ಲೇಖಕ: admin

ಮಡಿಕೇರಿ ಸೆ.2 : ಹಳ್ಳಿ ಮಕ್ಕಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ನಕ್ಷತ್ರಗಳನ್ನಾಗಿಸಿದ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉತ್ಸಾಹಿ ದೈಹಿಕ ಶಿಕ್ಷಕ ಬಿ.ಟಿ.ಪೂರ್ಣೇಶ್ ಅವರಿಗೆ ಈ ಬಾರಿಯ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ. ಸುಮಾರು 29 ವರ್ಷಗಳ ಸುದೀರ್ಘ ಸೇವಾ ಅವಧಿಯಲ್ಲಿ ಹಲವು ಹಾಕಿ ಕ್ರೀಡಾಪಟುಗಳನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಾಕಿ ಶಿಬಿರಗಳಲ್ಲಿ ತೊಡಗಿಕೊಳ್ಳುವಂತೆ ಮಾಡಿದ ಹೆಗ್ಗಳಿಕೆ ಇವರದ್ದು. ಹಾಕಿ ಕ್ರೀಡೆಯನ್ನು ತಮ್ಮ ಜೀವನಾಡಿಯನ್ನಾಗಿಸಿಕೊಂಡು ಉಚಿತ ತರಬೇತಿ ಶಿಬಿರಗಳನ್ನು ನಡೆಸಿ ಗ್ರಾಮೀಣ ವಿದ್ಯಾರ್ಥಿಗಳನ್ನು ಹುರಿದುಂಬಿಸಿದ್ದಾರೆ. ಪ್ರಸ್ತುತ 36ನೇ ರಾಷ್ಟ್ರೀಯ ಕ್ರೀಡೆಯಲ್ಲಿ ಪೂರ್ಣೇಶ್ ಅವರ ಇಬ್ಬರು ವಿದ್ಯಾರ್ಥಿಗಳಾದ ಅಪ್ಸರ ಹಾಗೂ ಅರ್ಪಿತ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಈಗಾಗಲೇ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿರುವ ಪೂರ್ಣೇಶ್…

Read More

ಮಡಿಕೇರಿ ಸೆ.2 : ಕೊಡಗು ಜಿಲ್ಲಾ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್‍ಗಳು, ಸಾಗಣಿದಾರರು, ಸಗಟು/ ಚಿಲ್ಲರೆ ಮಾರಾಟಗಾರರು, ವಿತರಕರು, ಹೋಟೆಲ್ ರೆಸಾರ್ಟ್, ಕ್ಯಾಂಟೀನ್, ಸಂಚಾರಿ ಸಿದ್ಧಪಡಿಸಿದ ಆಹಾರ ಮಾರಾಟಗಾರರು, ವೈನ್‍ಸ್ಟೋರ್, ಕ್ಲಬ್‍ಗಳು, ಬಾರ್ ಅಂಡ್ ರೆಸ್ಟೋರೆಂಟ್‍ಗಳು, ಹೋಮ್‍ಸ್ಟೇ ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರು ಘಟಕ/ ಮಾರಾಟಗಾರರು, ಹಣ್ಣು, ತರಕಾರಿಗಳು, ಕೋಳಿ, ಮೀನು, ಮಾಂಸ ಮಾರಾಟ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ ವಹಿವಾಟುದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ತರಬೇತಿ ಕಾರ್ಯಾಗಾರವು ನಗರದ ಗಾಂಧಿ ಭವನದಲ್ಲಿ ನಡೆಯಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಚೇಂಬರ್ ಆಫ್ ಕಾಮರ್ಸ್ ಸಹಕಾರದಲ್ಲಿ ನಡೆದ ಕಾರ್ಯಾಗಾರದಲ್ಲಿ ಆಹಾರ ಸುರಕ್ಷತೆ…

