ಮಡಿಕೇರಿ ಸೆ.2 : ಮಡಿಕೇರಿಯ ಇಂದಿರಾನಗರದ ಮನೆಯೊಂದರಲ್ಲಿ ಸೇರಿಕೊಂಡಿದ್ದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಯದುಕುಮಾರ್ ರಕ್ಷಿಸಿದ್ದಾರೆ. ಇಂದಿರಾ ನಗರದ ಹೆಚ್.ಟಿ.ಶಿವಪ್ಪ ಎಂಬವರ ಮನೆಯ ದೇವರ ಕೋಣೆಯಲ್ಲಿ ಸೇರಿಕೊಂಡಿದ್ದ 13 ಅಡಿ ಉದ್ದದ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಉರಗ ತಜ್ಞ ಯದುಕುಮಾರ್ ಸುರಕ್ಷಿತವಾಗಿ ಸೆರೆ ಹಿಡಿದು, ಮದೆನಾಡು ದೇವರ ಕಾಡಿಗೆ ಬಿಟ್ಟರು. ಯದುಕುಮಾರ್ ವಿವಿಧ ಜಾತಿಯ ಹಾವುಗಳನ್ನು ರಕ್ಷಿಸಿದ್ದು, ಸುರಕ್ಷಿತವಾಗಿ ಅರಣ್ಯಕ್ಕೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ಲೇಖಕ: admin
ಮೂರ್ನಾಡು ಸೆ.2 : ಮೂರ್ನಾಡು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡದ ವಿದ್ಯಾರ್ಥಿನಿಯರು ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಮಡಿಕೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ವತಿಯಿಂದ ಆಯೋಜಸಲಾದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲೆಯ 14 ವರ್ಷದ ಕೆಳಗಿನ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ. ಶಾಲೆಯ ಮುಖ್ಯ ಶಿಕ್ಷಕಿ ವಿ.ಕೆ.ಲಲಿತ, ದೈಹಿಕ ಶಿಕ್ಷಕಿ ಪ್ರೇಮಲತ ಶೆಡ್ತಿ ಮತ್ತು ಶಾಲಾ ಹಿರಿಯ ಶಿಕ್ಷಕಿ ಬಿ.ಎನ್. ಪುಷ್ಪಾವತಿ ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ವಿಜೇತ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಾಥಮಿಕ ಶಾಲಾ ಬಾಲಕಿಯರ ಕಾಲ್ಚೆಂಡು ಪಂದ್ಯಾವಳಿಯಲ್ಲಿ ಪ್ರಥಮ, ಬಾಲಕರು ಮತ್ತು ಬಾಲಕಿಯರ ಖೊಖೊ ಪಂದ್ಯಾವಳಿಯಲ್ಲಿ ಪ್ರಥಮ, ಮೇಲಾಟದಲ್ಲಿ ಬಾಲಕಿಯರ ರಿಲೆ ಪ್ರಥಮ, ಬಾಲಕಿಯರ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, 400 ಮೀಟರ್ ಓಟದಲ್ಲಿ ದ್ವಿತೀಯ, ಬಾಲಕರ 200…
ಮಡಿಕೇರಿ ಸೆ.2 : ಮೇಕೇರಿಯ ಸ್ವಾಗತ ಯುವಕ ಸಂಘ, ಸುಭಾಷ್ ನಗರದ ವಿನಾಯಕ ಗೆಳೆಯರ ಬಳಗ ಹಾಗೂ ಮೇಕೇರಿಯ ಮಹಿಳಾ ಸಂಘಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೇಕೇರಿ ಗ್ರಾಮದಲ್ಲಿ ಸ್ವಚ್ಚತಾ ಶ್ರಮದಾನ ನಡೆಯಿತು. ಸ್ವಚ್ಚತಾ ಕಾರ್ಯದಲ್ಲಿ ಪುರುಷರು ಮಹಿಳೆಯರಾದಿಯಾಗಿ ಸುಮಾರು 50ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಪಾಲ್ಗೊಂಡು ಸ್ವಚ್ಚ ಗ್ರಾಮ ಸಂಕಲ್ಪ ಕೈಗೊಂಡರು. ಸುಭಾಶ್ ನಗರ ಜಂಕ್ಷನ್, ಶಕ್ತಿನಗರ ಜಂಕ್ಷನ್, ಬಿಳಿಗೇರಿ ಜಂಕ್ಷನ್ ಹಾಗೂ ಕಾವೇರಿ ಬಡಾವಣೆಯಿಂದ ಮೇಕೇರಿ ಶಾಲೆವರೆಗೆ ಸ್ವಚ್ಚತಾ ಕಾರ್ಯ ನಡೆಯಿತು. ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸೇರಿದಂತೆ ವಿವಿಧ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಇದೇ ಸಂದರ್ಭ ರಸ್ತೆಯ 2 ಬದಿಯ ಕುರುಚಲು ಕಾಡು ಗಿಡಗಳನ್ನು ಕಡಿದು ತೆರವುಗೊಳಿಸಲಾಯಿತು. ಗ್ರಾಮದ ನಾಲ್ಕೂ ದಿಕ್ಕಿನಿಂದ ಸ್ವಚ್ಫತಾ ಕಾರ್ಯದೊಂದಿಗೆ ಶಾಲಾ ಮೈದಾನಕ್ಕೆ ಆಗಮಿಸಿದ ಗ್ರಾಮಸ್ಥರು ಶಾಲಾ ಮೈದಾನ ಹಾಗೂ ಅಂಗನವಾಡಿ ಸುತ್ತಲೂ ಬೆಳೆದು ನಿಂತಿದ್ದ ಕಾಡು ಕಸವನ್ನು ತೆರವುಗೊಳಿಸಿ ಮೈದಾನವನ್ನು ಶುಚಿಗೊಳಿಸಿದರು.…
ಮಡಿಕೇರಿ ಸೆ.3 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್, ಕುಶಾಲನಗರ ವಲಯ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ವಲಯ ಮಟ್ಟದ ಕೌಟುಂಬಿಕ ಸೌಹಾರ್ದತೆ ಮತ್ತು ಗ್ರಾಮ ಸುಭಿಕ್ಷೆ ಕಾರ್ಯಕ್ರಮ ಕುಶಾಲನಗರದ ಎ.ಪಿ.ಸಿ.ಎಮ್.ಎಸ್ ಹಾಲ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿ, ಸಹಕಾರ ಕ್ಷೇತ್ರಗಳಲ್ಲಿ ಸ್ವ-ಸಹಾಯ ಸಂಘಗಳು ಸಾರ್ವಜನಿಕರಿಗೆ ಯಾವ ರೀತಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಹಕರಿಸುತ್ತಿದೆ ಎಂಬ ವಿಚಾರವಾಗಿ ಪ್ರಸ್ತಾಪಿಸಿದರು. ಸಂಘಗಳು ಸದಸ್ಯರ ಹಾಗೂ ಗ್ರಾಮಭಿವೃದ್ಧಿಯಲ್ಲಿ ಉತ್ತಮವಾಗಿ ಕಾರ್ಯಾಚರಿಸಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಟ್ರಸ್ಟ್ ನಲ್ಲಿ ಕಾಯ್ದಿರಿಸಲಾಗಿದ್ದ ಆರೋಗ್ಯ ವಿಮೆ, ಸಂಘದಿಂದ ವ್ಯವಹಾರಗಳ ಮೇಲಿನ ಸಾಲ, ಸಂಘದ ಸದಸ್ಯರ ಮಕ್ಕಳ ವಿದ್ಯಾರ್ಥಿ ವೇತನ ಮತ್ತು ಸಂಘದ ಸದಸ್ಯರ ಜಾಮೀನುದಾರರ ಅಥವಾ ಸದಸ್ಯರ ಅಕಾಲಿಕ ಮರಣ ಉಂಟಾದ ಸಂದರ್ಭ ನೀಡುವ ಸಾಲ ಮನ್ನ ಮೊದಲಾದ ಅನುದಾನಗಳ ಪ್ರಮಾಣಪತ್ರಗಳನ್ನು ಶಾಸಕರು ಟ್ರಸ್ಟ್ ನ ಅಧೀನದಲ್ಲಿ…
ಮಡಿಕೇರಿ ಸೆ.2 : ಕೈಲ್ ಮುಹೂರ್ತ (ಕೈಲ್ಪೊಳ್ದ್) ಪ್ರಯುಕ್ತ ಸೆ.3 ರಂದು ತಾಳತ್ತಮನೆಯಲ್ಲಿ 39ನೇ ವರ್ಷದ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿಯ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆಯ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಫಿ ಬೆಳೆಗಾರ ಲೋಕೇಶ್ ದೇವಾಯಿತ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಮದೆ ಗ್ರಾ.ಪಂ ಸದಸ್ಯ, ನೇತಾಜಿ ಯುವಕ ಮಂಡಲದ ಅಧ್ಯಕ್ಷ ಜೀವನ್ ಪರ್ಲಕೋಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆ ನಿವೃತ್ತರಾದ ಮುಕ್ಕಾಟಿ ಪ್ರಭಾಕರ, ಬೆಳೆಗಾರ ಬೊಟ್ಟೋಳಂಡ ಕಾವೇರಮ್ಮ ಈರಪ್ಪ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ 1 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
