ಲೇಖಕ: admin

ಮಡಿಕೇರಿ ಆ.7 : ದಡಾರ, ರುಬೆಲ್ಲಾ ಸೇರಿದಂತೆ ಹಲವು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸಲು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಲಸಿಕೆಯನ್ನು ಕಾಲ ಕಾಲಕ್ಕೆ ಪಡೆಯದ ಮತ್ತು ಬಿಟ್ಟುಹೋದ ಹಾಗೂ ಹೊರಗುಳಿದ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣಿ ಸ್ತ್ರೀಯರು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ. ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಕ್ಕಳ ಲಸಿಕಾ ವಿಭಾಗದಲ್ಲಿ ಇಂದ್ರಧನುಷ್ 5.0 ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯ 207 ಕಡೆಗಳಲ್ಲಿ ಇಂದ್ರಧನುಷ್ ಲಸಿಕಾಕರಣ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಮಕ್ಕಳಿಗೆ ಬರುವ ದಡಾರ, ರುಬೆಲ್ಲಾ ಸೇರಿದಂತೆ ಹಲವು ರೋಗಗಳನ್ನು ತಡೆಯಲು ಇಂದ್ರಧನುಷ್ 5.0 ಸಹಕಾರಿಯಾಗಿದೆ ಎಂದರು. ಇಂದ್ರಧನುಷ್ 5.0 ಅಭಿಯಾನದಲ್ಲಿ ಲಸಿಕೆ ಬಿಟ್ಟು ಹೋಗಿರುವ, ವಿಶೇಷವಾಗಿ ದಡಾರ-ರುಬೆಲ್ಲಾ ಲಸಿಕಾಕರಣ, ಪಿಸಿವಿ ಲಸಿಕಾಕರಣ ಮತ್ತು ಇತ್ತೀಚೆಗೆ 3 ನೇ ಡೋಸ್ ಆಗಿ ಸೇರ್ಪಡೆಗೊಳಿಸಲಾಗಿರುವ…

Read More

ಮಡಿಕೇರಿ ಆ.7 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಮೂರ್ನಾಡು ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಹಯೋಗದೊಂದಿಗೆ ಸ್ತನ್ಯಪಾನ ಸಪ್ತಾಹ ಮತ್ತು ಶಿಶು ಪ್ರದರ್ಶನ ಕಾರ್ಯಕ್ರಮವು ಎಂ.ಬಾಡಗ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ಅವರು ಸ್ತನ್ಯಪಾನ ಸಪ್ತಾಹ ವನ್ನು ಆಗಸ್ಟ್ ಏಳರ ವರೆಗೆ ಎಲ್ಲಾ ಅಂಗನವಾಡಿ ಕೇಂದ್ರದಲ್ಲಿ ನಡೆಸಲಾಗಿದೆ ಎಂದರು. ನಂತರ ಸ್ತನ್ಯಪಾನದ ಮಹತ್ವದ ಬಗ್ಗೆ, ಪೌಷ್ಟಿಕ ಆಹಾರ, ವ್ಯಾಯಾಮದ ಕುರಿತು ಹಾಗೂ ಮಾನಸಿಕ ಮತ್ತು ದೈಹಿಕ ಆರೋಗ್ಯದ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು. ತೂಕದ ಮಹತ್ವ ಮತ್ತು ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ವಿವರಿಸಿದರು. ಅಂಗನವಾಡಿಯಲ್ಲಿ ದೊರಕುವ ಆಹಾರಗಳನ್ನು ಕೇಂದ್ರದಲ್ಲಿಯೇ ಪರಿಶೀಲಿಸಿ ಪಡೆಯಲು ತಿಳಿಸಿದರು. ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಲಲಿತಾ ಅವರು ಶಿಶು ಪ್ರದರ್ಶನ ಕಾರ್ಯಕ್ರಮದ ಉದ್ದೇಶಗಳನ್ನು ವಿವರವಾಗಿ ತಿಳಿಸುತ್ತಾ, ಮೈಲಿಗಲ್ಲುಗಳ ಬಗ್ಗೆ, ಲಸಿಕಾ ಕರಣದ ಬಗ್ಗೆ ವಿವರವಾಗಿ ತಿಳಿಸಿದರು. ಶಿಶು ಪ್ರದರ್ಶನದಲ್ಲಿ ಪ್ರಾದ್ವಿ(ಪ್ರಥಮ ಸ್ಥಾನ) ದಿಶಾ(ದ್ವಿತೀಯ…