Read More

ಮಡಿಕೇರಿ ಸೆ.2 :  ದಕ್ಷಿಣ ಕೊರಿಯದಲ್ಲಿ ನಡೆದ 8ನೇ ಡೆಜಿಯೋನ್ MBC ಕಪ್ ಅಂತಾರಾಷ್ಟ್ರೀಯ ಮುಕ್ತ ಟೆಕ್ವಾಂಡೊ  ಚಾಂಪಿಯನ್ ಶಿಪ್ ನಲ್ಲಿ ಮೂಲತಃ ಮಡಿಕೇರಿಯವರಾದ ಬೆಂಗಳೂರಿನಲ್ಲಿ ನೆಲೆಸಿರುವ ಎ.ಪಿ. ರಿಮೋನ್ ಪೊನ್ನಣ್ಣ ಭಾರತವನ್ನು ಪ್ರತಿನಿಧಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾನೆ. ಇತ್ತೀಚೆಗೆ ನಡೆದ ಚಾಂಪಿಯನ್‌ಶಿಪ್ ನ 14 ವರ್ಷದೊಳಗಿನ ವಿಭಾಗದಲ್ಲಿ ರಿಮೋನ್ ಪೊನ್ನಣ್ಣ ಒಂದು ಬೆಳ್ಳಿ, ಒಂದು ಕಂಚಿನ ಪದಕ ಪ್ರಶಸ್ತಿ ಪತ್ರ ಹಾಗೂ ಪ್ರಶಂಸನ ಉಡುಗೊರೆ ಪಡೆದು ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬೆಂಗಳೂರಿನ WRM ಟೆಕ್ವಾಂಡೊ  ಅಕಾಡೆಮಿಯಲ್ಲಿ ತರಬೇತಿ ಪಡೆಯುತ್ತಿರುವ ರಿಮೋನ್ ಚಿಕ್ಕಂದಿನಿಂದಲೇ ಟೇಕ್ವಾಂಡೋ ದಲ್ಲಿ ತನ್ನನ್ನು ತೊಡಗಿಸಿಕೊಂಡು ರಾಷ್ಟ್ರ ಮಟ್ಟದಲ್ಲಿ, ರಾಜ್ಯಮಟ್ಟದಲ್ಲಿ ಅದೆಷ್ಟೋ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾನೆ. ರಿಮೋನ್ ಬೆಂಗಳೂರಿನ ಬಾಲ್ಡ್ ವಿನ್ ಬಾಲಕರ ಪ್ರೌಢ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅಂತಾರಾಷ್ಟ್ರೀಯ ತೀರ್ಪು ಗಾರರಾದ ವಹೇಗಮ್ ರಾಜೇಸ್ವರ್ ಮೆಹತಿ ಅವರ ಬಳಿ ತರಬೇತಿ  ಪಡೆಯುತ್ತಿದ್ದಾರೆ. ಇವನು ಮೂಲತಃ ಮಡಿಕೇರಿಯ ನಿವಾಸಿ ಪುಷ್ಪಲಕ್ಷ್ಮಿ ಹಾಗು ಪ್ರಕಾಶ ಎಂಬವರ ಪುತ್ರ. ಇವನ ಸಾಧನೆಗೆ ಮಡಿಕೇರಿಯ ಸುದರ್ಶನ್…

Read More

ಮಡಿಕೇರಿ ಸೆ.2 : ಪ್ರಸಕ್ತ (2023-24) ಸಾಲಿನಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಸ.ಕ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಬಿ.ಸಿ.ವನಜ, ನಾಪೋಕ್ಲು ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ಪಿ.ಚಂದ್ರಕಲಾ, ಚೆಂಬು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಪಿ.ಎಸ್.ಕಾಮಾಕ್ಷಿ, ಸೋಮವಾರಪೇಟೆ ತಾಲ್ಲೂಕಿನ ಹಟ್ಟಿಹೊಳೆ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಶಾಂತಶೀಲ, ರಂಗಸಮುದ್ರ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಕೆ.ಕೆ.ಸುನಿತ, ಕೂಡುಮಂಗಳೂರು ಸ.ಪ್ರೌಢ ಶಾಲೆಯ ಹಿಂದಿ ಭಾಷಾ ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ವಿರಾಜಪೇಟೆ ತಾಲ್ಲೂಕಿನ ಎಲಿಯಂಗಾಡು ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪಿ.ಎಂ.ಸುಬ್ರಮಣ್ಯ, ಗೋಣಿಕೊಪ್ಪ ಸ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಕೆ.ಕುಮಾರ್, ಜೆಪಿಎಸ್ ಪ್ರೌಢಶಾಲೆಯ(ಅನುದಾನಿತ) ಮುಖ್ಯ ಶಿಕ್ಷಕರಾದ ಲಾಲ್‍ಕುಮಾರ್ ಅವರು ಆಯ್ಕೆಯಾಗಿದ್ದಾರೆ. ಆಯ್ಕೆಗೊಂಡ ಶಿಕ್ಷಕರು ಸೆಪ್ಟೆಂಬರ್, 5 ರಂದು ಬೆಳಗ್ಗೆ 9 ಗಂಟೆಗೆ ನಗರದ ಗೌಡ ಸಮಾಜದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಹಾಜರಿದ್ದು, ಪ್ರಶಸ್ತಿಯನ್ನು ಸ್ವೀಕರಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.