ಮಡಿಕೇರಿ ಸೆ.2 : ವಿದ್ಯಾಭಾರತಿ ಬಡಾವಣೆಯ ಸ್ಫೂರ್ತಿ ಯುವಕ ಸಂಘದ ವತಿಯಿಂದ ಹದಿಮೂರನೇ ವರ್ಷದ ಗೌರಿ ಗಣೇಶೋತ್ಸವದ ನೂತನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ಸುರೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಅಧ್ಯಕ್ಷರಾಗಿ ಗಮನಾರ್ಹ ಸೇವೆಸಲ್ಲಿಸಿದ್ದ ರವಿಚಂದ್ರ ಅವರ ಮಾರ್ಗದರ್ಶನದಲ್ಲಿ ಗಣಪತಿ ಉತ್ಸವ ಸಮಿತಿಯ ವತಿಯಿಂದ ಕೆ.ನಿಡುಗಡೆ ಗ್ರಾ.ಪಂ ವ್ಯಾಪ್ತಿಯಲ್ಲಿ ಶ್ರಮದಾನ ನಡೆಯಿತು. ಗ್ರಾಮದ ಮೂರನೇ ಮೈಲಿನಲ್ಲಿರುವ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಮೊಣಕಾಲ್ಮುರಿ ಯಲ್ಲಿ ಸ್ವಚ್ಛತಾ ಶ್ರಮದಾನ ನಡೆಸಲಾಯಿತು. ನಂತರ ವಿದ್ಯಾ ಭಾರತಿ ಬಡಾವಣೆಯ ಬಸ್ ನಿಲ್ದಾಣವನ್ನು ದುರಸ್ತಿಗೊಳಿಸಿ ಸುಣ್ಣ ಬಣ್ಣ ಹೊಡೆದು, ಊರಿನ ನೀರಿನ ಟ್ಯಾಂಕ್ ಶುಚಿಗೊಳಿಸಿ ಆಕರ್ಷಕ ಬಣ್ಣ ಬಳಿಯುವ ಮೂಲಕ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾದರು. ಸಂಘದ ಉಪಾಧ್ಯಕ್ಷ ಸುನಿಲ್, ಕಾರ್ಯದರ್ಶಿ ಗಿರೀಶ್, ಖಜಾಂಜಿ ರಜಿತ್, ಪತ್ರಕರ್ತ ರಂಜಿತ್ ಕವಲಪಾರ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು.
ಶ್ರೀಹರಿಕೋಟಾ: ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇದೀಗ ತನ್ನ ಬಹು ನಿರೀಕ್ಷಿತ ಆದಿತ್ಯಾ L1 ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಉಡಾಯಿಸಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಆದಿತ್ಯಾ ಎಲ್ 1 ನೌಕೆಯನ್ನು ಹೊತ್ತ ಪಿಎಲ್ಎಲ್ ವಿ- ಸಿ-57 ರಾಕೆಟ್ ಬೆಳಗ್ಗೆ 11.50ಕ್ಕೆ ನಭಕ್ಕೆ ಹಾರಿತು. ತನ್ನ ಎಲ್ಲ ಹಂತಗಳನ್ನು ಅತ್ಯುತ್ತಮವಾಗಿ ನಿಭಾಯಿಸಿದ ಪಿಎಸ್ ಎಲ್ ವಿ ಸಿ 57 ನೌಕೆ ಎಲ್ಲ ಮೂರೂ ಹಂತಗಳನ್ನು ಯಶಸ್ವಿಯಾಗಿ ನಿಭಾಯಿಸಿ ನೌಕೆಯನ್ನು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ತಲುಪಿಸಿತು. ಇಸ್ರೋ ಆದಿತ್ಯ ಎಲ್-1 ನೌಕೆಯನ್ನ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ದೂರದ ಲಾಂಗ್ರೇಜ್ ಪಾಯಿಂಟ್ಗೆ ತಲುಪಿ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಿದೆ.