Read More

ಮಡಿಕೇರಿ, ಆ.7 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ವಿಶ್ವ ಹೆಪಟೈಟಿಸ್ ದಿನವು ಆ.8 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಾ ಬೋಧಕ ಆಸ್ಪತ್ರೆ ಸೆಮಿನಾರ್ ಹಾಲ್(ಜಿಲ್ಲಾ ಆಸ್ಪತ್ರೆ) ನಲ್ಲಿ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕರಾದ ಡಾ.ಕೆ.ಬಿ.ಕಾರ್ಯಪ್ಪ, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಗೋಪಿನಾಥ್, ಐಎಂಎ ಅಧ್ಯಕ್ಷರಾದ ಡಾ.ಶ್ಯಾಮ್ ಅಪ್ಪಣ್ಣ, ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ರೂಪೇಶ್ ಗೋಪಾಲ್, ಸ್ಥಾನೀಯ ವೈದ್ಯರಾದ ಡಾ.ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ಯು. ಚೇತನ್ ಮತ್ತು ಎನ್‍ವಿಹೆಚ್‍ಸಿಪಿ ಕಾರ್ಯಕ್ರಮಾಧಿಕಾರಿ ಡಾ.ಎನ್.ಆನಂದ್. ನೋಡಲ್ ಅಧಿಕಾರಿ ಡಾ.ಅಬ್ದುಲ್ ಅಜೀಜ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.

Read More

ಮಡಿಕೇರಿ, ಆ.7 : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. 2023-24ನೇ ಸಾಲಿನ ಯೋಜನೆಗಳಾದ ಉತ್ಪಾದನೆ ಮತ್ತು ಉತ್ಪಾದಕತೆಯ ವರ್ಧನೆಗೆ ಸಂಬಂಧಿಸಿದ ಯೋಜನೆಗಳು ಮೀನು ಕೃಷಿ ಕೊಳಗಳ ನಿರ್ಮಾಣ ಹೂಡಿಕೆ ವೆಚ್ಚದೊಂದಿಗೆ, ಒಳನಾಡಿನಲ್ಲಿ ಬಯೋಪ್ಲೋಕ್ ಕೊಳಗಳ ನಿರ್ಮಾಣ(ಹೆಕ್ಟೇರ್ 14 ಲಕ್ಷ ರೂ ಹೂಡಿಕೆ ವೆಚ್ಚ ಸೇರಿದಂತೆ), ಜೀವಂತ ಮೀನು ಮಾರಾಟ ಕೇಂದ್ರಗಳು, ಸಣ್ಣ ಆರ್‍ಎಎಸ್ (100 ಮೀ. 31 ಟ್ಯಾಂಕ್ ಬಯೋಪ್ಲೋಕ್ (4 ಮೀ ಡಯಾ 1.5 ಮೀ ಎತ್ತರದ 7 ಟ್ಯಾಂಕ್‍ಗಳು) ಘಟಕವನ್ನು ಸ್ಥಾಪಿಸುವುದು, ಯಾಂತ್ರಿಕೃತ ಎಫ್‍ಆರ್‍ಪಿ ಬೋಟ್. ಈ ಯೋಜನೆಗಳಿಗೆ ರೈತರು ಅರ್ಜಿ ಸಲ್ಲಿಸಲು ಆಗಸ್ಟ್, 22 ಕೊನೆಯ ದಿನವಾಗಿದೆ. ಜಿಲ್ಲೆಯ ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರಿದೆ. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Read More

