೆ ಸಂಪರ್ಕ ಸೇತುವೆ ಕಾಮಗಾರಿಯನ್ನುಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಂತರ ಕಾಮಗಾರಿ ಪೂರ್ಣಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮಡಿಕೇರಿ ಸೆ.4 : ಶಾಸಕ ಡಾ.ಮಂತರ್ ಗೌಡ ಕಾರ್ಮಿಕರರೊಂದಿಗೆ ಸಂವಾಹ ನಡೆಸಿ, ಯೋಗಕ್ಷೇಮ ವಿಚಾರಿಸಿದರು. ಕುಶಾಲನಗರದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಂದರ್ಭ ಅದೇ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಾಡುತ್ತಿದ್ದ ಕಾರ್ಮಿಕರ ಯೋಗಕ್ಷೇಮವನ್ನು ವಿಚಾರಿಸಿದರು. ಈ ಸಂದರ್ಭ ರಾಜ್ಯ ಸರ್ಕಾರದ ಜನಪರ ಯೋಜನೆಗಳಾದ ಅನ್ನ ಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ ಹಾಗೂ ಮೊದಲಾದ ಸವಲತ್ತುಗಳು ಸರಿಯಾಗಿ ಕಾರ್ಮಿಕರಿಗೆ ತಲುಪುತ್ತಿದೆಯೇ ಎಂದು ಮಾಹಿತಿ ಪಡೆದುಕೊಂಡರು.
ಮಡಿಕೇರಿ ಸೆ.4 : ಉಡುಪಿಯ ಮಹಾತ್ಮಾ ಗಾಂಧಿ ಕ್ರೀಡಾಂಗದಲ್ಲಿ ನಡೆದ 13ನೇ ಆವೃತ್ತಿಯ ಕರ್ನಾಟಕ ರಾಜ್ಯ ಕಿವುಡರ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲಾ ತಂಡ 3ನೇ ಸ್ಥಾನ ಪಡೆದಿದೆ. ತಂಡದ ನಾಯಕರಾಗಿ ಎಂ.ಎ.ರಮ್ಶದ್ ಕಾರ್ಯನಿರ್ವಹಿಸಿದ್ದು, ಎಮ್.ಎನ್.ನದೀರ್, ಹೆಚ್.ಡಿ.ಗಣೇಶ್, ಎಸ್.ಟಿ.ಸುನಿಲ್, ನಾಗೇಶ, ಪಿ.ಎಲ್.ದೀರಜ್, ಎ.ಆರ್.ರಮನ್ ಕುಮಾರ್ ಹಾಗೂ ಪಿ.ಜೆ.ಅಭಿಷೇಕ್ ತಂಡದಲ್ಲಿ ಪಾಲ್ಗೊಂಡಿದ್ದರು ಎಂದು ಕೊಡಗು ಜಿಲ್ಲಾ ಕಿವುಡರ ಸಂಘದ ಉಪಾಧ್ಯಕ್ಷರಾದ ಶ್ರೀ ಶಂಕರ ನಾರಾಯಣ ಹೆಬ್ಬಾರ್ ಅವರು ತಿಳಿಸಿದ್ದಾರೆ. ಕ್ರೀಡಾಕೂಟದಲ್ಲಿ ರಾಜ್ಯಾದ್ಯಂತದಿಂದ ಒಟ್ಟು 18 ತಂಡಗಳು ಭಾಗವಹಿಸಿದ್ದರು.