Read More

ಮಡಿಕೇರಿ ಸೆ.2 : ಪ್ರಸಕ್ತ (2023-24) ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯು ಇಲಾಖಾ ವತಿಯಿಂದ ನಡೆಯಲಿದೆ. ಈ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಬಹುದು. ಸೆ. 11 ರಂದು ಮಡಿಕೇರಿ ತಾಲೂಕು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಸೆ.12 ಕುಶಾಲನಗರ ತಾಲೂಕು ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆ.13 ಸೋಮವಾರಪೇಟೆ ತಾಲೂಕಿಗೆ ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆ.14 ರಂದು ತಾಲ್ಲೂಕಿಗೆ ಮತ್ತು ಸೆ.15 ವಿರಾಜಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜ್ ಆಟದ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ. ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ದಸರಾ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.ಮಡಿಕೇರಿ ತಾಲೂಕು ಮಹಾಬಲ 9980887499, ಹಾಗೂ ಮನು 9480032712, ಸೋಮವಾರಪೇಟೆ ತಾಲೂಕು ವೆಂಕಟೇಶ್ 9844326007 ಕುಶಾಲನಗರ ತಾಲೂಕು, ಮಂಜುನಾಥ್ 9342563014,…

Read More

ಮಡಿಕೇರಿ ಸೆ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಇವರ ಸಂಯುಕ್ತಾಶ್ರಯದಲ್ಲಿ ಸೆ.5 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಗೌಡ ಸಮಾಜದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ…

Read More

ಮಡಿಕೇರಿ ಸೆ.2 : ಕೊಡಗು ಜಿಲ್ಲಾ ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಆಹಾರ ವಸ್ತುಗಳ/ ಪದಾರ್ಥಗಳ ಉತ್ಪಾದಕರು, ಪ್ಯಾಕರ್‍ಗಳು, ಸಾಗಣಿದಾರರು, ಸಗಟು/ ಚಿಲ್ಲರೆ ಮಾರಾಟಗಾರರು, ವಿತರಕರು, ಹೋಟೆಲ್ ರೆಸಾರ್ಟ್, ಕ್ಯಾಂಟೀನ್, ಸಂಚಾರಿ ಸಿದ್ಧಪಡಿಸಿದ ಆಹಾರ ಮಾರಾಟಗಾರರು, ವೈನ್‍ಸ್ಟೋರ್, ಕ್ಲಬ್‍ಗಳು, ಬಾರ್ ಅಂಡ್ ರೆಸ್ಟೋರೆಂಟ್‍ಗಳು, ಹೋಮ್‍ಸ್ಟೇ ಗಳು, ಬೇಕರಿ, ಸಿಹಿತಿಂಡಿ, ಹಾಲು, ಹಾಲಿನ ಉತ್ಪನ್ನ, ಪ್ಯಾಕೇಜ್ಡ್ ಕುಡಿಯುವ ನೀರು ಘಟಕ/ ಮಾರಾಟಗಾರರು, ಹಣ್ಣು, ತರಕಾರಿಗಳು, ಕೋಳಿ, ಮೀನು, ಮಾಂಸ ಮಾರಾಟ, ರಸ್ತೆ ಬದಿ ಆಹಾರ ಪದಾರ್ಥ ಮಾರಾಟ, ಉಗ್ರಾಣಗಳು, ಸಂಸ್ಕರಣ ಘಟಕಗಳು, ಹಾಗೂ ಎಲ್ಲಾ ರೀತಿಯ ಆಹಾರ ಪದಾರ್ಥ ವಹಿವಾಟುದಾರರಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ತರಬೇತಿ ಕಾರ್ಯಾಗಾರವು ನಗರದ ಗಾಂಧಿ ಭವನದಲ್ಲಿ ನಡೆಯಿತು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತಾಧಿಕಾರಿ ಡಾ.ಅನಿಲ್ ಧಾವನ್ ಅವರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು. ಚೇಂಬರ್ ಆಫ್ ಕಾಮರ್ಸ್ ಸಹಕಾರದಲ್ಲಿ ನಡೆದ ಕಾರ್ಯಾಗಾರದಲ್ಲಿ ಆಹಾರ ಸುರಕ್ಷತೆ…