ಸುಂಟಿಕೊಪ್ಪ, ಆ.7 : ಮೂಲತಃ ಸುಂಟಿಕೊಪ್ಪದವರಾದ ಪ್ರಸ್ತುತ ಬೆಂಗಳೂರಿನ ರೇವ ಯೂನಿವರ್ ಸಿಟಿಯಲ್ಲಿ ವ್ಯಾಸಂಗ ಮಾಡುತ್ತಿರುವ ಎ.ಮಂಥನ್ ರಾಷ್ಟ್ರೀಯ ಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ ಇಂಟರ್ ಡೈರಕ್ಟರೇಟ್ ಶೂಟಿಂಗ್ ತರಬೇತಿ ವತಿಯಿಂದ ಕೇರಳದ ಪಟ್ಟಿವೂರ್ ಕಾವ್ ಎಂಬಲ್ಲಿ ನಡೆದ ಶೂಟಿಂಗ್ ಸ್ಪರ್ಧೆಯಲ್ಲಿ ಮಂಥನ್ ಈ ಸಾಧನೆ ಮಾಡಿದ್ದಾರೆ. ಸುಂಟಿಕೊಪ್ಪ ನಿವಾಸಿಗಳಾದ ಟಿ.ಜಿ.ಅಶ್ವಥ್ ಹಾಗೂ ಜ್ಯೋತಿ ಅವರ ಪುತ್ರ ಮಂಥನ್ ಅವರು ರೇವ ಯೂನಿವರ್‍ಸೀಟಿಯಲ್ಲಿ ಮೊದಲ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದು, ಪೋಷಕರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಮಂಥನ್ ಸಾಧನೆಯನ್ನು ಕರ್ನಾಟಕ ರಾಜ್ಯಪಾಲರಾದ ತಾವರಚೆಂದ್ ಗೆಹ್ಲೋಟ್ ಅಭಿನಂದಿಸಿದ್ದಾರೆ.

Read More

ಮಡಿಕೇರಿ ಆ.7 : ಬೇಂಗೂರು ಗ್ರಾ.ಪಂ ಚೇರಂಬಾಣೆಯ ಎರಡನೇ ಅವಧಿಯ ಆಡಳಿತಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದ ಸದಸ್ಯೆ ಪಟ್ಟಮಾಡ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲದೊಂದಿಗೆ ಲಾಟರಿ ಮೂಲಕ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಉಪಾಧ್ಯಕ್ಷರಾಗಿ ಬಿಜೆಪಿಯ ರೆಬೆಲ್ ಸದಸ್ಯ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಆಯ್ಕೆಯಾಗಿದ್ದಾರೆ. ಒಟ್ಟು 12 ಸದಸ್ಯ ಬಲದ ಗ್ರಾ.ಪಂ ಯಲ್ಲಿ 9 ಬಿಜೆಪಿ ಬೆಂಬಲಿತ, 2 ಕಾಂಗ್ರೆಸ್ ಬೆಂಬಲಿತ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಪಕ್ಷೇತರ ಅಭ್ಯರ್ಥಿ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿತ್ತು. ಬಿಜೆಪಿ ಬೆಂಬಲಿತರಾಗಿ ತಟ್ಟಂಡ ಸ್ವಾತಿ ಸ್ಪರ್ಧೆಯಲ್ಲಿದ್ದರು. ಆದರೆ ಅಂತಿಮವಾಗಿ ಇಬ್ಬರಿಗೂ ತಲಾ 6 ಮತಗಳು ಲಭಿಸಿದ ಕಾರಣ ಲಾಟರಿ ಮೂಲಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅದೃಷ್ಟ ಮಿಲನ್ ಮುತ್ತಣ್ಣಗೆ ಒಲಿಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಹಾಗೂ ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಕೂರನ ಕಿಶೋರ್ ಸ್ಪರ್ಧೆಯಲ್ಲಿದ್ದರು. ಸೋಮಣ್ಣ 7 ಮತಗಳನ್ನು…