ನೆಲ್ಲೂರು: ಪಿಎಸ್ಎಲ್ವಿಯಲ್ಲಿ ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ ಎಲ್1 ಇನ್ನು ಕೆಲವೇ ಗಂಟೆಗಳಲ್ಲಿ ಉಡಾವಣೆಗೊಳ್ಳಲಿದ್ದು, ಇದಕ್ಕೂ ಮುನ್ನ ಯೋಜನೆ ಯಶಸ್ವಿಯಾಲೆಂದು ಪ್ರಾರ್ಥಿಸಿ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಮತ್ತು ವಿಜ್ಞಾನಿಗಳ ತಂಡ ತಿರುಪತಿ ಹಾಗೂ ಸುಳ್ಳೂರುಪೇಟೆ ಪಟ್ಟಣದ ಚೆಂಗಾಲಮ್ಮ ದೇವಸ್ಥಾನದಲ್ಲಿ ಭೇಟಿ ನೀಡಿ ವಿಶೇಶ ಪೂಜೆ ಸಲ್ಲಿಸಿದರು. ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯ ಪ್ರತಿಕೃತಿಯನ್ನು ಹೊತ್ತೊಯ್ದ ವಿಜ್ಞಾನಿಗಳ ತಂಡ, ಯೋಜನೆ ಯಶಸ್ಸಿಗಾಗಿ ವಿಶೇಷ ಪ್ರಾರ್ಥನೆಗಳನ್ನು ಸಲ್ಲಿಸಿದರು. ಚೆಂಗಾಲಮ್ಮ ದೇವಸ್ಥಾನದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಎ ಶ್ರೀನಿವಾಸುಲು ರೆಡ್ಡಿ ನೇತೃತ್ವದಲ್ಲಿ ಅರ್ಚಕರು ವಿಜ್ಞಾನಿಗಳಿಗೆ ಅದ್ಧೂರಿಯಾಗಿ ಸ್ವಾಗತ ಕೋರಿದರು.
ನಾಪೋಕ್ಲು ಸೆ.2 : ನೆಲಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ರೂ.39.92 ಲಕ್ಷ ನಿವ್ವಳ ಲಾಭಗಳಿಸಿ ಉತ್ತಮ ಶ್ರೇಣಿಯಲ್ಲಿದೆ ಎಂದು ಸಂಘದ ಅಧ್ಯಕ್ಷ ಮಾಳೆಯಂಡ ಎಂ.ಅಪ್ಪಚ್ಚ ತಿಳಿಸಿದರು. ಸಂಘದ ಸಂಭಾ0ಗಣದಲ್ಲಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘದಲ್ಲಿ ಒಟ್ಟು 1,137 ಸದಸ್ಯರಿದ್ದಾರೆ. ಸಂಘದಲ್ಲಿ ಪಾಲು ಬಂಢವಾಳ 1.50 ಕೋಟಿ ರೂ. ಇದೆ. ಸದಸ್ಯರು 3.58 ಕೋಟಿ ರೂ ಗಳನ್ನು ಠೇವಣಿ ಇರಿಸಿದ್ದು ಸದಸ್ಯರಿಗೆ ಕೆ.ಸಿ.ಸಿ.ಸಾಲ ರೂ. 10.48 ಕೋಟಿ ರೂಗಳನ್ನು ಸಾಲ ವಿತರಣೆ ಮಾಡಲಾಗಿದೆ. ಹಾಗೂ ಜಾಮಿನು ಸಾಲ ಹಾಗೂ ಗೊಬ್ಬರ ಸಾಲ 94.62 ಲಕ್ಷ ಸಾಲ ವಿತರಣೆ ಮಾಡಲಾಗಿದೆ. ಸಂಘವು ಪ್ರಸಕ್ತ 2022-23 ಸಾಲಿನಲ್ಲಿ ಉತಮ್ಮ ವಹಿವಾಟು ನಡೆಸುವುದರ ಮೂಲಕ 39.92 ಲಕ್ಷ ನಿವ್ವಳ ಲಾಭಗಳಿಸಿ ಉತಮ್ಮ ಶ್ರೇಣಿಯಲ್ಲಿದೆ ಎಂದು ಮಾಹಿತಿ ನೀಡಿದರು. ಸದಸ್ಯರಿಗೆ ಈ ವರ್ಷ ಶೇ.15 ಡಿವಿಡೆಂಡ್ ನೀಡಲಾಗುವುದು. ಸಂಘದಲ್ಲಿ ನಿರುಖು ಠೇವಣಿದಾರರಿಗೆ ಶೆ. 7.50 ಹಿರಿಯಾ ನಾಗರಿಕರಿಗೆ 8.00 ಬಡ್ಡಿ…
ಮಡಿಕೇರಿ ಸೆ.2 : ಕೊಡಗು ಜಿಲ್ಲೆಯಲ್ಲಿ ಸೆ.3 ರಂದು ನಡೆಯುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ ಸುಗಮವಾಗಿ ನಡೆಸುವ ಸಲುವಾಗಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ), ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು(ಬ್ಲಾಕ್-01), ಸರ್ಕಾರಿ ಪದವಿ ಪೂರ್ವ ಕಾಲೇಜು(ಬ್ಲಾಕ್-02) ಮತ್ತು ನಗರದ ಸಂತ ಮೈಕಲರ ಪ್ರೌಢಶಾಲೆ ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆ ಸಂಪೂರ್ಣ ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟ್ರಾನಿಕ್ ಸಾಮಾಗ್ರಿಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರದೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ, ಚಿತ್ರೀಕರಣ ಮುಂತಾದವುಗಳನ್ನು ಸಂಪೂರ್ಣವಾಗಿ…