Read More

ಮಡಿಕೇರಿ ಸೆ.2 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ಸಂವಿಧಾನದತ್ತವಾದ 9 ಬೇಡಿಕೆಗಳ ಕುರಿತು ಸರ್ಕಾರದ ಗಮನ ಸೆಳೆಯಲು ಕೊಡಗು ಜಿಲ್ಲೆಯ ವಿವಿಧೆಡೆ ಪಾದಯಾತ್ರೆ ನಡೆಸಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಿರ್ಧರಿಸಿದೆ. ಕಾನೂನುಬದ್ಧ ಹಕ್ಕೊತ್ತಾಯಗಳ ಪ್ರತಿಪಾದಕ, ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರ ಜನ್ಮದಿನವಾದ ಸೆ.15 ರಂದು ಕೊಡವರ ಪುಣ್ಯಕ್ಷೇತ್ರ ತಲಕಾವೇರಿಯಲ್ಲಿ (ತಾವುನಾಡ್) ಪಾದಯಾತ್ರೆಗೆ ಚಾಲನೆ ನೀಡಲಾಗುವುದು ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. ತಲಕಾವೇರಿಯಿಂದ ಆರಂಭಗೊಳ್ಳುವ ಪಾದಯಾತ್ರೆ 5 ಹಂತಗಳಲ್ಲಿ ನಡೆಯಲಿದ್ದು, ಮಾರ್ಗದುದ್ದಕ್ಕೂ ಕೊಡವರನ್ನು ಭೇಟಿ ಮಾಡಲಾಗುವುದು. ಭೂತ, ವರ್ತಮಾನ ಮತ್ತು ಭವಿಷ್ಯದ ಭಂಡಾರವಾಗಿರುವ ಪ್ರತಿ ನಾಡ ಮಂದ್‍ಗಳಲ್ಲಿ ಸಭೆ ನಡೆಸಿ ಕೊಡವ ಜನಜಾಗೃತಿ ಮೂಡಿಸಲಾಗುವುದು. ಪಾದಯಾತ್ರೆಯು ನವೆಂಬರ್ ಎರಡನೇ ವಾರ ಶ್ರೀಪಾಡಿ ಇಗ್ಗುತ್ತಪ್ಪ ಕ್ಷೇತ್ರದಲ್ಲಿ ಸಮಾರೋಪಗೊಳ್ಳಲಿದೆ. ಮೊದಲ ಹಂತ ಸೆ.15 ರಂದು ತಾವುನಾಡ್, ದೇಶ ಮಂದ್, ಬಲ್ಲತ್‍ನಾಡ್, ಬೆಂಗ್‍ನಾಡ್ (ಮಡಿಕೇರಿ ತಾಲೂಕು) ಮೂಲಕ ಹಾದು ಹೋಗುತ್ತದೆ. ಸೆ.16 ರಂದು ಕುಯಂಗೇರಿನಾಡ್, ಕಗ್ಗೋಡ್ ನಾಡ್, ಮಡಿಕೇರಿ ನಾಡ್…

Read More

ಕುಶಾಲನಗರ, ಸೆ.2 : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ, ಶಾಲಾ ಶಿಕ್ಷಣ ಇಲಾಖೆಯ ನೆರವಿನೊಂದಿಗೆ ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.), ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ.ವತಿಯಿಂದ ‘ಸ್ವಚ್ಛ ಭಾರತ ಅಭಿಯಾನ’ದಡಿ “ಸ್ವಚ್ಛತಾ ಪಖ್ವಾಡ್ ಆಂದೋಲನ”ಕ್ಕೆ ಚಾಲನೆ ನೀಡಲಾಯಿತು. ಆಂದೋಲನದ ಅಂಗವಾಗಿ ಸ್ವಚ್ಛತಾ ಶಪಥ ದಿನ ಹಾಗೂ ಸ್ವಚ್ಛತಾ ಜಾಗೃತಿ ದಿನಾಚರಣೆ ಆಚರಿಸುವ ಮೂಲಕ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವ ಮೂಲಕ “ಸ್ವಚ್ಛ ಶಾಲೆ- ಸ್ವಚ್ಛ ಪರಿಸರ” – ‘ನಮ್ಮ ಗುರಿ’ ಎಂದು ವಿದ್ಯಾರ್ಥಿಗಳು ಸಂಕಲ್ಪ ಮಾಡಿದರು. ಮಕ್ಕಳಿಗೆ ಸ್ವಚ್ಚತಾ ಪಖ್ವಾಡದ ಮಹತ್ವ ಹಾಗೂ ಸ್ವಚ್ಛತೆಯ ಅರಿವು ಕುರಿತ ಸಂದೇಶ ನೀಡಿದ ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮ್ ಕುಮಾರ್, ಸೆ.1 ರಿಂದ ಸೆ.15ರವರೆಗೆ ಎರಡು ವಾರಗಳ ಕಾಲ ಶಾಲಾ…

Read More

ಮಡಿಕೇರಿ ಸೆ.2 :  ಆಲೂರು ರೇಂಜ್ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ವೇಳೆ  ಆನೆ ದಾಳಿಯಿಂದ ಮೃತಪಟ್ಟ  ಅರಣ್ಯ ಇಲಾಖೆ ಸಿಬ್ಬಂದಿ, ಶಾರ್ಪ್ ಶೂಟರ್ ವೆಂಕಟೇಶ್  ಮನೆಗೆ  ಶಾಸಕ ಡಾ.ಮಂತರ್ ಗೌಡ  ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

Read More