Read More

ಸುಂಟಿಕೊಪ್ಪ,ಆ.7: ಶಿಶು ಜನಿಸಿದ ಅರ್ಧ ಗಂಟೆಯೊಳಗೆ ತಾಯಿಯ ಸ್ತನ್ಯಪಾನ ನೀಡುವುದರಿಂದ ಶಿಶು ಮರಣವನ್ನು ತಪ್ಪಿಸಬಹುದು ಎಂದು ಕೊಡಗರಹಳ್ಳಿ ಆರೋಗ್ಯ ಕಾರ್ಯಕರ್ತೆ ಲತಾ ಕುಮಾರಿ ಹೇಳಿದರು. ಕೊಡಗರಹಳ್ಳಿ ಅಂಗನವಾಡಿ ಕೇಂದ್ರ ಮತ್ತು ಕೊಡಗರಹಳ್ಳಿ ಪ್ರಾಥಮಿಕ ಶಾಲೆಯ ಜಂಟಿ ಆಶ್ರಯದಲ್ಲಿ ಕೊಡಗರಹಳ್ಳಿ ಅಂಗನವಾಡಿ ಕೇಂದ್ರದಲ್ಲಿದಲ್ಲಿ ನಡೆದ ವಿಶ್ವ ಸ್ತನ್ಯಪಾನ ಸಪ್ತಾಹ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು. ಕೇಂದ್ರ ಸರಕಾರದ ಈ ಯೋಜನೆ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲಾಗುವ ಪೋಷಣ್ ಮಾಸಾಚರಣೆ ಮಹತ್ವದ ಕುರಿತು ವಿವರಿಸಿದರು. ಮಗುವಿನ ಬೆಳವಣಿಗೆಗೆ ಪೋಷಕಾಂಶ ಹೊಂದಿರುವ ಆಹಾರ ತಾಯಿ ಹಾಲನ್ನು ಹೊರತುಪಡಿಸಿ ಬೇರೊಂದು ಇಲ್ಲ. ತಾಯಿಯ ಎದೆಹಾಲು ರೋಗ ನಿರೋಧಕ ಶಕ್ತಿಯನ್ನು ಹೊಂದಿದ್ದು, ಅಮೃತಕ್ಕೆ ಸಮಾನವಾಗಿದೆ ಎಂದು ಹೇಳಿದರು. ಗ್ರಾ.ಪಂ ಸದಸ್ಯೆ ನೀತಾ ಹರೀಶ್ ಮಾತನಾಡಿ, ಎದೆಹಾಲು ನೀಡುವುದು ಪ್ರತಿ ಮಾತೆಯರ ಆದ್ಯ ಕರ್ತವ್ಯವಾಗಿದೆ. ತಾಯಿ ಸ್ತನ್ಯಪಾನವನ್ನು ಯಾರು ಕೃತಕವಾಗಿ ಸೃಷ್ಟಿಸಲು ಸಾಧ್ಯವಿಲ್ಲ. ತಾಯಿ ಮಗುವಿನ ಬಾಂಧವ್ಯವನ್ನು ಹೆಚ್ಚಿಸುತ್ತದೆ. ಸ್ತನ್ಯಪಾನ ಪಾನವನ್ನು ನೀಡುವುದ್ದರಿಂದ ಶಿಶುವು ಸದೃಢ…

Read More

ಸುಂಟಿಕೊಪ್ಪ ಆ.7 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‍ಬೈಲ್ ಒಕ್ಕೂಟ ಮತ್ತು ಮಹಿಳಾ ಸ್ವ ಸಹಾಯ ಸಂಘಗಳ ಸದಸ್ಯರುಗಳು ಕಾನ್‍ಬೈಲ್ ಗ್ರಾಮದ ಶ್ರೀರಾಮ ಮಂದಿರ ದೇವಾಲಯದ ಆವರಣ ಸೇರಿದಂತೆ ಸುತ್ತ ಮುತ್ತಲಿನಲ್ಲಿ ಬೆಳೆದಿದ ಕಾಡು ಗಿಡ ಗಂಟಿಗಳನ್ನು ಕಡಿದು ಸ್ವಚ್ಚಗೊಳಿಸಿದರು. ವರ್ಷಂಪ್ರತಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಘದ ಸದಸ್ಯರುಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಆದರಂತೆ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮದಡಿಯಲ್ಲಿ ಕಾನ್‍ಬೈಲ್ ಗ್ರಾಮದ ಶ್ರೀ ರಾಮ ಮಂದಿರ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯ ಮೇಲ್ವಿಚಾರಕಿ ಭವ್ಯ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಮಹಿಳಾ ಸ್ವ ಸಹಾಯ ಸಂಘಗಳ ಪ್ರತಿನಿಧಿಗಳು ಹಾಗೂ ಸಂಘದ ಸದಸ್ಯರುಗಳು ಆವರಣದಲ್ಲಿ ಬೆಳೆದಿದ್ದ ಕಾಡು ಗಿಡ ಗಂಟಿ, ಪ್ಲಾಸ್ಟಿಕ್ ಇನ್ನಿತರರ ತ್ಯಾಜ್ಯ ಹಾಗೂ ದೇವಾಲಯದ ಒಳಾಂಗಣವನ್ನು ಶುಭ್ರಗೊಳಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

Read More

ಮಡಿಕೇರಿ ಆ.7 : ಬೇಂಗೂರು ಗ್ರಾ.ಪಂ ಚೇರಂಬಾಣೆಯ ಎರಡನೇ ಅವಧಿಯ ಆಡಳಿತಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಯಾವುದೇ ಪಕ್ಷದಲ್ಲಿ ಗುರುತಿಸಿಕೊಳ್ಳದ ಸದಸ್ಯೆ ಪಟ್ಟಮಾಡ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲದೊಂದಿಗೆ ಲಾಟರಿ ಮೂಲಕ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಉಪಾಧ್ಯಕ್ಷರಾಗಿ ಬಿಜೆಪಿಯ ರೆಬೆಲ್ ಸದಸ್ಯ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಆಯ್ಕೆಯಾಗಿದ್ದಾರೆ. ಒಟ್ಟು 12 ಸದಸ್ಯ ಬಲದ ಗ್ರಾ.ಪಂ ಯಲ್ಲಿ 9 ಬಿಜೆಪಿ ಬೆಂಬಲಿತ, 2 ಕಾಂಗ್ರೆಸ್ ಬೆಂಬಲಿತ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಪಕ್ಷೇತರ ಅಭ್ಯರ್ಥಿ ಮಿಲನ್ ಮುತ್ತಣ್ಣ ಅವರಿಗೆ ಕಾಂಗ್ರೆಸ್ ಬೆಂಬಲ ಸೂಚಿಸಿತ್ತು. ಬಿಜೆಪಿ ಬೆಂಬಲಿತರಾಗಿ ತಟ್ಟಂಡ ಸ್ವಾತಿ ಸ್ಪರ್ಧೆಯಲ್ಲಿದ್ದರು. ಆದರೆ ಅಂತಿಮವಾಗಿ ಇಬ್ಬರಿಗೂ ತಲಾ 6 ಮತಗಳು ಲಭಿಸಿದ ಕಾರಣ ಲಾಟರಿ ಮೂಲಕ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಅದೃಷ್ಟ ಮಿಲನ್ ಮುತ್ತಣ್ಣಗೆ ಒಲಿಯಿತು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಬಡ್ಡೀರ ಸೋಮಣ್ಣ ಹಾಗೂ ಇವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯ ಕೂರನ ಕಿಶೋರ್ ಸ್ಪರ್ಧೆಯಲ್ಲಿದ್ದರು. ಸೋಮಣ್ಣ 7 ಮತಗಳನ್ನು…

Read More

ಮಡಿಕೇರಿ ಆ.7 : ಅತ್ಯಾಚಾರದಿಂದ ಅಮಾನವೀಯವಾಗಿ ಹತ್ಯೆಯಾದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿ ತನಿಖೆಗೆ ಒಪ್ಪಿಸಬೇಕೆಂದು ಕೊಡಗು ಜಿಲ್ಲಾ ಒಕ್ಕಲಿಗರ ಸಂಘ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಜಿಲ್ಲಾಧ್ಯಕ್ಷ ಎಸ್.ಎಂ.ಚಂಗಪ್ಪ, ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯಾಗಿ 11 ವರ್ಷಗಳೇ ಕಳೆದರೂ ನೈಜ ಆರೋಪಿಯನ್ನು ಬಂಧಿಸದೇ ಇರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಎಸ್‌ಐಟಿ ತನಿಖೆ ಮೂಲಕ ತಪ್ಪಿತಸ್ಥರನ್ನು ಪತ್ತೆ ಮಾಡಿ ಶಿಕ್ಷೆಗೆ ಗುರಿ ಪಡಿಸಬೇಕು, ಆ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಅಮಾಯಕ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದಿರುವುದು ಪೈಶಾಚಿಕ ಕೃತ್ಯವಾಗಿದೆ. ಈ ರೀತಿಯ ಘಟನೆಗಳನ್ನು ಯಾವ ಸಮಾಜವೂ ಸಹಿಸಲು ಸಾಧ್ಯವಿಲ್ಲ. ಸುದೀರ್ಘ ಕಾಲದಿಂದ ನೈಜ ತಪ್ಪಿತಸ್ಥರನ್ನು ಪತ್ತೆ ಮಾಡದೆ ಇರುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗುತ್ತಿದೆ. ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಅತ್ಯಾಚಾರ ಪ್ರಕರಣಗಳ ಆರೋಪಿಗಳನ್ನು ಶೀಘ್ರ ಪತ್ತೆ ಮಾಡಿ ಶಿಕ್ಷಗೆ ಗುರಿ ಪಡಿಸುವುದು ಸೂಕ್ತ…

Read More